Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ - Vistara News

ಕರ್ನಾಟಕ

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Jai Shri Ram Slogan: ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕೈ ಮುಖಂಡ ವಿವಾದಿತ ಹೇಳಿಕೆ ನೀಡಿದ್ದಾರೆ.

VISTARANEWS.COM


on

Jai Shri Ram Slogan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಯಚೂರು: ಜೈ ಶ್ರೀರಾಮ್ (Jai Shri Ram Slogan) ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕಾಂಗ್ರೆಸ್ ಮುಖಂಡರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕೈ ಮುಖಂಡನ ಹೇಳಿಕೆಗೆ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗುತ್ತಿದ್ದು, ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಗರಂ ಆಗಿದ್ದಾರೆ. ನಡುರಸ್ತೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಕೈ ಮುಖಂಡನ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case Wherever Prajwal escapes we will pick him up says CM Siddaramaiah

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಕಂಜನ್ ದಾಳಿಗೆ ತುತ್ತಾಗಿದ್ದ ಮಾರ್ತಾಂಡ ದುರ್ಮರಣ

VISTARANEWS.COM


on

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದ ಕಾದಾಟ ನಡೆದಿತ್ತು. ಈ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ ಹೊಂದಿದ್ದರು.

ಘಟನೆಯ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೆ ಹೊಸ SOP ಜಾರಿಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ಆನೆಗಳಿಂದ ಕನಿಷ್ಠ 100 ಅಡಿ ದೂರ ಕಾಪಾಡಿಕೊಳ್ಳಬೇಕು, ಆನೆಗಳ ಬಳಿ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಪ್ರವಾಸಿಗರು ಸಾಕಾನೆಗಳಿಗೆ ಯಾವುದೇ ಆಹಾರ ನೀಡಬಾರದು ಎಂದು ಸೂಚಿಸಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌