Literature Festival | ಜೈಪುರ ಸಾಹಿತ್ಯ ಉತ್ಸವ 2023ಕ್ಕೆ ವೇದಿಕೆ ಸಜ್ಜು; ಜ. 19ರಿಂದ ಪ್ರಾರಂಭ - Vistara News

ಕರ್ನಾಟಕ

Literature Festival | ಜೈಪುರ ಸಾಹಿತ್ಯ ಉತ್ಸವ 2023ಕ್ಕೆ ವೇದಿಕೆ ಸಜ್ಜು; ಜ. 19ರಿಂದ ಪ್ರಾರಂಭ

Literature Festival | 2023ರ ಜನವರಿ 19ರಿಂದ 23ರವರೆಗೆ ಜೈಪುರದಲ್ಲಿ ನಡೆಯಲಿರುವ ಸಾಹಿತ್ಯ ಉತ್ಸವಕ್ಕೆ ಜಗತ್ತಿನ ಖ್ಯಾತನಾಮ ಲೇಖಕರು, ಕವಿಗಳು, ಭಾಷಾಂತರಕಾರರು ಪಾಲ್ಗೊಳ್ಳುತ್ತಿದ್ದು, ವೇದಿಕೆ ಸಹ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಉತ್ಸವದಲ್ಲಿ ಪಾಲ್ಗೊಳ್ಳುವವರ ಮೂರನೇ ಪಟ್ಟಿಯೂ ಬಿಡುಗಡೆಗೊಂಡಿದೆ.

VISTARANEWS.COM


on

jaipur fest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವದ ದೊಡ್ಡ ಸಾಹಿತ್ಯ ಉತ್ಸವಗಳಲ್ಲಿ ಒಂದಾದ ಜೈಪುರ ಸಾಹಿತ್ಯ ಉತ್ಸವವು ೨೦೨೩ರ (Literature Festival) ಜ. ೧೯ರಿಂದ ೨೩ರವರೆಗೆ ನಡೆಯುತ್ತಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಸಾಹಿತ್ಯ ಸಂಭ್ರಮಕ್ಕಾಗಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಹೆಸರಾಂತ ಲೇಖಕರು, ಪತ್ರಕರ್ತರು, ಭಾಷಾಂತರಕಾರರು, ಕವಿಗಳು ಪಾಲ್ಗೊಳ್ಳುತ್ತಿದ್ದಾರೆ. ಇದೀಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಪನ್ಮೂಲ ವ್ಯಕ್ತಿಗಳ ೩ನೇ ಪಟ್ಟಿಯೂ ಬಿಡುಗಡೆಗೊಂಡಿದೆ.

ಕಳೆದ 15 ವರ್ಷಗಳಿಂದ ಜೈಪುರ ಸಾಹಿತ್ಯ ಉತ್ಸವವು ಭಾಷೆಗಳ ವೈವಿಧ್ಯತೆಯನ್ನು ಪ್ರತಿನಿಧಿಸುವ ಮತ್ತು ಅನುವಾದಿತ ಸಾಹಿತ್ಯ ಕೃತಿಗಳನ್ನು ಪರಿಚಯಿಸುವ ಒಂದು ಅತ್ಯುತ್ತಮ ವೇದಿಕೆಯಾಗಿ ಹೊರಹೊಮ್ಮಿದೆ. ಭಾಷಾಂತರವು ವಿಭಿನ್ನ ಸಂಸ್ಕೃತಿಗಳ ಸಂಪರ್ಕ, ಪರಿಚಯ, ಸಂಹವನಗಳಿಗೆ ಅನುಕೂಲವಾಗಿದ್ದು, ಒಂದು ಭಾಷೆಯ ಉತ್ಕೃಷ್ಟತೆಯನ್ನು ಸಾರುವ ಸಾಧನವೂ ಆಗಿದೆ.

ಪ್ರಸ್ತುತ ಜೈಪುರದ ಅಮೇರ್‌ನ ಹೋಟೆಲ್ ಕ್ಲಾರ್ಕ್ಸ್‌ನಲ್ಲಿ ನಡೆಯಲಿರುವ “ಜೈಪುರ ಸಾಹಿತ್ಯ ಉತ್ಸವ”ದಲ್ಲಿ ಜಾಗತಿಕ ಮಟ್ಟದ ಹಲವಾರು ಖ್ಯಾತನಾಮ ಭಾಷಾಂತರಕಾರರು ಪಾಲ್ಗೊಳ್ಳಲಿದ್ದಾರೆ. ಈ ಉತ್ಸವದಲ್ಲಿ ಪಾಲ್ಗೊಂಡು ವಿಷಯ ಮಂಡನೆ ಮಾಡಲಿರುವ ಸಂಪನ್ಮೂಲ ವ್ಯಕ್ತಿಗಳ ಮೂರನೇ ಪಟ್ಟಿಯು ಬಿಡುಗಡೆಗೊಂಡಿದ್ದು, ಅವರ ವಿವರ ಇಂತಿದೆ.

ಪ್ರಮುಖವಾಗಿ ಪೋರ್ಚುಗೀಸ್‌ ಲೇಖಕರಾದ ಅನಾ ಫಿಲೋಮಿನಾ ಅಮರಾಲಿ, ಖ್ಯಾತ ಪತ್ರಕರ್ತ, ಲೇಖಕ ಮತ್ತು ಭಾಷಾಂತರಕಾರ ಅರುನವ ಸಿನ್ಹಾ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಅರುಣ್‌ ಚಕ್ರವರ್ತಿ, ಕಾದಂಬರಿಕಾರ ದಿಬೇಕ್ ದೇಬ್ರಾಯ್, ಇಟಲಿಯ ಲೇಖಕ ಜಾರ್ಜಿಯೋ ಮೊಂಟೆಫೊಸ್ಚಿ, ಹೆಸರಾಂತ ದ್ವಿಭಾಷಾ ಸಂಪಾದಕ ಮಣಿ ರಾವ್, ಲೇಖಕ ಮತ್ತು ಭಾಷಾಂತರಕಾರರಾದ ಮನೀಷಾ ಚೌಧರಿ, ಭಾಷಾಂತರಕಾರ ಮತ್ತು ಅಂಕಣಕಾರರಾದ ಮಿನಿ ಕೃಷ್ಣನ್, ಪದ್ಮಭೂಷಣ ಪುರಸ್ಕೃತ ಮೃದಿ ಕೀರ್ತಿ, ಸಂಗೀತ ರಾಯಭಾರಿ & ಯುಎಇ ಮತ್ತು ಈಜಿಪ್ಟ್‌ನ ಭಾರತದ ರಾಯಭಾರಿ ನವದೀಪ್ ಸೂರಿ, ಪ್ರಕಾಶಕ ಮತ್ತು ಭಾಷಾಂತರಕಾರ ಆಸ್ಕರ್ ಪುಜೋಲ್, ಅನುವಾದಗಾರ್ತಿ ರಿಟಾ ಕೊಠಾರಿ, ಭಾರತೀಯ ಸಮಕಾಲೀನ ಬರಹಗಾರ ಮತ್ತು ಕಲಾವಿದ ಸಾಜ್ ಅಗರ್ವಾಲ್, ಕಾದಂಬರಿಕಾರರಾದ ಸಾಕ್ಷ್ಯಾ ಜೈನ್, ಖ್ಯಾತ ಮಹಿಳಾ ಲೇಖಕಿ ಊರ್ವಶಿ ಬುಟಾಲಿಯಾ, ಕಾದಂಬರಿಕಾರರಾದ ವಿನೀತ್ ಗಿಲ್ ಮತ್ತು ಖ್ಯಾತ ಕವಿ, ಸಂಗೀತಗಾರ ಹಾಗೂ ಸಿನಿಮಾ ತಜ್ಞ ಯತೀಂದ್ರ ಮಿಶ್ರಾ ಸೇರಿದಂತೆ ಇನ್ನೂ ಹಲವಾರು ಗಣ್ಯರು ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ.

2013ರಲ್ಲಿ ದಕ್ಷಿಣ ಏಷ್ಯಾ ಕವಿಗೋಷ್ಠಿಯಲ್ಲಿ ಸಾರ್ಕ್ ಸಾಹಿತ್ಯ ಪ್ರಶಸ್ತಿ ಪಡೆದಿದ್ದ ಅಭಯ್ ಕೆ, ಕಾದಂಬರಿಕಾರ, ಸಾಹಿತ್ಯ ಪತ್ರಕರ್ತ ಮತ್ತು ಭಾಷಾಂತರಕಾರರಾದ ಅನುಪಮ ರಾಜು, ಎಸ್ಟೋನಿಯನ್ ಕವಿ ಡೊರಿಸ್ ಕರೆವಾ ಮತ್ತು ಪೆನ್ ಟ್ರಾನ್ಸ್‌ಲೇಟ್ಸ್ ಅವಾರ್ಡ್ ವಿಜೇತರಾದ ಕೊ ಕೊ ಥೆಟ್ ಸಹ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ | ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಅವಮಾನ ಅಕ್ಷಮ್ಯ: ಕಿಡಿಗೇಡಿಗಳ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಏಪ್ರಿಲ್‌ 29ರಂದು ಮರು ಮತದಾನ ನಡೆಸಲು ಚುನಾವಣೆ ಆಯೋಗ ಆದೇಶಿಸಿದೆ. ಏಪ್ರಿಲ್‌ 26ರಂದು ಮತಗಟ್ಟೆಯಲ್ಲಿ ಗಲಾಟೆ ನಡೆದು, ಇವಿಎಂ ಧ್ವಂಸಗೊಳಿಸಿದ ಕಾರಣ ಮತದಾನ ನಡೆದಿರಲಿಲ್ಲ. ಹಾಗಾಗಿ, ಮರು ಮತದಾನ ಘೋಷಿಸಲಾಗಿದೆ.

VISTARANEWS.COM


on

Chamarajanagar
Koo

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಶುಕ್ರವಾರ (ಏಪ್ರಿಲ್‌ 26) ಗಲಾಟೆ ನಡೆದು, ಚುನಾವಣೆ ಮತಯಂತ್ರವನ್ನು (EVM) ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು (Election Commission) ಏಪ್ರಿಲ್‌ 29ರಂದು ಮರು ಮತದಾನ ನಡೆಸಲು ತೀರ್ಮಾನಿಸಿದೆ. ಕ್ಷೇತ್ರ ಚುನಾವಣಾಧಿಕಾರಿಗಳ ಬಳಿ ವರದಿ ಪಡೆದ ಚುನಾವಣಾ ಆಯೋಗವು, ಮರು ಮತದಾನ (Re-election) ನಡೆಸಲು ತೀರ್ಮಾನಿಸಿದೆ. ಹಾಗಾಗಿ, ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಯಲಿದೆ.

ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು

ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿತ್ತು. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದರು. ಇದರಿಂದಾಗಿ ಚುನಾವಣೆ ನಡೆದಿರಲಿಲ್ಲ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿತ್ತು. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿದ್ದವು. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿದೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದಾರೆ. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿಲ್ಲ. ಎಷ್ಟೇ ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದರು. ಇದೇ ವೇಳೆ ಗಲಾಟೆ ನಡೆದಿತ್ತು.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

ಬೆಂಗಳೂರು

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Film festival: ಮೇ 4 ಮತ್ತು 5ರಂದು‌ ಬೆಂಗಳೂರಿನ ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Film Festival
Koo

ಬೆಂಗಳೂರು: ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ವತಿಯಿಂದ ಮೇ 4 ಮತ್ತು 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ (Film festival) ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಿಂದಿ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಚಲನಚಿತ್ರಗಳ ಕಲೆ ಮತ್ತು ಆತ್ಮಾವಲೋಕನ ನಡೆಯಲಿದೆ.

ಭಾರತೀಯ ವಿದ್ಯಾಭವನದಲ್ಲಿ ಮೇ 4ರಂದು ಬೆಳಗ್ಗೆ 10ಗಂಟೆಯಿಂದ ವಿ.ಕೆ.ಮೂರ್ತಿಯವರ ಛಾಯಾಗ್ರಹಣ ಕುರಿತು ಜಿ.ಎಸ್‌.ಭಾಸ್ಕರ್‌ ಅವರ ಸಂವಾದ ಇರಲಿದೆ. ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್ ಮಾಧ್ಯಮ ಸಹಯೋಗ ನೀಡಿದೆ.

ನಿರ್ಗತಿಕರು ಹಾಗೂ ಬಡವರ ಹೃದಯ ಶಸ್ತ್ರಚಿಕಿತ್ಸೆಗಳಿಗೆ ನೆರವಾಗುವ ಉದ್ದೇಶದಿಂದ ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ಈ ಕಾರ್ಯಕ್ರಮ ಆಯೋಜಿಸಿದ್ದು, ಪ್ರವೇಶದ ಡೋನರ್‌ ಪಾಸ್‌ಗಳ ದರ 2000 ರೂ., 1500 ರೂ. ಹಾಗೂ 800 ರೂ., ಡೆಲಿಗೇಟ್‌ ಪಾಸ್‌ 500 ರೂ. ಇರಲಿದೆ.

ಸಂಗೀತ ರಸ ಸಂಜೆ

ಭಾರತೀಯ ವಿದ್ಯಾಭವನದಲ್ಲಿ ಶನಿವಾರ (ಮೇ 4ರಂದು) ಸಂಜೆ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. ನಿರ್ವಾಹಕರಾದ ನರಸಿಂಹನ್‌ ಕಣ್ಣನ್‌, ಶಾರದಾ ಶೆನೊಯ್‌, ಗಾಯಕರಾದ ರಾಮ ತೀರಥ್‌, ಸಮನ್ವಿತಾ ಶರ್ಮಾ, ಶ್ರುತಿ ಬಿಡೆ, ಗೋವಿಂದ್‌ ಕರ್ನೂಲ್‌, ನರಸಿಮ್ಮನ್‌ ಕಣ್ಣನ್‌, ವಾದ್ಯ ವೃಂದ ಕಲಾವಿದರಾದ ಪ್ರದೀಪ್‌ ಪಾಟ್ಕರ್‌ ಮತ್ತು ಸಂಘವು ಕಾರ್ಯಕ್ರಮ ನಡೆಸಿಕೊಡಲಿದೆ. ಕಾರ್ಯಕ್ರಮದ ಡೋನರ್‌ ಪಾಸ್‌ ದರ 2000 ರೂ., 1500 ರೂ. ಹಾಗೂ 800 ರೂ. ಇದೆ.

ಕಾರ್ಯಕ್ರಮಕ್ಕೆ ಆಗಮಿಸುವವರು ಪಾಸ್‌ಗಳಿಗಾಗಿ ರೋ.ಮನೋಜ್‌ ಅಗರ್ವಾಲ್-9845012716‌, ರೋ. ಹರಿ ಪಬ್ಬತ್ತಿ-9663305911, ರೋ.ರಾಜಾರಾಂ ಕೃಷ್ಣಮೂರ್ತಿ-9980009398 ಸಂಪರ್ಕಿಸಬಹುದು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಹುಬ್ಬಳ್ಳಿ

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Lok Sabha Election 2024: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Vijayapur MLA Basanagowda Patil Yatnal latest statement in Dharwad
Koo

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ (Pralhad Joshi) ಯಾವತ್ತೂ ಲಿಂಗಾಯತ ಪರ ಗಟ್ಟಿ ನಿಂತಿದ್ದಾರೆ. ಅಪಪ್ರಚಾರಕ್ಕೆಲ್ಲ ಕಿವಿಗೊಡಬೇಡಿ ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲಿಂಗಾಯತ-ವೀರಶೈವ ಸಮುದಾಯಕ್ಕೆ ಕರೆ (Lok Sabha Election 2024) ನೀಡಿದರು.

ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಹಿಂದೆ ರಾಮಕೃಷ್ಣ ಹೆಗಡೆ, ಅನಂತ ಕುಮಾರ್ ಈಗ ಪ್ರಲ್ಹಾದ್‌ ಜೋಶಿ ಅವರು ಲಿಂಗಾಯತರ ಪರ ಗಟ್ಟಿಯಾಗಿ ನಿಂತವರಾಗಿದ್ದಾರೆ. ಕೆಲವರು ಏನೇನೋ ಅಪಪ್ರಚಾರ ಮಾಡುತ್ತಾರೆ. ಅಂಥದ್ದಕ್ಕೆ ಲಿಂಗಾಯತ, ವೀರಶೈವ ಸಮಾಜದವರು ಕಿವಿಗೊಡಬಾರದು ಎಂದು ಹೇಳಿದರು.

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬೊಮ್ಮಾಯಿ ಅವರ ಅವಧಿಯಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವೇಳೆ ಕೇಂದ್ರದ ಮಟ್ಟದಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಹ ಪ್ರಯತ್ನ ನಡೆಸಿದರು. ಅದರ ಪರಿಣಾಮ ಕೊನೆಗೆ 2ಡಿ ಸೃಷ್ಟಿಸಿ ಅವಕಾಶ ಕಲ್ಪಿಸಲು ಕೇಂದ್ರದ ವರಿಷ್ಠರು ಸಮ್ಮತಿಸಿದ್ದರು ಎಂದು ಯತ್ನಾಳ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ,ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದರು.

ಸಿಎಂ ಭೇಟಿಗೂ ಸಿಗಲಿಲ್ಲ

ಪ್ರವರ್ಗ 2ಡಿ ಬಗ್ಗೆ ಮಾತನಾಡಲು ಸಿಎಂ ಭೇಟಿಗೆ ಸಮಯ ಕೇಳಿದರೆ ಕೊನೆಗೂ ಕೊಡಲಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸಿಎಂ ಲಿಂಗಾಯತ ವಿರೋಧಿ ಆಗಿದ್ದಾರೆ. ಅವಕಾಶ ಸಿಗಲ್ಲ ಬಿಡಿ ಎಂದು ಆ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ನನಗೆ ಹೇಳಿದ್ರು ಎಂದೂ ಇದೇ ವೇಳೆ ತಿಳಿಸಿದರು.

ಕಿತ್ತೂರು ಚೆನ್ನಮ್ಮ ಪ್ರತಿಮೆ ಮುಂದೆ ಆಣೆ ಮಾಡುವೆ

ಸಿಎಂ ಸಿದ್ದರಾಮಯ್ಯ ಮತ್ತು ತಮ್ಮ ಪಕ್ಷ ಲಿಂಗಾಯತ ವಿರೋಧಿ ಎಂಬುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಬಗ್ಗೆ ಬೇಕಿದ್ದರೆ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ಎಂದೂ ಯತ್ನಾಳ್ ಸವಾಲು ಹಾಕಿದರು.

ಪಂಚಮಸಾಲಿ ಸಿಎಂ ನಿರ್ಣಯ

ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮಾಜದ ನಾಯಕರನ್ನು ಸಿಎಂ ಮಾಡುವ ನಿರ್ಣಯ ಆಗುತ್ತದೆ. ಆ ಕಾಲ ಬರುತ್ತದೆ ಸ್ವಲ್ಪ ಕಾಯಿರಿ ಎಂದು ಯತ್ನಾಳ್ ಸೂಚ್ಯವಾಗಿ ಹೇಳಿದರು.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ಬಿಜೆಪಿ ಸರ್ಕಾರ ಇದ್ದಾಗ ಯಾರಿಗೂ ಅನ್ಯಾಯ ಆಗದಂತೆ ವರ್ಗೀಕರಣ ಮಾಡಿತ್ತು. 2ಡಿ ಸೃಷ್ಟಿಸಿ ಅದರಲ್ಲಿ ವೀರಶೈವ, ಪಂಚಮಸಾಲಿ ಲಿಂಗಾಯತ ಎಂದು ಸ್ಪಷ್ಟವಾಗಿ ಬರೆದಿದೆ. ಶೇ.7ರಷ್ಟು ಮೀಸಲಾತಿ ಕಲ್ಪಿಸಿದ್ದಾಗಿ ಅವರು ತಿಳಿಸಿದರು.

ಮುಸ್ಲಿಂರಿಗೆ 2ಎ, 2ಬಿ ಅಲ್ಲದೇ, ಪ್ರವರ್ಗ 1 ರಲ್ಲಿ ಶೇ.10 ರಷ್ಟು ಮೀಸಲಾತಿ ಇತ್ತು. ಆದರೆ, ಪಂಚಮಸಾಲಿ, ಒಕ್ಕಲಿಗ, ಜಂಗಮ, ಬಣಜಿಗರಲ್ಲಿಯೂ ಬಡವರಿದ್ದಾರೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ಬೊಮ್ಮಾಯಿ ಸಿಎಂ ಆಗಿದ್ದಾಗ ಮೀಸಲಾತಿ ಹಂಚಿಕೆ ಮಾಡಲಾಗಿತ್ತು ಎಂದರು.

ಇದನ್ನೂ ಓದಿ: Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

ಈಗ ಸಿಎಂ ಸಿದ್ದರಾಮಯ್ಯ ಒಬಿಸಿ, ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ಕೊಡಲು ಹೊರಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

Continue Reading

ಕರ್ನಾಟಕ

Drought Relief: ಕಡಿಮೆ ಬರ ಪರಿಹಾರ; ಕೇಂದ್ರದ ವಿರುದ್ಧ ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ!

Drought Relief: ಕೇಂದ್ರ ಸರ್ಕಾರ ಅತಿ ಕಡಿಮೆ ಬರ ಪರಿಹಾರ ನೀಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಭಾನುವಾರ ಬೆಳಗ್ಗೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

VISTARANEWS.COM


on

Drought Relief
Koo

ಬೆಂಗಳೂರು: ಕರ್ನಾಟಕ ಸರ್ಕಾರವು ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋದ ಬಳಿಕ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ (Karnataka) 3,454 ಕೋಟಿ ರೂ. ಬರ ಪರಿಹಾರ (Drought Relief) ನೀಡಿದೆ. ಇದರ ಬೆನ್ನಲ್ಲೇ, ಕಡಿಮೆ ಪರಿಹಾರ ನೀಡಲಾಗಿದೆ ಎಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರವು ಮತ್ತೊಂದು ಪ್ರತಿಭಟನೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹೌದು, ಕೇಳಿದಷ್ಟು ಬರ ಪರಿಹಾರ ನೀಡಿಲ್ಲ ಎಂದು ಭಾನುವಾರ (ಏಪ್ರಿಲ್‌ 28) ಬೆಳಗ್ಗೆ 9.30ಕ್ಕೆ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಲೋಕಸಭೆ ಚುನಾವಣೆ, ಭಾನುವಾರ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಕೈಗೊಳ್ಳುತ್ತಿದ್ದು, ಇದರ ಮಧ್ಯೆಯೇ ಪ್ರತಿಭಟನೆ ನಡೆಸುವ ಮೂಲಕ ತಂತ್ರ ಹೆಣೆಯಲು ಕಾಂಗ್ರೆಸ್‌ ಮುಂದಾಗಿದೆ. “ರಾಜ್ಯ ಸರ್ಕಾರವು 18,172 ಕೋಟಿ ರೂ. ಬರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ. ಇಷ್ಟೂ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ಕೇಳಿದಷ್ಟು ಬರ ಪರಿಹಾರ ನೀಡಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಾಗಾಗಿ, ಪೂರ್ಣ ಪ್ರಮಾಣದ ಪರಿಹಾರದ ಮೊತ್ತ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ ಮೊರೆಹೋದ ಬಳಿಕವೇ ಕೇಂದ್ರವು ರಾಜ್ಯಕ್ಕೆ ಬರ ಪರಿಹಾರ ನೀಡಿದೆ. ಇದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸಿಕ್ಕ ಮುನ್ನಡೆಯಾಗಿದೆ. ಹಾಗಾಗಿ, ಇದನ್ನೇ ಚುನಾವಣೆ ದಾಳವಾಗಿಸುವುದು ಕೂಡ ಕಾಂಗ್ರೆಸ್‌ ತಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿಗೆ ಧನ್ಯವಾದ ಎಂದ ಕರ್ನಾಟಕ ಬಿಜೆಪಿ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ, “ಬರ ಪರಿಹಾರ ಮಾಡಿದ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದೆ.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Continue Reading
Advertisement
IPL 2024
ಪ್ರಮುಖ ಸುದ್ದಿ14 mins ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ16 mins ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು20 mins ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Parineeti Chopra talks about initial struggles in the Industry
ಬಾಲಿವುಡ್21 mins ago

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Cotton Saree Fashion Roopa Malali, Chandrayaan - 3 ISRO Deputy Project Director
ಫ್ಯಾಷನ್31 mins ago

Cotton Saree Fashion: ಕಾಟನ್ ಸೀರೆ ಫ್ಯಾಷನ್ ಕುರಿತು ಚಂದ್ರಯಾನ 3 ಖ್ಯಾತಿಯ ಇಸ್ರೋ ರೂಪಾ ವ್ಯಾಖ್ಯಾನ ಹೀಗಿದೆ!

Job Alert
ಉದ್ಯೋಗ37 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

English Speaking Practice
ತಂತ್ರಜ್ಞಾನ45 mins ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ45 mins ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ48 mins ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ49 mins ago

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202456 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ6 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌