ಕೊಡಗಿನ ಬಳಿಕ ಚಾಮರಾಜನಗರದ ಬೆಟ್ಟಗಳಲ್ಲೂ ಜಲಸ್ಫೋಟ: ರಾತ್ರಿಯ ಭಯಾನಕ ಸದ್ದಿಗೆ ಬೆಚ್ಚಿಬಿದ್ದ ಜನ - Vistara News

ಕರ್ನಾಟಕ

ಕೊಡಗಿನ ಬಳಿಕ ಚಾಮರಾಜನಗರದ ಬೆಟ್ಟಗಳಲ್ಲೂ ಜಲಸ್ಫೋಟ: ರಾತ್ರಿಯ ಭಯಾನಕ ಸದ್ದಿಗೆ ಬೆಚ್ಚಿಬಿದ್ದ ಜನ

ಚಾಮರಾಜನಗರ ಜಿಲ್ಲೆಯ ಬಸಪ್ಪನ ಪಾಳ್ಯದಲ್ಲಿ ಮಂಗಳವಾರ ರಾತ್ರಿ ಭಾರಿ ಸದ್ದು ಕೇಳಿಬಂದು ಜನ ಮನೆಯಿಂದ ಹೊರಗೋಡಿ ಬಂದರು. ಅದು ಭೂಕಂಪ ಅಲ್ಲ.. ಹಾಗಿದ್ದರೆ ಮತ್ತೇನು?

VISTARANEWS.COM


on

Chamaraj nagar
ಚಾಮರಾಜ ನಗರದ ಬಸಪ್ಪನ ಪಾಳ್ಯದಲ್ಲಿ ದೊಡ್ಡ ಸದ್ದು ಕೇಳಿಬಂದಾಗ ಜನ ಭಯಗೊಂಡು ಮನೆಯಿಂದ ಹೊರಬಂದಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜ ನಗರ: ಚಾಮರಾಜ ನಗರ ತಾಲೂಕಿನ ಬಸಪ್ಪನ ಪಾಳ್ಯದ ಜನ ಮಂಗಳವಾರ ರಾತ್ರಿ ಕೇಳಿಬಂದ ಭಯಾನಕ ಸದ್ದಿಗೆ ಬೆಚ್ಚಿ ಬಿದ್ದು ಮನೆಯಿಂದ ಹೊರಗೋಡಿ ಬಂದಿದ್ದರು. ದೊಡ್ಡ ಸದ್ದು, ಕ್ಷಣಕಾಲ ಭೂಮಿಯೇ ಅದುರಿದ ಅನುಭವದಿಂದ ಅವರೆಲ್ಲ ಭಯಗೊಂಡಿದ್ದರು.

ರಾತ್ರಿ ಸುಮಾರು ೮.೩೦ರ ಹೊತ್ತಿಗೆ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ಪಾತ್ರೆಗಳೆಲ್ಲ ಒಮ್ಮೆಗೇ ಅಲುಗಾಡಿದ್ದವು. ಕೆಲವರ ಮನೆ ಪಾತ್ರೆಗಳು ಉರುಳಿದ್ದವು. ಅದಕ್ಕಿಂತಲೂ ದೊಡ್ಡದಾಗಿ ಸದ್ದು ಕೇಳಿದ್ದು, ಇದುವರೆಗೂ ಕಂಡರಿಯದ ಘಟನೆಯಿಂದ ರಾತ್ರಿಯೇ ಮನೆ ಬಿಟ್ಟು ಹೊರಗೆ ಬಂದಿದ್ದರು. ರಾತ್ರಿ ತುಂಬಾ ಹೊತ್ತು ಅವರು ಮನೆಯಲ್ಲಿ, ರಸ್ತೆಯಲ್ಲೇ ಸಮಯ ಕಳೆದಿದ್ದರು.

ಈ ನಡುವೆ, ಈ ಸದ್ದಿನ ಮೂಲ ಯಾವುದು ಎನ್ನುವ ಬಗ್ಗೆ ದೊಡ್ಡ ಚರ್ಚೆ ನಡೆದಿದೆ. ಕೊಡಗು ಭಾಗದಲ್ಲಿ ಕಳೆದ ವರ್ಷದ ಮತ್ತು ಈ ಬಾರಿ ಸಂಭವಿಸಿದ ಜಲ ಸ್ಫೋಟವೇ ಇಲ್ಲೂ ಸಂಭವಿಸಿದೆ ಎಂಬ ಬಗ್ಗೆ ಮಾತುಗಳು ಕೇಳಿಬಂದವು. ಅದೀಗ ನಿಜವಾಗಿದೆ.

ಚಾಮರಾಜ ನಗರದ ಬಸಪ್ಪನ ಪಾಳ್ಯದಲ್ಲಿ ದೊಡ್ಡ ಸದ್ದು ಕೇಳಿಬಂದಾಗ ಜನ ಭಯಗೊಂಡು ಮನೆಯಿಂದ ಹೊರಬಂದಿರುವುದು.

ಇದು ಭೂಕಂಪವಲ್ಲ, ಭೂಮಿಯ ಒಳಗೆ ಸಂಭವಿಸಿರುವ ಜಲಸ್ಪೋಟ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ನಂಜುಂಡಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಭೂಮಿಯ ಒಳಗಿನ ಜಲ ವಿದ್ಯಮಾನಗಳಿಂದ
(hydrological phenomena) ಘಟಿಸಿರುವ ಶಬ್ದ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಈ ಭಾಗದಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನೀರು ಭೂಮಿಯ ಒಳಪದರದಲ್ಲಿ ಖಾಲಿ ಇರುವ ಜಾಗಕ್ಕೆ ಕಂದಕಗಳ ಮೂಲಕ ನೀರು ನುಗ್ಗಿದೆ. ಇದು ಒತ್ತಡಕ್ಕೆ ಒಳಗಾಗಿ ಸ್ಫೋಟಗೊಂಡ ಸದ್ದು ಬರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸದ್ದಿನೊಂದಿಗೆ ಜಲಸ್ಪೋಟ
ಪುಷ್ಪಗಿರಿ ಅರಣ್ಯ ಭಾಗದಲ್ಲಿ ಬರುವ ಕೊಡಗಿನ ಸಂಪಾಜೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಭಾಗದಲ್ಲಿ ಗುಡ್ಡ ಭಾಗದಲ್ಲಿ ಜಲಸ್ಫೋಟ ಸಂಭವಿಸಿತ್ತು. ಮೇಲ್ಮೈಯ ಬಿರುಕುಗಳ ಮೂಲಕ ಒಳಸೇರುವ ನೀರು ಒತ್ತಡದಿಂದ ಸ್ಪೋಟಗೊಂಡ ಸದ್ದಿನೊಂದಿಗೆ ನೀರು ಹೊರಬರುತ್ತದೆ. ಇದು ಈ ಭಾಗದಲ್ಲಿ ದೊಡ್ಡ ಪ್ರಮಾಣದ ಮಣ್ಣಿನ ಪ್ರವಾಹವನ್ನೇ ಸೃಷ್ಟಿ ಮಾಡುತ್ತದೆ. ಒಳಗಿನ ನೀರಿನ ಸಂಗ್ರಹವೇ ಹೊಳೆಯಾಗಿ ಹರಿಯುವುದರಿಂದ ಭಾರಿ ಪ್ರಮಾಣದಲ್ಲಿ ಪ್ರವಾಹಗಳೇ ಸೃಷ್ಟಿಯಾಗುತ್ತವೆ.

ಇದನ್ನೂ ಓದಿ | Rain news | ಕೊಡಗಿನಲ್ಲಿ ಜಲಸ್ಫೋಟ : ರಬ್ಬರ್ ತೋಟ ಕುಸಿದು ಅಪಾರ ಹಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

theft Case : ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ಕೈಚಳಕ ತೋರಿಸಿ ಪರಾರಿ ಆಗಿದ್ದಾರೆ. ಬೆಂಗಳೂರಲ್ಲಿ ಕಳ್ಳನೊಬ್ಬ ತುಪ್ಪ ಕದ್ದರೆ, ಕಲಬುರಗಿಯಲ್ಲಿ ಪೊಲೀಸರ ಬಸ್‌ನ್ನೇ ಎಗರಿಸಲು ಹೋಗಿ ಲಾಕ್‌ ಆಗಿದ್ದಾನೆ. ಹಾವೇರಿಯಲ್ಲಿ ಮನೆಗಳ್ಳತನ, ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನವಾಗಿದೆ. ವಿಜಯನಗರದಲ್ಲಿ ಮನೆ ಮಾಲೀಕರು ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳತನವಾಗಿದೆ.

VISTARANEWS.COM


on

By

theft Case
Koo

ಬೆಂಗಳೂರು/ಕಲಬುರಗಿ: ಚಾಲಾಕಿ ಕಳ್ಳರು (Theft Case) ಹೇಗೆಲ್ಲ ಯಮಾರಿಸುತ್ತಾರೆ ಎಂಬುದಕ್ಕೆ ಈ ಪ್ರಕರಣಗಳೇ ಸಾಕ್ಷಿ.. ಬೆಂಗಳೂರಿನ ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಚಾಲಾಕಿ ಕಳ್ಳನೊಬ್ಬ ಕೈಚಳಕ ತೋರಿದ್ದಾನೆ. ಪೇಡ ಖರೀದಿ ನೆಪದಲ್ಲಿ ಬಂದು 15 ಕೆ.ಜಿ ತುಪ್ಪವನ್ನು ಕದ್ದೊಯ್ದಿದ್ದಾನೆ.

ನಂದಿನಿ ಪಾರ್ಲರ್‌ಗೆ ಬಂದ ಕಳ್ಳನೊಬ್ಬ ಮನೆಯಲ್ಲಿ ಫಂಕ್ಷನ್ ಇದೆ. ಹದಿನೈದು ಕೆ.ಜಿ ತುಪ್ಪ ಕೊಡಿ ಎಂದಿದ್ದ. ಖರೀದಿಸಿದ 15 ಕೆಜಿ ತುಪ್ಪವನ್ನು ಬ್ಯಾಗ್‌ಗೆ ಹಾಕಿಕೊಂಡು. ನಂತರ ಅಂಗಡಿ ಮಾಲೀಕನಿಗೆ ಪೇಡ ಕೊಡಿ ಎಂದಿದ್ದ. ಅಷ್ಟೇ ಅಂಗಡಿ ಮಾಲೀಕ ಪೇಡ ಕೊಡಲು ತಿರುಗಿದಾಗ 15 ಕೆಜಿ ತುಪ್ಪದ ಬ್ಯಾಗ್‌ ಜತೆ ಎಸ್ಕೇಪ್ ಆಗಿದ್ದಾನೆ. ಪೇಡದೊಂದಿಗೆ ಬಂದ ಮಾಲೀಕ ಗ್ರಾಹಕ ಇಲ್ಲದೆ ಇರುವುದನ್ನು ಗಮನಿಸಿ ಓಡಿದ್ದಾನೆ. ಆದರೆ ಕಳ್ಳನ ಪತ್ತೆಯಾಗಿಲ್ಲ. ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಂಗಡಿ ಮಾಲೀಕ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಲಬುರಗಿಯಲ್ಲಿ ಸಿಎಆರ್ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನ

ಪೊಲೀಸ್ ಕಮಿಷನರ್ ಕಛೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್‌ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಛತ್ತಿಸ್‌ಘಡ ಮೂಲದ ಸೋನು ಭಗಿರಥ ಎಂಬಾತ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್‌ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಜೇಬಿಗೆ ಕೈ ಹಾಕಿ ಬಸ್‌ ಕೀ ತೆಗೆದುಕೊಂಡಿದ್ದ.

ಬಳಿಕ ಡ್ರೈವರ್‌ ಸೀಟ್‌ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್‌ ಸೌಂಡ್‌ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಹಾವೇರಿಯಲ್ಲಿ ಕಳ್ಳರ ಕೈಚಳಕ

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಾನಗಲ್ ಪಟ್ಟಣದ ಕೆಎಚ್‌ಬಿ ಕಾಲೋನಿಯ ವಿರೇಶ ಬಾಳಗೊಂಡರ ಹಾಗೂ ಕುಮಾರೇಶ್ವರ ನಗರದ ರವೀಂದ್ರ ಶಿರಗೋಡ ಎನ್ನುವರ ಮನೆಯಲ್ಲಿ ಕಳ್ಳತನವಾಗಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವೀಂದ್ರ ಮನೆಯಲ್ಲಿ 8 ತೊಲೆ ಬಂಗಾರ, ನಗದು ಹಾಗೂ ವಿರೇಶ ಮನೆಯಲ್ಲಿ 12 ತೊಲೆ ಬಂಗಾರ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.

ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನ

ಬೆಂಗಳೂರಿನ ವಿವಿಧೆಡೆ ಸರಣಿ ಮೊಬೈಲ್‌ ಕಳ್ಳತನ‌ ನಡೆಸುತ್ತಿದ್ದ ಕಳ್ಳನ‌ ಬಂಧನವಾಗಿದೆ. ಸೈಯದ್ ಪರ್ವೀಜ್@ಪರ್ವೀಜ್(25) ಬಂಧಿತ ಆರೋಪಿಯಾಗಿದ್ದಾನ. ರಸ್ತೆ ಬದಿಯಲ್ಲಿ ಮೊಬೈಲ್‌ನಲ್ಲಿ ಮಾತಾನಾಡಿಕೊಂಡು ಹೋಗುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಸೈಯದ್‌ ಬೈಕ್‌ನಲ್ಲಿ ಬಂದು ಮೊಬೈಲ್ ಎಗರಿಸುತ್ತಿದ್ದ.

theft Case

ಆರೋಪಿಯಿಂದ ಒಟ್ಟು 5ಲಕ್ಷ ರೂ. ಬೆಲೆಬಾಳುವ 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಸುಜುಕಿ ಆಕ್ಸೆಸ್ ಮತ್ತು ಟಿವಿಎಸ್ ಎನ್ಟಾರ್ಕ್ ವಾಹನವನ್ನು ವಶಕ್ಕೆ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ, ಜೆಪಿ ನಗರ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆಸುತ್ತಿದ್ದ. ಈ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯನಗರದಲ್ಲಿ ಮನೆ ಮೇಲೆ ಮಲಗಿದ್ದಾಗ ಕಳ್ಳತನ

ವಿಪರೀತ ಸೆಕೆ ಎಂದು ಮನೆ ಮಾಲೀಕರು ರಾತ್ರಿ ಮನೆಯ ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳನೊಬ್ಬ ಮನೆಗೆ ಕಳ್ಳತನ ಮಾಡಿದ್ದಾನೆ. ವಿಜಯನಗರದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಒಂದೂವರೇ ತೊಲೆ ಬಂಗಾರ, 1 ಲಕ್ಷ ರೂ. ಹಣ, 750 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದಿಂದಲೂ ಪರಿಶೀಲನೆ ನಡೆಸಿ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Bengaluru News: ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ ಸಮಾರಂಭವು ಇದೇ ಮೇ 19 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ, ಕೃಷಿ ವಿಜ್ಞಾನಿ ಡಾ.ಕೆ.ಎನ್‌. ಗಣೇಶಯ್ಯ, ಕಥೆಗಾರ, ಕಾದಂಬರಿಕಾರ ಜೋಗಿ, ಉಪನ್ಯಾಸಕಿ, ಲೇಖಕಿ ಸಂಧ್ಯಾರಾಣಿ, ಉಪನ್ಯಾಸಕ, ಕಥೆಗಾರ ಶಿವಕುಮಾರ ಮಾವಲಿ ಅವರು ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

7 books release programme on May 19 in Bengaluru
Koo

ಬೆಂಗಳೂರು: ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ ಸಮಾರಂಭವು ಇದೇ ಮೇ 19ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ (Bengaluru News) ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ನಡೆಯಲಿದೆ.

ಇದನ್ನೂ ಓದಿ: SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ, ಕೃಷಿ ವಿಜ್ಞಾನಿ ಡಾ. ಕೆ.ಎನ್‌. ಗಣೇಶಯ್ಯ, ಕಥೆಗಾರ, ಕಾದಂಬರಿಕಾರ ಜೋಗಿ, ಉಪನ್ಯಾಸಕಿ, ಲೇಖಕಿ ಸಂಧ್ಯಾರಾಣಿ, ಉಪನ್ಯಾಸಕ, ಕಥೆಗಾರ ಶಿವಕುಮಾರ ಮಾವಲಿ ಅವರು ಪಾಲ್ಗೊಳ್ಳಲಿದ್ದಾರೆ.

ವೀರಕಪುತ್ರ ಆಶಯನುಡಿಗಳನ್ನಾಡಲಿದ್ದಾರೆ. ಶೋಭಾ ರಾವ್‌ ಮತ್ತು ಅನಂತ ಕುಣಿಗಲ್‌ ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.

ಇದನ್ನೂ ಓದಿ: Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಲೋಕಾರ್ಪಣೆಗೊಳ್ಳಲಿರುವ ಕೃತಿಗಳು ಹಾಗೂ ಕೃತಿಕಾರರ ವಿವರ

ಡಾ. ಲಕ್ಷ್ಮಣಕೌಂಟೆ ಅವರ ಮಹಾವಿನಾಶ (ಕಾದಂಬರಿ), ಕೌಂಡಿನ್ಯ ಅವರ ಬೆಳವಡಿ ಮಲ್ಲಮ್ಮ (ಕಾದಂಬರಿ), ರಾಘವೇಂದ್ರ ಪ್ರಭು ಎಂ. ಅವರ ಬಹುತ್ವ ಭಾರತ ಕಟ್ಟಿದವರು (ಬದುಕು ಬರಹಗಳು), ವಿ. ಗೋಪಕುಮಾರ್‌ ಅವರ ಕಗ್ಗಕ್ಕೊಂದು ನ್ಯಾನೋ ಕಥೆ (ನ್ಯಾನೋ ಕತೆಗಳು), ಗೀತಾ ದೊಡ್ಮನೆ ಅವರ ನೀಲಿ ಶಾಯಿಯ ಕಡಲು (ಕವಿತೆಗಳು), ಮೇದಿನಿ ಕೆಸವಿನಮನೆ ಅವರ ಮಿಸ್ಸಿನ ಡೈರಿ (ಅನುಭವ ಕಥನ), ಪಾರ್ವತಿ ಪಿಟಗಿ ಅವರ ಪುನರುತ್ಥಾನ (ಕಾದಂಬರಿ) ಲೋಕಾರ್ಪಣೆಗೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ರಾಜಕೀಯ

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

CM Siddaramaiah: ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.

VISTARANEWS.COM


on

Pension and NAREGA money credited to farmers loans CM Siddaramaiah slams bank
Koo

ಬೆಂಗಳೂರು: ಬರ ಪರಿಹಾರ (Drought Relief), ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸೌಧದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರ ಖಾತೆಗಳಿಗೆ ಜಮೆಯಾಗುತ್ತಿರುವ ಬಗ್ಗೆ ಕೆಂಡವಾಗಿದ್ದಾರೆ. ಇದು ತಕ್ಷಣವೇ ನಿಲ್ಲಬೇಕು. ಕೂಡಲೇ ಎಲ್ಲ ಬ್ಯಾಂಕ್‌ಗಳಿಗೂ ಪತ್ರ ಬರೆದು ತಾಕೀತು ಮಾಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಪಿಂಚಣಿ, ನರೇಗಾ ಕೂಲಿಗೆ ಸಂಬಂಧಪಟ್ಟ ಹಣವು ರೈತರ ಬ್ಯಾಂಕ್‌ಗಳಿಗೆ ಜಮೆಯಾಗುತ್ತಿದ್ದರೆ ಅದನ್ನು ಬ್ಯಾಂಕ್‌ನವರು ರೈತರ ಸಾಲಗಳಿಗೆ ವಜಾ ಮಾಡಿಕೊಳ್ಳುವುದು ಸರಿಯಲ್ಲ. ಹೀಗಾಗಿ ಬ್ಯಾಂಕ್‌ಗಳಿಗೆ ಖಡಕ್‌ ಸೂಚನೆಯನ್ನು ರವಾನೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಸರ್ಕಾರದ ವಿರುದ್ಧ ಕಿಡಿಕಾರಿದ್ದ ಎಚ್‌ಡಿಕೆ

ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್‌ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿದ್ದ ಅವರು, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ.‌ ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದರು. ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದರು.

ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading

ರಾಜಕೀಯ

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

MLC Election: ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಹೋಟೆಲ್ ಪೈ ವೈಸ್ರಾಯ್‌ನಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ ಶುಕ್ರವಾರ ನಡೆಯಿತು. ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ಜೆಡಿಎಸ್‌ ಎಂಎಲ್‌ಸಿ ಡಾ. ಟಿ. ಎ. ಶರವಣ ಸೇರಿ ಹಲವು ಮೈತ್ರಿ ನಾಯಕರು ಭಾಗಿಯಾಗಿದ್ದರು.

VISTARANEWS.COM


on

MLC Meeting
Koo

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ವಿಧಾನ ಪರಿಷತ್‌ ಚುನಾವಣೆ (MLC Election) ಘೋಷಣೆಯಾಗಿದ್ದರಿಂದ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಪರಿಷತ್‌ನ ಆರು ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ರಣತಂತ್ರ ರೂಪಿಸುತ್ತಿದ್ದು, ಈ ನಡುವೆ ಜಯನಗರ 3ನೇ ಬ್ಲಾಕ್‌ನ ಹೋಟೆಲ್ ಪೈ ವೈಸ್ರಾಯ್‌ನಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ ಶುಕ್ರವಾರ ನಡೆಯಿತು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ ನಡೆಯಿತು.

ಇದನ್ನೂ ಓದಿ | R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

ಸಭೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ವಿಧಾನಪರಿಷತ್ ಸದಸ್ಯರಾದ ಕೆ. ಎ. ತಿಪ್ಪೇಸ್ವಾಮಿ ಹಾಗೂ ವಿಧಾನಪರಿಷತ್ ಸದಸ್ಯರಾದ ಡಾ. ಟಿ. ಎ. ಶರವಣ, ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್, ಬೆಂಗಳೂರು ದಕ್ಷಿಣ ಶಾಸಕರಾದ ಎಂ.ಕೃಷ್ಣಪ್ಪ , ಬಸವನಗುಡಿ ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್, ವಿಧಾನ ಪರಿಷತ್ ಸದಸ್ಯರು ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಅ. ದೇವೇಗೌಡ ಉಪಸ್ಥಿತರಿದ್ದರು.

ಜೂನ್‌ 3ಕ್ಕೆ ಮತದಾನ

ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ವಿಧಾನಪರಿಷತ್ ಚುನಾವಣೆ‌ ನಡೆಯಲಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
  • ನಾಮಪತ್ರ ಪರಿಶೀಲನೆ: ಮೇ 17, 2024
  • ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
  • ಮತದಾನ: ಜೂನ್‌ 03, 2024
  • ಫಲಿತಾಂಶ: ಜೂನ್‌ 06, 2024

ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ

  • ಈಶಾನ್ಯ ಪದವೀಧರರ ಕ್ಷೇತ್ರ: ಅಮರ್ ನಾಥ್ ಪಾಟೀಲ್(ಬಿಜೆಪಿ)
  • ನೈರುತ್ಯ ಪದವೀಧರರ ಕ್ಷೇತ್ರ: ಡಾ. ಧನಂಜಯ ಸರ್ಜಿ (ಬಿಜೆಪಿ)
  • ಬೆಂಗಳೂರು ಪದವೀಧರರ ಕ್ಷೇತ್ರ: ಅ. ದೇವೇಗೌಡ (ಬಿಜೆಪಿ)
  • ಆಗ್ನೇಯ ಶಿಕ್ಷಕರ ಕ್ಷೇತ್ರ: ವೈ.ಎ. ನಾರಾಯಣಸ್ವಾಮಿ (ಬಿಜೆಪಿ)
  • ದಕ್ಷಿಣ ಶಿಕ್ಷಕರ ಕ್ಷೇತ್ರ: ವಿವೇಕಾನಂದ.ಕೆ (ಜೆಡಿಎಸ್‌)
  • ನೈಋತ್ಯ ಶಿಕ್ಷಕರ ಕ್ಷೇತ್ರ: ಸಿ.ಎಲ್.ಭೋಜೇಗೌಡ (ಜೆಡಿಎಸ್‌)

ಅಖಾಡದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳು

  • ನೈಋತ್ಯ ಶಿಕ್ಷಕರ ಕ್ಷೇತ್ರ: ಕೆ.ಕೆ ಮಂಜುನಾಥ್‌
  • ದಕ್ಷಿಣ ಶಿಕ್ಷಕರ ಕ್ಷೇತ್ರ: ಮರತಿಬ್ಬೇಗೌಡ
  • ಆಗ್ನೇಯ ಶಿಕ್ಷಕರ ಕ್ಷೇತ್ರ: ಡಿ.ಟಿ.ಶ್ರೀನಿವಾಸ್
  • ಈಶಾನ್ಯ ಪದವೀಧರ ಕ್ಷೇತ್ರ: ಡಾ.ಚಂದ್ರಶೇಖರ ಪಾಟೀಲ
  • ನೈಋತ್ಯ ಪದವೀಧರ ಕ್ಷೇತ್ರ: ಆಯನೂರು ಮಂಜುನಾಥ್ಬೆಂ
  • ಬೆಂಗಳೂರು ಪದವೀಧರ ಕ್ಷೇತ್ರ: ರಾಮೋಜಿ ಗೌಡ
Continue Reading
Advertisement
theft Case
ಕ್ರೈಂ11 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು19 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ24 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ27 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ32 mins ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ40 mins ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ45 mins ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್1 hour ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ1 hour ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌