ಕರ್ನಾಟಕ
Janardhana Reddy Birthday | ಗಂಗಾವತಿ, ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಶಕ್ತಿ ಪ್ರದರ್ಶನ; ಬೈಕ್ ರ್ಯಾಲಿ, ರೋಡ್ ಶೋ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗಂಗಾವತಿ ಹಾಗೂ ಬಳ್ಳಾರಿಯಲ್ಲಿ ಬೈಕ್ ರ್ಯಾಲಿ ಹಾಗೂ ರೋಡ್ ಶೋ ನಡೆಸಲಾಯಿತು.
ಕೊಪ್ಪಳ/ ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕ ರಾಜಕೀಯ ಜೀವನದ ಎರಡನೇ ಇನಿಂಗ್ಸ್ ಆರಂಭಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು, ಗಂಗಾವತಿ ಹಾಗೂ ಬಳ್ಳಾರಿಯಲ್ಲಿ ಬುಧವಾರ ಶಕ್ತಿ ಪ್ರದರ್ಶನ ಮಾಡಿದ್ದಾರೆ. ರೆಡ್ಡಿ 56ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಕುಟುಂಬಸ್ಥರು ಬೈಕ್ ರ್ಯಾಲಿ ಜತೆಗೆ ಬೃಹತ್ ಕಾರ್ಯಕ್ರಮ ನಡೆಸಿದ್ದರೆ, ಮತ್ತೊಂದೆಡೆ ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ (Janardhana Reddy) ಬೈಕ್ ರ್ಯಾಲಿ ಹಾಗೂ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.
ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗಂಗಾವತಿಯ ಹಿರೇಜಂತಕಲ್ನಲ್ಲಿರುವ ಶ್ರೀ ಪ್ರಸನ್ನ ಪಂಪಾ ವಿರುಪಾಕ್ಷ ದೇವಸ್ಥಾನಕ್ಕೆ ಜನಾರ್ಧನ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಬಳಿಯಿಂದ ಬೈಕ್ ರ್ಯಾಲಿಗೆ ಚಾಲನೆ ನೀಡಿ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಕೃಷ್ಣ ದೇವರಾಯ ಸರ್ಕಲ್ ಬಳಿ ಅಭಿಮಾನಿಗಳು ಜೆಸಿಬಿಯಲ್ಲಿ ನಿಂತು ರೆಡ್ಡಿಗೆ ಪುಷ್ಪವೃಷ್ಟಿ ನಡೆಸುವ ಮೂಲಕ ಅಭಿಮಾನ ವ್ಯಕ್ತಪಡಿಸಿದರು. ನೂರಾರು ಯುವಕರು ಪಾಲ್ಗೊಂಡಿದ್ದ ಬೈಕ್ ರ್ಯಾಲಿಯಲ್ಲಿ ಜಾಂಜ್ ಮೇಳ ಗಮನ ಸೆಳೆಯಿತು. ಇನ್ನು ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅನೇಕರು ಜನಾರ್ದನರೆಡ್ಡಿಯನ್ನು ಹಾಡಿಹೊಗಳಿದರು. ಈ ಬಾರಿಯ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಆಯ್ಕೆ ಮಾಡಬೇಕು ಎಂದು ಕೋರಿದರು.
ಇದನ್ನೂ ಓದಿ | Textile Park | 25 ತಾಲೂಕುಗಳಲ್ಲಿ ಮಿನಿ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
2023ರಲ್ಲಿ ಗಂಗಾವತಿ ಕ್ಷೇತ್ರ ಹೇಗಿತ್ತು, 2028ರಲ್ಲಿ ಹೇಗಿರುತ್ತೋ ನೋಡಿ
ನಿಮ್ಮ ಆಶೀರ್ವಾದವಿದ್ದರೆ ನಾನು ಎಲ್ಲಿಗೆ ಬೇಕಾದರೂ ಹೋಗುತ್ತೇನೆ. ನಾನು ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಕೆಲಸ ಮಾಡಿ ತೋರಿಸಬೇಕು ಎಂದು ನಾನು ಇಲ್ಲಿಗೆ ಬಂದಿದ್ದೇನೆ. 2023ರಲ್ಲಿ ಗಂಗಾವತಿ ಕ್ಷೇತ್ರ ಹೇಗಿತ್ತು, 2028ರಲ್ಲಿ ಹೇಗಿರುತ್ತೆ ಎಂಬುದನ್ನು ನೋಡಿ. ಮುಂದೆ ನನಗೆ ವೋಟ್ ಹಾಕಿದರೆ, ನಾನು ಅಂಜನಾದ್ರಿಯನ್ನು ತಿರುಪತಿ, ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ತೋರಿಸುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
ʻʻನಾನು ಕಣ್ಣೀರು ಹಾಕುವುದೆಲ್ಲ 12 ವರ್ಷದ ಹಿಂದೆ ಮುಗಿದು ಹೋಯ್ತು. ಬೆಂಗಳೂರಿನಲ್ಲಿ ಇದ್ದು ಇದ್ದು ಬೇಜಾರಾಗಿತ್ತು. ಗಂಗಾವತಿಗೆ ಬಂದ ಮೇಲೆ ಹೆಚ್ಚು ಶಕ್ತಿ ಬಂದಿದೆ. ಬಳ್ಳಾರಿಯಲ್ಲಿ ನನ್ನ ಪತ್ನಿ ಹಾಗೂ ಮಗಳು ಇಂದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದಾರೆ. ಗಂಗಾವತಿಯಲ್ಲಿ ಅನೇಕರು ಈಗಾಗಲೇ ಪಕ್ಷ ಸೇರುತ್ತಿದ್ದಾರೆ. ಶಾಸಕ, ಸಚಿವನಾಗಿದ್ದಾಗ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನಾನು ಯಾವುದಕ್ಕೂ ಎದೆಗುಂದಿಲ್ಲ. ಬಸವಣ್ಣನವರಂತಹವರಿಗೆ ಅನೇಕ ಕಷ್ಟ ಕೊಟ್ಟರು. ಇನ್ನು ನಾನು ಸಾಮಾನ್ಯ ಮನುಷ್ಯ. ನನ್ನ ಕನಸುಗಳನ್ನು ನಿಲ್ಲಿಸುವ ಯೋಚನೆ ಮಾಡಿದರು. ಜಯಲಲಿತಾ ಅವರು ಜೈಲಿಗೆ ಹೋಗಿ ನಂತರ ಮುಖ್ಯಮಂತ್ರಿಯಾದರು. ಅವರ ಮೇಲೆ ಜನರ ಪ್ರೀತಿ ಹಾಗಿತ್ತು. ಹೀಗಾಗಿ ಜನರ ಪ್ರೀತಿ ಗಳಿಸುವುದು ನನ್ನ ಉದ್ದೇಶವೂ ಆಗಿದೆʼʼ ಎಂದರು.
ʻʻಆಸ್ತಿಗಳನ್ನೇ ಜಪ್ತಿ ಮಾಡುವ ಪ್ರಯತ್ನ ಮಾಡುತ್ತಿರುವಾಗ ಫೇಸ್ ಬುಕ್ ಜಪ್ತಿ ಮಾಡುವುದರಲ್ಲಿ ಆಶ್ಚರ್ಯವೇನಿಲ್ಲ.
ಆಸ್ತಿಗಳನ್ನು ಜಪ್ತಿ ಮಾಡಿದರೆ ಜನಾರ್ದನ ರೆಡ್ಡಿ ಏನು ಮಾಡುತ್ತಾರೆ ಎಂದು ಯಾರೂ ಚಿಂತೆ ಮಾಡಬೇಡಿ. ಅಂದು ೧೨೦೦ ಕೋಟಿ ರೂಪಾಯಿ ಜಪ್ತಿ ಮಾಡಿದ್ದರು. ಈಗ ನಾಲ್ಕು ಪಟ್ಟು ಆಗಿದೆ. ಕೆಳಗಿನ ಕೋರ್ಟ್ನಲ್ಲೂ ನಾನು ಗೆದ್ದಿರುವೆ. ಈಗ ಅವರು ಮೇಲಿನ ಕೋರ್ಟ್ಗೆ ಹೋಗಿದ್ದಾರೆ. ನಾನು ಯಾರ ಜೇಬಿಗೂ ಕೈಹಾಕದೆ, ಲಂಚ ತೆಗೆದುಕೊಳ್ಳದೆ ಸ್ವಂತ ವ್ಯಾಪಾರದಿಂದ ಸಂಪಾದನೆ ಮಾಡಿದ್ದೇನೆ. ನಾನು ಸತ್ಯದ ಹಾದಿಯಲ್ಲಿಯೇ ಜೀವನ ಮಾಡುತ್ತಿರುವೆ. ಇಂದಲ್ಲ ನಾಳೆ ಸತ್ಯ ಏನು ಎಂಬುದು ಜಗತ್ತಿಗೆ ಗೊತ್ತಾಗುತ್ತದೆ. ಆ ಸತ್ಯ ಗೊತ್ತುಪಡಿಸಿಯೇ ಉಸಿರು ಬಿಡುವೆʼʼ ಎಂದರು.
ಬಳ್ಳಾರಿಯಲ್ಲಿ ರೆಡ್ಡಿ ಕುಟುಂಬಸ್ಥರಿಂದ ಬೃಹತ್ ಕಾರ್ಯಕ್ರಮ, ಬೈಕ್ ರ್ಯಾಲಿ
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಗಣಿನಾಡಿಗೆ, ಜನಾರ್ದನ ರೆಡ್ಡಿ ಪ್ರವೇಶಕ್ಕೆ ನಿರ್ಬಂಧ ಇರುವ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ರೆಡ್ಡಿ ಕುಟುಂಬಸ್ಥರು ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್ಪಿಪಿ) ವತಿಯಿಂದ ಜನಾರ್ದನ ರೆಡ್ಡಿ ಅವರ ಬೃಹತ್ ಜನ್ಮದಿನ ಕಾರ್ಯಕ್ರಮ ಹಾಗೂ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಬಳ್ಳಾರಿಯ ಅಹಂಭಾವಿಯ ಜನಾರ್ದನ ರೆಡ್ಡಿ ನಿವಾಸದಿಂದ ಬೈಕ್ ರ್ಯಾಲಿಗೆ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಅವರು ಚಾಲನೆ ನೀಡಿದರು. ರ್ಯಾಲಿಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಬೈಕ್ಗಳು ಭಾಗವಹಿಸಿದ್ದರು.
ರೆಡ್ಡಿ ಪುತ್ರಿ ಬ್ರಹ್ಮಣಿ ರೆಡ್ಡಿ ಮಾತನಾಡಿ, ಒಂದು ಕಡೆ ಸಂತೋಷ, ಇನ್ನೊಂದು ಕಡೆ ದುಃಖ, ಮಗದೊಂದು ಕಡೆ ದೊಡ್ಡ ಜವಾಬ್ದಾರಿ ಇದೆ. ನನ್ನ ತಂದೆಗೆ ಸಿಗುತ್ತಿರುವ ಜನ ಬೆಂಬಲ ನೋಡಿ ಸಂತಸವಾಗಿದೆ. ಅವರೇ ಕಟ್ಟಿರುವ ಸಾಮ್ರಾಜ್ಯದಿಂದ ಅವರೇ ದೂರವಾಗುವ ದುಸ್ಥಿತಿ ನಮ್ಮ ತಂದೆಗೆ ಬಂದಿದೆ. ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಬಳ್ಳಾರಿಯಿಂದ ದೂರ ಇರಬೇಕಾದ ವಿಧಿಯಾಟ ಇದೆ ಬೇಸರ ಹೊರಹಾಕಿದರು.
ಜಿಲ್ಲೆಯ ಸಾಧಕರು, ಹೋರಾಟಗಾರರ ಹೆಸರು ಮೆಲುಕು ಹಾಕಿದ ಬ್ರಹ್ಮಣಿ, ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸೋಣ. ಇರುವ ನಿಜವನ್ನು ಇದ್ದ ಹಾಗೇ ಹೇಳೋಣ. ಅರ್ಧಕ್ಕೆ ನಿಂತಿರುವ ಅಭಿವೃದ್ಧಿ ಕೆಲಸಗಳು ರೆಡ್ಡಿ ಬೇಗನೆ ಬಾರಯ್ಯ ಎಂದು ಕೈಬೀಸಿ ಕರೆಯುತ್ತಿವೆ, ನಮ್ಮ ತಂದೆ ಒಂಟಿ ಇಲ್ಲ, ನೀವೆಲ್ಲರು ನಮ್ಮ ತಂದೆಯೊಂದಿಗೆ ಇದ್ದೀರಿ, ಕೆಲವೇ ದಿನಗಳಲ್ಲಿ ನಮ್ಮ ತಂದೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಮತ್ತಿರರು ಮಾತನಾಡಿದರು.
ನಾವಿಲ್ಲದೇ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಾಗದ ಸ್ಥಿತಿ
ವಿಡಿಯೊ ಕಾನ್ಪರೆನ್ಸ್ ಮೂಲಕ ಬಳ್ಳಾರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜನಾರ್ದನ ರೆಡ್ಡಿ, ಬಳ್ಳಾರಿ ಜನರು ನನ್ನ ಜತೆಗೆ ಇದ್ದಾರೆ ಎನ್ನುವ ನಂಬಿಕೆ ಒದೆ. ಪಕ್ಷ ಕಟ್ಟಲು ರಾಜ್ಯ ಸುತ್ತುತ್ತಿದ್ದೇನೆ. ಪಕ್ಷ ಕಟ್ಟಿದ ಹದಿನೈದು ದಿನದಲ್ಲಿ ಬಹುತೇಕ ಜಿಲ್ಲೆಯ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನರು ಬದಲಾವಣೆ ಬಯಸುತ್ತಿದ್ದಾರೆ. ಬಳ್ಳಾರಿಯಿಂದಲೇ ಜನಾರ್ದನ ರೆಡ್ಡಿ ಎಂಬ ಹೆಸರು ಬಂದಿದೆ. ಹನ್ನೆರಡು ವರ್ಷದಿಂದ ಮನೆಯಿಂದ ಹೊರಗೆ ಬರಲಾಗದೇ ಇದ್ದೆ. ಗಂಗಾವತಿ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ನೂರಕ್ಕೆ ನೂರರಷ್ಟು ನಾವಿಲ್ಲದೇ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಾಗದ ಸ್ಥಿತಿ ಬರಬಹುದು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಸಹಕರಿಸಬೇಕು ಎಂದು ಮನವಿ ಮಾಡಿದರು.
ನನ್ನ ಕುಟುಂಬದ ಜತೆಗೆ ನಾವಿದ್ದೇವೆ ಎಂದು ಹೇಳಿದ ಜನರಿಗೆ ಧನ್ಯವಾದ. ಇದೇ ಮೊದಲ ಬಾರಿಗೆ ನನ್ನ ಮಗಳು ಪಕ್ಷದ ವಿಚಾರ ಮಾತನಾಡಿದ್ದಾಳೆ. ಒಂದು ಕಡೆ ಸಂತೋಷ, ಮತ್ತೊಂದು ಕಡೆ ದುಖಃ ಇದೆ. ನಾನಿಲ್ಲದೇ ನನ್ನ ಹೆಂಡತಿ, ಮಗಳು ನನ್ನ ಹುಟ್ಟು ಹಬ್ಬ ಅಚರಣೆ ಮಾಡಿದ್ದಾರೆ ಎಂದ ಅವರು, ನನಗೆ ಇರುವ ಸೌಕರ್ಯಕ್ಕೆ ಲಂಡನ್ನಲ್ಲಿ ಇರಬಹುದಾಗಿತ್ತು. ಆದರೆ ನನಗೆ ಬಳ್ಳಾರಿಯಲ್ಲಿ ಇದ್ದರೆ ಮಾತ್ರ ನೆಮ್ಮದಿ ಸಿಗುತ್ತದೆ. ಇವತ್ತಲ್ಲ ನಾಳೆ ನಮ್ಮ ಕನಸು ಈಡೇರುತ್ತದೆ. ಬೆಂಗಳೂರು ನಂತರ ಬಳ್ಳಾರಿ ಎನ್ನುವ ರೀತಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಬೈಕ್ಗಳಿಗೆ ಉಚಿತ ಪೆಟ್ರೋಲ್; ಮುಗಿಬಿದ್ದ ಜನ
ಜನಾರ್ದನ ರೆಡ್ಡಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ರ್ಯಾಲಿಗೆ ಅಗಮಿಸಿದ ಜನರಿಗೆ ರೆಡ್ಡಿ ಕಡೆಯಿಂದ ಉಚಿತವಾಗಿ ತಲಾ 200 ರೂ. ಪೆಟ್ರೋಲ್ ವ್ಯವಸ್ಥೆ ಮಾಡಲಾಯಿತು. ಇದರಿಂದ ಬಳ್ಳಾರಿ ದುರ್ಗಮ್ಮ ಗುಡಿ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ಬೈಕ್ಗಳು ಸಾಲುಗಟ್ಟಿ ನಿಂತಿದ್ದವು. ಬಳ್ಳಾರಿಯ ಮೂರು ಪೆಟ್ರೋಲ್ ಬಂಕ್ಗಳಲ್ಲಿ ಒಟ್ಟು 1000ಕ್ಕೂ ಹೆಚ್ಚು ಬೈಕ್ಗಳಿಗೆ ಉಚಿತ ಪೆಟ್ರೋಲ್ ವ್ಯವಸ್ಥೆ ಮಾಡಲಾಗಿದೆ.
56 ಕೆ.ಜಿ. ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಜನಾರ್ದನ ರೆಡ್ಡಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿ ಕಾರ್ಯಕ್ರಮದಲ್ಲಿ 56 ಕೆ.ಜಿ. ಕೇಕ್ ಅನ್ನು ಕತ್ತರಿಸಿ ಸಂಭ್ರಮಾಚರಣೆ ನಡೆಸಲಾಯಿತು. ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ, ಪುತ್ರಿ ಬ್ರಹ್ಮಣಿ ರೆಡ್ಡಿ, ಮಾವ ಪರಮೇಶ್ವರ ರೆಡ್ಡಿ ಮತ್ತಿತರರು ಇದ್ದರು.
ಇದನ್ನೂ ಓದಿ | Prajadhwani Yatre | ರೈತರಿಗೆ, ಯುವಕರಿಗೆ ಟೋಪಿ ಹಾಕಿದೆ ಬಿಜೆಪಿ: ಸಿದ್ದರಾಮಯ್ಯ ವಾಗ್ದಾಳಿ
ಕರ್ನಾಟಕ
CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ
CM Siddaramaiah: ಮತ್ತೆ 18 ದಿನ 3000 ಕ್ಯುಸೆಕ್ ನೀರು ಬಿಡಬೇಕು ಎಂಬ ಆದೇಶವನ್ನು ಪ್ರಶ್ನೆ ಮಾಡಲಾಗುವುದು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ
ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.
ಬಂದ್ನಿಂದ ಯಾರಿಗೂ ತೊಂದರೆಯಾಗಬಾರದು
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.
ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ
ಕರ್ನಾಟಕ
BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
BJP JDS alliance : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೀಟು ಹಂಚಿಕೆ ಯಾವಾಗ ಎಂಬ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವಿಜಯದಶಮಿ ನಂತರ ಈ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿ ಜತೆ ಕೈಜೋಡಿಸಿರುವ ಜೆಡಿಎಸ್ ರಾಜ್ಯದಲ್ಲಿ ಹಲವಾರು ರಾಜಕೀಯ ತಂತ್ರಗಳನ್ನು (Political Strategy) ಹೆಣೆಯುತ್ತಿದೆ. ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅವರು ಬುಧವಾರ (ಸೆಪ್ಟೆಂಬರ್ 27) ಸುದ್ದಿಗೋಷ್ಠಿ ನಡೆಸಿ ತಾವು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಜತೆ ಮೈತ್ರಿ (BJP JDS alliance) ಕುರಿತಾಗಿ ಮೊದಲು ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಳಿ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಪ್ರಶ್ನೆ ಕೇಳಿದಾಗ ವಿಜಯದಶಮಿ ಹಬ್ಬದ (Vijayadashami Festival) ಬಳಿಕ ಬಿಜೆಪಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ. ಇದರ ಜತೆಗೆ ಆ ಸನ್ನಿವೇಶ ಬಂದಾಗ ಚರ್ಚೆ ಮಾಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಮೈತ್ರಿ ಸೀಟು ಹಂಚಿಕೆ ಸಂಬಂಧ ವಿಜಯದಶಮಿ ಮುಗಿದ ಬಳಿಕ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಸಹ ಧನಿಗೂಡಿಸಿದ್ದು, ಆ ಸನ್ನಿವೇಶ ಬರಲಿ, ಆಗ ಚರ್ಚೆ ಮಾಡುತ್ತೇವೆ ಎಂದು ಸೂಚ್ಯವಾಗಿ ಉತ್ತರಿಸಿದ್ದಾರೆ.
ಮೈತ್ರಿಕೂಟ ಸೇರಿದ್ದಷ್ಟೇ
ಈಚೆಗೆ ನವದೆಹಲಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಪ್ರಾಥಮಿಕ ಹಂತದ ಮಾತುಕತೆಯನ್ನು ನಡೆಸಿದ್ದರು. ಇದರ ಭಾಗವಾಗಿ ಅಂದೇ ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಆದರೆ, ಇದರ ನಂತರ ಸೀಟು ಹಂಚಿಕೆ ಸಂಬಂಧ ಯಾವುದೇ ರೀತಿಯ ಅಂತಿಮ ಹಂತದ ಚರ್ಚೆ ಆಗಿಲ್ಲ ಎಂದು ಹೇಳಲಾಗಿದೆ.
ಐದು ಕ್ಷೇತ್ರ ಕೇಳಿರುವ ಜೆಡಿಎಸ್
ಮೂಲಗಳ ಪ್ರಕಾರ ಜೆಡಿಎಸ್ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಾಯಚೂರು ಸೇರಿದಂತೆ ಇತ್ತ ಮಂಡ್ಯ, ಹಾಸನ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿತ್ತು. ಆದರೆ, ಈ ಸಂಬಂಧ ಬಿಜೆಪಿ ನಾಯಕರಲ್ಲಿ ಒಮ್ಮತ ಮೂಡಿಲ್ಲ.
ಇದನ್ನೂ ಓದಿ: BJP JDS alliance : ಜೆಡಿಎಸ್ಗೆ ಕಾಂಗ್ರೆಸ್ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ
ಬಿಜೆಪಿ ನಾಯಕರ ವಿರೋಧ
ಜೆಡಿಎಸ್ಗೆ ಯಾವುದೇ ಕಾರಣಕ್ಕೂ ಐದು ಸೀಟನ್ನು ಬಿಟ್ಟುಕೊಡುವುದು ಬೇಡ. ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟರೆ ಸಾಕು. ಉಳಿದ ಕಡೆ ಅವರಿಗೆ ಕೊಟ್ಟರೆ ಸೋಲು ನಿಶ್ಚಿತ. ಇದು ಬಿಜೆಪಿಗೆ ನಷ್ಟವನ್ನುಂಟು ಮಾಡುತ್ತದೆ ಎಂದು ರಾಜ್ಯದ ಕೆಲವು ನಾಯಕರು ಈಗಾಗಲೇ ವರದಿ ಒಪ್ಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಜಯ ದಶಮಿ ನಂತರ ನಡೆಯುವ ಮಾತುಕತೆ ಕುತೂಹಲ ಮೂಡಿಸಿದೆ.
ಕರ್ನಾಟಕ
Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!
Murder Case: ತನ್ನ ಮೇಲೆ ಮೂತ್ರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಧೂರ್ತನೊಬ್ಬ ಕೊಲೆಯನ್ನೇ ಮಾಡಿದ್ದಾನೆ. ಅದೂ ಆತನ ಮನೆಗೆ ನುಗ್ಗಿ. ಒಬ್ಬ ಸಜ್ಜನನ ಕೊಲೆ ಗೌನಿಪಲ್ಲಿಯ ಜನರ ಮನ ಕಲಕಿದೆ.
ಕೋಲಾರ: ಕುಡಿತದ ಮತ್ತು ಹಾಗೂ ದುರಂಹಕಾರ ಸೇರಿಕೊಂಡರೆ ಒಬ್ಬ ಮನುಷ್ಯ ಅದೆಷ್ಟು ಕ್ರೂರಿಯಾಗಬಲ್ಲ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಕುಡಿತದ ಮತ್ತಿನಲ್ಲಿದ್ದ (Alcoholic) ಆತ ಮೂತ್ರ (Urination) ಮಾಡುವಾಗ ಇನ್ನೊಬ್ಬನ ಮೇಲೆ ಸಿಡಿಸಿದ. ಅದನ್ನು ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಿದ್ದು ಮಾತ್ರವಲ್ಲ, ಮನೆಗೇ ನುಗ್ಗಿ ಕೊಲೆ (Murder Case) ಮಾಡಿದ್ದಾನೆ.
ಇಂಥಹುದೊಂದು ಭಯಾನಕ ಘಟನೆ ನಡೆದಿರುವುದು ಕೋಲಾರ ಜಿಲ್ಲೆಯ (Kolara News) ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ. ಮಂಗಳವಾರ ಸಂಜೆ ಇಬ್ಬರು ವ್ಯಕ್ತಿಗಳ ನಡುವಿನ ಒಂದು ಕ್ಷುಲ್ಲಕ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ.
ಗೌನಿಪಲ್ಲಿ ತರಕಾರಿ ವ್ಯಾಪಾರ ಮಾಡುತ್ತಾ ಎಲ್ಲರ ಜತೆ ಒಳ್ಳೆಯತನದಿಂದ ಬೆರೆಯುತ್ತಾ ಜನಮನ್ನಣೆ ಪಡೆದಿದ್ದ ಸಂಸಾವಂದಿಗ ವೆಂಕಟರಾಯಪ್ಪ ಅವರೇ ಪ್ರಾಣ ಕಳೆದುಕೊಂಡ ದುರ್ದೈವಿ. ಅವರಿಗೆ ವಯಸ್ಸು 55. ಅವರ ಮೇಲೆ ಮೂತ್ರ ಸಿಡಿಸಿದ್ದಲ್ಲದೆ ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಹಾಕಿದವನ ಹೆಸರು ಶಂಕರಪ್ಪ. ಸುಮಾರು 45 ವರ್ಷದ ಇವನು ಸದಾ ಕುಡಿದ ಮತ್ತಿನಲ್ಲೇ ಇರುತ್ತಾನೆ, ಸದಾ ಜಗಳ, ಹೊಡೆದಾಟಗಳೇ ಇವನ ಐಡೆಂಟಿಟಿ ಎನ್ನುತ್ತಾರೆ ಗೌನಿಪಲ್ಲಿ ಜನ.
ಮಂಗಳವಾರ ಸಂಜೆ ಏನಾಯಿತು?
ಮಂಗಳವಾರ ಸಂಜೆಯ ಹೊತ್ತಿಗೆ ವೆಂಕಟರಾಯಪ್ಪ ಅವರು ತಮ್ಮ ವ್ಯಾಪಾರ ನಡುವೆ ಮೂತ್ರ ಬರುತ್ತದೆ ಎಂದು ಸಂತೆ ಮೈದಾನದ ಕೊನೆಗೆ ಹೋದರು. ಆಗ ಅವರ ಹಿಂದೆಯೇ ಶಂಕರಪ್ಪ ಕೂಡಾ ಬಂದಿದ್ದ. ಅವರಿಬ್ಬರೂ ಹತ್ತಿರ ಹತ್ತಿರ ನಿಂತೇ ಮೂತ್ರ ಮಾಡಿದ್ದರು. ಈ ವೇಳೆ ಕುಡಿತದ ಮತ್ತಿನಲ್ಲಿದ್ದ ಮನೋಹರ ಬೇಕು ಎಂತಲೇ ವೆಂಕಟರಾಯಪ್ಪ ಅವರ ಮೇಲೆಯೇ ಮೂತ್ರ ಸಿಡಿಸಿದ್ದ.
ವೆಂಕಟರಾಯಪ್ಪ ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ನೀನು ಮಾಡಿದ್ದು ಸರಿಯಾ ಎಂದು ಕೇಳಿದ್ದಾರೆ. ಆದರೆ, ಶಂಕರಪ್ಪ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ಅವರ ಮೇಲೆಯೇ ಎಗರಾಡಿದ್ದಾನೆ. ನಾನು, ನನ್ನ ಮೂತ್ರ ಎಲ್ಲಿ ಬೇಕಾದರೂ ಮಾಡುತ್ತೇನೆ, ನೀನು ಯಾರು ಕೇಳುವುದಕ್ಕೆ ಎಂದೆಲ್ಲ ಗಲಾಟೆ ಮಾಡಿದ್ದಾನೆ.
ಇವನ ಬಳಿ ಮಾತನಾಡುವುದು ಬೇಡ ಎಂದು ವೆಂಕಟರಾಯಪ್ಪ ತನ್ನ ಅಂಗಡಿ ಕಡೆಗೆ ಬಂದಿದ್ದಾರೆ. ಆದರೆ, ಮನೋಹರ ಅವರನ್ನು ಬೆನ್ನಟ್ಟಿಕೊಂಡೇ ಬಂದು ನನ್ನನ್ನು ಪ್ರಶ್ನೆ ಮಾಡುತ್ತೀಯಾ ಎಂದು ಕೇಳಿ ಹಲ್ಲೆ ಮಾಡಿದ್ದಾನೆ. ಆಗ ಗೌನಿಪಲ್ಲಿ ಸಂತೆ ಮೈದಾನದಲ್ಲಿದ್ದವರು ಮತ್ತು ವ್ಯಾಪಾರಿಗಳು ಸೇರಿ ಜಗಳ ಬಿಡಿಸಿದ್ದಾರೆ.
ವೆಂಕಟರಾಯಪ್ಪ ಅವರ ಮೇಲೆ ಹಲ್ಲೆ ಮಾಡಿದ್ದರಿಂದ ಸಿಟ್ಟುಕೊಂಡ ವ್ಯಾಪಾರಿಗಳೆಲ್ಲ ಸೇರಿ ಈ ಗುಂಡ್ರುಗೋವಿ ಶಂಕರಪ್ಪನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬುದ್ಧಿ ಮಾತೂ ಹೇಳಿದ್ದಾರೆ. ಅಲ್ಲಿಗೆ ಅದು ಮುಕ್ತಾಯಗೊಂಡಿದೆ.
ಮನೆಗೇ ಬಂದು ಬಾಗಿಲು ಬಡಿದ ಕಿರಾತಕ
ರಾತ್ರಿಯಾಗುತ್ತಿದ್ದಂತೆಯೇ ವೆಂಕಟರಾಯಪ್ಪ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳಿದ್ದಾರೆ. ಸ್ವಲ್ಪ ಹೊತ್ತಿಗೆ ಮನೆಯ ಬಾಗಿಲು ಬಡಿಯಿತು. ಯಾರೆಂದು ಬಾಗಿಲು ತೆರೆದು ನೋಡಿದರೆ ಶಂಕರಪ್ಪ ನಿಂತಿದ್ದ. ಏನು ಎಂದು ಕೇಳಲೂ ಅವಕಾಶವಿಲ್ಲದಂತೆ ಶಂಕರಪ್ಪ ಮನೆಯೊಳಗೆ ನುಗ್ಗಿದ್ದ.
ಮನೆಯಲ್ಲಿ ವೆಂಕಟರಾಯಪ್ಪ ಅವರ ಪುತ್ರ ಮನೋಹರ, ಪತ್ನಿ ಮತ್ತು ಇತರರು ಇದ್ದರು. ಅವರೆಲ್ಲ ಏನಾಗುತ್ತಿದೆ ಎಂದು ನೋಡನೋಡುತ್ತಿದ್ದಂತೆಯೇ ಶಂಕರಪ್ಪ ವೆಂಕಟರಾಯಪ್ಪರನ್ನು ನೆಲಕ್ಕೆ ಕೆಡವಿ ಹಾಕಿ ಎದೆಗೆ ಗುದ್ದತೊಡಗಿದ್ದಾನೆ. ಜತೆಗೆ ಮೂತ್ರ ಮಾಡುವ ವಿಷಯದಲ್ಲಿ ಜಗಳ ಮಾಡುತ್ತೀಯಾ ಎಂದು ಮೂತ್ರ ಮಾಡುವ ಜಾಗಕ್ಕೂ ಹೊಡೆದಿದ್ದಾನೆ. 55 ವರ್ಷದ ಸಜ್ಜನ ಹಿರಿಯ ಜೀವ ವೆಂಕಟರಾಯಪ್ಪ ಅವರು ಶಂಕರಪ್ಪನ ಹೊಡೆತಗಳಿಗೆ ತತ್ತರಿಸಿ ಹೋಗಿದ್ದಾರೆ. ಸ್ವಲ್ಪ ಹೊತ್ತು ಹಾಗೆಯೇ ಹೊಡೆದ ಶಂಕರಪ್ಪ ಮನೆಯವರನ್ನು ಹೆದರಿಸಿ ಹೊರಗೆ ಹೋಗಿದ್ದಾನೆ.
ಎದೆಗೆ, ಮರ್ಮಾಂಗಕ್ಕೆ ಗುದ್ದಿದ್ದ ಧೂರ್ತ
ಅದಾದ ಕೂಡಲೇ ಮನೆಯವರು ವೆಂಕಟರಾಯಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಎದೆಗೆ, ಮರ್ಮಾಂಗಕ್ಕೆ ಬಿದ್ದ ಹೊಡೆತಗಳಿಂದ ತತ್ತರಿಸಿ ಜರ್ಜರಿತರಾಗಿದ್ದ ವೆಂಕಟರಾಯಪ್ಪ ಅವರು ಶ್ರೀನಿವಾಸಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು.
ಇದನ್ನೂ ಓದಿ: Instagram fight: ಇನ್ಸ್ಟಾಗ್ರಾಂನಲ್ಲಿ ಬೈದ ಎಂದು 16ರ ಬಾಲಕನನ್ನು ತಲ್ವಾರ್ನಿಂದ ಕಡಿದು ಕೊಂದ ಸ್ನೇಹಿತರು!
ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಗೌನಿಪಲ್ಲಿಯ ವ್ಯಾಪಾರಸ್ಥರು, ನಾಗರಿಕರು ವೆಂಕಟರಾಯಪ್ಪ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಅಂದ ಹಾಗೆ, ವೆಂಕಟರಾಯಪ್ಪ ಅವರಿಗೂ ಶಂಕರಪ್ಪ ಅವರಿಗೂ ಮುಖ ಪರಿಚಯ ಇಲ್ಲವೇ ಇಲ್ಲ. ಅವರಿಬ್ಬರು ಹಿಂದೆಂದು ಮುಖಾಮುಖಿ ಆಗಿರಲೇ ಇಲ್ಲ. ಯಾರೆಂದು ಗೊತ್ತೇ ಇಲ್ಲ. ಕೇವಲ ಒಂದು ಮೂತ್ರದ ಸಿಡಿತದಿಂದ ಒಂದು ಮನೆಯ ಬೆಳಕು ಆರಿತು. ಹೀಗೆ ಕೊಲೆ ಮಾಡಿದ ಧೂರ್ತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.
ಕರ್ನಾಟಕ
BJP JDS alliance : ಜೆಡಿಎಸ್ಗೆ ಕಾಂಗ್ರೆಸ್ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ
BJP JDS alliance : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಬಿಜೆಪಿ ಜತೆಗಿನ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್ನಿಂದ ಪಕ್ಷಕ್ಕಾದ ಅನ್ಯಾಯದ ಬಗ್ಗೆ ಹೇಳಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿದ್ದು ಯಾರು ಎಂಬ ಬಗ್ಗೆಯೂ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅಧಿಕೃತವಾಗಿ ಮಾತನಾಡಿದ್ದಾರೆ. ಮೈತ್ರಿ ಹಿಂದಿನ ಉದ್ದೇಶ ಏನು ಎಂಬುದನ್ನು ಹೇಳಿದ್ದಾರೆ. ಅಲ್ಲದೆ, ಮುಸ್ಲಿಂ ಮುಖಂಡರನ್ನು (Muslim leaders) ಜೆಡಿಎಸ್ ತೊರೆಯುತ್ತಿರುವ ಬಗ್ಗೆ ಪ್ರಸ್ತಾಪ ಮಾಡುತ್ತಾ, ಮುಸ್ಲಿಂ ನಾಯಕರನ್ನು ಕಾಂಗ್ರೆಸ್ ಸೋಲಿಸಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಪಕ್ಷದ ಬಿ ಟಿಂ ಜೆಡಿಎಸ್ ಎಂದು ಹೇಳುವವರು ಮೊದಲು ತಾವೇನು ಮಾಡಿದ್ದಾರೆಂಬುದನ್ನು ನೋಡಬೇಕು. ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸರ್ಕಾರವನ್ನು ಕೆಡವಿದ್ದು ಯಾರು ಎಂಬುದನ್ನು ಚರ್ಚೆ ಮಾಡೋಣ ಎಂದು ಪಂಥಾಹ್ವಾನ ನೀಡಿದ್ದಾರೆ. ಜತೆಗೆ ಕಾಂಗ್ರೆಸ್ ಮಾಡಿರುವ ಮೋಸದ ಬಗ್ಗೆ 100 ಕಾರಣಗಳನ್ನು ಹೇಳುವೆ ಎಂದು ದೇವೇಗೌಡರು ಗುಡುಗಿದ್ದಾರೆ. ಇದೆಕ್ಕೆಲ್ಲ ವಿ ಡೋಂಟ್ ಕೇರ್ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಸಭೆಯಲ್ಲಿ ಫಾರೂಕ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೆ, ಯಾರು ಸೋತರು? 8 ಜನ ನಾಯಕರನ್ನು ಕರೆದುಕೊಂಡು ಹೋದಿರಿ. ಅಲ್ಪಸಂಖ್ಯಾತರನ್ನು ಆ ದಿನ ಸೋಲಿಸಿದ್ದು ಯಾರು? ಜೆಡಿಎಸ್ಗೆ ಕಾಂಗ್ರೆಸ್ ಮೋಸ ಮಾಡಿರುವ 100 ಉದಾಹರಣೆಗಳನ್ನು ಕೊಡುತ್ತೇನೆ. ಕಾಂಗ್ರೆಸ್ ಹಲವಾರು ಬಾರಿ ಬ್ಲಂಡರ್ ಮಾಡಿದೆ. ನೀವು ಜಾತ್ಯತೀತ ಬಗ್ಗೆ ಮಾತನಾಡುತ್ತಿರಾ? ನಾವು ಯಾವುದಕ್ಕೂ ಕೇರ್ ಮಾಡಲ್ಲ ಎಂದು ಹೇಳಿದರು.
ಅಮಿತ್ ಶಾ ಜತೆ ಮೈತ್ರಿ ಚರ್ಚೆ ಮಾಡಿದ್ದೇನೆ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭಾರತೀಯ ಜನತಾ ಪಾರ್ಟಿಯ ಜತೆ ಹೋಗಬೇಕಾದರೆ, ನಾನು ಮೊದಲು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಜತೆ ಚರ್ಚೆ ಮಾಡಿದ್ದೆ. ನಾವು ಕಳೆದ 60 ವರ್ಷದಿಂದ ಯಾವುದೇ ಸಮಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ. ಕರ್ನಾಟಕದಲ್ಲಿ ಕುಮಾರಸ್ವಾಮಿಯವರ ಸರ್ಕಾರದಲ್ಲಿದ್ದ 17 ಜನರು ಶಾಸಕರನ್ನು ಮುಂಬೈಗೆ ಕರೆಸಿಕೊಂಡವರು ಯಾರು? ಇದೆಲ್ಲವೂ ಚರ್ಚೆಯಾಗಲಿ, ಚರ್ಚೆ ಮಾಡೋಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಅವನ ಸರ್ಕಾರನ್ನ ತೆಗೆದಿದ್ದು ಯಾರು? ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದಕ್ಕೆ ಅವಕಾಶ ಮಾಡಿದ ಬಗ್ಗೆ ಚರ್ಚೆ ಮಾಡೋಣ. ಯಾರು ಇದಕ್ಕೆ ಜವಾಬ್ದಾರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನಿಸಿದರು.
ಎಚ್ಡಿಕೆಯನ್ನು ಸಿಎಂ ಮಾಡುವಂತೆ ಒತ್ತಾಯ ಮಾಡಿದ್ದು ಯಾರು?
ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಮಾಡಬೇಕೆಂದು ಯಾರು ಬಂದಿದ್ದು? ನನಗೆ ಅವರನ್ನೇ ಸಿಎಂ ಮಾಡುವಂತೆ ಒತ್ತಾಯ ಮಾಡಿದರು. ಯಾವ ಕಾರಣಕ್ಕೂ ನಿಮ್ಮ ಸಹವಾಸ ಬೇಡ ಅಂತಾ ಹೇಳಿದ್ದೆ. ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಇವತ್ತು ಬಿಜೆಪಿ ಜತೆ ಸಂಬಂಧ ಯಾಕೆ ಬೆಳೆಸಿದ್ದೀರಿ ಎಂದು ಮಾಧ್ಯಮಗಳಲ್ಲಿ ಕೇಳುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ: Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ
ದೇಶದಲ್ಲಿ ಒಂದೇ ಕುಟುಂಬ ಆಡಳಿತ ಮಾಡಬೇಕಾ?
ನಾನು ಯಾವುದೇ ಕಾರಣಕ್ಕೂ ಅಧಿಕಾರಕ್ಕಾಗಿ ರಾಜಕೀಯ ಮಾಡಿಲ್ಲ. ರಾಹುಲ್ ಗಾಂಧಿ ಕೈಯಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಅಂತ ಹೇಳಿಸಿದರು. ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಾಗ ಏನ್ ಮಾಡಿದ್ರು ಅಂತ ನಾನು ನೋಡಲಿಲ್ವಾ? ಈಗ ಮೈತ್ರಿ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ದೇಶದಲ್ಲಿ ಒಂದೇ ಕುಟುಂಬ ಆಡಳಿತ ಮಾಡಬೇಕಾ? ನಾನು 10 ವರ್ಷದಲ್ಲಿ ಮೊದಲ ಬಾರಿ ಮೈತ್ರಿ ಬಗ್ಗೆ ಮಾತನಾಡಿದ್ದೇನೆ ಎಂದು ಎಚ್.ಡಿ. ದೇವೇಗೌಡ ಹೇಳಿದರು.
-
ದೇಶ13 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
South Cinema24 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಸುವಚನ8 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ14 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್20 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!