Caste Census : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಮರುನೇಮಕ - Vistara News

ಕರ್ನಾಟಕ

Caste Census : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಮರುನೇಮಕ

Caste Census : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿ ನವೆಂಬರ್​ 26ಕ್ಕೆ ಮುಕ್ತಾಯಗಳ್ಳುತ್ತಿದ್ದ ಕಾರಣ ಮರು ನೇಮಕದ ಆದೇಶವನ್ನು ಸರ್ಕಾರ ಹೊರಡಿಸಿದೆ.

VISTARANEWS.COM


on

Jayaprakash Hegde
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ನವೆಂಬರ್​ 24ರಂದು ಮಹತ್ವದ ಆದೇಶ ಹೊರಡಿಸಿದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹಾಗೂ ಐವರು ಸದಸ್ಯರ ಅಧಿಕಾರವನ್ನು 2024ರ ಜನವರಿ 31ರವರೆಗೆ ಮರು ನೇಮಕ ಮಾಡಲಾಗಿದೆ. ಇವರೆಲ್ಲರ ಅವಧಿಯ ನವೆಂಬರ್​ 26ಕ್ಕೆ ಮುಕ್ತಾಯಗೊಳ್ಳುತ್ತಿತ್ತು. ಅವರೆಲ್ಲರ ಅವಧಿ ವಿಸ್ತರಣೆಗೆ ಅವಕಾಶ ಇಲ್ಲದ ಕಾರಣ ಮರು ನೇಮಕ ಆದೇಶ ಹೊರಡಿಸಲಾಗಿದೆ. ಈ ಮೂಲಕ ಡಿಸೆಂಬರ್‌ ಒಳಗೆ ಜಾತಿ ಗಣತಿ ವರದಿಯನ್ನು (Caste Census Report) ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಯೋಜನೆ ರೂಪಿಸಿದ್ದಾರೆ.

ಕಾಂತರಾಜ ಆಯೋಗ ವರದಿ ಅಂತಿಮ ವರದಿ ತಯಾರಿಸಲು ತಮ್ಮನ್ನು ಮುಂದುವರಿಸುವಂತೆ ಅಧ್ಯಕ್ಷರಾದ ಜಯಪ್ರಕಾಶ್​ ಹೆಗ್ಡೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರು ಅದಕ್ಕೆ ಮೌಖಿಕ ಒಪ್ಪಿಗೆ ಕೊಟ್ಟಿದ್ದರು ಎಂದು ಸುದ್ದಿಯಾಗಿತ್ತು. ಇದೀಗ ಆದೇಶ ಹೊರಡಿಸುವ ಮೂಲಕ ಜಾತಿ ಗಣತಿ ವರದಿಯನ್ನು ಅಂತಿಮಗೊಳಿಸಲು ಸರ್ಕಾರ ಸಿದ್ಧವಾಗಿದೆ ಎನ್ನಲಾಗಿದೆ. ಜಯಪ್ರಕಾಶ್​ ಹೆಗ್ಡೆ ಅವರೊಂದಿಗೆ ಸದಸ್ಯರಾದ ಕಲ್ಯಾಣ್​ ಕುಮಾ್ ಎಚ್​. ಎಸ್​, ರಾಜಶೇಖರ್ ಬಿ. ಎಸ್​, ಅರುಣ್​ ಕುಮಾರ್​, ಕೆ. ಟಿ ಸುವರ್ಣ, ಶಾರದಾ ನಾಯ್ಕ ಅವರನ್ನೂ ಮರು ನೇಮಕ ಮಾಡಲಾಗಿದೆ.

ಸಿಎಂಗೆ ಪತ್ರ ಬರೆದಿದ್ದ ಅಧ್ಯಕ್ಷರು

ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ (Backward Classes Commission Chairman Jayaprakash Hegde) ಅವರು ನವೆಂಬರ್‌ 22ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಅಧಿಕಾರವಧಿ ಹೆಚ್ಚಿಸಲು ಮನವಿ ಮಾಡಿದ್ದರು. ಆಯೋಗವು 2015ರ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ತಯಾರಿಸುವ ಪ್ರಕ್ರಿಯೆಯಲ್ಲಿದೆ. ಈ ವರದಿಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ಸಲ್ಲಿಸಲು ಕಾಲಾವಕಾಶ ಬೇಕಿದ್ದು, ಪ್ರಸ್ತುತ ಆಯೋಗವನ್ನು ಮುಂದುವರಿಸಬೇಕು ಎಂದು ಕೋರಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕಾಲಾವಕಾಶವನ್ನು ವಿಸ್ತರಣೆ ಮಾಡಲಾಗುತ್ತಿದ್ದು, ವರದಿ ನೀಡುವವರೆಗೆ ಮುಂದುವರಿಯುವಂತೆ ಸೂಚನೆ ನೀಡಿದ್ದೇನೆ ಎಂದು ಎರಡು ದಿನದ ಹಿಂದಷ್ಟೇ ಮಾಧ್ಯಮಗಳಿಗೆ ಹೇಳಿದ್ದರು.

ಸಮಯಾವಕಾಶ ನೀಡಿರುವ ಸಿಎಂ

ಈ ಡಿಸೆಂಬರ್ ಒಳಗೆ ವರದಿಯನ್ನು ಸಲ್ಲಿಕೆ ಮಾಡುತ್ತೇವೆ. ವರದಿ ಮಿಸ್‌ ಆಗಿಲ್ಲ. ನನ್ನ ಅವಧಿ ಈ ತಿಂಗಳು ಮುಕ್ತಾಯ ಆಗುತ್ತಿತ್ತು. ಆದರೆ, ಸರ್ಕಾರದವರು ನನಗೆ ಈಗ ಅವಧಿಯನ್ನು ಮುಂದುವರಿಸಿದ್ದಾರೆ. ನಮಗೆ ಸಮಯ ಕೊಟ್ಟಿರುವುದರಿಂದ ಪುನಃ ಮರುಪರಿಶೀಲನೆ ಮಾಡಿ ಆರಂಭದಲ್ಲಿ ‌ಮಾಡಲು ಆಗುತ್ತದೆ. ಆದಷ್ಟು ಬೇಗ ವರದಿ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ ಅವರೇ ಸಮಯ ಕೊಟ್ಟ ಮೇಲೆ ನಮಗೆ ಸುಲಭ ಆಯಿತು ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದ್ದರು.

ಇದನ್ನೂ ಓದಿ : Safe Bangalore : ಬೆಂಗಳೂರಿಗರೇ ಆಪತ್ತು ಬಂತಾ? ಈ ನಂಬರ್‌ಗೆ ಕರೆ ಮಾಡಿ; 7 ನಿಮಿಷಕ್ಕೆ ಪೊಲೀಸರು ಹಾಜರ್!

ಏನಿದು ಕಾಂತರಾಜು ವರದಿ?

2013ರಿಂದ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು 2014 -15ರಲ್ಲಿ ನಮ್ಮ ಸರ್ಕಾರ ಜಾತಿ ಸಮೀಕ್ಷೆ ಮತ್ತು ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಲು ಕಾಂತರಾಜು ನೇತೃತ್ವದ ಆಯೋಗವನ್ನು ರಚನೆ ಮಾಡಿತ್ತು. ಆದರೆ, ಆ ಸರ್ಕಾರದ ಅವಧಿ ಮುಗಿಯುವ ವೇಳೆಗೆ ವರದಿ ಸಿದ್ಧವಾಗಿರಲಿಲ್ಲ. ಬಳಿಕ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂತು. 2018ರ ಕೊನೇ ಭಾಗದಲ್ಲಿ ಕಾಂತರಾಜು ನೇತೃತ್ವದ ಸಮಿತಿಯು ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಿತ್ತು. 2019ರಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ (Congress JDS alliance) ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಈ ವರದಿಯನ್ನು ಅಂಗೀಕರಿಸಲು ಒಪ್ಪಿರಲಿಲ್ಲ. ಅಂದು ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ, ಆ ವಿಷಯವನ್ನು ಕ್ಯಾಬಿನೆಟ್‌ಗೆ ಚರ್ಚೆಗೆ ತರದಂತೆ ಸೂಚಿಸಿದ್ದರು. ಹಾಗಾಗಿ ಆ ವರದಿ ಹಾಗೆಯೇ ಉಳಿಯಿತು. ನಂತರ ಬಂದ ಮುಖ್ಯಮಂತ್ರಿಗಳ್ಯಾರೂ ಸಹ ಈ ಜಾತಿಗಣತಿ ವರದಿಯನ್ನು ಪಡೆಯಲು ಮುಂದೆ ಬರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Karnataka Weather Forecast: ಚಿಕ್ಕಮಗಳೂರಿನಲ್ಲಿ ಗುರುವಾರ ಮಳೆ ಅಬ್ಬರಿಸಿದ್ದು, ನಾಳೆ ಶುಕ್ರವಾರಕ್ಕೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಳಗಾವಿ/ಚಿಕ್ಕಮಗಳೂರು: ಬೆಳಗಾವಿಯಲ್ಲಿ ಧಾರಾಕಾರ ಮಳೆಯಿಂದಾಗಿ ಮನೆಗಳಿಗೆ (Rain News) ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಮಳೆರಾಯನ (Karnataka Weather Forecast) ಅಟ್ಟಹಾಸಕ್ಕೆ ಉಡಚ್ಚಮ್ಮಾ ದೇವಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ಕಳೆದ ಒಂದು ಗಂಟೆಗಳ ಕಾಲ ಸುರಿದ ಭಾರಿ‌ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ದೇವಲಾಪೂರ ಮತ್ತು ಯರಡಾಲ ರಸ್ತೆ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಬಂದ್‌ ಆಗಿತ್ತು. ಮಳೆರಾಯನ ಆರ್ಭಟಕ್ಕೆ ಜಮೀನುಗಳು ನೀರುಪಾಲಾಗಿದ್ದು, ರೈತರು ಸಂಕಷ್ಟ ಅನುಭವಿಸಿದರು.

ಚಿಕ್ಕಮಗಳೂರಿನಲ್ಲೂ ಮಳೆ ಆರ್ಭಟ

ಚಿಕ್ಕಮಗಳೂರಿನ ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ರಸ್ತೆಗೆ ಗುಡ್ಡದ ಮಣ್ಣು ಬಿದ್ದಿದ್ದು, 2 ಜೆಸಿಬಿಯಿಂದ ನಿರಂತರ ಮಣ್ಣು ತೆರವಿನ ಕಾರ್ಯ ನಡೆಯುತ್ತಿದೆ. ಸುರಿಯುತ್ತಿರುವ ಮಳೆ ಮಧ್ಯೆಯೇ ತೆರವು ಕಾರ್ಯ ನಡೆಯುತ್ತಿದೆ. ಇನ್ನು ಅಪಾರ ಪ್ರಮಾಣದಲ್ಲಿ ನೀರು ಹರಿದು ರಸ್ತೆ ಬದಿ ಗುಂಡಿಗಳು ನಿರ್ಮಾಣವಾಗಿದೆ. ಹೀಗಾಗಿ ಅಧಿಕಾರಿಗಳು ತಾತ್ಕಾಲಿಕವಾಗಿ ಮಣ್ಣನ್ನು ಹಾಕಿ ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಮಳೆ ಜತೆ ಸರ್ಕಾರಿ ಆಸ್ಪತ್ರೆಗೆ ಡ್ರೈನೇಜ್ ನೀರು ನುಗ್ಗಿದೆ. ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ ಸುರಿದ ಮಳೆಯಿಂದ ಸರ್ಕಾರಿ ಆಸ್ಪತ್ರೆ ಜಲಾವೃತಗೊಂಡಿದೆ. ಆಸ್ಪತ್ರೆಯಲ್ಲಿ ನೀರು ತುಂಬಿದ್ದರಿಂದ ರೋಗಿಗಳು ಪರದಾಟಬೇಕಾಯಿತು. ಮಳೆ ನೀರಿನ ಜತೆಗೆ ಡ್ರೈನೇಜ್ ನೀರು ಸೇರಿ ಕೆಟ್ಟ ವಾಸನೆ ಬರುತ್ತಿದ್ದು, ರೋಗಿಗಳು ಪರದಾಡಬೇಕಾಯಿತು.

ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕುದುರೆಮುಖ, ಸಂಸೆ, ಹೊರನಾಡು ಸುತ್ತಮುತ್ತ ಮಳೆ ಅಬ್ಬರಿಸುತ್ತಿದೆ. ಕಳಸ ಪಟ್ಟಣದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಕಾಫಿ-ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಮಲೆನಾಡಿನಾದ್ಯಂತ ಬೆಳೆಗ್ಗೆಯಿಂದಲೂ ಮೋಡ ಕವಿದ ವಾತವರಣ ಇದೆ.

ಉಕ್ಕಿ ಹರಿದ ಇಂದಿರಮ್ಮನ ಕೆರೆ

ಧಾರವಾಡದಲ್ಲಿ ಸುರಿದ ನಿರಂತರ ಮಳೆಗೆ ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆ ತುಂಬಿ ಹರಿಯುತ್ತಿದೆ. ಕೆರೆ ಕೋಡಿ ಬಿದ್ದು ತುಂಬಿ ಹರಿಯುತ್ತಿರುವ ದೃಶ್ಯ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು. ಕೆಲ ಯುವಕರು ಕೆರೆ ಕೋಡಿ ಬಿದ್ದು ಹರಿಯುತ್ತಿದ್ದ ನೀರಿನಲ್ಲಿ ದಾಟುವ ಹುಚ್ಚುತನ ಪ್ರದರ್ಶಿಸಿದ್ದರು. ಯುವಕನ ಹುಚ್ಚಾಟಕ್ಕೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

ಕಳೆದ ಬುಧವಾರ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ವಿದ್ಯಾಕಾಶಿ ಜನರು ತತ್ತರಿಸಿ ಹೋಗಿದ್ದರು. ಧಾರವಾಡದಲ್ಲಿ ಮಳೆಯು ಅವಾಂತರವೇ ಸೃಷ್ಟಿಸಿತ್ತು. ಮಳೆಯ ನೀರು ನಿಂತಿರುವ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧಾರವಾಡದ ಸಂಪಿಗೆನಗರ, ನಿಲಸಿಟಿ, ಶ್ರೀಶ ರೆಸಿಡೆನ್ಸಿ, ವ್ಯಾಸ ವಿಹಾರ ಲೇಔಟ್‌ನ ತುಂಬ ನೀರು ನಿಂತಿದ್ದರಿಂದ, ಜನರು ಮನೆಯಿಂದ ಹೊರ ಬರಲು ಆಗದೆ ಪರದಾಡಿದರು. ರಾಜಕಾಲುವೆ ಇಲ್ಲದಿರುವುದೇ ಇದಕ್ಕೆ ಕಾರಣವೆಂದು ದೂರಿದರು. ಸ್ಥಳಕ್ಕೆ ಬಂದ ಅಧಿಕಾರಿಗಳ ವಿರುದ್ಧ ದೂರುಗಳ ಪಟ್ಟಿ ನೀಡಿದ್ದರು.

ಧಾರವಾಡದಲ್ಲಿ ಮಳೆ ಅವಾಂತರ

ರಾತ್ರಿಯಿಡೀ ಸುರಿದ ಮಳೆಗೆ ಕಟಾವಿಗೆ ಬಂದಿದ್ದ ಬೆಳೆಗಳು ನೀರಲ್ಲಿ ಹೋಮವಾಗಿದೆ. ಲಕ್ಷಾಂತರ ರೂ ಮೌಲ್ಯದ ಬೆಳೆಗಳು ಮಳೆಗೆ ನೆಲಸಮವಾಗಿದೆ. ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ರೈತರು ಕಂಗಾಲಾಗಿದ್ದಾರೆ. ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡಬೇಕಾಯಿತು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಮನೆಗಳೆಲ್ಲ ಕೆರೆಯಂತೆ ನಿರ್ಮಾಣವಾಗಿದ್ದು, ಮಳೆ ಬಂದಾಗೆಲ್ಲ ಇದೆ ಸಮಸ್ಯೆ ಅನುಭವಿಸುವಂತಾಗಿದೆ.

ಲಕ್ಷ್ಮೇಶ್ವರ-ದೊಡ್ಡೂರ ರಸ್ತೆ ಸಂಪರ್ಕ ಕಡಿತ

ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಬಳಿ ಹಳ್ಳದಲ್ಲಿ ನೀರು ತುಂಬಿ ಹರಿದಿದ್ದು, ಲಕ್ಷ್ಮೇಶ್ವರ-ದೊಡ್ಡೂರ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಳ್ಳದಲ್ಲಿ ಬೆಳೆ ಕಟಾವು ಯಂತ್ರ ಸಿಲುಕಿದ್ದರಿಂದ ರೈತರು ಪರದಾಡಿದರು. ಪ್ರತಿ ಬಾರಿ ಮಳೆಯಾದರೆ ಇದೇ ಸಂಕಷ್ಟ ಎದುರಾಗುತ್ತದೆ. ಸೇತುವೆ ನಿರ್ಮಾಣಕ್ಕೆ ಅನೇಕ ಬಾರಿ ಮನವಿ ಮಾಡಿದ್ದರು ಕ್ಯಾರೆ ಅಂತಿಲ್ಲ ಎಂದು ಆಕ್ರೋಶ ಹೊರಹಾಕಿದರು.

Continue Reading

ಬೆಂಗಳೂರು

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ ಆಗಲಿದೆ. ವಾದ-ಪ್ರತಿವಾದ ಆಲಿಸಿರುವ ಕೋರ್ಟ್‌ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಆ್ಯಂಡ್ ಗ್ಯಾಂಗ್‌ ಜೈಲುಪಾಲಾಗಿದೆ. ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯು ಅ.10ರಂದು ನಡೆಯಿತು. ಸುದೀರ್ಘವಾಗಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕಾಯ್ದಿರಿಸಿದೆ. ಈ ಮೂಲಕ ದರ್ಶನ್‌ ಜಾಮೀನು ಭವಿಷ್ಯ ಮೂರು ದಿನ ಮುಂದಕ್ಕೆ ಹೋಗಿದ್ದು, ದಚ್ಚು ಜೈಲುವಾಸದಲ್ಲಿ ಇರುವಂತಾಗಿದೆ.

ಆರೋಪಿಗಳ ಜಾಮೀನು ಅರ್ಜಿಗಳಿಗೆ ಗುರುವಾರ (ಅ.10) ಆಕ್ಷೇಪಣೆ ಮಾಡಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದಿಸಿದರು. ದರ್ಶನ್‌ ಪರ ಸುದೀರ್ಘ ವಾದ ಮಂಡಿಸಿದ್ದ ಸಿ.ವಿ ನಾಗೇಶ್ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಕೌಂಟರ್ ಕೊಟ್ಟರು. ದರ್ಶನ್‌ ವಿರುದ್ಧ ತನಿಖಾಧಿಕಾರಿಗಳು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ದರ್ಶನ್‌ ಪರ ಸಿ.ವಿ ನಾಗೇಶ್‌ ಆರೋಪಿಸಿದ್ದರು. ಇದೆಲ್ಲದಕ್ಕೂ ಪ್ರಸನ್ನ ಕುಮಾರ್‌ ಒಂದೊಂದಾಗಿ ಎದುರೇಟು ಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

Fake journalist : ಬೇಕರಿಗಳನ್ನೇ ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Fake journalist arrested for targeting bakeries For money
Koo

ಬೆಂಗಳೂರು: ಇತ್ತೀಚಿಗೆ ನಕಲಿ ಪತ್ರಕರ್ತರ ಹಾವಳಿ (Fake journalist) ಹೆಚ್ಚಾಗಿದೆ. ಈ ನಕಲಿ ಪತ್ರಕರ್ತರು ಕೈಯಲ್ಲಿ ಮೈಕ್‌ ಹಿಡಿದು ರೌಂಡ್ಸ್‌ಗೆ ಇಳಿದರೆ ರೋಲ್‌ಕಾಲ್‌ ಫಿಕ್ಸ್‌ ಅಂತಲೇ ಅರ್ಥ.. ಹೀಗೆ ನಗರದ ಬೇಕರಿಗಳನ್ನೇ ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ಪೊಲೀಸರು ಮಹಮ್ಮದ್ ಶಫಿ ಎಂಬಾತನನ್ನು ಬಂಧನ ಮಾಡಿದ್ದಾರೆ. ಈತ ಸಂಘಟನೆಯ ಜತೆಗೆ ಒಂದು ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನಲ್‌ವೊಂದನ್ನು ಮಾಡಿಕೊಂಡು, ಬೆದರಿಕೆ, ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ.

ಕುತ್ತಿಗೆ ಐಡಿ ಕಾರ್ಡ್‌, ಪ್ರಜಾಪರ ಟಿವಿ ಎಂಬ ಕೈಯಲ್ಲಿ ಲೋಗೋ ಹಾಗೂ ಮೊಬೈಲ್ ಹಿಡಿದು ಪತ್ರಕರ್ತನಾಗಿರುವ ಮಹಮ್ಮದ್‌ ಶಫಿ, ತನ್ನ ಅಸಿಸ್ಟೆಂಟ್ ಜತೆಗೆ ಹೊರಟರೆ ಅಂದು ರೋಲ್ ಕಾಲ್ ಫಿಕ್ಸ್ ಅಂತಲೇ ಅರ್ಥ. ಹುಳಿಮಾವು ಬಳಿ ರಮೇಶ್ ಎಂಬುವವರ ಒಡೆತನದಲ್ಲಿರುವ ಎಸ್‌ಎಲ್‌ವಿ ಬೇಕರಿಗೆ ಎಂಟ್ರಿ ಕೊಟ್ಟ ಮಹಮ್ಮದ್ ಶಫಿ ತಾನು ಪತ್ರಕರ್ತ ಎಂದು ಪ್ರಜಾಪರ ಟಿವಿಯ ಲೋಗೋ ಹಿಡಿದು ಬಂದಿದ್ದ.

ಕ್ಲೀನಿಂಗ್ ವೇಳೆ ಒಳ ನುಗ್ಗುವ ಈತ, ವಾಶ್‌ ಮಾಡುವ ಸಂದರ್ಭದಲ್ಲಿ ಅದನ್ನು ವಿಡಿಯೊ ಮಾಡಿಕೊಂಡಿದ್ದ. ನಂತರ ಅಲ್ಲಿದ್ದ ಸಿಬ್ಬಂದಿ ಮುಂದೆ ದರ್ಪ ಮರೆದು ಫುಡ್ ಕ್ಲೀನ್ ಇಲ್ಲ, ತಯಾರಿಸುವ ಸ್ಥಳ ಸ್ವಚ್ಚವಿಲ್ಲ ಎಂದು ಕ್ಯಾತೆ ತೆಗೆದಿದ್ದ. ಎಲ್ಲಿ ಕ್ಲೀನ್ ಮಾಡುತ್ತಾರೋ, ಕಸ ಒಟ್ಟು ಮಾಡುತ್ತಾರೋ ನಿರ್ದಿಷ್ಟವಾಗಿ ಅಲ್ಲಿಯ ವಿಡಿಯೊ ತೆಗೆಯುತ್ತಿದ್ದ. ನಂತರ ತಾನು ಪ್ರೆಸ್ ರಿಪೋರ್ಟರ್ ಈ ಸುದ್ದಿನ ಹಾಕುತ್ತಿನಿ ನಂತರ ಆಟೋಮ್ಯಾಟಿಕ್ ಆಗಿ ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗುತ್ತೆ ಎಂದು ಭಯ ಬೀಳಿಸುತ್ತಿದ್ದ.

ನಂತರ ಸುದ್ದಿ ಹಾಕಬಾರದು ಅಂದರೆ 50 ಸಾವಿರ ಕೊಡಬೇಕು ಇಲ್ಲದಿದ್ದರೆ, ನಂಗೆ ಲೋಕಲ್ ಎಎಲ್‌ಎ , ಬಿಡಿಎ ಅಧಿಕಾರಿಗಳು , ಫುಡ್ ಆಫೀಸರ್‌ಗಳೆಲ್ಲರೂ ಗೊತ್ತು . ನೀ ಹೇಗೆ ಬೇಕರಿ ನಡಿಸ್ತಿಯಾ ನೋಡ್ತಿನಿ ಎಂದು ಧಮ್ಕಿ ಹಾಕಿದ್ದ. ಇದರಿಂದ ಹೆದರಿದ ರಮೇಶ್ ಆತನಿಗೆ ಕನ್ವಿಯೆನ್ಸ್ ಮಾಡಿ ಹತ್ತು ಸಾವಿರ ಗೂಗಲ್ ಪೇ ಮಾಡಿದ್ದ. ನಂತರ ರಮೇಶ್ ಬೇಕರಿ ಅಸೋಸಿಯೇಷನ್ ಗಮನಕ್ಕೆ ತಂದಾಗ ಸುಮಾರು ನಲವತ್ತು ಐವತ್ತು ಜನರಿಗೆ ಇದೇ ರೀತಿಯಲ್ಲಿ ಬ್ಲ್ಯಾಕ್ ಮೇಲ್ ಮಾಡಿರುವುದು ತಿಳಿದು ಬಂದಿದೆ. ಹುಳಿಮಾವು ಪೊಲೀಸರು ನಕಲಿ ಪ್ರೆಸ್ ರಿಪೋರ್ಟರ್‌ನನ್ನು ಹೆಡೆಮುರಿ ಕಟ್ಟಿ ವಿಚಾರಣೆ ನಡೆಸುತ್ತಿದ್ದಾರೆ . ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Murder Case : ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Murder Case : ಹಣ ನೀಡುವಂತೆ ಪೀಡಿಸುತ್ತಿದ್ದ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ, ತಾಯಿ ತಲೆ ಮೇಲೆ ಖಾರ ಅರೆಯುವ ಗುಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಇದೀಗ ತಾಯಿ ಕೊಂದ ಪಾಪಿ ಮಗನಿಗೆ ನ್ಯಾಯಾಲಯವು ಜೀವವಾಧಿ ಶಿಕ್ಷೆ ವಿಧಿಸಿದೆ.

VISTARANEWS.COM


on

By

Murder case
Koo

ತುಮಕೂರು: ತಾಯಿ ಬುದ್ದಿವಾದ ಹೇಳಿದ್ದಕ್ಕೆ ಸಿಟ್ಟಾದ ಮಗನೊಬ್ಬ ಬರ್ಬರವಾಗಿ ಕೊಲೆ (Murder Case) ಮಾಡಿದ್ದ. ಇದೀಗ ಕೊಲೆ ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಅಪರಾಧಿ ವಿರೂಪಾಕ್ಷ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ತುಮಕೂರಿನ ಕುಣಿಗಲ್ ತಾಲ್ಲೂಕು ಹಂಗರಹಳ್ಳಿ ಗ್ರಾಮದ ನಿವಾಸಿ ವಿರೂಪಾಕ್ಷ, ಬುದ್ದಿವಾದ ಹೇಳಿದ್ದ ತಾಯಿ ಜಯಮ್ಮಳನ್ನು 2021 ಜನವರಿ 15ರಂದು ರಾತ್ರಿ ಕೊಲೆ ಮಾಡಿದ್ದ. ವಿರೂಪಾಕ್ಷ ಕೆಲಸ ಮಾಡದೆ ಮನೆಯಲ್ಲೇ ಇರುತ್ತಿದ್ದ. ಜಯಮ್ಮ ಹೂ ಹಾಗೂ ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಇತ್ತ ಹಣ ನೀಡುವಂತೆ ಪದೇ ಪದೇ ತಾಯಿಯನ್ನು ಪೀಡಿಸಿ ವಿರೂಪಾಕ್ಷ ಗಲಾಟೆ ಮಾಡುತ್ತಿದ್ದ. ಹಣ ನೀಡಲು ನಿರಾಕರಿಸಿ ಜಯಮ್ಮ ಮಗನಿಗೆ ಬುದ್ದಿವಾದ ಹೇಳಿದ್ದರು.

ಗಲಾಟೆ ನಂತರ ಜಯಮ್ಮ ಮಲಗಿದ್ದ ವೇಳೆ ತಲೆ ಮೇಲೆ ಖಾರ ಅರೆಯುವ ಗುಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ಗುರುಪ್ರಸಾದ್ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪಣ ವರದಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಟಿ.ಆರ್ ಅರುಣ್ ಹಾಗೂ ಕೆ.ಸಿ ದೀಪಕ್ ವಾದ ಮಂಡಿಸಿದ್ದರು. ವಾದ- ವಿವಾದ ಆಲಿಸಿ ನ್ಯಾ.ವೈ.ಎಲ್ ಲಡಖಾನ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ನ್ಯಾಯಾಲಯವು ಐಪಿಸಿ 302 ಅಡಿಯಲ್ಲಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka Weather Forecast
ಮಳೆ6 ಗಂಟೆಗಳು ago

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Actor Darshan
ಬೆಂಗಳೂರು6 ಗಂಟೆಗಳು ago

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Fake journalist arrested for targeting bakeries For money
ಬೆಂಗಳೂರು8 ಗಂಟೆಗಳು ago

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

Murder case
ತುಮಕೂರು10 ಗಂಟೆಗಳು ago

Murder Case : ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Ratan Tata missed england's royal honour to take care of sick dogs
ದೇಶ11 ಗಂಟೆಗಳು ago

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata joined the company as an ordinary employee but Why is he the guru of the industry
ದೇಶ12 ಗಂಟೆಗಳು ago

Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

Ratan Tata
ದೇಶ12 ಗಂಟೆಗಳು ago

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Why Ratan Tata didn't get married
ದೇಶ13 ಗಂಟೆಗಳು ago

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Dina Bhavishya
ಭವಿಷ್ಯ13 ಗಂಟೆಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ

Heavy rain forecast in Uttara Kannada
ಮಳೆ2 ದಿನಗಳು ago

Karnataka Weather : ಇಂದು ಉತ್ತರಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌