JDS Meeting: ಕುಮಾರಸ್ವಾಮಿ ಮತ್ತೆ Active; ದೇವೇಗೌಡರ ಸಮ್ಮುಖದಲ್ಲಿ ಚುನಾವಣೆ ಪ್ಲ್ಯಾನ್‌, ಸೆ. 10ರಂದು ಬೃಹತ್‌ ಸಮಾವೇಶ - Vistara News

ಕರ್ನಾಟಕ

JDS Meeting: ಕುಮಾರಸ್ವಾಮಿ ಮತ್ತೆ Active; ದೇವೇಗೌಡರ ಸಮ್ಮುಖದಲ್ಲಿ ಚುನಾವಣೆ ಪ್ಲ್ಯಾನ್‌, ಸೆ. 10ರಂದು ಬೃಹತ್‌ ಸಮಾವೇಶ

JDS Meeting : ಅನಾರೋಗ್ಯದಿಂದ ಎದ್ದುಬಂದಿರುವ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆ ಮತ್ತು ಹೋರಾಟಗಳಿಗೆ ಪಕ್ಷವನ್ನು ಅಣಿಗೊಳಿಸುವ ಕೆಲಸ ಶುರು ಮಾಡಿದ್ದಾರೆ.

VISTARANEWS.COM


on

JDS meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಮತ್ತೆ ಆಕ್ಟಿವ್‌ ಆಗಿದ್ದಾರೆ. ಕೆಲವು ದಿನಗಳ ಹಿಂದೆ ಮೆದುಳಿನ ಸ್ಟ್ರೋಕ್‌ಗೆ ಒಳಗಾಗಿ ಮೂರು ದಿನ ಆಸ್ಪತ್ರೆಯಲ್ಲಿದ್ದು ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರು ಬುಧವಾರ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ (HD Devegowda) ಸಾರಥ್ಯದಲ್ಲಿ ಪಕ್ಷದ ಮಹತ್ವದ ಸಭೆ (JDS Meeting) ನಡೆಸಿದರು. ಇದರಲ್ಲಿ ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ (Parliament Election 2024) ಬಗ್ಗೆ ಮಹತ್ವದ ಸಮಾಲೋಚನೆ ನಡೆಯಿತು. ಇದರ ಭಾಗವಾಗಿ ಸೆಪ್ಟೆಂಬರ್‌ 10ರಂದು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ (Mega convention in Bangalore on Sep 10) ನಡೆಸಲು ತೀರ್ಮಾನಿಸಲಾಗಿದೆ.

ಕುಮಾರಸ್ವಾಮಿ ಅವರ ಜೆ.ಪಿ. ನಗರದ ನಿವಾಸದಲ್ಲಿ ಈ ಸಭೆ ನಡೆದಿದ್ದು, ಮಾಜಿ ಪ್ರಧಾನಿ ದೇವೇಗೌಡರು ಇದರಲ್ಲಿ ಪಾಲ್ಗೊಳ್ಳಲು ಪದ್ಮನಾಭ ನಗರದ ನಿವಾಸದಿಂದ ಬಂದಿದ್ದರು. ಸುದೀರ್ಘ ಸಭೆಯಲ್ಲಿ ಕುಮಾರಸ್ವಾಮಿ ಅವರು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿ, ಮುಖಂಡರಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಹಾಲಿ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಹಾಗೂ ಜಿಲ್ಲಾ ಅಧ್ಯಕ್ಷರು ಹಾಜರಿದ್ದ ಈ ಸಭೆಯಲ್ಲಿ ಉಭಯ ನಾಯಕರು ಸಭೆಯಲ್ಲಿ ಕೆಲವಾರು ಗಂಭೀರ ವಿಷಯಗಳನ್ನು ಹಂಚಿಕೊಂಡರು.

ಅಲ್ಲದೆ, ಕಾವೇರಿ ಜಲ ಸಂಕಷ್ಟ, ಬರಗಾಲ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆಯೂ ಕೂಡ ಸುದೀರ್ಘ ಚರ್ಚೆ ನಡೆಯಿತಲ್ಲದೆ, ಜನಪರ ವಿಷಯಗಳನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ರೂಪಿಸಬೇಕು ಎಂದು ಇಬ್ಬರೂ ನಾಯಕರು ಪಕ್ಷದ ಮುಖಂಡರಿಗೆ ಹೋರಾಟದ ದಿಕ್ಸೂಚಿ ನಿಗದಿ ಮಾಡಿದರು.

ಪಕ್ಷ ಉಳಿಸಿಕೊಳ್ಳಲು ಅವಿರತ ಹೋರಾಟ ಎಂದ ದೇವೇಗೌಡರು

ಪಕ್ಷ ಬಲಿಷ್ಠವಾಗಿದೆ. ಅದನ್ನು ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ. ನಾನು ಬದುಕುವುದರ ಒಳಗಾಗಿ ಈ ಪಕ್ಷ ಅಧಿಕಾರಕ್ಕೆ ಬರುತ್ತದೆ. ಅದನ್ನು ನೋಡಿಯೇ ನೋಡುತ್ತೇನೆ. ಈ ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಅವಿರತವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಶಪಥ ಮಾಡಿದರು.

ಸೆ.10ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಮುಂಬರುವ ಲೋಕಸಭೆ, ಬಿಬಿಎಂಪಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಇದೇ ತಿಂಗಳು 10ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಂಘಟನಾ ಸಮಾವೇಶದ ಬಗ್ಗೆ ಚರ್ಚೆ ನಡೆಸಿದ ಮಾಜಿ ಪ್ರಧಾನಿಗಳು, ಸೋತೆವು ಎಂದು ಸುಮ್ಮನಿದ್ದರೆ ಆಗುವುದಿಲ್ಲ. ಛಲದಿಂದ ಕೆಲಸ ಮಾಡಿದರೆ ಜನರು ಮೆಚ್ಚಿಕೊಳ್ಳುತ್ತಾರೆ.ಎಲ್ಲರೂ ಸೇರಿ ಪಕ್ಷವನ್ನು ಕಟ್ಟೋಣ ಎಂದು ಮುಖಂಡರಿಗೆ ಹುರಿದುಂಬಿಸಿದರು. ಈ ವಯಸ್ಸಿನಲ್ಲಿಯೂ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲು ತಯಾರಿದ್ದೇನೆ. ಎಲ್ಲಿಗೆ ಬೇಕಾದರೂ ಬರಲು ಸಿದ್ಧನಿದ್ದೇನೆ. ಜನರ ಪರವಾಗಿ ಹೋರಾಟ ಮಾಡೋಣ ಎಂದರು ಅವರು.

ದೊಡ್ಡ ಪ್ರಮಾಣದಲ್ಲಿ ಕಾವೇರಿ ಹೋರಾಟ

ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಜಿಟಿ ದೇವೇಗೌಡರು ಹಾಗೂ ಬಂಡೆಪ್ಪ ಕಾಷೆಂಪೂರ ಮತ್ತು ಟಿ.ಎ.ಶರವಣ ಅವರು, ಸಭೆಯಲ್ಲಿ ಕಾವೇರಿ ವಿಚಾರ ಕೂಡ ಚರ್ಚೆಯಾಯಿತು. ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಈಗಾಗಲೇ ಹೋರಾಟ ನಡೆಸಲಾಗಿದೆ. ಮಂಡ್ಯ ಜಿಲ್ಲೆಯ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಈ ಹೋರಾಟವನ್ನು ವಿಸ್ತರಣೆ ಮಾಡಲಾಗುವುದು. ಈ ಸರಕಾರದಿಂದ ರಾಜ್ಯದ ಕಾವೇರಿ ಹಿತ ಕಾಯಲು ಸಾಧ್ಯವಿಲ್ಲ ಎಂದರು.

ದೇವೇಗೌಡರು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎಲ್ಲಾ ಶಾಸಕರು, ಜಿಲ್ಲಾ ಮುಖಂಡರು ಸಭೆ ಸೇರಿದ್ದೆವು. ಪಕ್ಷ ಸಂಘಟನೆ ಮಾಡಿ ರಾಜ್ಯದಲ್ಲಿ ಬಲಿಷ್ಠ ಪ್ರಾದೇಶಿಕ ಪಕ್ಷ ಕಟ್ಟಲು ನಿರ್ಧಾರ ಮಾಡಲಾಯಿತು. ಸೆಪ್ಟೆಂಬರ್ 10ರಂದು ಪ್ರಮುಖ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಸಭೆ ಯಶಸ್ವಿ ಮಾಡುವ ಬಗ್ಗೆ ಹಿರಿಯ ನಾಯಕರು ಸೂಚನೆಗಳನ್ನು ನೀಡಿದರು. ನಂತರ ಜಿಟಿಡಿ ನೇತೃತ್ವದಲ್ಲಿ ಮಾಡಿರೋ ಕೋರ್ ಕಮಿಟಿ ರಾಜ್ಯ ಪ್ರವಾಸ ಮಾಡಬೇಕು. ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ತೆರಳಿ ಪ್ರಮುಖರ ಅಭಿಪ್ರಾಯ ಪಡೆಯಲಾಗುವುದು. ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದೆ. ಮುಂದಿನ ತಿಂಗಳು ಅವರೂ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Murder case : ಭಿನ್ನಾಭಿಪ್ರಾಯದಿಂದ ದೂರಾಗಿದ್ದ ಪತ್ನಿಯನ್ನು ನಡುರಸ್ತೆಯಲ್ಲೆ ಚಾಕುವಿನಿಂದ ಇರಿದು ಪತಿಯೊಬ್ಬ ಕೊಲೆ ಮಾಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

VISTARANEWS.COM


on

By

Murder case in Bengaluru
ಸ್ಥಳ ಪರಿಶೀಲನೆ ನಡೆಸಿದ ಕೋರಮಂಗಲ ಪೊಲೀಸರು
Koo

ಬೆಂಗಳೂರು: ಬೆಂಗಳೂರಿನ (Bengaluru News) ಕೋರಮಂಗಲ ಪೊಲೀಸ್ ಠಾಣಾ (Kormangala police station) ವ್ಯಾಪ್ತಿಯಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ಸೆಲ್ವಿನ್ ಪ್ರಾನ್ಸಿಸ್ ಎಂಬಾತ ಪತ್ನಿಯನ್ನು ನಡುರಸ್ತೆಯಲ್ಲೆ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಗುರುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಸೆಲ್ವಿನ್ ಪ್ರಾನ್ಸಿಸ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಹೀಗಾಗಿ ಪತಿಯಿಂದ 6 ತಿಂಗಳ ಹಿಂದೆ ದೂರಾಗಿದ್ದಳು. ವೆಂಕಟಾಪುರದ ತಾಯಿ ಮನೆಯಲ್ಲಿ ವಾಸವಿದ್ದಳು. ಇಂದು ಗುರುವಾರ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಪತ್ನಿ ಜತೆಗೆ ಸೆಲ್ವಿನ್‌ ಪ್ರಾನ್ಸಿಸ್‌ ಗಲಾಟೆ ಮಾಡಿಕೊಂಡಿದ್ದ. ಈ ಮೊದಲೇ ಪ್ರಿಪ್ಲಾನ್‌ ಮಾಡಿಕೊಂಡು ಪತ್ನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೆಂಜ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೃತ್ಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

ಬೆಂಗಳೂರು: ವಿವಾಹಿತ ಮಹಿಳೆಯ (Assault Case) ಹಿಂದೆ ಬಿದ್ದ ಪಾಗಲ್‌ ಪ್ರೇಮಿಯೊಬ್ಬ, ಮದುವೆ ಆಗುವಂತೆ ಪೀಡಿಸುತ್ತಿದ್ದ. ಮದುವೆಗೆ ಮಹಿಳೆ ನಿರಾಕರಿಸಿದ್ದಕ್ಕೆ ಆಕೆ ಮನೆಗೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಘಟನೆ ನಡೆದಿದೆ.

ಅರ್ಬಾಜ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಮಹಿಳೆಗೆ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಇತ್ತೀಚೆಗೆ ತನ್ನ ವಾರಸೆ ಬದಲಾಯಿಸಿಕೊಂಡಿದ್ದ. ಮಹಿಳೆಗೆ ಮದುವೆ ಆಗಿದ್ದರೂ, ತನ್ನನ್ನು ಮದುವೆ ಆಗು ಎಂದು ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮನೆಯವರಿಗೆ ವಿಚಾರ ತಿಳಿಸಿದ್ದಳು. ಹೀಗಾಗಿ 2 ಕುಟುಂಬದ ಹಿರಿಯರು ಅರ್ಬಾಜ್‌ಗೆ ಬುದ್ಧಿವಾದ ಹೇಳಿದ್ದರು.

ಆದರೂ ಮಹಿಳೆಗೆ ಆಗಾಗ ಫೋನ್‌ ಮಾಡಿ ಗಲಾಟೆ ಮಾಡುತ್ತಿದ್ದ. ಹೀಗಿರುವಾಗ ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆ ಬಳಿ ಬಂದವನೇ ಬೆಂಕಿ ಇಟ್ಟಿದ್ದಾನೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಬೆಂಕಿ ಬಿದ್ದಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ಬೆಂಕಿಗಾಹುತಿ ಆಗಿವೆ.

ಸದ್ಯ ಈ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರ್ಬಾಜ್‌ನನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Prajwal Revanna Case: ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ತಂಡ‌ವು ಏರ್‌ಪೋರ್ಟ್‌ ಸಿಬ್ಬಂದಿ, ಅಧಿಕಾರಿಗಳಿಗೆ ಸೂಚನೆ‌ ನೀಡಿದೆ. ಪ್ರಜ್ವಲ್ ರೇವಣ್ಣ ಕಂಡ ಕೂಡಲೇ ವಶಕ್ಕೆ ಪಡೆಯುವಂತೆ ಹೇಳಲಾಗಿದೆ. ಈ ಸಂಬಂಧ ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ವಿದೇಶದಿಂದ ಬಂದ ಕೂಡಲೇ ಇಮಿಗ್ರೇಷನ್‌ಗೆ ಪ್ರಜ್ವಲ್‌ ಹೋಗಬೇಕು. ಈ ವೇಳೆ ಅಲ್ಲಿಯೇ ವಶಕ್ಕೆ ಪಡೆದು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಲು ನಿರ್ದೇಶನ ನೀಡಲಾಗಿದೆ.

VISTARANEWS.COM


on

Prajwal Revanna Case Locked up as Prajwal arrives at Bengaluru airport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಲುಕ್‌ ಔಟ್‌ ನೋಟಿಸ್‌ ನೀಡಿ ಬಿಸಿ ಮುಟ್ಟಿಸಲಾಗಿದ್ದರಿಂದ ಪ್ರಜ್ವಲ್‌ ರೇವಣ್ಣ ಯಾವ ಸಮಯದಲ್ಲಿ ಬೇಕಿದ್ದರೂ ಬೆಂಗಳೂರಿಗೆ ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಅಲ್ಲಿಯೇ ಲಾಕ್‌ ಮಾಡಲು ಪ್ಲ್ಯಾನ್‌ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ತಂಡ‌ವು ಏರ್‌ಪೋರ್ಟ್‌ ಸಿಬ್ಬಂದಿ, ಅಧಿಕಾರಿಗಳಿಗೆ ಸೂಚನೆ‌ ನೀಡಿದೆ. ಪ್ರಜ್ವಲ್ ರೇವಣ್ಣ ಕಂಡ ಕೂಡಲೇ ವಶಕ್ಕೆ ಪಡೆಯುವಂತೆ ಹೇಳಲಾಗಿದೆ. ಈ ಸಂಬಂಧ ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ವಿದೇಶದಿಂದ ಬಂದ ಕೂಡಲೇ ಇಮಿಗ್ರೇಷನ್‌ಗೆ ಪ್ರಜ್ವಲ್‌ ಹೋಗಬೇಕು. ಈ ವೇಳೆ ಅಲ್ಲಿಯೇ ವಶಕ್ಕೆ ಪಡೆದು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಲು ನಿರ್ದೇಶನ ನೀಡಲಾಗಿದೆ. ಇದಾದ ಬಳಿಕ ಏರ್‌ಪೋರ್ಟ್‌ ಪೋಲಿಸರು ಎಸ್‌.ಐ.ಟಿ. ಅಧಿಕಾರಿಗಳಿಗೆ ಪ್ರಜ್ವಲ್ ಅವರನ್ನು ವಶಕ್ಕೆ ನೀಡುತ್ತಾರೆ.

ಪ್ರಜ್ವಲ್‌ ವೀಸಾ, ಪಾಸ್‌ಪೋರ್ಟ್‌ ರವಾನೆ

ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಫೋಟೊ, ವೀಸಾ ಪಾಸ್‌ಪೋರ್ಟ್‌ನ ಮಾಹಿತಿಯನ್ನು ಏರ್‌ಪೋರ್ಟ್‌ನ ಸಿಬ್ಬಂದಿಗೆ ರವಾನೆ ಮಾಡಲಾಗಿದೆ. ಅಲ್ಲದೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪೊಲೀಸರು ಸಹ ಬೀಡುಬಿಟ್ಟಿದ್ದಾರೆ. ಸುತ್ತಮುತ್ತ ಹೈ ಅಲರ್ಟ್ ಆಗಿದ್ದು, ಪ್ರಜ್ವಲ್‌ ಬರುತ್ತಿದ್ದಂತೆ ಅಲ್ಲಿಯೇ ಹಿಡಿದು ಕರೆದೊಯ್ಯಲು ಮುಂದಾಗಲಾಗಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆ ಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟಿಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟಿಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ರಾಜಕೀಯ

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

Lok Sabha Election 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರಪನಹಳ್ಳಿ ಪಟ್ಟಣದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಮತಯಾಚಿಸಿದರು.

VISTARANEWS.COM


on

Davanagere lok sabha constituency bjp candidate gayatri siddeshwar election campaign in harapanahalli
Koo

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರಪನಹಳ್ಳಿ ಪಟ್ಟಣದಲ್ಲಿ (Lok Sabha Election 2024) ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಮತಯಾಚಿಸಿದರು.

ಈ ವೇಳೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಪಕ್ಷದ ಸ್ಥಳೀಯ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಇದನ್ನೂ ಓದಿ: Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

ರೋಡ್‌ ಶೋ

ಹರಪನಹಳ್ಳಿ ಪಟ್ಟಣದ ಹರಿಹರ ವೃತ್ತದಿಂದ ಹೊಸಪೇಟೆ ರಸ್ತೆ ಮಾರ್ಗವಾಗಿ ಕೊಟ್ಟೂರು ವೃತ್ತದವರೆಗೂ ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ರೋಡ್‌ ಶೋ ನಡೆಸಿ, ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಕರುಣಾಕರರೆಡ್ಡಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಹುಬ್ಬಳ್ಳಿ

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Lok Sabha Election 2024: ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವೇ ಅಲ್ಲ. ಅದು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು. ಗ್ಯಾರಂಟಿ ಕಾರ್ಯಕ್ರಮ ಕೊಟ್ಟರು. ಆದರೆ ಅವುಗಳು ಜನರಿಗೆ ತಲುಪಿಸುವ ಕುರಿತು ಗ್ಯಾರಂಟಿ ನೀಡಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

VISTARANEWS.COM


on

MLC Chalavadi Narayanaswamy latest Statement in Hubballi
Koo

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು (State Congress Government) ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Lok Sabha Election 2024) ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವೇ ಅಲ್ಲ. ಅದು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು. ಗ್ಯಾರಂಟಿ ಕಾರ್ಯಕ್ರಮ ಕೊಟ್ಟರು. ಆದರೆ ಅವುಗಳು ಜನರಿಗೆ ತಲುಪಿಸುವ ಕುರಿತು ಗ್ಯಾರಂಟಿ ನೀಡಲಿಲ್ಲ ಎಂದು ಟೀಕಿಸಿದರು.

ದಲಿತ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರವು ಯಾವುದೇ ಗ್ಯಾರಂಟಿ ನೀಡಲಿಲ್ಲ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ 25,386 ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ

ಈ ಪ್ರಶ್ನೆಗೆ ಮುಖ್ಯಮಂತ್ರಿಯಾಗಲೀ, ಉಳಿದವರಾಗಲೀ ಉತ್ತರ ಕೊಡಲು ಸಿದ್ಧರಿಲ್ಲ. ದಲಿತರನ್ನು ಬಡವರನ್ನಾಗಿಯೇ ಉಳಿಸುವ, ಬರೀ ವೋಟ್‌ಗೆ ಮಾತ್ರ ಬಳಕೆ ಮಾಡಿ, ಗುಲಾಮರನ್ನಾಗಿಸುವುದು ಕಾಂಗ್ರೆಸ್‌ನ ಕುತಂತ್ರವಾಗಿದೆ. ಇದು ದಲಿತರಿಗೆ ಮಾಡಿದ ಮೋಸ ಎಂದು ದೂರಿದರು.

ಇದು ಲೋಕಸಭೆ ಚುನಾವಣೆ. ಇಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ವಿಚಾರಗಳು ಚರ್ಚೆಗೆ ಬರಬೇಕು. ಆದರೆ ಸಿದ್ಧರಾಮಯ್ಯ ಈ ಚುನಾವಣೆಯನ್ನು ರಾಜ್ಯದ ಚುನಾವಣೆ ಎಂದು ಭಾವಿಸಿದ್ದಾರೆ. ದೇಶದ ಬಗ್ಗೆ ಚಕಾರವೆತ್ತದೇ, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ ಅಲ್ಲದೇ ಮುಂಜಾನೆಯಿಂದ ಸಂಜೆವರೆಗೂ ಬರೀ ಸುಳ್ಳು ಹೇಳುತ್ತಾರೆ. ಪ್ರಧಾನಿ ಮೋದಿ ವಿರುದ್ಧ ಬರೀ ಅಪಪ್ರಚಾರ ಮಾಡುತ್ತಾರೆ. ಕಾಂಗ್ರೆಸ್‌ನವರು ದೇಶಕ್ಕಾಗಿ ಏನು ಮಾಡಿದ್ದಾರೆ ಹೇಳಬೇಕು. ಈ ಬಗ್ಗೆ ಮಾತನಾಡದೇ ಕ್ಷುಲ್ಲಕ ವಿಚಾರಗಳನ್ನು ಪ್ರಸ್ತಾಪಿಸಿ, ಬರೀ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್‌ನವರಿಗೆ ಬಿಜೆಪಿಯನ್ನಾಗಲೀ, ಮೋದಿಯನ್ನಾಗಲೀ ಟೀಕಿಸಲು ನೈತಿಕ ಹಕ್ಕಿಲ್ಲ ಎಂದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಆರೋಪಿಸುತ್ತಾರೆ. ಆದರೆ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.

ಮಾಜಿ ಸಚಿವ ಎನ್.ಮಹೇಶ ಮಾತನಾಡಿದರು.

ಇದನ್ನೂ ಓದಿ: Chandrayaan 3: ಇತಿಹಾಸ ಸೃಷ್ಟಿಸಿ ಚಂದ್ರನ ಮಡಿಲಲ್ಲಿ ಮಲಗಿದ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್; ಇಲ್ಲಿವೆ Photos

ಈ ಸಂದರ್ಭದಲ್ಲಿ ಮುಖಂಡರಾದ ಮಹೇಂದ್ರ ಕೌತಾಳ, ಬಸವರಾಜ ಅಮ್ಮಿನಭಾವಿ, ಗುರು ಪಾಟೀಲ, ಪರಶುರಾಮ ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Virat kohli
ಪ್ರಮುಖ ಸುದ್ದಿ4 mins ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Brij Bhushan Singh
ದೇಶ5 mins ago

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Murder case in Bengaluru
ಬೆಂಗಳೂರು14 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ15 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್28 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ29 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ31 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

MLC Chalavadi Narayanaswamy latest Statement in Hubballi
ಹುಬ್ಬಳ್ಳಿ32 mins ago

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Mega Shetty
ಫ್ಯಾಷನ್40 mins ago

Mega Shetty: ದಾವಣಿ-ಲಂಗದಲ್ಲಿ ನಟಿ ಮೇಘಾ ಶೆಟ್ಟಿಯಂತೆ ನೀವೂ ಕಾಣಬೇಕೆ? ಈ ಟಿಪ್ಸ್ ಪಾಲಿಸಿ!

six seats of Karnataka Legislative Council Elections to be held on June 3
ಕರ್ನಾಟಕ42 mins ago

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌