JDS Pancharatna Yatre | SC-ST ಮೀಸಲಾತಿ ವಿಚಾರದಲ್ಲಿ ಎಚ್‌ಡಿಕೆ ʼಸಿಎಂ ಹೆಣ್ಣೆದೆʼ ಪ್ರಸ್ತಾಪಿಸಿದ್ದು ಏಕೆ? - Vistara News

ಕರ್ನಾಟಕ

JDS Pancharatna Yatre | SC-ST ಮೀಸಲಾತಿ ವಿಚಾರದಲ್ಲಿ ಎಚ್‌ಡಿಕೆ ʼಸಿಎಂ ಹೆಣ್ಣೆದೆʼ ಪ್ರಸ್ತಾಪಿಸಿದ್ದು ಏಕೆ?

JDS Pancharatna Yatre | ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಈಚೆಗೆ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದ್ದು ಗಂಡೆದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಶ್ಲಾಘನೆ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

VISTARANEWS.COM


on

pancharatna rathayatre inaugaration 6
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರ ಮುಂದೆ ಯಾವುದೇ ಗಂಡೆದೆ ಮುಖ್ಯಮಂತ್ರಿ ಇಲ್ಲ. ಚುನಾವಣೆ ಹತ್ತಿರ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರಿಗೆ ಗಂಡೆದೆ ಇದ್ದಿದ್ದರೆ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿಯವರನ್ನು ಏಕೆ 252 ದಿನ ಧರಣಿ ಕೂರಿಸುತ್ತಿದ್ದರು? ಮೀಸಲಾತಿಗೆ ನಮ್ಮ ಸಹಕಾರವೂ ಇದೆ. ನಮ್ಮ ಸಹಕಾರದಿಂದ ಇಂದು ಅವರ ಗಂಡೆದೆ ಹೊರಗೆ ಬಂದಿದೆ. ಇಲ್ಲದೆ ಹೋಗಿದ್ದರೆ ಹೆಣ್ಣೆದೆ ಹೊರಗೆ ಬರುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ (JDS Pancharatna Yatre) ವೇಳೆ ಹೇಳಿದರು.

ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್‌ಸಿ, ಎಸ್‌ಟಿ ಮೀಸಲಾತಿ ಕೊಡಲು ಗಂಡೆದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಾತ್ರ ಸಾಧ್ಯವಾಯಿತು ಎಂಬ ಕಂದಾಯ ಸಚಿವ ಆರ್‌. ಅಶೋಕ್ ಹೇಳಿಕೆ ಪ್ರತಿಕ್ರಿಯೆ ನೀಡಿ, ಮೀಸಲಾತಿ ವಿಚಾರದಲ್ಲಿ ಈಗ ಏನಾಗಿದೆ? ಗಂಡೆದೆ ಮುಖ್ಯಮಂತ್ರಿ ಆಗಿದ್ದವರು‌ ಎರಡು ವರ್ಷ ಏಕೆ ಮೀಸಲಾತಿ ಹೆಚ್ಚಳ ಮಾಡಲಿಲ್ಲ? ಇದೊಂದು ಚುನಾವಣೆ ಸ್ಟಂಟ್ ಅಷ್ಟೇ ಎಂದು ಪ್ರತಿಕ್ರಿಯೆ ನೀಡಿದರು.

ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಎಂದು ನೀಡಿದವರು ಎಂದರೆ ಅದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಾತ್ರ. ದೇವೇಗೌಡರ ಮುಂದೆ ಯಾವುದೇ ಗಂಡೆದೆ ಮುಖ್ಯಮಂತ್ರಿಯೂ ಇಲ್ಲ. ಚುನಾವಣೆ ಹತ್ತಿರ ಬಂದಿದೆ. ಹೀಗಾಗಿ ಈಗ ಮೀಸಲಾತಿಯನ್ನು ಕೊಟ್ಟಿದ್ದಾರೆ. ಇವರಿಗೆ ಗಂಡೆದೆ ಇದ್ದಿದ್ದರೆ ಶ್ರೀಗಳನ್ನು ಏಕೆ 252 ದಿನ ಧರಣಿ ಕೂರಲು ಬಿಡುತ್ತಿದ್ದರು. ಮೀಸಲಾತಿಗೆ ನಮ್ಮ ಸಹಕಾರವೂ ಇದೆ. ನಮ್ಮ ಸಹಕಾರದಿಂದ ಇಂದು ಅವರ ಗಂಡೆದೆ ಹೊರಗೆ ಬಂದಿದೆ. ಇಲ್ಲದೆ ಹೋಗಿದ್ದರೆ ಹೆಣ್ಣೆದೆ ಹೊರಗೆ ಬರುತ್ತಿತ್ತು ಎಂದು ಹೇಳಿದರು.

ಇದನ್ನೂ ಓದಿ | JDS Pancharatna Yatre | ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಚಾಲನೆ; ಶಿಕ್ಷಣ, ಆರೋಗ್ಯ, ರೈತ, ಮಹಿಳೆ, ವಸತಿ ಮಂತ್ರ

ಹೆಣ್ಣು ಮಕ್ಕಳ ಬಗ್ಗೆ ಗೌರವ ಇದೆಎಚ್ಚೆತ್ತ ಎಚ್‌ಡಿಕೆ
ವಿಪಕ್ಷಗಳು ಸಹಕಾರ ಕೊಟ್ಟ ಕಾರಣ ಇವತ್ತು ಗಂಡೆದೆ ಹೊರಗೆ ಬಂದಿದೆ. ಇಲ್ಲದೆ ಹೋಗಿದ್ದರೆ ಹೆಣ್ಣೆದೆ ಹೊರಗೆ ಬರುತ್ತಿತ್ತು ಎಂದು ಮಾತನಾಡಿದ ಕುಮಾರಸ್ವಾಮಿ, ತಕ್ಷಣವೇ ಎಚ್ಚೆತ್ತು ನನಗೆ ಹೆಣ್ಣು ಮಕ್ಕಳ ಬಗ್ಗೆ ಗೌರವ ಇದೆ ಎಂದು ಮಾತು ತೇಲಿಸಿದರು.

ಆಪರೇಷನ್‌ ಕಮಲ ಬಗ್ಗೆ ಕಿಡಿ
ತೆಲಂಗಾಣದಲ್ಲಿ ಆಪರೇಷನ್ ಕಮಲ ವಿಚಾರವಾಗಿ ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, ಕರ್ನಾಟಕ ಮುಗೀತು, ರಾಜಸ್ಥಾನ ಆಯ್ತು, ಮಹಾರಾಷ್ಟ್ರದಲ್ಲಿಯೂ ಮಾಡಿಯಾಯ್ತು. ಈಗ ತೆಲಂಗಾದಲ್ಲಿ ಆಪರೇಷನ್ ಮಾಡುತ್ತಿದ್ದಾರೆ. ತೆಲಂಗಾಣದಲ್ಲಿ ಅಷ್ಟು ಸುಲಭಕ್ಕೆ ಆಪರೇಷನ್ ಆಗುವುದಿಲ್ಲ. ಹಣದ ಸಮೇತ ಸಿಕ್ಕಿ ಹಾಕಿಕೊಂಡಿದ್ದಾರೆ. ಆಪರೇಷನ್ ಕಮಲಕ್ಕೆ ಅಕ್ರಮದ ಹಣ ಸುರಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಈ ಬಗ್ಗೆ ಮಾತಾಡಬೇಕು. ಜಾರಿ ನಿರ್ದೇಶನಾಲಯದವರು (ಇ.ಡಿ) ಅವರು ಸೀಜ್ ಮಾಡಿದ 14 ಕೋಟಿ ರೂಪಾಯಿ ಬಗ್ಗೆ ಮಾತನಾಡಬೇಕು. ಇ.ಡಿ.ಯವರು ಈಗ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್‌ ಟ್ರ್ಯಾಕ್ಟರ್‌ ರ‍್ಯಾಲಿಗೆ ಗೇಲಿ
ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕಾಂಗ್ರೆಸ್‌ನವರು ಈಗ ಟ್ರ್ಯಾಕ್ಟರ್‌ ರ‍್ಯಾಲಿ ಮಾಡುತ್ತೇವೆಂದು ಹೇಳಿಕೊಳ್ಳುತ್ತಿದ್ದಾರೆ. ಐದು ವರ್ಷ ಅವರದ್ದೇ ಸರ್ಕಾರ ಇತ್ತಲ್ಲವೇ? ಆಗ ಏನು ಮಾಡಿದ್ದಾರೆ ಎಂಬುದನ್ನು ಮೊದಲು ಉತ್ತರಿಸಲಿ, ಅವರ ಕೊಡುಗೆ ಏನಿದೆ ಎಂಬುದಕ್ಕೆ ಮೊದಲು ಉತ್ತರ ಕೊಡಬೇಕು. ಇದನ್ನೆಲ್ಲ ಜನರು ಒಪ್ಪಲಾರರು, ಅವರ ಜೋಡೋ ಯಾತ್ರೆಯನ್ನು ಜನ ನೋಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ | Election 2023 | ಎಚ್‌.ಡಿ. ಕುಮಾರಸ್ವಾಮಿ ಮುಂದಿನ ಸಿಎಂ ಆಗಲಿ; ಎಚ್‌ಡಿಕೆ ಫೋಟೊ ಇಟ್ಟು ಲಕ್ಷ್ಮೀ ಪೂಜೆ ಮಾಡಿದ ಅಭಿಮಾನಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Tata Motors: ಟಾಟಾ ಮೋಟರ್ಸ್ ಕಂಪನಿಯು ದಾಖಲೆಯ ಅತ್ಯಧಿಕ 333 ಪೇಟೆಂಟ್‌ಗಳಿಗೆ ಅನುಮೋದನೆ ಪಡೆದುಕೊಂಡಿದ್ದು, ಇಲ್ಲಿಯವರೆಗೆ ಒಟ್ಟು 850ಕ್ಕೂ ಹೆಚ್ಚು ಪೇಟೆಂಟ್‌ಗಳಿಗೆ ಅನುಮೋದನೆ ಪಡೆದಂತಾಗಿದೆ. ಹೊಸ ಹೊಸ ಉತ್ಪನ್ನಗಳು, ಪ್ರಕ್ರಿಯೆ ನಾವೀನ್ಯತೆಗಳು, ಕನೆಕ್ಟಿವಿಟಿ, ಎಲೆಕ್ಟ್ರಿಫಿಕೇಶನ್, ಸಸ್ಟೇನೇಬಿಲಿಟಿ ಅಂಡ್ ಸೇಫ್ಟಿ (CESS) ಯಂತಹ ಪ್ರಮುಖ ಆಟೋಮೋಟಿವ್ ಟ್ರೆಂಡ್‌ಗಳಲ್ಲಿನ ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತಾದ ವಿಸ್ತಾರವಾದ ಕ್ಷೇತ್ರಗಳಲ್ಲಿ ಆವಿಷ್ಕಾರ ತರುವ ನಿಟ್ಟಿನಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ.

VISTARANEWS.COM


on

Tata Motors gets approval for 333 patents
Koo

ಬೆಂಗಳೂರು: ಭಾರತದ ಮುಂಚೂಣಿಯಲ್ಲಿರುವ ಆಟೋಮೋಬೈಲ್ ಕಂಪನಿ ಟಾಟಾ ಮೋಟಾರ್ಸ್ (Tata Motors) ಇಂಟೆಲೆಕ್ಚುವಲ್ ಪ್ರಾಪರ್ಟಿ ರೈಟ್ಸ್ (IPR)ನಲ್ಲಿ ಮತ್ತೊಂದು ಮಹತ್ವದ ಹೊಸ ಮೈಲುಗಲ್ಲು ಸ್ಥಾಪಿಸಿದೆ.

2024ನೇ ಹಣಕಾಸು ಸಾಲಿನಲ್ಲಿ ಸಂಸ್ಥೆಯು ದಾಖಲೆಯ 222 ಪೇಟೆಂಟ್‌ಗಳು ಮತ್ತು 117 ಡಿಸೈನ್ ಅರ್ಜಿಗಳನ್ನು ಸಲ್ಲಿಸಿದೆ. ಇದು ಸಂಸ್ಥೆಯ ಇತಿಹಾಸದಲ್ಲೇ ಅತ್ಯಧಿಕ ಎನಿಸಿದೆ. ಹೊಸ ಹೊಸ ಉತ್ಪನ್ನಗಳು, ಪ್ರಕ್ರಿಯೆ ನಾವೀನ್ಯತೆಗಳು, ಕನೆಕ್ಟಿವಿಟಿ, ಎಲೆಕ್ಟ್ರಿಫಿಕೇಶನ್, ಸಸ್ಟೇನೇಬಿಲಿಟಿ ಅಂಡ್ ಸೇಫ್ಟಿ (CESS) ಯಂತಹ ಪ್ರಮುಖ ಆಟೋಮೋಟಿವ್ ಟ್ರೆಂಡ್‌ಗಳಲ್ಲಿನ ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತಾದ ವಿಸ್ತಾರವಾದ ಕ್ಷೇತ್ರಗಳಲ್ಲಿ ಆವಿಷ್ಕಾರ ತರುವ ನಿಟ್ಟಿನಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

ಇದಲ್ಲದೇ, ಪವರ್ ಟ್ರೇನ್, ಬಾಡಿ & ಟ್ರಿಮ್, ಸಸ್ಪೆನ್ಷನ್, ಬ್ರೇಕ್ಸ್, ಎಚ್‌.ವಿ.ಎ.ಸಿ. (HVAC) ಮತ್ತು ಮಾಲಿನ್ಯ ನಿಯಂತ್ರಣ ಸೇರಿದಂತೆ ವಿವಿಧ ವಾಹನ ಸಿಸ್ಟಂಗಳನ್ನೂ ಈ ಅರ್ಜಿಗಳು ಒಳಗೊಂಡಿವೆ. ಇದೇ ವೇಳೆ ಟಾಟಾ ಮೋಟರ್ಸ್ ದಾಖಲೆಯ ಅತ್ಯಧಿಕ 333 ಪೇಟೆಂಟ್‌ಗಳಿಗೆ ಅನುಮೋದನೆ ಪಡೆದುಕೊಂಡಿರುವುದು ಹೆಗ್ಗಳಿಕೆಯಾಗಿದೆ. ಈ ಮೂಲಕ ಟಾಟಾ ಮೋಟರ್ಸ್ ಇಲ್ಲಿವರೆಗೆ ಒಟ್ಟು 850ಕ್ಕೂ ಹೆಚ್ಚು ಪೇಟೆಂಟ್‌ಗಳಿಗೆ ಅನುಮೋದನೆ ಪಡೆದಂತಾಗಿದೆ.

ಇದು ಎಂಜಿನಿಯರಿಂಗ್ ಪರಿಣತಿ, ಕ್ಲೀನ್ ಪವರ್‌ಟ್ರೇನ್‌ಗಳು, ವಿನ್ಯಾಸ ಸಂಪರ್ಕ ಮತ್ತು ಸ್ಮಾರ್ಟ್ ಸುರಕ್ಷತೆ ವೈಶಿಷ್ಟ್ಯಗಳಿಗೆ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಮೂಲಕ ನೈಜ-ವಿಶ್ವದ ಅಗತ್ಯತೆಗಳಿಗೆ ಅನುಗುಣವಾಗಿ ನಾವೀನ್ಯತೆಗಳನ್ನು ಅಳವಡಿಕೆ ಮಾಡುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗ್ರಾಹಕರ ಹಿತರಕ್ಷಣೆ ಮತ್ತು ಪರಿಸರ ರಕ್ಷಣೆಗೆ ಹೆಚ್ಚು ಆದ್ಯತೆ ನೀಡುತ್ತಿರುವ ಟಾಟಾ ಮೋಟರ್ಸ್, ಇದಕ್ಕೆ ಪೂರಕವಾಗಿ ಉದ್ದೇಶಿತ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಇದರ ಪರಿಣಾಮ ಕಂಪನಿಯು ಕಾರ್ಯದಕ್ಷತೆ, ಹಸಿರು ಮತ್ತು ಸುರಕ್ಷಿತ ವಾಹನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

ಈ ಮೂಲಕ ಬಳಕೆದಾರರು ಮತ್ತು ಉದ್ಯಮದ ಪರಿವರ್ತನೆಗೆ ಪ್ರಯೋಜನವಾಗುವಂತೆ ಕಾರ್ಯನಿರ್ವಹಿಸುತ್ತಿದೆ. 2024 ನೇ ಹಣಕಾಸು ಸಾಲಿನಲ್ಲಿ ಟಾಟಾ ಮೋಟರ್ಸ್ ತನ್ನ ಇಂಟಲೆಕ್ಚುವಲ್ ಪ್ರಾಪರ್ಟಿ ರೈಟ್ಸ್ (IPR) ಪರಿಣತಿಗಾಗಿ ಐದು ಪ್ರತಿಷ್ಠಿತ ಪ್ರಶಸ್ತಿಗಳನ್ನು ಹಾಗೂ ಜಾಗತಿಕ ಮಾನ್ಯತೆಯನ್ನು ಗಳಿಸಿದೆ.

ಇದನ್ನೂ ಓದಿ: DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

ಈ ಕುರಿತು ಮಾತನಾಡಿದ ಟಾಟಾ ಮೋಟರ್ಸ್‌ನ ಅಧ್ಯಕ್ಷ & ಚೀಫ್ ಟೆಕ್ನಾಲಾಜಿ ಆಫೀಸರ್ ರಾಜೇಂದ್ರ ಪೇಟ್ಕರ್, ಟಾಟಾ ಮೋಟರ್ಸ್‌ ದಾಖಲೆ ಸಂಖ್ಯೆಯ ಪೇಟೆಂಟ್‌ಗಳನ್ನು ಸಲ್ಲಿಸಿ ಮತ್ತು ಮಂಜೂರು ಪಡೆಯುವುದರೊಂದಿಗೆ ನಾವು ಆಟೋಮೋಟಿವ್ ಶ್ರೇಷ್ಠತೆಯನ್ನು ಮರುವ್ಯಾಖ್ಯಾನಿಸುವುದನ್ನು ಮುಂದುವರಿಸುತ್ತೇವೆ. ನಮ್ಮ ಅತ್ಯಾಧುನಿಕ ತಂತ್ರಜ್ಞಾನಗಳು, ಹಸಿರು ವಾಹನಗಳು ಮತ್ತು ಗ್ರಾಹಕ ಕೇಂದ್ರಿತ ವಿಧಾನವು ನಮ್ಮನ್ನು ಉದ್ಯಮದಲ್ಲಿ ಮುಂಚೂಣಿಯಲ್ಲಿರಿಸಿದೆ. ಚಲನಶೀಲತೆ ವಿಕಸನಗೊಳಿಸುವ ನಿಟ್ಟಿನಲ್ಲಿ ಟಾಟಾ ಮೋಟರ್ಸ್ ಮುಂಚೂಣಿಯಲ್ಲಿದೆ. ಈ ಮೂಲಕ ಎಲ್ಲರಿಗೂ ಸ್ಮಾರ್ಟ್, ಹೆಚ್ಚು ಸಂಪರ್ಕದ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ದಾಪುಗಾಲು ಇಟ್ಟಿದೆ ಎಂದು ತಿಳಿಸಿದ್ದಾರೆ.

Continue Reading

ಹುಬ್ಬಳ್ಳಿ

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ ನಡೆಸುತ್ತಿದ್ದಾರೆ. ಮಗಳ 5ನೇ ದಿನದ ಸಂತಾಪದ ನೆಪದಲ್ಲಿ ವಿಡಿಯೊ ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಹೀಗಾಗಿ ಆಯುಕ್ತರು ಪೊಲೀಸ್‌ ಭದ್ರತೆಯನ್ನು ಒದಗಿಸಿದ್ದಾರೆ ಎಂದು ನೇಹಾ ತಂದೆ ನಿರಂಜನ್‌ ಹಿರೇಮಠ ತಿಳಿಸಿದ್ದಾರೆ.

VISTARANEWS.COM


on

By

Neha Murder Case in hubblli
Koo

ಹುಬ್ಬಳ್ಳಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣಕ್ಕೆ (Neha Murder Case) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಈಗಾಗಲೇ ನೇಹಾ ಮನೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದು, ನೇಹಾ ತಂದೆ-ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ಅನಾಮಧೇಯ ವ್ಯಕ್ತಿಗಳು ಮನೆ ಸುತ್ತಮುತ್ತ ಓಡಾಡುತ್ತಿದ್ದಾರೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಆತಂಕವನ್ನು ಹೊರಹಾಕಿದ್ದಾರೆ.

ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಅವರು ಭದ್ರತೆ ಕೊಡುವುದಾಗಿ ಹೇಳಿದ್ದು, ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ನಿರಂಜನ್‌ ತಿಳಿಸಿದ್ದಾರೆ.

ಇನ್ನೂ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗೆ ನಮ್ಮ ಸಹಕಾರ ಕೇಳಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಆರೋಪಿಯನ್ನು ಕರೆತಂದು ವಿಚಾರಣೆ ಮಾಡಿದ್ದಾರೆ. ಸದ್ಯ ತನಿಖೆ ವಿವರಗಳನ್ನು ಹೇಳದಿರುವಂತೆ ಮನವಿ ಮಾಡಿದ್ದಾರೆ. ಸಿಐಡಿ ವರದಿ ಕೊಟ್ಟ ನಂತರ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಸಿಐಡಿ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಗುರುವಾರ (ಏ.25) ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದರು. ಸಿಐಡಿ ಎಡಿಜಿಪಿ ಬಿಕೆ‌ ಸಿಂಗ್, ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಸುಮಾರು ಒಂದು ಗಂಟೆಗಳ ಸುದೀರ್ಘ ವಿಚಾರಣೆಯನ್ನು ನಡೆಸಿದರು. ನಂತರ ನೇಹಾ ತಂದೆ ನಿರಂಜನ್‌ ಹಿರೇಮಠ್‌, ತಾಯಿ ಗೀತಾರಿಂದ ಹೇಳಿಕೆಯನ್ನು ಪಡೆದರು.

ಇನ್ನೂ ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಆರು ದಿನಗಳ‌ ಕಾಲ‌ ಕಸ್ಟಡಿಗೆ ನೀಡಿದ ಹಿನ್ನೆಲೆ ಆರೋಪಿಯನ್ನು ಧಾರವಾಡದ ಕಾರಾಗೃಹದಿಂದ ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನೇಹಾ ತಂದೆ- ತಾಯಿಯಿಂದ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿರುವ ಸಿಐಡಿ ಅಧಿಕಾರಿಗಳು 1 ಗಂಟೆಯ ವಿಚಾರಣೆ ನಡೆಸಿ ವಾಪಸ್‌ ಆದರು.

ರಹಸ್ಯ ಸ್ಥಳದಲ್ಲಿ ಆರೋಪಿ ಫಯಾಜ್‌ ವಿಚಾರಣೆ

ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಧಾರವಾಡದಲ್ಲಿ ಬೀಡು ಬಿಟ್ಟಿದೆ. ಆರೋಪಿ ಫಯಾಜ್‌ನನ್ನು ಧಾರವಾಡದ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಸಿಐಡಿ ಅಧಿಕಾರಿಗಳು ನಿನ್ನೆ ಬುಧವಾರ ಸ್ಥಳ ಮಹಜರು ಜತೆಗೆ ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಳಿಸಿದ್ದಾರೆ.

ಸ್ಥಳ ಮಹಜರು ವೇಳೆ ಕಾಲೇಜು ಬಳಿ ಎವಿಬಿಪಿ ಪ್ರತಿಭಟನೆ ನಡೆಸಿತ್ತು. ಇದೀಗ ಧಾರವಾಡದಲ್ಲಿಯೂ ಪ್ರತಿಭಟನೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಫಯಾಜ್‌ನನ್ನು ರಹಸ್ಯ ಸ್ಥಳದಲ್ಲಿಟ್ಟಿದ್ದಾರೆ. ಫಯಾಜ್‌ ನೇಹಾಳನ್ನು ಹತ್ಯೆ ಮಾಡಲು ಧಾರವಾಡದಲ್ಲೇ ಚಾಕು ಖರೀದಿ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಾಕು ಖರೀದಿಸಿದ ಸ್ಥಳ, ಸ್ನೇಹಿತರ ಭೇಟಿಯಾದ ಸ್ಥಳಗಳಿಗೆ ಸಿಐಡಿ ಟೀಂ ಭೇಟಿ ನೀಡುವ ಸಾಧ್ಯತೆ ಇದೆ.

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case : ನೇಹಾ ಹತ್ಯೆ ಪ್ರಕರಣ ಸಂಬಂಧ ವಿವಿಧ ಆಯಾಮದಲ್ಲಿ ಸಿಐಡಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ. ನೇಹಾ ತಂದೆ-ತಾಯಿ ವಿಚಾರಣೆ ಬಳಿಕ ನಿರಂಜನ್‌ ಹಿರೇಮಠ್‌ ಅವರ ಕಾರು ಚಾಲಕ ಹಾಗೂ ಅಕೌಂಟೆಂಟ್‌ರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

By

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ (Neha Murder case) ಸಂಬಂಧಿಸಿದಂತೆ ನೇಹಾ ತಂದೆ ನಿರಂಜನ್‌ ಹಿರೇಮಠ್‌ ಅವರ ಕಾರುಚಾಲಕ ಮತ್ತು ಅಕೌಂಟೆಂಟ್‌ರನ್ನು ಸಿಐಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ಮತ್ತು ಸಿಐಡಿ ಎಸ್‌ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಕಾರು ಚಾಲಕ ಮಹಾಂತೇಶ ಮೆಣಸಿನಕಾಯಿ, ಅಕೌಂಟೆಂಟ್ ಬಷೀರ್ ಅಹ್ಮದ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಅವರಿಬ್ಬರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ?

ಅನಾಮಧೇಯ ವ್ಯಕ್ತಿಗಳು ಮನೆ ಸುತ್ತಮುತ್ತ ಓಡಾಡುತ್ತಿದ್ದಾರೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯಿಸಿದ್ದಾರೆ. ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಅವರು ಭದ್ರತೆ ಕೊಡುವುದಾಗಿ ಹೇಳಿದ್ದು, ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗೆ ನಮ್ಮ ಸಹಕಾರ ಕೇಳಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಆರೋಪಿಯನ್ನು ಕರೆತಂದು ವಿಚಾರಣೆ ಮಾಡಿದ್ದಾರೆ. ಸದ್ಯ ತನಿಖೆ ವಿವರಗಳನ್ನು ಹೇಳದಿರುವಂತೆ ಮನವಿ ಮಾಡಿದ್ದಾರೆ. ಸಿಐಡಿ ವರದಿ ಕೊಟ್ಟ ನಂತರ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Physical abuse : ಬೆಂಗಳೂರಲ್ಲಿ ಯುವತಿ ಕಿಡ್ನ್ಯಾಪ್; ಐವರು ಕಾಮುಕರಿಂದ ಅತ್ಯಾಚಾರ

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Lok Sabha Election 2024: ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ.

VISTARANEWS.COM


on

Lok Sabha Election 2024 No names of election officials in voter list Protest in front of the polling booth
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಶುಕ್ರವಾರ ಬೆಂಗಳೂರಿನಲ್ಲಿ ಮೊದಲ ಹಂತದ ಮತದಾನ (First phase of polling) ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸಿದೆ. ಚುನಾವಣಾ ಪ್ರಕ್ರಿಯೆಗೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಆದರೆ, ಬೆಂಗಳೂರಲ್ಲಿ ಚುನಾವಣಾ ಸೇವೆಗೆ ನಿಯೋಜನೆಗೊಂಡ ಅಧಿಕಾರಿಗಳ ಹೆಸರೇ ವೋಟರ್‌ ಲಿಸ್ಟ್‌ನಲ್ಲಿ (Voter List) ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆ ಅಧಿಕಾರಿಗಳು ಮತಗಟ್ಟೆ ಎದುರೇ ಧರಣಿ ಕುಳಿತಿದ್ದಾರೆ.

ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ. ಹಲವು ಅಧಿಕಾರಿಗಳ ಹೆಸರು ಮಿಸ್‌ ಆಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಈ ಬಗ್ಗೆ ಚುನಾವಣಾ ಆಯೋಗವು ಇನ್ನೂ ಯಾವುದೇ ರೀತಿಯ ಸ್ಪಷ್ಟನೆಯನ್ನು ನೀಡಿಲ್ಲ. ಈ ಅಧಿಕಾರಿಗಳಿಗೆ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಇನ್ನೂ ಮಾಹಿತಿ ಗೊತ್ತಾಗಿಲ್ಲ.

Continue Reading
Advertisement
KKR vs PBKS
ಕ್ರೀಡೆ8 mins ago

KKR vs PBKS: ಪಂಜಾಬ್​ಗೆ ಮಸ್ಟ್​ ವಿನ್​ ಗೇಮ್; ಕೆಕೆಆರ್​ ಎದುರಾಳಿ

IPL 2024
ಕ್ರೀಡೆ11 mins ago

IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

Haji Akbar Afridi
ವಿದೇಶ13 mins ago

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Tata Motors gets approval for 333 patents
ದೇಶ19 mins ago

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Neha Murder Case in hubblli
ಹುಬ್ಬಳ್ಳಿ31 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ37 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ICICI Bank
ದೇಶ38 mins ago

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ45 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 202449 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ59 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ31 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ37 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ4 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20246 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌