JDS Politics : ಮೈತ್ರಿ ಬಗ್ಗೆ ಜೆಡಿಎಸ್‌ನ 19 ಶಾಸಕರಲ್ಲಿ ಅಸಮಾಧಾನ; ಗಾಂಧೀಜಿ ಎಲೆಕ್ಷನ್‌ಗೆ ನಿಂತರೂ 20 ಕೋಟಿ ರೂ ಬೇಕು! - Vistara News

ಕರ್ನಾಟಕ

JDS Politics : ಮೈತ್ರಿ ಬಗ್ಗೆ ಜೆಡಿಎಸ್‌ನ 19 ಶಾಸಕರಲ್ಲಿ ಅಸಮಾಧಾನ; ಗಾಂಧೀಜಿ ಎಲೆಕ್ಷನ್‌ಗೆ ನಿಂತರೂ 20 ಕೋಟಿ ರೂ ಬೇಕು!

JDS Politics : ಬಿಜೆಪಿ – ಜೆಡಿಎಸ್‌ ಮೈತ್ರಿ ಬಗ್ಗೆ ಪಕ್ಷದೊಳಗೆ ಇನ್ನೂ ಅಸಮಾಧಾನ ಇದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅಲ್ಲದೆ, ತಾವು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

CM Ibrahim
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಪಕ್ಷದ 19 ಮಂದಿ ಶಾಸಕರು ಸಮಾಧಾನವಾಗಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ (JDS state president CM Ibrahim) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾವು ಇನ್ನು ಮುಂದೆ ಎಲೆಕ್ಷನ್‌ಗೆ ಸ್ಪರ್ಧೆ ಮಾಡುವುದಿಲ್ಲ. ಈಗ ಮಹಾತ್ಮ ಗಾಂಧಿ ಬಂದು ಸ್ಪರ್ಧೆ ಮಾಡಿದರೂ 20 ಕೋಟಿ ರೂಪಾಯಿ ಬೇಕು ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ – ಜೆಡಿಎಸ್‌ ಮೈತ್ರಿ ಬಗ್ಗೆ ಜೆಡಿಎಸ್‌ ಒಳ ರಾಜಕೀಯ (JDS Politics) ಮತ್ತೊಮ್ಮೆ ಬೀದಿಗೆ ಬಂದಿದೆ.

ಸುದ್ದಿಗೋಷ್ಠಿ ನಡೆಸಿದ ಸಿ.ಎಂ. ಇಬ್ರಾಹಿಂ, ಪಕ್ಷದೊಳಗೆ ಹಲವಾರು ಮಂದಿ ಅಸಮಾಧಾನಗೊಂಡಿದ್ದಾರೆ. ಹಲವಾರು ಮಂದಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸಂಖ್ಯೆ ಎಷ್ಟು ಎಂದು ಕೇಳಬೇಡಿ‌ ಎಂದು ಹೇಳುವ ಮೂಲಕ ಜೆಡಿಎಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.

ನನಗೆ ಬಿಹಾರ ಸಿಎಂ ನಿತೀಶ್‌ ಕುಮಾರ್ ಕರೆದಿದ್ದಾರೆ. ಆಪ್‌ನಿಂದ ಕರೆದಿದ್ದಾರೆ. ಮೊದಲು ಪ್ರಾದೇಶಿಕ ಪಕ್ಷ ಉಳಿಯಬೇಕು ಎಂಬುದೇ ನನ್ನ ನಿಲುವು ಎಂದು ಸಹ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಇದನ್ನೂ ಓದಿ: karnataka weather forecast : ರಾಜ್ಯದ ಬಹುತೇಕ ಕಡೆ ಬಿಸಿಲೇ ಹೆಚ್ಚು; ಸದ್ಯ ಮಳೆ ಸುರಿದರೂ ಬೊಗಸೆಯಷ್ಟು!

ಗಾಂಧಿ ಎಲೆಕ್ಷನ್‌ಗೆ ನಿಂತರೂ 20 ಕೋಟಿ ರೂ. ಬೇಕು!

ಕಾಂಗ್ರೆಸ್ ಸೇರುವ ಬಗ್ಗೆ ನನ್ನ ಮನಸ್ಸಿನಲ್ಲಿ ಯಾವುದೇ ಚಿಂತನೆ ಇಲ್ಲ. ನಾನು ಎಲೆಕ್ಷನ್‌ಗೆ ನಿಲ್ಲಲ್ಲ ಎಂದಿದ್ದೇನೆ. ಮಹಾತ್ಮ ಗಾಂಧಿ ಎಲೆಕ್ಷನ್ ನಿಂತರೂ, ಗಾಂಧಿ ನಿಂತಿದ್ದಾರೆ ಎನ್ನುವುದಕ್ಕೆ 20 ಕೋಟಿ ರೂಪಾಯಿ ಬೇಕು ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.

ಸೋತರೆ ಬಿಜೆಪಿಯವರು ಜೆಡಿಎಸ್‌ ಅನ್ನೇ ತೆಗಳುತ್ತಾರೆ

ನಾನು ನೇರವಾಗಿ ಬಿಜೆಪಿಗೆ ಹೋಗಬಹುದಿತ್ತು. ಅಲ್ಲಿಯೂ ಸ್ಥಾನ‌ ಖಾಲಿ ಇದೆ. ನಾನು ಹೋಗಿಲ್ಲ. ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಆದ ಸ್ಥಿತಿ ಇಲ್ಲಿಯೂ ಆಗಬಹುದು ಎಂದು ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರ ಒಲವು ಯಾವ ಕಡೆ ಇರುತ್ತದೆ ಎಂಬುದು ಬಹಳ ಮುಖ್ಯ. ಕೇಂದ್ರದ ಚುನಾವಣೆಯಲ್ಲಿ ಯಾರನ್ನು ಬಿಂಬಿಸುತ್ತೀರಿ? ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿಗೆ ಯಾರನ್ನು ಬಿಂಬಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ಮೋದಿಗೆ ಬಂದಿರುವುದೇ ಶೇಕಡಾ 30ರಷ್ಟು ಮತ. ಶೇಕಡಾ 70ರಷ್ಟು ಮತಗಳು ಹರಿದು ಹಂಚಿ ಹೋಗಿವೆ. ಇಂಡಿಯಾ ಬಗ್ಗೆ ನಾನು ತಿರುಗಿ ನೋಡಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎಷ್ಟು ಸೀಟು ಬರಬಹುದು? ಎಂಬುದನ್ನು ಕಾದು ನೋಡಬೇಕು. ಮುಂದೆ ಬಿಜೆಪಿಗೆ ಕಡಿಮೆ ಸ್ಥಾನ ಬಂದರೆ, ಜೆಡಿಎಸ್‌‌ ಜತೆಗೆ ಹೋಗಿದ್ದಕ್ಕೆ ಇಷ್ಟೆಲ್ಲ ಆಯಿತು ಎಂದು ಬಿಜೆಪಿ ಹೇಳುತ್ತಾರೆ. ಈ ಮೈತ್ರಿಯಿಂದ ಲೋಕಸಭಾ ಚುನಾವಣೆಗಿಂತ ವಿಧಾನಸಭಾ ಚುನಾವಣೆಯ ಮೇಲೆ ಹೆಚ್ಚಿನ ಹೊಡೆತ ಬೀಳಲಿದೆ. 19 ಮಂದಿಗಿಂತ ಕಡಿಮೆ ಸ್ಥಾನ ಜೆಡಿಎಸ್‌ಗೆ ಬರುತ್ತದೆ ಎಂದ ಸಿ.ಎಂ. ಇಬ್ರಾಹಿಂ ಹೇಳಿದರು.

ಮೈತ್ರಿ ವಾಪಸ್‌ ಪಡೆಯುವ ನಿರೀಕ್ಷೆ ಇದೆ

ಈಗಲೂ ದೇವೇಗೌಡರು ಮತ್ತು ಕುಮಾರಸ್ವಾಮಿ ಮೇಲೆ ವಿಶ್ವಾಸ ಇದೆ. ಮೈತ್ರಿಯನ್ನು ಅವರು ವಾಪಸ್ ತೆಗೆದುಕೊಳ್ಳಬಹುದು. ಮೈತ್ರಿ ಬಳಿಕ ಬಿಜೆಪಿಯ ಹಲವಾರು ನಾಯಕರು ನನ್ನ ಜತೆಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ನಾಯಕರು ಮಾತನಾಡಿದ್ದಾರೆ‌. ಆದರೆ, ರಾಜ್ಯ ನಾಯಕರು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಜಂಗಮರ ಬಗ್ಗೆಯೂ ಶಾಮನೂರು ಮಾತನಾಡಲಿ

ಶಾಸಕ ಶಾಮನೂರು ಶಿವಶಂಕರಪ್ಪ ಅವರು ಯಾರ ಬಂಡವಾಳದ ಮೇಲೆ ಎಲೆಕ್ಷನ್‌ನಲ್ಲಿ ಸ್ಪರ್ಧೆ ಮಾಡಿದ್ದಾರೆ. ಅಲ್ಪಸಂಖ್ಯಾತ ಮತಗಳ ಮೇಲೆ ಗೆದ್ದಿದ್ದಾರೆ. ಅವರಿಗೆ 90 ವರ್ಷವಾಗಿದೆ. ಅವರ ವಯಸ್ಸಿಗೆ ಗೌರವ ಕೊಡಬೇಕು. ಲಿಂಗಾಯತರು 74 ಮಂದಿ ಇದ್ದಾರೆ ಅಂತಾರೆ. ಸಮುದಾಯದ ಬಗ್ಗೆ ಅನ್ಯಾಯ ಅಂದರೆ ಆಯಿತು. ಅದನ್ನು ಬಿಟ್ಟು ಬೇರೆ ಮಾತನಾಡಿದರೆ ಹೇಗೆ? ಸರ್ಕಾರಕ್ಕೇನೂ ಕಷ್ಟವಿಲ್ಲ. ಶಾಮನೂರು ಶಿವಶಂಕರಪ್ಪ ಅವರು ಜಂಗಮರ ಬಗ್ಗೆಯೂ ಮಾತನಾಡಲಿ. ಸರ್ಕಾರ ಬಂದು 5 ತಿಂಗಳಾಯಿತು. ಬಿಜೆಪಿಗೆ ಈ ಬಾರಿ ಲಿಂಗಾಯತರ ಒಲವು ಬರಲ್ಲ. ಲಿಂಗಾಯತ ಮತಗಳು ಬಿಟ್ಟು ಹೋಗಿದ್ದರಿಂದ ಅಮಿತ್ ಶಾ ಮೈತ್ರಿಗೆ ಬಂದಿದ್ದಾರೆ ಎಂದು ಇಬ್ರಾಹಿಂ ಹೇಳಿದರು.

ಜಾತಿಗಣತಿಯನ್ನು ಬಿಡುಗಡೆ ಮಾಡಿ

ರಾಜ್ಯ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು. ಈಗಾಗಲೇ ಬೇರೆ ರಾಜ್ಯಗಳಲ್ಲಿ ಜಾತಿಗಣತಿ ಬಿಡುಗಡೆಯಾಗಿದೆ. ಇಲ್ಲಿಯೂ ಬಿಡುಗಡೆ ಮಾಡಬೇಕು. ನಾನು ಸಿದ್ದರಾಮಯ್ಯರನ್ನು ಒತ್ತಾಯಿಸುತ್ತೇನೆ. ಮೊದಲು ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಸಿ.ಎಂ. ಇಬ್ರಾಹಿಂ ಆಗ್ರಹಿಸಿದರು.

ದೇವೇಗೌಡ, ಕುಮಾರಸ್ವಾಮಿ ವಿರುದ್ಧ ನೇರ ಅಸಮಾಧಾನ

ಈಚೆಗೆ ರಾಮನಗರದಲ್ಲಿ ಸಮಾವೇಶ ನಡೆಸಿ ಜೆಡಿಎಸ್‌ ಶಾಸಕರು, ಮುಖಂಡರು ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರೂ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ (JDS state president CM Ibrahim) ಈಗ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (JDS supremo and former Prime Minister HD DeveGowda) ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ (Former Chief Minister and JDS Legislature Party leader HD Kumaraswamy) ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ತಮಗೆ ಮೈತ್ರಿ ಬಗ್ಗೆ ಈವರೆಗೂ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಾವು ಪಕ್ಷ ಬಿಡುವ ಬಗ್ಗೆ ಇದೇ ಅಕ್ಟೋಬರ್ 16ರಂದು ನಿರ್ಧಾರವನ್ನು ಪ್ರಕಟ ಮಾಡುತ್ತೇನೆ. ಅದಕ್ಕೂ ಮುಂಚೆ ದೇವೇಗೌಡರ ಬಳಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಿ.ಎಂ. ಇಬ್ರಾಹಿಂ, ಬಿಜೆಪಿ-ಜೆಡಿಎಸ್ ಮೈತ್ರಿ ಆಗಿದೆ. ನಾನು ನನ್ನ ಪಕ್ಷದ ಕೆಲಸ ಮಾಡುತ್ತಿದ್ದೇನೆ. ನಾನು‌ ಪಕ್ಷದ ಚಟುವಟಿಕೆಯಲ್ಲಿ ಇಲ್ಲ ಎಂದಲ್ಲ. ಮೈತ್ರಿ ಬಗ್ಗೆ ಈವರೆಗೂ ನನಗೆ ಯಾರೂ ಹೇಳಲಿಲ್ಲ. ಮೈತ್ರಿ ಜೆಡಿಎಸ್‌‌‌ಗೆ ಬೇಕಾಗಿತ್ತಾ? ಬಿಜೆಪಿಗೆ ಬೇಕಾಗಿತ್ತಾ? ಜೆಡಿಎಸ್‌‌ ಸಿದ್ಧಾಂತಕ್ಕೆ ಬಿಜೆಪಿ ಒಪ್ಪಿದೆಯೋ? ಬಿಜೆಪಿ ಸಿದ್ಧಾಂತಕ್ಕೆ ಜೆಡಿಎಸ್‌‌ ಒಪ್ಪಿದೆಯೋ? ಇದಕ್ಕೆ ಉತ್ತರ ಸಿಕ್ಕಿಲ್ಲ. ಸೆಪ್ಟೆಂಬರ್‌ 16ನೇ ತಾರೀಖಿನಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Hubballi Riots : ಹುಬ್ಬಳ್ಳಿ ಗಲಭೆ ಕೈಬಿಡುವಂತೆ ಡಿಕೆಶಿ ಪತ್ರ ಬರೆದಿದ್ದರಲ್ಲಿ ಏನು ತಪ್ಪಿದೆ? ಗೃಹ ಸಚಿವ ಪರಮೇಶ್ವರ್‌

ಅಕ್ಟೋಬರ್‌ 16ಕ್ಕೆ ಸಭೆ ನಡೆಸಲಿದ್ದು, ಅಲ್ಲಿ ಚರ್ಚೆ ಆದ ಮೇಲೆ ಅಭಿಪ್ರಾಯ ಪಡೆದು ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರಿಗೆ ತಿಳಿಸುತ್ತೇನೆ. ಅವರು ಏನು ತೀರ್ಮಾನ ಮಾಡುತ್ತಾರೆ ಎಂದು ಕಾದು ನೋಡಬೇಕು ಎಂದು ಪಕ್ಷ ತೊರೆಯುವ ಬಗ್ಗೆ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕಾಂಗ ಪಕ್ಷದ ನಾಯಕರೇ ನಿರ್ಧಾರ ತೆಗೆದುಕೊಳ್ಳುತ್ತಾರೆ

ಬಿಜೆಪಿಯವರ ಉದ್ದೇಶ ಜೆಡಿಎಸ್‌‌‌ ಅನ್ನು ಮುಗಿಸುವುದು. ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ಮಾಡಿದಾಗ ಜೆಡಿಎಸ್‌‌ ಅನ್ನು ನಿರ್ನಾಮ ಮಾಡಲು ಹೇಳಿದ್ದರು. ಈಗ ಅದೇ ಆಗಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಜತೆಗೆ ಹೋಗುವುದು ಎಷ್ಟರಮಟ್ಟಿಗೆ ಸರಿ? ಮದುವೆ ಬಹಿರಂಗವಾಗಿ ಆಗಿಲ್ಲ. ಮದುವೆಯನ್ನು ನಾಲ್ಕು ಜನ ಹೋಗಿ ಮಾಡಿಕೊಂಡಿದ್ದಾರೆ. ದೇವೇಗೌಡರು ನಮ್ಮ ನಾಯಕರು ಎಂದು ಅವರು ಒಪ್ಪಿಕೊಳ್ಳುತ್ತಾರಾ? ಅದನ್ನೆಲ್ಲಾ ಒಪ್ಪಿದರೆ ಮುಂದೆ ಪಕ್ಷದ ವೇದಿಕೆಯಲ್ಲಿ ಕುಳಿತು ಮಾತನಾಡುತ್ತೇವೆ. ನನಗೆ ಜನರ ಹೃದಯದಲ್ಲಿ ಸ್ಥಾನ ಇದೆ. ನನಗಿಂತ ಕಿರಿಯರಿಲ್ಲ. ಹಿರಿಯರಿಗಿಂತ ನಾನು ಹಿರಿಯನಲ್ಲ. ನನ್ನ ಮನೆಗೆ ಎಚ್.ಡಿ. ಕುಮಾರಸ್ವಾಮಿ ಅವರು ಎಷ್ಟು ಬಾರಿ ಬಂದು ಹೋಗಿದ್ದಾರೆ? ನೀವೇ ಕ್ಯಾಮೆರಾ ಹಿಡಿದಿದ್ದೀರಿ. ನಾನು ಒಂದೇ ಒಂದು ಬಾರಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಹೋಗಿದ್ದು. ಪಕ್ಷದಲ್ಲಿ ನಿಲುವು ತೆಗೆದುಕೊಳ್ಳಬೇಕು ಅಂದರೆ ರಾಜ್ಯಾಧ್ಯಕ್ಷ ಮುಖ್ಯ ಅಲ್ಲವೇ? ಶಾಸಕಾಂಗ ಪಕ್ಷದ ನಾಯಕರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಮದುವೆ ಆಗಿಬಿಟ್ಟಿದ್ದೀರಿ. ಹೆಣ್ಣನ್ನು ಮನೆ ಒಳಗೆ ಕರೆಸಬೇಕಾ? ಹೊರಗೆ ಕಳುಹಿಸಬೇಕಾ? ಎಂಬುದನ್ನು ನಿರ್ಧಾರ ಮಾಡಬೇಕಿದೆ. ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮುಸ್ಲಿಂ ಮತಗಳು ಬಂದಿವೆ. 18 ಸಾವಿರ ಮತಗಳು ಬಂದಿವೆ. ಮುಸ್ಲಿಂ ಮತಗಳು ಜೆಡಿಎಸ್‌‌‌ಗೆ ಬಂದಿದೆ. ನಾನು ಇಂದು ಕೂಡ ವಿಷಕಂಠ ಆಗಿದ್ದೇನೆ. ಜೆಡಿಎಸ್‌‌‌ನಲ್ಲಿ ಇಂತಹ ಪರಿಸ್ಥಿತಿ ಇದೆ. ಮತಗಳು ಬರದೇ ಇರುವುದಕ್ಕೆ ಕಾರಣ ಏನು? ಎಂಬುದನ್ನು ಹುಡುಕಬೇಕು? ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಸಂಪಾದಿಸಿದ್ದೇನು ಎಂದು ಹೇಳಿದರೆ? ಅವರು ಕಳೆದುಕೊಂಡಿದ್ದು ಏನು? ಮಂಡ್ಯ, ಹಾಸನದಲ್ಲಿ ಜೆಡಿಎಸ್‌‌‌ಗೆ ಮತಗಳು ಏಕೆ ಕಡಿಮೆ ಬಂತು? ಒಕ್ಕಲಿಗ ಮತಗಳನ್ನು ನಾನು ಸಂಪಾದಿಸಿದ್ದಾ? ರೈತರ ಮತಗಳನ್ನು ನಾನು ಸಂಪಾದನೆ ಮಾಡಿದ್ದಾ? ಎಂದು ಮಾಜಿ ಸಿಎಂ ಎಚ್‌ಡಿಕೆ ಮೇಲೆ ಹರಿಹಾಯ್ದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

Prajwal Revanna Case: ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ಸದ್ಯ ಪ್ರಜ್ವಲ್‌ ರೇವಣ್ಣ ತಲೆ ಮೇಲೆ ಈ ಲುಕೌಟ್‌ ನೋಟೀಸ್‌ ತೂಗುಗತ್ತಿ ತೂಗುತ್ತಿದೆ.

VISTARANEWS.COM


on

prajwal revanna case lookout notice
Koo

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna case) ಅವರಿಗೆ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲುಕೌಟ್‌ ನೋಟೀಸ್‌ ಎಂದರೇನು, ಅದರ ಪರಿಣಾಮವೇನು, ಅದಕ್ಕೂ ತಡೆ ತರಬಹುದೇ, ಇತ್ಯಾದಿ ವಿವರಗಳು ಇಲ್ಲಿವೆ.

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Continue Reading

ಬೆಂಗಳೂರು ಗ್ರಾಮಾಂತರ

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Elephant attack : ಜಮೀನಿಗೆ ತೆರಳುತ್ತಿದ್ದ ರೈತನನ್ನು ಅಟ್ಟಾಡಿಸಿ ಕಾಡಾನೆಯು ದಾಳಿ ಮಾಡಿ ಕೊಂದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆನೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

VISTARANEWS.COM


on

By

elephant attack
Koo

ಆನೇಕಲ್: ಕಾಡಾನೆ ದಾಳಿಗೆ (Elephant attack) ರೈತ ಬಲಿಯಾಗಿದ್ದಾರೆ. ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಮೆದುಮುತ್ತುಕೊಟ್ಟೈ ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಯ್ಯ (54) ಕಾಡಾನೆ ದಾಳಿಗೆ ಮೃತಪಟ್ಟವರು.

ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದಾಗ ಒಂಟಿ ಸಲಗ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ರೈತ ಅಪ್ಪಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ಗ್ರಾಮಸ್ಥರು ಜವಳಗೆರೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಗ್ರಾಮಸ್ಥರು ಕಂಗೆಟ್ಟು ಹೋಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಒಂಟಿ ಸಲಗ ಉಪಟಳ ನೀಡುತ್ತಿದ್ದು, ಈ ಹಿಂದೆ ಇಬ್ಬರನ್ನು ಬಲಿ ಪಡೆದಿತ್ತು. ಇದೀಗ ಮತ್ತೊಬ್ಬ ರೈತ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕಾಡಾನೆಯ ಉಪಟಳಕ್ಕೆ ಬ್ರೇಕ್ ಹಾಕುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

ವಾಷಿಂಗ್ಟನ್: ಪಂಜಾಬ್​ ಗಾಯಕ ಸಿಧು ಮೂಸೆವಾಲಾ (Sidhu Moosewala) ಹತ್ಯೆಯ ರೂವಾರಿ, ಕೆನಡಾ ಮೂಲದ ಗ್ಯಾಂಗ್​ಸ್ಟರ್​ ಗೋಲ್ಡಿ ಬ್ರಾರ್ (Gangster Goldy Brar) ಅಮೆರಿಕದಲ್ಲಿ ಹತ್ಯೆ ಸುದ್ದಿಗೆ ಟ್ವಿಸ್ಟ್‌ ಸಿಕ್ಕಿದ್ದು, ಇದು ಸುಳ್ಳು ಸುದ್ದಿ ಎಂದು ಅಮೆರಿಕ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ ಫ್ರೆಸನೋ ಪೊಲೀಸರು ಈ ಬಗ್ಗೆ ಸಾಮಾಜಿಕ ಜಾಲತಾಣ(Social Media) ದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕ್ಯಾಲಿಫೋರ್ನಿಯಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗೋಲ್ಡಿ ಬಾರ್‌ ಸಾವನ್ನಪ್ಪಿದ್ದಾನೆ ಎನ್ನಲಾದ ಸುದ್ದಿ ಸಂಪೂರ್ಣವಾಗಿ ಸುಳ್ಳು. ಘಟನೆಯಲ್ಲಿ ಫೇರ್‌ಮಾಂಟ್‌ ಮತ್ತು ಹಾಲ್ಟ್‌ ಅವೆನ್ಯೂ ಎಂಬಲ್ಲಿ ನಡೆದ ಶೂಟೌಟ್‌ನಲ್ಲಿ ಇಬ್ಬರು ಬಲಿಯಾದ್ದಾರೆ.

ಘಟನೆ ಬೆನ್ನಲ್ಲೇ ಮೃತರಲ್ಲಿ ಒಬ್ಬ ಗೋಲ್ಡಿ ಬ್ರಾರ್‌ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಸ್ಪಷ್ಟನೆ ನೀಡಿರುವ ಪೊಲೀಸರು, ಮೃತರ ಫೊಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಡಿರುವ ಬೆನ್ನಲ್ಲೇ ಬಗ್ಗೆ ಪ್ರಪಂಚದ ಮೂಲೆ ಮೂಲೆಗಳಿಂದ ಅಧಿಕೃತ ಮಾಹಿತಿಗಾಗಿ ಮನವಿ ಬಂದಿತ್ತು. ಈ ಸುಳ್ಳು ಸುದ್ದಿಯನ್ನು ಹರಡಿದವರು ಯಾರು ಎಂಬ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇಲ್ಲ. ಈ ವಿಚಾರ ಪ್ರಪಂಚಾದ್ಯಂತ ಕಾಡ್ಗಿಚ್ಚಿನಂತೆ ಹರಡಿತ್ತು. ಆದರೆ ಇದು ಸುಳ್ಳು ಸುದ್ದಿ. ಮೃತ ಖಂಡಿತವಾಗಿಯೂ ಗೋಲ್ಡಿ ಬ್ರಾರ್‌ ಅಲ್ಲ ಎಂದು ಪೊಲೀಸ್‌ ಅಧಿಕಾರಿ ಲೆಫ್ಟಿನೆಂಟ್‌ ವಿಯಮ್‌ ಡೂಲೆ ಹೇಳಿದ್ದಾರೆ.

ಇನ್ನು ಮೃತ ವ್ಯಕ್ತಿಯನ್ನು 37 ವರ್ಷದ ಗ್ಸೇವಿಯರ್‌ ಗಾಲ್ಡ್‌ನೇ ಎಂದು ಗುರುತಿಸಲಾಗಿದ್ದು, ಗುಂಡಿನ ದಾಳಿಯಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಹೋಟೆಲ್‌ ಫೇರ್‌ಮೌಂಟ್‌ನಲ್ಲಿ ಲಖಬೀರ್‌ ಗ್ಯಾಂಗ್‌ನ ಸದಸ್ಯರು ಗುಂಡಿನ ದಾಳಿ ನಡೆಸಿದ್ದ ಗಂಭೀರವಾಗಿ ಗಾಯಗೊಂಡಿದ್ದ ಗೋಲ್ಡಿ ಬ್ರಾರ್‌ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ನಿನ್ನೆ ವರದಿಯಾಗಿತ್ತು.

ಗೋಲ್ಡಿ ಬ್ರಾರ್ ಎಂದೇ ಕುಖ್ಯಾತನಾಗಿರುವ ಸತೀಂದರ್ಜಿತ್ ಸಿಂಗ್, ವಿದ್ಯಾರ್ಥಿ ವೀಸಾ ಮೂಲಕ 2007ರಲ್ಲಿ ಕೆನಾಡಗೆ ಹೋಗಿದ್ದ. ಕೊಲೆ, ಸುಲಿಗೆ ಸೇರಿದಂತೆ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಕೆನಡಾದಲ್ಲಿದ್ದುಕೊಂಡೇ ನಡೆಸುತ್ತಿದ್ದ. ಗಡಿಯಾಚೆಗಿನ ಏಜೆನ್ಸಿಯ ಬೆಂಬಲದೊಂದಿಗೆ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತು ರಾಷ್ಟ್ರೀಯವಾದಿ ಪರ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಎಂದು ತಿಳಿದುಬಂದಿದೆ.

ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದ. ಭಾರತದಲ್ಲಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಈತನ ಪಾಲಿದೆ. ಬ್ರಾರ್ ಪಂಜಾಬ್‌ನ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದ. ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳು ಮತ್ತು ಇತರ ದೇಶವಿರೋಧಿ ಚಟುವಟಿಕೆಗಳಿಗೆ ಈತ ಉತ್ತೇಜನ ನೀಡುತ್ತಿದ್ದ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2022ರ ಮೇ 29ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿದ್ದು, ಈತನೇ ಮಾಸ್ಟರ್‌ಮೈಂಡ್‌ ಎಂದು ತಿಳಿದುಬಂದಿದೆ. ವರ್ಷಾರಂಭದಲ್ಲಿಯೇ ಈತನನ್ನು ಭಯೋತ್ಪಾದಕ ಎಂದು ಭಾರತ ಸರ್ಕಾರ ಘೋಷಿಸಿತ್ತು. ಸಿಧು ಹತ್ಯೆಯ ಮಾಸ್ಟರ್​ ಮೈಂಡ್​ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್​ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈ ಬ್ರಾರ್​ ಕೂಡ ಅದೇ ಬಿಷ್ಣೋಯಿ ಗ್ಯಾಂಗ್​​ನವನು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

Prajwal Revanna Case: ಏಳು ದಿನಗಳ ಕಾಲ ಸಮಯ ಕೇಳಿ ನೀಡಿರುವ ಅರ್ಜಿಗೆ ಮಾನ್ಯತೆ ಕೊಡಲಾಗುವುದಿಲ್ಲ. ಸಮಯ ಕೊಡಲು ಸಾಧ್ಯವಿಲ್ಲ. ಕೂಡಲೇ ಹಾಜರಾಗಿ ಎಂದು ಇಂದು (ಗುರುವಾರ – ಮೇ 2) ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತನಿಖೆಗೆ ಕೂಡಲೇ ಹಾಜರಾಗಿ ಎಂದು ಮತ್ತೊಂದು ನೋಟಿಸ್‌ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಾಗುತ್ತಿದೆ.

VISTARANEWS.COM


on

Prajwal Revanna Case Application seeking exemption from appearing before SIT rejected
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಲು 7 ದಿನಗಳ ವಿನಾಯಿತಿ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕಾರ ಆಗಿದೆ ಎಂದು ಹೇಳಲಾಗುತ್ತಿದೆ.

ಏಳು ದಿನಗಳ ಕಾಲ ಸಮಯ ಕೇಳಿ ನೀಡಿರುವ ಅರ್ಜಿಗೆ ಮಾನ್ಯತೆ ಕೊಡಲಾಗುವುದಿಲ್ಲ. ಸಮಯ ಕೊಡಲು ಸಾಧ್ಯವಿಲ್ಲ. ಕೂಡಲೇ ಹಾಜರಾಗಿ ಎಂದು ಇಂದು (ಗುರುವಾರ – ಮೇ 2) ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತನಿಖೆಗೆ ಕೂಡಲೇ ಹಾಜರಾಗಿ ಎಂದು ಮತ್ತೊಂದು ನೋಟಿಸ್‌ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಾಗುತ್ತಿದೆ.

ವಕೀಲರಿಗೂ ನೋಟಿಸ್‌?

ಇನ್ನು ಪ್ರಜ್ವಲ್ ರೇವಣ್ಣ ಪರ ವಕೀಲರಿಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ನಿಮ್ಮ ಕಕ್ಷಿದಾರನಿಗೆ ಬಂದು ವಿಚಾರಣೆಗೆ ಹಾಜರಾಗಲು ತಿಳಿಸಿ ಎಂದು ನೋಟಿಸ್‌ ಮೂಲಕ ಸೂಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ನೋಟಿಸ್‌ ಅನ್ನು ಪ್ರಜ್ವಲ್ ಮನೆ ಮತ್ತು ಕಚೇರಿಗೆ ತೆರಳಿ ಅಂಟಿಸುವ ಬಗ್ಗೆ ಚಿಂತನೆ ನಡೆದಿದೆ. ಎನ್ನಲಾಗಿದೆ. ಪ್ರಜ್ವಲ್ ಎಸ್ಕೇಪ್ ಆಟಕ್ಕೆ ಎಸ್ಐಟಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಹೈಪ್ರೊಫೈಲ್‌ ಕೇಸ್‌ ಆಗಿರುವ ಕಾರಣ ತನಿಖೆಯನ್ನು ಮತ್ತಷ್ಟು ಚುರುಕು ಮಾಡಲು ಸಿದ್ಧತೆ ನಡೆಸಲಾಗಿದೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಪಕ್ಕಾ?

ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದಲ್ಲದೆ, ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಪಕ್ಕಾ ಎನ್ನಲಾಗಿದೆ. ಈ ನಡುವೆ ಎಸ್ಐಟಿ ಅಧಿಕಾರಿಗಳು ಸಹ ಅವರ ವಿಚಾರಣೆಗೆ ಆತುರ ತೋರುತ್ತಿದ್ದಾರೆ. ಕಾರಣ, ಪ್ರಜ್ವಲ್‌ ಒಬ್ಬರು ಸಂಸದರು ಹಾಗೂ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಇನ್ನು ಅವರ ಕುಟುಂಬದಲ್ಲಿ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವರು, ಹಾಲಿ ವಿಧಾನ ಪರಿಷತ್‌ ಸದಸ್ಯರು ಇದ್ದಾರೆ. ಹೀಗಿರುವಾಗ ಆರೋಪಿಗೆ ಸಮಯ ಕೊಟ್ಟರೆ ಪ್ರಭಾವ ಬಳಸಿ ಸಾಕ್ಷಿ ನಾಶ ಮಾಡಬಹುದು ಎಂಬ ಹಿನ್ನೆಲೆಯಲ್ಲಿ ಪ್ರಜ್ವಲ್‌ ಬಂಧನಕ್ಕೆ ಮತ್ತಷ್ಟು ಕಸರತ್ತು ನಡೆಸಲಾಗತ್ತಿದೆ.

ಇನ್ನು ಆರೋಪಿ ಪ್ರಜ್ವಲ್‌ ಬಳಿ ಒರಿಜಿನಲ್ ವಿಡಿಯೊಗಳು ಇವೆ. ಹೀಗಾಗಿ ಅವರು ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಬೆದರಿಸಬಹುದು, ಸಮಯ ಕೊಟ್ಟರೆ ಎಲ್ಲವನ್ನೂ ನಾಶ ಮಾಡಿ ಕೇಸ್ ತಮಗೆ ಅನುಕೂಲ ಆಗುವಂತೆ ಮಾಡಿಕೊಳ್ಳಬಹುದು ಎಂದು ಎಸ್‌ಐಟಿ ಚಿಂತಿಸಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading

ರಾಯಚೂರು

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Heat wave : ಹೊರಗೆ ಕಾಲಿಡಲು ಆಗದಷ್ಟು ವಾತಾವರಣ ಕಾದ ಕೆಂಡವಾಗುತ್ತಿದೆ. ಬಿಸಿಲಿನ ಶಾಖಕ್ಕೆ (Temperature Warning) ರಾಯಚೂರು ಯುವಕರು ಬೆಂಕಿ ಇಲ್ಲದೆ ಮೊಟ್ಟೆಯಿಂದ ಆಮ್ಲೆಟ್​ ಮಾಡಿ ತಿಂದಿದ್ದಾರೆ. ಮತ್ತೊಂದು ಕಡೆ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.

VISTARANEWS.COM


on

By

Temperature Warning
Koo

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
prajwal revanna case lookout notice
ಕ್ರೈಂ5 mins ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 202413 mins ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

elephant attack
ಬೆಂಗಳೂರು ಗ್ರಾಮಾಂತರ13 mins ago

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Delhi Lieutenant Governor
ದೇಶ23 mins ago

Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

Prajwal Revanna Case Application seeking exemption from appearing before SIT rejected
ಕ್ರೈಂ28 mins ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

IPL 2024
ಕ್ರೀಡೆ28 mins ago

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

Temperature Warning
ರಾಯಚೂರು30 mins ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್31 mins ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Yakshagana Artist No more
ದಕ್ಷಿಣ ಕನ್ನಡ50 mins ago

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

prajwal revanna case look out notice
ಪ್ರಮುಖ ಸುದ್ದಿ57 mins ago

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌