JDS Politics: ದೇವೇಗೌಡರ ಕೊನೆ ಆಸೆ ಈಡೇರಿಸುತ್ತೇನೆ; ಮಂಡ್ಯದ ಎಲ್ಲ ಕ್ಷೇತ್ರ ಗೆಲ್ಲುತ್ತೇವೆ: ಪ್ರತಿಜ್ಞಾ ಸಮಾವೇಶದಲ್ಲಿ ಎಚ್‌.ಡಿ. ಕುಮಾರಸ್ವಾಮಿ - Vistara News

ಕರ್ನಾಟಕ

JDS Politics: ದೇವೇಗೌಡರ ಕೊನೆ ಆಸೆ ಈಡೇರಿಸುತ್ತೇನೆ; ಮಂಡ್ಯದ ಎಲ್ಲ ಕ್ಷೇತ್ರ ಗೆಲ್ಲುತ್ತೇವೆ: ಪ್ರತಿಜ್ಞಾ ಸಮಾವೇಶದಲ್ಲಿ ಎಚ್‌.ಡಿ. ಕುಮಾರಸ್ವಾಮಿ

ಸ್ವಾಭಿಮಾನ ಎಂದು ಮತ ಕೇಳಿ ಗೆದ್ದವರು ಕೆಲವೇ ದಿನಗಳಲ್ಲಿ ತಮ್ಮ ಸ್ವಾಭಿಮಾನವನ್ನು ಅಮಿತ್‌ ಶಾ ಕಾಲು ಕೆಳಗೆ ಹಾಕುತ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಕುರಿತು ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

VISTARANEWS.COM


on

jds-politics-party will come to power in its own strength says HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಸ್ವತಂತ್ರವಾಗಿ ಜೆಡಿಎಸ್‌ ಸರ್ಕಾರವನ್ನು ಆಡಳಿತಕ್ಕೆ ತರುತ್ತೇನೆ ಎಂದು ಆಸ್ಪತ್ರೆಯಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಮಾತು ಕೊಟ್ಟು ಬಂದಿದ್ದೇನೆ ಎಂದಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಮಂಡ್ಯದ ಏಳಕ್ಕೆ ಏಳೂ ಕ್ಷೇತ್ರವನ್ನು ಜಯಿಸುವ ಗುರಿಯನ್ನು ಇರಿಸಿಕೊಂಡಿದ್ದೇವೆ ಎಂದಿದ್ದಾರೆ.

ನಾಗಮಂಗಲ ಚುನಾವಣೆಗೆ ಬೆಂಗಳೂರಿನಲ್ಲಿ ಅಖಾಡ ಸಜ್ಜುಗೊಳಿಸುವ ಸಲುವಾಗಿ, ಬೆಂಗಳೂರಿನಲ್ಲಿ ನೆಲೆಸಿರುವ ನಾಗಮಂಗಲ ಮತದಾರರ ಪ್ರತಿಜ್ಞಾ ಸಮಾವೇಶದಲ್ಲಿ ಮಾತನಾಡಿದರು.

ಪ್ರಾರಂಭದಲ್ಲಿ ಮಾತನಾಡಿದ ನಾಗಮಂಗಲ ಶಾಸಕ ಸುರೇಶ್‌ ಗೌಡ, ಕಳೆದ ಬಾರಿ ನಲವತ್ತೇಳು ಸಾವಿರ ಮತಗಳ ಅಂತರದಿಂದ ನನ್ನ ಗೆಲ್ಲಿಸಿದ್ರಿ. 1,700 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಕುಮಾರಸ್ವಾಮಿ ನಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿದ್ರು. ನಂತರ ನಮ್ಮ ಮೈತ್ರಿ ಸರ್ಕಾರ ಹೋಯಿತು. ನಮ್ಮ ವಿಪಕ್ಷಗಳು ಅನುದಾನವನ್ನು ತಡೆಹಿಡಿಯುವ ಕೆಲಸ ಮಾಡಿದ್ರು‌. ಆದ್ರೂ ಸಹ ಕುಮಾರಸ್ವಾಮಿ ಅವರ ಆಶೀರ್ವಾದ ದಿಂದ ಕೆಲಸಗಳು ಆಗಿವೆ.

ಪ್ರತಿ ಗ್ರಾಮಕ್ಕೆ ಕೂಡಾ ಕಾಂಕ್ರೀಟ್ ರಸ್ತೆ ಗಳು ಆಗಿವೆ. ಬೆಂಗಳೂರಿನಿಂದ ಬಂದ ಒಬ್ಬ ಮತದಾರನಿಗೆ ಕನಿಷ್ಠ ಹತ್ತು ಮತಗಳನ್ನು ನಮ್ಮ ಪರವಾಗಿ ಪರಿವರ್ತನೆ ಮಾಡುವ ಶಕ್ತಿ ಇದೆ. ನೀವೆಲ್ಲಾ ನಮ್ಮ ಪರವಾಗಿ ಮತ ಹಾಕಿಸುವ ಕೆಲಸ ಮಾಡಬೇಕು. ಜೆಡಿಎಸ್ ಗೆ ಮತ ಹಾಕಿಸುವ ಮೂಲಕ ಕುಮಾರಸ್ವಾಮಿ ಸಿಎಂ ಆಗಲು ಸಹಕಾರ ಕೊಡಬೇಕು. ತಮ್ಮನ್ನು ಮಾರಿಕೊಂಡವರಿಗೆ ಬುದ್ದಿ ಕಲಿಸಬೇಕು. ಕಳೆದ ಬಾರಿಗಿಂತ ಒಂದು ಮತವೂ ಕಡಿಮೆ ಆಗಬಾರದು. ಕಳೆದ ಬಾರಿಗಿಂತ ಹೆಚ್ಚು ಮತಗಳು ಜೆಡಿಎಸ್ ಗೆ ಬರಬೇಕು ಎಂದರು.

ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಅನೇಕರು ಜೀವನೋಪಾಯಕ್ಕಾಗಿ ನಾಗಮಂಗಲದಿಂದ ಕೆಲಸಕ್ಕೆ ಇಲ್ಲಿಗೆ ಬಂದಿದ್ದೀರ. ದೇವೇಗೌಡರಿಗೆ ರಾಜಕೀಯ ಜೀವನ ಕೊಟ್ಟಿದ್ದು ನಾಗಮಂಗಲ. ಇವತ್ತಿನ ರಾಜಕಾರಣ ನೋಡ್ತಾ ಇದ್ದೀರ, ಮೈಸೂರು ರಸ್ತೆಯಲ್ಲಿ ಇನ್ನೊಂದು ಕಾರ್ಯಕ್ರಮ ಇದೆ. ಇಬ್ಬರೂ ಒಟ್ಟಿಗೆ ಕಾರ್ಯಕ್ರಮ ನಡೆಯುತ್ತಿದೆ ಎಂದು ಅತ್ತ ನಂದಿ ಲಿಂಕ್‌ ರಸ್ತೆಯಲ್ಲಿ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿದರು.

ನಾಗಮಂಗಲದ ಜನ ಯಾರ ಮೇಲೆ ಎಷ್ಟು ವಿಶ್ವಾಸ ಇದೆ ಅನ್ನೋದು ಈ ಕಾರ್ಯಕ್ರಮದ ಮೂಲಕ ಗೊತ್ತಾಗ್ತಾ ಇದೆ. ಅಪ್ಪಾಜಿಗೌಡ್ರು ಕಳೆದ ಪರಿಷತ್ ಚುನಾವಣೆಯಲ್ಲಿ ಸೋಲು‌ ಕಂಡಿದ್ದಾರೆ. ಅವರಿಗೆ ಬೇಸರವಿದೆ. ಅದು ಸೋಲುವ ಕ್ಷೇತ್ರವಲ್ಲ. ನಮ್ಮ ಪಕ್ಷದ ಒಳಗಿನ ಕೆಲವು ಲೋಪ ದೋಷಗಳಿಂದ ಸೋಲಾಗಿದೆ. ಅಪ್ಪಾಜಿಗೌಡ್ರರನ್ನು ನಾನು ಅವರ ಕಾರ್ಯಕ್ಕೆ ಅಭಿನಂದಿಸುತ್ತೇನೆ ಮತ್ತು ಗೌರವಿಸುತ್ತೇನೆ. ಎರಡು ಬಾರಿ ಸಿಎಂ ಆದ ಸಂದರ್ಭಗಳು ಬಂದಿದ್ದರಿಂದ ನಿಮ್ಮೆಲ್ಲರಿಗೂ ವಿಶ್ವಾಸವಿದೆ.

ನಾನು ಸಿಎಂ ಆದಾಗ ತೆಗೆದಕೊಂಡ ನಿರ್ಣಯಗಳಿಂದ ನೀವು ನಿಮ್ಮ ಹೃದಯದಲ್ಲಿ ಸ್ಥಾನ ಕೊಡಲು ಸಾಧ್ಯ. ನಾನು ಎರಡು ಬಾರಿ ಸಿಎಂ ಆದಾಗಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು ಎರಡನೇ ಬಾರಿಗೆ ಸಿಎಂ ಆದಾಗ ನನ್ನ ಮತ್ತು ಜನರ ನಡುವೆ ಹುಳಿ ಹಿಂಡುವ ಕೆಲಸ ಅನೇಕರು ಮಾಡಿದರು. ಒಂದು 15 ದಿನ ನೋಡ್ತಾ ಇರಿ ನಮ್ಮ ಪಕ್ಷಕ್ಕೆ ಟೋಪಿ ಹಾಕಿದವರು ಕಾಂಗ್ರೆಸ್ ಸೇರೊದನ್ನ ನೋಡ್ತೀರಿ ಎನ್ನುತ್ತ ಸಚಿವ ನಾರಾಯಣಗೌಡ ಕುರಿತು ಪ್ರಸ್ತಾಪಿಸಿದರು.

ನಾನು ರಾಜಕಾರಣಕ್ಕೆ ಬಂದಿದ್ದೇ ಆಕಸ್ಮಿಕ. ಯಾವುದೋ ಒತ್ತಡದ ಸನ್ನಿವೇಶದಿಂದ ರಾಜಕೀಯಕ್ಕೆ ಬಂದಿದ್ದು. ಆದರೆ ನಾನು ಎಲ್ಲ ವ್ಯವಹಾರ ಬದಿಗೊತ್ತಿ, ಜನರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನಾನು ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿದ್ದೆ ಎಂದು ಪ್ರತಿನಿತ್ಯ ಟೀಕೆ ಮಾಡಿದ್ರು. ಆದರೆ ನನಗೆ ಒಂದು ಸರ್ಕಾರಿ ಬಂಗಲೆ ಇರಲಿಲ್ಲ.

ಜಾರ್ಜ್ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಇದ್ರು. ಆದರೆ ಇದನ್ನೇ ಏನೋ ನಾನು ದೊಡ್ಡ ತಪ್ಪು ಮಾಡ್ದೆ ಅಂತಾರೆ. ಕಾಂಗ್ರೆಸ್ ನವರು ನಮ್ಮದೆ ಅಂತಿಮ ನಿರ್ಣಯ, ನನ್ನ ಇಲಾಖೆಗೆ ಕೈ ಹಾಕಬೇಡಿ ಎಂದು ಹೇಳ್ತಿದ್ರು. ಸಾಲ ಮನ್ನಾ ಮಾಡೋಕೆ ಹೋದಾಗ ದುಡ್ಡು ಇಲ್ಲ ಬೇಡ ಅಂದಿದ್ರು. ಸಿದ್ದರಾಮಯ್ಯನ ಮುಖಕ್ಕೆ ಹೋಗಿ ಹಿಡಿದೆ, ನಿನ್ನ ಶಾಸಕರಿಗೆ ಇಷ್ಟು ದುಡ್ಡು ಕೊಡ್ತೀನಿ ಅಂತಾ, ಆಮೇಲೆ ಅಲ್ಲಿ ಎಲ್ಲೋ ಸಿದ್ದವನಕ್ಕೆ ಹೋಗಿ, ಸರ್ಕಾರ ಬೀಳಿಸೋಕೆ ಮದ್ದು ಅರೆದಿದ್ದರು.

ಆ ಮೇಲೆ ನಾನು ಹೋಗಿ ಪಕ್ಷದ ಕಚೇರಿಯಲ್ಲಿ ಕಣ್ಣೀರು ಹಾಕ್ದೆ. ಇಲ್ಲಿ ಎಲ್ಲೋ ಕೆಲವರು ಭಾಷಣ ಮಾಡ್ತಾರೆ. ಕುಮಾರಸ್ವಾಮಿ ಸರಿಯಾಗಿ ಆಡಳಿತ ಕೊಟ್ಟಿಲ್ಲ, ಸರ್ಕಾರ ಹೊರಟೋಯ್ತು ಅಂತಾ ಹೇಳುತ್ತಾರೆ. ಅಮೆರಿಕಾಕ್ಕೆ ಹೋದ್ರೆ ಸರ್ಕಾರ ತೆಗೀತ್ತಾರೆ ಅಂತಾ ಕೆಲವರು ನನಗೆ ಹೇಳಿದ್ರು. ಸರ್ಕಾರ ಹೋಗುತ್ತದೆ ಎಂದು ನನಗೂ ಮೊದಲೇ ಗೊತ್ತಿತ್ತು. ಮೂರೂವರೆ ವರ್ಷ ಬಿಜೆಪಿ ಆಡಳಿತ ನೋಡಿದ್ದೀರಿ. ಈಗ ಅಮಿತ್ ಶಾ ಬಂದು ಮಂಡ್ಯ ಜಿಲ್ಲೆಯಲ್ಲಿ ಡೈನಮೈಟ್ ಇಟ್ಟು ಒಡೆಯಲು ಬಂದಿದ್ದಾರೆ. ಪಾಪ ಅವರಿಗೆ ಗೊತ್ತಿಲ್ಲ, ನಿಮ್ಮಂತಹ ಲಕ್ಷಾಂತರ ಜನ ನಮ್ಮ ಮೇಲೆ ಇಟ್ಟಿರುವ ಪ್ರೀತಿಯನ್ನು ಯಾವ ಡೈನಮೈಟ್ ನಿಂದಲೂ ಒಡೆಯಲು ಸಾದ್ಯವಿಲ್ಲ..

ನಾಗಮಂಗಲದಲ್ಲಿ ನಮ್ಮ ಸುರೇಶ್ ಗೌಡ್ರು ಸೋಲಿಸೋಕೆ ಸ್ನೇಹಿತರು ಒಬ್ಬರು ಓಡಾಡ್ತಿದ್ದಾರೆ. ಸೋಲಿಸಿ ಏನು ಮಾಡ್ತಾರೆ? ಸುರೇಶ್ ಗೌಡ್ರರನ್ನ ಸೋಲಿಸಿ ಜಿಲ್ಲೆಗೆ ಕೊಡೋದಕ್ಕೆ ಏನಿದೆ? ಕಳೆದ ಮೂರು ತಿಂಗಳಿಂದ ಇಷ್ಟೆಲ್ಲಾ ಪ್ರವಾಸ ಮಾಡ್ತಿರೋದು ನನ್ನ ಸ್ವಾರ್ಥಕಲ್ಲ. ನನಗೆ ಎರಡು ಬಾರಿ ಹಾರ್ಟ್ ಸರ್ಜರಿಯಾಗಿದೆ. ಇಷ್ಟಾದರೂ ಕಷ್ಟ ಪಡುತ್ತಿದ್ದೇನೆ. ಆದ್ರೆ ಈ ಹೋರಾಟವನ್ನು ಹಿಂಪಡೆಯಲ್ಲ. ನಾನು ದೇವೆಗೌಡರ ಕುಟುಂಬದವನು,ಪಲಾಯನವಾದ ಮಾಡಲ್ಲ. ಹೇಡಿ ಅಲ್ಲ ನಾನು. ನಾನು ಏಕಾಂಗಿ ಹೋರಾಟ ಮಾಡ್ತಿದ್ದೇನೆ. ದೇವೆಗೌಡರ ಪರ ನಿಂತಿರುವ ರೈತ ಕುಟುಂಬ ನನ್ನ ಜೊತೆ ನಿಂತಿದೆ ಎಂದರು.

ಆ ಚಾಮುಂಡೇಶ್ವರಿ ತಾಯಿ ನನ್ನ ಪ್ರಾಣ ಉಳಿಸಿದವಳು. ಅವಳ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಿಖಿಲ್ ಗೆ‌ ನಿಲ್ಲಬೇಡ ಅಂತಾ ನಾನು ಹೇಳಿದ್ದೆ. ಆದರೆ ಕೆಲವರ ಒತ್ತಡದಿಂದ ಚುನಾವಣೆಗೆ ಸ್ಪರ್ಧಿಸುವ ಅನಿವಾರ್ಯತೆ ಬಂತು. ಆದರೆ ನಿಖಿಲ್ ಕುಮಾರಸ್ವಾಮಿ ಅವತ್ತು ಸೋತಿಲ್ಲ, ಗೆದ್ದಿದ್ದಾನೆ. ಅವನು ಅವನ ಹಿನ್ನಡೆಗೆ ಕಾರಣ ಎಲ್ಲರು ಒಂದಾಗಿದ್ದು. ಅದೇನೋ ಸ್ವಾಭಿಮಾನ ಅಂತೆ. ಸ್ವಾಭಿಮಾನ ನೋಡ್ತೀರಿ ಮುಂದೆ, ಬಿಜೆಪಿ ಹಾಗೂ ಅಮಿತ್ ಶಾ ಕಾಲು ಕೆಳಗೆ ಹೋಗುತ್ತೆ ಎಂದು ಸುಮಲತಾ ಕುರಿತು ಮಾತನಾಡಿದರು.

ಇದನ್ನೂ ಓದಿ: HD Kumaraswamy : ಪ್ರಜಾಧ್ವನಿ ಎಂದರೆ 500 ರೂ. ಕೊಟ್ಟು ಜನ ಸೇರ್ಸೋದಲ್ಲ, ಹಳ್ಳಿಗಳಿಗೆ ಹೋಗಿ ಎಂದ ಎಚ್‌ಡಿ ಕುಮಾರಸ್ವಾಮಿ

ನಾನು ಅವರ ಬಗ್ಗೆ ಚರ್ಚೆ ಮಾಡೋಕೆ ಹೋಗಲ್ಲ. ನಿಖಿಲ್ ಕಾನೂನಾತ್ಮಕ ವಾಗಿ ಸೋತಿರಬಹುದು. ಆದರೆ ಇವತ್ತು ಮಂಡ್ಯ ಜನರ ಹೃದಯದಲ್ಲಿ ನಿಖಿಲ್ ಇದ್ದಾನೆ. ನಾನು ದೇವೇಗೌಡರ ಭೇಟಿ ಮಾಡಿ ಬಂದೆ. ಆಸ್ಪತ್ರೆ ಯಲ್ಲಿ ದೇವೇಗೌಡರಿಗೆ ಮಾತು ಕೊಟ್ಟು ಬಂದಿದೀನಿ. ನೀವು ಏನು ಕನಸು ಕಂಡಿದ್ದಿರಿ, ಅದನ್ನು ನಾನು ಈಡೇರಿಸುತ್ತೇನೆ. ನೀವು ನೊಂದುಕೊಳ್ಳಬೇಡಿ. ಭಗವಂತ ನಿಮ್ಮನ್ನು ಬೇಗ ಕರೆದು ಕೊಳ್ಳಲ್ಲ. ನಿಮ್ಮ ಕನಸು ನನಸು ಮಾಡ್ತೀನಿ ಅಂತಾ ಮಾತು ಕೊಟ್ಟು ಬಂದಿದೀನಿ.

ನನ್ನ ಹೋರಾಟಕ್ಕೆ ರಕ್ಷಣೆ ಕೊಡಬೇಕಾದವ್ರು‌ ನೀವು. ನನ್ನ ಜೀವನಕ್ಕೆ ಬಿಡದಿಯ 45 ಎಕರೆ ಸಾಕು. ಚುನಾವಣೆ ನಡೆಸೋಕೆ ನನ್ನ ಬಳಿ‌ ೫ ರೂಪಾಯಿ ದುಡ್ಡು ಇಲ್ಲ. ಸಾಬೂನೂ ಕಾರ್ಖಾನೆ ಚೇರ್ ಮೆನ್ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಅಶೋಕ್, ಅಶ್ವಥ್ ನಾರಾಯಣ ಅವ್ರೆ ನಿನ್ನೆ ರಾಮನಗರಕ್ಕೆ ಬಂದು ನನ್ನ ಕೆಣಕಿದ್ದೀರಿ. ಆದರೆ ನಿಮಗೆ ಗೊತ್ತಿಲ್ಲ ರಾಮನಗರ ಜನರಿಗೂ ನನಗೂ ತಾಯಿ ಮಗನ ಸಂಬಂಧ ಇದೆ ಅಂತ. 2023ಕ್ಕೆ ನೀವು ಮನೆಗೆ ಹೋಗಲು ತಯಾರಾಗಿರಿ. ಕುಮಾರಸ್ವಾಮಿ ಯಿಂದ ಜೀವ ಪಡೆದ್ರಿ, ಕುಮಾರಸ್ವಾಮಿ ಯಿಂದಲೇ ಹತ ಆಗ್ತೀರಿ ಹುಷಾರು ಎಂದು ಎಚ್ಚರಿಸಿದರು.

ಬೆಂಗಳೂರಿನಲ್ಲಿ ಯಶವಂತಪುರ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ನಗರ, ದಾಸರಹಳ್ಳಿ, ರಾಜಾಜಿನಗರ, ಪದ್ಮನಾಭ ನಗರವನ್ನು ನಾವು ಗೆಲ್ಲಬಹುದು. ಇನ್ನೆರಡು ತಿಂಗಳು ನೀವು ಶ್ರಮವಹಿಸಿದ್ರೆ ಈ ಎಲ್ಲ ಕ್ಷೇತ್ರ ಗೆಲ್ಲಬಹುದು. ನೀವು ಒಂದು ಬಾರಿ 5 ವರ್ಷ ಸ್ವತಂತ್ರ ಅವಕಾಶ ನೀಡಿ. ಈ ಜೀವ ಭೂಮಿಗೆ ಹೋಗುವ ಮೊದಲು ನಿಮ್ಮ ಭವಿಷ್ಯ ಸರಿಪಡಿಸುತ್ತೇನೆ. ಇದೇ ಮಾರ್ಚ್ 26 ನೇ ತಾರಿಖು ದೇವೆಗೌಡರು ಕಾರ್ಯಕ್ರಮಕ್ಕೆ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡ್ತಿದೇನೆ.

ರಾಮನಗರದಿಂದ ದೇವೆಗೌಡರನ್ನ ಮೆರವಣಿಗೆ ಮೂಲಕ ಕಳೆದುಕೊಂಡು ಹೋಗ್ತಿನಿ. ಚಾಮುಂಡೇಶ್ವರಿಯ ತಪ್ಪಲಿನಲ್ಲಿ 10 ಲಕ್ಷ ಜನ ಸೇರಿಸಿ ಸಮಾವೇಶ ಮಾಡ್ತೀವಿ. ಮಂಡ್ಯದಲ್ಲಿ 7 ಕ್ಕೆ 7 ಕ್ಷೇತ್ರ ಗೆಲ್ಲಲು ಎಲ್ಲ ಶ್ರಮ ಹಾಕ್ತೀವಿ. ಅದಕ್ಕಿಂತ ನಿಮ್ಮ ಶ್ರಮ ಹೆಚ್ಚಿರಬೇಕು.

ಇನ್ನು ಮೂರೆ ತಿಂಗಳು ಮಂಡ್ಯ ಜಿಲ್ಲೆಯನ್ನ ಮಾದರಿ ಜಿಲ್ಲೆಯನ್ನಾಗಿ ಮಾಡ್ತೀನಿ. ಮಂಡ್ಯ ಕಬ್ಬಿಗೆ ಟನ್ ಗೆ 6000 ದೊರಕುವಂತ ಯೋಜನೆ ಸಿದ್ದಮಾಡಿದ್ದೇವೆ. ಸದ್ಯದಲ್ಲೆ ಅದನ್ನ ತಿಳಿಸುತ್ತೇವೆ. ಕೊಬ್ಬರಿಗೆ ಬೆಂಬಲ ಬೆಲೆ ಕೊಡ್ತಿವಿ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ. ಇನ್ನು, ಎಸ್‌ಐಟಿ ಸೆಲ್‌ನಲ್ಲಿ ಎಚ್‌.ಡಿ.ರೇವಣ್ಣ ಅವರು ಗಳಗಳನೆ ಅತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ.ರೇವಣ್ಣ ಅವರನ್ನು ವಿಚಾರಣೆ ಮಾಡಲಿರುವ ಅಧಿಕಾರಿಗಳು, ಬಳಿಕ ವಿಶ್ರಾಂತಿಗೆ ಅವಕಾಶ ನೀಡಲಿದ್ದಾರೆ. ಸೆಲ್‌ನಲ್ಲಿ ರೇವಣ್ಣ ಅವರಿಗೆ ಒಂದು ಸಾಮಾನ್ಯ ಬೆಡ್‌ ಹಾಗೂ ಕುರ್ಚಿ ನೀಡಲಾಗಿದೆ. ಇದೆಲ್ಲವನ್ನೂ ಕಂಡ ರೇವಣ್ಣ ಅವರು ಕಣ್ಣೀರು ಹಾಕಿದ್ದಾರೆ. ಮಗ ವಿದೇಶಕ್ಕೆ ಪರಾರಿಯಾಗಿದ್ದಾನೆ. ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಈಗ ನಾನು ಸೆಲ್‌ನಲ್ಲಿ ಇರಬೇಕಾಯಿತಲ್ಲ ಎಂಬುದನ್ನು ನೆನೆದು ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

ಕರ್ನಾಟಕ

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Road Accident: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ಅಪಘಾತ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ನಡೆದಿದೆ. ಬೈಕ್ ಸವಾರ ಭೀಮಣ್ಣ (55) ಮೃತರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ.

ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲು

ರಾಯಚೂರು: ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ‌ ಕೊಠಾ ಗ್ರಾಮದ ಬಳಿ ನಡೆದಿದೆ. ಅಯ್ಯನ್ ಶಫಿ (17) ನೀರು ಪಾಲಾದ ಬಾಲಕ. ಮೂವರು ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದಾಗ ದುರ್ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ತೆರಳಿ, ಶೋಧಕಾರ್ಯ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿಎ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading

ಕರ್ನಾಟಕ

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Dingaleshwar Swamiji: ನವಲಗುಂದದಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿದ್ದರಿಂದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Dingaleshwar Swamiji
Koo

ಧಾರವಾಡ: ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ ಆರೋಪದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶ ಚುನಾವಣೆ ಭಾಷಣದ ವೇಳೆ ಸ್ವಾಮೀಜಿ ಎಡವಟ್ಟು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮೀಜಿ, ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಭಾಷಣ ಮಾಡಿದ್ದರು. ಹೀಗಾಗಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡಿದ್ದಾರೆ ಎಂಬ ಆರೋಪದಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

Continue Reading
Advertisement
HD Revanna
ಕರ್ನಾಟಕ17 mins ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ22 mins ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ22 mins ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ44 mins ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ58 mins ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ60 mins ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ1 hour ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ1 hour ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ2 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ2 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌