Jevargi Election Results: ಜೇವರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಜಯ್‌ ಸಿಂಗ್‌ಗೆ ವಿಜಯ - Vistara News

Latest

Jevargi Election Results: ಜೇವರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಜಯ್‌ ಸಿಂಗ್‌ಗೆ ವಿಜಯ

ಕಳೆದ ಐದು ದಶಕಗಳಿಂದ ರಜಪೂತ ಸಿಂಗ್‌ ಕುಟುಂಬದ ಭದ್ರಕೋಟೆ ಆಗಿರುವ ಜೇವರ್ಗಿಯಲ್ಲಿ ಕಾಂಗ್ರೆಸ್‌ನ ಡಾ. ಅಜಯ್‌ ಸಿಂಗ್‌ ಅವರು ಮತ್ತೆ ಗೆಲುವು ದಾಖಲಿಸಿದ್ದಾರೆ.

VISTARANEWS.COM


on

jevargi assembly constituency winner congress dr ajay singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಜಯ್ ಸಿಂಗ್‌ ವಿಜಯಪತಾಕೆ ಹಾರಿಸಿದ್ದಾರೆ.

ಕಾಂಗ್ರೆಸ್‌ನ ಡಾ. ಅಜಯ್ ಸಿಂಗ್ ಕಳೆದ ಎರಡು ಅವಧಿಗಳಿಂದ ಇಲ್ಲಿ ಶಾಸಕರಾಗಿದ್ದಾರೆ. ಕಳೆದ ಐದು ದಶಕಗಳಿಂದ ಈ ಕ್ಷೇತ್ರ ರಜಪೂತ ಸಿಂಗ್‌ ಕುಟುಂಬದ ಭದ್ರಕೋಟೆಯಾಗಿದೆ. ಮಾಜಿ ಮುಖ್ಯಮಂತ್ರಿ ಎನ್.ಧರಂ ಸಿಂಗ್‌ ಅವರು ಪ್ರತಿನಿಧಿಸಿದ್ದ ಈ ಕ್ಷೇತ್ರವನ್ನು ಕಳೆದ 14 ಚುನಾವಣೆಗಳಲ್ಲಿ 10 ಬಾರಿ ಸಿಂಗ್‌ ಕುಟುಂಬಸ್ಥರೇ ಗೆದ್ದಿದ್ದಾರೆ.

ಕಳೆದ ಸಾರಿ ಭಾರತೀಯ ಜನತಾ ಪಾರ್ಟಿಯ ದೊಡ್ಡಪ್ಪಗೌಡ ಪಾಟೀಲ ನಾರಿಬೋಳ್ ಅವರು, ಅಜಯ್‌ ಸಿಂಗ್‌ ಎದುರು 16056 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.‌ ಅಜಯ್‌ ಸಿಂಗ್‌ 68,508 ಮತ ಪಡೆದಿದ್ದರು.
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್‌ ಸಿಂಗ್, ಬಿಜೆಪಿ ಅಭ್ಯರ್ಥಿಯಾಗಿ ಶಿವನಗೌಡ ಪಾಟೀಲ, ಜೆಡಿಎಸ್ ಪಕ್ಷದಿಂದ ದೊಡ್ಡಪ್ಪ ಗೌಡ, ಆಪ್‌ನಿಂದ ವಿಶ್ವನಾಥ್‌ ರೆಡ್ಡಿ ಸ್ಪರ್ಧಿಸಿದ್ದರು.

ಈ ಕ್ಷೇತ್ರದಲ್ಲಿರುವ ಒಟ್ಟು ಮತಗಳು 231,847. ಪುರುಷರ ಸಂಖ್ಯೆ 116,404 ಹಾಗೂ ಸ್ತ್ರೀಯರು 115,411.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Lok Sabha Election: ದೇಶದಲ್ಲಿ 2024ರ ಲೋಕಸಭಾ ಚುನಾವಣೆ ನಾಳೆಯಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಯಾರು ಅತಿ ಹೆಚ್ಚು ಹಾಗೂ ಯಾರು ಅತೀ ಕಡಿಮೆ ಅಂತರದಿಂದ ಚುನಾವಣೆ ಗೆದ್ದರು ಎನ್ನುವ ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

By

Lok sabha election 2024
Koo

ಬೆಂಗಳೂರು: ಲೋಕಸಭೆ ಚುನಾವಣೆ- 2024ರ (Lok sabha election-2024) ಹೊಸ್ತಿಲಲ್ಲಿ ಇರುವಾಗ ಕಳೆದ ಲೋಕಸಭಾ ಚುನಾವಣೆ ಫಲಿತಾಂಶದ (election result) ಕುರಿತು ಕುತೂಹಲ ಹೆಚ್ಚಾಗಿದೆ. 2019ರ ಚುನಾವಣೆಯಲ್ಲಿ ಪ್ರಧಾನಿ (PM) ನರೇಂದ್ರ ಮೋದಿ (narendra modi) ನೇತೃತ್ವದ ಬಿಜೆಪಿ (BJP) 303 ಸ್ಥಾನಗಳನ್ನು ಗೆದ್ದಿತ್ತು. 2014ರ ಚುನಾವಣೆಯಲ್ಲಿ 282 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ 2019ರಲ್ಲಿ 21 ಹೆಚ್ಚು ಸೀಟುಗಳು ಗೆದ್ದು ದಾಖಲೆ ಬರೆದಿತ್ತು.

ಕಳೆದ ಬಾರಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಿತ್ತು. ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ದೇಶದಲ್ಲೇ ಯಾರು ಅತೀ ಹೆಚ್ಚು ಹಾಗೂ ಯಾರು ಅತೀ ಕಡಿಮೆ ಮತಗಳ ಅಂತರದಿಂದ ಗೆದ್ದರು ಎನ್ನುವ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಹೆಚ್ಚು ಅಂತರದಿಂದ ಗೆದ್ದವರು


ಸಿ.ಆರ್. ಪಾಟೀಲ್

ಗುಜರಾತ್‌ನ ನವಸಾರಿ ಕ್ಷೇತ್ರದಿಂದ ಬಿಜೆಪಿ ನಾಯಕ ಸಿ.ಆರ್. ಪಾಟೀಲ್ 6.89 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು. ಪಾಟೀಲ್ ಅವರು 9,72,739 ಮತಗಳನ್ನು ಗಳಿಸಿ 6.89 ಲಕ್ಷ ಮತಗಳ ಅಂತರದಿಂದ ಪಟೇಲ್ ಧರ್ಮೇಶಭಾಯ್ ಭೀಮಭಾಯ್ ಅವರನ್ನು ಸೋಲಿಸಿದ್ದರು. ಧರ್ಮೇಶಭಾಯ್ ಅವರು 2,83,071 ಮತಗಳನ್ನು ಗಳಿಸಿದ್ದರು.

ಇದನ್ನೂ ಓದಿ: Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಿದರೆ ಏನು ಮಾಡಬಹುದು?


ಅಮಿತ್ ಶಾ

ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಶಾ ಅವರು ಕಳೆದ ಬಾರಿ ಗಾಂಧಿನಗರದಲ್ಲಿ 5.55 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು.


ದರ್ಶನಾ ಜರ್ದೋಶ್

ಸೂರತ್ ಬಿಜೆಪಿ ಅಭ್ಯರ್ಥಿ ದರ್ಶನಾ ಜರ್ದೋಶ್ 5.47 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದು, ಅವರು ಒಟ್ಟು 7.95 ಲಕ್ಷ ಮತಗಳನ್ನು ಗಳಿಸಿದ್ದರು. ಇವರ ವಿರುದ್ಧ ಕಣಕ್ಕೆ ಇಳಿದಿದ್ದ ಕಾಂಗ್ರೆಸ್ ಪಕ್ಷದ ಅಶೋಕ್ ಪಟೇಲ್ ಅವರು ಕೇವಲ 2.47 ಲಕ್ಷ ಮತಗಳನ್ನು ಗಳಿಸಿದ್ದರು.


ರಂಜನ್ ಭಟ್

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಕ್ಷೇತ್ರವಾಗಿದ್ದ ವಡೋದರದಿಂದ ಬಿಜೆಪಿಯ ರಂಜನ್ ಭಟ್ 5.90 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು.


ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ 4.8 ಲಕ್ಷ ಮತಗಳ ಅಂತರದಿಂದ ಗೆದಿದ್ದರು. ಇವರ ವಿರುದ್ಧ ಕಣದಲ್ಲಿದ್ದ ಸಮಾಜವಾದಿ ಪಕ್ಷದ ಶಾಲಿನಿ ಯಾದವ್ 1.95 ಲಕ್ಷ ಮತಗಳನ್ನು ಗಳಿಸಿದ್ದರು.

ಕಡಿಮೆ ಅಂತರದಿಂದ ಗೆದ್ದವರು

ಭೋಲಾನಾಥ್

ಉತ್ತರ ಪ್ರದೇಶದ ಮಚ್ಲಿಶಹರ್ ಲೋಕಸಭಾ ಅಭ್ಯರ್ಥಿ ಭೋಲಾನಾಥ್ ಕೇವಲ 181 ಮತಗಳಿಂದ ಎದುರಾಳಿಯನ್ನು ಸೋಲಿಸಿದರು. ಭೋಲಾನಾಥ್ 4,88,397 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಬಹುಜನ ಸಮಾಜ ಪಕ್ಷದ ತ್ರಿಭುವನ್ ರಾಮ್ 4,88,216 ಮತಗಳನ್ನು ಗಳಿಸಿದ್ದರು.

ಪಿ.ಪಿ. ಮೊಹಮ್ಮದ್ ಫೈಜಲ್

ರಾಷ್ಟ್ರದ ಅತ್ಯಂತ ಚಿಕ್ಕ ಕ್ಷೇತ್ರ ಲಕ್ಷದ್ವೀಪದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪಿ.ಪಿ. ಮೊಹಮ್ಮದ್ ಫೈಜಲ್ ಕೇವಲ 823 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

ಕುಲದೀಪ್ ರಾಯ್ ಶರ್ಮಾ

ಅಂಡಮಾನ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಕುಲದೀಪ್ ರಾಯ್ ಶರ್ಮಾ ಕೇವಲ 1,407 ಮತಗಳಿಂದ ಗೆಲುವು ದಾಖಲಿಸಿದ್ದರು.

ಅಪರೂಪಾ ಪೊದ್ದಾರ್

ಪಶ್ಚಿಮ ಬಂಗಾಳದ ಅರಾಂಬಾಗ್ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್‌ನ ಅಪರೂಪಾ ಪೊದ್ದಾರ್ ಅವರು ಬಿಜೆಪಿಯ ತಪನ್ ಕುಮಾರ್ ರೇ ವಿರುದ್ಧ 1,142 ಮತಗಳಿಂದ ಜಯಗಳಿಸಿದ್ದರು.

ಇಮ್ತಿಯಾಜ್ ಜಲೀಲ್

ಮಹಾರಾಷ್ಟ್ರದ ಔರಂಗಾಬಾದ್ ಕ್ಷೇತ್ರದಲ್ಲಿ ಕಣಕ್ಕೇ ಇಳಿದಿದ್ದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್‌ನ ಇಮ್ತಿಯಾಜ್ ಜಲೀಲ್ ಅವರು ಚಂದ್ರಕಾಂತ್ ಖೈರೆ ವಿರುದ್ಧ 1,142 ಮತಗಳ ಅಂತರದಿಂದ ಗೆದ್ದಿದ್ದರು.

Continue Reading

ಲೈಫ್‌ಸ್ಟೈಲ್

Senior Citizen: 2050ರ ವೇಳೆಗೆ ಭಾರತ ‘ಮುದುಕರ ದೇಶ’ವಾಗಲಿದೆ!

Senior citizen: 2050ರ ವೇಳೆಗೆ ಭಾರತವು ವಿಶ್ವದ ಶೇ. 17 ಹಿರಿಯ ನಾಗರಿಕರನ್ನು ಹೊಂದಲಿದೆ. ಇದರಿಂದ ಅವರ ಅಗತ್ಯತೆಗಳನ್ನು ಪೂರೈಸವು ಹಿರಿಯ ನಾಗರಿಕ ಕೇಂದ್ರಗಳ ಬೇಡಿಕೆಯೂ ಹೆಚ್ಚಾಗಲಿದೆ ಎನ್ನುತ್ತದೆ ವರದಿಯೊಂದು. ಈ ಬಗ್ಗೆ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Senior citizen
Koo

ನವದೆಹಲಿ: ಭಾರತವು (india) 2050ರ ವೇಳೆಗೆ 340 ಮಿಲಿಯನ್ ಹಿರಿಯ ನಾಗರಿಕರನ್ನು (Senior citizen) ಹೊಂದಲಿದೆ. ಇದು ವಿಶ್ವದ ವಯಸ್ಸಾದ ಜನಸಂಖ್ಯೆಯ (population) ಸರಿಸುಮಾರು ಶೇ. 17ರಷ್ಟು ಇರಲಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಸಿಬಿಆರ್ ಇ (CBRE) ಸೌತ್ ಏಷ್ಯಾದ ವರದಿ ಬುಧವಾರ ತಿಳಿಸಿದೆ.

ವಿಶ್ವದಲ್ಲೇ ಇತ್ತೀಚಿನ ವರ್ಷಗಳಲ್ಲಿ ವಿಶೇಷ ಆರೈಕೆ ಮತ್ತು ಜೀವನಶೈಲಿಯ ಆಯ್ಕೆಗಳನ್ನು ಬಯಸುತ್ತಿರುವ ಹಿರಿಯರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಹಿರಿಯ ಜೀವನ ಸೌಲಭ್ಯಗಳ ಬೇಡಿಕೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ವರದಿ ಹೇಳಿದೆ.

ದೇಶದಲ್ಲಿ ಪ್ರಸ್ತುತ ಹಿರಿಯರ ಆರೈಕೆ ಕೇಂದ್ರಗಳೂ ವೇಗವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ರಾಷ್ಟ್ರದಾದ್ಯಂತ 18,000 ಘಟಕಗಳಿದ್ದು, ಸಂಘಟಿತ ಹಿರಿಯ ಜೀವನ ಮತ್ತು ಆರೈಕೆ ವಿಭಾಗಗಳಲ್ಲಿ ಶೇ. 62ರಷ್ಟನ್ನು ಹೊಂದಿರುವ ದಕ್ಷಿಣ ಪ್ರದೇಶದಲ್ಲೇ ಇದು ಹೆಚ್ಚಾಗಿದೆ.

ಇದನ್ನೂ ಓದಿ: Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?

2024ರಲ್ಲಿ ಹಿರಿಯ ಜೀವನ ಸೌಲಭ್ಯಗಳ ಒಟ್ಟು ಅಂದಾಜು ಗುರಿ ಸುಮಾರು 1 ಮಿಲಿಯನ್ ಆಗಿದ್ದು, ಮುಂದಿನ 10 ವರ್ಷಗಳಲ್ಲಿ 2.5 ಮಿಲಿಯನ್‌ಗೆ ಹೆಚ್ಚಾಗುವ ನಿರೀಕ್ಷೆಯಿದೆ.

ವೇಗವಾಗಿ ಹೆಚ್ಚಳ

ಭಾರತದ ಹಿರಿಯ ಜನಸಂಖ್ಯೆಯು ಗಮನಾರ್ಹವಾಗಿ ಶೇ. 25.4 ಬೆಳವಣಿಗೆಯಾಗುವ ನಿರೀಕ್ಷೆಯಿದೆ. ಇದು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಾಗಿದೆ. ಭಾರತ, ಆಗ್ನೇಯ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿ ಹಿರಿಯ ನಾಗರಿಕರ ಪ್ರಮಾಣ ವೇಗವಾಗಿ ಬೆಳೆಯುತ್ತಿದೆ ಎಂದು ಸಿಬಿಆರ್ ಇ ಯ ಅಧ್ಯಕ್ಷ ಮತ್ತು ಸಿಇಒ ಅಂಶುಮಾನ್ ಮ್ಯಾಗಜೀನ್ ತಿಳಿಸಿದ್ದಾರೆ.


ಹೆಚ್ಚುತ್ತಿದೆ ಬೇಡಿಕೆ

ಕಳೆದ ದಶಕದಲ್ಲಿ ಭಾರತವು ಹಿರಿಯ ಜೀವನ ಯೋಜನೆಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ಕಂಡಿದೆ. ಈ ವಲಯದಲ್ಲಿ ಹೆಚ್ಚುತ್ತಿರುವ ಸ್ವೀಕಾರ ಮತ್ತು ಬೇಡಿಕೆಯನ್ನುಇದು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಆರೈಕೆ ಘಟಕಗಳಲ್ಲಿ ಹೆಚ್ಚಿನವು ಚೆನ್ನೈ, ಬೆಂಗಳೂರು, ಹೈದರಾಬಾದ್, ಕೊಯಮತ್ತೂರು, ಪುಣೆ ಮತ್ತು ದೆಹಲಿ- ಎನ್ ಸಿಆರ್ ನಗರಗಳಲ್ಲಿ ಕೇಂದ್ರೀಕೃತವಾಗಿದೆ.

ಹಲವು ಕ್ರಮ

ಭಾರತದಲ್ಲಿ ವರ್ಧಿತ ವಯೋಸಹಜ ಆರೈಕೆಗಾಗಿ ಹಿರಿಯರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮ (NPHCE), ರಾಷ್ಟ್ರೀಯ ಆರೋಗ್ಯ ನೀತಿ ಮತ್ತು ಸಮುದಾಯ ಆಧಾರಿತ ಕಾರ್ಯಕ್ರಮಗಳಂತಹ ಹಲವಾರು ನೀತಿ ಉಪಕ್ರಮಗಳನ್ನು ಸರ್ಕಾರವು ಕೈಗೊಳ್ಳುತ್ತದೆ.

ವಯಸ್ಸಾದ ಜನಸಂಖ್ಯೆಯ ವಿಕಸನಗೊಳ್ಳುತ್ತಿರುವ ಆದ್ಯತೆಗಳನ್ನು ಪೂರೈಸಲು ರಚನಾತ್ಮಕ ಆರೈಕೆ ಕಾರ್ಯಕ್ರಮಗಳು, ಉದ್ದೇಶಿತ ನೀತಿಗಳು ಮತ್ತು ವಿಶೇಷ ವೈದ್ಯಕೀಯ ಸೇವೆಗಳ ಅಗತ್ಯವನ್ನು ಗುರುತಿಸಲಾಗಿದೆ. ಭಾರತ ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿ ಹಿರಿಯ ಆರೈಕೆ ಕ್ಷೇತ್ರದ ಉದ್ಯಮದ ಬಗ್ಗೆ ಜನ ನಾಯಕರು ಮಾತನಾಡುತ್ತಿದ್ದಾರೆ ಎಂದು ಕನ್ಸಲ್ಟಿಂಗ್ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಮಿ ಕೌಶಲ್ ತಿಳಿಸಿದ್ದಾರೆ.

Continue Reading

Latest

Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಿದರೆ ಏನು ಮಾಡಬಹುದು?

Lok sabha election 2024: ದೇಶ ಬಹುದೊಡ್ಡ ಚುನಾವಣೆಯನ್ನು ಎದುರು ನೋಡುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಮತವನ್ನು ಬೇರೆಯವರಿಗೆ ಚಲಾಯಿಸಲು ಅಧಿಕಾರ ಇದೆಯೇ ? ಒಂದು ವೇಳೆ ಬೇರೆಯವರು ನಮ್ಮ ಮತ ಚಲಾಯಿಸಿದರೆ ಏನು ಮಾಡಬೇಕು? ನಮ್ಮ ಅಸಲಿ ಮತ ವ್ಯರ್ಥವಾಗುತ್ತದೆಯೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

By

Lok sabha election-2024
Koo

ಲೋಕಸಭಾ ಚುನಾವಣೆ- 2024ರ (lok sabha election-2024) ಮೊದಲ ಹಂತದ ( first phase) ಚುನಾವಣೆ (election) ನಾಳೆ ದೇಶದ ಕೆಲವು ಕಡೆ ನಡೆಯಲಿದೆ. ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಕಾಡುತ್ತಿದೆ. ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ, ಈ ಸಂದರ್ಭದಲ್ಲಿ ನಾವು ಏನು ಮಾಡಬೇಕು ಎಂಬುದು ಕೂಡ ಒಂದು.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ.

ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಇದನ್ನೂ ಓದಿ: Modi Letter: ಸಾಮಾನ್ಯ ಎಲೆಕ್ಷನ್‌ ಅಲ್ಲ; ರಾಮನವಮಿ ದಿನವೇ ಎನ್‌ಡಿಎ ಅಭ್ಯರ್ಥಿಗಳಿಗೆ ಮೋದಿ ಪತ್ರ!

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.


ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ.

ಯಾವಾಗ ನಡೆಯಲಿದೆ ಚುನಾವಣೆ?

2024ರ ಲೋಕಸಭೆ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವು ಏಪ್ರಿಲ್ 19 ರಂದು ಪ್ರಾರಂಭವಾಗಲಿದೆ. ಬಳಿಕ ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ಮತದಾನ ನಡೆದು ಮತ ಎಣಿಕೆಯು ದೇಶಾದ್ಯಂತ ಜೂನ್ 4 ರಂದು ನಡೆಯಲಿದೆ.

Continue Reading

Latest

Lok sabha election 2024: ಮಥುರಾದಲ್ಲಿ ಹೇಮಾಮಾಲಿನಿ ಗೆಲುವು ಪಕ್ಕಾ; ಏನು ಹೇಳುತ್ತೆ ಲೆಕ್ಕ?

Lok sabha election 2024: ಬಿಜೆಪಿ ಪ್ರಾಬಲ್ಯದ ಕೃಷ್ಣ ನಗರಿ ಮಥುರಾದಲ್ಲಿ ಮೂರನೇ ಬಾರಿಗೆ ಕಣಕ್ಕೆ ಇಳಿದಿರುವ ಹೇಮಾಮಾಲಿನಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇದಕ್ಕೆ ಹಲವು ಕಾರಣಗಳು ಇವೆ. ಅದು ಏನು ಗೊತ್ತೆ? ಇಲ್ಲಿದೆ ಈ ಪ್ರತಿಷ್ಠಿತ ಚುನಾವಣಾ ಕಣದ ವಿಶ್ಲೇಷಣೆ.

VISTARANEWS.COM


on

By

Lok sabha election-2024
Koo

ಮಥುರಾ: ಲೋಕ ಸಭಾ ಚುನಾವಣೆಯಲ್ಲಿ (Lok sabha election-2024) ಈ ಬಾರಿ ಹಲವಾರು ಕ್ಷೇತ್ರಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ. ಇದರಲ್ಲಿ ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷದ (BJP) ಭದ್ರಕೋಟೆಯಾದ ಮಥುರಾ (mathura) ಲೋಕಸಭಾ ಕ್ಷೇತ್ರವೂ ಒಂದು. ಮಥುರಾದಲ್ಲಿ ಬಿಜೆಪಿ ಮತ್ತೆ ಹಾಲಿ ಸಂಸದೆ (MP) ಹೇಮಾ ಮಾಲಿನಿ (hema malini) ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಿದೆ.

ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ವಿಧಿಸಿಕೊಂಡಿರುವ ಅಲಿಖಿತ ವಯಸ್ಸಿನ ಮಿತಿ ನಿರ್ಬಂಧವನ್ನು ಮುರಿದು 75ರ ಹರೆಯದ ನಟಿ ಹೇಮಮಾಲಿನಿ ಅವರಿಗೆ ಇಲ್ಲಿ ಟಿಕೆಟ್ ನೀಡಲಾಗಿದೆ.

ಬಿಜೆಪಿಯ ಭದ್ರಕೋಟೆ

ಜಾಟ್ ಪ್ರಾಬಲ್ಯದ ಮಥುರಾವು ಸಾಂಪ್ರದಾಯಿಕವಾಗಿ ಭಾರತೀಯ ಜನತಾ ಪಕ್ಷ ಅಥವಾ ಅದರ ಮಿತ್ರ ಪಕ್ಷಗಳ ಭದ್ರಕೋಟೆಯಾಗಿದೆ. ಭಾರತದ ಪ್ರಸಿದ್ಧ ಜಾಟ್ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಮಣಿ ರಾಮ್ ಬಗ್ರಿ ನೇತೃತ್ವದಲ್ಲಿ ಬಿಜೆಪಿ 1977ರಲ್ಲಿ ಮೊದಲ ಇಲ್ಲಿ ಪ್ರಾಬಲ್ಯ ಸಾಧಿಸಿತ್ತು.

ಇದನ್ನೂ ಓದಿ: Lok sabha election: ತಮಿಳುನಾಡಿನಲ್ಲಿ ಬಿಜೆಪಿ ಆಗಲಿದೆ 2ನೇ ಅತಿದೊಡ್ಡ ಪಕ್ಷ; ಸಮೀಕ್ಷೆ ಹೇಳೋದಿಷ್ಟು

ಬಿಜೆಪಿ ರಚನೆ ಬಳಿಕ…

1975- 77ರ ತುರ್ತು ಪರಿಸ್ಥಿತಿಯ ಬಳಿಕ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಎದುರಿಸಲು ಭಾರತೀಯ ಜನತಾ ಪಕ್ಷವನ್ನು ಬಲಪಡಿಸಲಾಯಿತು. ಭಾರತೀಯ ಜನಸಂಘ, ಜನತಾ ಮೋರ್ಚಾ, ಭಾರತೀಯ ಲೋಕದಳ, ಸ್ವತಂತ್ರ ಪಕ್ಷ ಮತ್ತು ಸೋಷಿಯಲಿಸ್ಟ್ ಪಾರ್ಟಿ ಆಫ್ ಇಂಡಿಯಾದಂತಹ ಪಕ್ಷಗಳ ಆದರ್ಶ ನಾಯಕರನ್ನು ಒಳಗೊಂಡಿರುವ ಬಿಜೆಪಿ ಮೂಲಭೂತವಾಗಿ ಒಂದು ಸಂಯುಕ್ತ ವಿರೋಧ ಪಕ್ಷವಾಗಿ ಜನರ ಪ್ರೀತಿಗೆ ಪಾತ್ರವಾಗಿತ್ತು.

ವಾಜಪೇಯಿ ಅವರನ್ನು ಸೋಲಿಸಿದ್ದ ಪ್ರತಾಪ್

1977ರ ಲೋಕಸಭಾ ಚುನಾವಣೆಯ ಮೊದಲು ಸ್ವತಂತ್ರ ಅಭ್ಯರ್ಥಿಗಳಾದ ಸ್ವಾತಂತ್ರ್ಯ ಹೋರಾಟಗಾರ ರಾಜಾ ಗಿರಿರಾಜ್ ಸರಣ್ ಸಿಂಗ್ (1952) ಮತ್ತು ರಾಜಾ ಮಹೇಂದ್ರ ಪ್ರತಾಪ್ (1957) ಅವರು ಇಲ್ಲಿ ಅಧಿಕಾರವನ್ನು ಸ್ಥಾಪಿಸಿದ್ದರು. ಪ್ರತಾಪ್ ಅವರು ಆ ವರ್ಷ ಭಾರತೀಯ ಜನಸಂಘದ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಲಿಸಿದ್ದರು.

1962ರಲ್ಲಿ ರೈತ ನಾಯಕ ಚೌಧರಿ ದಿಗಂಬರ ಸಿಂಗ್ ಅವರು ಪ್ರತಾಪ್ ಅವರನ್ನು ಸೋಲಿಸಿ ಗೆದ್ದಾಗ ಕಾಂಗ್ರೆಸ್ ಮೊದಲ ಬಾರಿಗೆ ಇಲ್ಲಿ ಅಧಿಕಾರಕ್ಕೆ ಬಂದಿತು. ಅವರ ಅನಂತರ ಮತ್ತೊಬ್ಬ ಕಾಂಗ್ರೆಸ್ ನಾಯಕ ಚಕಲೇಶ್ವರ್ ಸಿಂಗ್ ಅಧಿಕಾರ ವಹಿಸಿಕೊಂಡರು.

ಚೌಧರಿ ದಿಗಂಬರ್ ಸಿಂಗ್ 1980ರಲ್ಲಿ ಜನತಾ ಪಕ್ಷದ ಟಿಕೆಟ್‌ನಲ್ಲಿ ಲೋಕಸಭೆಗೆ ಮರಳಿದರು. ಅವರು 1969ರಲ್ಲಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳಕ್ಕೆ ಸೇರಿದರು. 1984ರಲ್ಲಿ ಇಂದಿರಾ ಗಾಂಧಿಯವರ ಹತ್ಯೆಯ ಅನಂತರ ಮನ್ವೇಂದ್ರ ಸಿಂಗ್ ಸ್ಥಾನವನ್ನು ಗೆದ್ದಾಗ ಕಾಂಗ್ರೆಸ್ ಇಲ್ಲಿ ಮರಳಿ ಅಧಿಕಾರಕ್ಕೆ ಬಂದಿತ್ತು. ಆದರೆ ಅವರು ಜನತಾ ದಳಕ್ಕೆ ಸೇರಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಜಗಜೀವನ್ ರಾಮ್ ಅವರು ಜನ ಮೋರ್ಚಾ ಮತ್ತು ಲೋಕದಳವನ್ನು ಒಳಗೊಂಡಿರುವ ಜನತಾ ಪಕ್ಷದ ಒಡೆದ ಘಟಕಕ್ಕೆ ಸೇರಿದರು. ಮತ್ತೆ ಜನತಾ ದಳ ಟಿಕೆಟ್‌ನಲ್ಲಿ ಗೆದ್ದರು.

ಭಾರತೀಯ ಜನಸಂಘ ವಿಕಸನಗೊಂಡ ಬಳಿಕ ಸ್ವಾಮಿ ಸಚ್ಚಿದಾನಂದ ಹರಿ ಸಾಕ್ಷಿ ಜಿ. ಮಹಾರಾಜ್ ಅವರು 1991 ರಲ್ಲಿ ಮಥುರಾದಲ್ಲಿ ಬಿಜೆಪಿಗೆ ಮೊದಲ ಬಾರಿಗೆ ಗೆಲುವು ತಂದು ಕೊಟ್ಟರು. ಈ ಗೆಲುವಿನಲ್ಲಿ ಸಾಕ್ಷಿ ಮಹಾರಾಜ್ ಜಾಟ್ ಪ್ರಾಬಲ್ಯದ ಕ್ಷೇತ್ರದಲ್ಲಿ ಗೆದ್ದ ಮೊದಲ ಒಬಿಸಿ ನಾಯಕರಾದರು. ಮುಂದಿನ ಮೂರು ಚುನಾವಣೆಗಳಲ್ಲಿ 1996, 1998 ಮತ್ತು 1999ರಲ್ಲಿ ಚೌಧರಿ ತೇಜ್ವೀರ್ ಸಿಂಗ್ ಬಿಜೆಪಿಯಿಂದ ಮಥುರಾ ಸ್ಥಾನವನ್ನು ಗೆದ್ದರು.

2004ರಲ್ಲಿ ಮನ್ವೇಂದ್ರ ಸಿಂಗ್ ಗೆಲುವಿನ ಮೂಲಕ ಮತ್ತೆ ಕಾಂಗ್ರೆಸ್ ಮಥುರಾಗೆ ಮರಳಿತ್ತು. 2009ರಲ್ಲಿ ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ, ಆರ್ ಎಲ್ ಡಿ ನಾಯಕ ಜಯಂತ್ ಚೌಧರಿ ಅವರು ಕಣಕ್ಕಿಳಿದು ಗೆದ್ದಿದ್ದರು. 2014ರಲ್ಲಿ ಜಯಂತ್ ಚೌಧರಿ ವಿರುದ್ಧ ಹೇಮಾ ಮಾಲಿನಿ ಅವರನ್ನು ಬಿಜೆಪಿ ಕಣಕ್ಕಿಳಿಸಿ ಗೆಲುವು ಸಾಧಿಸಿತು. 2019ರಲ್ಲೂ ಗೆಲುವು ಹೇಮಾ ಮಾಲಿನಿ ಅವರದಾಯಿತು.


ಕೃಷ್ಣನ ನಗರಿಯಲ್ಲಿ ಡ್ರೀಮ್ ಗರ್ಲ್

ಹೇಮಾ ಮಾಲಿನಿ ಅವರಿಗೆ ಸೆಲೆಬ್ರಿಟಿ ಸ್ಥಾನಮಾನ ಇತ್ತು ಮತ್ತು ಅವರು ಜಾಟ್ ಸಮುದಾಯದ ಸೊಸೆ ಎಂಬುದು ಪ್ಲಸ್ ಪಾಯಿಂಟ್. ನಟ ಧರ್ಮೇಂದ್ರ ಡಿ’ಯೋಲ್ ಅವರೊಂದಿಗಿನ ವಿವಾಹದಿಂದಾಗಿ ಅವರು ಜಾಟ್‌ಗಳು ಮತ್ತು ರೈತರ ಸಮುದಾಯದಿಂದ ಬೆಂಬಲವನ್ನು ಪಡೆದು ಚೌಧರಿ ಕುಟುಂಬ ರಾಜಕಾರಣವನ್ನು ಉರುಳಿಸಿದರು.

ಶೇ. 35ಕ್ಕಿಂತ ಹೆಚ್ಚು ಚಾಟ್ ಮತದಾರರ ಒಲವು ಹೊಂದಿರುವ ಹೇಮಾ ಮಾಲಿನಿ ಈ ಬಾರಿ ಮತ್ತೆ ಮಥುರಾದಿಂದ ಲೋಕಸಭೆಗೆ ಮರಳಲು ಬಯಸಿದ್ದಾರೆ. ಜಯಂತ್ ಚೌಧರಿ ಈಗ ಎನ್‌ಡಿಎ ಸೇರಿಕೊಂಡಿರುವುದರಿಂದ ಕೃಷ್ಣ ನಗರಿಯ ಮತಗಳು ಬಿಜೆಪಿಗೆ ಸಿಗುವುದು ಬಹುತೇಕ ಖಚಿತವಾಗಿದೆ.

ಪ್ರಸ್ತುತ ಇಲ್ಲಿ ಬಿಜೆಪಿ ಆಡಳಿತ

ಮಥುರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಾದ ಛಾಟಾ, ಮಂತ್, ಗೋವರ್ಧನ್, ಮಥುರಾ ಮತ್ತು ಬಲದೇವ್ 2022ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವುದು ಬಿಜೆಪಿಯ ಹೇಮಾ ಮಾಲಿನಿಯ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

2011 ರ ಜನಗಣತಿಯ ಪ್ರಕಾರ ಮಥುರಾ ಜಿಲ್ಲೆಯ ಒಟ್ಟು ಜನಸಂಖ್ಯೆ ಸುಮಾರು 25.5 ಲಕ್ಷ. ಮಥುರಾ ಕ್ಷೇತ್ರವು 2019 ರಲ್ಲಿ 18 ಲಕ್ಷ ಮತದಾರರನ್ನು ಹೊಂದಿತ್ತು ಮತ್ತು ಶೇ. 61ರಷ್ಟು ಇಲ್ಲಿ ಮತದಾನವಾಗಿತ್ತು.

Continue Reading
Advertisement
Lok sabha election 2024
ದೇಶ23 mins ago

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Student Death in Bengaluru
ಬೆಂಗಳೂರು27 mins ago

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

LSG vs CSK
ಕ್ರೀಡೆ52 mins ago

LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

Nestle Company
ಲೈಫ್‌ಸ್ಟೈಲ್2 hours ago

Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

Lok Sabha Election 20242 hours ago

Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

Supreme Court
ದೇಶ2 hours ago

ಚುನಾವಣೆ ಪವಿತ್ರವಾದುದು, ಧಕ್ಕೆ ಆಗಬಾರದು; ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚಿಸಿದ್ದೇಕೆ?

Aaradhya Bachchan is wiser more intelligent than I
ಬಾಲಿವುಡ್2 hours ago

Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

Road Accident
ಬಾಗಲಕೋಟೆ2 hours ago

Road Accident : ಕ್ರೂಸರ್‌- ಬಸ್‌ ನಡುವೆ ಭೀಕರ ಅಪಘಾತ; ಮೂವರು ಸಾವು, ಐವರು ಗಂಭೀರ

Raj Kundra Shilpa Shetty
ಕ್ರೈಂ2 hours ago

Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Jai Shree Ram slogan Rahul Gandhi instigated anti Hindu activities says Pralhad Joshi
ರಾಜಕೀಯ2 hours ago

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌