Site icon Vistara News

Siddheshwar Swamiji | ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ; ಶೋಕಸಾಗರದಲ್ಲಿ ಜನ

Siddheshwar Swamiji

ವಿಜಯಪುರ: ಭಕ್ತರ ಪಾಲಿಗೆ ನಡೆದಾಡುವ ದೇವರು, ನಡೆದಾಡುವ ವಿಶ್ವಕೋಶ, ಜ್ಞಾನದ ನಿಧಿ, ಎರಡನೇ ವಿವೇಕಾನಂದ ಆಗಿದ್ದ ಪ್ರಖ್ಯಾತ ವಾಗ್ಮಿ, ಧಾರ್ಮಿಕ ಚಿಂತಕ, ಲೇಖಕ, ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರ ಅಂತಿಮ ವಿಧಿವಿಧಾನ ಪ್ರಕ್ರಿಯೆಗಳು ಆರಂಭವಾಗಿವೆ. ಇದಕ್ಕೂ ಮೊದಲು ವಿಜಯಪುರದ ಸೈನಿಕ ಶಾಲೆಯಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಸಕಲ ಗೌರವಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ.

ಸೀದಾಸಾದಾ, ಸರಳ, ಸುಂದರ ಅಧ್ಯಾತ್ಮಿಕ ಜೀವನದ ಮೂಲಕ ಜನಮನದ ಮೇಲೆ ಗಾಢ ಪ್ರಭಾವ ಬೀರಿದ ಅವರು ಉಪನ್ಯಾಸ, ಅಂಕಣ ಮತ್ತು ಕೃತಿಗಳ ಮೂಲಕ ಅಸಂಖ್ಯಾತ ಜನರ ಮನಸ್ಸಿಗೆ ಸಾಂತ್ವನ ನೀಡಿದ ಮಹಾ ಗುರು. ಗದುಗಿನ ಶಿವಾನಂದ ಶ್ರೀಗಳ ಪರಂಪರೆಗೆ ಸೇರಿದ ವಿಜಯಪುರದ ಜ್ಞಾನಯೋಗಾಶ್ರಮ ಅಧ್ಯಕ್ಷರಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಾವಿರಾರು ಹಳ್ಳಿಗಳಲ್ಲಿ ಸಂಚರಿಸಿ ಜ್ಞಾನದಾಸೋಹ ನೀಡಿದವರು. ಶ್ರೀಗಳ ದೇಹಾಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Adarsha Anche

ಸೈನಿಕ ಶಾಲೆ ಆವರಣದಿಂದ ಸಿದ್ದೇಶ್ವರ ಶ್ರೀಗಳ ಅಂತಿಮ ಯಾತ್ರೆ ಆರಂಭವಾಗಿದೆ. ಯಾತ್ರೆಯ ವಾಹನದ ಸುತ್ತಲೂ ಪೊಲೀಸ್‌ ಸರ್ಪಗಾವಲನ್ನು ಹಾಕಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ನಿಂತು ನಮಿಸುತ್ತಿದ್ದಾರೆ. ಲಕ್ಷಾಂತರ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಹಲವಾರು ಮಂದಿ ಫೋಟೊ ಹಾಗೂ ವಿಡಿಯೊ ಮಾಡಿಕೊಳ್ಳುತ್ತಿರುವುದು ಕಂಡುಬಂತು.

Adarsha Anche

Adarsha Anche

ಕೆಲವೇ ಕ್ಷಣಗಳಲ್ಲಿ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭಗೊಳ್ಳಲಿದೆ. ಸೈನಿಕ ಶಾಲೆಯಿಂದ ಜ್ಞಾನಯೋಗಾಶ್ರಮದವರೆಗೆ ಸುಮಾರು 5 ಕಿ.ಮೀ. ಮೆರವಣಿಗೆ ಸಾಗಲಿದೆ.

Mallikarjun Tippar

ಸಿದ್ಧೇಶ್ವರ ಶ್ರೀಗಳ ಅಂತಿಮ ವಿಧಿವಿಧಾನಗಳ ಪ್ರಕ್ರಿಯೆ ಆರಂಭ. ಕುಶಾಲು ತೋಪು ಹಾರಿಸಿ ಗೌರವ ಸಲ್ಲಿಕೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹಾಜರಿದ್ದರು.

Mallikarjun Tippar

ಶ್ರೀಗಳ ದೇಹಾಂತ್ಯದ ಕಾರಣ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣ ಸ್ವಯಂಪ್ರೇರಿತವಾಗಿ ಬಂದ್

Exit mobile version