Karnataka High Court | ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ನ್ಯಾ. ಪ್ರಸನ್ನ ಬಿ ವರಳೆ ಪ್ರಮಾಣ ವಚನ ಸ್ವೀಕಾರ - Vistara News

ಕರ್ನಾಟಕ

Karnataka High Court | ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ನ್ಯಾ. ಪ್ರಸನ್ನ ಬಿ ವರಳೆ ಪ್ರಮಾಣ ವಚನ ಸ್ವೀಕಾರ

ನ್ಯಾ. ಪ್ರಸನ್ನ ಬಿ ವರಳೆ (Justice Prasanna B Varale) ಅವರು ಕರ್ನಾಟಕ ಹೈಕೋರ್ಟ್‌(Karnataka High Court)ನ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

VISTARANEWS.COM


on

Karnataka High Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪ್ರಸನ್ನ ಬಾಲಚಂದ್ರ ವರಳೆ (Justice Prasanna B Varale) ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಈ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಜರಿದ್ದರು.

ಪ್ರಮಾಣವಚನ ಬೋಧನಾ ಸಮಾರಂಭವನ್ನು ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿತ್ತು. ಈ ವೇಳೆ, ಹಿರಿಯ ಅಧಿಕಾರಿಗಳ ಜತೆಗೆ, ಹೊಸದಾಗಿ ನೇಮಕವಾಗಿರುವ ಮುಖ್ಯ ನ್ಯಾಯಮೂರ್ತಿಗಳ ಕುಟುಂಬದ ವರ್ಗದವರೂ ಹಾಜರಿದ್ದರು.

ನ್ಯಾ.ಪ್ರಸನ್ನ ಬಾಲಚಂದ್ರ ವರಳೆ ಮೂಲತಃ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯವರು. 1962 ಜೂನ್ 23ರಂದು ಪ್ರಸನ್ನ ಅವರು ನಿಪ್ಪಾಣಿಯಲ್ಲಿ ಜನಿಸಿದರು. ಕಲಾ ಪದವೀಧರರಾಗಿರುವ ಪ್ರಸನ್ನ ಬಿ ವರಳೆ ಅವರು, ಮಹಾರಾಷ್ಟ್ರದ ಔರಂಗಾಬಾದ್‌ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠಾವಾಡ ವಿವಿಯಿಂದ ಕಾನೂನು ಪದವಿ ಪಡೆದುಕೊಂಡಿದ್ದಾರೆ.

1985ರಲ್ಲಿ ವಕೀಲಿಕಿಗೆ ನೋಂದಣಿ ಮಾಡಿಸಿಕೊಂಡ ವರಳೆ ಅವರು, ಎಸ್.ಎನ್. ಲೋಯಾ ಅವರ ಬಳಿ ಸೇರಿಕೊಂಡರು. ಕ್ರಿಮಿನಲ್ ಮತ್ತು ಸಿವಿಲ್ ಕೇಸ್‌ಗಳನ್ನು ನಡೆಸುತ್ತಿದ್ದರು. ಇದೇ ವೇಳೆ, ಅವರು ಔರಂಗಾಬಾದ್‌ನ ಅಂಬೇಡ್ಕರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಅಸಿಸ್ಟಂಟ್ ಗೌರ್ನಮೆಂಟ್ ಪ್ಲೀಡರ್ ಮತ್ತು ಅಡಿಷನಲ್ ಪಬ್ಲಿಕ್ ಪ್ರಾಸೆಕ್ಯೂಟರ್ ಕೂಡ ಆಗಿದ್ದರು. ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠದಲ್ಲಿ ಭಾರತ ಸರ್ಕಾರದ ಪರವಾಗಿ ಎಎನ್‌ಡಿ ಅಡಿಷನಲ್ ಸ್ಟ್ಯಾಂಡಿಂಗ್ ಕೌನ್ಸೆಲ್ ಕೂಡ ಆಗಿದ್ದರು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ನ್ಯಾ. ಪ್ರಸನ್ನ ಬಿ ವರಲೆ ಅವರಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ | Justice D Y Chandrachud | ಡಿ ವೈ ಚಂದ್ರಚೂಡ್ ನ್ಯಾಯನಿಷ್ಠ, ಧೈರ್ಯಶಾಲಿ ನ್ಯಾಯಮೂರ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

UDR Case: ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ.

VISTARANEWS.COM


on

Crime Scene
Koo

ತುಮಕೂರು: ಚುನಾವಣೆ (Lok sabha Election 2024) ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ (Water man) ಒಬ್ಬರು ಅನುಮಾನಾಸ್ಪದವಾಗಿ (UDR Case, unnatural death) ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Continue Reading

ಪ್ರಮುಖ ಸುದ್ದಿ

Lok Sabha Election 2024: ಇಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

Lok Sabha Election 2024: ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ (Voting) ಕ್ಷಣಗಣನೆ ಶುರುವಾಗಿದೆ. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

30 ಸಾವಿರದ 602 ಮತಗಟ್ಟೆ

14 ಕ್ಷೇತ್ರಗಳಲ್ಲಿ ಒಟ್ಟು 2 ಕೋಟಿ 88 ಲಕ್ಷದ 19 ಸಾವಿರದ 342 ಮತದಾರರಿದ್ದು, ಅದರಲ್ಲಿ ಮೊದಲ ಬಾರಿ ಮತ ಚಲಾಯಿಸುವ ಯುವ ಮತದಾರರು 5,99,444 ಮಂದಿ ಇದ್ದಾರೆ. 1 ಕೋಟಿ 44 ಲಕ್ಷದ 28 ಸಾವಿರದ 99 ಪುರುಷ ಮತದಾರರಿದ್ದಾರೆ. ಹಾಗೆಯೇ 1 ಕೋಟಿ 43 ಲಕ್ಷದ 88 ಸಾವಿರದ 176 ಮಹಿಳೆಯರು ಮತದಾನದ ಮಾಡಲಿದ್ದಾರೆ. 3,067 ತೃತೀಯಲಿಂಗಿಗಳು ಇದ್ದಾರೆ. 30 ಸಾವಿರದ 602 ಮತಗಟ್ಟೆ ತೆರೆಯಲಾಗಿದ್ದು, 4 ಲಕ್ಷ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಇದ್ರ ಜೊತೆಗೆ 5,000 ಮೈಕ್ರೋ ಅಬ್ಸರ್ವರ್‌ಗಳ ನೇಮಕ ಮಾಡಲಾಗಿದ್ದು, 50,000 ಸಿವಿಲ್ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನು 65 ಅರೆಸೇನಾ ಪಡೆ ತುಕಡಿ ಹಾಗೂ ಸಶಸ್ತ್ರ ಪೊಲೀಸ್ ಪಡೆಯೂ ಕಣ್ಗಾವಲು ಇರಿಸಲಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 14 ಲೋಕಸಭಾ ಕ್ಷೇತ್ರಗಳ ಪೈಕಿ ಕೋಲಾರ, ಚಾಮರಾಜನಗರ ಹಾಗೂ ಚಿತ್ರದುರ್ಗ ಎಸ್‌ಸಿ ಮೀಸಲು ಕ್ಷೇತ್ರಗಳಾಗಿವೆ.

ಬೆಂಗಳೂರು ಉತ್ತರ ಕ್ಷೇತ್ರ 2,911 ಮತಗಟ್ಟೆಗಳನ್ನು ಹೊಂದಿದ್ದು, ಇದು ಅತ್ಯಧಿಕ ಆಗಿದೆ. ಅದಲ್ಲದೇ ಈ ಕ್ಷೇತ್ರದಲ್ಲಿ 32.1 ಲಕ್ಷ ಮತದಾರರು ಇದ್ದಾರೆ. 10 ಕ್ಷೇತ್ರಗಳಲ್ಲಿ 15ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದು, ಎರಡು ಇವಿಎಂಗಳನ್ನು ಬಳಸಲಾಗುತ್ತಿದೆ. ಇನ್ನು, ಮತದಾನದ ಪ್ರಮಾಣ ಹೆಚ್ಚಳಕ್ಕೆ ಚುನಾವಣಾ ಆಯೋಗ ಅನೇಕ ಜಾಗೃತಿಗಳನ್ನು, ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈ ಬಾರಿಯಾದರೂ ಮತದಾನದ ಪ್ರಮಾಣ ಹೆಚ್ಚಳ ಆಗುತ್ತಾ ನೋಡಬೇಕಿದೆ. 2019ರಲ್ಲಿ ಶೇ.68.8ರಷ್ಟು ಮತದಾನ ರಾಜ್ಯದಲ್ಲಿ ಆಗಿತ್ತು.

ವಿಶೇಷ ಚೇತನರಿಗೆ ಉಚಿತ ಬೈಕು, ಆಟೋ, ಟ್ಯಾಕ್ಸಿ ಸೇವೆ

ಏಪ್ರಿಲ್‌‌ 26ಕ್ಕೆ ಮತದಾನ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಗಳಲ್ಲೂ ಸರ್ಕಾರಿ ರಜೆ ಘೋಷಣೆಯಾಗಿದೆ. ಜೊತೆಗೆ ಬೆಂಗಳೂರಲ್ಲಿ ಮತದಾನ ಮುಗಿಸಿ ಊರಿನ ಕಡೆ ಹೊರಡೋರಿಗೆ ಅನುಕೂಲ ಆಗಲಿ ಅಂತ ನಮ್ಮ ಮೆಟ್ರೋ ರೈಲು ಸೇವೆ ರಾತ್ರಿ 12ರವರೆಗೂ ವಿಸ್ತರಣೆ ಮಾಡಿದ್ದಾರೆ. ಇನ್ನು ಮತದಾನಕ್ಕೆ ತೆರಳುವ ವಿಶೇಷ ಚೇತನರಿಗೆ ಉಚಿತ ಬೈಕು, ಆಟೋ, ಟ್ಯಾಕ್ಸಿ ಸೇವೆ ಜೊತೆಗೆ ಹಿರಿಯ ನಾಗರಿಕರಿಗೂ ರ್ಯಾಪಿಡೋದಿಂದ ಉಚಿತ ಟ್ಯಾಕ್ಸಿ ಸೇವೆ ಘೋಷಣೆಯಾಗಿದೆ. 2019ರ ಚುನಾವಣೆಯಲ್ಲಿ ರಾಜ್ಯದಲ್ಲಿ 68.81% ಮತದಾನ ಆಗಿತ್ತು.. ಈ ವರ್ಷ ಗರಿಷ್ಠ ಮತದಾನ ಮಾಡಿ ಅಂತ ಆಯೋಗ ಮನವಿ ಮಾಡಿದೆ.

ಇದನ್ನೂ ಓದಿ: Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Continue Reading

ಮಳೆ

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Karnataka Weather Forecast : ಮತ್ತೆ ವಿಪರೀತ ತಾಪಮಾನವು ಜನರ ತಲೆಕೆಡಿಸಿದೆ. ಕೆಲವಡೆ ಮಳೆಯು ಅಬ್ಬರಿಸಿದ್ದರೂ, ಅದರ ದುಪ್ಪಟ್ಟು ಎಂಬಂತೆ ಬಿಸಿಲ ಧಗೆಯು ಹೆಚ್ಚಾಗಿದೆ. ಕರ್ನಾಟಕದಲ್ಲಿ ಹೀಟ್‌ ವೇವ್‌ ಹೆಚ್ಚುತ್ತಿದ್ದು ಹವಾಮಾನ ತಜ್ಞರು ಯೆಲ್ಲೋ ಅಲರ್ಟ್‌ ಘೋಷಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.

ತಾಪಮಾನ ಎಚ್ಚರಿಕೆ

ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್‌ ವೇವ್‌ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಹೀಟ್‌ವೇವ್‌ ವಾರ್ನಿಂಗ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

Food Poisoning : ಅಸ್ವಸ್ಥಗೊಂಡವರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ.

VISTARANEWS.COM


on

food
Koo

ಪಿರಿಯಾಪಟ್ಟಣ: ಮದುವೆ ಮನೆಯಲ್ಲಿ ಸಿದ್ಧಪಡಿಸಲಾಗಿದ್ದ ಊಟ ಮಾಡಿದ (Food Poisoning) ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಹಾಹಾಕಾರ ಉಂಟಾಯಿತು.

ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಕಷ್ಟವಾದಾಗ ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆ ಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಮದುವೆ ಮನೆಯಲ್ಲಿ ಊಟ ತಿಂದವರೇ ತುಂಬಿಕೊಂಡಿದ್ದರು.

ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಏಕಾಏಕಿ ಹಲವರು ಆಸ್ಪತ್ರೆಗೆ ಬಂದ ಕಾರಣ ಕುಶಾಲನಗರದ ಆಸ್ಪತ್ರೆ ಕ್ಲಿನಿಕ್​ಗಳು ತುಂಬಿಕೊಂಡಿದ್ದವು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಸಾಕಷ್ಟು ಮಂದಿ ದಾಖಲಾಗಿದ್ದಾರೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

ಅವರೆಲ್ಲರೂ ಗುರುವಾರ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ್ದರು. ಸಂಜೆಯ ವೇಳೆಗೆ ಏಕಾಏಕಿ ವಾಂತಿ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Continue Reading
Advertisement
Crime Scene
ಕ್ರೈಂ52 seconds ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

lok sabha election 2024 sudha murthy voting
Live News43 mins ago

Lok Sabha Election 2024: ಲೋಕಸಭೆ ಚುನಾವಣೆ 2024 ಮತದಾನ Live News

ಅಂಕಣ55 mins ago

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Eating Bread
ಆಹಾರ/ಅಡುಗೆ57 mins ago

Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election 2024: ಇಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

Karnataka Weather Forecast
ಮಳೆ1 hour ago

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

drinking ors
ಆರೋಗ್ಯ2 hours ago

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

Dina bhavishya
ಭವಿಷ್ಯ3 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Lok sabha Election
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ8 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ16 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ16 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ19 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202421 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌