Site icon Vistara News

K M Shivalinge Gowda: ಭಾಷಣದ ಭರದಲ್ಲಿ ಕಾಂಗ್ರೆಸ್‌ಗೇ ಬೈದ ಶಾಸಕ ಶಿವಲಿಂಗೇಗೌಡ! ವಿಡಿಯೊ ಇದೆ

K M Shivalinge Gowda

ರಾಮನಗರ: ಭಾಷಣದ ಭರದಲ್ಲಿ ಕಾಂಗ್ರೆಸ್ ವಿರುದ್ಧವೇ ಸ್ವಪಕ್ಷ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿರುವ ಪ್ರಸಂಗ ಕಾರ್ಯಕ್ರಮವೊಂದರಲ್ಲಿ ನಡೆದಿದೆ. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (K M Shivalinge Gowda) ಅವರು, ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಪಕ್ಷವನ್ನೇ ಬೈದ್ದಿದ್ದಾರೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಜೆಡಿಎಸ್- ಬಿಜೆಪಿ ಪಕ್ಷದವರಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಜನಾಂದೋಲನ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೋ ಪ್ರಶ್ನೆಗೆ ಉತ್ತರ ಕೊಡಿ ಎಂದರು. ಬಾಯ್ತಪ್ಪಿ ಕಾಂಗ್ರೆಸ್‌ಗೆ ಬೈದಿರುವುದು ಗೊತ್ತಾದ ಮೇಲೆ, ಕ್ಷಮಿಸಿ ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದಿದ್ದಾರೆ.

ಪಾದಯಾತ್ರೆ ಮೂಲಕ ರಾಜ್ಯದ ಜನರಿಗೆ ಸುಳ್ಳು ಹೇಳಲು ಬಿಜೆಪಿಯವರು ಹೊರಟಿದ್ದಾರೆ‌. ಜೆಡಿಎಸ್- ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡು ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದಾರೆ. ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮರೆತು ಕೋಮುವಾದಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಬಿಜೆಪಿ ಅವರ ಪಾದದಡಿಯಲ್ಲಿ ಜೆಡಿಎಸ್‌ನವರು ಸೇರಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಕಳಂಕ ತರಬೇಕು ಅಂತ ಪಾದಯಾತ್ರೆ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಸ್ವಚ್ಛತೆ, ಪ್ರಾಮಾಣಿಕತೆ ಇಟ್ಟುಕೊಂಡು ಇಷ್ಟು ವರ್ಷ ಸಿದ್ದರಾಮಯ್ಯ ರಾಜಕೀಯ ಮಾಡಿದ್ದಾರೆ. ಮೈಸೂರಿಗೆ ಹೋಗೊ ವರೆಗೂ ಇದೇ ರೀತಿ ಸಮಾವೇಶ ಮಾಡುತ್ತೇವೆ ಎಂದರು. ಈ ವೇಳೇ ಬಾಯ್ತಪ್ಪಿ ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೊ ಪ್ರಶ್ನೆಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ನಂತರ ಕ್ಷಮಿಸಿ, ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಆಪಾದನೆ ಏನಾದರೂ ಇದ್ದರೆ ನೀವು ಸಾಬೀತು ಮಾಡಿ. ಈ ವೇದಿಕೆ ಮೂಲಕ ನಾನು ಬಹಿರಂಗ ಸವಾಲು ಹಾಕುತ್ತೇನೆ ಎಂದು ಚರ್ಚೆಗೆ ಬರುವಂತೆ ಟಿ.ಜೆ. ಅಬ್ರಹಾಂಗೆ ಆಹ್ವಾನ ನೀಡಿದರು. ಮುಂದುವರಿದು ಜೆಡಿಎಸ್- ಬಿಜೆಪಿ ಶಾಸಕರಿಗೆ ನಾನು ಕರೆ ಕೊಡುತ್ತೇನೆ. ಮುಡಾ ಹಗರಣದಲ್ಲಿ ಸಿಎಂ ಭಾಗಿಯಾಗಿದ್ದಾರೆ ಎಂದರೆ ಸಾಕ್ಷಿ ಕೊಡಿ, ನೀವು ಹೇಳಿದ ಶಿಕ್ಷೆಯನ್ನು ನಾನು ಅನುಭವಿಸುತ್ತೇನೆ. ಸರ್ಕಾರದ ವಿರುದ್ಧ ಕೆಟ್ಟ ಅಭಿಪ್ರಾಯ ಬರಲು ಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು.

ನಿಮ್ಮ ಬೊಮ್ಮಾಯಿ ಅವರ 4 ವರ್ಷದ ಆಡಳಿತದಲ್ಲಿ 18 ಪ್ರಕರಣಗಳಲ್ಲಿ ನಿಮ್ಮ ಮೇಲೆ ಆಪಾದನೆ ಇದೆ. ನಾನು ವಿಧಾನಸಭೆಯಲ್ಲಿ ಚರ್ಚೆ ಮಾಡೋಕೆ ಕಾದರೂ ನೀವು ಸಮಯ ಕೊಡಲಿಲ್ಲ. ವಿಜಯೇಂದ್ರ ಚೆಕ್ ಮುಖಾಂತರ ಲಂಚ ಪಡೆದುಕೊಂಡು ಕಿಕ್ ಬ್ಯಾಕ್ ಪಡೆದುಕೊಂಡಿದ್ದೀರಿ. ನೀವು ಭ್ರಷ್ಟಾಚಾರದ ಬಗ್ಗೆ ಮಾತಾಡ್ತೀರಾ? ಅಂದಿನ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಹಗರಣಗಳ ಬಗ್ಗೆ ನಿಮಗೆ ಗೊತ್ತಿಲ್ಲವೇ? ಬಿಜೆಪಿಯ ಕಾಲದಲ್ಲಿನ ಹಗರಣಗಳನ್ನು ಎಲ್ಲವನ್ನೂ ತನಿಖೆ‌ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ | Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

ಹೇ ಅಬ್ರಹಾಂ ನೀನು ಜೋಕರ್ ಕೆಲಸ, ಮಾನಗೆಟ್ಟ ಕೆಲಸ ಮಾಡಬೇಡ. ಮರ್ಯಾದಸ್ಥರನ್ನು ಬೀದಿಗೆ ಎಳಿಬೇಡ.
ನೀನು ತಲೆಹಿಡಿಯೋ ಕೆಲಸ ಮಾಡಬೇಡ. ಬಾ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದರು.

Exit mobile version