Site icon Vistara News

K S Eshwarappa: ಭಾಷಣದ ಮಧ್ಯೆ ಆಜಾನ್‌; ನನಗೆ ಎಲ್ಲಿ ಹೋದ್ರೂ ಇದೊಂದು ತಲೆನೋವು ಎಂದ ಕೆ.ಎಸ್‌. ಈಶ್ವರಪ್ಪ

KS Eshwarappa burns congress manifesto and demand arrest of siddamaiah and DKS

KS Eshwarappa burns congress manifesto and demand arrest of siddamaiah and DKS

ಮಂಗಳೂರು: ನಗರದಲ್ಲಿ ಆಜಾನ್‌ ಬಗ್ಗೆ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಕಾವೂರಿನ ಶಾಂತಿನಗರದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಭಾಷಣದ ಮಧ್ಯೆ ಆಜಾನ್ ಆರಂಭವಾಗಿದ್ದಕ್ಕೆ ಸಿಡಿಮಿಡಿಯಾದ ಕೆ.ಎಸ್. ಈಶ್ವರಪ್ಪ (K S Eshwarappa), ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು ಎಂದು ಹೇಳಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವಿದ್ದು‌, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ.
ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳುವುದಾ? ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ‌. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ ಎಂದು ಹೇಳಿದ್ದಾರೆ.

ಇದನ್ನೂ ಓದಿ | Modi in Karnataka: ಕಾಂಗ್ರೆಸ್‌ನಿಂದ ಬಸವೇಶ್ವರರಿಗೆ ಅವಮಾನ: ರಾಹುಲ್‌ ಭಾಷಣ ಉಲ್ಲೇಖಿಸಿದ ಮೋದಿ

ಆದರೆ ಮೈಕ್ ಹಿಡಿದುಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಹೇಳಿದ್ದಾರೆ.

Exit mobile version