Kalaburagi News: ಜಾತಿ ನಿಂದನೆ ಆರೋಪ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ವಿರುದ್ಧ ಕೇಸ್‌ - Vistara News

ಕರ್ನಾಟಕ

Kalaburagi News: ಜಾತಿ ನಿಂದನೆ ಆರೋಪ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ವಿರುದ್ಧ ಕೇಸ್‌

Kalaburagi News: ಎಸ್‌ಸಿ ಎಂಬ ಕಾರಣಕ್ಕೆ ವಿಶ್ವವಿದ್ಯಾಲಯ ಆವರಣಕ್ಕೆ ಹೋಗಲು ಬಿಟ್ಟಿಲ್ಲ ಎಂದು ಆರೋಪಿಸಿ ಸಂಶೋಧನಾ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Kalaburagi News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಜಾತಿ ನಿಂದನೆ ಆರೋಪದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ. ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ನಂದಪ್ಪ ನೀಡಿದ ದೂರಿನ ಮೇರೆಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಆ.1 ರಂದು ಸಿಯುಕೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ವೇಳೆ ಸಂಶೋಧನಾ ವಿದ್ಯಾರ್ಥಿ ನಂದಪ್ಪ ಅವರನ್ನು ವಿವಿ ಕ್ಯಾಂಪಸ್ ಒಳಗೆ ಸಿಬ್ಬಂದಿ ಬಿಟ್ಟಿಲ್ಲ. ಎಸ್‌ಸಿ ಎಂಬ ಕಾರಣಕ್ಕೆ ನನ್ನನ್ನು ಒಳಗೆ ಬಿಡಬೇಡಿ ಎಂದು ಕುಲಪತಿ ಬಟ್ಟೂ ಸತ್ಯನಾರಾಯಣ ಹಾಗೂ ಕುಲಸಚಿವ ಆರ್.ಆರ್. ಬಿರಾದಾರ್ ಹೇಳಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Murder Case
Murder Case

ಬೆಂಗಳೂರು: ಜಮೀನು ವಿಚಾರಕ್ಕೆ ಸಂಬಂಧಿಸಿ ಸೋದರ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ನಡೆದಿದೆ. ಬಾಬುರೆಡ್ಡಿ ಕೊಲೆಯಾದ ವ್ಯಕ್ತಿ. ಸದ್ಯ ಆರೋಪಿಗಳಾದ ಬಾಬುರೆಡ್ಡಿ ಅವರ ಸಹೋದರಿಯ ಪತಿ ಗೋಪಾಲ್ ರೆಡ್ಡಿ, ಅಣ್ಣನ ಮಗ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ (Murder Case).

ಜಮೀನು ವ್ಯಾಜ್ಯ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆಯಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ | Leopard Attack : ಮೈಸೂರಲ್ಲಿ ರೈತನ ಮೇಲೆ ಚಿರತೆ ದಾಳಿ; ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಚಿರತೆ

ಘಟನೆ ಹಿನ್ನೆಲೆ

ಬಾಬುರೆಡ್ಡಿ ಮತ್ತು ಗೋಪಾಲ್ ರೆಡ್ಡಿ ಅವರಿಗೆ ಸಂಬಂಧಿಸಿದ ಜಮೀನು ಹಂಚಿಕೆಯ ವ್ಯಾಜ್ಯ ಕೋರ್ಟ್‌ನಲ್ಲಿತ್ತು. ಈ ಹಿನ್ನೆಲೆಯಲ್ಲಿ ಜಮೀನು ಭಾಗದ ವಿಚಾರವಾಗಿ ಮಾತುಕತೆ ಮಾಡಲು ಪಂಚಾಯಿತಿ ನಡೆಸಲಾಗಿತ್ತು. ಪಂಚಾಯಿತಿ ವೇಳೆ ಮಾತಿಗೆ ಮಾತು ಬೆಳೆದು ಬಾಬುರೆಡ್ಡಿ ಮತ್ತು ಸಂಬಂಧಿಕರ ನಡುವೆ ಗಲಾಟೆ ಆರಂಭವಾಗಿತ್ತು. ಈ ವೇಳೆ ಭರತ್ ಹಾಗೂ ಗೋಪಾಲ್ ರೆಡ್ಡಿ ಸಿಟ್ಟಿನಿಂದ ಬಾಬುರೆಡ್ಡಿಗೆ ಚಾಕುವಿನಿಂದ ಇರಿದು ಬಿಟ್ಟಿದ್ದರು.

ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಬಾಬುರೆಡ್ಡಿ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಹಾಗೂ ಗೋಪಾಲ್ ರೆಡ್ಡಿಯನ್ನು ಬಂಧಿಸಲಾಗಿದೆ.

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಪ್ರಕರಣ: ಮೃತನ ಗುರುತು ಪತ್ತೆ

ಬೆಂಗಳೂರು: ಶನಿವಾರ ನಗರದ ದೊಡ್ಡಕಲ್ಲಸಂದ್ರ ಬಳಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತನನ್ನು 35 ವರ್ಷದ  ನವೀನ್ ಕುಮಾರ್ ಅರೋರಾ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಉತ್ತರಪ್ರದೇಶದ ಆಲಿಘಡ್‌ನವನು.

ನವೀನ್ ಕುಮಾರ್ ಕುಟುಂಬ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ‌ ನೆಲೆಸಿದೆ. ನವೀನ್‌ ಈ ಹಿಂದೆ ಬೆಂಗಳೂರಿನಲ್ಲಿ‌ ಹಾರ್ಡ್‌ವೇರ್‌ ಅಂಗಡಿ ನಡೆಸುತ್ತಿದ್ದ. ಐದಾರು ವರ್ಷದ ಹಿಂದೆ ಬ್ಯುಸಿನೆಸ್ ಲಾಸ್ ಆಗಿದ್ದ ಕಾರಣ ನವೀನ್ ಕುಮಾರ್ ಸಂಪೂರ್ಣ ಉದ್ಯೋಗ ಕೈ ಬಿಟ್ಟಿದ್ದ. ನಂತರ ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುತ್ತಿದ್ದ,

ಐದಾರು ವರ್ಷದಿಂದ ಕುಟುಂಬದಿಂದ ಬೇರೆಯಾಗಿ ಒಂಟಿ‌ ಬದುಕುತ್ತಿದ್ದ ನವೀನ್‌ ಉದ್ಯೋಗವೂ ಇಲ್ಲದೇ ನೊಂದಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಶನಿವಾರ ಸಂಜೆಯ ವೇಳೆಗೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ನವೀನ್ ನಂತರ ಬರುತ್ತಿರುವ ಮೆಟ್ರೋದ ಎದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಸದ್ಯ ನವೀನ್ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ

Officer Dismissed: ಸತ್ಯಾಂಶ ಮರೆಮಾಚಿ ಅಕ್ರಮವಾಗಿ ನೇಮಕವಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದೂರರ್ಜಿ ಪರಿಶೀಲನಾ ಸಮಿತಿ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಿತ್ತು. ಹೀಗಾಗಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಅಮಾನತುಗೊಂಡಿದ್ದಾರೆ.

VISTARANEWS.COM


on

Koo

ಹಾವೇರಿ: ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ನಿಂಗಪ್ಪ ಬರೇಗಾರ ವಜಾಗೊಂಡಿದ್ದಾರೆ. ಸತ್ಯಾಂಶ ಮರೆಮಾಚಿ ಅಕ್ರಮವಾಗಿ ನೇಮಕವಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದೂರರ್ಜಿ ಪರಿಶೀಲನಾ ಸಮಿತಿಯು ಪರಿಶೀಲನೆ ನಡೆಸಿ ವರದಿ ನೀಡಿತ್ತು. ನಿಯಮಬಾಹಿರವಾಗಿ ನೇಮಕಾಗಿರುವುದು ತಿಳಿದುಬಂದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ವಜಾಗೊಳಿಸಿ (Officer Dismissed) ತೋಟಗಾರಿಕಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ತೋಟಗಾರಿಕೆ ಇಲಾಖೆಯಲ್ಲಿ ಬಸವರಾಜಪ್ಪ ನಿಂಗಪ್ಪ ಬರೇಗಾರ ದಿನಗೂಲಿ ನೌಕರನಾಗಿದ್ದುಕೊಂಡು ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆ ಬಡ್ತಿ ಪಡೆದಿದ್ದರು. 1981 ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಸೇವೆ ಸಲ್ಲಿಸಿದ್ದಾಗಿ ಸುಳ್ಳು ದಾಖಲೆ ನೀಡಿದ್ದರು. ಇದರಿಂದ 1992ರಲ್ಲಿ ತೋಟಗಾರ ಹುದ್ದೆಗೆ ನೇಮಕವಾಗಿದ್ದರು. ನಂತರ 2012ರಲ್ಲಿ ಜ್ಯೇಷ್ಠತೆಯನ್ನು ಪರಿಗಣಿಸಿ ಸಹಾಯಕ ತೋಟಗಾರಿಕೆ ಅಧಿಕಾರಿಯಾಗಿ ಮುಂಬಡ್ತಿ ನೀಡಲಾಗಿತ್ತು. ಆದರೆ ಇವರ ಹುದ್ದೆಯನ್ನು ನಿಯಮಬಾಹಿರವಾಗಿ ಸಕ್ರಮಗೊಳಿಸಲಾಗಿದೆ ಎಂದು ದೂರು ಸಲ್ಲಿಕೆಯಾಗಿತ್ತು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

1981ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಕೆಲಸ ಮಾಡಿರುವುದಾಗಿ ದಾಖಲೆ ನೀಡಿದ್ದರು. ಆದರೆ, ಆ ಅವಧಿಯಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ರೆಗ್ಯುಲರ್‌ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದರು ಎಂಬುವುದು ದೃಢಪಟ್ಟಿದೆ. 10 ವರ್ಷಗಳ ನಿರಂತರ ಸೇವೆ ಪೂರೈಸದೆ ಸಕ್ರಮಾತಿ ಷರತ್ತುಗಳನ್ನು ಉಲ್ಲಂಘಿಸಿ ನೇಮಕವಾಗಿರುವುದು ಸಮಿತಿ ಪರಿಶೀಲನೆ ವೇಳೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ನಿಂಗಪ್ಪ ಬರೇಗಾರ ಅವರನ್ನು ಇಲಾಖೆ ನಿರ್ದೇಶಕರು ಸೇವೆಯಿಂದ ವಜಾಮಾಡಿದ್ದಾರೆ.

ಜಾತಿ ನಿಂದನೆ ಆರೋಪ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ವಿರುದ್ಧ ಕೇಸ್‌

ಕಲಬುರಗಿ: ಜಾತಿ ನಿಂದನೆ ಆರೋಪದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ. ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ನಂದಪ್ಪ ನೀಡಿದ ದೂರಿನ ಮೇರೆಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ | Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

ಆ.1 ರಂದು ಸಿಯುಕೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ವೇಳೆ ಸಂಶೋಧನಾ ವಿದ್ಯಾರ್ಥಿ ನಂದಪ್ಪ ಅವರನ್ನು ವಿವಿ ಕ್ಯಾಂಪಸ್ ಒಳಗೆ ಸಿಬ್ಬಂದಿ ಬಿಟ್ಟಿಲ್ಲ. ಎಸ್‌ಸಿ ಎಂಬ ಕಾರಣಕ್ಕೆ ನನ್ನನ್ನು ಒಳಗೆ ಬಿಡಬೇಡಿ ಎಂದು ಕುಲಪತಿ ಬಟ್ಟೂ ಸತ್ಯನಾರಾಯಣ ಹಾಗೂ ಕುಲಸಚಿವ ಆರ್.ಆರ್. ಬಿರಾದಾರ್ ಹೇಳಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

Continue Reading

ಬೆಳಗಾವಿ

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Drowned in water : ಕಟಿಂಗ್‌ ಮಾಡಿಸಲು ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರಿಬ್ಬರು ನಿಯಂತ್ರಣ ತಪ್ಪಿ ಬೈಕ್‌ ಸಮೇತ ರಸ್ತೆಯ ಪಕ್ಕದ ನಾಲೆಗೆ ಬಿದ್ದಿದ್ದರು. ಒಬ್ಬ ಸಹೋದರ ಈಜಿ ದಡ ಸೇರಿದ್ದರೆ ಮತ್ತೊಬ್ಬ ನೀರುಪಾಲಾಗಿದ್ದ. ಇದೀಗ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಶವವನ್ನು ಮೇಲಿತ್ತಿದ್ದಾರೆ.

VISTARANEWS.COM


on

By

Drowned in water
Koo

ಬೆಳಗಾವಿ: ಆಯತಪ್ಪಿ ಮಾರ್ಕಂಡೇಯ ನದಿಯ (Drowned in water) ನಾಲೆಗೆ ಸಹೋದರರು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಾವಿ ತಾಲೂಕಿನ ಆಲತಗಾ ಬಳಿ ನಿನ್ನೆ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿತ್ತು.

ಓಂಕಾರ ಪಾಟೀಲ್ ಹಾಗೂ ಜ್ಯೋತಿನಾಥ ಪಾಟೀಲ್ ಎಂಬ ಸಹೋದರರು ಬೈಕ್‌ನಲ್ಲಿ ಹೋಗುತ್ತಿದ್ದರು. ಶ್ರಾವಣ ಮಾಸ ಪ್ರಾರಂಭ ಹಿನ್ನೆಲೆಯಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ತೆರಳಿದ್ದರು.

ಈ ವೇಳೆ ಆಯತಪ್ಪಿ ಇಬ್ಬರು ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಹೇಗೋ ಈಜಿ ದಡ ಸೇರಿದ್ದರು. ಆದರೆ ಇತ್ತ ಓಂಕಾರ ಪಾಟೀಲ್ ಬೈಕ್‌ ಜತೆಗೆ ಕಣ್ಮರೆಯಾಗಿದ್ದರು.

ಬಳಿಕ ನಾಪತ್ತೆಯಾಗಿದ್ದ ಓಂಕಾರ ಪಾಟೀಲ್‌ಗಾಗಿ ಶೋಧ ನಡೆಸಲಾಗಿತ್ತು. ಇದೀಗ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿದ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದ್ದಾರೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

PSI Parashuram Case: ಪಂಚಾಯತ್ ರಾಜ್‌ ಇಲಾಖೆ ಯೋಜನೆಯ 3 ಕೋಟಿ ಹಣ ಬಿಡುಗಡೆಗೂ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಕಮಿಷನ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸಾಮಾಜಿಕ ಹೋರಾಟಗಾರರೊಬ್ಬರು ದೂರು ನೀಡಿದ್ದಾರೆ.

VISTARANEWS.COM


on

PSI Parashuram Case
ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಪಂಪನಗೌಡ
Koo

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣದ (PSI Parashuram Case) ಎ2 ಆರೋಪಿ ಪಂಪನಗೌಡ (ಸನ್ನಿಗೌಡ) ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪಂಚಾಯತ್ ರಾಜ್‌ ಇಲಾಖೆ ಯೋಜನೆಯ 3 ಕೋಟಿ ಹಣ ಬಿಡುಗಡೆಗೂ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಕಮಿಷನ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಗೆ ಒತ್ತಾಯಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಭಾಧ್ಯಕ್ಷರಿಗೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದಿದ್ದಾರೆ.

ಜಿಲ್ಲೆಯ ಐದು ತಾಲೂಕಿನ ಪಂಚಾಯತ್‌ ರಾಜ್ ಯೋಜನೆ ಹಣ ಬಿಡುಗಡೆಯಾಗಿದೆ. ಆದರೆ ವಡಗೇರಾ ತಾಲೂಕಿನ ಪಂಚಾಯತಿ ರಾಜ್ ಹಣ ಬಿಡುಗಡೆ ಆಗಿಲ್ಲ. ಇದರಿಂದ ವಡಗೇರಾ ತಾಲೂಕಿನಲ್ಲಿ ಭ್ರಷ್ಟಾಚಾರದ ವಾಸನೆ ಕಂಡು ಬರುತ್ತಿದೆ. ಶಾಸಕರ ಪುತ್ರ ಸನ್ನಿಗೌಡ ಹಣ ಬಿಡುಗಡೆಗೆ ಕಮಿಷನ್ ಕೇಳಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಲಂಚಕ್ಕೆ ಬೇಡಿಕೆ ಇಟ್ಟು ಪಿಎಸ್‌ಐ ಪರಶುರಾಮ ಸಾವಿಗೆ ಕಾರಣವಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಒತ್ತಾಯಿಸಿದ್ದಾರೆ.

ಎರಡು ಪ್ರಕರಣ ಗಂಭೀರವಾಗಿ ಪರಿಗಣಿಸಿ ಶಾಸಕ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರ ವಿಧಾನಸಭಾ ಸದಸ್ಯತ್ವ ರದ್ದುಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದು ಮನವಿ ಮಾಡಿದ್ದಾರೆ.

ಯಾದಗಿರಿ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಸಿಐಡಿ ತಂಡ

ಪಿಎಸ್ಐ ಪರಶುರಾಮ ಸಾವು ಪ್ರಕರಣ ಸಂಬಂಧ ತನಿಖೆಗಾಗಿ ಯಾದಗಿರಿ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಸಿಐಡಿ ತಂಡ ಆಗಮಿಸಿದೆ. ಪ್ರಕರಣದ ಬಗ್ಗೆ ಯಾದಗಿರಿಯ ವಿವಿಧ ಠಾಣೆಗಳ ಪೊಲೀಸರಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಹೀಗಾಗಿ ಡಿವೈಎಸ್ಪಿ ಕಚೇರಿಯತ್ತ ಪೊಲೀಸ್ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ಸಿಪಿಐ ಸುನಿಲ್ ಮೂಲಿಮನಿ‌, ಗ್ರಾಮೀಣ ಠಾಣೆ ಪಿಎಸ್ಐ ಹಣಮಂತ ಬಂಕಲಗಿ ಆಗಮಿಸಿದ್ದಾರೆ.

ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣವನ್ನು (PSI Parashuram Case) ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Continue Reading

ಬೆಳಗಾವಿ

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

Assault case : ಬೇರೊಬ್ಬ ಯುವತಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್‌ಐ ಪತ್ನಿಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಹಲ್ಲೆಗೊಳಾದ ಮಹಿಳೆ ಆಸ್ಪತ್ರೆ ಪಾಲಾಗಿದ್ದು, ಪತಿಯಿಂದ ಮುಕ್ತಿಕೊಡಿಸಿ ಎಂದು ಗೋಳಾಡುತ್ತಿದ್ದಾರೆ.

VISTARANEWS.COM


on

By

assault case
Koo

ಬೆಳಗಾವಿ: ಪಿಎಸ್ಐನಿಂದ ಹೆಂಡತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ (Assault Case) ಆರೋಪ ಕೇಳಿ ಬಂದಿದೆ. ತೀವ್ರ ಹಲ್ಲೆಗೊಳಗಾದ ಪತ್ನಿ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲಾಗಿದೆ.

ಪಿಎಸ್ಐ ಉದ್ದಪ್ಪ ಕಟ್ಟಿಕಾರ್ ಎಂಬಾತ ಪತ್ನಿಗೆ ಮನಬಂದಂತೆ ಥಳಿಸಿದ್ದಾನೆ. ಪ್ರತಿಮಾ ಉದ್ದಪ್ಪ ಕಟ್ಟಿಕಾರ್ ಹಲ್ಲೆಗೊಳಗಾದವರು. ಪತಿ ಉದ್ದಪ್ಪ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಹೀಗಾಗಿ ಪತ್ನಿ ಪ್ರತಿಮಾ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಇರುವುದನ್ನು ಪ್ರಶ್ನಿಸಿದ್ದಾರೆ.

ಮಕ್ಕಳ ಆಧಾರ ಕಾರ್ಡ್, ರೇಷನ್ ಕಾರ್ಡ್ ಕೇಳಿದ್ದಕ್ಕೆ ಮಕ್ಕಳೆದರೇ ಉದ್ದಪ್ಪ, ಪ್ರತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದಂಪತಿ ರಾಮತೀರ್ಥ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪತ್ನಿ ಪ್ರತಿಮಾ ಕಣ್ಣು, ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪತಿಯಿಂದ ನನಗೆ ಮುಕ್ತಿ ಕೊಡಿಸಿ ಎಂದು ಕೈ ಮುಗಿದು ಪತ್ನಿ ಪ್ರತಿಮಾ ಗೋಳಾಡುತ್ತಿದ್ದಾರೆ. ಈ ಹಿಂದೆಯೂ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಪಿಎಸ್ಐ ವಿರುದ್ಧ ಅಂಕೋಲಾದಲ್ಲಿ ಕೇಸ್ ದಾಖಲಾಗಿತ್ತು. ಈಗ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪ್ರತಿಮಾ ಬೆಳಗಾವಿಗೆ ಬಂದಿದ್ದರು. ಅಂಕೋಲಾಕ್ಕೆ ಹೋಗಲು ನನಗೆ ಅನುಮತಿ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಚಿಕ್ಕಮಗಳೂರು: ಟ್ರಾಫಿಕ್‌ ಪೊಲೀಸ್‌ವೊಬ್ಬರು ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು (Assault Case) ಎಳೆದಿದ್ದಾರೆ. ಪರಿಣಾಮ ಸವಾರ ಬೈಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಘಟನೆ ನಡೆದಿದೆ.

ಹೆಲ್ಮೆಟ್ ಹಾಕದಿದ್ದಕ್ಕೆ ಫೈನ್ ಹಾಕುವ ಬದಲು ಟ್ರಾಫಿಕ್ ಪೊಲೀಸ್ ದೌರ್ಜನ್ಯ ಮೆರೆದಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟ್ರಾಫಿಕ್ ಸಬ್ ಇನ್‌ಸ್ಪೆಕ್ಟರ್‌ ಧನಂಜಯ್ ವರ್ತನೆಗೆ ಕಿಡಿಕಾರಿದ್ದಾರೆ. ಘಟನೆಯ ದೃಶ್ಯ ರಸ್ತೆ ಬದಿಯ‌ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಲರ್ ಪಟ್ಟಿ ಹಿಡಿದು ಎಳೆದಾಕ್ಷಣ ಬೈಕ್‌ ಸವಾರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಯುವಕನ ಕೈ-ಕಾಲುಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ರಾಫಿಕ್ ಪಿಎಸ್ಐ ಧನಂಜಯ್ ವರ್ತನೆಗೆ ‌ಸ್ಥಳದಲ್ಲೇ ಹಲವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಆಟೋ ಚಾಲಕರ ಹೊಡಿಬಡಿ

ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಾಪ್ ಚಂದ್ರ ಎಂಬಾತ ಆಟೋ ಚಾಲಕರಿಂದಲೇ ಹಲ್ಲೆಗೊಳಗಾದವರು. ಉಡುಪಿ ನಗರದ ಸಿಟಿ ಬಸ್ ಸ್ಟಾಂಡ್ ಬಳಿ ಘಟನೆ ನಡೆದಿದೆ.

ನಗರ ವ್ಯಾಪ್ತಿಯಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ಒಂದು ತಂಡದಿಂದ ಹಲ್ಲೆ ನಡೆದಿದೆ. ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದಾಗ ಕೋಪಗೊಂಡ ನಗರದ ರಿಕ್ಷಾ ಚಾಲಕರು ಪ್ರತಾಪ್ ಚಂದ್ರ ಅವರಿಗೆ ಹಲ್ಲೆ ನಡೆಸಿದ್ದಾರೆ. ಉಡುಪಿ ನಗರದ ವ್ಯಾಪ್ತಿಯಲ್ಲಿರುವ ರಿಕ್ಷಾ ಸ್ಟ್ಯಾಂಡ್‌ಗಳಲ್ಲಿ ಎಲ್ಲಿಯೂ ರಿಕ್ಷಾ ನಿಲ್ಲಿಸದಂತೆ ತಾಕೀತು ಮಾಡಿದ್ದಾರೆ. ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆಟೋ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Filmfare South 2024 mollywood tollywood 69th Filmfare Awards
South Cinema21 mins ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; ತೆಲುಗು, ತಮಿಳು ಹಾಗೂ ಮಲಯಾಳಂ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Amith Shah
ದೇಶ27 mins ago

Amit Shah: 2029ರ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು, ಕಾಂಗ್ರೆಸ್‌ ಪ್ರತಿಪಕ್ಷದಲ್ಲೇ; ಅಮಿತ್‌ ಶಾ ಭವಿಷ್ಯ

HD Deve Gowda
ದೇಶ29 mins ago

HD Deve Gowda: ದೆಹಲಿ ಮೆಟ್ರೋದಲ್ಲಿ ಸಂಚರಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಕ್ರೀಡೆ33 mins ago

Paris Olympics: ಶೂಟೌಟ್​ನಲ್ಲಿ ಗೆದ್ದು ಸೆಮಿಗೆ ಲಗ್ಗೆಯಿಟ್ಟ ಭಾರತ; ಒಲಿಂಪಿಕ್ಸ್​ನಿಂದ ಗ್ರೇಟ್​ ಬ್ರಿಟನ್ ಕಿಕ್​ ಔಟ್​

ಕರ್ನಾಟಕ58 mins ago

Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ

Dhruva Sarja martin trailer Out
ಸ್ಯಾಂಡಲ್ ವುಡ್60 mins ago

Dhruva Sarja : ʻಮಾರ್ಟಿನ್’ ಟ್ರೈಲರ್ ಬಿಡುಗಡೆ: ಧ್ರುವ ಸರ್ಜಾ ಅಭಿಮಾನಿಗಳ ಅಬ್ಬರ ಬಲು ಜೋರು!

Drowned in water
ಬೆಳಗಾವಿ1 hour ago

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

PSI Parashuram Case
ಕರ್ನಾಟಕ2 hours ago

PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

Wayanad Landslide
ದೇಶ2 hours ago

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Vastu Tips
ಧಾರ್ಮಿಕ2 hours ago

Vastu Tips: ಮನೆ ಸಂತೋಷದ ತಾಣವಾಗಬೇಕೆಂದರೆ ಮಲಗುವ ಕೋಣೆ ಹೀಗಿರಲಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌