Kalaburagi News: ಕಲಬುರಗಿಯ ಚಿಂಚೋಳಿಯಲ್ಲಿ ಜನತಾ ದರ್ಶನ; ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ Vistara News

ಕರ್ನಾಟಕ

Kalaburagi News: ಕಲಬುರಗಿಯ ಚಿಂಚೋಳಿಯಲ್ಲಿ ಜನತಾ ದರ್ಶನ; ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ

Kalaburagi News: ಕಲಬುರಗಿ ಜಿಲ್ಲೆಯ ಗಡಿ ತಾಲೂಕು ಚಿಂಚೋಳಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದುಕೊರತೆ ಆಲಿಸುವ ಜನತಾ ದರ್ಶನ ಕಾರ್ಯಕ್ರಮ ಜರುಗಿತು.

VISTARANEWS.COM


on

Minister Priyank Kharge drives for Janata Darshan programme in Chincholi
ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಸೋಮವಾರ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಜಿಲ್ಲೆಯ ಗಡಿ ತಾಲೂಕು ಚಿಂಚೋಳಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದುಕೊರತೆ ಆಲಿಸುವ ಚೊಚ್ಚಲ ಜನತಾ ದರ್ಶನ (Janata Darshan) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ವಿವಿಧ ಇಲಾಖೆಗಳಿಂದ ಸರ್ಕಾರಿ ಯೋಜನೆಗಳ ಕುರಿತು ಅರಿವು ಮೂಡಿಸಲು ತೆರೆಯಲಾದ ಮಳಿಗೆಗಳನ್ನು ಉದ್ಘಾಟಿಸಿದರು.

ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?

ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಹಾರ, ಕೃಷಿ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ರೇಷ್ಮೆ , ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ಚಿಂಚೋಳಿ ಪುರಸಭೆ, ಕಾರ್ಮಿಕ, ಪೊಲೀಸ್, ಕಂದಾಯ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹೀಗೆ ಪ್ರಮುಖ ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆ.ವೈ.ಸಿ., ವೋಟರ್ ಐ.ಡಿ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ‌ ಸಮಸ್ಯೆ ಬಗೆಹರಿಸಲು ಸಿಬ್ಬಂದಿ, ಸ್ಥಳದಲ್ಲಿಯೇ ಇದ್ದು ಸಾರ್ವಜನಿಕರ‌ ಸಮಸ್ಯೆಗೆ ಸ್ಪಂದಿಸಿದರು.

ಅರ್ಜಿ ಸ್ವೀಕಾರ ಕೌಂಟರ್‌ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ‌, ವೀಕ್ಷಿಸಿದರು. ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ಇದಕ್ಕೂ ಮುನ್ನ ಕ್ರೀಡಾಂಗಣ ಅವರಣದಲ್ಲಿ ಸಚಿವರು ಸಸಿ‌ ನೆಟ್ಟು ನೀರುಣಿಸಿದರು.

ಇದನ್ನೂ ಓದಿ: Asian Games 2023: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್​ ತಂಡ; ಲಂಕಾ ವಿರುದ್ಧ ರೋಚಕ ಜಯ

ಈ ಸಂದರ್ಭದಲ್ಲಿ ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ತಿಪ್ಪಣಪ್ಪ ಕಮಕನೂರ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿ.ಪಂ. ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ.ಅಡ್ಡೂರು ಶ್ರೀನಿವಾಸಲು,‌ ಡಿ.ಎಫ್.ಓ. ಸುಮಿತ್ ಕುಮಾರ್, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತ‌ ಆಶಪ್ಪ ಪೂಜಾರಿ, ಚಿಂಚೋಳಿ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ, ತಾಲೂಕು ಪಂಚಾಯಿತಿ ಇ.ಓ. ಶಂಕರ ರಾಠೋಡ ಸೇರಿದಂತೆ ಇತರೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shirshendu Mukhopadhyay: ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಶೀರ್ಷೇಂಧು ಮುಖ್ಯೋಪಧ್ಯಾಯ ಆಯ್ಕೆ

Shirshendu Mukhopadhyay: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಿಂದ ನೀಡುವ 2023ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಬಂಗಾಳಿ ಸುಪ್ರಸಿದ್ಧ ಬರಹಗಾರ ಶೀರ್ಷೇಂಧು ಮುಖ್ಯೋಪಧ್ಯಾಯ ಆಯ್ಕೆಯಾಗಿದ್ದಾರೆ.

VISTARANEWS.COM


on

Shirshendu Mukhopadhyay
Koo

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಿಂದ ನೀಡುವ ʼಕುವೆಂಪು ರಾಷ್ಟ್ರೀಯ ಪುರಸ್ಕಾರ-2023ʼ ಕ್ಕೆ ಬಂಗಾಳಿ ಭಾಷೆಯ ಸುಪ್ರಸಿದ್ಧ ಬರಹಗಾರರಾದ ಶೀರ್ಷೇಂಧು ಮುಖ್ಯೋಪಧ್ಯಾಯ (Shirshendu Mukhopadhyay) ಆಯ್ಕೆ ಆಗಿದ್ದಾರೆ. ನವೆಂಬರ್ 17ರಂದು ಬೆಂಗಳೂರಿನಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್. ಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಶೀರ್ಷೇಂಧು ಮುಖ್ಯೋಪಧ್ಯಾಯ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಪ್ರತಿಷ್ಠಾನದ ಸಹಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಸಂಚಾಲಕರಾಗಿದ್ದ ಆಯ್ಕೆ ಸಮಿತಿಯಲ್ಲಿ ನಿರ್ಮಲ್ ಕಾಂತಿ ಭಟ್ಟಾಚಾರ್ಯ, ಗೀತಾ ವಿಜಯಕುಮಾರ್ ಹಾಗೂ ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿಗಳಾದ ಅಗ್ರಹಾರ ಕೃಷ್ಣಮೂರ್ತಿಯವರು ತೀರ್ಪುಗಾರರಾಗಿದ್ದರು.

ಬಂಗಾಳಿ ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ ಮಹತ್ವದ ಕೃತಿಗಳ ಮೂಲಕ ಹೆಚ್ಚಿಸಿದ, ವರ್ತಮಾನದ ಬಹು ಮಹತ್ವದ ಮತ್ತು ಜನಪ್ರಿಯ ಲೇಖಕರಾದ ಶೀರ್ಷೇಂಧು ಮುಖ್ಯೋಪಧ್ಯಾಯ ಅವರನ್ನು 2023ರ “ಕುವೆಂಪು ರಾಷ್ಟ್ರೀಯ ಪುರಸ್ಕಾರ’ಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ | Raja Marga Column: ಇವರು ಡಾ. ಪ್ರದೀಪ್‌ ಕುಮಾರ್‌ ಹೆಬ್ರಿ; 511 ಪುಸ್ತಕ, 19 ಮಹಾಕಾವ್ಯ!

ಜನಪ್ರಿಯ ಬರಹಗಾರರಾಗಿರುವ ಶೀರ್ಷೇಂಧು ಅವರು ತಮ್ಮ ಹೊಸತನದ ಬರವಣಿಗೆಗಳಿಂದ ಬಂಗಾಳಿ ಭಾಷಾ ಸಾಹಿತ್ಯವನ್ನೂ, ತನ್ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸಕಥನ. ಮಕ್ಕಳ ಪುಸ್ತಕಗಳು ಸೇರಿ ಸುಮಾರು 90 ಕೃತಿಗಳು ಇದುವರೆಗೆ ಪ್ರಕಟವಾಗಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನವೂ ಸೇರಿದಂತೆ ಹಲವಾರು ಪುರಸ್ಕಾರಗಳು ಶೀರ್ಷೇಂಧು ಅವರಿಗೆ ದೊರೆತಿವೆ.

ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನವಾದ ಡಿಸೆಂಬರ್‌ 29ರಂದು ಶೀರ್ಷೇಂಧು ಮುಖ್ಯೋಪಧ್ಯಾಯ ಅವರಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಐದು ಲಕ್ಷ ರೂಪಾಯಿ ಮತ್ತು ಬೆಳ್ಳಿ ಪದಕಗಳನ್ನು ಒಳಗೊಂಡಿರುತ್ತದೆ.

ಶೀರ್ಷೇಂಧು ಮುಖ್ಯೋಪಧ್ಯಾಯ ಪರಿಚಯ

ಬಂಗಾಳಿ ಭಾಷೆಯ ಮಹತ್ವದ ಕಥೆಗಾರರಾದ ಶೀರ್ಷೇಂದು ಮುಖ್ಯೋಪಧ್ಯಾಯ ಅವರು, ಬ್ರಿಟಿಷ್ ಇಂಡಿಯಾದ (ಪ್ರಸ್ತುತ ಬಾಂಗ್ಲಾದೇಶದ) ಮೈಮೆನ್ಸಿಂಗ್ ಎಂಬಲ್ಲಿ 1935ರ ನವೆಂಬರ್ 9ರಂದು ಜನಿಸಿದರು. ಭಾರತ ವಿಭಜನೆಯ ಸಂದರ್ಭದಲ್ಲಿ ಅವರ ಕುಟುಂಬ ಕೋಲ್ಕತ್ತಾಗೆ ವಲಸೆ ಬಂದಿತ್ತು. ಆಗ ಶೀರ್ಷೇಂಧು 2 ವರ್ಷದ ಬಾಲಕ. ಅವರ ತಂದೆ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದರಿಂದ, ಶೀರ್ಷೇಂಧು ಅವರ ಬಾಲ್ಯ ಮತ್ತು ಪ್ರಾರಂಭದ ಶಿಕ್ಷಣ ಅವಿಭಜಿತ ಬಂಗಾಳ, ಅಸ್ಸಾಂ ಮತ್ತು ಬಿಹಾರದಲ್ಲಿ ಕಳೆಯಿತು. ಕೂಚ್‌ಬಿಹಾರ್‌ನ ವಿಕ್ಟೋರಿಯಾ ಕಾಲೇಜಿನಲ್ಲಿ ಇಂಟರ್‌ಮಿಡಿಯೇಟ್ ಪಾಸಾದ ಅವರು, ಕೋಲ್ಕೊತಾ ವಿಶ್ವವಿದ್ಯಾಲಯದಿಂದ ಬಂಗಾಳಿ ಭಾಷೆಯಲ್ಲಿ ಸ್ನಾತಕ ಪದವಿ ಪಡೆದರು.

ಶಾಲಾಶಿಕ್ಷಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಶೀರ್ಷೇಂಧು ಅವರು, ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ‘ದೇಶ್’ ಎಂಬ ಬಂಗಾಳಿ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಈಗಲೂ ಆನಂದ ಬಜಾರ್ ಪತ್ರಿಕೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ. 1959ರಲ್ಲಿ ಶೀರ್ಷೇಂಧು ಅವರ ಮೊದಲ ಕಥೆ ‘ದೇಶ್’ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಅವರ ಮೊದಲ ಕಾದಂಬರಿ ಘುನ್ಫೋಕ (Ghunpoka) 1967ರಲ್ಲಿ ದೇಶ್ ಪತ್ರಿಕೆಯ ‘ಪೂಜಾ’ ವಾರ್ಷಿಕ ಸಂಪುಟದಲ್ಲಿ ಪ್ರಕಟವಾಗಿತ್ತು. ಮೊದಲ ಮಕ್ಕಳ ಪುಸ್ತಕ ಮನೋಜ್‌ದೇರ್ ಅದ್ಭುತ್ ಬಾರಿ (Manojader Adbhut Bari) 1978ರಲ್ಲಿ ಪ್ರಕಟವಾಯಿತು. ಬರಹಗಾರರಾಗಿ ಜನಪ್ರಿಯರಾಗಿರುವ ಶೀರ್ಷೇಂಧು ಅವರು, ಇಲ್ಲಿಯವರೆಗೆ 90ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ 50 ಕೃತಿಗಳು ಮಕ್ಕಳಿಗಾಗಿ ಬರೆದ ಪುಸ್ತಕಗಳೇ ಆಗಿರುವುದು ವಿಶೇಷ.

ಇವರ ಹಲವಾರು ಕತೆಗಳು, ಮಕ್ಕಳಿಗಾಗಿ ಕಾಮಿಕ್ ರೂಪದಲ್ಲಿ ಪ್ರಕಟವಾಗಿವೆ. ಜೊತೆಗೆ, ಹೊಸತಲೆಮಾರಿನ ಓದುಗರಿಗೆ ಸುಲಭವಾಗಿ ಲಭ್ಯವಾಗುವಂತೆ ಇವರ ಹಲವಾರು ಕತೆ ಕಾದಂಬರಿಗಳು ಈ ಪುಸ್ತಕಗಳಾಗಿಯೂ ಆನ್‌ಲೈನ್‌ನಲ್ಲಿ ಲಭ್ಯವಿವೆ. ಆದ್ದರಿಂದ ಬಂಗಾಳಿಯಲ್ಲಿ ಶೀರ್ಷೇಂದು ಅವರು ಅಬಾಲಾವೃದ್ಧರಾದಿಯಾಗಿ ಎಲ್ಲರಿಗೂ ಚಿರಪರಿಚಿತರಾಗಿರುವ ಅತ್ಯಂತ ಜನಪ್ರಿಯ ಲೇಖಕ ಎನ್ನಬಹುದು.

ಪಾರ್ತಿಬೊ (Parthibo), ನಯನ್‌ ಶ್ಯಾಮ್ (Nayan Shyama), ಪರಪರ್ (Parapar), ದುರ್ಬೀನ್ (Durbin), ಏಕಾದಶಿ ಓ ಭೂತ್ (Ekadashi O Bhoot) ಮೊದಲಾದ ಕೃತಿಗಳು ಅವರಿಗೆ ಅತ್ಯಂತ ಜನಪ್ರಿಯತೆಯನ್ನು ತಂದುಕೊಟ್ಟಿವೆ. ಭ್ರಮಣ್ ಸಮಗ್ರ (BHRAMAN SAMAGRA) ಅವರ ಪ್ರವಾಸ ಕಥನ, ಬಂಗಾಳಿಯಲ್ಲಿ ಅತ್ಯಂತ ಹೆಚ್ಚು ಮಾರಾಟವಾದ ಕೃತಿಯೂ ಹೌದು.

ಇವರ ಕತೆಗಳ ಗಟ್ಟಿತನದಿಂದಾಗಿ, ಸಿನಿಮಾ ಕ್ಷೇತ್ರದ ಸಂಪರ್ಕವೂ ಅನಾಯಾಸವಾಗಿ ದೊರೆತಿರುತ್ತದೆ. 1992ರಲ್ಲಿ ರಿತುಪರ್ಣೋ ಅವರ ನಿರ್ದೇಶನದಲ್ಲಿ ತಯಾರಾಗಿ ಬಿಡುಗಡೆಯಾದ, ಶೀರ್ಷೇಂಧು ಅವರ ಹೈರೇರ್ ಅಂಗ್ತಿ (Hirer Angti ) ಕಥೆಯಾಧಾರಿತ, ಅದೇ ಹೆಸರಿನ ಸಿನಿಮಾದಿಂದ ಪ್ರಾರಂಭಿಸಿ, ಇದುವರೆಗೆ 17 ಸಿನಿಮಾಗಳು ಇವರ ಕಥೆ-ಕಾದಂಬರಿಯನ್ನು ಆಧರಿಸಿ ಬಂದಿವೆ. ಬಹುತೇಕ ಬಂಗಾಳಿಯ ಎಲ್ಲ ಪ್ರಮುಖ ಸಿನಿಮಾ ನಿರ್ದೇಶಕರೂ ಇವರ ಕಥೆ ಕಾದಂಬರಿಗಳನ್ನು ಆಧರಿಸಿ ಸಿನಿಮಾ ಮಾಡಿರುವುದು ವಿಶೇಷ.

ಇದನ್ನೂ ಓದಿ | Mallepuram G Venkatesh: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಆತ್ಮಕಥನ ʼದಿಟದ ದೀವಟಿಗೆʼ ಲೋಕಾರ್ಪಣೆ

ಜನಪ್ರಿಯ ಕತೆಗಾರರಾಗಿರುವ ಶೀರ್ಷೇಂಧು ಅವರನ್ನು ಸಹಜವಾಗಿ ಹಲವಾರು ಸಾಹಿತ್ಯ ಪುರಸ್ಕಾರಗಳೂ ಹುಡುಕಿಕೊಂಡು ಬಂದಿವೆ. ಮುಖ್ಯವಾಗಿ, ಮಕ್ಕಳ ಸಾಹಿತ್ಯಕ್ಕಾಗಿ ವಿದ್ಯಾಸಾಗರ ಪುರಸ್ಕಾರ (1985), ಎರಡು ಬಾರಿ ಆನಂದ ಪುರಸ್ಕಾರ (1973 ಮತ್ತು 1990), ಮನಬ್ಜಮಿನ್ (Manahjamin) ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಬಹುಮಾನ (19689), ಬಂಗಬಿಭೂಷಣ್ ಪ್ರಶಸ್ತಿ (2012), ಎ.ಬಿ.ಪಿ. ಆನಂದ ಸೆರ ಬಂಗಾಳಿ ಪ್ರಶಸ್ತಿ ಮೊದಲಾದವು ಸೇರಿವೆ. ಇದಲ್ಲದೆ. 2021ರಲ್ಲಿ ಸಾಹಿತ್ಯ ಅಕಾಡೆಮಿಯ ಫೆಲೋಶಿಪ್ ಕೂಡಾ ದೊರೆತಿರುತ್ತದೆ. ಅಶೋಕ್ ವಿಶ್ವನಾಥನ್‌ ಎಂಬುವವರು, ಸಾಹಿತ್ಯ ಅಕಾಡೆಮಿಗಾಗಿ ಶೀರ್ಷೇಂದು ಮುಖ್ಯೋಪಧ್ಯಾಯ್ ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

Continue Reading

ಕರ್ನಾಟಕ

CM Siddaramaiah: ಹಜರತ್ ಬಾದ್ ಶಾ ಪೀರಾನ್ ದರ್ಗಾ ಅಭಿವೃದ್ಧಿಗೆ ಅಗತ್ಯ ಅನುದಾನ: ಸಿದ್ದರಾಮಯ್ಯ

CM Siddaramaiah: ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

Siddaramaiah
Koo

ಹುಬ್ಬಳ್ಳಿ: ಸಮಾಜದಲ್ಲಿ ವೈವಿಧ್ಯತೆ ಇದೆ. ಸಹಿಷ್ಣತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ. ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹುಟ್ಟುವಾಗ ವಿಶ್ವ ಮಾನವರಾಗಿರುವ ಎಲ್ಲರೂ ಕೊನೆಯವರೆಗೂ ವಿಶ್ವ ಮಾನವರಾಗಿಯೇ ಉಳಿಯಬೇಕು. ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ. ಪರಸ್ಪರ ಪ್ರೀತಿ , ವಿಶ್ವಾಸ ಮತ್ತು ಬಾಂದವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ ಎಂದು ಮೆಚ್ಚುಗೆ ಸೂಚಿಸಿದರು.

ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, “ಇವ ನಮ್ಮವ ಇವ ನಮ್ಮವ” ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಷದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು.

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಇದನ್ನೂ ಓದಿ | Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾವೇಷದ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಸಹಮದ್ ಸೇರಿ ಹಲವಾರು ಶಾಸಕರು ಮತ್ತು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

VISTARA TOP 10 NEWS : ಮೋದಿ ಗೆಲ್ಲಿಸಿದ ಮಹಿಳೆಯರು, ಭವಾನಿ ದರ್ಪಕ್ಕೆ ಎಲ್ಲೆಡೆ ಆಕ್ರೋಶ ಮತ್ತಿತರ ದಿನದ ಪ್ರಮುಖ ಸುದ್ದಿಗಳು

ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news
Koo

1. ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?
ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2023) ಪ್ರಕಟವಾಗಿದ್ದು, ತೆಲಂಗಾಣ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಭರಪೂರ ಉಚಿತ ಕೊಡುಗೆಗಳ ‘ಗ್ಯಾರಂಟಿ’ ನೀಡಿದ್ದರೂ ಜನ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಬಿಜೆಪಿ ಮೂರೂ ರಾಜ್ಯಗಳಲ್ಲಿ ಗೆಲುವು ಸಾಧಿಸಲು ನಾನಾ ಕಾರಣಗಳಿದ್ದರೂ, ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿರುವುದು ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಗೃಹಿಣಿಯರು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ನೀಡಿದ್ದು ಚುನಾವಣೆಯಲ್ಲಿ ಟರ್ನಿಂಗ್‌ ಪಾಯಿಂಟ್‌ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಹಾಗಾದರೆ, ಮೂರೂ ರಾಜ್ಯಗಳಲ್ಲಿ ಬಿಜೆಪಿಯು ಹೆಣ್ಣುಮಕ್ಕಳನ್ನು ಸೆಳೆದಿದ್ದು ಹೇಗೆ? ಯಾವ ಯೋಜನೆಗಳು ಸ್ತ್ರೀಯರ ಮತಗಳನ್ನು ವಾಲಿಸಿದವು ಎಂಬುದರ ಕಿರು ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಇಂದಿರಾ ಗಾಂಧಿಗೆ ಭದ್ರತಾ ಅಧಿಕಾರಿಯಾಗಿದ್ದ ಲಾಲದುಹೋಮಾ ಈಗ ಮಿಜೋರಾಂ ಸಿಎಂ!
ಇದನ್ನೂ ಓದಿ : Mizoram Election Results: ಎಂಎನ್‌ಎಫ್‌ಗೆ ಭಾರೀ ಸೋಲು, ಮಿಜೋರಾಂನಲ್ಲಿ ಇನ್ನು ಜೆಡ್‌ಪಿಎಂ ಆಡಳಿತ
ಇದನ್ನೂ ಓದಿ : ಕಾಂಗ್ರೆಸ್‌ಗೆ ಸೋಲು; ಇಂಡಿಯಾ ಕೂಟದಲ್ಲಿ ತಳಮಳ! ನಾಯಕತ್ವಕ್ಕೆ ಹಲವರ ಗಾಳ!

2. ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!
ಮುಂಬೈ: ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ (Assembly Election Results 2023) ಬೆನ್ನಲ್ಲೇ ದೇಶದ ಷೇರುಪೇಟೆಯಲ್ಲಿ (Stock Market) ಹೊಸ ಉತ್ಸಾಹ ಮೂಡಿದೆ. ಸೋಮವಾರ ನಿಫ್ಟಿ, ಸೆನ್ಸೆಕ್ಸ್‌ ದಾಖಲೆಯ ಏರಿಕೆ ಕಂಡಿದ್ದು, ಚುನಾವಣೆ ಫಲಿತಾಂಶವೇ ಇದಕ್ಕೆ ಕಾರಣ ಎಂದು ಷೇರುಪೇಟೆ ತಜ್ಞರು ತಿಳಿಸಿದ್ದಾರೆ. ಮತ್ತೊಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯವೂ ಸುಧಾರಿಸಿಕೊಂಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

3. ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ
ಬೆಳಗಾವಿ: ರಾಜ್ಯದಲ್ಲಿ ಈಗಲೂ ಭ್ರೂಣ ಲಿಂಗ ಪತ್ತೆ (Gender Detection) ಮತ್ತು ಭ್ರೂಣ ಹತ್ಯೆಯ (Foeticide Case) ಬೃಹತ್ ಜಾಲ ಇರುವುದರ ಬಗ್ಗೆ ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಕಳವಳವನ್ನು ವ್ಯಕ್ತಪಡಿಸಲಾಗಿದೆ. ಈಗಾಗಲೇ ಸಾವಿರಕ್ಕೂ ಹೆಚ್ಚು ಭ್ರೂಣಗಳನ್ನು ಹತ್ಯೆ ಮಾಡಿರುವ ಘೋರ ಕೃತ್ಯದ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಅಲ್ಲದೆ, ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಎಂಬ ಸಲಹೆಗಳೂ ಕೇಳಿಬಂದಿವೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

4. ಸಾಯೋಕೆ ನನ್ನ 1.5 ಕೋಟಿ ಕಾರೇ ಬೇಕಾ?; ಭವಾನಿ ರೇವಣ್ಣ ದರ್ಪಕ್ಕೆ ಎಲ್ಲೆಡೆ ಆಕ್ರೋಶ
ಮೈಸೂರು: ಸಾಯಂಗಿದ್ರೆ ಬಸ್ಸಿಗೆ ಸಿಕ್ಕಿ ಸಾಯಬೇಕಿತ್ತು. ಸಾಯೋಕೆ ನನ್ ಕಾರೇ ಬೇಕಿತ್ತಾ? ಅವನು ಸತ್ತೋಗ್ತಾನೆ ಅಂತ ಅವನ ಬಗ್ಗೆ ಯಾಕೆ ಯೋಚನೆ ಮಾಡ್ತೀಯಾ? ಒಂದೂವರೆ ಕೋಟಿ ರೂಪಾಯಿ ಕಾರು ಬಗ್ಗೆ ಯೋಚನೆ ಮಾಡು: ಬೈಕೊಂದು ತಮ್ಮ ಕಾರಿಗೆ ಡಿಕ್ಕಿ ಹೊಡೆದ (Bike hits Car) ಸಂದರ್ಭದಲ್ಲಿ ಹಿರಿಯ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ (Bhavani Revanna) ಅವರು ಆಡಿದ ಮಾತುಗಳಿವು. ದೇವೇಗೌಡರ ಮನೆ ಸೊಸೆಯಾಗಿ (Daughter in law of HD Devegowda), ಸದಾ ಜನರೇ ನನ್ನ ದೇವರು ಎನ್ನುವ ಎಚ್‌.ಡಿ ರೇವಣ್ಣ (HD Revanna) ಅವರ ಪತ್ನಿಯಾಗಿ ಜನರ ಬಗ್ಗೆ ಕರುಣೆ ಹೊಂದಿರಬೇಕಾದ ಹೆಣ್ಮಗಳು ನಡು ರಸ್ತೆಯಲ್ಲಿ ಈ ರೀತಿ ದರ್ಪದ ಮಾತು ಆಡಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಜತೆಗೆ ಆಕ್ರೋಶವೂ ವ್ಯಕ್ತವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಇದನ್ನೂ ಓದಿ : Bhavani Revanna : ಅದು ನಮ್ಮ ಕಾರಲ್ಲ ಫ್ರೆಂಡ್‌ದು ಎಂದ ರೇವಣ್ಣ; ಭವಾನಿ ತಪ್ಪಿಗೂ ಕ್ಷಮೆ ಕೇಳಿದ್ರು!
ಇದನ್ನೂ ಓದಿ : Bhavani Revanna : ಭವಾನಿ ರೇವಣ್ಣರ 1.5 ಕೋಟಿಯ ಕಾರು ಯಾವುದು? ಅದರ ವಿಶೇಷತೆಯೇನು?

5. 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು; ಒಂಟಿ ಸಲಗ ದಾಳಿಯಿಂದ ದುರ್ಘಟನೆ
ಹಾಸನ: ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ (Dasara Elephant Arjuna) ಮೃತಪಟ್ಟಿದೆ. ಸಕಲೇಶಪುರ ತಾಲೂಕಿನ‌ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡು ಅರ್ಜುನ (Dasara Elephant Arjuna) ಕೊನೆಯುಸಿರೆಳೆದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

6. ಮಿಚುಂಗ್ ಚಂಡಮಾರುತ ಎಫೆಕ್ಟ್‌; ನಾಳೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಹಲವು ಕಡೆ ಮಂಗಳವಾರ (ಡಿ. 5) ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಅಲ್ಲದೆ, ಗಾಳಿಯ ವೇಗವೂ ಹೆಚ್ಚಳಗೊಳ್ಳಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ. ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

7. ಪಿಎಸ್‌ಐ ಪರೀಕ್ಷೆ ಮುಂದೂಡಿಕೆ, ಜ. 23ಕ್ಕೆ ಫಿಕ್ಸ್‌: ಗೃಹ ಸಚಿವರ ಘೋಷಣೆ
ಬೆಂಗಳೂರು: ಪಿಎಸ್‌ಐ ಪರೀಕ್ಷೆ (PSI Exam) ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ (Congress Government) ಗುಡ್ ನ್ಯೂಸ್ ಕೊಟ್ಟಿದೆ. ಈ ವಿಷಯ ಸದನದಲ್ಲಿ ಪ್ರಸ್ತಾಪವಾಗಿದ್ದು, ಒಂದು ತಿಂಗಳು ಪರೀಕ್ಷೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Home Minister Dr G Parameshwara) ಘೋಷಿಸಿದ್ದಾರೆ. ಇದರನ್ವಯ ಜನವರಿ 23ಕ್ಕೆ ಮುಂದೂಡಿಕೆಯಾದಂತೆ ಆಗಿದೆ ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

8. ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು
ಹೈದರಾಬಾದ್:‌ ತೆಲಂಗಾಣದ ಮೇಡಕ್‌ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ತರಬೇತಿ ವಿಮಾನವೊಂದು ಪತನಗೊಂಡಿದ್ದು (Aircraft Crash), ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಟೂಪ್ರಾನ್‌ ಪಟ್ಟಣದ ರಾವೆಳ್ಳಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಸೋಮವಾರ (ಡಿಸೆಂಬರ್‌ 4) ವಿಮಾನ ಪತನಗೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರು ಪೈಲಟ್‌ಗಳು (Two Pilots Dead) ಮೃತಪಟ್ಟಿದ್ದಾರೆ ಎಂದು ವಾಯುಪಡೆ ಮಾಹಿತಿ ನೀಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

9. ಬಿಗ್‌ಬಾಸ್‌ನಲ್ಲಿ ಬಾಲಿವುಡ್‌ನವರನ್ನು ಮೀರಿಸಿದ ಕಿಚ್ಚ ಸುದೀಪ್‌ ಡ್ರೆಸ್‌! ಏನಿದರ ಸ್ಪೆಷಲ್‌?
ಬೆಂಗಳೂರು: ಪ್ರತಿವಾರ ಬಿಗ್‌ಬಾಸ್‌ನಲ್ಲಿ ಕಿಚ್ಚ ಸುದೀಪ್‌ ಯಾವ ಔಟ್‌ಫಿಟ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಕೇವಲ ಅವರ ಅಭಿಮಾನಿಗಳಿಗಷ್ಟೇ ಅಲ್ಲ, ಫ್ಯಾಷನ್‌ ಪ್ರಿಯರಿಗೂ ಕುತೂಹಲವಿರುತ್ತದೆ. ಹೌದು. ಸುದೀಪ್‌ರವರು ಪ್ರತಿ ವೀಕೆಂಡ್‌ನಲ್ಲಿ ಧರಿಸುವ ಒಂದೊಂದು ಡಿಫರೆಂಟ್‌ ಔಟ್‌ಫಿಟ್‌ಗಳು ನೋಡುಗರ ಕಣ್ಣರಳಿಸುತ್ತವೆ. ಕೆಲವೊಮ್ಮೆ ಬಾಲಿವುಡ್‌ಗರನ್ನು ಮೀರಿಸುವಂತಹ ಹುಬ್ಬೇರಿಸುವಂತಹ ಫ್ಯೂಶನ್‌ ಡಿಸೈನರ್‌ವೇರ್‌ಗಳನ್ನು ಕಾಣಬಹುದು. ಈ ಡಿಸೈನರ್‌ವೇರ್‌ಗಳ ಹಿಂದಿರುವ ಡಿಸೈನರ್‌ಗಳ್ಯಾರು? ಡಿಸೈನ್‌ ಆಯ್ಕೆ ಹೇಗೆ? ಅಷ್ಟ್ಯಾಕೆ ದುಬಾರಿ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ವಿವರ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

10. ಪ್ರೀತಿಯಿಂದ ಸಾಕಿದ ಬೆಕ್ಕು ಕಚ್ಚಿ ತಂದೆ, ಮಗನ ದಾರುಣ ಸಾವು!
ಕಾನ್ಪುರ್: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ (Kanpur City) ಸಾಕು ಬೆಕ್ಕು (Pet Cat) ಕಚ್ಚಿದ ಕಾರಣಕ್ಕೆ (Cat Bite) ತಂದೆ ಮತ್ತು ಮಗ ಇಬ್ಬರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ(Father and Son). ಮೃತರಿಗೆ ಕಚ್ಚಿದ ಬೆಕ್ಕಿಗೆ, ಬೀದಿ ನಾಯಿಯೊಂದು ಕಚ್ಚಿತ್ತು. ಅದೇ ಬೆಕ್ಕು ತಂದೆ ಮತ್ತು ಮಗ ಇಬ್ಬರಿಗೂ ಕಚ್ಚಿದ್ದರಿಂದ ಅವರಿಗೆ ಮಾರಣಾಂತಿಕ ರೇಬೀಸ್ ಸೋಂಕು (rabies virus) ತಗುಲಿ, ಅಂತಿಮವಾಗಿ ಮೃತಪಟ್ಟರು. ಇವರಿಬ್ಬರೂ ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

Continue Reading

ಕರ್ನಾಟಕ

Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

Dasara Elephant Arjuna: ಕಾರ್ಯಾಚರಣೆ ವೇಳೆ ಕಾಡಾನೆ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ದಸರಾ ಆನೆ ಅರ್ಜುನ ಸಾವಿಗೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.

VISTARANEWS.COM


on

Dasara Elephant Arjuna
Koo

ಬೆಂಗಳೂರು: ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗದ ವಿರುದ್ಧ ಹೋರಾಡಿ ಮೃತಪಟ್ಟ ದಸರಾ ಆನೆ ಅರ್ಜುನನ (Dasara Elephant Arjuna) ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ನಟ ದರ್ಶನ್‌ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ (Dasara Elephant Arjuna) ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಸಕಲೇಶಪುರ ತಾಲೂಕಿನ‌ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಮೃತಪಟ್ಟಿದೆ. ಒಂಟಿ ಸಲಗ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡು ಅರ್ಜುನ (Dasara Elephant Arjuna) ಕೊನೆಯುಸಿರೆಳೆದಿದೆ. ಹೀಗಾಗಿ ಜನರ ಪ್ರೀತಿಪಾತ್ರವಾಗಿದ್ದ ದಸರಾ ಆನೆಯ ಸೇವೆಯನ್ನು ಗಣ್ಯರು ಸ್ಮರಿಸಿದ್ದಾರೆ.

‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು ಎಂದ ಸಿಎಂ

ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು. ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ.‌

ಇದನ್ನೂ ಓದಿ | Dasara Elephant Arjuna: 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು; ಒಂಟಿ ಸಲಗ ದಾಳಿಯಿಂದ ದುರ್ಘಟನೆ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಂತಾಪ

ದಸರಾ ಆನೆ ಅರ್ಜುನ ಸಾವಿಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ ಎಂದು ಹೇಳಿದ್ದಾರೆ.

ಅರ್ಜುನ ಮರಣದ ಸುದ್ದಿ ತೀವ್ರ ನೋವುಂಟು ಮಾಡಿದೆ: ಬೊಮ್ಮಾಯಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ, ಆನೆಗಳ ಕಾರ್ಯಾಚರಣೆ ವೇಳೆ ವೀರ ಮರಣರಾಗಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ

ಮರೆಯಲಾರದ ನೆನಪುಗಳನ್ನು ಬಿಟ್ಟುಹೋದ: ಡಿಕೆಶಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ‌ ಹೊತ್ತಿದ್ದ ಅರ್ಜುನ ಆನೆ, ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ ಎಂದ ದರ್ಶನ್

‌ನಟ ದರ್ಶನ್‌ ಪ್ರತಿಕ್ರಿಯಿಸಿ, 8 ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ 64 ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ! ಓಂ ಶಾಂತಿ!

ಇದನ್ನೂ ಓದಿ | ಕಾರ್ಯಾಚರಣೆಗೆ ಅರ್ಜುನ ಬಳಕೆ ಕಾನೂನುಬಾಹಿರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಿನೇಶ್‌ ಗೂಳಿಗೌಡ ಆಗ್ರಹ

ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ: ಬಿ.ವೈ. ವಿಜಯೇಂದ್ರ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಂದಿಸಿ, ವಿಶ್ವ ವಿಖ್ಯಾತ ನಾಡಹಬ್ಬ ದಸರೆಯ ಮುಖ್ಯ ಆಕರ್ಷಣೆ ಜಂಬೂಸವಾರಿಯಲ್ಲಿ ಸತತ ಎಂಟು ಬಾರಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಮೂರ್ತಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗುತ್ತಿದ್ದ ಗಜರಾಜ ಅರ್ಜುನ ಸಾವನ್ನಪ್ಪಿರುವ ಸಂಗತಿ ಬೇಸರ ತರಿಸಿದೆ.
ಅರ್ಜುನ ನಾಡಿನ ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ ಎಂದು ತಿಳಿಸಿದ್ದಾರೆ.

ಅತ್ಯಂತ ದುರಾದೃಷ್ಟಕರ ಘಟನೆ: ಈಶ್ವರ್‌ ಖಂಡ್ರೆ

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತಿದ್ದ 64 ವರ್ಷದ ಅರ್ಜುನ ಆನೆಯ ಸಾವಿನ ಸುದ್ದಿ ತಿಳಿದು ಬಹಳ ದುಃಖವಾಗಿದೆ. ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆಯ ವೇಳೆ ದುರ್ಘಟನೆ ಸಂಭವಿಸಿದ್ದು, ಮದಗಜವೊಂದು, ಅರ್ಜುನನ ಮೇಲೆ ದಾಳಿ ಮಾಡಿ, ತನ್ನ ದಂತದಿಂದ ಚುಚ್ಚಿ ಘಾಸಿಗೊಳಿಸಿ, ಸಾವಿಗೆ ಕಾರಣವಾಗಿರುವುದು ಅತ್ಯಂತ ದುರಾದೃಷ್ಟಕರ. ಕಾರ್ಯಾಚರಣೆಯಲ್ಲಿ ಪುಂಡಾನೆ ರೌದ್ರಾವತಾರ ತಾಳಿ, ಅರ್ಜುನನ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಜಗ್ಗದೆ ದಾಳಿ ಮಾಡಿದೆ. ಮಾವುತ ಮತ್ತು ಪಶುವೈದ್ಯರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಮೂರು ಆನೆಗಳು ಹಿಮ್ಮೆಟ್ಟಿವೆ. ಆದರೆ ಅರ್ಜುನ ಪುಂಡಾನೆಯೊಂದಿಗೆ ಏಕಾಂಗಿಯಾಗಿ ಹೋರಾಡುವಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜುನ ಆನೆ ಈ ಹಿಂದೆ ಹಲವು ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಅನುಭವ ಹೊಂದಿತ್ತು ಮತ್ತು ತರಬೇತಿ ಕೂಡಾ ಪಡೆದಿತ್ತು. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shirshendu Mukhopadhyay
ಕರ್ನಾಟಕ2 hours ago

Shirshendu Mukhopadhyay: ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಶೀರ್ಷೇಂಧು ಮುಖ್ಯೋಪಧ್ಯಾಯ ಆಯ್ಕೆ

Bangalore Bulls
ಕ್ರೀಡೆ2 hours ago

Pro Kabaddi : ಬೆಂಗಳೂರು ತಂಡಕ್ಕೆ ಸತತ ಎರಡನೇ ಸೋಲು

Siddaramaiah
ಕರ್ನಾಟಕ3 hours ago

CM Siddaramaiah: ಹಜರತ್ ಬಾದ್ ಶಾ ಪೀರಾನ್ ದರ್ಗಾ ಅಭಿವೃದ್ಧಿಗೆ ಅಗತ್ಯ ಅನುದಾನ: ಸಿದ್ದರಾಮಯ್ಯ

WhatsApp new feature lets you search users by their username Says Report
ಗ್ಯಾಜೆಟ್ಸ್3 hours ago

WhatsApp: ವಾಟ್ಸಾಪ್‍ನಲ್ಲಿ ಬಳಕೆದಾರರನ್ನು ಅವರ ಯೂಸರ್‌ನೇಮ್ ಮೂಲಕವೇ ಹುಡುಕಬಹುದು!

Top 10 news
ಕರ್ನಾಟಕ4 hours ago

VISTARA TOP 10 NEWS : ಮೋದಿ ಗೆಲ್ಲಿಸಿದ ಮಹಿಳೆಯರು, ಭವಾನಿ ದರ್ಪಕ್ಕೆ ಎಲ್ಲೆಡೆ ಆಕ್ರೋಶ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Dasara Elephant Arjuna
ಕರ್ನಾಟಕ4 hours ago

Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

]cashless medical treatment for accident victims by central Government
ದೇಶ5 hours ago

ರಸ್ತೆ ಅಪಘಾತದ ಗಾಯಾಳುಗಳಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ! ಕೇಂದ್ರದಿಂದ ರಾಷ್ಟ್ರಾದ್ಯಂತ ಜಾರಿ

Cricket news
ಕ್ರಿಕೆಟ್5 hours ago

ind vs aus : ಆಸ್ಟ್ರೇಲಿಯಾ- ಭಾರತ ಟಿ20 ಪಂದ್ಯದ ಅಂಪೈರ್​ ಮೇಲೆ ಮೋಸದ ಅರೋಪ!

Hori festival in maavali at soraba taluk
ಶಿವಮೊಗ್ಗ5 hours ago

Shivamogga News: ಮಾವಲಿ ಗ್ರಾಮದಲ್ಲಿ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ

Shakti Scheme Effect, In Uttara Kannada district locals and students are facing problems without buses
ಉತ್ತರ ಕನ್ನಡ5 hours ago

Sirsi News: ಶಕ್ತಿ ಯೋಜನೆ ಎಫೆಕ್ಟ್‌: ಉ.ಕ ಜಿಲ್ಲೆಯಲ್ಲಿ ಸ್ಥಳೀಯರಿಗೆ ಬಸ್‌ ಇಲ್ಲದೇ ಪರದಾಟ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ21 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌