Ambedkar Statue: ತಲೆ ತಿರುಗಿ ಬಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್ - Vistara News

ಕಲಬುರಗಿ

Ambedkar Statue: ತಲೆ ತಿರುಗಿ ಬಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್

Ambedkar Statue : ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌ ಸಂಬಂಧ ಜಾಮೀನು ಪಡೆದು ಹೊರಬಂದ ಆರೋಪಿ ಸಂಗಮೇಶ್ ಮನೆಗೆ ರಾತ್ರೋ ರಾತ್ರಿ ನುಗ್ಗಿ ದಾಳಿ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಲಬುರಗಿ ಸಂಸದ ಡಾ ಉಮೇಶ್‌ ಜಾಧವ್ (MP Dr Umesh Jadhav) ತಲೆ ತಿರುಗಿ ಕುಸಿದು ಬಿದ್ದಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಆಂಬ್ಯುಲೆನ್ಸ್‌ ಮೂಲಕ ದಾಖಲು ಮಾಡಲಾಗಿದೆ.

VISTARANEWS.COM


on

Ambedkar Statue MP Umesh Jadhav Unwell
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಆರೋಪಿ ಸಂಗಮೇಶ್ ಮನೆ ಮೇಲೆ ದಾಳಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಸದ ಡಾ.ಉಮೇಶ್ ಜಾಧವ್ (MP Dr Umesh Jadhav) ಸಾಥ್‌ ನೀಡಿದ್ದರು. ಪ್ರತಿಭಟನೆ ವೇಳೆ ಏಕಾಏಕಿ ತಲೆ ತಿರುಗಿ ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅಂಬೇಡ್ಕರ್‌ ಪ್ರತಿಮೆ ಅಪಮಾನ (Ambedkar Statue) ಕೇಸ್‌ ಸಂಬಂಧ ಜಾಮೀನು ಪಡೆದು ಹೊರಬಂದ ಆರೋಪಿ ಸಂಗಮೇಶ್ ಮನೆಗೆ ಕಿಡಿಗೇಡಿಗಳು ರಾತ್ರೋ ರಾತ್ರಿ ನುಗ್ಗಿ ದಾಂಧಲೆ‌ ಹಾಗೂ ಹಲ್ಲೆ ನಡೆಸಿದ್ದರು. ಇದನ್ನೂ ವಿರೋಧಿಸಿ ವೀರಶೈವ ಲಿಂಗಾಯ ಸಮುದಾಯದಿಂದ ಕಲಬುರಗಿ (Kalaburagi news) ಬೆಂಗಳೂರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ಡಾ.ಉಮೇಶ್ ಜಾಧವ್ ಬಿಸಿಲ ತೀವ್ರತೆಗೆ ಅಸ್ವಸ್ಥಗೊಂಡಿದ್ದರು. ಲೋ ಬಿಪಿಯಿಂದಾಗಿ ಏಕಾಏಕಿ ತಲೆ ತಿರುಗಿ ಬಿದ್ದ ಉಮೇಶ್‌ ಅವರು ಪ್ರತಿಭಟನಾಕಾರರ ತೊಡೆ ಮೇಲೆ ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದವರು ತಲೆ ಮೇಲೆ ಟವೆಲ್ ಹಿಡಿದು ನಿಂತು, ಗಾಳಿ ಬೀಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಅಸ್ವಸ್ಥರಾದ ಸಂಸದರನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸಂಸದ ಡಾ.ಉಮೇಶ್ ಜಾಧವ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಕೋಟನೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ರಾಮಮಂದಿರಕ್ಕೆ ಶಿಫ್ಟ್‌ ಆಗಿದೆ. ರಾಮಮಂದಿರ ಬಳಿ ರಸ್ತೆ ತಡೆದು‌ ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆಗಮಿಸಿ, ಮನವೊಲಿಸುತ್ತಿದ್ದಾರೆ.

ಸ್ಥಳಕ್ಕೆ ಆದೋಲ ಸಿದ್ದಲಿಂಗ ಸ್ವಾಮಿ ಆಗಮಿಸಿ, ಪ್ರತಿಭಟನಾಕಾರರ ಜತೆ ಕೈ ಜೋಡಿಸಿದರು. ರಾಮಮಂದಿರ ವೃತ್ತದ ಬಳಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಮಿಲಿಟರಿ ಪಡೆ ಆಗಮಿಸಿದೆ.

ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

ಕಲಬುರಗಿ: ಕಳೆದ ಜನವರಿಯಲ್ಲಿ ಕಲಬುರಗಿ ನಗರದ (Kalaburagi News) ಕೊಟನೂರ (ಡಿ) ಬಡಾವಣೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆಗೆ (Ambedkar statue) ಅಪಮಾನ ಮಾಡಲಾಗಿತ್ತು. ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ್‌ ಎಂಬಾತನಿಗೆ ನಿನ್ನೆ ಮಂಗಳವಾರ ಕೋರ್ಟ್‌ನಿಂದ ಜಾಮೀನು ಮಂಜೂರು ಆಗಿತ್ತು. ಜಾಮೀನಿನ‌ ಮೇಲೆ ಹೊರ ಬಂದಿದ್ದ ಸಂಗಮೇಶ್‌ ಮನೆ ಮೇಲೆ ಮಂಗಳವಾರ ರಾತ್ರಿ 12 ಗಂಟೆಗೆ ಸುಮಾರು 50 ರಿಂದ 60 ಜನರ ತಂಡವೊಂದು ದಿಢೀರ್‌ ದಾಳಿ ಮಾಡಿದೆ.

ಆರೋಪಿ ಕುಟುಂಬಸ್ಥರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಜಖಂಗೊಳಿಸಿದ್ದಾರೆ. ಆರೋಪಿ ಸಂಗಮೇಶ್‌ ಮನೆಯಲ್ಲದೇ ಬಡಾವಣೆಯಲ್ಲಿರುವ ಇತರೆ ಮನೆಗಳ ಮೇಲೂ ದಾಳಿ ಮಾಡಿದ್ದಾರೆ. ಹಲವು ಬೈಕ್‌ಗಳ ಜಖಂಗೊಳಿಸಿ, ಕಾರುಗಳ ಗಾಜು ಪುಡಿ ಪುಡಿ ಮಾಡಿದ್ದಾರೆ.

ಇನ್ನೂ ಕಿಡಿಗೇಡಿಗಳ ದಾಳಿಗೆ ವೀರಶೈವ-ಲಿಂಗಾಯತ ಜನರು ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಕಲಬುರಗಿ ಬಂದ್‌ಗೆ ಕರೆ ಕೊಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸದ್ಯ ಕಲಬುರಗಿ ವಿವಿ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ

ಕಿಡಿಗೇಡಿಗಳು ಮನೆ ಮೇಲೆ ‌ದಾಳಿ ಮಾಡಿದ್ದನ್ನು ಖಂಡಿಸಿ ವೀರಶೈವ ಲಿಂಗಾಯ ಸಮುದಾಯದಿಂದ ಕಲಬುರಗಿ ಬೆಂಗಳೂರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ‌ಹಚ್ಚಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದರು. ಇನ್ನೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮನವಿ ಮಾಡಿದರು.

ದಾಳಿ ಖಂಡಿಸಿ ಸಂಸದ ಡಾ.ಉಮೇಶ್ ಜಾಧವ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಜಿಲ್ಲಾಧಿಕಾರಿ ‌ಫೌಜಿಯಾ ತರನ್ನುಮ್ ಆಗಮಿಸುವಂತೆ ಪಟ್ಟು ಹಿಡಿದರು. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಆರ್. ಚೇತನ್ ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ ನೀಡಿದ್ದು ಪ್ರತಿಭಟನಕಾರರ ಮನವೊಲಿಕೆ ಮಾಡಲು ಮುಂದಾದರು. ಆರೋಪಿ ಸಂಗಮೇಶ್ ಮನೆಗೆ ನುಗ್ಗಿ ದಾಂಧಲೆ‌ ಹಾಗೂ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಕಾನೂನು ಪ್ರಕಾರ ಆರೋಪಿಗೆ ಶಿಕ್ಷೆಯಾಗಿದೆ. ಮೂರು ತಿಂಗಳು ಸಜೆಯಾಗಿತ್ತು, ಜಾಮೀನು ಪಡೆದು ಹೊರ ಬಂದಿದ್ದಾನೆ. ಶಿಕ್ಷೆ ಅನುಭವಿಸಿ ಬಂದ ಮೇಲೆ ಹಲ್ಲೆ ಮಾಡಿದ್ದು ತಪ್ಪು, ಯಾರೆ ಆಗಿರಲಿ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕೆಲವರು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ: Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

ಏನಿದು ಪ್ರಕರಣ

ಕಳೆದ ಜನವರಿ 22ರ ರಾತ್ರಿ ಕಲಬುರಗಿಯ ಕೋಟನೂರ ಬಡಾವಣೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ (Ambedkar Statue) ಯಾರೋ ದುಷ್ಕರ್ಮಿಗಳು ಅಪಮಾನ (Desecration of Ambedkar statue) ಮಾಡಿದ್ದರಿಂದ ಈ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ದಲಿತ ಸಮುದಾಯದವರು ರಸ್ತೆ ತಡೆ (Road block in kalaburagi) ನಡೆಸಿ ಪ್ರತಿಭಟನೆ ನಡೆಸಿದ್ದರು. ಕಲಬುರಗಿಯ ಒಂದು ಪೆಟ್ರೋಲ್‌ ಪಂಪ್‌ಗೆ ಹಾನಿ ಮಾಡಲಾಗಿತ್ತು.

Ambedkar Statue
ಘಟನೆಯಿಂದ ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ

ಕೋಟನೂರ ಬಡಾವಣೆಯಲ್ಲಿರುವ ಪ್ರತಿಮೆಗೆ ಚಪ್ಪಲಿ ಹಾರ ಹಾಕಿರುವುದು ಮರುದಿನ ಬೆಳಗ್ಗೆ ಗಮನಕ್ಕೆ ಬಂದಿತ್ತು. ಇದನ್ನು ನೋಡಿ ಆಕ್ರೋಶಿತರಾದ ಜನರು ಪ್ರತಿಭಟನೆಗೆ ಇಳಿದರು. ರಸ್ತೆ ತಡೆಯ ವಿಷಯ ತಿಳಿಯುತ್ತಲೇ ಪೊಲೀಸರು ಆಗಮಿಸಿದರು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಕನ್ನಿಕಾ ಸಿಕ್ರಿವಾಲ್‌ ಅವರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತಕ್ಕೆ ಸಫಲರಾದರೂ ಅದು ಬೇರೆ ಬೇರೆ ಭಾಗಗಳಿಗೆ ಹರಡಿತು.

Ambedkar statue in kalaburagi
ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶ್ರದ್ಧಾಂಜಲಿ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

ಲಕ್ಕೂರು ಆನಂದ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

ಲಕ್ಕೂರು ಆನಂದ lakkuru Anand
Koo

ಕಲಬುರಗಿ: ಪ್ರತಿಭಾವಂತ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ (Central Sahitya Akademy) ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ (Lakkuru Ananda) ಅವರು ಮೇ 20ರಂದು ನಿಧನ (Death news) ಹೊಂದಿದ್ದಾರೆ. ಪೊಲೀಸರು ಇದೊಂದು ಅನುಮಾನಾಸ್ಪದ ಸಾವು (UDR Case) ಎಂದು ‌ದೂರು ದಾಖಲಿಸಿಕೊಂಡಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಆಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಆನಂದ್ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

Continue Reading
Advertisement
Turbulence
ಪ್ರಮುಖ ಸುದ್ದಿ8 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ19 mins ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Summer Star Fashion
ಫ್ಯಾಷನ್26 mins ago

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

Lok Sabha Elections 2024 7 celebs who didn’t vote in Lok Sabha Elections
ಬಾಲಿವುಡ್28 mins ago

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

RR vs RCB
ಕ್ರೀಡೆ36 mins ago

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Mangalore Tour
ಪ್ರವಾಸ40 mins ago

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

2nd Pux Exam
ಬೆಂಗಳೂರು48 mins ago

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

Boiler Blast
ಕರ್ನಾಟಕ48 mins ago

Boiler Blast: ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Equity Market
ಪ್ರಮುಖ ಸುದ್ದಿ51 mins ago

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Prajwal Revanna Case HD Kumaraswamy slams DK Shivakumar
ರಾಜಕೀಯ55 mins ago

Prajwal Revanna Case: ಡಿಕೆಶಿ ಒಪ್ಪಿಕೊಂಡಿದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ? ಸಿಎಂಗೆ ಎಚ್‌ಡಿಕೆ ಪ್ರಶ್ನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌