Site icon Vistara News

Karnataka Weather Forecast : ವಾರಾಂತ್ಯದಲ್ಲಿ ಇಲ್ಲೆಲ್ಲ Hot ವೆದರ್‌; ಈ ಜಿಲ್ಲೆಗಳಲ್ಲಿ ಕೂಲ್‌ ಕೂಲ್‌

Hot weather and cool weather

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರಿತ್ಯವು (Karnataka Weather Forecast) ಜನರ ಮಂಡೆ ಬಿಸಿ ಮಾಡಿದೆ. ಒಮ್ಮೊಮ್ಮೆ ಬಿಸಿಲಿದ್ದರೆ, ಮತ್ತೊಮ್ಮೆ ಚಳಿಯ ವಾತಾವರಣ ಇರುತ್ತದೆ. ದಿಢೀರ್‌ ಅಲ್ಲಲ್ಲಿ ಮಳೆಯ ಸಿಂಚನವಾಗುತ್ತದೆ.

ಸದ್ಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ವಾರಾಂತ್ಯದಲ್ಲಿ ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಜತೆಗೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಹಾಗೂ ಇಳಿಕೆಯಾಗಲಿದೆ.

ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿದ್ದು, ಗುರುವಾರ ಗರಿಷ್ಠ ಉಷ್ಣಾಂಶ 34.8 ಡಿ.ಸೆ. ಕಲಬುರಗಿ ಹಾಗೂ ಚಿಕ್ಕನಹಳ್ಳಿನಲ್ಲಿ ದಾಖಲಾಗಿದೆ. ಕಡಿಮೆ ಉಷ್ಣಾಂಶ 15. 2 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Kidnapping Case : ಉಂಡ ಮನೆಗೆ ಕನ್ನ ಹಾಕಲು ಕಿಡ್ನ್ಯಾಪ್‌ ನಾಟಕ; ಪೊಲೀಸರಿಗೆ ಲಾಕ್‌ ಆಗಿದ್ದೆ ರೋಚಕ

ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿಯ ಅಲ್ಲಲ್ಲಿ ಮಳೆ ಸಾಧಾರಣವಾಗಿರಲಿದೆ. ಹಾವೇರಿ, ಧಾರವಾಡ ಮತ್ತು ಗದಗ, ವಿಜಯನಗರ ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಜಿಟಿಜಿಟಿ ಮಳೆ ಇರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Bangalore Traffic : ಡ್ರೋನ್‌ ಬಳಿಕ ಟ್ರಾಫಿಕ್‌ ಕಂಟ್ರೋಲ್‌ಗೆ ಜಿಪಿಎಸ್‌; ಬೆಂಗಳೂರಿಗೆ ಟನಲ್‌ ರೋಡ್‌!

ಈ ಜಿಲ್ಲೆಗಳಲ್ಲಿ ಸುಡುವ ಸೂರ್ಯ

ಹವಾಮಾನ ಇಲಾಖೆ ಅ.7-8 ರಂದು ಉಷ್ಣಾಂಶ ಏರಿಕೆ ಆಗುವ ಎಚ್ಚರಿಕೆಯನ್ನು ನೀಡಿದೆ. ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರಲ್ಲಿ ತಾಪಮಾನ ಏರಿಕೆ ಆಗಲಿದೆ. ಜತೆಗೆ ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಒಂದು ಕಡೆ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದ್ದರೆ ಮತ್ತೊಂದು ಕಡೆ ಕನಿಷ್ಠ ಉಷ್ಣಾಂಶವು ಕೆಲವು ಜಿಲ್ಲೆಗಳಲ್ಲಿ ಇಳಿಕೆ ಆಗಲಿದೆ. ಕೊಪ್ಪಳ, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version