Mann Ki Baat : Aland Bhutai: ಕಲಬುರಗಿಯ ತಡಕಲ್‌ನ ಆಳಂದ ಭೂತಾಯಿ ರೈತರ ಕಂಪನಿಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ - Vistara News

ಕಲಬುರಗಿ

Mann Ki Baat : Aland Bhutai: ಕಲಬುರಗಿಯ ತಡಕಲ್‌ನ ಆಳಂದ ಭೂತಾಯಿ ರೈತರ ಕಂಪನಿಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಕಲಬುರಗಿಯ ತಡಕಲ್‌ನಲ್ಲಿ ಕಳೆದ ಕಿರುಧಾನ್ಯಗಳಿಂತ ತಯಾರಿಸಿದ ಲಡ್ಡು, ಕುರುಕಲು ತಿಂಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ, ರೈತರ ಆದಾಯ ವೃದ್ಧಿಗೆ ನೆರವಾಗಿರುವ ಆಳಂದ ಭೂತಾಯಿ ರೈತರ ಕಂಪನಿಯನ್ನು (Mann Ki Baat : Aland Bhutai) ಪ್ರಧಾನಿ ನರೇಂದ್ರ ಮೋದಿ ಅವರು ಮನ್‌ ಕಿ ಬಾತ್‌ನಲ್ಲಿ ಶ್ಲಾಘಿಸಿದರು.

VISTARANEWS.COM


on

Modi mentioned Aland Organic Grain Company in Mann Ki Baat
ಆಳಂದ ಭೂತಾಯಿ ಕಿರುಧಾನ್ಯ ರೈತ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನಾನು ನಿಮ್ಮಲ್ಲೊಂದು ಸಂಗತಿಯನ್ನು ಕೇಳುವೆ. ನೀವು ಎಂಟ್ರೆಪ್ರೆನ್ಯೂರ್ (Entrepreneurs) ಎಂಬುದನ್ನು ಕೇಳಿರಬಹುದು. ಆದರೆ ಮಿಲೆಟ್‌ಪ್ರೆನ್ಯೂರ್‌ (Milletpreneur) ಬಗ್ಗೆ ಕೇಳಿದ್ದೀರಾ? ಒಡಿಶಾ, ಕರ್ನಾಟಕ ಸೇರಿದಂತೆ ನಾನಾ ರಾಜ್ಯಗಳಲ್ಲಿ ಇವತ್ತು ಮಿಲೆಟ್‌ಪ್ರೆನ್ಯೂರ್‌ಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 97ನೇ ಮನ್‌ ಕಿ ಬಾತ್‌ (Mann Ki Baat) ಬಾನುಲಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹಾಗೂ ಉದಾಹರಣೆಯಾಗಿ ಕರ್ನಾಟಕದ ಕಲಬುರಗಿಯ ತಡಕಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಳಂದ ಭೂತಾಯಿ (Aland Bhutai millets farmers producer company limited) ಕಿರುಧಾನ್ಯ ರೈತರ ಉತ್ಪಾದಕ ಕಂಪನಿಯನ್ನು ಪ್ರಸ್ತಾಪಿಸಿದರು. ಈ ಸಂಸ್ಥೆಯು ಕಿರುಧಾನ್ಯಗಳಿಂದ ಲಡ್ಡು, ಬಿಸ್ಕತ್‌, ಕುರುಕುಲು ತಿಂಡಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಜನಪ್ರಿಯತೆ ಗಳಿಸುತ್ತಿದೆ ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಿರುಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾರುವ ರೈತರ ಕಂಪನಿ

Modi mentioned Aland Organic Grain Company in Mann Ki Baat

ಆಳಂದ ಭೂತಾಯಿ ಕಿರುಧಾನ್ಯ ರೈತ ಉತ್ಪಾದಕ ಕಂಪನಿಯು ಕಳೆದ ವರ್ಷದಿಂದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮಿಲೆಟ್ಸ್‌ ರಿಸರ್ಚ್‌ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿಯ ತಡಕಲ್‌ನಲ್ಲಿರುವ ಆಳಂದ ಭೂತಾಯಿ ಮಿಲ್ಲೆಟ್ಸ್‌ ಫಾರ್ಮರ್ಸ್‌ ಪ್ರೊಡ್ಯೂಸರ್ಸ್‌ ಕಂಪನಿಯು ಸಿರಿಧಾನ್ಯಗಳಿಂದ ಲಡ್ಡು, ಕುರುಕಲು ತಿಂಡಿಗಳನ್ನು ತಯಾರಿಸಿ ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದಲ್ಲಿ ಮಾರಾಟ ಮಾಡುತ್ತದೆ. 500 ಜನ ಷೇರುದಾರರು ಕಂಪನಿಯಲ್ಲಿ ಇದ್ದಾರೆ. ಸಿರಿ ಧಾನ್ಯದ ಉತ್ಪನ್ನಗಳಿಗೆ ಅಪಾರ ಬೇಡಿಕೆ ಇದೆ. ನೇರವಾಗಿ ಸಿರಿ ಧಾನ್ಯ ಮಾರಾಟ ಮಾಡಿದಾಗ ಕ್ವಿಂಟಾಲ್‌ಗೆ 2-2.5 ಸಾವಿರ ರೂ. ಆದಾಯ ಸಿಗಬಹುದು. ಆದರೆ ಒಂದು ಕ್ವಿಂಟಾಲ್‌ ಸಿರಿ ಧಾನ್ಯದ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟದಿಂದ 10 ಸಾವಿರ ರೂ. ಆದಾಯ ಗಳಿಸಬಹುದು ಎಂದು ವಿಸ್ತಾರನ್ಯೂಸ್‌ಗೆ ಸಂಸ್ಥೆಯ ಸಿಇಒ ರಕ್ಷಿತಾ ತಿಳಿಸಿದ್ದಾರೆ.

Mann_ki_Baat

ಮನ್‌ ಕಿ ಬಾತ್‌ನಲ್ಲಿ ಪ್ರಸ್ತಾಪವಾಗಿದ್ದಕ್ಕೆ ಸಂತಸ: ಪ್ರಧಾನಿ ನರೇಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ನಮ್ಮ ಆಳಂದ ಭೂತಾಯಿ ರೈತರ ಕಂಪನಿ ಬಗ್ಗೆ ಪ್ರಸ್ತಾಪ ಮಾಡಿ ಪ್ರೋತ್ಸಾಹಿಸಿರುವುದನ್ನು ಕೇಳಿ ತುಂಬ ಸಂತಸವಾಯಿತು. ನಮಗೆ ಹೆಮ್ಮೆ ಎನ್ನಿಸುತ್ತಿದೆ ಎಂದು ಸಿಇಒ ರಕ್ಷಿತಾ ಅವರು ವಿಸ್ತಾರ ನ್ಯೂಸ್‌ಗೆ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Weather Forecast : ರಾಜ್ಯದ ಹಲವೆಡೆ ಮಳೆಗೆ (Rain News) ಅವಾಂತರಗಳೇ ಸೃಷ್ಟಿಯಾಗಿವೆ. ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತಗೊಂಡರೆ, ಯಾದಗಿರಿಯಲ್ಲಿ ಮನೆ ಚಾವಣಿ ಕುಸಿದಿದೆ. ವಿಜಯನಗರದ ರೈಲ್ವೆ ನಿಲ್ದಾಣದಲ್ಲಿ ಚಾವಣಿಯಿಂದ ನೀರು ಸೋರಿಕೆ ಆಗುತ್ತಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯೊಂದಿಗೆ ಗುಡುಗು ಇರಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಅಲೆಗಳ ಅಬ್ಬರ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಲೈಫ್‌ಗಾರ್ಡ್‌ಗಳು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಘಟ್ಟದ ಮೇಲಿನ ಕೆಲ ತಾಲೂಕುಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಕರಾವಳಿ ತಾಲೂಕುಗಳಲ್ಲಿ ಬಿಸಿಲಿನ ವಾತಾವರಣ ಇತ್ತು.

ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ

ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಚಾವಣಿಯು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿಜಯನಗರದ ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾರಿ ಮಳೆಯಿಂದ ಅವಾಂತರವೇ ಸೃಷ್ಟಿಸಿಯಾಗಿದೆ. ರೈಲು ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಳೆ ನೀರು ಸೋರುತ್ತಿದೆ. ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರವು ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿತ್ತು.

ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತ

ರಾಯಚೂರಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಹಲವು ಗ್ರಾಮಗಳ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಫತ್ತೇಪೂರ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಅಪಾಯದಲ್ಲೇ ಸೇತುವೆ ದಾಟಲು ಜನರು ಮುಂದಾಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ನೀರಲ್ಲಿ‌ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಮಳೆಗೆ ಚಾವಣಿ ಕುಸಿತ

ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಇಡೀ ಮನೆಯ ಚಾವಣಿ ಕುಸಿದಿದ್ದು, ಪವಾಡ ಸದೃಶ್ಯ ಎಂಬಂತೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತೆಗ್ಗೆಳ್ಳಿ ಗ್ರಾಮದ ಭೀರಪ್ಪ ಪೂಜಾರಿ ಹಾಗೂ ಸುರೇಶ್ ಕಲ್ಮನಿ ಎಂಬುವರಿಗೆ ಸೇರಿದ ಮನೆಯು ವಿಪರೀತ ಗಾಳಿ ಮಳೆಯಿಂದ ಚಾವಣಿ ಕುಸಿದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾಳಾಗಿವೆ.

ರಾಯಚೂರಲ್ಲಿ ಗಾಳಿಗೆ ಮಳೆಗೆ ಹಾರಿಹೋದ ಜೋಪಡಿಗಳು

ರಾಯಚೂರು ಜಿಲ್ಲೆಯಲ್ಲಿ ತಡರಾತ್ರಿ ಗಾಳಿ ಸಹಿತ ಭಾರಿ ಮಳೆಗೆ ಲಿಂಗಸಗೂರಿನಲ್ಲಿ ಜೋಪಡಿಗಳು ಹಾರಿಹೋಗಿದೆ. ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಜನರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ 50 ಕ್ಕೂ ಹೆಚ್ಚು ಜೋಪಡಿಗಳಿಗೆ ಹಾನಿಯಾಗಿದೆ. ಸೂರುಯಿಲ್ಲದೆ ಬುಡ್ಗ ಜಂಗಮ ಸಮುದಾಯದವರು ಕಂಗಲಾಗಿದ್ದಾರೆ. ಜೋಪಡಿಗಳಿಗೆ ಹಾನಿಯಾದರೂ,ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಬುಡ್ಗ ಜಂಗಮ ಸಮುದಾಯದವರ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಬಿತ್ತನೆ ಕಾರ್ಯ ಚುರುಕು

ಮುಂಗಾರು ಪೂರ್ವ ಮಳೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಮುಂಗಾರಿನ ಬೆಳೆಗಳನ್ನು ಬಿತ್ತುವ ಕಾರ್ಯ ಆರಂಭವಾಗಿದೆ. ಧಾರವಾಡ ಗ್ರಾಮೀಣ ಹಾಗೂ ಜಿಲ್ಲೆಯಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಮುಂಗಾರು ಬೆಳೆಗಳಾದ ಹೆಸರು, ಕಡಲೆ, ಶೇಂಗಾ ಇತ್ಯಾದಿ ಬೆಳೆಗಳನ್ನು ರೈತರು ಬಿತ್ತುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ಕಳೆದ ವರ್ಷ ಬರ ಹಿನ್ನೆಲೆ ಈ ಮುಂಗಾರು ಪೂರ್ವವೇ ಬಿತ್ತನೆಗೆ ಸಿದ್ಧತೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಭೀಕರ ರಸ್ತೆ ಅಪಘಾತ; ಕೆಕೆಆರ್‌ಟಿಸಿ ಬಸ್‌ ಅಪ್ಪಳಿಸಿ 3 ಬೈಕ್‌ ಸವಾರರು ಬಲಿ

Road Accident: ಬೈಕ್ ಮತ್ತು ಕೆಕೆಆರ್‌ಟಿಸಿ ಬಸ್ (KKRTC bus) ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೆ ಮರಣ ಹೊಂದಿದ್ದಾರೆ. ಮೃತಪಟ್ಟವರು ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದವರು. ಕಿಣ್ಣಿ ಸಡಕ್ ಗ್ರಾಮದಿಂದ ಕಲಬುರಗಿಗೆ ಬೈಕಿನಲ್ಲಿ ಬರುತ್ತಿದ್ದರು.

VISTARANEWS.COM


on

road accident kalaburagi
Koo

ಕಲಬುರಗಿ: ಕಮಲಾಪುರ ಬಳಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿ ಮೂವರು ಬೈಕ್‌ ಸವಾರರು (bike riders death) ಸಾವಿಗೀಡಾಗಿದ್ದಾರೆ. ಕಲಬುರಗಿ (Kalaburagi news) ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್ ಬಳಿ ದುರ್ಘಟನೆ ನಡೆದಿದೆ.

ಬೈಕ್ ಮತ್ತು ಕೆಕೆಆರ್‌ಟಿಸಿ ಬಸ್ (KKRTC bus) ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೆ ಮರಣ ಹೊಂದಿದ್ದಾರೆ. ಮೃತಪಟ್ಟವರು ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದವರು. ಕಿಣ್ಣಿ ಸಡಕ್ ಗ್ರಾಮದಿಂದ ಕಲಬುರಗಿಗೆ ಬೈಕಿನಲ್ಲಿ ಬರುತ್ತಿದ್ದರು. ಕಲಬುರಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಅಪ್ಪಳಿಸಿದೆ. ಮೃತರನ್ನು ಚಂದ್ರಕಾಂತ್(17), ವಿಶಾಲ್ (20), ಸಮೀರ್ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ

ಬೆಳಗಾವಿ: 2 ವರ್ಷದ ಮಗುವೊಂದು ಆಟವಾಡುತ್ತ ಹೋಗಿ ನೀರಿನ ಸಂಪ್‌ಗೆ (Water Sump) ಬಿದ್ದು ಸಾವಿಗೀಡಾದ ದುರ್ಘಟನೆ (Child Death) ಬೆಳಗಾವಿಯ (Belagavi news) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗು. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು. ಸಂಪ್ ಓಪನ್ ಮಾಡುತ್ತಿದ್ದಂತೆ ಅಲ್ಲಿ ಬಿದ್ದಿದ್ದ ಮಗು ಸಾಯೀಶಾ ಕಂಡುಬಂದಿದ್ದಳು.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಪೋಷಕರು ಕರೆದೊಯ್ದರಾದರೂ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಬಿದ್ದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರದಿಂದಾಗಿ, ನೀರು ತರಲು ಹೋದ ಮಹಿಳೆ ಮೇಲೆ ಮರ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಶ್ವೇತಾ ರಾಠೋಡ (21) ಮೃತ ಮಹಿಳೆ. ಬಿರುಗಾಳಿ ಸಹಿತ ಮಳೆ ಬರುತ್ತಿದ್ದಾಗಲೇ ನೀರು ತರಲು ಹೋದ ಶ್ವೇತಾ ರಾಠೋಡ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಶ್ವೇತಾರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ. ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರ ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Continue Reading

ಕ್ರೈಂ

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

Illegal Relationship: ಕೊಲೆಯಾದ ಹೀರಾಲಾಲ್‌ನ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಹೀರಾಲಾಲ್ ಅಣ್ಣ ಬಾಬು ಲದಾಫ್, ತನ್ನ ಪತ್ನಿಯ ಅನೈತಿಕ ಸಂಬಂಧ ಕಂಡು ಅದರಿಂದ ದೂರ ಇರುವಂತೆ ಪತ್ನಿಗೆ ಹೇಳಿದ್ದ. ಆದರೆ ಬಾಬು ಲದಾಫ್ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನ ಮೇಲೆಯೇ ಹಲ್ಲೆ ಮಾಡಿಸಿದ್ದಳು.

VISTARANEWS.COM


on

kalaburagi illegal relationship
ಕೊಲೆಯಾದ ಹೀರಾಲಾಲ್ ಲದಾಫ್
Koo

ಕಲಬುರಗಿ: ತನ್ನ ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧದಿಂದ (Illegal Relationship) ದೂರ ಇರು ಎಂದು ಬುದ್ಧಿವಾದ ಹೇಳಿದ ಮೈದುನನನ್ನು ಅತ್ತಿಗೆಯ ಪ್ರಿಯಕರ ಬರ್ಬರವಾಗಿ ಕಲ್ಲಿನಿಂದ ಜಜ್ಜಿ ಹತ್ಯೆ (Stoned to death, murder case) ಮಾಡಿದ್ದಾನೆ. ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ಘಟನೆ (Kalaburagi crime news) ನಡೆದಿದೆ.

ಹೀರಾಲಾಲ್ ಲದಾಫ್ (35) ಎಂಬವರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಮುನ್ನೊಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಘಟನೆಯಿದು. ಕೊಲೆಯಾದ ಹೀರಾಲಾಲ್‌ನ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಹೀರಾಲಾಲ್ ಅಣ್ಣ ಬಾಬು ಲದಾಫ್, ತನ್ನ ಪತ್ನಿಯ ಅನೈತಿಕ ಸಂಬಂಧ ಕಂಡು ಅದರಿಂದ ದೂರ ಇರುವಂತೆ ಪತ್ನಿಗೆ ಹೇಳಿದ್ದ.

ಆದರೆ ಬಾಬು ಲದಾಫ್ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನ ಮೇಲೆಯೇ ಹಲ್ಲೆ ಮಾಡಿಸಿದ್ದಳು. ಪತ್ನಿಯ ಅನೈತಿಕ ಸಂಬಂಧ ಹಾಗೂ ಹಲ್ಲೆಯಿಂದ ಮಾನಸಿಕವಾಗಿ ನೊಂದು ಬಾಬು ಲದಾಫ್‌ ಊರನ್ನೇ ಬಿಟ್ಟು ಹೋಗಿದ್ದ. ಅಣ್ಣನ ಸಂಸಾರವನ್ನು ಸರಿದಾರಿಗೆ ತರಲು ಯತ್ನಿಸಿದ್ದ ಹೀರಾಲಾಲ್, ಅನೈತಿಕ ಸಂಬಂಧ ಬಿಟ್ಟು ಬಿಡುವಂತೆ ರವಿಗೆ ಹೇಳಿದ್ದ. ಇದೇ ವಿಚಾರವಾಗಿ ಹೀರಾಲಾಲ್ ಹಾಗೂ ರವಿ ಮಧ್ಯೆ ಆಗಾಗ ಗಲಾಟೆ ಕೂಡ ಆಗಿತ್ತು.

ಮೊನ್ನೆ ಕುಡಿದ ನಶೆಯಲ್ಲಿ ಇವರಿಬ್ಬರೂ ಗಲಾಟೆ ಮಾಡಿಕೊಂಡಿದ್ದರು. ಬಳಿಕ ರವಿ ಹೀರಾಲಾಲ್‌ ಮೇಲೆ ಹಲ್ಲೆ ಮಾಡಿ ಕಲ್ಲಿನಿಂದ ಜಜ್ಜಿಹಾಕಿದ್ದಾನೆ. ಗಾಯಗೊಂಡು ಹೀರಾಲಾಲ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ

ಬೆಳಗಾವಿ: 2 ವರ್ಷದ ಮಗುವೊಂದು ಆಟವಾಡುತ್ತ ಹೋಗಿ ನೀರಿನ ಸಂಪ್‌ಗೆ (Water Sump) ಬಿದ್ದು ಸಾವಿಗೀಡಾದ ದುರ್ಘಟನೆ (Child Death) ಬೆಳಗಾವಿಯ (Belagavi news) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗು. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು. ಸಂಪ್ ಓಪನ್ ಮಾಡುತ್ತಿದ್ದಂತೆ ಅಲ್ಲಿ ಬಿದ್ದಿದ್ದ ಮಗು ಸಾಯೀಶಾ ಕಂಡುಬಂದಿದ್ದಳು.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಪೋಷಕರು ಕರೆದೊಯ್ದರಾದರೂ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಬಿದ್ದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರದಿಂದಾಗಿ, ನೀರು ತರಲು ಹೋದ ಮಹಿಳೆ ಮೇಲೆ ಮರ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಶ್ವೇತಾ ರಾಠೋಡ (21) ಮೃತ ಮಹಿಳೆ.

ಬಿರುಗಾಳಿ ಸಹಿತ ಮಳೆ ಬರುತ್ತಿದ್ದಾಗಲೇ ನೀರು ತರಲು ಹೋದ ಶ್ವೇತಾ ರಾಠೋಡ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಶ್ವೇತಾರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಸೋಮವಾರವು (Heavy Rain) ಮುಂದುವರಿಯಲಿದೆ.ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Rain News) ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯೊಂದಿಗೆ ಗುಡುಗು ಸಹಿತ ಮಿಂಚಿನೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Rainfall Expect: ನಕ್ಷತ್ರಗಳ ಪ್ರಕಾರ ಈ ವರ್ಷ ಯಾವಾಗ ಮಳೆ ಬರಬಹುದು? ಇಲ್ಲಿದೆ ಪಕ್ಕಾ ಲೆಕ್ಕಾಚಾರ!

ಬಿಸಿಲಿನ ತಾಪ ದಿನೇದಿನೇ ಹೆಚ್ಚಾಗುತ್ತಿದ್ದು, ದಿನಕ್ಕೊಮ್ಮೆಯಾದರೂ ತಲೆ ಎತ್ತಿ ಆಕಾಶದತ್ತ (sky) ನೋಡಿ ಒಂದೆರಡು ಹನಿ ಮಳೆ (Rainfall Expect) ಇವತ್ತಾದರೂ ಸುರಿಯಬಾರದೇ ಎನ್ನುವಂತಾಗಿದೆ. ಈ ನಡುವೆ ಅಗತ್ಯ ಕೆಲಸಗಳಿಗೆ ಮಾತ್ರವಲ್ಲ ಕೆಲವೆಡೆ ಕುಡಿಯಲೂ ನೀರಿಲ್ಲ. ಇನ್ನು ತೋಟ, ಗದ್ದೆಗಳಲ್ಲಿನ ಫಸಲು ಬಿಸಿಲಿನ ಬೇಗೆಯಿಂದ ಸುಟ್ಟು ಹೋದಂತಾಗಿದೆ. ಈ ಬಾರಿ ಏಪ್ರಿಲ್ (april) ಮತ್ತು ಮೇ (may) ತಿಂಗಳ ತೀವ್ರವಾದ ಶಾಖವನ್ನು ಗಮನಿಸಿದರೆ ಈಗಲೇ ಹೀಗೆ ಇನ್ನು ಭವಿಷ್ಯದಲ್ಲಿ ಹೇಗಿರಬಹುದು ಎನ್ನುವ ಚಿಂತೆ ಎಂಥವರನ್ನೂ ಕಾಡದೇ ಇರಲಾರದು.

ಮಳೆ (rain) ಯಾವಾಗ ಬರುತ್ತದೆ ಎನ್ನುವುದನ್ನು ಈಗ ವಿಜ್ಞಾನಿಗಳು (Scientist) ನಿಖರವಾಗಿ ಹೇಳುತ್ತಾರೆ. ಆದರೆ ಹಿಂದಿನ ಕಾಲದಲ್ಲಿ ನಕ್ಷತ್ರಗಳ (star) ಚಲನೆಯನ್ನು ಆಧರಿಸಿ ಮಳೆ ಯಾವಾಗ ಬರಬಹುದು ಎನ್ನುವುದನ್ನು ನಮ್ಮ ಹಿರಿಯರು ಅಂದಾಜು ಮಾಡುತ್ತಿದ್ದರು.

ಮಳೆಯ ಮುನ್ಸೂಚನೆ

ಆಕಾಶದಲ್ಲಿ ಆಗಾಗ ಕಾಣಿಸುವ ಮೋಡಗಳು ಮಳೆಯ ಮುನ್ಸೂಚನೆ ನೀಡಿದರೂ ಕೆಲವೇ ಕ್ಷಣಗಳಲ್ಲಿ ಮೋಡ ಮರೆಯಾಗಿ ಬೇಸರ ಮೂಡುವಂತೆ ಮಾಡುತ್ತದೆ. ಆದರೆ ನಕ್ಷತ್ರಗಳು ನಿಖರವಾಗಿ ಮಳೆಯ ಮುನ್ಸೂಚನೆಯನ್ನು ನೀಡುತ್ತವೆ. ಹಿಂದೆ ನಮ್ಮ ಹಿರಿಯರು ಈ ನಕ್ಷತ್ರಗಳನ್ನೇ ನೋಡಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ನಿಖರವಾಗಿ ಹೇಳುತ್ತಿದ್ದರು.

ಯಾವ ನಕ್ಷತ್ರಗಳು?

ಅಶ್ವಿನಿಯಿಂದ ವಿಶಾಖ ನಕ್ಷತ್ರದವರೆಗೆ ಗುರುತಿಸಲಾದ ಮಳೆ ನಕ್ಷತ್ರಗಳು ಸಾಂಪ್ರದಾಯಿಕವಾಗಿ ಜಾನಪದ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ಮಳೆಯನ್ನು ಸೂಚಿಸುತ್ತವೆ ಎಂದೇ ನಂಬಲಾಗಿದೆ. ಅನಾದಿ ಕಾಲದಿಂದಲೂ ಈ ನಕ್ಷತ್ರಗಳು ರೈತರಿಗೆ ಮಳೆಯ ಮಾಹಿತಿ ನೀಡುತ್ತಿದ್ದವು.

ಈಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದರೆ ಶತಮಾನಗಳಿಗಿಂತಲೂ ಹಿಂದೆ ನಕ್ಷತ್ರ ನೋಡಿಯೇ ಮಳೆಯ ಸೂಚನೆ ಪಡೆಯುತ್ತಿದ್ದರು, ಈ ಬಾರಿ ಮಳೆಯ ನಕ್ಷತ್ರಗಳು ಏನು ಹೇಳುತ್ತವೆ ಎಂಬುದರ ಕುರಿತಾದ ಒಂದು ಕಿರು ಮಾಹಿತಿ ಇಲ್ಲಿದೆ.

ಏಪ್ರಿಲ್‌ನಲ್ಲಿ ಮಳೆ ಸಾಧ್ಯತೆ ಕಡಿಮೆ

ಏಪ್ರಿಲ್ 13ರಂದು ಪ್ರಾರಂಭವಾಗುವ ಅಶ್ವಿನಿ ನಕ್ಷತ್ರವು ಆಗಾಗ ಸಾಮಾನ್ಯ ಮತ್ತು ಸಣ್ಣ ಮಳೆಯನ್ನು ತರುವ ನಿರೀಕ್ಷೆಯಿದೆ. ಏಪ್ರಿಲ್ 27ರಂದು ಪ್ರಾರಂಭವಾಗುವ ಭರಣಿ ನಕ್ಷತ್ರವು ಸಾಮಾನ್ಯ ಮಳೆಯನ್ನು ತರುತ್ತದೆ. ಆದರೂ ಈ ಬಾರಿ ಏಪ್ರಿಲ್ ನಲ್ಲಿ ಈ ಮಳೆ ನಕ್ಷತ್ರಗಳು ಮಳೆಯಾಗುವ ಸೂಚನೆಯನ್ನು ಖಾತ್ರಿಪಡಿಸಿಲ್ಲ. ಹೀಗಾಗಿ ಏಪ್ರಿಲ್ ನಲ್ಲಿ ಮಳೆ ಕಾಣಿಸಿಕೊಳ್ಳುವುದು ಬಹುತೇಕ ಅನುಮಾನ.

ಮೇ 11ರ ಬಳಿಕ ಮಳೆ ಸಾಧ್ಯತೆ

ಮೇ 11ರ ಬಳಿಕ ಕೃತ್ತಿಕಾ ನಕ್ಷತ್ರವು ಮಳೆ ಸೂಚನೆ ನೀಡಿದೆ. ಮೇ 24ರಿಂದ ರೋಹಿಣಿ ನಕ್ಷತ್ರವು ಸಾಮಾನ್ಯ ಮಳೆ ತರುವ ನಿರೀಕ್ಷೆಯಿದೆ. ಆದರೂ ಇದು ಧರೆಯ ಬಿಸಿಲಿನ ತಾಪವನ್ನು ಸಂಪೂರ್ಣ ಕಡಿಮೆ ಮಾಡುತ್ತದೆ ಎಂದು ಹೇಳಲಾಗದು.

ಜೂನ್ 21ರಿಂದ ಪುನರ್ವಸು, ಜುಲೈ 5ರಿಂದ ಆರ್ಧ್ರ, ಜುಲೈ 19 ರಿಂದ ಪುಷ್ಯ, ಆಗಸ್ಟ್ 2ರಿಂದ ಆಶ್ಲೇಷ, ಜುಲೈ 16 ರಿಂದ ಮಾಘ ಮತ್ತು ಜುಲೈ 30 ರಿಂದ ಹಸ್ತ ನಕ್ಷತ್ರಗಳು ಉತ್ತಮ ಮಳೆಯಾಗುವ ಸೂಚನೆ ನೀಡಿದೆ. ಇದರ ಭವಿಷ್ಯವನ್ನು ಆಧರಿಸಿ ಸೆಪ್ಟೆಂಬರ್ 13 ರಿಂದ ಉತ್ತರ ಮಳೆ ನಿರೀಕ್ಷಿಸಲಾಗಿದೆ, ಹಸ್ತ ಸೆಪ್ಟೆಂಬರ್ 26 ರಿಂದ, ಅಕ್ಟೋಬರ್ 10 ರಿಂದ ಚಿತ್ರ ಮಳೆ, ಅಕ್ಟೋಬರ್ 23 ರಿಂದ ಸ್ವಾತಿ ಮಳೆ ಮತ್ತು ನವೆಂಬರ್ 1 ರಿಂದ ವಿಶಾಖ ಮಳೆಯಾಗುವ ನಿರೀಕ್ಷೆ ಇದೆ.

ಹಿಂದೂ ಜ್ಯೋತಿಷ್ಯದಲ್ಲಿ ಬಳಸಲಾಗುವ ಒಟ್ಟು 27 ನಕ್ಷತ್ರಗಳಿವೆ. ಇದು ಒಂದು ವರ್ಷದಲ್ಲಿ ಆಕಾಶಗೋಳದಾದ್ಯಂತ ಸೂರ್ಯನ ದಾರಿಯನ್ನು ನಿರ್ಧರಿಸತ್ತದೆ. ಹಿಂದೂ ಸಂಸ್ಕೃತಿಯಲ್ಲಿ ಜ್ಯೋತಿಷ್ಯ, ಜಾತಕ ಹೊಂದಾಣಿಕೆ, ಆಚರಣೆಗಳು ಮತ್ತು ಶುಭ ಸಮಾರಂಭಗಳ ಸಮಯದಲ್ಲಿ ನಕ್ಷತ್ರಗಳ ಪಾತ್ರ ಮಹತ್ವದ್ದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ20 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ44 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌