Site icon Vistara News

Murder Case: ಕೊಟ್ಟ ಹಣ ವಾಪಸ್‌ ಕೊಡದ ವ್ಯಕ್ತಿಯ ಹತ್ಯೆ

crime Scene Occasional photo

ಕಲಬುರಗಿ: ನೀಡಿದ ಸಾಲದ ಹಣ ವಾಸಪ್‌ ನೀಡದ ಕುರಿತು ಮಾತಿಗೆ ಮಾತು ಬೆಳೆದು ಚಕಮಕಿ ನಡೆದು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಲಾಗಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮದರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಶೋಕ್ ಪ್ಯಾಟಿ (44) ಕೊಲೆಯಾದ ವ್ಯಕ್ತಿ. ಗುಂಡಪ್ಪ ಹಾಲಗಡ್ಲಿ, ಸೋಮು, ಜಾನಪ್ಪ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ.

ಜಾನಪ್ಪ ಎಂಬಾತ ತನ್ನ ಚಿಕ್ಕಮ್ಮಳಿಗೆ 50 ಸಾವಿರ ರೂ. ಹಣ ನೀಡಿದ್ದ. 50 ಸಾವಿರ ರೂ ಹಣವನ್ನ ಜಾನಪ್ಪಳ ಚಿಕ್ಕಮ್ಮ ಅಶೋಕ್‌ಗೆ ಕೊಟ್ಟಿದ್ದರು. ಜಾನಪ್ಪನು ಅಶೋಕ್‌ನಿಗೆ 50 ಸಾವಿರ ರೂ ವಾಪಾಸು ಕೇಳಿದ್ದಕ್ಕೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಇಬ್ಬರ ನಡುವೆ ಗಲಾಟೆ ಆಗಿದೆ. ಜಾನಪ್ಪ, ಗುಂಡಪ್ಪ, ಸೋಮು‌ ಸೇರಿಕೊಂಡು ಅಶೋಕ್‌ನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಘಟನೆಯಲ್ಲಿ ಮೂವರು ಆರೋಪಿಗಳಿಗೂ ಗಾಯವಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವ್ಯಕ್ತಿ ಶವ ಪತ್ತೆ

ಚಿತ್ರದುರ್ಗ: ಚಳ್ಳಕೆರೆ ರಸ್ತೆಯ ಪಕ್ಕ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಘಟನೆ ನಡೆದಿದೆ.

ಹಿರಿಯೂರು-ಚಳ್ಳಕೆರೆ ರಸ್ತೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ರಸ್ತೆ ಪಕ್ಕ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ತಾಲೂಕು ಆಸ್ಪತ್ರೆಗೆ ಶವ ರವಾನಿಸಿದ ಪೊಲೀಸರಿಗೆ ಚಾಮರಾಜನಗರದ ವ್ಯಕ್ತಿ ಎಂಬ ಮಾಹಿತಿ ಲಭ್ಯವಾಗಿದೆ. ಮಾಹಿತಿ ಕಲೆ ಹಾಕಿ, ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Self Harming : ಮದುವೆಯಾದ ಎರಡೇ ತಿಂಗಳಿಗೆ ತಾಯಿ ಮನೆಯಲ್ಲಿ ನವವಿವಾಹಿತೆ ಆತ್ಮಹತ್ಯೆ!

Exit mobile version