Murder Case : ಕೊಲೆಗೆ ಮುನ್ನ ಹಾರ ಹಾಕಿ ಸನ್ಮಾನ; ಕಟುಕರ ಕೈಯ ಕುರಿಯಂತಾದರಾ ಚಕ್ರ? - Vistara News

ಕಲಬುರಗಿ

Murder Case : ಕೊಲೆಗೆ ಮುನ್ನ ಹಾರ ಹಾಕಿ ಸನ್ಮಾನ; ಕಟುಕರ ಕೈಯ ಕುರಿಯಂತಾದರಾ ಚಕ್ರ?

Murder Case : ಡಾ. ಉಮೇಶ್‌ ಜಾಧವ್‌ ಅವರ ಆಪ್ತ ಗಿರೀಶ್‌ ಚಕ್ರ ಅವರನ್ನು ಕೊಲೆ ಮಾಡಿದ ದುಷ್ಟರು ಕೊಲೆಗೆ ಮೊದಲು ಆತನಿಗೆ ಮಾಲೆ ಹಾಕಿ ಸನ್ಮಾನ ಮಾಡಿದ್ದರು. ಅವರನ್ನು ಹರಕೆಯ ಕುರಿಯಂತೆ ಕೊಲೆ ಮಾಡಿದ್ದರು.

VISTARANEWS.COM


on

Murder Case Chakra
ಗಿರೀಶ್‌ ಚಕ್ರ ಅವರನ್ನು ಕೊಲೆ ಮಾಡುವ ಮುನ್ನ ನಡೆದ ಸನ್ಮಾನ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ (MP Umesh Jadhav) ಅವರ ಆತ್ಮೀಯರಾದ ಗಿರೀಶ್‌ ಚಕ್ರ (Gireesh Chakra) ಅವರ ಬರ್ಬರ ಹತ್ಯೆ (Murder Case) ಸಾಕಷ್ಟು ಸದ್ದು ಮಾಡುತ್ತಿದೆ. ಕಾರಿನಲ್ಲಿ ಕರೆದೊಯ್ದು ಕಣ್ಣಿಗೆ ಕಾರದ ಪುಡಿ ಎರಚಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಂಬ ಬರ್ಬರವಾಗಿದೆ. ಅದಕ್ಕಿಂತಲೂ ಮಹತ್ವದ ಸಂಗತಿ ಎಂದರೆ ಚಕ್ರ ಅವರನ್ನು ಅವರ ಸ್ನೇಹಿತರು ನಂಬಿಸಿ, ಒಂದು ಸ್ವಲ್ಪವೂ ಸಂಶಯ ಬರದಂತೆ ಹರಕೆಯ ಕುರಿಯಂತೆ (Scape Goat) ಬಲಿ ಪಡೆದಂತೆ ಕಾಣಿಸುತ್ತಿದೆ.

ಗಿರೀಶ್‌ ಚಕ್ರ ಅವರನ್ನು ಸಂಸದ ಜಾಧವ್ ಅವರು ಕಲಬುರಗಿ (Kalaburagi News) ಬಿಎಸ್ಎನ್ಎಲ್‌ ಸಲಹಾ ಸಮಿತಿಗೆ ನಿರ್ದೇಶಕರಾಗಿ ನೇಮಕ ಮಾಡಿದ್ದರು. ಇದರ ಸಂಭ್ರಮಾಚರಣೆಯ ಹೆಸರಿನಲ್ಲಿ ಪಾರ್ಟಿಗೆ ಕರೆದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಗಿರೀಶ್‌ ಚಕ್ರ ಅವರು ಕೊಲೆಯಾಗುವ ದಿನ ಸಂಜೆ ತಮ್ಮ ಗೆಳೆಯರ ಜತೆಗೇ ಖುಷಿಯಾಗಿದ್ದರು. ರಾತ್ರಿ ಪಾರ್ಟಿ ಕೊಡಿಸುವ ಮಾತುಕತೆಯೂ ನಡೆದಿತ್ತು. ಸಂಜೆ ಸಿಕ್ಕಿದ ಗಿರೀಶ್‌ ಚಕ್ರ ಅವರಿಗೆ ಅಂಗಡಿಯೊಂದರ ಮುಂಭಾಗದಲ್ಲಿ ಹೂಹಾರ ಹಾಕಿ ಸನ್ಮಾನವನ್ನೂ ಮಾಡಲಾಗಿತ್ತು. ಇದೆಲ್ಲವನ್ನೂ ಸ್ನೇಹಾಚಾರದಲ್ಲಿ ಪ್ರೀತಿಯಿಂದ ಸ್ವೀಕರಿಸಿದ ಗಿರೀಶ್‌ಗೆ ಇದೆಲ್ಲವೂ ಭೀಕರ ಕೊಲೆಯೊಂದಕ್ಕೆ ಬರೆಯುತ್ತಿರುವ ಮುನ್ನುಡಿ ಎಂದು ಗೊತ್ತೇ ಇರಲಿಲ್ಲ. ಅವರು ತಮ್ಮ ಕೊರಳಿಗೆ ಹಾರ ಹಾಕಿದ್ದು ಹರಕೆಯ ಕುರಿಯಾಗಿಸಲು ಎಂಬುದನ್ನೂ ಅರಿಯಲಿಲ್ಲ.

ಅಂತಿಮವಾಗಿ ಗೆಳೆಯರೊಂದಿಗೆ ಪಾರ್ಟಿಗೆ ಹೋಗುವ ವೇಳೆ ಕಾರಿನಲ್ಲಿ ಖಾರದ ಪುಡಿ ಎರಚಿ ಬಳಿಕ ಕೊಚ್ಚಿ ಕೊಲೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಚ್ಚಿ ಕೊಲ್ಲಲಾಗಿದೆ.‌

ಇದನ್ನೂ ಓದಿ : Murder Case : ಶರಣರ ನಾಡನ್ನು ಮರಣದ ನಾಡಾಗಿಸಿದ ಪ್ರಿಯಾಂಕ್‌ ಖರ್ಗೆ; ಸಂಸದರ ಆಪ್ತನ ಕೊಲೆಗೆ ಬಿಜೆಪಿ ಆಕ್ರೋಶ

40 ಲಕ್ಷ ಸುಪಾರಿ; ತಮ್ಮನನ್ನೇ ಕೊಲೆಗೆ ಆಹ್ವಾನಿಸಿದ್ದ ದುಷ್ಟ ಸಚಿನ್‌

ಈ ನಡುವೆ, ಗಿರೀಶ್‌ ಚಕ್ರ ಅವರ ಕೊಲೆಗೆ 40 ಲಕ್ಷ ರೂ. ಸುಪಾರಿ ಕೊಡಲಾಗಿದೆ ಎಂದು ಹೇಳಲಾಗಿದೆ. ಗಿರೀಶ್‌ ಚಕ್ರ ಅವರ ಸಹೋದರ ಪ್ರಕಾಶ್‌ ಅವರು ಈ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಸಚಿನ್ ಎನ್ನುವ ಫೋನ್ ಮಾಡಿ ಒಂದು ಡೀಲ್ ಬಂದಿದೆ ಎಂದು ಹೇಳಿದ್ದ.. ಹಾಫ್ ಮರ್ಡರ್‌ ಮಾಡೋದು ಇದೆ. ನಲ್ವತ್ತು ಲಕ್ಷ ಡೀಲ್ ಇದೆ ಎಂದು ಹೇಳಿದ್ದ. ಆದರೆ, ನಾನು ಬರೊಲ್ಲಾ‌, ಇದೆಲ್ಲಾ ಒಳ್ಳೆಯದಲ್ಲಾ ಎಂದು ಹೇಳಿದ್ದೆ. ಆದ್ರೆ ಸಚಿನ್ ನನ್ನ ಅಣ್ಣನ ಕೊಲೆ‌ ಮಾಡ್ತಾನೆ‌, ಡೀಲ್ ಮಾಡಿದ್ದಾನೆ ಎಂದು ಗೊತ್ತಿರಲಿಲ್ಲ ಎಂದು ಪ್ರಕಾಶ್‌ ಹೇಳಿದ್ದಾನೆ.

Murder Case Girish Chakra Sachin
ಕೊಲೆಯಾದ ಗಿರೀಶ್‌ ಚಕ್ರ ಮತ್ತು ಕೊಲೆಗೆ ಸುಪಾರಿ ಪಡೆದ ಸಚಿನ್

ಮಗನಿಗಿಂತ ಹೆಚ್ಚಾಗಿದ್ದ ಚಕ್ರ: ಕಣ್ಣೀರು ಹಾಕಿದ ಉಮೇಶ್‌ ಜಾಧವ್

ʻʻಅವನು ನನ್ನ ಮಗನಿಗಿಂದ ಹೆಚ್ಚಾಗಿದ್ದ. ಈ‌ ದೇಶದ ಬಗ್ಗೆ ಹೆಚ್ಚು ಚಿಂತನೆ ಮಾಡ್ತಿದ್ದ. ಮುಂಬರುವ ನಾಯಕನಾಗಿದ್ದ. ತಾಯಿ ತಂದೆ ಇಲ್ಲದ ತಬ್ಬಲಿ ಇದ್ದʼʼ ಎಂದು ಆಪ್ತನನ್ನು ಕಳೆದುಕೊಂಡ ಸಂಸದ ಡಾ. ಉಮೇಶ್‌ ಜಾಧವ್‌ ಕಣ್ಣೀರು ಹಾಕಿದ್ದಾರೆ.

ʻʻಇಂದು ಕಲಬುರಗಿಯಲ್ಲಿ ಕಾನೂನಿ ಸುವ್ಯವಸ್ಥೆ ಕೆಟ್ಟು ಹೋಗಿದೆ. ಈಗಾಗಲೇ ಐಜಿ ಮತ್ತು ಎಸ್ಪಿಯವರಿಗೆ ಅವರಿಗೆ ಮಾತನಾಡಿದ್ದೇನೆ. ನಿನ್ನೆಯೂ ಒಬ್ಬ ಬಿಜೆಪಿ ಕಾರ್ಯಕರ್ತನ‌ ಕೊಲೆಯಾಗಿದೆ. ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತರ ಕೊಲೆಯಾಗುತ್ತಿದೆ. ಇಡೀ ದೇಶದ ಚಿತ್ತ ಕಲಬುರಗಿಯತ್ತ ಇದೆʼʼ ಎಂದ ಉಮೇಶ್‌ ಜಾಧವ್‌ ಅವರು, ಕಲಬುರಗಿಯಲ್ಲಿ ಚುನಾವಣೆಯಾಗುವವರೆಗೂ ಮಿಲಿಟರಿ ಫೋರ್ಸ್ ಬರಬೇಕು ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ದಂಪತಿ ಮಂಗಳವಾರ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನಕ್ಕೆ ಪ್ರಿನ್ಸಿಪಲ್ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Fraud Case in kalaburagi
Koo

ಕಲಬುರಗಿ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿದರೆ, ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿ ಆಗಿದ್ದ ದಂಪತಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಇಬ್ಬರು ಕಲಬುರಗಿ JMFC 2 ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಇವರಿಬ್ಬರ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ (Fraud Case) ಆರೋಪ ಕೇಳಿಬಂದಿತ್ತು. ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದರು. ಕಳೆದ ಎರಡು ದಿನಗಳ ಹಿಂದೆ ಆರೋಪಿಗಳ ವಿರುದ್ಧ ರೋಜಾ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ದಂಪತಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು.

14 ದಿನಗಳ ನ್ಯಾಯಾಂಗ ಬಂಧನ

ಕಲಬುರಗಿಯಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಜೆಎಂಎಫ್‌ಸಿ ನ್ಯಾಯಾಲಯವು ಇಬ್ಬರಿಗೂ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೆ ಪೊಲೀಸರು ಆರೋಪಿಗಳಿಗೆ ಮೆಡಿಕಲ್ ಟೆಸ್ಟ್‌ಗೆ ಕರೆದೊಯ್ದಿದ್ದಾರೆ. ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ನಡೆಯಲಿದೆ. ನಂತರ ಕೇಂದ್ರಿಯ ಕಾರಾಗೃಹಕ್ಕೆ ಕರೆ ತರಲಿದ್ದಾರೆ.

Fraud Case in kalaburagi

ಇದನ್ನೂ ಓದಿ: Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

ಏನಿದು ಪ್ರಕರಣ?

ಕಿಲಾಡಿ ದಂಪತಿ ಕಲಬುರಗಿಯಲ್ಲಿ ಶಿಕ್ಷಕ ಸೇರಿ ಹಲವರಿಂದ ಸುಮಾರು 30 ಕೋಟಿ ರೂ. ಪಡೆದು ವಂಚಿಸಿರುವ ಘಟನೆ ನಡೆದಿತ್ತು. ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಅವರು ನಗರದ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಒಂದು ಆಫೀಸ್ ಮಾಡಿಕೊಂಡಿದ್ದರು. 1 ಲಕ್ಷ ತುಂಬಿದರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ ಅವರು 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದರು.

ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದರು ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದರು. ಈ ಪ್ರಕರಣದಲ್ಲಿ ವರ್ಧಮಾನೆ ದಂಪತಿಗೆ ಪರಾರಿಯಾಗಲು ಸಹಕರಿಸಿದ ಸಂಬಂಧಿಕರಾದ ಸುಧಾ ಠಾಕೂರ್ ಮತ್ತು ವಿಜಯಸಿಂಗ್ ಹಜಾರೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ರೋಜಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಆರೋಪಿಗಳು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Cyber Crime: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ವಂಚನೆ; 76 ಲಕ್ಷ ರೂ. ಸುಲಿಗೆ!

Cyber Crime: ಮನಿ ಲಾಂಡ್ರಿಂಗ್ (Money Laundering) ಕೇಸ್ ಸಂಬಂಧ ನಿಮ್ಮನ್ನು ವಿಚಾರಣೆ ಮಾಡಬೇಕಾಗಿದೆ. ನಿಮ್ಮ ವಿರುದ್ಧ ಸುಪ್ರೀಂ ಕೋರ್ಟ್ ಆರೆಸ್ಟ್ ವಾರೆಂಟ್ ಜಾರಿ ಮಾಡಿದೆ, ಸಿಬಿಐನವರು ನಿಮ್ಮನ್ನು ಆರೆಸ್ಟ್ ಮಾಡಬಹುದು ಎಂದೆಲ್ಲ ಬೆದರಿಸಿ ವಂಚಕರು ವೈದ್ಯರಿಂದ ಸುಲಿಗೆ ಮಾಡಿದ್ದಾರೆ.

VISTARANEWS.COM


on

kalaburagi cyber crime news fraud
ವಂಚನೆಗೊಳಗಾದ ವೈದ್ಯ ಡಾ. ಶಂಕರ್
Koo

ಕಲಬುರಗಿ: ಸಿಬಿಐ ಅಧಿಕಾರಿಗಳ (CBI Officers) ಹೆಸರಿನಲ್ಲಿ ಸಂಪರ್ಕಿಸಿ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರಿಂದ 76 ಲಕ್ಷ ರೂ.ಗಳಷ್ಟು ಹಣವನ್ನು ವಂಚಿಸಿದ (Cyber Crime) ಘಟನೆ ನಡೆದಿದೆ. ಕಲಬುರಗಿಯ (Kalaburagi news) ಪ್ರತಿಷ್ಠಿತ ವೈದ್ಯ ಪಿ. ಎಸ್ ಶಂಕರ್ ಎಂಬವರು ಹೀಗೆ ವಂಚನೆಗೆ (Fraud Case) ಒಳಗಾಗಿ 76 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಡಾ. ಪಿ‌.ಎಸ್ ಶಂಕರ್ ಅವರು ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಎಮಿರೆಟ್ಸ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೇ 14ರಂದು ವೈದ್ಯರಿಗೆ ವಿಜಯ್ ಕುಮಾರ್ ಚೌಬೆ ಎಂಬಾತ ಕರೆ ಮಾಡಿದ್ದು, ತಾನು ಮುಂಬಯಿ ಕ್ರೈಂ ಬ್ರಾಂಚ್ ಆಫೀಸರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಮುಂಬಯಿಯಲ್ಲಿ ನಿಮ್ಮ ವಿರುದ್ಧ ಮನಿ ಲಾಂಡ್ರಿಂಗ್ ಕೇಸ್ ಆಗಿದೆ ಎಂದು ಬೆದರಿಸಿದ್ದಾನೆ.

ಮನಿ ಲಾಂಡ್ರಿಂಗ್ (Money Laundering) ಕೇಸ್ ಸಂಬಂಧ ನಿಮ್ಮನ್ನು ವಿಚಾರಣೆ ಮಾಡಬೇಕಾಗಿದೆ. ನಿಮ್ಮ ಹೆಸರಲ್ಲಿ ಎಲ್ಲೆಲ್ಲಿ ಬ್ಯಾಂಕ್ ಅಕೌಂಟ್ ಇದೆ, ಯಾವ್ಯಾವ ಬ್ಯಾಂಕ್‌ನಲ್ಲಿ ಎಷ್ಟು ಹಣ ಇದೆ ಎಂದು ಮಾಹಿತಿ ನೀಡಿ ಎಂದು ಬೆದರಿಸಿ ಮಾಹಿತಿ ಪಡೆದಿದ್ದಾನೆ. ಈ ವಿಚಾರ ಹೊರಗಡೆ ಎಲ್ಲೂ ಹೇಳದಂತೆ ಹಾಗೂ ತಾವಿರುವ ಸ್ಥಳ ಬಿಟ್ಟು ಹೋಗದಂತೆ ಸೂಚನೆ ನೀಡಿದ್ದಾನೆ. ಬಳಿಕ, ನಿಮ್ಮ ವಿರುದ್ಧ ಸುಪ್ರೀಂ ಕೋರ್ಟ್ ಆರೆಸ್ಟ್ ವಾರೆಂಟ್ ಜಾರಿ ಮಾಡಿದೆ, ಸಿಬಿಐನವರು ನಿಮ್ಮನ್ನು ಆರೆಸ್ಟ್ ಮಾಡಬಹುದು ಎಂದು ಹೆದರಿಸಿದ್ದಾನೆ.

ನಿಮಗೆ ತೊಂದರೆ ಆಗಬಾರದು ಅಂದರೆ ಸಿಬಿಐ ಹಿರಿಯ ಅಧಿಕಾರಿಗಳಿಗೆ ಪ್ರಿಯಾರಿಟಿ ಎನ್‌ಕ್ವೈಯರಿ ಮಾಡುವಂತೆ ಮನವಿ ಮಾಡಿಕೊಳ್ಳಬೇಕು ಎಂದಿದ್ದಾನೆ. ಅದರಂತೆ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆಯಲು ಮುಂದಾದ ವೈದ್ಯ ಶಂಕರ್‌ಗೆ, ಸಿಬಿಐ ಅಧಿಕಾರಿ ಆಕಾಶ್ ಪುಲ್ಹರಿ ಎಂಬ ಹೆಸರಿನವನನ್ನು ಪರಿಚಯಿಸಿದ್ದಾನೆ. ಪುಲ್ಹರಿಗೆ ಪತ್ರ ಬರೆದು ವೈದ್ಯರು ಮನವಿ ಮಾಡಿಕೊಂಡಿದ್ದಾರೆ. ಸ್ಕೈಪ್ ಆಪ್ ಮೂಲಕ ವೈದ್ಯರನ್ನು ಸಂಪರ್ಕಿಸಿದ ಆಕಾಶ್ ಪುಲ್ಹರಿ, ಬಳಿಕ ವೈದ್ಯರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ದಾಖಲಾಗಿರುವುದಾಗಿ ನಂಬಿಸಿದ್ದಾನೆ.

ನಂತರ ವೈದ್ಯರ ಅಕೌಂಟ್‌ನಲ್ಲಿರುವ ಹಣದ ಬಗ್ಗೆ ಮಾಹಿತಿ ಪಡೆದು, ತಕ್ಷಣ ತನ್ನ ಅಕೌಂಟ್‌ಗೆ ಹಣ ಟ್ರಾನ್ಸ್‌ಫರ್ ಮಾಡಿಸಿಕೊಂಡಿದ್ದಾನೆ. ಹಣ ಕಳೆದುಕೊಂಡ ಬಳಿಕ ವೈದ್ಯರಿಗೆ ತಾವು ಮೋಸ ಹೋಗಿರುವ ಕುರಿತು ಜ್ಞಾನೋದಯವಾಗಿದೆ. ಈ ಬಗ್ಗೆ ದೂರು ದಾಖಲು ಮಾಡಿದ್ದಾರೆ. ಕಲಬುರಗಿಯ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ನಕಲಿ ಸಿಬಿಐ ಅಧಿಕಾರಿಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

ಹಿಂಡಲಗಾ ಜೈಲಿನಲ್ಲಿ ಸಿಬ್ಬಂದಿಗಳಿಗೇ ಕೈದಿಗಳಿಂದ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ (Hindalaga Jail) ಸಿಬ್ಬಂದಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಕೈದಿಗಳು (Prisoners) ಸೃಷ್ಟಿಸಿರುವ ಜೀವಭಯದಲ್ಲಿ ಸಿಬ್ಬಂದಿಗಳೇ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ. ರೂಲ್ಸ್ ಫಾಲೋ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ (Assault Case) ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ.

ಒಂದೆರಡಲ್ಲ, ಕಳೆದ ಕೆಲವು ದಿನಗಳಿಂದ ನಾಲ್ಕೈದು ಬಾರಿ ಸಿಬ್ಬಂದಿ ಮೇಲೆ ಕೈದಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು, ಒಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೈಲಿನ ನಿಯಮಾವಳಿ ಉಲ್ಲಂಘಿಸಿ ನಡೆದುಕೊಳ್ಳುತ್ತಿದ್ದ ಕೈದಿ ರಾಹಿಲ್ ಅಲಿಯಾಸ್ ರೋಹನ್ ಎಂಬವನಿಗೆ ರೂಲ್ಸ್ ಫಾಲೋ ಮಾಡು ಎಂದು ಹೇಳಿದ್ದಕ್ಕೆ ವಾರ್ಡರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಕೈದಿ ರಾಹಿಲ್ ಹಾಸನದಿಂದ ಗಡೀಪಾರಾಗಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿದ್ದು, ಅತೀ ಭದ್ರತೆ ವಿಭಾಗದಲ್ಲಿದ್ದಾನೆ.

ಈತ ಆಸ್ಪತ್ರೆಗೆ ಹೋಗಲು ಸ್ಥಳೀಯ ಸಿಬ್ಬಂದಿಯ ಅನುಮತಿ ಬೇಕಿದ್ದು, ತಡವಾಗಿ ಅನುಮತಿ ನೀಡಿದರು ಎನ್ನುವ ಕಾರಣಕ್ಕೆ ಹೊರ ಬಂದು ವಿನೋದ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಾಲಿನಿಂದ ಒದ್ದು ಕೈಯಿಂದ ಹಿಗ್ಗಾಮಗ್ಗಾ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ವಿನೋಸ್‌ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ತೋರಿಸಿದ್ದಾರೆ. ಕೈದಿಗಳ ಗೂಂಡಾಗಿರಿಗೆ ಬೇಸತ್ತು ಕೆಲಸಕ್ಕೆ ಬರಲು ಭಯ ಪಡುವ ಸ್ಥಿತಿ ಸಿಬ್ಬಂದಿಯದ್ದಾಗಿದೆ. ಈ ಹಿಂದೆಯೂ ಸಿಬ್ಬಂದಿ ಮೇಲೆ‌ ಹಲ್ಲೆಯಾಗಿದೆ, ಆದರೆ ಕ್ರಮ ಆಗಿಲ್ಲ‌ ಎಂದು ವಿನೋದ್ ದೂರಿದ್ದಾರೆ. ಮೇಲಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಲ್ಲೆಗೊಳಗಾದ ಸಿಬ್ಬಂದಿ ವಿನೋದ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

Continue Reading
Advertisement
ರಾಹುಲ್‌ ಗಾಂಧಿ rahul gandhi ippb account 2
ಪ್ರಮುಖ ಸುದ್ದಿ8 mins ago

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

All Eyes on Rafah
ವಿದೇಶ15 mins ago

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

Sujay Hegde Manasare actor Engagement with Prerana
ಕಿರುತೆರೆ19 mins ago

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Viral News
ವೈರಲ್ ನ್ಯೂಸ್50 mins ago

Viral News: ರೈಲಿನಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ52 mins ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

dk shivakumar jagdeep dhankar
ಪ್ರಮುಖ ಸುದ್ದಿ55 mins ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್57 mins ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ58 mins ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್1 hour ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ1 hour ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌