Murder Case : ತಂಗಿಯನ್ನು ಚುಡಾಯಿಸಿದ್ದು ಯಾಕೆ ಎಂದು ಪ್ರಶ್ನಿಸಿದ ಅಣ್ಣನನ್ನು ಕಲ್ಲು ಎತ್ತಿಹಾಕಿ ಕೊಂದ ಗೆಳೆಯರು! Vistara News
Connect with us

ಕಲಬುರಗಿ

Murder Case : ತಂಗಿಯನ್ನು ಚುಡಾಯಿಸಿದ್ದು ಯಾಕೆ ಎಂದು ಪ್ರಶ್ನಿಸಿದ ಅಣ್ಣನನ್ನು ಕಲ್ಲು ಎತ್ತಿಹಾಕಿ ಕೊಂದ ಗೆಳೆಯರು!

Murder Case : ತಂಗಿಯನ್ನು ಚುಡಾಯಿಸಿದ್ದೇಕೆ ಎಂದು ಪ್ರಶ್ನಿಸಿದ ಅಣ್ಣನನ್ನೇ ಕೊಲೆ ಮಾಡಲಾಗಿದೆ. ಕೊಂದದ್ದು ಖುದ್ದು ಅವನದೇ ಗೆಳೆಯ. ಚುಡಾಯಿಸಿದ್ದು ಕೂಡಾ ಗೆಳೆಯರೇ. ಗೆಳೆಯರನ್ನು ನಂಬುವುದು ಹೇಗೆ?

VISTARANEWS.COM


on

Youngster murder
Koo

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚೌಡಾಪುರ ಗ್ರಾಮದಲ್ಲಿ ಯುವಕನೊಬ್ಬನನ್ನು (Youngster Murdered) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ (Murder Case) ಮಾಡಲಾಗಿದೆ. ಮಹಾಂತಪ್ಪ ಗಂಡೋಲಿ (26) ಕೊಲೆಯಾದ ಯುವಕ. ಮಹಾಂತಪ್ಪನ ತಂಗಿಯನ್ನು ಆತನದೇ ಕೆಲವು ಗೆಳೆಯರು ಚುಡಾಯಿಸುತ್ತಿದ್ದರು (Murder for questioning molestation of sister) ಇದನ್ನು ಪ್ರಶ್ನಿಸಿದ್ದೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ.

ಭಾನುವಾರ ಸಂಜೆ ಚೌಡಾಪುರದಲ್ಲಿ ಮಹಾಂತೇಶ್‌ ತನ್ನ ಗೆಳೆಯರೊಂದಿಗೆ ಬಾರ್‌ನಲ್ಲಿ ಕುಡಿಯಲು ಕೂತಾಗ ಚುಡಾವಣೆಯ ವಿಷಯ ಚರ್ಚೆಗೆ ಬಂದಿದೆ. ತಂಗಿಯನ್ನು ಚುಡಾಯಿಸಿದರೆ ಸರಿ ಇರುವುದಿಲ್ಲ ಎಂದು ಮಹಾಂತೇಶ್‌ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ. ಅಲ್ಲೇ ಸಣ್ಣ ಮಟ್ಟದ ಜಗಳ ನಡೆದಿತ್ತು.

ಈ ನಡುವೆ, ಮಹಾಂತೇಶ್‌ ಬಾರ್‌ನಿಂದ ಹೊರಗೆ ಬರುವಾಗ ಆತನನ್ನು ತಡೆದು ನಿಲ್ಲಿಸಿ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಪರಶುರಾಮ ದಶರಥ ಎಂಬಾತ ಒಳಗಡೆ ಏನು ಮಾತನಾಡಿದ್ದು ಎಂದು ಪ್ರಶ್ನಿಸಿ ಮಹಾಂತೇಶನ ಮೇಲೆ ಎರಗಿದ್ದಾನೆ. ಮತ್ತು ಮಹಾಂತೇಶನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂಗಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ನಡೆದಿರುವ ಈ ಕೊಲೆ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಪಿ ವಿರುದ್ಧ ಮತ್ತು ಆತನಿಗೆ ಕುಮ್ಮಕ್ಕು ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಕೇಳಿಬಂದಿದೆ.

ಇದನ್ನೂ ಓದಿ: Student death : ಅಮ್ಮಾ ಬಕೆಟ್‌ ಇದ್ಯಾ? ಎಂದು ಬಾಲ್ಕನಿಯಿಂದ ಬಾಗಿ ಕೇಳಿದ ಮೆಡಿಕಲ್‌ ವಿದ್ಯಾರ್ಥಿ ಕೆಳಗೆ ಬಿದ್ದು ಸಾವು

ಪ್ರೀತಿಸಿ ಮದುವೆ ಆಗಿದ್ದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ದೇವನಹಳ್ಳಿ: ಕೇವಲ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ದಂಪತಿಯ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೇ ಅಥವಾ ಬೇರೆ ಏನಾದರೂ ಅನಾಹುತವೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಮೃತಪಟ್ಟವರನ್ನು ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28), ಸಹನಾ (26) ಎಂದು ಗುರುತಿಸಲಾಗಿದೆ.

Newly wed couple dead

ರಮೇಶ್‌ ಮತ್ತು ಸಹನಾ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅವರು ಮೂರು ತಿಂಗಳ ಹಿಂದಷ್ಟೇ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಮನೆಯಲ್ಲಿ ವಿರೋಧವಿದ್ದ ಹಿನ್ನೆಲೆಯಲ್ಲಿ ಅವರು ಯಾರ ಕಿರಿಕಿರಿಯೂ ಬೇಡ ಎಂದು ಪ್ರತ್ಯೇಕವಾಗಿ ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಎರಡು ದಿನದ ಹಿಂದೆ ಸಹನಾ ಮತ್ತು ರಮೇಶ್‌ ಅವರು ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಅಲ್ಲಿ ಮನೆಯವರ ಜತೆ ಚೆನ್ನಾಗಿಯೇ ಇದ್ದರು. ತಮ್ಮ ಮದುವೆ ವಿಚಾರದ, ನಂತರ ಎದುರಿಸಿದ ಸಮಸ್ಯೆಗಳ ಬಗ್ಗೆ ಸಹಜವಾಗಿ ಮಾತನಾಡಿದ್ದರು.

ಇದೆಲ್ಲ ಆಗಿ ಅವರು ರಾತ್ರಿಯೇ ಮನೆಯಿಂದ ಹೊರಟಿದ್ದರು. ತಮ್ಮ ಮನೆಗೆ ಹೋಗುವುದಾಗಿ ಹೇಳಿದ್ದರು. ಆದರೆ, ಸೋಮವಾರ ಮುಂಜಾನೆ ಅವರ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.

ಸ್ಥಳೀಯರು ಮತ್ತು ಪೊಲೀಸರಿಂದ ನೀರಿ‌ನಲ್ಲಿದ್ದ ಮೃತದೇಹ ಹೊರತೆಗೆಯಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಇದರ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ

Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Edited by

Girls standing in road with rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್‌ (Weather report) ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ

ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.

ಮಲೆನಾಡಲ್ಲೂ ಸಣ್ಣ ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ‌ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ

ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Bike Accident: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು

Bike Accident: ಕಲಬುರಗಿ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ಅಫಘಾತ ನಡೆದಿದೆ. ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿದ್ದರಿಂದ ಇಬ್ಬರು ವಿದಯಾರ್ಥಿಗಳು ಮೃತಪಟ್ಟಿದ್ದಾರೆ.

VISTARANEWS.COM


on

Edited by

Bike Accident
Koo

ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).

ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!

ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಯುವಕರಿಂದ ಥಳಿತ

Assault Case

ಯಾದಗಿರಿ: ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಥಳಿಸಿರುವ ಘಟನೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಕಬಡ್ಡಿ ಪಂದ್ಯದ ವೇಳೆ ದೈಹಿಕ ಶಿಕ್ಷಕ ಔಟ್ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡು ಯುವಕನೊಬ್ಬ, ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ. ಹೀಗಾಗಿ ಆತನ ಮೇಲೆ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಗಲಾಟೆ ಬಿಡಿಸಲು ಅಧಿಕಾರಿಗಳು, ಸಿಬ್ಬಂದಿ ಹರಸಾಹಸಪಟ್ಟರು.

10 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ; ಕಾಮುಕ ಹೆಡ್‌ ಮಾಸ್ಟರ್‌ ಅರೆಸ್ಟ್‌

Gadaga sexual assault

ಗದಗ: ಮಕ್ಕಳಿಗೆ ಸದ್ಬುದ್ಧಿಯನ್ನು ಹೇಳಿಕೊಡಬೇಕಾದ ಶಿಕ್ಷಕನೊಬ್ಬ ಮಗಳಂಥ ವಿದ್ಯಾರ್ಥಿನಿ ಮೇಲೆ ತನ್ನ ಕಾಮುಕತನವನ್ನು (Harassment Case) ಪ್ರದರ್ಶನ ಮಾಡಿದ ಹೇಯ ಘಟನೆ ಗದಗ ಜಿಲ್ಲಾ (Gadaga News) ನರಗುಂದ ತಾಲೂಕಿನಲ್ಲಿ ನಡೆಸಿದೆ. ನರಗುಂದ ಪಟ್ಟಣದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ (Head Master of Urdu school) 10 ವರ್ಷದ ಬಾಲಕಿಗೆ ಲೈಂಗಿಕ ಹಿಂಸೆ (Sexual harassment on 10 year old girl ನೀಡಿದ್ದಾನೆ.

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಪ್ರಭಾರ ಮುಖ್ಯ ಶಿಕ್ಷಕನಾಗಿರುವ ಅಲ್ಲಾದಿನ್ ಚವಡಿಯೇ ಈ ರೀತಿ ನಡೆದುಕೊಂಡವನು. ಅವನು ತನ್ನದೇ ಶಾಲೆಯ 10 ವರ್ಷದ ವಿದ್ಯಾರ್ಥಿನಿಗೆ ಹಿಂಸೆ ನೀಡಿದ್ದಾನೆ.

ಆರೋಪಿ ಚವಡಿ ಬಾಲಕಿಯನ್ನು ತನ್ನ ಕಚೇರಿಯ ಒಳಗೆ ಕರೆಸಿಕೊಂಡು ಆಕೆಯ ದೇಹದ ಮೇಲೆಲ್ಲ ಕೈ ಆಡಿಸುತ್ತಿದ್ದನೆಂದು ಹೇಳಲಾಗಿದೆ. ಈ ವಿಷಯವನ್ನು ಯಾರಿಗೂ ಹೇಳಬಾರದು. ಹೇಳಿದರೆ ನಿನ್ನನ್ನು ಕೊಂದು ಬಿಡುತ್ತೇನೆ ಎಂದು ಬೆದರಿಸಿದ್ದ ಎನ್ನಲಾಗಿದೆ.

ಶಾಲೆಯಲ್ಲಿ ಆದ ಘಟನೆಯ ಬಗ್ಗೆ ಹುಡುಗಿಯ ತಾಯಿಯ ಬಳಿ ಹೇಳಿದ್ದಳು. ಮನೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ದೂರು ನೀಡಿದರೆ ಮಗಳ ಭವಿಷ್ಯಕ್ಕೆ ತೊಂದರೆಯಾದೀತು, ಮದುವೆ ಮಾಡುವುದು ಕಷ್ಟವಾದೀತು ಎಂದು ಭಾವಿಸಿದ ಮನೆಯವರು ಕೆಲವು ದಿನ ಸುಮ್ಮನಿದ್ದರು.

ಇದನ್ನೂ ಓದಿ | Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬಳಿಕ ಮುಂದೆಯೂ ಈ ರೀತಿಯ ಘಟನೆ ಮುಂದುವರಿಯಬಾರದು ಎಂಬ ಕಾರಣಕ್ಕಾಗಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಈಗ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಅನ್ವಯ ಎಫ್ ಐ ಆರ್ ದಾಖಲಾಗಿದೆ.

ಪೊಲೀಸರು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಶಿಕ್ಷಕ ಅಲ್ಲಾದಿನ್‌ನನ್ನು ಪೋಕ್ಸೋ ಕಾಯ್ದೆ‌ ಅಡಿ ಬಂಧಿಸಿದ್ದಾರೆ.

Continue Reading

ಕರ್ನಾಟಕ

Veerendra Patil : ಮಾಜಿ ಸಿಎಂ ವೀರೇಂದ್ರ ಪಾಟೀಲ್‌ ಪತ್ನಿ ಶಾರದಾ ಪಾಟೀಲ್‌ ವಿಧಿವಶ

Veerendra Patil : ರಾಜ್ಯದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‌ ಅವರ ಪತ್ನಿ ಶಾರದಾ ಪಾಟೀಲ್‌ ನಿಧನರಾಗಿದ್ದಾರೆ. ವೀರೇಂದ್ರ ಪಾಟೀಲ್‌ ಅವರು 1997ರಲ್ಲಿ ನಿಧನರಾಗಿದ್ದರು.

VISTARANEWS.COM


on

Edited by

Veerendra patil wife death
Koo

ಕಲಬುರಗಿ: ರಾಜ್ಯದ ಮಾಜಿ ಮುಖ್ಯಮಂತ್ರಿ (Former Chief minister) ವೀರೇಂದ್ರ ಪಾಟೀಲ್ (Veerendra patil) ಅವರ ಪತ್ನಿ ಶಾರದಾ ಪಾಟೀಲ್‌ (Sharada Patil) ಅವರು ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ಆಗಿತ್ತು.

ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಇದ್ದ ಅವರು ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಚಿಂಚೋಳಿಯ ವೀರೇಂದ್ರ ಪಾಟೀಲ್ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸುವ ಚಿಂತನೆ ಇದೆ. ಶಾರದಾ ಪಾಟೀಲ್ ಅವರು ಮಾಜಿ ಶಾಸಕ ಕೈಲಾಸನಾಥ ಪಾಟೀಲ್ ಅವರ ತಾಯಿಯಾಗಿದ್ದಾರೆ.

ವೀರೇಂದ್ರ ಪಾಟೀಲ್-ಶಾರದಾ ಪಾಟೀಲ್ ದಂಪತಿಗೆ ಕೈಲಾಶನಾಥ್ ಮತ್ತು ಇಬ್ಬರು ಪುತ್ರಿಯರಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ವೀರೇಂದ್ರ ಪಾಟೀಲ್‌ ಅವರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 1968-1971 ಅವಧಿಯಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ 33 ತಿಂಗಳು 10 ದಿನ ಅಧಿಕಾರ ನಡೆಸಿದ್ದರು. 1989-1990ರ ಎರಡನೇ ಬಾರಿಗೆ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅವರು ನಿಜಲಿಂಗಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕೆಲಸ ಮಾಡಿದ್ದರು.

ವೀರೇಂದ್ರ ಪಾಟೀಲ್‌ ಅವರ ಸಾಹಸಿಕ ರಾಜಕೀಯ ಬದುಕಿನಲ್ಲಿ ಬೆನ್ನೆಲುಬಾಗಿ ನಿಂತಿದ್ದರು ಶಾರದಾ ಪಾಟೀಲ್‌. ವೀರೇಂದ್ರ ಪಾಟೀಲ ಅವರು 1997ರ ಮಾರ್ಚ್‌ 14ರಂದು ನಿಧನರಾಗಿದ್ದರು.

ಇದನ್ನೂ ಓದಿ: BS Viswanathan : ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಎಸ್. ವಿಶ್ವನಾಥನ್ ನಿಧನ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಪಾಟೀಲ್‌ ಸಂತಾಪ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರ ನಿಧನದ ವಿಚಾರ ಬೇಸರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಆದರ್ಶ ಗೃಹಿಣಿಯಾಗಿದ್ದರು. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಮೃತರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Continue Reading

ಉಡುಪಿ

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?

Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

Edited by

Girl standing in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಲ್ಕು ಜಿಲ್ಲೆಗಳಿಗೆ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಒಳನಾಡಲ್ಲಿ ಹಗುರ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
MLA BY Vijayendra
ಕರ್ನಾಟಕ3 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ3 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ3 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ3 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ4 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್4 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ5 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ5 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ5 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ5 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ22 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌