Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ - Vistara News

ಕಲಬುರಗಿ

Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ

Prajwal Revanna Case: ಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ. ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

VISTARANEWS.COM


on

Prajwal Revanna Case HD Revanna visit to Gangapur and special pooja to Dattatreya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಪ್ರಜ್ವಲ್‌ ರೇವಣ್ಣ ಮೇಲಿನ ಅತ್ಯಾಚಾರ ಪ್ರಕರಣಕ್ಕೆ (Prajwal Revanna Case) ಸಂಬಂಧಪಟ್ಟಂತೆ ಬಂದಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ.

ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ಎಚ್.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ಸಲುವಾಗಿ ರೇವಣ್ಣ ಅವರು ತಮ್ಮ ಜತೆಯಲ್ಲಿಯೇ ಪುರೋಹಿತರನ್ನು ಕರೆದುಕೊಂಡು ಬಂದಿರುವುದು ವಿಶೇಷವಾಗಿತ್ತು.

Prajwal Revanna Case HD Revanna visit to Gangapur and special pooja to Dattatreya

ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

Prajwal Revanna Case HD Revanna visit to Gangapur and special pooja to Dattatreya

ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalaburagi News: ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

Kalaburagi News: ನೆಲಗೋಗಿ ಕ್ರಾಸ್‌ ಬಳಿ ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದವು. ಇದೇ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಲಾರಿಗೆ ಕಾರು ಹಿಂಬದಿಯಿಂದ ಜೋರಾಗಿ ಡಿಕ್ಕಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Kalaburagi News
Koo

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್‌ ಬಳಿ ಭೀಕರ ಅಪಘಾತ (Kalaburagi News) ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಯ್ಯ ಸ್ವಾಮಿ (35) ಹಾಗೂ ಲೋಕೇಶ್‌ (36) ಮೃತರು. ವೇಗವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಗುದ್ದಿದ ಕಾರಣ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೆಲಗೋಗಿ ಕ್ರಾಸ್‌ ಬಳಿ ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದವು. ಇದೇ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಲಾರಿಗೆ ಕಾರು ಹಿಂಬದಿಯಿಂದ ಜೋರಾಗಿ ಡಿಕ್ಕಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Road Accident

ಶನಿವಾರ (ಜೂನ್‌ 15) ಬೆಳಗ್ಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ ನಡೆದಿತ್ತು. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿದ್ದವು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: Road Accident: ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಐದು ಕಾರುಗಳು ಜಖಂ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಪ್ರಮಾಣ ತಗ್ಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ (Karnataka Weather Forecast) ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯ ಸಿಂಚನ

ಉತ್ತರ ಒಳನಾಡು, ಕರಾವಳಿಯ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂ.ಮೀ, ಉಡುಪಿ, ಶೋರಾಪುರ, ಸೈದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ , ಕೆಂಭಾವಿ , ತಾವರಗೇರಾ , ಮುದಗಲ್, ಮಂಠಾಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಹೊನಾವರ ವೀಕ್ಷಣಾಲಯ , ಕಾರ್ಕಳ, ಸಿದ್ದಾಪುರ, ಮಂಕಿ, ಯಲ್ಲಾಪುರ, ಯಡ್ರಾಮಿ ಸೇರಿದಂತೆ ದೇವದುರ್ಗ, ಕವಡಿಮಟ್ಟಿ ಎ.ಆ‌ರ್.ಜಿ, ಮಸ್ಕಿ, ಕಲಬುರಗಿ ವೀಕ್ಷಣಾಲಯ , ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 16ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಒಳನಾಡಿನ ಕೆಲವು ಸ್ಥಳಗಳಲ್ಲಿ ಕೆಲವೊಮ್ಮೆ ಗುಡುಗು ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೀನುಗಾರರಿಗೆ ನೀಡಲಾಗಿದ್ದ ಸೂಚನೆಯು ಮುಗಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

Vitamin C foods

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂಟಲಲ್ಲಿ ನೋವಿದ್ದರೆ ಬೆಚ್ಚಗಿನ ಶುಂಠಿಯ ಕಷಾಯಕ್ಕೆ ಕೊಂಚ ಜೇನುತುಪ್ಪ ಸೇರಿಸಿ ಕುಡಿದರೆ ಆರಾಮ ದೊರೆತೀತು.

iamge of Zinc Foods

ಜಿಂಕ್‌ ಆಹಾರಗಳು

ನಮ್ಮ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸತುವಿನಂಶ ಇರುವ ಆಹಾರಗಳು ಸಹ ಅಗತ್ಯ. ಇದನ್ನು ಸಿ ಜೀವಸತ್ವದಂತೆ ಹೇರಳವಾಗಿ ಪಡೆಯಲಾಗದು. ಬದಲಿಗೆ, ಹಲವಾರು ಆಹಾರಗಳಿಂದ ಮಿಲಿ ಗ್ರಾಂ ಗಳ ಲೆಕ್ಕದಲ್ಲಿಯೇ ಪಡೆಯಬೇಕು ನಾವು. ಇದಕ್ಕಾಗಿ ಅಣಬೆಗಳು, ಪಾಲಕ್‌ ಸೊಪ್ಪು, ದ್ವಿದಳ ಧಾನ್ಯಗಳು, ಮೊಸರು, ಹಾಲು, ಗೋಡಂಬಿ, ಕುಂಬಳಕಾಯಿ ಬೀಜ, ಶೇಂಗಾ, ಬಾದಾಮಿಯಂಥ ಆಹಾರಗಳ ಮೂಲಕ ಈ ಸತ್ವವನ್ನು ಪಡೆಯಬಹುದು.

ಒಮೇಗಾ 3 ಕೊಬ್ಬಿನಾಮ್ಲ

ಇದು ನಮ್ಮ ಮೆದುಳು ಮತ್ತು ಹೃದಯದ ಯೋಗಕ್ಷೇಮ ನೋಡಿಕೊಳ್ಳುವುದಷ್ಟೇ ಅಲ್ಲ, ಸೋಂಕುಗಳನ್ನು ದೂರ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದಕ್ಕಾಗಿ ಮಳೆಗಾಲದ ಆರಂಭದಲ್ಲಿ ದೊರೆಯುವ ಬೆಣ್ಣೆ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿ. ಜೊತೆಗೆ ವಾಲ್‌ನಟ್‌, ಬಾದಾಮಿ, ಅಗಸೆಬೀಜ, ಕೊಬ್ಬಿರುವ ಮೀನುಗಳನ್ನು ಸೇವಿಸುವುದರಿಂದ ಒಮೇಗಾ ೩ ಕೊಬ್ಬಿನಾಮ್ಲ ವಿಫುಲವಾಗಿ ಲಭಿಸುತ್ತದೆ.

Probiotic foods

ಪ್ರೊಬಯಾಟಿಕ್‌ ಆಹಾರಗಳು

ನಮ್ಮ ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರವೇ ದೇಹದ ಪ್ರತಿರೋಧಕ ಶಕ್ತಿ ಬಲವಾಗಿರುತ್ತದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಭರಪೂರ ಇದ್ದಷ್ಟೂ ದೇಹ ರೋಗಮುಕ್ತವಾಗಿರುತ್ತದೆ ಎನ್ನುತ್ತವೆ ಅ‍ಧ್ಯಯನಗಳು. ಹಾಗಾಗಿ ಪ್ರೊಬಯಾಟಿಕ್‌ ಆಹಾರಗಳು ನಮ್ಮ ದೇಹಕ್ಕೆ ಬೇಕೇಬೇಕು. ಇದಕ್ಕಾಗಿ ಮೊಸರು, ಮಜ್ಜಿಗೆಯಂಥ ಹುದುಗು ಬರಿಸಿದ ಆಹಾರಗಳನ್ನು ಪ್ರತಿದಿನ ಸೇವಿಸಿ.

infusions

ಕಷಾಯಗಳು

ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗೆ ಇರಿಸಿಕೊಳ್ಳುವುದಕ್ಕೆ ತರಹೇವಾರಿ ಕಷಾಯಗಳನ್ನು ಮಾಡಿಕೊಳ್ಳಬಹುದು. ಇದರಿಂದಲೂ ನಮ್ಮ ದೇಹದ ಸೋಂಕು ನಿರೋಧಕ ಶಕ್ತಿ ಪ್ರಬಲವಾಗುತ್ತದೆ. ಇದಕ್ಕಾಗಿ ಯಾವೆಲ್ಲ ವಸ್ತುಗಳನ್ನು ಉಪಯೋಗಿಸಬಹುದು ಎನ್ನುವುದಕ್ಕೆ ಉಪಯುಕ್ತ ವಿವರಗಳು ಇಲ್ಲಿವೆ. ಈ ಯಾವುದೇ ವಸ್ತುಗಳನ್ನು ಬಳಸಿ ಕಷಾಯ ಮಾಡಿಕೊಳ್ಳಬಹುದು.

Raw Turmeric with Powder Cutout

ಅರಿಶಿನ

ಇದರಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಸೋಂಕುಗಳನ್ನು ಹೊಡೆದೋಡಿಸುತ್ತದೆ

Benefits Of Ginger

ಶುಂಠಿ

ಇದರ ಜಿಂಜರಾಲ್‌ ಅಂಶದಲ್ಲಿ ಉರಿಯೂತ ಶಮನ ಮಾಡಿ, ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ

Garlic

ಬೆಳ್ಳುಳ್ಳಿ

ಇದರ ಅಲ್ಲಿಸಿನ್‌ ಅಂಶದಲ್ಲಿ ವೈರಸ್‌ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣವಿದೆ

Cinnamon sticks Anti Infective Foods

ದಾಲ್ಚಿನ್ನಿ ಚಕ್ಕೆ

ಇದರಲ್ಲಿರುವ ಉರಿಯೂತ ಶಾಮಕ ಸತ್ವಗಳು ರೋಗನಿರೋಧಕವೂ ಹೌದು

black pepper

ಕಾಳು ಮೆಣಸು

ಇದರ ಕ್ಯಾಪ್ಸೈಸಿನ್‌ನಲ್ಲಿ ದೇಹದ ಪ್ರತಿರೋಧಕತೆಯನ್ನು ವೃದ್ಧಿಸುವ ಸಾಮರ್ಥ್ಯವಿದೆ

cumin

ಜೀರಿಗೆ

ಇದರ ಉತ್ಕರ್ಷಣ ನಿರೋಧಕಗಳು ಸೋಂಕಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ

coriander Coriander Benefits

ಧನಿಯ

ಇದರ ಉತ್ಕರ್ಷಣ ನಿರೋಧಕ ಸತ್ವಗಳು ಸೋಂಕುಗಳನ್ನು ನಿವಾರಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Cow Smuggling : ಗೋವು ಸಾಗಿಸುತ್ತಿದ್ದವರಿಂದ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಗಂಭೀರ ಹಲ್ಲೆ

Cow Smuggling : ಟಂ ಟಂ‌ ಹಾಗೂ ಪಿಕ್ ವಾಹನದ ಮೂಲಕ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಅವರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯವಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

cow smuuggling
Koo

ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಆರು ಗೋವುಗಳ ರಕ್ಷಣೆ ಮಾಡಲು(Cow Smuggling) ಮುಂದಾದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣ ಗುರುವಾರ ರಾತ್ರಿ ನಡೆದಿದೆ. ಗೋವುಗಳನ್ನು ಸಾಗಿಸುತ್ತಿದ್ದನ್ನು ತಡೆದಿದ್ದಕ್ಕೆ‌ 30ರಿಂದ 35 ಮುಸ್ಲಿಂ ಯುವಕರು ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಮಾಡಿ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ. ನಡೆದಿದ್ದು, ರಾಮ ಸೇನೆ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಕಲ್ಲು ತೂರಾಟ ನಡೆದಿದೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ. ಬಕ್ರಿದ್ ಹಬ್ಬದ ಹಿನ್ನಲೆಯಲ್ಲಿ ಖಾದ್ರಿ ಚೌಕ್ ಬಳಿ‌ ಕಸಾಯಿ ಖಾನೆಗೆ‌ ಗೋವುಗಳನ್ನು ಸಾಗಿಸುತ್ತಿದ್ದರು. ಆಳಂದ ಕಾಲೋನಿ ಬಳಿ ಒಂದು ಟಂ ಟಂ‌ ಹಾಗೂ ಪಿಕ್ ವಾಹನದ ಮೂಲಕ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಅವರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯವಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಚೌಕ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲೂ ಹಲ್ಲೆ, ಪ್ರತಿಭಟನೆ

ಗೋವು ಸಾಗಿಸುತ್ತಿದ್ದನ್ನು ಪ್ರಶ್ನಿಸಿದ ಬಜರಂಗ ದಳ ಕಾರ್ಯಕರ್ತನ ಮೇಲೆ ಮುಸ್ಲಿಮರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಘಟನೆ ಬಳಿಕೆ ಇಲ್ಲಿನ ಉಪನಗರ ಠಾಣೆಗೆ ಹಿಂದೂಪರ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಸೋಮಶೇಖರ ಚೆನ್ನಶೆಟ್ಟಿ ಹಲ್ಲೆಗೊಳಗಾದ ಯುವಕ. ಗೋ ರಕ್ಷಣೆ ಮಾಡಲು ಹೋದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ನಗರದ ಹಳೆ ಎಪಿಎಂಸಿ ಬಳಿ ಘಟನೆ ನಡೆದಿದ್ದು, ಪ್ರಾಣಿ ರಕ್ಷಕನೂ ಆಗಿರೋ ಸೋಮಶೇಖರನ ಮೇಲಿನ ಹಲ್ಲೆಯನ್ನು ಖಂಡಿಸಲಾಗಿದೆ. ಉರಗ ರಕ್ಷಕನೂ ಆಗಿರೋ ಸೋಮಶೇಖರ ಮೇಲೆ ಹಲ್ಲೆ ಮಾಡಿರುವುದು ತಪ್ಪು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇದನ್ನೂ ಓದಿ: Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

ಪ್ರತಿಭಟನೆ ಬಳಿಕ ವಿಧಾನ ಸಭೆ ವಿಪಕ್ಷ ಉಪನಾಯಕರ ಅರವಿಂದ ಬೆಲ್ಲದ್ ಮಾತನಾಡಿ, ಶಾಂತ ಧಾರವಾಡದಲ್ಲಿ ಇವತ್ತು ಇನ್ನೊಂದು ದುರ್ಘಟನೆ ಆಗಿದೆ. ಬಕ್ರೀದ್ ಸಮಯದಲ್ಲಿ ಹಸುಗಳನ್ನು ಕಡಿಯಲು ಉದ್ದೇಶಿಸಿದ್ದರು. ಇಂತಿಷ್ಟು ವಯಸ್ಸಾದ್ರೆ ಮಾತ್ರ ವಧೆ ಮಾಡುವ ಅವಕಾಶವಿದೆ. ಆದರೆ, ಚಿಕ್ಕವಯಸ್ಸಿನ ಹಸು ಸಾಗಿಸುತ್ತಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ಯುವಕ ಹಲ್ಲೆ ಮಾಡಿದ್ದಾರೆ.

ಸೋಮಶೇಖರ್ ಚನ್ನಶಟ್ಟಿ ಎಲ್ಲ ಪ್ರಾಣಿ, ಜೀವಿಗಳ ರಕ್ಷಣೆ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಚಿಕಿತ್ಸೆ ಕೊಡಿಸುತ್ತಾರೆ. ಬೇಫಾರಿ ಎಂಬ ಕಸಾಯಿಖಾನೆ ಮಾಲೀಕ ಹಲ್ಲೆ ಮಾಡಿದ್ದಾನೆ. ಅವನ ಜೊತೆಗೆ 50-60 ಜನ ಸೇರಿ ಹಲ್ಲೆ ಮಾಡಿದ್ದಾರೆ. ಕಿವಿ ಕತ್ತರಿಸುವಂತೆ ಹೊಡೆದಿದ್ದಾರೆ. ಘಟನೆ ಆಗಿ ಮೂರುವರೆ ಗಂಟೆಯಾದರೂ ಪೊಲೀಸರಿಂದ ಯಾವುದೇ ಕ್ರಮ ಆಗಿರಲಿಲ್ಲ. ಹೀಗಾಗಿ ಠಾಣೆಗೆ ಮುತ್ತಿಗೆ ಹಾಕಲಾಗಿದೆ. ಈಗ ಪೊಲೀಸ್ ಆಯುಕ್ತರು ಕ್ರಮದ ಭರವಸೆ ನೀಡಿದ್ದಾರೆ. ಅರ್ಧ ತಾಸಿನಲ್ಲಿ ಎಫ್.ಐಆರ್ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಈಗ ಪ್ರತಿಭಟನೆ ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾಎ.

ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ ನೀಡಿ, ಜಾನುವಾರು ವಿಚಾರವಾಗಿ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಒಂದು ಕೋಮಿನವರು ದೂರು ಕೊಟ್ಟಿದ್ದಾರೆ. ಗಂಭೀರ ಹಲ್ಲೆಯ ದೂರು ಕೊಟ್ಟಿದ್ದಾರೆ. ಇದರ ಪ್ರಕಾರ ಎಫ್​ಐಆರ್​ ದಾಖಲಿಸಲಾಗಿದೆ. ದೂರಿನಲ್ಲಿ ಇಬ್ಬರು ಮತ್ತು ಒಂದಷ್ಟು ಹತ್ತು ಜನರು ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿಗಳಿವೆ. ಅದು ಎಪಿಎಂಸಿ ಯಾರ್ಡ್ ಇದೆ. ಅದನ್ನೆಲ್ಲ‌ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Continue Reading
Advertisement
Viral News
ವೈರಲ್ ನ್ಯೂಸ್6 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್20 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ33 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್39 mins ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ46 mins ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ48 mins ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್1 hour ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು1 hour ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Grand Prix 2024 Competition
ಕ್ರೀಡೆ1 hour ago

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Actor Darshan case pavithra Gowda manager Arrest
ಸ್ಯಾಂಡಲ್ ವುಡ್2 hours ago

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ33 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌