Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ - Vistara News

ಕಲಬುರಗಿ

Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ

Prajwal Revanna Case: ಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ. ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

VISTARANEWS.COM


on

Prajwal Revanna Case HD Revanna visit to Gangapur and special pooja to Dattatreya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಲಬುರಗಿ: ಪ್ರಜ್ವಲ್‌ ರೇವಣ್ಣ ಮೇಲಿನ ಅತ್ಯಾಚಾರ ಪ್ರಕರಣಕ್ಕೆ (Prajwal Revanna Case) ಸಂಬಂಧಪಟ್ಟಂತೆ ಬಂದಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ.

ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ಎಚ್.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ಸಲುವಾಗಿ ರೇವಣ್ಣ ಅವರು ತಮ್ಮ ಜತೆಯಲ್ಲಿಯೇ ಪುರೋಹಿತರನ್ನು ಕರೆದುಕೊಂಡು ಬಂದಿರುವುದು ವಿಶೇಷವಾಗಿತ್ತು.

Prajwal Revanna Case HD Revanna visit to Gangapur and special pooja to Dattatreya

ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

Prajwal Revanna Case HD Revanna visit to Gangapur and special pooja to Dattatreya

ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

Karnataka Rain

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Latest7 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌