Site icon Vistara News

Road Accident : ಬರ್ತ್‌ಡೇ ದಿನವೇ ಡೆತ್‌ಡೇ; ಸ್ನೇಹಿತರಿಬ್ಬರ ಪ್ರಾಣ ತೆಗೆದ ಬಸ್‌!

Bus and bike Accident in kalaburagi

ಕಲಬುರಗಿ: ಬಸ್‌-ಬೈಕ್‌ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದ್ದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿಯ ಕಟ್ಟಿ ಸಂಗಾವಿ ಬಳಿ ಅಪಘಾತ ನಡೆದಿದೆ. ಶಶಿಕುಮಾರ್ (21), ಪ್ರಜ್ವಲ್ (22) ಮೃತ ದುರ್ದೈವಿಗಳು.

ಯಾದಗಿರಿ ಜಿಲ್ಲೆಯ ಶಹಾಪೂರ ಮೂಲದ ಇವರಿಬ್ಬರು ಸ್ನೇಹಿತರೊಬ್ಬರ ಬರ್ತ್ ಡೇ ಪಾರ್ಟಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಸಾರಿಗೆ ಬಸ್‌ಗೆ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಜೇವರ್ಗಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಬೈಕ್‌-ಬಸ್‌ ಮುಖಾಮುಖಿ ಡಿಕ್ಕಿ

ಬೈಕ್‌ನಿಂದ ಬಿದ್ದ ಮಹಿಳೆ; ತಲೆ ಮೇಲೆ ಲಾರಿ ಹರಿದು ಸಾವು

ಬಳ್ಳಾರಿ: ಬೈಕ್‌ನಿಂದ ಬಿದ್ದ ಮಹಿಳೆ‌ ಮೇಲೆ ಸಿಲಿಂಡರ್ ಲಾರಿ ಹರಿದು (Road Accident) ಮೃತಪಟ್ಟ ದಾರುಣ ಘಟನೆ ಬಳ್ಳಾರಿಯ ಸಿರುಗುಪ್ಪ ತಾಲೂಕಿನ ರಾಜ್ಯ‌ ಹೆದ್ದಾರಿಯಲ್ಲಿ‌ ನಡೆದಿದೆ. ಸಿರುಗುಪ್ಪ ತಾಲೂಕಿನ ತಾಳೂರು ಗ್ರಾಮದ ‌ನಿವಾಸಿ ನಿಂಗಮ್ಮ (52) ಮೃತ ದುರ್ದೈವಿ.

ಸಿರುಗುಪ್ಪಗೆ ತಾಲೂಕು ಕಚೇರಿಗೆ ದಂಪತಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿ ಕುಳಿತಿದ್ದ ನಿಂಗಮ್ಮ ಬೈಕ್‌ನಿಂದ ಆಯತಪ್ಪಿ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿ ಬರುತ್ತಿದ್ದ ಸಿಲಿಂಡರ್‌ ಲಾರಿ ನಿಂಗಮ್ಮಳ ತಲೆ ಮೇಲೆ ಹರಿದಿದೆ. ಲಾರಿ ಹರಿದ ಪರಿಣಾಮ ತಲೆ ಪೂರ್ತಿ ನಜ್ಜುಗುಜ್ಜಾಗಿತ್ತು.

ನಿಂಗಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಕಣ್ಮುಂದೆ ಪತ್ನಿ ಸಾವನ್ನು ಕಂಡು ಅಘಾತಕ್ಕೊಳಗಾಗಿದ್ದರು. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಆಟವಾಡುವಾಗ ನೀರಿನ ತೊಟ್ಟಿಗೆ ಬಿದ್ದು ಬಾಲಕಿ ಸಾವು

ಆಟ ಆಡುವಾಗ ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ವಿಸ್ಮೀತ( 3) ಮೃತಪಟ್ಟ ಬಾಲಕಿ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ.

ನಾಗರಾಜ್ ಮತ್ತು ಕಾವೇರಿ ದಂಪತಿಯ ಮಗಳಾದ ವಿಸ್ಮೀತಾ ಆಟವಾಡುತ್ತಾ ನೀರಿನ ತೊಟ್ಟಿ ಬಳಿ ಬಂದಿದ್ದಾಳೆ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಕೂಡ್ಲಿಗಿ ಶಾಸಕ ಎನ್‌.ಟಿ ಶ್ರೀನಿವಾಸ್ ಮೃತ ಬಾಲಕಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version