Site icon Vistara News

Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

road Accident

ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿಯಾಗಿ (Road Accident) ಸ್ಥಳದಲ್ಲೆ ಓರ್ವ ಮೃತಪಟ್ಟರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಡೊಂಗರಗಾಂವ್ ಬಳಿ ಘಟನೆ ನಡೆದಿದೆ. ಹರಕಂಚಿ ಗ್ರಾಮದ ಕೂಲಿ ಕಾರ್ಮಿಕ ಶಿವಪ್ಪ ಸ್ಥಳದಲ್ಲೆ ಮೃತಪಟ್ಟ ದುರ್ದೈವಿ.

ಹರಕಂಚಿ ಗ್ರಾಮದಿಂದ ಕೂಲಿ ಕೆಲಸಕ್ಕೆಂದು ಹುಮನಬಾದ್ ಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ ವಾಹನವೊಂದಕ್ಕೆ ಓವರ್‌ಟೆಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿ ಹೊಡೆದಿದೆ.

ಪಲ್ಟಿ ಹೊಡೆದ ರಭಸಕ್ಕೆ ಶಿವಪ್ಪ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕಮಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಟೆಂಪೋವನ್ನು ತೆರವು ಮಾಡಿದ್ದಾರೆ.

ಇದನ್ನೂ ಓದಿ: Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

Car Accident

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದ ಬೈಕ್ ಸವಾರ

ಬೆಂಗಳೂರು: ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.

ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ. ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್‌ ಮಾಡಿದ್ದಾನೆ. ಕಾರ್ ಡ್ಯಾಷ್ ಕ್ಯಾಮ್‌ ಬೈಕ್‌ ಸವಾರನ ಕೃತ್ಯ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version