Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ - Vistara News

ಕರ್ನಾಟಕ

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Kali Bridge Collapse: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು (Kali Bridge Collapse) ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದನ್ನೂ ಓದಿ: Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸೇತುವೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ (Kali Bridge Collapse) ಕುಸಿದುಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ (truck driver injury) ಗಾಯವಾಗಿದೆ. ಹೊಸ ಸೇತುವೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದ ಕಾರಣ ಭಾರಿ ಅನಾಹುತ ಆಗಿಲ್ಲ.

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್‌ನಲ್ಲಿರುವ ಈ ಸೇತುವೆಯನ್ನು ಕಾರವಾರ- ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 60 ವರ್ಷ ಹಳೆಯದಾದ ಸೇತುವೆ. ಇತ್ತೀಚೆಗೆ ನಿರ್ಮಿಸಲಾದ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹಳೆಯ ಸೇತುವೆಯನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿತ್ತು.

ಮಳೆ ಹಾಗೂ ನೀರಿನ ರಭಸ ಹೆಚ್ಚಾಗಿ ಸೇತುವೆ ಕುಸಿದು ಕೆಳಗೆ ಬಿದ್ದಿದ್ದು, ಅದರ ಮೇಲಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಅಗ್ನಿಶಾಮಕ‌ ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ರಕ್ಷಣೆಗೊಳಗಾದವರು. ಟ್ರಕ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ವಿಷಯ ತಿಳಿದ ಕೂಡಲೇ ಎಚ್ಚೆತ್ತ ಉತ್ತರಕನ್ನಡ ಎಸ್.ಪಿ ನಾರಾಯಣ್, ಎಎಸ್‌ಪಿ ಜಯಕುಮಾರ ಹಾಗೂ ಡಿಎಸ್‌ಪಿ ಗಿರೀಶ್ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಲಾರಿ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಂದ ಮಾಹಿತಿ ಸಿಗುತ್ತಿದ್ದಂತೆ ಡಿಸಿ ಲಕ್ಷ್ಮಿಪ್ರಿಯಾ ಮಧ್ಯರಾತ್ರಿ ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದರು.

ಅವೈಜ್ಞಾನಿಕ ಕಾಮಗಾರಿಯಿಂದ ಕಳೆದ 15 ದಿನಗಳ ಹಿಂದಷ್ಟೆ ಶಿರೂರು ಗುಡ್ಡ ಕುಸಿತ ಆಗಿತ್ತು. ಈಗ ಹಳೆಯ ಸೇತುವೆ ಬಿದ್ದಿರುವ ಹಿನ್ನೆಲೆಯಲ್ಲಿ, ಐಆರ್‌ಬಿಯಿಂದ ನಿರ್ಮಾಣ ಮಾಡಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈಗ ಕುಸಿದ ಸೇತುವೆಯ ಪಕ್ಕದಲ್ಲಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು, ಸೇತುವ ಗುಣಮಟ್ಟದ ಬಗ್ಗೆ 12 ಗಂಟೆಯೊಳಗೆ ವರದಿ ಸಲ್ಲಿಸುವಂತೆ IRB ಹಾಗೂ NHAIಗೆ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಸೇತುವೆ ಗುಣಮಟ್ಟದ ವರದಿ ಬರುವವರೆಗೂ ಸಂಚಾರ ನಿಷೇಧಿಸಲಾಗಿದ್ದು, ಸದ್ಯ ಕಾರವಾರದಿಂದ ಗೋವಾ ಕಡೆ ಹೋಗುವ ಸಂಚಾರ ಬಂದ್ ಆಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಭಾರಿ ಪ್ರಮಾಣದ ಕಲ್ಲು, ಮಣ್ಣು ಕುಸಿದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ಸ್ಥಳಕ್ಕೆ ಬಂದ ಕಾರವಾರ ಟ್ರಾಫಿಕ್ ಪೊಲೀಸರು ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿಸಿದ್ದರಲ್ಲದೆ, ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest17 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest18 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest20 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ23 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest1 day ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌