Site icon Vistara News

Kannada New Movie: ಕಣ್ಮನ ಸೆಳೆಯುತ್ತಿದೆ ”ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್

Kadalura Kanmani Kannada film trailer released

ಬೆಂಗಳೂರು: ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ (Kannada New Movie) ಶುಭ ಕೋರಿದರು.‌

“ಕಡಲೂರ ಕಣ್ಮಣಿ” ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ. ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ಸಿಕ್ಕಿದೆ. ಅದು ನಮ್ಮ ಚಿತ್ರದ ನಾಯಕ, ನಾಯಕಿ ಹಾಗೂ ನಿರ್ಮಾಪಕರು.

ಇವರ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರ ಜುಲೈ 19 ರಂದು ತೆರೆಗೆ ಬರಲಿದೆ. ಇದೇ ತಂಡದೊಂದಿಗೆ “ಕಡಲೂರ ಕಣ್ಮಣಿ” ಎರಡನೇ ಭಾಗದಲ್ಲಿ ತರುವ ಸಿದ್ದತೆ ನಡೆಯುತ್ತಿದೆ ಎಂದು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ರಾಮ್ ಪ್ರಸನ್ನ ಹುಣಸೂರು ತಿಳಿಸಿದರು.

ಇದನ್ನೂ ಓದಿ: Uttara Kannada News: ಬಡ ಮೀನುಗಾರನ ಮಗಳು ಸಿಎ ಪರೀಕ್ಷೆಯಲ್ಲಿ ಪಾಸ್‌; ಸ್ಫೂರ್ತಿಯುತ ಸಾಧನೆ

“ವರ್ಣಪಟಲ” ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ ಎಂದರು‌ ನಾಯಕ ಅರ್ಜುನ್ ನಗರಕರ್.

ನಾವು ಬ್ಯಾಂಕ್ ಉದ್ಯೋಗಿಗಳು. ಜತೆಗೆ ಆಪ್ತಮಿತ್ರರು. ರಾಮ್ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ಎಲ್ಲರು ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ಮಾಪಕರಾದ ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ತಿಳಿಸಿದರು.

ಇದನ್ನೂ ಓದಿ: Bengaluru News: ಮಕ್ಕಳು ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳಸಿಕೊಳ್ಳಿ: ಐಶ್ವರ್ಯ ಡಿಕೆಎಸ್ ಹೆಗ್ಡೆ

ಚಿತ್ರದ ಆಕ್ಷನ್ ಸನ್ನಿವೇಶಗಳ ಬಗ್ಗೆ ಚಂದ್ರು ಬಂಡೆ ಮಾಹಿತಿ ನೀಡಿದರು. ಚಿತ್ರವನ್ನು 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ ಡಾ.ಸುನೀಲ್ ಕುಂಬಾರ್ ತಿಳಿಸಿದರು.‌ ಪತ್ರಿಕಾಗೋಷ್ಠಿಯಲ್ಲಿ ಸಹ ನಿರ್ಮಾಪಕ ಮಹೇಶ್ ಕುಮಾರ್ ಎಂ. ಉಪಸ್ಥಿತರಿದ್ದರು.

Exit mobile version