Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ - Vistara News

ಕರ್ನಾಟಕ

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶನದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರದ (Kannada New Movie) ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿವೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ದಾಸರ ಕೊಡುಗೆ ಅಪಾರ.‌ ಅಂತಹ ಮಹನೀಯರ ‌ಮಹಿಮೆಯನ್ನು ಚಿತ್ರಗಳ ಮೂಲಕ ಜನರಿಗೆ ಪರಿಚಯಿಸುವ ಕೆಲಸವನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾಡುತ್ತಾ ಬರುತ್ತಿದ್ದಾರೆ. ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಮಹಿಪತಿ ದಾಸರ ಕುರಿತಾದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರವನ್ನು (Kannada New Movie) ನಿರ್ದೇಶಿಸುವುದರ ಜತೆಗೆ ಮೊದಲ ಬಾರಿಗೆ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ.

ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿದ್ದು, ಚಿತ್ರದಲ್ಲಿ ಮಹಿಪತಿದಾಸರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಜಯಾನಂದ ಅವರು ಏಳು ಹಾಡುಗಳನ್ನು ಹಾಗೂ ಮಧುಸೂದನ್ ಹವಾಲ್ದಾರ್, ಅನಂತ ಕುಲಕರ್ಣಿ, ರಾಯಚೂರು ಶೇಷಗಿರಿದಾಸ್ ಹಾಗೂ ವಿ.ವಿ. ಪ್ರಸನ್ನ ಅವರು ಒಂದೊಂದು ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಇತ್ತೀಚೆಗೆ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಾಧವತೀರ್ಥ (ತಂಬಿಹಳ್ಳಿ) ಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾಸಾಗರ ಮಾಧವತೀರ್ಥರು ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ, ಹುಸೇನ್ ಸಾಬ್ ದಾಸ್, ಸುಭಾಷ್ ಕಾಖಂಡಕಿ, ಮುರಳಿ, ವಿಷ್ಣುತೀರ್ಥ ಜೋಶಿ, ರಾಘವೇಂದ್ರ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಕನ್ನಡ ಹರಿದಾಸ ಸಾಹಿತ್ಯಕ್ಕೆ ಮಹಿಪತಿದಾಸರ ಕೊಡುಗೆ ಅಪಾರ.‌ ಆದರೆ ಅವರಿಗೆ ಹೆಚ್ಚು ‌ಪ್ರಚಾರ ಸಿಕ್ಕಿಲ್ಲ. ಸಿನಿಮಾ‌ ಎಲ್ಲರನ್ನು ಬಹುಬೇಗ ತಲುಪುವ ಮಾಧ್ಯಮ.‌ ಇದರ ಮೂಲಕ ಮಧುಸೂದನ್ ಹವಾಲ್ದಾರ್ ಅವರು ಕನ್ನಡದ ಹರಿದಾಸರನ್ನು ಜನರಿಗೆ ಪರಿಚಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ಹರಿದಾಸರ ಅನುಗ್ರಹವಿರಲಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಶ್ರೀ ವಿದ್ಯಾಸಾಗರ ಮಾಧವತೀರ್ಥರು ಆಶೀರ್ವದಿಸಿದರು.

“ಶ್ರೀ ಜಗನ್ನಾಥದಾಸರು” ಚಿತ್ರದಿಂದ ಶ್ರೇಷ್ಠ ಹರಿದಾಸರ ಚಿತ್ರಗಳನ್ನು ನಿರ್ದೇಶಿಸುತ್ತಾ ಬಂದಿದ್ದೇನೆ. ಪ್ರಸ್ತುತ “ಕಾಖಂಡಕಿ ಶ್ರೀಮಹಿಪತಿದಾಸರು” ಚಿತ್ರವನ್ನು ‌ನಿರ್ದೇಶಿಸುವುದರೊಂದಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದೇನೆ. ರಾಮಾಂಬುಜ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಐಟಿ ಉದ್ಯೋಗಿಯಾಗಿದ್ದ ನಾನು ದಾಸರ ಅನುಗ್ರಹದಿಂದ ಇಂದು ಮಹಿಪತಿದಾಸರ ಪಾತ್ರ ಮಾಡಿದ್ದೇನೆ. ನಟನೆ ಜತಗೆ ಗಾಯನವನ್ನೂ ಮಾಡಲು ಅವಕಾಶ ನೀಡಿದ ಮಧುಸೂದನ್ ಹವಾಲ್ದಾರ್ ಅವರಿಗೆ ಧನ್ಯವಾದ ಎಂದರು ನಟ ವಿಜಯಾನಂದ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಕೊಡಗು

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Kodagu News : ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

VISTARANEWS.COM


on

Kodava Family Hockey Tournament Website Launched

ಕೊಡಗು: 25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೆಬ್ ಸೈಟ್ ಲೋಕಾರ್ಪಣೆ ಕಾರ್ಯಕ್ರಮ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ ನಲ್ಲಿ (Kodagu News ) ನಡೆಯಿತು. ಪ್ರತಿ ವರ್ಷ ಕೂಡ ಒಂದೊಂದು ಕುಟುಂಬಗಳು ಪಂದ್ಯಾಟ ಆಯೋಜಿಸುವ ಜವಬ್ದಾರಿ ಹೊತ್ತುಕೊಳ್ಳುತ್ತೆ. ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

ಮೊದಲಿಗೆ ದೀಪ ಬೆಳಗುವ ಮೂಲಕ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ‌ 2025 ನೇ ಮುದಂಡ ಕ್ರಿಕೇಟ್ ಪಂದ್ಯಾವಳಿಯ ವೆಬ್ ಸೈಟ್ ಲಾಂಚ್ ಮಾಡಿದ್ದು ಎಲ್ಲಾ ರೀತಿಯ ಮಾಹಿತಿಯನ್ನ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಹಾಕಿ ಪಂದ್ಯಾವಳಿಯ ಗೌರವ ಅಧ್ಯಕ್ಷರಾದ ಎಂಬಿ ದೇವಯ್ಯ ಮಾತನಾಡಿ ಮುದ್ದಂಡ ಕುಟುಂಬದ ಹಿರಿಯರು ಹಾಕಿ ಅಕಾಡೆಮಿ ಸಹಕಾರದಲ್ಲಿ ಈ ಬಾರಿ ಹಾಕಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಿದ್ದೇವೆ. ಈಗಾಗಲೇ ಸಮಿತಿಯನ್ನು ರಚನೆ ಮಾಡಿದ್ದೇವೆ. ಕೆಲಸಗಳನ್ನು ಆರಂಭಿಸಿದ್ದು, ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದರು. 25ನೇ ವರ್ಷದ ಕಾರ್ಯಕ್ರಮ ಆಯೋಜನೆಗೆ ನಮಗೆ ಸಿಕ್ಕಿರೋದು ಬಹಳ ಸಂತೋಷವಿದ್ದು ಎಲ್ಲವನ್ನು ಅಚ್ಚುಕಟ್ಟಾಗಿ ಮಾಡುವ ಗುರಿ ಹೊಂದಿದೆ.

Kodava Family Hockey Tournament Website Launched

ಕಾರ್ಯಕ್ರಮದಲ್ಲಿ ಕೊಡಗು ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಸ್ಥಳೀಯ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ,ಉಳ್ಳಿಯಡ ಪೂವಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ,ಮುದ್ದಂಡ ಸ್ಪೋರ್ಟ್ಸ್ ಅ್ಯಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುದ್ದಂಡ ರಶಿತ್ ಸುಬ್ಬಯ್ಯ,
ಅತಿಥಿಗಳಾಗಿ ಕುಟುಂಬದ ಪಟ್ಟೆದಾರ ಡಾಲಿ ತಿಮ್ಮಯ್ಯ, ಡೀನ್ ಬೋಪಣ್ಣ, ಉಪಾಧ್ಯಕ್ಷ ಅಶೋಕ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ,ಆದ್ಯ ಪೊನ್ನಣ್ಣ ,ರಂಜಿತ್ ಪೊನ್ನಪ್ಪ, ಚಂಗಪ್ಪ, ದಿವ್ಯ ಪ್ರಮುಖರು ಇದ್ದರು

Continue Reading

ಬೆಂಗಳೂರು

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Bengaluru News : 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ.

VISTARANEWS.COM


on

Bengaluru News

ಬೆಂಗಳೂರು: ಬಹುನಿರೀಕ್ಷಿತ ಸೌಂದರ್ಯ ಸ್ಪರ್ಧೆ, ಮಿಸ್ಟರ್ ಅಂಡ್ ಮಿಸ್ ಐಡಲ್ ಆಫ್ ಇಂಡಿಯಾ 2024 ಕಳೆದ ಅಕ್ಟೋಬರ್ 27 ರಂದು ತರಳು ಎಸ್ಟೇಟ್‌ನ ವಿಂಟೇಜ್ ಫಾರ್ಮ್ಸ್ನಲ್ಲಿ (Bengaluru News) ನಡೆಯಿತು. ಈ ಕಾರ್ಯಕ್ರಮವನ್ನು ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ ಕೌಶಿಕ್ ಆರ್ ಅವರು ಕೌಶಲ್ಯದಿಂದ ನಿರ್ದೇಶಿಸಿದರು. ಅವರು ಕೇವಲ 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅಜಯ್ ಪ್ರಸಾದ್, ರಾವುಲ್, ಶರತ್, ಕಾತಿ೯ಕ್ ಮತ್ತು ಕೆಎಸ್‌ಎಚ್‌ ಗ್ರೂಪ್ಸ್‌ ( Ksh Groups) ಸಹಕಾರ ನೀಡಿದರು.

A 21-year-old man is trying to set a Guinness World Record as the director of a junior beauty pageant

ಈ ಸ್ಪರ್ಧೆಯು ಭಾರತದಾದ್ಯಂತದ ಪ್ರತಿಭಾವಂತ ಸ್ಪರ್ಧಿಗಳನ್ನು ಒಟ್ಟುಗೂಡಿಸಿ ಅವರ ಸೌಂದರ್ಯ, ಪ್ರತಿಭೆ ಮತ್ತು ವರ್ಚಸ್ಸನ್ನು ಪ್ರದರ್ಶಿಸಿತು. ಮಹತ್ವಾಕಾಂಕ್ಷಿ ಮಾದರಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಮನರಂಜನಾ ಉದ್ಯಮದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ವೇದಿಕೆಯನ್ನು ಒದಗಿಸುವುದು ಈ ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿತ್ತು.

A 21-year-old man is trying to set a Guinness World Record as the director of a junior beauty pageant

ರ‍್ಯಾಂಪ್ ವಾಕ್, ನೃತ್ಯ ಮತ್ತು ಪ್ರಶ್ನೆ-ಉತ್ತರಗಳಂತಹ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಸ್ಪರ್ಧಿಗಳು ಕಠಿಣ ತರಬೇತಿ ಮತ್ತು ಅಂದಗೊಳಿಸುವ ಸೆಷನ್ಗಳಿಗೆ ಒಳಗಾದರು. ಪ್ರಸಿದ್ಧ ಉದ್ಯಮ ತಜ್ಞರನ್ನು ಒಳಗೊಂಡ ತೀರ್ಪುಗಾರರ ಸಮಿತಿಯು ಸ್ಪರ್ಧಿಗಳ ಪ್ರದರ್ಶನವನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿತು.

ಆರ್. ಸಿ. ರೋಹಿತ್ ಮಿಸ್ಟರ್ ಐಡಲ್ ಆಫ್ ಇಂಡಿಯಾ 2024 ಕಿರೀಟವನ್ನು ಪಡೆದರೆ, ವರ್ಷಿತಾ ಮಿಸ್ ಐಡಲ್ ಆಫ್ ಇಂಡಿಯಾ 2024 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ವಿಜೇತರಿಗೆ ಪ್ರತಿಷ್ಠಿತ ಬಹುಮಾನಗಳು ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶಗಳನ್ನು ನೀಡಲಾಯಿತು. ಕೌಶಿಕ್ ಅವರ ಗಮನಾರ್ಹ ಸಾಧನೆಯು ಅವರ ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ಈವೆಂಟ್ ನಿರ್ವಹಣೆಯ ನವೀನ ವಿಧಾನಕ್ಕೆ ಸಾಕ್ಷಿಯಾಗಿದೆ.

21 ವರ್ಷ ವಯಸ್ಸಿನಲ್ಲಿ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯನ್ನು ನಿರ್ದೇಶಿಸುವ ಮೂಲಕ, ಅವರು ಯುವ ಉದ್ಯಮಿಗಳು ಮತ್ತು ಈವೆಂಟ್ ವೃತ್ತಿಪರರಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದಾರೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ನಿರ್ದೇಶಿಸುವ ಮತ್ತು ಇತಿಹಾಸ ನಿರ್ಮಿಸುವ ಅವಕಾಶ ದೊರೆತಿರುವುದಕ್ಕೆ ನಾನು ರೋಮಾಂಚನಗೊಂಡಿದ್ದೇನೆ ಎಂದು ಕೌಶಿಕ್ ಆರ್ ಹೇಳಿದರು.

Continue Reading

ಗದಗ

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Family Dispute : ಕೌಟುಂಬಿಕ ಕಲಹಕ್ಕೆ ತಂದೆಯೊಬ್ಬ ತನ್ನ ಮೂವರು ಮಕ್ಕಳುನ್ನು ನದಿಗೆ ಎಸೆದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗದಲ್ಲಿ (Gadag News) ನಡೆದಿದೆ

VISTARANEWS.COM


on

Gadag News Father commits suicide by throwing three children into river
ಸಾಂದರ್ಭಿಕ ಚಿತ್ರ

ಗದಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು, ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಹೃದಯ‌ ವಿದ್ರಾವಕ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ (Gadag News) ನಡೆದಿದೆ.‌

ಮುಂಡರಗಿ ತಾಲೂಕಿನ ಮುಕ್ತುಂಪುರ‌ ಗ್ರಾಮದ ನಿವಾಸಿ, ಮಂಜುನಾಥ ಅರಕೇರಿ ಹಾಗೂ ಮೂವರು ‌ಮಕ್ಕಳು‌ ನದಿ ಪಾಲಾಗಿದ್ದಾರೆ. ಪುಟ್ಟ ಮಕ್ಕಳಾದ ವೇದಾಂತ (3), ಪವನ (4), ಹಾಗೂ ಧನ್ಯಾ (6) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳನ್ನು ಸೇತುವೆ ಮೇಲಿಂದ‌ ನದಿಗೆ ಎಸೆದು ಬಳಿಕ ಮಂಜುನಾಥ್ ತಾನೂ ಸಹ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದು, ಶೋಧ‌ ಕಾರ್ಯ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading
Advertisement
Latest2 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ3 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ3 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ವರ್ಷ ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌