ಕನ್ನಡ ರಾಜ್ಯೋತ್ಸವ| ಕನ್ನಡ ಭಾಷಾ ಬಳಕೆ ಕಡ್ಡಾಯಕ್ಕೆ ಡಿಸೆಂಬರ್‌ನಲ್ಲಿ ಶಾಸನ: ಮುಖ್ಯಮಂತ್ರಿ ಬೊಮ್ಮಾಯಿ - Vistara News

ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ| ಕನ್ನಡ ಭಾಷಾ ಬಳಕೆ ಕಡ್ಡಾಯಕ್ಕೆ ಡಿಸೆಂಬರ್‌ನಲ್ಲಿ ಶಾಸನ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಶಾಸನವನ್ನು ತರಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜತೆಗೆ ಕನ್ನಡವೇ ನಮಗೆ ರಾಷ್ಟ್ರ ಭಾಷೆ ಎಂದಿದ್ದಾರೆ.

VISTARANEWS.COM


on

kannada CM Bhuvaneshwari
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಲ್ಲ ಪ್ರಾದೇಶಿಕ ಭಾಷೆಗಳೂ ರಾಷ್ಟ್ರ ಭಾಷೆಗಳೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಆದ್ದರಿಂದ ಕನ್ನಡ ಭಾಷೆ ಮಾತೃಭಾಷೆಯೂ ಹೌದು, ರಾಷ್ಟ್ರ ಭಾಷೆಯೂ ಹೌದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಕನ್ನಡ ಬಳಕೆ ಕಡ್ಡಾಯ ನಿಯಮ ಜಾರಿಗೆ ತರಲಿದ್ದೇವೆ ಎಂದು ಹೇಳಿದರು.

ʻʻಈಗಾಗಲೇ ಕನ್ನಡ ಕಡ್ಡಾಯ ವಿಧೇಯಕ ಮಂಡನೆ ಮಾಡಿದ್ದೇವೆ. ಇದರಿಂದ ಕನ್ನಡ ಭಾಷೆಯ ಬಳಕೆ ಕಾನೂನುಬದ್ಧವಾಗಲಿದೆʼʼ ಎಂದು ಹೇಳಿದ ಅವರು, ʻʻಕನ್ನಡಕ್ಕೆ ಕಾನೂನಿನ ರಕ್ಷಣೆ, ಕವಚ ನೀಡಿದರೆ ಅದು ನಮ್ಮ ಸರ್ಕಾರʼʼ ಎಂದರು. ವಿಧೇಯಕದ ಬಗ್ಗೆ ವ್ಯಾಖ್ಯಾನ ನಡೆಯಲಿ, ಚರ್ಚೆಯಾಗಲಿ. ಅದರ ಮೂಲಕ ಬರುವ ಎಲ್ಲಾ ಸಲಹೆ ಪಡೆದು ಅನುಷ್ಠಾನಕ್ಕೆ ಸಿದ್ಧರಿದ್ದೇವೆ ಎಂದರು.

ಆತ್ಮಾವಲೋಕನ ಮಾಡಿಕೊಳ್ಳೋಣ
ಕನ್ನಡ ನಾಡಿಗೆ ನನ್ನ ಕೊಡುಗೆ ಏನು ಎನ್ನುವ ಬಗ್ಗೆ ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕನ್ನಡ ನಾಡಿನ ಬಗ್ಗೆ ಎಲ್ಲ ಕನ್ನಡಿಗರು ಆಲೋಚನೆ ಮಾಡಿದರೆ ವಿಶ್ವದಲ್ಲೇ ಮೊದಲ ರಾಜ್ಯ ನಮ್ಮದಾಗಲಿದೆ. ಇಲ್ಲಿ ಬುದ್ಧಿವಂತಿಕೆಗೆ ಕೊರತೆ ಇಲ್ಲ. ನಮ್ಮ ಹಿರಿಯರು ಅತ್ಯಂತ ಮೌಲ್ಯಯುತ ಬದುಕನ್ನು ಬಿಟ್ಟುಹೊಗಿದ್ದಾರೆ. ಸುಂದರವಾದ ಬದುಕನ್ನು ಕಟ್ಟಿಕೊಟ್ಟು ಹೋಗಿದ್ದಾರೆ ಎಂದರು ಬಸವರಾಜ ಬೊಮ್ಮಾಯಿ.

ʻʻಜಾಗತೀಕರಣ, ಉದಾರೀಕರಣ, ಆಧುನೀಕರಣದ ನಡುವೆ ಅಂತಃಕರಣ ಉಳಿಸಿಕೊಂಡಿರೋದು ನಮ್ಮ ಕನ್ನಡಿಗರ ಶ್ರೇಷ್ಠತೆ. ಅದನ್ನೆಲ್ಲ ಉಳಿಸಿಕೊಂಡು ನಾವು ಕನ್ನಡದ ಬಾವುಟವನ್ನು ಎಲ್ಲರ ಎದೆಯಲ್ಲಿ ಹಾರಿಸಬೇಕಾಗಿದೆʼʼ ಎಂದರು.

ʻʻಉತ್ತಮ ವಾತಾವರಣ, ಉದ್ಯೋಗ, ತಂತ್ರಜ್ಞಾನ, ವಿಜ್ಞಾನ ಜೊತೆಗೆ ಮೂಲಭೂತ ಸೌಕರ್ಯ ಇರುವ ಭವಿಷ್ಯದ ಕರ್ನಾಟಕವನ್ನು ನಾವು ರೂಪಿಸಬೇಕಾಗಿದೆʼʼ ಎಂದು ಹೇಳಿದರು.

ಮುಖ್ಯಮಂತ್ರಿಗಳಿಂದ ಕನ್ನಡ ಧ್ವಜಾರೋಹಣ

ಎಲ್ಲರ ನೆರವಿಗೆ ನಿಂತಿದೆ ಸರಕಾರ
ʻʻನಮ್ಮಲ್ಲಿ ಹತ್ತು ಕೃಷಿ ವಲಯ ಇದೆ. ವರ್ಷದ 365 ದಿನ ಒಂದಲ್ಲಾ ಒಂದು ಪ್ರದೇಶದಲ್ಲಿ ಸದಾ ಕೃಷಿ ಚಟುವಟಿಕೆ ನಡೆಯುತ್ತಿರುತ್ತದೆ. ಈ ವಾತಾವರಣ ಬೇರೆ ರಾಜ್ಯ, ಪ್ರದೇಶದಲ್ಲಿ ಇಲ್ಲ. ಈ ಬಾರಿ ಕೆಲವು ಕಡೆ ನಿರಂತರ ಮಳೆಯಾಗಿದೆ. ಕೆಲವೆಡೆ ಸಮಸ್ಯೆಯಾಗಿದೆ. ಕೆಲವು ಕಡೆ ಉತ್ತಮ ಮಳೆಯಿಂದ ನೀರಿನ ಸಮಸ್ಯೆ ಇಂಗಿದೆ. ಕೆಲವು ಕಡೆ ಕಷ್ಟವಾಗಿದೆ. ಎಲ್ಲಿ ಕಷ್ಟವಿದೆಯೋ ಅಲ್ಲಿ ಸರಕಾರ ಸ್ಪಂದಿಸಿದೆʼʼ ಎಂದು ಸಿಎಂಬ ಬೊಮ್ಮಾಯಿ ಹೇಳಿದರು.

ಎಂಟು ಸಾವಿರ ವಿವೇಕ ಕೊಠಡಿಗಳು
ʻʻರಾಜ್ಯದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು ಎಂಬ ಉದ್ದೇಶದೊಂದಿಗೆ 8 ಸಾವಿರ ಶಾಲೆ ಕೊಠಡಿ ನಿರ್ಮಾಣ ಮಾಡಲಾಗಿದೆ. ಈವರೆಗೂ ಇಷ್ಟೊಂದು ಶಾಲಾ ಕೊಠಡಿ ನಿರ್ಮಾಣಕ್ಕೆ ಅನುಮತಿ ಕೊಟ್ಟಿರಲಿಲ್ಲ. ಈ ಕೊಠಡಿಗಳಿಗೆ ಅದಕ್ಕೆ ವಿವೇಕ ಅಂತ ಹೆಸರಿಟ್ಟಿದ್ದೇವೆ. ವಿವೇಕ ಅಂದ್ರೆ ಜ್ಞಾನ. ವಿವೇಕಾನಂದರು ಅಂದರೆ ನಮಗೆ ಹೆಮ್ಮೆʼʼ ಎಂದರು.

ʻʻಹಿಂದೆ ಬ್ರಿಟಿಷರು ನಮ್ಮನ್ನು ಆಳಿದರು ಅನ್ನುತ್ತೇವೆ. ಆದರೆ 21ನೇ ಶತಮಾನವನ್ನು ಜ್ಞಾನ ಆಳುತ್ತಿದೆ. ಅತಿ ಹೆಚ್ಚು ಜ್ಞಾನ ಇರೋದು ಕರ್ನಾಟಕದಲ್ಲಿ. ನೀತಿ ಆಯೋಗ ಜ್ಞಾನದ ವಿಚಾರದಲ್ಲಿ ಮೊದಲ ಸ್ಥಾನವನ್ನು ಕರ್ನಾಟಕಕ್ಕೆ ನೀಡಿದೆ. ಈ ನಾಡಿನಲ್ಲಿ ದುಡಿಮೆಗೂ ಹೆಚ್ಚು ಗೌರವ ಇದೆ. ಒಂದು ಕಾಲದಲ್ಲಿ ದುಡ್ಡೇ ದೊಡ್ಡಪ್ಪ ಅಂತಿತ್ತು. ಆದ್ರೆ ಈಗ ದುಡಿಮೆಯೇ ದೊಡ್ಡಪ್ಪ ಅಂತಾಗಿದೆʼʼ ಎಂದು ಹೇಳಿದರು ಬಸವರಾಜ ಬೊಮ್ಮಾಯಿ.

ಔದ್ಯೋಗಿಕ ಕ್ರಾಂತಿ, ಶಿಕ್ಷಣ ಕ್ರಾಂತಿ
ʻʻರೈತರು ಸೇರಿದಂತೆ ಶ್ರಮ ಜೀವಿಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗಿದೆ. ರೈತ ಮಕ್ಕಳಿಗೆ ಮಾತ್ರವಲ್ಲದೆ ನೇಕಾರರು, ಕಾರ್ಮಿಕರು, ಮೀನುಗಾರರು, ಆಟೋ, ಟ್ಯಾಕ್ಸಿ ಡ್ರೈವರ್ ಮಕ್ಕಳಿಗೂ ವಿದ್ಯಾನಿಧಿ ಕೊಡಲಾಗಿದೆʼʼ ಎಂದು ಹೇಳಿದರು.

ʻʻರಾಜ್ಯ ಸರಕಾರ ಸ್ವಂತ ಉದ್ಯೋಗಕ್ಕೆ ಪ್ರೋತ್ಸಾಹ ನೀಡುತ್ತಿದೆ. ಕಮ್ಮಾರ, ಚಮ್ಮಾರರಿಗೆ 30 ಸಾವಿರ ರೂ. ಸಾಲ ನೀಡಲಾಗುತ್ತಿದೆ. ಮಹಿಳೆಯರಿಗೆ ಸ್ವಯಂ ಉದ್ಯೋಗ ನೀಡುವ ದೃಷ್ಟಿಯಿಂದ ಎರಡು ಲಕ್ಷ ಔದ್ಯೋಗಿಕ ಯೋಜನೆ ರೂಪಿಸಲಾಗುತ್ತಿದೆ. ಔದ್ಯೋಗಿಕ ಕ್ರಾಂತಿ, ಶಿಕ್ಷಣ ಕ್ರಾಂತಿ ಮಾಡುವುದು ನಮ್ಮ ಗುರಿʼʼ ಎಂದರು ಬೊಮ್ಮಾಯಿ.

ʻʻಎರಡುವರೆ ಲಕ್ಷ ಸರ್ಕಾರಿ ಉದ್ಯೋಗ ಖಾಲಿ ಇದೆ. ಮುಂದಿನ ಎರಡು ವರ್ಷದಲ್ಲಿ ಅವುಗಳನ್ನು ತುಂಬುವ ಕೆಲಸ ಮಾಡಲಿದ್ದೇವೆ. ಈ ವರ್ಷವೇ ಒಂದುವರೆ ಲಕ್ಷ ಉದ್ಯೋಗ ತುಂಬುವ ಕೆಲಸ ಮಾಡಲಿದ್ದೇವೆʼʼ ಎಂದು ಹೇಳಿದ ಅವರು, ನವೆಂಬರ್‌ ೨ರಿಂದ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ನಡೆಯಲಿದೆ. ಏಳು ಲಕ್ಷ ಕೋಟಿ ಹೂಡಿಕೆ ಹರಿದುಬರುವ ನಿರೀಕ್ಷೆ ಇದೆ. ಇದರಿಂದ ಮೂರುವರೆ ಲಕ್ಷ ಜನರಿಗೆ ಉದ್ಯೋಗ ಸಿಗಲಿದೆ ಎಂದರು.

ನವಕರ್ನಾಟಕದಿಂದ ನವಭಾರತ
ನಾವೆಲ್ಲರೂ ಕನ್ನಡಿಗರು ಎನ್ನುವ ಆತ್ಮಾಭಿಮಾನದಿಂದ ಮುನ್ನುಗ್ಗಬೇಕು. ಅದೇ ಹೊತ್ತಿಗೆ ನಾವು ಭಾರತೀಯರು ಎನ್ನುವುದು ಕೂಡಾ ಅಷ್ಟೇ ಮುಖ್ಯ. ನಮ್ಮ ರಾಜ್ಯ ಅಭಿವೃದ್ಧಿಯಾದರೆ ಅದು ದೇಶದ ಅಭಿವೃದ್ಧಿ ಕೂಡಾ. ನವ ಕರ್ನಾಟಕದಿಂದ ನವಭಾರತದ ಸೃಷ್ಟಿಯಾಗಲಿದೆ ಎಂದು ಹೇಳಿದರು ಬೊಮ್ಮಾಯಿ.

ಸಭಾ ಕಾರ್ಯಕ್ರಮಕ್ಕೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಸಿ. ನಾಗೇಶ್, ಸಂಸದ ಪಿ.ಸಿ. ಮೋಹನ್ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಗೋವಿಂದರಾಜ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಮತ್ತಿತರರು ಇದ್ದರು.
ಇದನ್ನೂ ಓದಿ | ಕನ್ನಡ ರಾಜ್ಯೋತ್ಸವ| ಉದ್ಯೋಗ ನೇಮಕ ಪರೀಕ್ಷೆಯಲ್ಲಿ ಕನ್ನಡ ಅವಗಣನೆ, ಹಿಂದಿ ಹೇರಿಕೆಗೆ ಶಾಸಕ ರಿಜ್ವಾನ್‌ ಅರ್ಷದ್‌ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Pralhad Joshi
ಕರ್ನಾಟಕ39 mins ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ58 mins ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ1 hour ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ2 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ2 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ2 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ2 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ2 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ3 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ3 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ10 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ11 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌