Kannada Rajyotsava: ಕನ್ನಡ ನಾಡು ʻಕರ್ನಾಟಕʼ ಆಗಿದ್ದು ಹೇಗೆ? - Vistara News

ಕನ್ನಡ ರಾಜ್ಯೋತ್ಸವ

Kannada Rajyotsava: ಕನ್ನಡ ನಾಡು ʻಕರ್ನಾಟಕʼ ಆಗಿದ್ದು ಹೇಗೆ?

ಈ ವರ್ಷ ನವೆಂಬರ್‌ 1ರಂದು ʻವಿಶಾಲ ಮೈಸೂರುʼ ಎಂಬ ರಾಜ್ಯಕ್ಕೆ ʻಕರ್ನಾಟಕʼ (Kannada Rajyotsava) ಎಂದು ನಾಮಕರಣವಾಗಿ ಅರ್ಧ ಶತಮಾನ ಸಲ್ಲಲಿದೆ. ಈ ಹಿನ್ನೆಲೆಯಲ್ಲಿ, ಕನ್ನಡ ನಾಡಿಗೆ ʻಕರ್ನಾಟಕʼ ಎಂಬ ಹೆಸರು ಬಂದಿದ್ದು ಹೇಗೆ ಎನ್ನುವ ಮಾಹಿತಿಯಿದು.

VISTARANEWS.COM


on

Kannada Rajyotsava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಭಾಷೆಯ ಆಧಾರದ ಮೇಲೆ ರಾಜ್ಯಗಳ ವಿಂಗಡಣೆ ಆಗುವಾಗ ʻಮೈಸೂರುʼ ಎಂಬ ಹೆಸರನ್ನೇ ಕನ್ನಡನಾಡಿಗೆ (Kannada Rajyotsava) ಉಳಿಸಿಕೊಳ್ಳಲಾಗಿತ್ತು ಎಂಬುದು ಗೊತ್ತಿರುವ ಸಂಗತಿ. ಹೀಗೆ ʻವಿಶಾಲ ಮೈಸೂರುʼ ಎಂಬ ನಾಮಧೇಯ ಹೊತ್ತ ರಾಜ್ಯವೊಂದು ʻಕರ್ನಾಟಕʼ ಎನಿಸಿಕೊಂಡಿದ್ದು 1973ರ ನವೆಂಬರ್‌ 1ರಂದು. ನಾವೆಲ್ಲ ಕರ್ನಾಟಕದವರಾಗಿ 50 ವರ್ಷಗಳ ಸಂದ ಈ ಹೊತ್ತಿನಲ್ಲಿ, ನಮ್ಮ ರಾಜ್ಯಕ್ಕೆ ಈ ಹೆಸರೇಕೆ ಬಂತು ಎಂಬ ಕುತೂಹಲವಿರಬಹುದು. ಮೈಸೂರು ಸಂಸ್ಥಾನ ದೀರ್ಘಕಾಲದಿಂದ ಅಸ್ತಿತ್ವದಲ್ಲಿ ಇದ್ದುದರಿಂದ ರಾಜ್ಯಕ್ಕೆ ಆ ಹೆಸರು ಬಂದಿದ್ದು ಸಹಜ. ಆದರೆ ಕರ್ನಾಟಕವೆಂಬ ಯಾವುದೇ ಒಂದು ಸಂಸ್ಥಾನ, ಊರು ಇಲ್ಲದಿದ್ದಾಗಲೂ ಆ ಹೆಸರು ಬಂದಿದ್ದು ಹೇಗೆ ಮತ್ತು ಎಂದಿನಿಂದ? ನಮ್ಮ ರಾಜ್ಯದ ಹೆಸರಿನ ಬಗೆಗೊಂದಿಷ್ಟು ಜಿಜ್ಞಾಸೆಯಿದು.

Karunadu has a history of thousands of years

ಸಾವಿರಾರು ವರ್ಷಗಳ ಇತಿಹಾಸ

ಈ ಬಗ್ಗೆ ಭಾಷಾ ವಿದ್ವಾಂಸರಲ್ಲಿ ಬಹಳಷ್ಟು ಅಭಿಪ್ರಾಯಗಳು ಪ್ರಕಟವಾಗಿವೆ. ಆದರೆ ʻಇದಮಿತ್ಥಂʼ ಎನ್ನುವಂಥ ಒಂದು ವ್ಯುತ್ಪತ್ತಿ ಸೂತ್ರವನ್ನು ಎಲ್ಲಿಯೂ ನೀಡಲಾಗಿಲ್ಲ. ಆದರೆ ಕರ್ನಾಟಕ ಎಂಬ ಶಬ್ದಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇರುವುದನ್ನು ಖಚಿತವಾಗಿ ಭಾಷಾ ತಜ್ಞರು ಮತ್ತು ಇತಿಹಾಸಕಾರರು ಹೇಳಿದ್ದಾರೆ. ನಮ್ಮ ದೇಶದ ಪ್ರಾಚೀನ ಸಾಹಿತ್ಯ ಗ್ರಂಥಗಳಲ್ಲಿ ಕರ್ಣಾಟ(ಕ), ಕರ್ನಾಟ(ಕ) ಮುಂತಾದ ಶಬ್ದಗಳು ಉಲ್ಲೇಖಗೊಂಡಿವೆ. ಶೂದ್ರಕ ಕವಿಯ ʻಮೃಚ್ಛಕಟಿಕʼ, ವರಾಹಮಿಹಿರನ ʻಬೃಹತ್‌ ಸಂಹಿತʼ, ಭಾಗವತ ಪುರಾಣ, ಮಾರ್ಕಂಡೇಯ ಪುರಾಣಗಳಲ್ಲೂ ಇಂಥ ಶಬ್ದಗಳು ಕಾಣಿಸಿಕೊಂಡಿವೆ. ಕನ್ನಡ ಭಾಷೆಯಲ್ಲಿ ಲಭ್ಯವಿರುವ ಪ್ರಾಚೀನ ಗದ್ಯಕೃತಿಯಾದ ವಡ್ಡಾರಾಧನೆ, ಪಂಪನ ಕೃತಿಗಳು, ನಾಗವರ್ಮನ ʻಕರ್ಣಾಟಕ ಕಾದಂಬರಿʼಯಂಥ ಗ್ರಂಥಗಳಲ್ಲಿ ಈ ಶಬ್ದದ ಬಳಕೆಯನ್ನು ಕಾಣಬಹುದು. ಆದರೆ ಇವೆಲ್ಲ ಈಗ ಪ್ರಚಲಿತವಿರುವ ಸ್ವರೂಪದಲ್ಲಿ ಮತ್ತು ಅರ್ಥದಲ್ಲಿ ಬಳಕೆಯಾಗಿದ್ದಲ್ಲ. ಇವೆಲ್ಲ ದೇಶ, ಭಾಷೆ, ಜನ, ಕುಲಗಳನ್ನು ಸೂಚಿಸುವಂತೆ ತೋರುತ್ತವೆ.

Archaeologist Examines Ancient Inscription

ಪ್ರಾಚೀನ ಶಾಸನಗಳಲ್ಲೂ ಉಲ್ಲೇಖ

ಸಾಹಿತ್ಯ ಗ್ರಂಥಗಳು ಮಾತ್ರವಲ್ಲ, ಪ್ರಾಚೀನ ಶಾಸನಗಳೂ ಈ ಬಗ್ಗೆ ಬೆಳಕು ಚೆಲ್ಲುತ್ತವೆ. ಕದಂಬರದ ದೊರೆ ಶಾಂತಿವರ್ಮನ ಶಾಸನ, ತಲಕಾಡಿನ ಗಂಗರಸರದ್ದು ಎನ್ನಲಾದ ಒಂದು ತಾಮ್ರ ಶಾಸನ, ರಾಷ್ಟ್ರಕೂಟರ ದಂತಿದುರ್ಗ ದೊರೆಯ ತಾಮ್ರ ಶಾಸನಗಳು ಸೇರಿದಂತೆ ನೂರಾರು ಶಾಸನಗಳಲ್ಲಿ ಕರ್ಣಾಟ(ಕ), ಕರ್ನಾಟ(ಕ) ಶಬ್ದಗಳು ಅಥವಾ ಅವುಗಳ ಬೇರೆ ಸ್ವರೂಪಗಳು ಕಾಣಸಿಗುತ್ತವೆ. ಕನ್ನಡದ್ದು ಮಾತ್ರವಲ್ಲ, ತಮಿಳುಭಾಷೆಯ ಶಾಸನಗಳಲ್ಲೂ ಇವುಗಳನ್ನು ಕಾಣಬಹುದು. ಪಾಂಡ್ಯರಾಜನಾದ ಶೆಡೈಯನ್‌ ಪರಾಂತಕನ ವೇಳ್ವೆಕುಡಿ ತಾಮ್ರ ಶಾಸನದಲ್ಲಿ ʻಕರುನಾಡಗನ್‌ʼ ಎಂಬಂತೆ ಬಳಕೆಯಾಗಿದೆ. ಇತರ ತಮಿಳು ಶಾಸನಗಳಲ್ಲಿ ʻಕನ್ನಾಟ, ಕನ್ನಾಟಕ, ಕನ್ನಾಡಗರುಂʼ ಎಂದೆಲ್ಲಾ ಉಲ್ಲೇಖಗಳಿವೆ. ಈ ಎಲ್ಲಾ ಆಧಾರಗಳ ಮೇಲೆ, ಕರುನಾಡು, ಕರ್ನಾಟ, ಕರ್ಣಾಟ ಎಂಬ ಬಳಕೆಗಳು ಸಾವಿರಾರು ವರ್ಷಗಳ ಹಿಂದಿನಿಂದಲೂ ಇತ್ತು ಎನ್ನಬಹುದು.

ಇದಲ್ಲದೆ, ವಿದ್ವಾಂಸರಿಂದ ವ್ಯಕ್ತವಾದ ಕೆಲವು ಆಸಕ್ತಿಕರ ಅಭಿಪ್ರಾಯಗಳು ಹೀಗಿವೆ

  • ದಕ್ಷಿಣ ಭಾರತದ ನೆಲದ ಬಣ್ಣ ಕಪ್ಪು. ಹಾಗಾಗಿ ಕರ್‌ ನಾಡು, ಅಂದರೆ ಕಪ್ಪು ನಾಡು ಎಂಬುದು ಕರ್+ನಾಟ್+ಅಗಂ (ಕಪ್ಪು ನಾಡಿನ ಪ್ರದೇಶ) ಆಗಿ ಕರ್ನಾಟಕ ಆಗಿದೆ. (ಗುಂಡರ್ಟನ್‌, ಕಾಲ್ಡ್‌ವೆಲ್‌, ಬಿ.ಎಂ. ಶ್ರೀಕಂಠಯ್ಯ ಮತ್ತು ಆರ್‌. ರಘುನಾಥರಾಯರ ಅಭಿಪ್ರಾಯ)
  • ಕರಾವಳಿಯನ್ನು ಹೊರತು ಪಡಿಸಿದರೆ, ಕನ್ನಡಸೀಮೆ ಸಮುದ್ರಮಟ್ಟಕ್ಕಿಂತ ಮೇಲಿದೆ. ಹಾಗಾಗಿ ಕರುನಾಡು, ಅಂದರೆ ಎತ್ತರವಾದ ನಾಡು ಎಂಬುದು ಮುಂದೆ ಕರ್ಣಾಟ ಆಗಿದೆ (ಎಚ್‌. ನಾರಾಯಣರಾಯರು)
  • ಕರಂ, ಕಡು, ಕರು ಎಂಬವೆಲ್ಲ ದೊಡ್ಡ, ಮಹಾ, ವಿಸ್ತಾರವಾದ ಎಂಬ ಅರ್ಥವನ್ನು ಸೂಚಿಸುತ್ತವೆ. ಹೀಗೆ ವಿಸ್ತಾರವಾದ ನಾಡು ಎಂಬುದು ಅಥವಾ ಕರ್‌+ನಾಡು ಎಂಬುದೇ ಕರ್ನಾಟ ಆಗಿರಬಹುದು (ಮಂಜೇಶ್ವರ ಗೋವಿಂದ ಪೈ, ರಾ. ಹ. ದೇಶಪಾಂಡೆ ಅವರ ಅಭಿಮತ)
  • ಪರಿಮಳವಾಚಿಯಾಗಿದ ಪದವೂ ಹೆಸರಿಗೆ ಸೇರಿಕೊಂಡಿದೆ. ಕಮ್ಮಿತು+ನಾಡು (ಕಂಪಿನ, ಪರಿಮಳದ ನಾಡು) ಎಂಬುದು ಕನ್ನಾಡು ಆಗಿ ಕನ್ನಡ ಆಗಿದೆ. (ರಾ. ನರಸಿಂಹಾಚಾರ್ಯ, ಆರ್‌. ತಾತಾಚಾರ್ಯರ ಅಭಿಪ್ರಾಯ)

ಇಂಥದ್ದು ಒಂದೆರಡಲ್ಲ, ಬಹಳಷ್ಟು ವಾದ, ಚರ್ಚೆ, ಜಿಜ್ಞಾಸೆಗಳು ತಜ್ಞರ ನಡುವೆ ನಡೆದಿದೆ. ದೇಶ್ಯ ಶಬ್ದವಾದ ʻಕನ್ನಡʼ ಎಂಬುದು ಸಂಸ್ಕೃತದಲ್ಲಿ ʻಕರ್ಣಾಟʼವಾಯಿತು ಎಂಬ ಅಭಿಮತವೂ ಇದೆ.

ವ್ಯಾಪ್ತಿ ಏನು?

ʻಕರ್ನಾಟಕʼ ಎಂಬ ಶಬ್ದದ ಜೊತೆಗೆ ʻಕುಂತಲʼ ಎಂಬ ಪದವೂ ಶಾಸನಗಳಲ್ಲಿ ಕಂಡುಬರುತ್ತದೆ. ಈ ಕರ್ನಾಟಕ-ಕುಂತಲಗಳು ಕೆಲವೊಮ್ಮೆ ಒಂದಕ್ಕೊಂದು ಪರ್ಯಾಯವಾಗಿ, ಕೆಲವೊಮ್ಮೆ ಪ್ರತ್ಯೇಕವಾಗಿ ಶಾಸನಗಳಲ್ಲಿ ಬಳಕೆಯಾಗಿವೆ. ಸ್ಥೂಲವಾಗಿ ಹೇಳುವುದಾದರೆ, ಈ ಕುಂತಲ ಪ್ರಾಂತ್ಯವು ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಗಳನ್ನು ಬಿಟ್ಟು, ಉಳಿದಂತೆ ಕನ್ನಡ ಮಾತಾಡುವವರು ವಾಸಿಸುತ್ತಿದ್ದ ಜಾಗಗಳನ್ನು ಉದ್ದೇಶಿಸಿದಂತೆ ಕಾಣುತ್ತದೆ. ಬಾದಾಮಿ ಚಾಲುಕ್ಯರು, ಗಂಗರು, ಕಲ್ಯಾಣ ಚಾಲುಕ್ಯರು, ಹೊಯ್ಸಳರು, ವಿಜಯನಗರದ ಅರಸರು, ಮೈಸೂರು ಅರಸರು- ಎಲ್ಲ ದೊರೆಗಳು ತಮ್ಮನ್ನು ಕರ್ನಾಟಕ ರಾಜ್ಯದ ಅರಸರೆಂದು ಹೇಳಿಕೊಂಡಿದ್ದಾರೆ. ಹಾಗಾಗಿ ಕನ್ನಡ ಮಾತಾಡುವವರು ವ್ಯಾಪ್ತಿ ಬಹುದೊಡ್ಡದಿತ್ತು ಮತ್ತು ಆ ಪ್ರದೇಶಗಳನ್ನೆಲ್ಲಾ ಕರ್ನಾಟಕ ಎಂದೇ ಕರೆಯಲಾಗುತ್ತಿತ್ತು ಎಂಬುದು ಸ್ಪಷ್ಟ. ಹಾಗಾಗಿ ಕನ್ನಡ ಸೀಮೆಗೆ ಕರ್ನಾಟಕ ಎಂಬ ಹೆಸರಿನ ಬಳಕೆ ಅಧಿಕೃತವಾಗಿ ಜಾರಿಗೆ ಬಂದಿದ್ದು 1973ರಲ್ಲೇ ಆದರೂ, ಜನಬಳಕೆಯ ಭಾಷೆಯಲ್ಲಿ ಈ ಹೆಸರು ಪ್ರಾಚೀನವಾದದ್ದು.

(ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರ ʻಕರ್ನಾಟಕದ ಪ್ರಾಚೀನತೆʼಯನ್ನು ಆಧರಿಸಿ ಸಿದ್ಧಪಡಿಸಿದ ಲೇಖನ)

ಇದನ್ನೂ ಓದಿ: Kannada Rajyotsava: ಚೆಲುವ ಕನ್ನಡನಾಡು ಉದಯವಾಗಿದ್ದು ಹೀಗೆ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
HD Revanna
ಕರ್ನಾಟಕ5 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ5 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ5 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ5 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ6 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ6 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ6 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ6 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ6 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ6 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ24 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌