Kannada Rajyotsava: ಒಮ್ಮೆ ನೋಡಲೇಬೇಕಾದ ಕರ್ನಾಟಕದ ವಿಶ್ವ ಪರಂಪರೆ ತಾಣಗಳಿವು - Vistara News

ಕನ್ನಡ ರಾಜ್ಯೋತ್ಸವ

Kannada Rajyotsava: ಒಮ್ಮೆ ನೋಡಲೇಬೇಕಾದ ಕರ್ನಾಟಕದ ವಿಶ್ವ ಪರಂಪರೆ ತಾಣಗಳಿವು

ಕರ್ನಾಟಕದ (Kannada Rajyotsava) ಕೆಲವು ತಾಣಗಳನ್ನು ಯುನೆಸ್ಕೊ ಮಾನ್ಯ ಮಾಡಿದೆ. ಇವು ರಾಜ್ಯದ ಹಿರಿಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದಿವೆ. ವಿಶ್ವ ಮಾನ್ಯತೆ ಪಡೆದ ತಾಣಗಳ ಕಿರುಪರಿಚಯ ಇಲ್ಲಿದೆ.

VISTARANEWS.COM


on

World Heritage Sites of Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡ ನಾಡು (Kannada Rajyotsava) ಪ್ರವಾಸಿಗರಿಗೆ ಸ್ವರ್ಗ. ಯಾರಾರಿಗೆ ಯಾವ್ಯಾವ ರೀತಿಯ ಆಸಕ್ತಿಯ ತಾಣಗಳು ಬೇಕೊ ಅಂಥವನ್ನು ಆಯ್ದುಕೊಂಡು ಅಡ್ಡಾಡುವಷ್ಟು ಸಮೃದ್ಧವಾಗಿ ಪ್ರವಾಸಿ ಗಮ್ಯಗಳು ಮತ್ತು ಪರಂಪರೆಯ ತಾಣಗಳು ಕರ್ನಾಟಕದಲ್ಲಿವೆ. ಸಮುದ್ರದಲ್ಲಿ ಆಡಿ, ಮರಳಲ್ಲಿ ಹೊರಳುವವರಿಗಾಗಿ ಉದ್ದಾನುದ್ದದ ತೀರ ಪ್ರದೇಶ, ಕಾನು ಸುತ್ತಿ ಚೈತನ್ಯ ತುಂಬಿಕೊಳ್ಳುವವರಿಗೆಂದು ಹಸಿರಾದ ಮಲೆನಾಡು, ಕಲೆಯ ಆಸಕ್ತರಿಗಾಗಿ ಅತಿಸುಂದರವಾದ ಶಿಲಾದೇಗುಲಗಳು, ಇತಿಹಾಸದ ಕುತೂಹಲಿಗಳಿಗಾಗಿ ರಾಜ-ನಿಜಾಮರುಗಳ ಸಂಸ್ಥಾನದ ಉಳಿಕೆಗಳು- ಯಾವುದಿಲ್ಲ ಹೇಳಿ! ವಿಶ್ವ ಪರಂಪರೆಯ ತಾಣಗಳೆಂದು ಯುನೆಸ್ಕೊ ಸಂಸ್ಥೆಯಿಂದ ಗುರುತಿಸಿಕೊಂಡಿದ್ದು ಆರೇ ಸ್ಥಳಗಳಾದರೂ, ಉಳಿದ ತಾಣಗಳು ಕಡಿಮೆಯೆಂದು ಎಣಿಸುವಂತಿಲ್ಲ. ಗಡಿಗೆಯಲ್ಲಿನ ಪಕ್ವಾನ್ನ ಹೇಗಿದೆ ಎನ್ನುವುದನ್ನು ಕೆಲವೇ ಅಗುಳುಗಳಿಂದ ಅಳೆದು ನೋಡುವಂತೆ, ಯುನೆಸ್ಕೊ ಮಾನ್ಯ ಮಾಡಿದ ಕೆಲವೇ ತಾಣಗಳು ಸಾಕು ಇಡೀ ರಾಜ್ಯದ ಹಿರಿಮೆಯನ್ನು ಎತ್ತಿ ಹಿಡಿಯುವುದಕ್ಕೆ. ವಿಶ್ವ ಮಾನ್ಯತೆ ಪಡೆದ ತಾಣಗಳ ಕಿರುಪರಿಚಯವಿದು.

hampi

ಹಂಪಿಯ ಸಮುಚ್ಚಯ

ರಸ್ತೆ ಬದಿಯಲ್ಲಿ ಮುತ್ತು-ರತ್ನಗಳನ್ನು ಕೊಳಗದಲ್ಲಿ ಅಳೆದಳೆದು ಮಾರುತ್ತಿದ್ದ ಸಾಮ್ರಾಜ್ಯವೆಂಬ ಹೆಗ್ಗಳಿಕೆ ಹೊತ್ತ ವಿಜಯನಗರ ಸಾಮ್ರಾಜ್ಯದ ಹೆಗ್ಗುರುತಾಗಿ ನಿಂತಿರುವ ಹಂಪಿಯ ಸ್ಮಾರಕಗಳ ಗುಂಪು, ಕರ್ನಾಟಕದ ಮೇರು ಪ್ರವಾಸಿ ಆಕರ್ಷಣೆಗಳಲ್ಲೊಂದು. ವಿಜಯನಗರ ಸಾಮ್ರಾಜ್ಯದ ಅವಶೇಷಗಳು ದಕ್ಷಿಣ ಭಾರತದ ಹಲವೆಡೆಗಳಲ್ಲಿ ಹರಡಿದ್ದರೂ, ರಾಜಧಾನಿ ಎನಿಸಿದ್ದರಿಂದ ಹಂಪೆಯ ಕಂಪು ದೊಡ್ಡದು. ಸಾಮ್ರಾಜ್ಯದ ಸ್ವರ್ಣಯುಗವನ್ನು ಇವು ಇಂದಿಗೂ ಕಣ್ಮುಂದೆ ತೆರೆದಿಡುತ್ತವೆ. ಸುಮಾರು 4187 ಹೆಕ್ಟೇರ್‌ ಜಾಗಕ್ಕೆ ಹರಡಿರುವ ಈ ತಾಣ, 200 ವರ್ಷಗಳ ಕಥೆಯನ್ನಿಲ್ಲಿ ಹೇಳುತ್ತದೆ. 1,600ಕ್ಕೂ ಹೆಚ್ಚು ಸಣ್ಣ-ದೊಡ್ಡ ಸ್ಮಾರಕಗಳಿಲ್ಲಿ ನಿಂತಿದ್ದು, 1986ರಲ್ಲೇ ಇದು ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿದೆ.

ಏನಿದೆ ಇಲ್ಲಿ ವಿಶೇಷ?

ಅತ್ಯಂತ ಸುಂದರ ಶಿಲಾ ದೇಗುಲಗಳು, ರಾಣಿ ಮಹಲುಗಳು, ಕೋಟೆಗಳು, ನಿರೀಕ್ಷಣಾ ಗೋಪುರಗಳು ಸೇರಿದಂತೆ ನೋಡುವುದಕ್ಕೆ ಬಹಳಷ್ಟನ್ನು ಹಂಪೆ ಪ್ರವಾಸಿಗರ ಮುಂದಿರಿಸುತ್ತದೆ. ಅತಿ ಮನೋಹರವಾದ ಕಲ್ಲಿನ ರಥ, ಉಗ್ರ ನರಸಿಂಹನ ಮೂರ್ತಿ, ವಿರೂಪಾಕ್ಷ ದೇವಾಲಯ, ವಿಠ್ಠಲ ದೇಗುಲ, ಹಜಾರ ರಾಮ ದೇವಾಲಯ, ಅಚ್ಚುತರಾಯ ದೇವಳ, ಹೇಮಕೂಟ ಬೆಟ್ಟದ ದೇಗುಲಗಳು, ರಾಣಿಯ ಸ್ನಾನಗೃಹ, ಆನೆಲಾಯ, ಕಮಲ ಮಹಲ್‌, ಹಂಪೆಯ ಬಜಾರು… ಹೀಗೆ ಬಹಳಷ್ಟನ್ನು ಇಲ್ಲಿ ನೋಡಬಹುದು.

ಭೇಟಿಗೆ ಯಾವಾಗ ಸೂಕ್ತ?

ಅಕ್ಟೋಬರ್‌ನಿಂದ ಮಾರ್ಚ್‌ವರೆಗಿನ ಸಮಯ ಇಲ್ಲಿನ ಭೇಟಿಗೆ ಪ್ರಶಸ್ತ. ವಾರದೆಲ್ಲಾ ದಿನಗಳು ಬೆಳಗ್ಗೆ 9ರಿಂದ ಸಂಜೆ 6ವರೆಗೆ ಭೇಟಿಗೆ ಲಭ್ಯವಿದ್ದು. 15 ವರ್ಷದ ಕೆಳಗಿನ ಮಕ್ಕಳಿಗೆ ಮುಕ್ತ ಅವಕಾಶವಿದೆ. ಉಳಿದವರಿಗೆ ಪ್ರವೇಶ ಶುಲ್ಕವಿದ್ದು, ಆಲ್‌ಲೈನ್‌ನಲ್ಲೂ ಟಿಕೆಟ್‌ ಖರೀದಿಸಬಹುದು. ಇಲ್ಲಿಂದ 13 ಕಿ.ಮೀ. ದೂರದ ಹೊಸಪೇಟೆಯಲ್ಲಿ ರೈಲು ನಿಲ್ದಾಣವಿದ್ದು, ಸುಮಾರು 35 ಕಿ.ಮೀ ದೂರದಲ್ಲಿ ವಿಜಯನಗರ ಜಿಲ್ಲೆಯ ವಿಮಾನನಿಲ್ದಾಣವಿದೆ.

pattada kallu

ಪಟ್ಟದಕಲ್ಲು ದೇವಾಲಯಗಳು

ಸುಮಾರು 7 ಮತ್ತು 8ನೇ ಶತಮಾನಕ್ಕೆ ಸೇರಿದ ಹಿಂದೂ ಮತ್ತು ಜಿನ ಮಂದಿರಗಳ ಸುಂದರ ಸಮುಚ್ಚಯ ಈ ಪಟ್ಟದಕಲ್ಲು, ಬಾದಾಮಿ ಮತ್ತು ಐಹೊಳೆಯ ದೇಗುಲಗಳು. 1987ರಲ್ಲೇ ವಿಶ್ವ ಪರಂಪರೆಯ ತಾಣವೆಂದು ಗುರುತಿಸಲಾದ ಈ ತಾಣವು ಸುಮಾರು 5.5 ಹೆಕ್ಟೇರ್‌ ಜಾಗದಲ್ಲಿ ಹರಡಿಕೊಂಡಿದೆ. ಚಾಲುಕ್ಯರು ಮತ್ತು ರಾಷ್ಟ್ರಕೂಟರ ಶಿಲ್ಪಕಲೆಯ ವೈಭವವನ್ನು ಇಲ್ಲಿ ಕಾಣಬಹುದಾಗಿದ್ದು, ಪಟ್ಟದಕಲ್ಲಿನಲ್ಲಿ ಶಿವನಿಗೆಂದು ನಿರ್ಮಿಸಲಾದ 9 ದೇಗುಲಗಳ ಸರಣಿಯನ್ನು ಕಾಣಬಹುದು. ಆದರೆ ವೈಷ್ಣವ ಮತ್ತು ಶಾಕ್ತ ಪಂಥದ ಕುರುಹುಗಳನ್ನೂ ದೇವಾಲಯಗಳಲ್ಲಿ ಕಾಣಬಹುದು.

ಏನಿದೆ ವಿಶೇಷ?

ದ್ರಾವಿಡ ಮತ್ತು ಇಂಡೊ ಆರ್ಯನ್‌ ಶೈಲಿಯ ಮಿಶ್ರಣದಂಥ ವಿನ್ಯಾಸಗಳನ್ನು ಹೊಂದಿರುವ ಜೈನ ದೇವಾಲಯಗಳು ಇಲ್ಲಿವೆ. ವಿರೂಪಾಕ್ಷ ದೇವಳ (ಹಂಪೆಯದ್ದಲ್ಲ, ಇಲ್ಲೇ ಬೇರೆಯದು), ಗಳಗನಾಥ ದೇಗುಲ, ಜಂಬುಲಿಂಗೇಶ್ವರ ಮಂದಿರ, ಸಂಗಮೇ‍ಶ್ವರ, ಕಾಡಸಿದ್ದೇಶ್ವರ, ಚಂದ್ರಶೇಖರ, ಕಾಶಿ ವಿಶ್ವನಾಥ ಮತ್ತು ಜೈನ ನಾರಾಯಣ ದೇವಾಲಯಗಳು ಇಲ್ಲಿನ ಆಕರ್ಷಣೆ.

ಬಾಗಲಕೋಟೆ ಜಿಲ್ಲೆಯಲ್ಲಿರುವ ಈ ಸ್ಥಳಕ್ಕೆ ಸಮೀಪದ ವಿಮಾನ ನಿಲ್ದಾಣ 130 ಕಿ.ಮೀ. ದೂರದ ಹುಬ್ಬಳ್ಳಿಯದ್ದು. ಬೆಳಗಾವಿ ವಿಮಾನ ನಿಲ್ದಾಣ 150 ಕಿ.ಮೀ. ದೂರದಲ್ಲಿದೆ. 18 ಕಿ.ಮೀ. ದೂರದ ಬಾದಾಮಿಯಲ್ಲಿ ರೈಲು ನಿಲ್ದಾಣವಿದೆ. ಅಕ್ಟೋಬರ್‌ನಿಂದ ಮಾರ್ಚ್‌ವರೆಗಿನ ಸಮಯ ಇಲ್ಲಿನ ಭೇಟಿಗೆ ಪ್ರಶಸ್ತ. ವಾರದೆಲ್ಲಾ ದಿನಗಳು ಬೆಳಗ್ಗೆ 6ರಿಂದ ಸಂಜೆ 5.30ರವರೆಗೆ ಭೇಟಿಗೆ ಲಭ್ಯವಿದ್ದು. 15 ವರ್ಷದ ಕೆಳಗಿನ ಮಕ್ಕಳಿಗೆ ಮುಕ್ತ ಅವಕಾಶವಿದೆ. ಉಳಿದವರಿಗೆ ಪ್ರವೇಶ ಶುಲ್ಕವಿದ್ದು, ಆಲ್‌ಲೈನ್‌ನಲ್ಲೂ ಟಿಕೆಟ್‌ ಖರೀದಿಸಬಹುದು.

ಪಶ್ಚಿಮ ಘಟ್ಟಗಳು

ವಿಶ್ವದ 39 ಮಹತ್ವದ ಜೀವವೈವಿಧ್ಯ ತಾಣಗಳಲ್ಲಿ ಪಶ್ಚಿಮ ಘಟ್ಟವೂ ಒಂದು. ಸಹ್ಯಾದ್ರಿ ಶ್ರೇಣಿಗಳು ಹಿಮಾಲಯಕ್ಕಿಂತ ಸಾಕಷ್ಟು ಹಳೆಯದಾಗಿದ್ದು, ಮುಂಗಾರು ಮಾರುತ ವ್ಯವಸ್ಥೆಗೆ ಇಡೀ ಭೂಮಿಯಲ್ಲೇ ಉತ್ತಮ ಉದಾಹರಣೆಯಿದು. 2012ರಲ್ಲಿ ವಿಶ್ವ ಪರಂಪೊರೆಯ ತಾಣವನ್ನು ಸೇರಿರುವ ಈ ಹಸಿರು ಪ್ರದೇಶ, 795.3 ಹೆಕ್ಟೇರ್‌ನ ಬೃಹತ್‌ ಪ್ರದೇಶವನ್ನು ಒಳಗೊಂಡಿದೆ. ವಿಶ್ವದಲ್ಲೇ ಅಳಿವಿನಂಚಿಗೆ ಬಂದಿರುವ ಸುಮಾರು 325 ಜಾತಿಯ ಅಮೂಲ್ಯ ಪ್ರಾಣಿ ಮತ್ತು ಪಕ್ಷಗಳ ಆಶ್ರಯ ತಾಣವಿದು ಎಂಬುದನ್ನು ಜಾಗತಿಕ ಜೀವ ವಿಜ್ಞಾನಿಗಳು ದೃಢಪಡಿಸಿದ್ದಾರೆ.

ಏನಿದೆ ವಿಶೇಷ?

ಪಶ್ಚಿಮ ಘಟ್ಟಗಳು ಕರ್ನಾಟಕದಲ್ಲಿ ಮಾತ್ರವೇ ಅಲ್ಲ, ಗುಜರಾತ್‌, ಮಹಾರಾಷ್ಟ್ರ, ಗೋವಾ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲೂ ವ್ಯಾಪಿಸಿದೆ. ಹಲವಾರು ರಾಷ್ಟ್ರೀಯ ಉದ್ಯಾನವನಗಳು ಮತ್ತು ಸಂರಕ್ಷಿತ ಪ್ರದೇಶಗಳನ್ನಿದು ಒಳಗೊಂಡಿದೆ. 7 ಸಾವಿರಕ್ಕೂ ಹೆಚ್ಚಿನ ಪ್ರಭೇದಗಳ ಹೂಬಿಡುವ ಸಸ್ಯಗಳು, 139 ಜಾತಿಯ ಸಸ್ತನಿಗಳು, 508 ಜಾತಿಯ ಹಕ್ಕಿಗಳು, 179 ಜಾತಿಯ ಉಭಯವಾಸಿಗಳು, 6 ಸಾವಿರ ಜಾತಿಯ ಕೀಟಗಳು, 300 ಜಾತಿಯ ಮೀನುಗಳಿಗೆ ಈ ಪ್ರದೇಶ ತವರೆನಿಸಿಕೊಂಡಿದೆ.

hoysala

ಹೊಯ್ಸಳ ದೇವಾಲಯಗಳು

ತ್ರಿಕೂಟಾಚಲ ವಿನ್ಯಾಸದ, ಚೆನ್ನಕೇಶವ ಮತ್ತು ಹೊಯ್ಸಳೇಶ್ವರರನ್ನು ಆರಾಧಿಸುವ ಬೇಲೂರು ಹಾಗೂ ಹಳೇಬೀಡಿನ ಸರ್ವಾಂಗ ಸುಂದರ ದೇವಾಲಯಗಳು ಯುನೆಸ್ಕೊ ಪಟ್ಟಿ ಸೇರಿ, ವಿಶ್ವ ಮಾನ್ಯತೆ ಪಡೆದಿವೆ. ನಕ್ಷತ್ರಾಕಾರದ ವೇದಿಕೆಯ ಮೇಲೆ ಸ್ಥಿತವಾದ ಈ ಸಂಕೀರ್ಣ ಕೆತ್ತನೆಯ ದೇವಳಗಳು 2004ರಿಂದ ವಿಶ್ವ ಪರಂಪರೆಯ ತಾಣವೆನಿಸಿವೆ. 10ರಿಂದ 14ನೇ ಶತಮಾನದ ಅವಧಿಯಲ್ಲಿ ಆಗಿಹೋದ ಹೊಯ್ಸಳರ ಉತ್ತುಂಗದ ಕಥೆಯನ್ನು ಇಲ್ಲಿನ ಕಲ್ಲಿನಲ್ಲಿರುವ ಕಲೆಗಳು ಹೇಳುತ್ತವೆ.

ಇಲ್ಲಿಯ ವಿಶೇಷತೆ ಏನು?

ರಾಜ ವಿಷ್ಣುವರ್ಧನನ ಕಾಲದಲ್ಲಿ ಬೇಲೂರಿನ ಚೆನ್ನಕೇಶವ ದೇಗುಲ ನಿರ್ಮಿಸಲಾಗಿದ್ದು, ಮಂತ್ರಿ ಕೇತುಮಲ್ಲನ ಕಾಲದಲ್ಲಿ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ನಿರ್ಮಾಣಗೊಂಡಿದೆ. ಆದರೆ ಹೊಯ್ಸಳರ ಆಡಳಿತವಿದ್ದು ಜಾಗಗಳಲ್ಲಿ ಇಂಥ ಹಲವು ಸಣ್ಣ ದೇವಾಲಯಗಳಿದ್ದು, ಎಲ್ಲವುಗಳಲ್ಲೂ ಇಂಥದ್ದೇ ಸೂಕ್ಷ್ಮ ಕುಸುರಿಯಂಥ ಕಲ್ಲಿನ ಕೆತ್ತನೆಗಳನ್ನು ಕಾಣಬಹುದು. ಲೋಹಕ್ಕೆ ಇರಬಹುದಾದಂಥ ಹೊಳಪು ಇಲ್ಲಿನ ಕಲ್ಲುಗಳಿಗಿದ್ದು, ನೋಡುಗರ ಹುಬ್ಬೇರಿಸುತ್ತವೆ.

ಹಾಸನ ಜಿಲ್ಲೆಯಲ್ಲಿರುವ ಇದನ್ನು ವರ್ಷದ ಯಾವುದೇ ಸಮಯದಲ್ಲಿ ಸಂದರ್ಶಿಸಬಹುದು. ವಾರದೆಲ್ಲಾ ದಿನಗಳು ಬೆಳಗ್ಗೆ 6ರಿಂದ ಸಂಜೆ 6ವರೆಗೆ ಹಳೇಬೀಡಿನ ದೇಗುಲ ಭೇಟಿಗೆ ಲಭ್ಯವಿದ್ದು, ಬೆಳಗ್ಗೆ 7.30ರಿಂದ ಸಂಜೆ 6.30ರವರೆಗೆ ಬೇಲೂರಿನ ದೇವಳ ತೆರೆದಿರುತ್ತದೆ. ಪ್ರವೇಶ ಶುಲ್ಕವಿಲ್ಲ.

shriranga pattana

ಶ್ರೀರಂಗಪಟ್ಟಣದ ಸ್ಮಾರಕಗಳು

ಸುತ್ತಲೂ ಹರಿಯುವ ಕಾವೇರಿ ನದಿಯಿಂದ ದ್ವೀಪದಂತೆ ಕಾಣುವ ಶ್ರೀರಂಗಪಟ್ಟಣ ಮೈಸೂರಿಗೆ ಸಮೀಪದಲ್ಲಿದೆ. ವಿಜಯನಗರ ಮತ್ತು ಹೊಯ್ಸಳ ಶೈಲಿಯ ವಾಸ್ತುಶಿಲ್ಪಗಳು ಇಲ್ಲಿನ ಸ್ಮಾರಕಗಳ ಹೆಗ್ಗಳಿಕೆ. ಊರಿಗೆ ತನ್ನ ಹೆಸರನ್ನು ನೀಡಿರುವ ಶ್ರೀರಂಗನಾಥ ಸ್ವಾಮಿಯ ದೇಗುಲ ಇಲ್ಲಿನ ಹೆಗ್ಗುರುತು. ಇದು ಕರ್ನಾಟಕದ ಭವ್ಯ ವೈಷ್ಣವ ಆರಾಧನಾ ತಾಣಗಳಲ್ಲಿ ಒಂದು.

ಏನು ನೋಡಬಹುದು?

ಹಿಂದೊಮ್ಮೆ ಮೈಸೂರು ಸಂಸ್ಥಾನದ ರಾಜಧಾನಿ ಎನಿಸಿಕೊಂಡಿದ್ದ ಇಲ್ಲಿ, ದರಿಯಾ ದೌಲತ್‌ ಬಾಗ್‌, ಶ್ರೀರಂಗಪಟ್ಟಣದ ಕೋಟೆ, ಟಿಪ್ಪು ಸುಲ್ತಾನನ ಗುಂಬಜ್‌, ಜಾಮಾ ಮಸೀದಿ, ರಂಗನತಿಟ್ಟು ಪಕ್ಷಿಧಾಮಗಳು ನೋಡಲೇಬೇಕಾದವು. ವಿಶ್ವ ಪರಂಪರೆಯ ತಾಣದ ತಾತ್ಕಾಲಿಕ ಪಟ್ಟಿಯಲ್ಲಿರುವ ಇದನ್ನು ವರ್ಷದ ಯಾವುದೇ ಸಮಯದಲ್ಲಿ ಸಂದರ್ಶಿಸಬಹುದು.

Monuments of the Deccan Sultans

ದಖನ್‌ ಸುಲ್ತಾನರ ಸ್ಮಾರಕಗಳು

ಬೀದರ್‌, ವಿಜಯಪುರ ಮತ್ತು ಕಲಬುರ್ಗಿಯಲ್ಲಿ ಹರಡಿಕೊಂಡಿರುವ ಈ ಸ್ಮಾರಕಗಳು ಯುನೆಸ್ಕೊದ ತಾತ್ಕಲಿಕ ಪಟ್ಟಿಯಲ್ಲಿವೆ. ಪ್ರಧಾನವಾಗಿ ಇಸ್ಲಾಮಿಕ್‌ ಶೈಲಿಯ ವಾಸ್ತುಶಿಲ್ಪವೇ ಈ ಸ್ಮಾರಕಗಳಲ್ಲಿ ಸೊಗಸಾದ ಗುಮ್ಮಟಗಳು, ಕಮಾನುಗಳನ್ನು ನೋಡಬಹುದು. ಹೈದರಾಬಾದ್‌ನಲ್ಲೂ ಈ ಸುಲ್ತಾನರ ಸ್ಮಾರಕಗಳಿವೆ.

ಪ್ರಮುಖವಾದುದೇನು?

ಬಹಮನಿ ಸುಲ್ತಾನರ ಮೊದಲ ರಾಜಧಾನಿ ಕಲಬುರ್ಗಿಯಲ್ಲಿರುವ ಸ್ಮಾರಕಗಳ ಪೈಕಿ ಕಲಬುರ್ಗಿ ಕೋಟೆ, ದೊಡ್ಡ ಮಸೀದಿ, ಏಳು ಗೋರಿಗಳ ಸಂಕೀರ್ಣದ ಗುಂಬಜ್‌ ಪ್ರಮುಖವಾದವು. ಬೀದರ್‌ನ ಸ್ಮಾರಕಗಳ ಪೈಕಿ ಬೀದರ್‌ ಕೋಟೆ, ಅರಮನೆ, ಮದರಸ, ಬಹಮನಿ ಗೋರಿಗಳು ಇತ್ಯಾದಿಗಳನ್ನು ನೋಡಬಹುದು. ವಿಜಯಪುರದಲ್ಲಿ ಸುಮಾರು 80ಕ್ಕೂ ಹೆಚ್ಚಿನ ಸಣ್ಣ, ದೊಡ್ಡ ಸ್ಮಾರಕಗಳಿವೆ. ಇವುಗಳಲ್ಲಿ ಗೋಲ್‌ ಗುಂಬಜ್‌ ಜನಪ್ರಿಯವಾಗಿದ್ದು, ಪ್ರವಾಸಿಗರ ಮೆಚ್ಚಾಗಿದೆ. ಇದು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಗುಂಬಜ್‌ ಎಂದು ಖ್ಯಾತವಾಗಿದೆ.

ಅಕ್ಟೋಬರ್‌ನಿಂದ ಮಾರ್ಚ್‌ವರೆಗಿನ ಸಮಯ ಇಲ್ಲಿನ ಭೇಟಿಗೆ ಸೂಕ್ತ. ಕೆಲವು ಸ್ಮಾರಕಗಳಿಗೆ ಯಾವುದೇ ಪ್ರವೇಶ ಶುಲ್ಕವಿಲ್ಲ; ಆದಿಲ್‌ ಶಾಹಿ ಸ್ಮಾರಕಗಳಿಗೆ ಶುಲ್ಕ ನಿಗದಿ ಪಡಿಸಲಾಗಿದೆ.

ಇದನ್ನೂ ಓದಿ: Kannada Rajyotsava: ನಮಗೆ ತಿಳಿದಿರಲೇಬೇಕು, ಕರ್ನಾಟಕ ಹವಾಗುಣದ ಪರಿಚಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Cleric
ದೇಶ7 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ8 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ17 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ26 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ29 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ39 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ46 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ59 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್1 hour ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ1 hour ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌