ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ - Vistara News

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ ಸಾ ಪ

ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಕಲಾವಿದ ಹಾಗೂ ಕನ್ನಡ ಹೋರಾಟಗಾರಾದ ಜಿ.ಕೆ. ಸತ್ಯ ಅವರು ಆಯ್ಕೆ ಆಗಿದ್ದಾರೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಆಯ್ಕೆ ಸಮಿತಿಯಲ್ಲಿ ನಿರ್ಧಾರವಾಗಿದೆ.

VISTARANEWS.COM


on

By

G k sathya
ಹಿರಿಯ ಕಲಾವಿದ ಜಿ.ಕೆ ಸತ್ಯ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ 2023ನೇ ಸಾಲಿನ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಕನ್ನಡ ಪರ ಹೋರಾಟಗಾರ ಹಿರಿಯ ಕಲಾವಿದರಾದ ಜಿ.ಕೆ. ಸತ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಟಿ. ತಿಮ್ಮೇಶ್‌ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಹೊಂದಿದೆ. ಜತೆಗೆ ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿದೆ. ಕನ್ನಡ ಚಳವಳಿ ಸೇನಾನಿ ಮ. ರಾಮಮೂರ್ತಿ ಅವರು ರಾಜ್ಯಾದ್ಯಂತ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೋರಾಟಕ್ಕೆ ಶಕ್ತಿ ಮತ್ತು ಚೈತನ್ಯವನ್ನು ತುಂಬಿದವರು.

ಇವರ ಹೆಸರಿನಲ್ಲಿರುವ ಈ ದತ್ತಿ ಪ್ರಶಸ್ತಿಯನ್ನು ರಾಜ್ಯದಲ್ಲಿ ಕನ್ನಡದ ಹೋರಾಟದಲ್ಲಿ ತೊಡಗಿಸಿಕೊಂಡಿರುವ 50 ವರ್ಷ ಮೀರಿದ ವಯೋಮಾನದ ಕನ್ನಡ ಕಾರ್ಯಕರ್ತರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದುವರೆಗೆ 8 ಜನ ಕನ್ನಡ ಚಳುವಳಿಗಾರರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಾಲಿನ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರ ಹಿರಿಯ ಕಲಾವಿದ ಜಿ.ಕೆ. ಸತ್ಯ ಅವರು ಆಯ್ಕೆ ಆಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿ.ಕೆ. ಸತ್ಯ ಕನ್ನಡದ ಅತ್ಯಂತ ಜನಪ್ರಿಯ ವರ್ಣಚಿತ್ರಕಾರರು. ಅವರು ಚಿತ್ರಕಲೆಗೆ ಸೀಮಿತವಾಗದೆ ಕನ್ನಡ ಹೋರಾಟಗಳಲ್ಲಿ ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಂಡವರು. ಕನ್ನಡ ಚಳವಳಿಗಾರರಾದ ಅ.ನ.ಕೃ, ಮ.ರಾಮಮೂರ್ತಿ, ನಾಡಿಗೇರರು ಮೊದಲಾದವರ ನಿಕಟ ಒಡನಾಡಿಯಾಗಿದ್ದರು. ಗೋಕಾಕ್ ಚಳುವಳಿ ಅನುಷ್ಟಾನಕ್ಕೆ ಹೋರಾಡಿದ ಪ್ರಮುಖ ನೇತಾರರಲ್ಲಿ ಒಬ್ಬರು. ಕನ್ನಡ ಶಕ್ತಿ ಕೇಂದ್ರದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳೂ ಆಗಿದ್ದರು. ಸದಾ ಕನ್ನಡ, ಕನ್ನಡಿಗ, ಕರ್ನಾಟಕದ ಹಿತರಕ್ಷಣೆಗೆ ಹೋರಾಡುತ್ತಾ ಬಂದಿರುವ ಸತ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತಿದೆ ಎಂದು ನಾಡೋಜ. ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಮಾಜಿ ಜಿಲ್ಲಾಧ್ಯಕ್ಷರಾದ ಟಿ.ತಿಮ್ಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
cyber attack ನನ್ನ ದೇಶ ನನ್ನ ದನಿ
ಅಂಕಣ11 mins ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ21 mins ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ51 mins ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ1 hour ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Stray dogs attack in Shira 4 children one woman injured
ಪ್ರಮುಖ ಸುದ್ದಿ7 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ7 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ8 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ8 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ8 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು15 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌