Site icon Vistara News

Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

Karkala Physical Abuse

ಉಡುಪಿ‌: ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ (Karkala Physical Abuse) ಸಂತ್ರಸ್ತ ಯುವತಿಯ ಬ್ಲಡ್ ಟೆಸ್ಟ್ ರಿಪೋರ್ಟ್ ಮಾಹಿತಿ ಲಭ್ಯವಾಗಿದ್ದು, ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ, ಇಬ್ಬರು ಆರೋಪಿಗಳ ವರದಿ ನೆಗೆಟಿವ್‌ ಬಂದಿದೆ ಎಂದು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಎಸ್‌.ಪಿ. ಡಾ. ಅರುಣ್ ಕೆ. ಅವರು, ಪ್ರಕರಣದ 1ನೇ ಆರೋಪಿ ಅಲ್ತಾಫ್ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ 2ನೇ ಆರೋಪಿ ರಿಚರ್ಡ್ ಬ್ಲಡ್ ಟೆಸ್ಟ್‌ ರಿಪೋರ್ಟ್ ನೆಗೆಟಿವ್ ಬಂದಿದೆ. ಆರೋಪಿ ಅಲ್ತಾಫ್ ವಿಚಾರಣೆ ವೇಳೆ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿದ್ದ. ಇದನ್ನೇ ಸಂತ್ರಸ್ತ ಯುವತಿ ತೆಗೆದುಕೊಂಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ಆ ಪೌಡರ್ ಅನ್ನು ನಾವು ಎಫ್ಎಸ್ಎಲ್‌ಗೆ ಕಳಿಸಲಾಗಿದ್ದು, ಯಾವ ಡ್ರಗ್ಸ್ ಎಂದು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ಈ ಡ್ರಗ್‌ ಅನ್ನು ಎಲ್ಲಿಂದ ಪಡೆದಿದ್ದಾರೆ ಮತ್ತು ಎಲ್ಲಿಂದ ಬಂದಿದೆ ಎನ್ನುವ ಕುರಿತು ಅಪರಾಧ ಕ್ರಮಾಂಕ : 146/24 ಕಲಂ. 8(c), 22(b) NDPS Act, Sec. 3(5) BNS ನಲ್ಲಿ ಪ್ರಕರಣ ದಾಖಲಾಗಿದೆ. ಡ್ರಗ್ ಎಲ್ಲಿಂದ ಬಂದಿದೆ ಎಂಬುದರ ಬಗ್ಗೆ ಪೂರ್ಣ ತನಿಖೆ ಮಾಡಲಾಗುವುದು. ಸಂತ್ರಸ್ತೆಯು ಜಡ್ಜ್ ಮುಂದೆ ಹೇಳಿಕೆ ಕೊಡಲಿದ್ದು, ವೈದ್ಯಕೀಯ ಪರೀಕ್ಷೆ ಆದ ನಂತರ ಈ ಪ್ರಕ್ರಿಯೆ ನಡೆಯಲಿದೆ. ಆದಷ್ಟು ಬೇಗನೆ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಇದನ್ನೂ ಓದಿ | Murder Case : ಭಕ್ತನ ಮೈಮೇಲೆ ದೆವ್ವ ಸೇರಿದೆ ಎಂದು ಚೆನ್ನಾಗಿ ಬಡಿದು ಕೊಂದ ಚರ್ಚ್‌ ಫಾದರ್‌!

ಏನಿದು ಪ್ರಕರಣ?

ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದು ಯುವತಿಯನ್ನು (Hindu girl) ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಘಟನೆ ಆ.23ರಂದು ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಇದಕ್ಕೆ ಆರೋಪಿಯ ಇಬ್ಬರು ಸ್ನೇಹಿತರು ಸಹಕರಿಸಿದ್ದರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಈ ಪ್ರಕರಣವು ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ.

ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎ1 ಅಲ್ತಾಫ್ ಹಾಗೂ ಈತನಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿತ್ತು. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು ಎನ್ನಲಾಗದೆ. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಿಯರ್‌ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಳು.

ಇದನ್ನೂ ಓದಿ | Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎಂದು ತಿಳಿದುಬಂದಿದ್ದು, ಮಾದಕ ಪದಾರ್ಥ ನೀಡಿ ಹಿಂದು ಯುವತಿಯ ರೇಪ್ ಎಸಗಿದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

Exit mobile version