Site icon Vistara News

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.24ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

BJP

ಬೆಂಗಳೂರು: ಸೆಪ್ಟೆಂಬರ್‌ ೧೧ರಂದು ನಡೆಯಬೇಕಿದ್ದ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಸೆಪ್ಟೆಂಬರ್‌ ೨೪ರಂದು ನಡೆಸಲು ಪಕ್ಷ ತೀರ್ಮಾನಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದಕ್ಕೂ ಮೊದಲು ಸೆ.೧೧ರಂದು ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ, ಸಚಿವ ಉಮೇಶ್‌ ಕತ್ತಿ ಅವರು ನಿಧನರಾದ ಕಾರಣ ಹಾಗೂ ಸೆ.೧೦ರಂದು ಬಿಜೆಪಿ ಜನಸ್ಪಂದನ ಕಾರ್ಯಕ್ರಮ ನಡೆದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿತ್ತು.

ಇದನ್ನೂ ಓದಿ | ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ; ಹೈದರಾಬಾದ್‌ ತಲುಪಿದ ಪ್ರಧಾನಿ ಮೋದಿ, ಅಮಿತ್‌ ಶಾ

Exit mobile version