Site icon Vistara News

Karnataka Budget 2023: ನೈತಿಕ ಪೊಲೀಸ್‌ಗಿರಿ ತಡೆಯಲು ಕಠಿಣ ಕ್ರಮ, ಪೊಲೀಸರಿಗೆ ಸುಸಜ್ಜಿತ ವಸತಿಗೆ ಆದ್ಯತೆ

karnataka state police

ಬೆಂಗಳೂರು: ಸರ್ಕಾರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ʻನೈತಿಕ ಪೊಲೀಸ್ ಗಿರಿʼಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಸಮಾಜದಲ್ಲಿ ಹದಗೆಟ್ಟಿದ್ದ ಸಾಮರಸ್ಯದ ವಾತಾವರಣವನ್ನು ಮರುನಿರ್ಮಿಸಲು ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಜೆಟ್‌ನಲ್ಲಿ (Karnataka Budget 2023) ಘೋಷಿಸಿದ್ದಾರೆ.

ಇನ್ನಷ್ಟು ಬಜೆಟ್‌ ಸುದ್ದಿಗಳಿಗಾಗಿ ಈ ಲಿಂಕ್‌ ಫಾಲೋ ಮಾಡಿ: ಬಜೆಟ್

Exit mobile version