Site icon Vistara News

Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್‌

cabinet expansion
Ramaswamy Hulakodu

Karnataka Cabinet expansion: ಭರ್ತಿ ಸಂಪುಟದೊಂದಿಗೆ ಅಗ್ನಿ ಪರೀಕ್ಷೆಗೆ ಇಳಿದ ಸಿದ್ದರಾಮಯ್ಯ!
Ramaswamy Hulakodu

ವಂಚಿತರು ಕಾರ್ಯಕ್ರಮಕ್ಕೆ ಬರಲಿಲ್ಲ

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಕೆಲ ಪ್ರಮುಖ ನಾಯಕರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಇವರಲ್ಲಿ ಪ್ರಮುಖರೆಂದರೆ ಬಿ ಕೆ ಹರಿಪ್ರಸಾದ್‌, ಲಕ್ಷ್ಮಣ ಸವದಿ, ಶಿವಲಿಂಗೇ ಗೌಡ, ಗುಬ್ಬಿ ಶ್ರೀನಿವಾಸ, ಎಂ. ಕೃಷ್ಣಪ್ಪ ರುದ್ರಪ್ಪ ಲಮಾಣಿ, ತನ್ವಿರ್ ಸೇಠ್,ಪುಟ್ಟ ರಂಗಶೆಟ್ಟಿ.

Ramaswamy Hulakodu

ಒಬ್ಬೊಬ್ಬರಿಗೆ ಅವಕಾಶ ಮಾಡಿಕೊಡಿ ಎಂದ ಸಿಎಂ

ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಮ್ಮೆಗೆ ನಾಲ್ವರು ಸಚಿವರಿಗೆ ಪ್ರಮಾಣ ವಚನ ಬೋಧಿಸಲು ನಿರ್ಧರಿಸಲಾಗಿತ್ತಾದರೂ ವೇದಿಕೆಯಲ್ಲಿಯೇ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಲ್ಲಿ ಒಮ್ಮೆ ಒಬ್ಬರಿಗೆ ಮಾತ್ರ ಪ್ರಮಾಣ ವಚನ ಬೋಧಿಸುವಂತೆ ಮನವಿ ಮಾಡಿಕೊಂಡರು.

ರಾಜ್ಯಪಾಲ ಗೆಹ್ಲೋಟ್ ಇದಕ್ಕೆ ಒಪ್ಪಿಗೆ ಸೂಚಿಸಿದರು. ಹೀಗಾಗಿ ಕೆಲವೇ ನಿಮಿಷಗಳಲ್ಲಿ ಮುಗಿಯಲಿದ್ದ ಕಾರ್ಯಕ್ರಮ ಒಂದು ಗಂಟೆಗೂ ಹೆಚ್ಚು ಸಮಯ ನಡೆಯಿತು.

Ramaswamy Hulakodu

ಪ್ರಮಾಣವಚನ ಕಾರ್ಯಕ್ರಮ ಮುಕ್ತಾಯ

ರಾಜಭವನದ ಗಾಜಿನ ಮನೆಯಲ್ಲಿ ನಡೆಯುತ್ತಿದ್ದ ಪ್ರಮಾಣವಚನ ಕಾರ್ಯಕ್ರಮ ಮುಕ್ತಾಯಗೊಂಡಿದೆ. ಒಟ್ಟು 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಮಾರು ಒಂದು ಕಾಲು ಗಂಟೆ ಈ ಕಾರ್ಯಕ್ರಮ ನಡೆಯಿತು. ಪ್ರಮಾಣವಚನ ಸ್ವೀಕರಿಸಿದ ನಂತರ ಎಲ್ಲರೂ ಒಟ್ಟಾಗಿ ನಿಂತು ಫೋಟೊ ತೆಗೆಸಿಕೊಂಡರು.

Ramaswamy Hulakodu

ಸಚಿವರಾಗಿ ಬಿ. ನಾಗೇಂದ್ರ ಪ್ರಮಾಣ

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ದೇವರು ಮತ್ತು ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ಬಿಜೆಪಿ ದೊರೆದು ಕಾಂಗ್ರೆಸ್‌ ಸೇರಿದ್ದರು.

Exit mobile version