ಕರ್ನಾಟಕ
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
State Cabinet Expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಈಗ ಭರ್ತಿಯಾಗಿದೆ. ಹೀಗಾಗಿ ಮುಂದಿನ ಬದಲಾವಣೆವರೆಗೂ ಯಾರಿಗೂ ಅವಕಾಶ ಇಲ್ಲ. ಇದು ಕೆಲವು ಸಚಿವಾಕಾಂಕ್ಷಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಕೆಲವರು ಬಹಿರಂಗವಾಗಿಯೇ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ಐವರು ಸಚಿವರು ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿ ತಮ್ಮ ಕ್ಷೇತ್ರಗಳತ್ತ ತೆರಳಿದ್ದಾರೆ.
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆ (Karnataka Cabinet expansion) ಆಗಿದ್ದು, ಶನಿವಾರ (ಮೇ 27) 24 ಮಂದಿ ಸೇರ್ಪಡೆಯಾಗುವ ಮೂಲಕ ಎಲ್ಲ 34 ಸ್ಥಾನಗಳೂ ಭರ್ತಿಯಾಗಿವೆ. ಇದು ಈಗ ಪಕ್ಷದೊಳಗಿನ ಅಸಮಾಧಾನಕ್ಕೆ ಕಾರಣವಾಗಿದ್ದು, ಆಕಾಂಕ್ಷಿತ ನಾಯಕರು ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಈ ವೇಳೆ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಐವರು ಶಾಸಕರು ಆಯ್ಕೆಯಾಗಿದ್ದರೂ ಒಬ್ಬರಿಗೂ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಎಲ್ಲರೂ ಮುನಿಸಿಕೊಂಡಿದ್ದು, ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿ ತಮ್ಮ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ.
ಬೆಂಬಲಿಗರ ಒತ್ತಡಕ್ಕೆ ಮಣಿದ ಐವರು ಶಾಸಕರು
ಸಚಿವ ಸಂಪುಟದಲ್ಲಿ ಹಾವೇರಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ಹಾವೇರಿ ಜಿಲ್ಲೆಯ 5 ಐವರು ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ ಅವರು ದೂರ ಉಳಿದಿದ್ದಾರೆ. ತಮಗೆ ಸ್ಥಾನ ಸಿಗದೆ ಇರುವುದಕ್ಕೆ ತೀವ್ರ ಬೇಸರ ಹೊರಹಾಕಿರುವ ಈ ನಾಯಕರು, ಬೆಂಗಳೂರಿನಿಂದ ಹಾವೇರಿಯತ್ತ ಮುಖ ಮಾಡಿದ್ದಾರೆ. ಈಗಾಗಲೇ ಬೆಂಗಳೂರು ಬಿಟ್ಟು ತಮ್ಮ ಕ್ಷೇತ್ರಗಳತ್ತ ಇವರೆಲ್ಲರೂ ಪ್ರಯಾಣ ಬೆಳೆಸಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಿದ್ದರಾಮಯ್ಯ ಸಂಪುಟದಲ್ಲಿ ಸಿಗದ ಸ್ಥಾನ; ಅಸಮಾಧಾನ ಸ್ಫೋಟ
ಹಾವೇರಿ ಬಿಜೆಪಿ ಭದ್ರಕೋಟೆಯಾಗಿದ್ದರೂ 5 ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಆದರೂ ಇವರಿಗೆ ಪ್ರಾತಿನಿಧ್ಯ ಸಿಗದ ಕಾರಣ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವು ಕಡೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅಲ್ಲದೆ, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶಾಸಕರು ಗೈರಾಗುವಂತೆ ಆಗ್ರಹಿಸಿದ್ದರು. ಹೀಗಾಗಿ ಕಾರ್ಯಕರ್ತರ ಒತ್ತಡಕ್ಕೆ ಮಣಿದ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಬೆಂಗಳೂರಿನಿಂದ ನಿರ್ಗಮಿಸಿದ್ದಾರೆ.
ಚಾಮರಾಜನಗರದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಬೆಂಬಲಿಗರ ಆಕ್ರೋಶ
ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣನೆ ಮಾಡಲಾಗಿದೆ ಎಂದು ಚಾಮರಾಜನಗರದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಾರ ಸಮುದಾಯ ಮುಖಂಡರು ಆಕ್ರೋಶ ಹೊರಹಾಕಿದ್ದು, ನಾಲ್ಕು ಬಾರಿ ಗೆದ್ದಿರುವ ಶಾಸಕರಿಗೆ ಸಚಿವ ಸ್ಥಾನ ಕೊಡದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಮಳವಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪಿ.ಎಂ. ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ವ್ಯಕ್ತಪಡಿಸಿದ್ದಾರೆ. ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ತನ್ವೀರ್ ಸೇಠ್ ಬೆಂಬಲಿಗರಿಂದ ಪ್ರತಿಭಟನೆ
ಶಾಸಕ ತನ್ವೀರ್ ಸೇಟ್ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ. ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಲಾಗಿದೆ. ತನ್ವೀರ್ ಸೇಠ್ ಹಳೇ ಮೈಸೂರು ಭಾಗದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಬಾರಿ ಅವರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಿ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ವಿಜಯಸೇನೆ ವತಿಯಿಂದ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಮುಖಂಡರು ರಕ್ತದಲ್ಲಿ ಪತ್ರ ಬರೆದು ಆಕ್ರೋಶವನ್ನು ಹೊರಹಾಕಿದ್ದಾರೆ. ವಿಜಯಸೇನೆ ಅಧ್ಯಕ್ಷ ಕೆ.ಟಿ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಬಲಿಗರು ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕುಳಿತು ಘೋಷಣೆ ಕೂಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ಅವರಿಗೆ ಸಚಿವ ಸ್ಥಾನ ಕೊಡದೇ ಇರುವುದು ಇವರ ಅಸಮಾಧಾನಕ್ಕೆ ಕಾರಣವಾಗಿದೆ.
ಆರೋಗ್ಯ
Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!
Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಬೆಂಗಳೂರು: ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ ಅವಧಿಯ ಟೆಂಡರ್ಗಳ ಮರು ಪರಿಶೀಲನೆ ಮಾಡಾಗುತ್ತದೆ. ಅನುಮಾನ ಬಂದ ಟೆಂಡರ್ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುತ್ತೇವೆ ಎಂದು ಹೇಳಿದರು.
ಅಧಿಕಾರಿಗಳಿಗೆ ತರಾಟೆ
ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಕರ್ನಾಟಕ
Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!
Manja Thread: ಇದುವರೆಗೂ ಪಕ್ಷಿಗಳ ಪ್ರಾಣ ತೆಗೆಯುತ್ತಿದ್ದ ಗಾಳಿಪಟದ ಮಾಂಜಾ ದಾರ, ಈಗ ಅಮಾಯಕ ಯುವಕನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಸತತ ಆರು ದಿನಗಳ ಜೀವನ್ಮರಣ ಹೋರಾಟ ನಡೆಸಿ, ನರಳಾಡಿ ಪ್ರಾಣ ಬಿಟ್ಟಿದ್ದಾನೆ.
ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಚೈನೀಸ್ ಮಾಂಜಾ ದಾರವು (Manja Thread) ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ.
ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ವೇಳೆ ಗಾಳಿಪಟ ಹಾರಿಸುವ ಪರಿಪಾಠ ಇದೆ. ಆದರೆ ಇದೆ ಸಂಭ್ರಮವು ಬೈಕ್ ಸವಾರರಿಗೆ ಸಂಚಕಾರ ತಂದೊಡ್ಡಿದೆ. ಗದಗ ನಗರದ ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ರವಿ, ಬೈಕ್ನಲ್ಲಿ ಹೋಗುವಾಗ ಗಾಳಿಪಟದ ದಾರ ಕತ್ತು ಸೀಳಿತ್ತು. ರಕ್ತದ ಮಡುವಿನಲ್ಲೇ ಸ್ಥಳೀಯರು ಆಟೋ ಮೂಲಕ ರವಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹರಿತವಾದ ದಾರವು ರವಿಯ ಕತ್ತನ್ನು ಬಲವಾಗಿ ಸೀಳಿದ್ದರಿಂದ, ಆರು ದಿನ ಬಳಿಕ ನರಳಾಡಿ ಪ್ರಾಣ ಬಿಟ್ಟಿದ್ದಾರೆ.
ಕಾಳಸಂತೆಯಲ್ಲಿ ಸಿಗ್ತಿದೆ ಅಪಾಯಕಾರಿ ದಾರ
ರಾಜ್ಯದಲ್ಲಿ ಚೈನೀಸ್ ಮಾಂಜಾ ದಾರ ಮಾರಾಟವು ನಿಷೇಧ ಇದ್ದರೂ, ಗದಗ ಜಿಲ್ಲೆಯಲ್ಲಿ ಮಾತ್ರ ಇದಕ್ಕೆ ಕಡಿವಾಣ ಬಿದ್ದಿಲ್ಲ. ಕಾಳಸಂತೆಗಳಲ್ಲಿ ಈ ಅಪಾಯಕಾರಿ ದಾರ ಮಾರಾಟವಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಕಳೆದ ಭಾನುವಾರ (ಜೂ.4) ಕಾರ ಹುಣ್ಣಿಮೆಯ ದಿನದಂದು ಹಾರಿಸಿದ ಗಾಳಿಪಟದ ದಾರದಿಂದಾಗಿ ರೈಲ್ವೆ ಪೊಲೀಸ್ ಸೇರಿ ನಾಲ್ಕೈದು ಜನರಿಗೆ ಗಾಯವಾಗಿತ್ತು. ಬೈಕ್ನಲ್ಲಿ ಹೋಗುವಾಗ ಕತ್ತು, ಕೈ-ಕಾಲುಗಳಿಗೆ ಹರಿತವಾದ ದಾರದಿಂದ ಗಾಯಗಳಾಗಿತ್ತು. ಈ ರೀತಿಯ ಅವಘಡಗಳು ನಡೆಯುತ್ತಿದ್ದರೂ, ಸಂಬಂಧಪಟ್ಟವರು ಗಪ್ ಚುಪ್ ಆಗಿದ್ದಾರೆ.
ಇದನ್ನೂ ಓದಿ: Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್ ವಾಪಸ್; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್
ಅಪಾಯಕಾರಿ ಮಾಂಜಾ ದಾರಕ್ಕೆ ಕಡಿವಾಣ ಹಾಕುವಂತೆ ವಿಸ್ತಾರ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಆದರೆ ಅಧಿಕಾರಿ ವರ್ಗ ಮಾತ್ರ ಕೈ ಕಟ್ಟಿ ಕುಳಿತು ನಿರ್ಲಕ್ಷ್ಯತನ ತೋರಿತ್ತು. ಇದರ ಪರಿಣಾಮ ಈಗ ಕಾರ ಹುಣ್ಣಿಮೆ ವೇಳೆ ಮಾಂಜಾ ದಾರದಲ್ಲಿ ಗಾಳಿಪಟ ಹಾರಿಸಿದ ಕಾರಣದಿಂದಾಗಿ ಸವಾರರು ಗಂಭೀರ ಗಾಯಗೊಂಡಿದ್ದರು. ಅದರಲ್ಲಿ ಒಬ್ಬ ಸವಾರ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 15 ದಿನಗಳ ಹಿಂದಷ್ಟೇ ಚೈನೀಸ್ ಮಾಂಜಾ ದಾರ ಮಾರಾಟವನ್ನು ತಡೆಯುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯತನ ತೋರಿಸಿದ್ದಾರೆಂದು ಕಿಡಿಕಾರಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!
ಬೆಂಗಳೂರು: ಅನೇಕ ಬಜೆಟ್ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್ (Viral News) ಆಗಿದೆ.
ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ಮನವಿ ಪತ್ರದಲ್ಲೇನಿದೆ?
ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು, ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.
ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.
ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ಬಿಪಿಎಲ್ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.
ಉಡುಪಿ
Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್ ವಾಪಸ್; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್
Govt School: ಶಾಲಾ ಮಕ್ಕಳಿಗೆ ಕುಡಿಯಲು ನೀರು ಕೊಡಿ (Drinking Water) ಎಂದು ಶಿಕ್ಷಕರು ಕೇಳಿದರೆ, ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು, ಶಾಲೆಗೆ ನೀರು ಕೊಡಬೇಡ ವಾಪಸ್ಸು ಬಾ ಎಂದು ಟ್ಯಾಂಕರ್ ಚಾಲಕನನ್ನು ವಾಪಸ್ ಕರೆಸಿಕೊಂಡಿದ್ದಾರೆ. ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು ಆಡಿಯೋ ವೈರಲ್ ಆಗಿದೆ.
ಉಡುಪಿ: ಇಲ್ಲಿನ ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರ ವರ್ತನೆಗೆ ಪಂಚಾಯತ್ ಸದಸ್ಯರು ಕಿಡಿಕಾರಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಕುಡಿಯಲು ನೀರಿಲ್ಲ ಎಂದು ಶಿಕ್ಷಕರು ಪತ್ರವೊಂದನ್ನು ಬರೆದಿದ್ದರು. ಹೀಗಾಗಿ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಶಾಲೆಗೆ ನೀರಿನ ಟ್ಯಾಂಕರ್ ಅನ್ನು ಕಳಿಸಿದ್ದರು. ಆದರೆ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್ ಚಾಲಕನಿಗೆ ಅವಾಜ್ ಹಾಕಿ ನೀರು ಕೊಡಬೇಡ ಬಾ ಎಂದು ವಾಪಸ್ ಕರೆಸಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಆಡಿಯೊವೊಂದು ಬಹಿರಂಗಗೊಂಡಿದ್ದು, ವೈರಲ್ (Viral news) ಆಗಿದೆ.
ಟ್ಯಾಂಕರ್ ಚಾಲಕನ ತರಾಟೆ ತೆಗೆದುಕೊಂಡ ಪಂಚಾಯತ್ ಸದಸ್ಯ
ಶಾಲೆಗೆ ನೀರು ತಲುಪಿಸದ ಹಿನ್ನೆಲೆಯಲ್ಲಿ ಚಾಲಕನಿಗೆ ಫೋನ್ ಮೂಲಕ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ತರಾಟೆ ತೆಗೆದುಕೊಂಡಿದ್ದಾರೆ. ಶಾಲೆಗೆ ಯಾಕೆ ನೀರು ಪೂರೈಸಿಲ್ಲ ಎಂದು ಪಂಚಾಯತ್ ಸದಸ್ಯ ಕೇಳಿದಾಗ, ಅಧ್ಯಕ್ಷರು ಶಾಲೆಗೆ ನೀರು ಬಿಟ್ಟರೆ ಬಿಲ್ ಮಾಡುವುದಿಲ್ಲ ಎಂದಿದ್ದಾರೆ. ಹೀಗಿರುವಾಗ ನಾನೇನು ಮಾಡಲಿ ಸರ್ ಎಂದು ಅಸಹಾಯಕತೆ ತೋರಿದ್ದಾನೆ. ಚಾಲಕ ಹಾಗೂ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ನಡುವಿನ ಸಂಭಾಷಣೆಯ ಆಡಿಯೊ ವೈರಲ್ ಆಗಿದೆ.
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಪಂಚಾಯತ್ ಸದಸ್ಯ
ವಂಡ್ಸೆ ವ್ಯಾಪ್ತಿಗೆ ಬರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಇತ್ತೀಚೆಗೆ ಶಾಲೆಯಲ್ಲಿ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ಶಾಲೆಯ ಶಿಕ್ಷಕರು ಶಾಲೆಗೆ ನೀರು ಬೇಕೆಂದು ಗ್ರಾಮ ಪಂಚಾಯತ್ಗೆ ಪತ್ರವೊಂದನ್ನು ಬರೆದಿದ್ದರು.
ಶಿಕ್ಷಕರ ಲಿಖಿತ ಪತ್ರಕ್ಕೆ ಸ್ಪಂದಿಸಿದ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಪಂಚಾಯತ್ ವತಿಯಿಂದ ಕಳೆದ ಜೂ 7ರಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಲೆಗೆ ನೀರಿನ ಟ್ಯಾಂಕರ್ ಕಳುಹಿಸಿದ್ದರು. ಆದರೆ, ಪಂಚಾಯತ್ ಅಧ್ಯಕ್ಷ ಟ್ಯಾಂಕರ್ ಚಾಲಕನಿಗೆ ಫೋನ್ ಮಾಡಿ ʻನೀರು ಕೊಡಬೇಡ ವಾಪಸ್ ಬಾʼ ಎಂದು ತಿಳಿಸಿದ್ದರಂತೆ.
ಹೀಗಾಗಿ ಚಾಲಕ ಶಾಲಾ ಆವರಣದಲ್ಲೇ 2,750 ಲೀಟರ್ ಬ್ಯಾರಲ್ ಇರಿಸಿ ವಾಪಸ್ ಆಗಿದ್ದಾನೆ. ಬಳಿಕ ಜೂನ್ 8ರ ಬೆಳಗ್ಗೆ ಪುನಃ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್ ಚಾಲಕನನ್ನು ಕರೆಸಿ, ಶಾಲೆಗೆ ನೀರು ಕೊಡುವುದು ಬೇಡ, ನೀರು ಕೊಟ್ಟಲ್ಲಿ ನೀರಿನ ಬಿಲ್ ಮಾಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Road Accident: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಮರಣ; ಶಿವಮೊಗ್ಗ, ಕೊಡಗಿನಲ್ಲೂ ಹಾರಿಹೋಯ್ತು ಪ್ರಾಣ
ಹೀಗಾಗಿ ಪಂಚಾಯತ್ ಅಧ್ಯಕ್ಷರ ಬೇಜವಾಬ್ದಾರಿಗೆ ಬೇಸತ್ತಿರುವ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪಂಚಾಯತ್ ಅಧ್ಯಕ್ಷರು ಶಾಲೆಗೆ ನೀರು ಬಿಡದಂತೆ ಪಿಡಿಒ ಮತ್ತು ನೀರಿನ ಚಾಲಕನಿಗೆ ಧ್ಕಮಿ ಹಾಕಿದ್ದಾರೆ. ಹೀಗಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜತೆಗೆ ಹರಸಾಹಸ ಪಟ್ಟು ಶಾಲೆಗೆ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ12 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema24 hours ago
Priya Prakash Varrier: ಕಣ್ಣು ಹೊಡೊಯೊ ಐಡಿಯಾ ಕೊಟ್ಟಿದ್ದು ನಾನೆ ಎಂದ ಪ್ರಿಯಾ; ಆಕೆಗೆ ತೈಲ ಕೊಡ್ರಪ್ಪ ಎಂದ ನಿರ್ದೇಶಕ!
-
South Cinema22 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema22 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ18 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
ಪ್ರಮುಖ ಸುದ್ದಿ23 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಪ್ರಮುಖ ಸುದ್ದಿ24 hours ago
Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್
-
ಕರ್ನಾಟಕ21 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!