Site icon Vistara News

Karnataka Election 2023: ರಾಜ್ಯ ವಿಧಾನಸಭೆ ಚುನಾವಣೆ ಕಣದ ಕ್ಷಣಕ್ಷಣ ಸುದ್ದಿಗಳು: ಬೆಂಗಳೂರಿನಲ್ಲಿ ಮೋದಿ ಅಬ್ಬರದ ರೋಡ್‌ ಶೋ ಅಂತ್ಯ, ರಾಜಭವನದಲ್ಲಿ ವಾಸ್ತವ್ಯ

Karnataka Election 2023 Live updates Check details In Kannada

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಸ್ಟಾರ್‌ ಪ್ರಚಾರಕರು ಆಗಮಿಸಿ ಅಭ್ಯರ್ಥಿಗಳ ಪರ ಪ್ರಚಾರದ ಅಲೆ ಎಬ್ಬಿಸುತ್ತಿದ್ದಾರೆ. ಇಂದು ಮೋದಿಯವರ ಹಲವು ಕಾರ್ಯಕ್ರಮಗಳು ಮತದಾರರನ್ನು ಸೆಳೆಯಲಿವೆ.

Ramaswamy Hulakodu

ಕುಂದಗೋಳದಲ್ಲಿ ಪ್ರಿಯಾಂಕ ಗಾಂಧಿ ರೋಡ್‌ ಶೋ

ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ರೋಡ್‌ ಶೋ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಅವರು ಮನವಿ ಮಾಡುತ್ತಿದ್ದಾರೆ.

Ramaswamy Hulakodu

ಮಡಿಕೇರಿಯಲ್ಲಿ ಅಮಿತ್‌ ಶಾ ರೋಡ್‌ ಶೋ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಡಿಕೇರಿಯಲ್ಲಿ ರೋಡ್‌ ಶೋ ನಡೆಸುತ್ತಿದ್ದಾರೆ.

ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೃಹತ್ ರೋಡ್ ಶೋ ಆರಂಭಿಸಿದ್ದಾರೆ.

ಅಮಿತ್ ಶಾಗೆ ಹೂ ಮಳೆಗರೆದ ಬಿಜೆಪಿ ಕಾರ್ಯಕರ್ತರು.

Ramaswamy Hulakodu

ಗಾಬರಿ ಪಡುವಂತಹದ್ದೇನಿಲ್ಲ: ಸಿದ್ದರಾಮಯ್ಯ

ಕೂಡ್ಲಿಗಿಯಲ್ಲಿ ಕುಸಿದು ಬಿದ್ದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಗಾಬರಿ ಪಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಕುಸಿದು ಬೀಳಲು ಕಾರಣವನ್ನೂ ಅವರು ಟ್ವಿಟ್ಟರ್‌ನಲ್ಲಿ ನೀಡಿದ್ದು, ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ ಎಂದಿದ್ದಾರೆ.

Ramaswamy Hulakodu

ಹುಬ್ಬಳ್ಳಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ

ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ವಿಶೇಷ ವಿಮಾನದಲ್ಲಿ ಆಗಮಿಸಿದ ಅವರನ್ನು ಕಾಂಗ್ರೆಸ್‌ ನಾಯಕರು ಬರಮಾಡಿಕೊಂಡರು.

Ramaswamy Hulakodu

ನಾನು ರಾಜ್ಯ ರಾಜಕಾರಣಕ್ಕೆ ಬರಲ್ಲಾ ಎಂದ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತಾವು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನಾನು ಮೋದಿ ನೇತೃತ್ವದ ಸರ್ಕಾರದಲ್ಲಿ ಇನ್ನೂ ಬಹಳ ಸಮಯ ಕೆಲಸ ಮಾಡಬೇಕಾಗಿದೆ. ಹೀಗಾಗಿ ರಾಜ್ಯ ರಾಜಕಾರಣಕ್ಕೆ ಮರಳುವ ಯೋಚನೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

Exit mobile version