Site icon Vistara News

Karnataka election 2023: ಸಿದ್ದರಾಮಯ್ಯ ಸರ್ಕಾರ ರಚನೆಯಾಗಲಿ ಎಂದು ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

Karnataka election 2023 A long salute from a fan praying for the formation of Siddaramaiah government

ಕುಕನೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ (Siddaramaiah government) ರಚನೆಯಾಗಬೇಕು ಎಂದು ಪ್ರಾರ್ಥಿಸಿ ತಾಲೂಕಿನ ದ್ಯಾಂಪುರ ಗ್ರಾಮದ ಮಾರುತೇಶ್ವರ ದೇವಸ್ಥಾನಕ್ಕೆ ಅಭಿಮಾನಿಯೊಬ್ಬ ತನ್ನ ಪುತ್ರನ ಸಮೇತನಾಗಿ ದೀರ್ಘದಂಡ ನಮಸ್ಕಾರ ಸಲ್ಲಿಸಿದರು.‌

4 ವರ್ಷದ ಪುತ್ರನ ಸಮೇತ ದೀರ್ಘ ದಂಡ ನಮಸ್ಕಾರ

ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಯಾಗಿರುವ ದ್ಯಾಂಪುರ ಗ್ರಾಮದ ಮಂಜುನಾಥ ಮರಡಿ ಹಾಗೂ ಅವರ ನಾಲ್ಕು ವರ್ಷದ ಪುತ್ರನ ಜತೆಗೂಡಿಕೊಂಡು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ರಾಯರೆಡ್ಡಿ ಶಾಸಕರಾಗಿ ಆಯ್ಕೆಯಾಗಿ, ಸಚಿವ ಸ್ಥಾನ ಪಡೆಯಲಿ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಹೊತ್ತು ಗ್ರಾಮದ ಮಾರುತೇಶ್ವರ ದೇವಸ್ಥಾನಕ್ಕೆ ದೀರ್ಘ ದಂಡ ನಮಸ್ಕಾರವನ್ನು ಸಲ್ಲಿಸಿದರು.

ಇದನ್ನೂ ಓದಿ: Yogi Adityanath: ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹಕ್ಕೆ ಭೂಮಿ ಮಂಜೂರು: ಮಂಡ್ಯದಲ್ಲಿ ಯೋಗಿ ಆದಿತ್ಯನಾಥ ಹೇಳಿಕೆ

ಈ ಸಂದರ್ಭದಲ್ಲಿ ಮಂಜುನಾಥ ಮರಡಿ ಮಾತನಾಡಿ, ರಾಜ್ಯದ ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರು ಬಡವರ ಹಸಿವನ್ನು ಅರ್ಥ ಮಾಡಿಕೊಂಡು ರಾಜ್ಯದ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಸೇರಿದಂತೆ ಇನ್ನಿತರೆ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಈ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪುತ್ರನ ಸಮೇತನಾಗಿ ದೇವರಿಗೆ ಹರಕೆ ಸಲ್ಲಿಸುವ ಕಾರ್ಯ ಮಾಡಿರುತ್ತೇನೆ ಎಂದು ತಿಳಿಸಿದರು.

Exit mobile version