Site icon Vistara News

Karnataka Election 2023: ಮೋದಿ ವಿಷದ ಹಾವು ಎಂದು ಹೇಳಿದ ಕುರಿತು ಖರ್ಗೆ ವಿಷಾದ: ಇಲ್ಲಿದೆ, ವಿಧಾನಸಭೆ ಚುನಾವಣೆಯ ಪ್ರಮುಖ ಬೆಳವಣಿಗೆಯ ಹೈಲೈಟ್ಸ್‌

Karnataka Election 2023 Live updates Check details In Kannada
B Somashekhar

ಐದನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ

ಪಕ್ಷದ ಐದನೇ ಗ್ಯಾರಂಟಿ ಘೋಷಣೆ ಮಾಡಿದ ರಾಹುಲ್‌ ಗಾಂಧಿ

ಅಧಿಕಾರಕ್ಕೆ ಬಂದ ಮೊದಲ ದಿನವೇ ನಿರ್ಧಾರ ಜಾರಿ ಎಂದು ಭರವಸೆ

B Somashekhar

ಮೋದಿ ಕುರಿತ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ವಿಷಾದ

ನಾನು ಯಾರಿಗೂ ನೋವುಂಟು ಮಾಡಲು ಹಾಗೆ ಹೇಳಿಲ್ಲ

ಮೋದಿ ವಿಷದ ಹಾವು ಎಂದು ಹೇಳಿದ್ದ ಖರ್ಗೆ, ಹಾಗಾಗಿ ವಿಷಾದ

ನನ್ನ ಹೇಳಿಕೆಯಿಂದ ನೋವುಂಟಾದರೆ ಖೇದ ವ್ಯಕ್ತಪಡಿಸಿದೆ ಎಂದ ಖರ್ಗೆ

Mallikarjun Tippar

ನಾಳೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ನಟ ಶಿವಣ್ಣನ ಪತ್ನಿ ಗೀತಾ

ಹ್ಯಾಟ್ರಿಕ್ ಹೀರೋ, ಡಾ. ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ (geeta shivarajkumar) ಅವರು ನಾಳೆ(ಶುಕ್ರವಾರ) ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಅವರ ಸಹೋದರ ಮಧು ಬಂಗಾರಪ್ಪ ಅವರು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದು, ಪ್ರಸಕ್ತ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ವಿಧಾನಸಭೆ ಸ್ಪರ್ಧಿಸಿದ್ದಾರೆ. ಗೀತಾ ಅವರು ಮಾಜಿ ಸಿಎಂ ದಿ. ಎಸ್ ಬಂಗಾರಪ್ಪ ಅವರ ಪುತ್ರಿಯಾಗಿದ್ದಾರೆ. 2014ರ ಚುನಾವಣೆ ವೇಳೆ ಗೀತಾ ಶಿವರಾಜಕುಮಾರ್ ಅವರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಗೆಲ್ಲಲು ಸಾಧ್ಯವಾಗಿರಲಿಲ್ಲ. ಆಗ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಅವರ ಇನ್ನೊಬ್ಬ ಸಹೋದರ ಕುಮಾರ ಬಂಗಾರಪ್ಪ ಅವರು ಬಿಜೆಪಿಯಲ್ಲಿದ್ದು, ಅವರು ಸೊರಬ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

Ramaswamy Hulakodu

ಗೀತಾ ಶಿವರಾಜ್‌ ಕುಮಾರ್‌ ನಾಳೆ ಕ್ರಾಂಗ್ರೆಸ್‌ಗೆ

ಹ್ಯಾಟ್ರಿಕ್‌ ಸ್ಟಾರ್‌ ಶಿವರಾಜ್‌ಕುಮಾರ್‌ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ನಾಳೆ ಕಾಂಗ್ರೆಸ್‌ ಸೇರಲಿದ್ದಾರೆ.

ಅವರ ಸಹೋದರ ಮಧು ಬಂಗಾರಪ್ಪ ಈಗಾಗಲೇ ಕಾಂಗ್ರೆಸ್‌ನಲ್ಲಿದ್ದು, ಸೊರಬ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಮಧು ಬಂಗಾರಪ್ಪ ಪರವಾಗಿ ಈಗಾಗಲೇ ಪ್ರಚಾರ ನಡೆಸುತ್ತಿರುವ ಗೀತಾ ಶಿವರಾಜ್‌ ಕುಮಾರ್‌ ಅಧಿಕೃತವಾಗಿ ನಾಳೆ ಪಕ್ಷ ಸೇರುತ್ತಿದ್ದಾರೆ. ಇವರ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ಪುತ್ರಿ.

Ramaswamy Hulakodu

ಕಾಂಗ್ರೆಸ್‌ ಸೇರುವುದಿಲ್ಲ ಎಂದ ಸಿದ್ದಲಿಂಗಸ್ವಾಮಿ

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ತಾವು ಜೀವ ಇರುವವರೆಗೂ ಬಿಜೆಪಿ ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Exit mobile version