Site icon Vistara News

Karnataka election 2023: ಬಳ್ಳಾರಿ ನಗರದ ಅಂದ್ರಾಳ್‌ನಲ್ಲಿ ಕಾಂಗ್ರೆಸ್‌ನ ನಾರಾ ಭರತ್ ರೆಡ್ಡಿ ಅಬ್ಬರದ ಪ್ರಚಾರ

Karnataka election 2023 Congress candidate Nara Bharat Reddy is campaigning loudly in Andral Ballari city

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಾರಾ ಭರತ್ ರೆಡ್ಡಿ ನಗರದ 8ನೇ ವಾರ್ಡ್ ನ ಅಂದ್ರಾಳ್‌ನಲ್ಲಿ ಮಧ್ಯಾಹ್ನ ಬಿರುಸಿನ ಮತಯಾಚನೆ ಮಾಡಿದರು.

ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ

ತಮ್ಮ ಅಪಾರ ಬೆಂಬಲಿಗರೊಂದಿಗೆ‌ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮನೆ ಮನೆಗೆ‌ ತೆರಳಿ ಕಾಂಗ್ರೆಸ್‌ ಅನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಳಿಕ ಮಾತನಾಡಿದ ಅವರು, ಪ್ರಧಾನ ಮಂತ್ರಿ‌ ನರೇಂದ್ರ ಮೋದಿ ಬಳ್ಳಾರಿಗೆ ಬರುವುದರ ಬಗ್ಗೆ ನನಗೆ ಗೊತ್ತಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಪ್ರಚಾರ ಚೆನ್ನಾಗಿ ನಡೆಯುತ್ತಿದೆ. ಜನರು ಕೂಡ ಈ ಬಾರಿ ಬದಲಾವಣೆ ತರಬೇಕು ಎಂದು ಬಯಸಿದ್ದಾರೆ ಎಂದರು.‌

ಇದನ್ನೂ ಓದಿ: LPG Price Cut : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್‌ ದರದಲ್ಲಿ 171.50 ರೂ. ಇಳಿಕೆ

ಕಾಂಗ್ರೆಸ್‌ನ ಎಲ್ಲ ಪಾಲಿಕೆಯ ಸದಸ್ಯರು ಒಟ್ಟಿಗೆ ಇದ್ದು, ಎಲ್ಲ ವಾರ್ಡ್‌ಗಳಲ್ಲಿ ಪಾಲಿಕೆ ಸದಸ್ಯರು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಈ ಬಾರಿ ಖಂಡಿತವಾಗಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು. ಪ್ರಚಾರದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

Exit mobile version