karnataka election 2023 Elderly man who had cast his vote from home died before the results were declaredKarnataka Election 2023: ಮನೆಯಿಂದಲೇ ಮತದಾನ ಮಾಡಿದ್ದ ವೃದ್ಧ; ಫಲಿತಾಂಶಕ್ಕೂ ಮುನ್ನವೇ ಮೃತ್ಯು - Vistara News

ಉಡುಪಿ

Karnataka Election 2023: ಮನೆಯಿಂದಲೇ ಮತದಾನ ಮಾಡಿದ್ದ ವೃದ್ಧ; ಫಲಿತಾಂಶಕ್ಕೂ ಮುನ್ನವೇ ಮೃತ್ಯು

ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಲು ಆಗದ ಕಾರಣಕ್ಕೆ ನಿವೃತ್ತ ಶಿಕ್ಷಕರೊಬ್ಬರು, ಎರಡು ದಿನಗಳ ಹಿಂದಷ್ಟೆ ಮನೆಯಿಂದಲೇ ಮತದಾನ (Voting) ಮಾಡಿದ್ದರು. ಆದರೆ ವಿಧಾನಸಭೆ ಚುನಾವಣೆಯ (Karnataka Election 2023) ಫಲಿತಾಂಶಕ್ಕೂ ಮುನ್ನವೇ ಅಸುನೀಗಿದ್ದಾರೆ.

VISTARANEWS.COM


on

voter ಗುರುರಾಜ್ ಭಟ್
ಮೃತ ಗುರುರಾಜ್ ಭಟ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿದೆ. ಈಗಾಗಲೇ 80 ವರ್ಷ ಮೇಲ್ಪಟ್ಟವರು ಮತ್ತು ವಿಶೇಷ ಚೇತನರಿಗೆಂದು ಮತದಾನ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ. ಹೀಗೆ ಮನೆಯಿಂದಲೇ ಮತದಾನ ಮಾಡಿದ್ದ ವೃದ್ಧರೊಬ್ಬರು ಫಲಿತಾಂಶಕ್ಕೂ ಮೊದಲೇ ಮೃತಪಟ್ಟಿದ್ದಾರೆ.

ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ನಿವಾಸಿ ಗುರುರಾಜ್ ಭಟ್ (94) ಮೃತ ದುರ್ದೈವಿ. ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ಬರಲಿದ್ದು, ಎರಡು ದಿನಗಳ ಹಿಂದೆಯಷ್ಟೆ ವಿಧಾನಸಭಾ ಚುನಾವಣೆಗಾಗಿ ನಿವೃತ್ತ ಶಿಕ್ಷಕರಾಗಿದ್ದ ಗುರುರಾಜ್‌ ಭಟ್‌ ಮನೆಯಿಂದಲೇ ಮತ ಚಲಾಯಿಸಿದ್ದರು.

ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಲು ಗುರುರಾಜ್ ಭಟ್ ಅವರಿಗೆ ಅಸಾಧ್ಯವಾಗಿತ್ತು. ಹೀಗಾಗಿ ಮನೆಯಲ್ಲಿಯೇ ಮತದಾನ ಮಾಡಲು ಜಿಲ್ಲಾ ಚುನಾವಣಾ ಆಯೋಗ ಅವಕಾಶ ಮಾಡಿತ್ತು. ಮತ ಚಲಾಯಿಸಿದ ಎರಡು ದಿನಗಳ ಬಳಿಕ ಗುರುರಾಜ್ ಭಟ್ ವಯೋಸಹಜದಿಂದ ಮೃತಪಟ್ಟಿದ್ದಾರೆ.

ಮೇ 6ರವರೆಗೆ ಮನೆಯಿಂದಲೇ ವೋಟಿಂಗ್‌ಗೆ ಅವಕಾಶ

ರಾಜ್ಯದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ದಾಟಿದ ಹಿರಿಯ ಮತದಾರರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣೆ (Karnataka Election 2023) ಆಯೋಗ ಅವಕಾಶ ಮಾಡಿಕೊಟ್ಟಿದೆ. ಏಪ್ರಿಲ್‌ 29ರಿಂದ ಮೇ 6ರವರೆಗೆ ಮನೆಯಿಂದಲೇ ಮತದಾನ ಮಾಡಬಹುದಾಗಿದೆ.

ಚುನಾವಣೆ ಅಧಿಕಾರಿಗಳು ಮತದಾರರ ಮನೆಗೆ ಹೋಗಿ ಬ್ಯಾಲೆಟ್ ಪೇಪರ್‌ನಲ್ಲಿ ಮತ ಹಾಕಿಸಿಕೊಳ್ಳುತ್ತಿದ್ದಾರೆ. ಮೂರೂ ಪಕ್ಷಗಳ ಏಜೆಂಟ್‌ಗಳೊಂದಿಗೆ ಚುನಾವಣೆ ಅಧಿಕಾರಿಗಳು ಮತದಾರರ ಮನೆಗೆ ತೆರಳಿ, ಅವರ ಸಮ್ಮುಖದಲ್ಲಿಯೇ ಮತ ಹಾಕಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Karnataka Election : ಕಿಚ್ಚ ಸುದೀಪ್‌ ಫ್ಯಾನ್ಸ್‌ ಮೇಲೆ ಹಿಗ್ಗಾಮುಗ್ಗಾ ಲಾಠಿಪ್ರಹಾರ

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ 80 ವರ್ಷ ದಾಟಿದ 12,15,920 ಮತದಾರರಿದ್ದಾರೆ. ಇವರಲ್ಲಿ ಪುರುಷರು 5,46,487 ಇದ್ದರೆ, ಮಹಿಳೆಯರ ಸಂಖ್ಯೆ 6,69,417 ಇದೆ. ಆದರೆ, 80 ಸಾವಿರಕ್ಕೂ ಅಧಿಕ ಜನ ಮಾತ್ರ ಮನೆಯಿಂದಲೇ ಮತದಾನ ಮಾಡಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಮೇ 6ರ ಸಂಜೆ 6 ಗಂಟೆವರೆಗೆ ಹಿರಿಯ ಮತದಾರರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Murder case : ಬೆಂಗಳೂರಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲುಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಗದಗನಲ್ಲಿ ಗ್ರಾ.ಪಂ ಸದಸ್ಯನ ಮನೆ ಮೇಲೆ ದಾಳಿ (assault Case) ಮಾಡಲಾಗಿದೆ. ಉಡುಪಿಯಲ್ಲಿ ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

murder case
Koo

ಬೆಂಗಳೂರು/ಗದಗ/ಉಡುಪಿ: ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಡೈರಿ ಸರ್ಕಲ್ ಬಳಿ ವ್ಯಕ್ತಿ ತಲೆ ಮೇಲೆ ಕಲ್ಲೆಸೆದು ಭೀಕರವಾಗಿ ಕೊಲೆ (Murder case) ಮಾಡಲಾಗಿದೆ. ನೇಪಾಳ ಮೂಲದ ಗಜೇಂದ್ರ ಸಿಂಗ್ ಕೊಲೆಯಾದವನು

ಕಳೆದ ಮೂರು ವರ್ಷದ ಹಿಂದೆ ನೇಪಾಳದಿಂದ ಬೆಂಗಳೂರಿಗೆ ಬಂದಿದ್ದ ಗಜೇಂದ್ರ ಸಿಂಗ್, ಯಲಹಂಕದ ತಿರುಪತಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಜತೆ ಬಾರ್‌ಗೆ ಹೋಗಿದ್ದ.

ಇಬ್ಬರು ಕಂಠಪೂರ್ತಿ ಕುಡಿದು ಮನೆಗೆ ಹೋಗುವಾಗ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ಹೋಗಿ ಗಜೇಂದ್ರ ಸಿಂಗ್ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿ ಸಂತೋಷ್‌ ಎಸ್ಕೇಪ್‌ ಆಗಿದ್ದಾನೆ. ಘಟನೆ ಸಂಬಂದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹವನ್ನು ಯಲಹಂಕ ‌ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ಸೇಡಿಗಾಗಾಗಿ ಗ್ರಾಪಂ ಸದಸ್ಯನ ಮನೆ ಮೇಲೆ ದಾಳಿ

ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಸೇಡು ತೀರಿಸಿಕೊಳ್ಳಲು ರಾತ್ರೋರಾತ್ರಿ ಗ್ರಾಮ ಪಂಚಾಯಿತಿ ಸದಸ್ಯನ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇ 8ರ ಮಧ್ಯರಾತ್ರಿ ಘಟನೆ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯ ಮಿಲಿಂದ್ ಕಾಳೆ ಮನೆ ಮೇಲೆ ದಾಳಿ ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಂಡ್ ಫ್ಯಾನ್ ವ್ಯವಹಾರವಾಗಿ ಮಿಲಿಂದ್ ಕಾಳೆ, ಪ್ರಕಾಶ್ ನಿಡಗುಂದಿ ಮಧ್ಯದ ಮುನಿಸಿನಿಂದ ಗಲಾಟೆ ನಡೆದಿದೆ ಎನ್ನಲಾಗಿದೆ. ಮಿಲಿಂದ್ ಕಾಳೆ ಮೇಲಿನ ಸೇಡಿಗಾಗಿ ಲಾಂಗ್, ಮಚ್ಚು, ರಾಡ್‌, ಕಲ್ಲುಗಳಿಂದ ದಾಳಿ ನಡೆಸಿದ್ದಾರೆ.

ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಗದಗ ಗ್ರಾಮೀಣ ಠಾಣೆಯಲ್ಲಿ ಸುಮಾರು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹಲವರನ್ನು ಬಂಧಿಸಿದ್ದು, ಪರಾರಿ ಆಗಿರುವ ಇನ್ನುಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಪ್ರಕರಣದ ಬೆನ್ನಲ್ಲೇ ಮೇ 9ರ ಮಧ್ಯಾಹ್ನ ಆರೋಪಿ ಪ್ರಕಾಶ್ ನಿಡಗುಂದಿ ಕಾರಿಗೆ ಬೆಂಕಿ ಹಾಗೂ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಿಲಿಂದ್ ಕಾಳೆ ಮನೆ ಮೇಲೆ ದಾಳಿಯ ರಿವೇಂಜ್‌ಗೆ ಪ್ರಕಾಶ್‌ ನಿಡಗುಂದಿ ಕಾರಿಗೆ ಮಿಲಿಂದ ಕಾಳೆ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಎರಡೂ ಬಣದಿಂದ ಹಲವರನ್ನು ಬಂಧಿಸಲಾಗಿದೆ. ಎರಡು ಕಡೆಯಿಂದಲ್ಲೂ ಪ್ರತ್ಯೇಕ ದೂರು ದಾಖಲಾಗಿದೆ.

ಉಡುಪಿಯಲ್ಲಿ ಪೆಟ್ರೋಲ್‌ ವಿಚಾರಕ್ಕೆ ಕಿರಿಕ್‌

ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ನಡೆದಿದೆ. ಎರಡು ಬೈಕ್‌ಗಳಲ್ಲಿ ಮಧ್ಯರಾತ್ರಿ ಬಂದ ಯುವಕರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದಾರೆ. ಪೆಟ್ರೋಲ್ ಹಾಕಲು ಹೇಳಿದಾಗ ಸಿಬ್ಬಂದಿ ಬಂದ್ ಆಗಿದೆ ಎಂದಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಯುವಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರದೀಪ್ ಕುಮಾರ್ (26) ಹಲ್ಲೆಗೊಳಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ2 mins ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ4 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ8 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

cylinder explosion in Kunigal 6 people seriously injured, Kunigal MLA Dr Ranganath visit victoria Hospital in bengaluru
ತುಮಕೂರು10 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

RCB vs CSK
ಕ್ರೀಡೆ21 mins ago

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

Prajwal Revanna Case
ಪ್ರಮುಖ ಸುದ್ದಿ33 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Virat Kohli
ಕ್ರೀಡೆ56 mins ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Girish's mother
ಕರ್ನಾಟಕ1 hour ago

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

HD Deve Gowda
ಕರ್ನಾಟಕ1 hour ago

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Viral Video
ದೇಶ1 hour ago

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ23 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌