Karnataka Election 2023: ಬಿಟಿಎಂ ಲೇಔಟ್ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಧರರೆಡ್ಡಿ ನಾಮಪತ್ರ ಸಲ್ಲಿಕೆ, ಭರ್ಜರಿ ರೋಡ್‌ ಶೋ - Vistara News

ಕರ್ನಾಟಕ

Karnataka Election 2023: ಬಿಟಿಎಂ ಲೇಔಟ್ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಧರರೆಡ್ಡಿ ನಾಮಪತ್ರ ಸಲ್ಲಿಕೆ, ಭರ್ಜರಿ ರೋಡ್‌ ಶೋ

Karnataka Election 2023: ಕೆ.ಆರ್.ಶ್ರೀಧರರೆಡ್ಡಿ ಅವರು ಭರ್ಜರಿ ರೋಡ್‌ ಶೋ ಮೂಲಕ ಬಿಟಿಎಂ ಲೇಔಟ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ರೋಡ್‌ ಶೋ ವೇಳೆ ಸಾವಿರಾರು ಜನ ಅವರಿಗೆ ಸಾಥ್‌ ನೀಡಿದರು.

VISTARANEWS.COM


on

K R Sridhara Reddy Files Nomination In BTM Layout As BJP Candidate
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್‌ ಶೋ ನಡೆಸಿದ ಕೆ.ಆರ್.ಶ್ರೀಧರರೆಡ್ಡಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಟಿಎಂ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಆರ್.ಶ್ರೀಧರರೆಡ್ಡಿ ಅವರು ನಾಮಪತ್ರ (Karnataka Election 2023) ಸಲ್ಲಿಸಿದರು. ಸಾವಿರಾರು ಬೆಂಬಲಿಗರೊಂದಿಗೆ ಬೃಹತ್‌ ರೋಡ್‌ ಶೋ ನಡೆಸಿದ ಅವರು ಆಡುಗೋಡೆ ಬಿಬಿಎಂಪಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಶ್ರೀಧರರೆಡ್ಡಿ ಅವರಿಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಾಥ್‌ ನೀಡಿದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕೆ.ಆರ್‌.ಶ್ರೀಧರರೆಡ್ಡಿ, “ಬಿಟಿಎಂ ಲೇಔಟ್‌ ಕಾಂಗ್ರೆಸ್‌ ಭದ್ರಕೋಟೆ ಎನ್ನುವುದೆಲ್ಲ ಸುಳ್ಳು. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ನಾನು 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೃಹತ್‌ ರೋಡ್‌ ಶೋ

ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮಾತನಾಡಿ, “ಬಿಟಿಎಂ ವಿಧಾನಸಭೆ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಶ್ರೀಧರರೆಡ್ಡಿ ಅವರ ಬೆಂಬಲಕ್ಕೆ ನಾನು ನಿಂತಿದೇನೆ. ಕ್ಷೇತ್ರದಲ್ಲಿ ಈ ಬಾರಿ ರಾಮಲಿಂಗಾರೆಡ್ಡಿ ಅವರ ಕುಟುಂಬ ರಾಜಕೀಯ ನಡೆಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ನವ ಭಾರತ ನಿರ್ಮಾಣದ ಕನಸು ಕಟ್ಟಿರುವ ಕಾರಣ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿಯು 135-150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ಹೇಳಿದರು.

ಇದನ್ನೂ ಓದಿ: Karnataka Election 2023: ಜೆಡಿಎಸ್‌ ಅಭ್ಯರ್ಥಿ ಪ್ರೊ. ನಾಗೇಶ ಎಚ್‌. ನಾಯ್ಕ ಕಾಗಾಲ ನಾಮಪತ್ರ ಸಲ್ಲಿಕೆ

ಬಿಟಿಎಂ ಲೇಔಟ್‌ನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ನೇರ ಪೈಪೋಟಿ ಇದೆ. ಹಾಲಿ ಶಾಸಕ, ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ರಾಮಲಿಂಗಾರೆಡ್ಡಿ ಅವರು ಮರು ಆಯ್ಕೆ ಬಯಸಿ ಕಣದಲ್ಲಿದ್ದಾರೆ. ಇವರಿಗೆ ಕೆ.ಆರ್‌.ಶ್ರೀಧರರೆಡ್ಡಿ ತೀವ್ರ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಇನ್ನು ಜೆಡಿಎಸ್‌ ವೆಂಕಟೇಶ್ ಅವರಿಗೆ ಬುಧವಾರ ಟಿಕೆಟ್‌ ಘೋಷಿಸಿದೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮಧ್ಯೆ ನೇರ ಹಣಾಹಣಿ ಇತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

RTE Admission 2024: ನಾಳೆಯಿಂದ ಆರ್‌ಟಿಇ ಅಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ

RTE Admission 2024 : ಜೂನ್‌ 8ರಿಂದ 2024-25ನೇ ಸಾಲಿಗೆ ಆರ್‌ಟಿಇ ಅಡಿ ಶಾಲೆಗಳಲ್ಲಿ ದಾಖಲಾತಿ ಪ್ರಾರಂಭವಾಗಲಿದೆ. ಈ ಸಂಬಂಧ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

VISTARANEWS.COM


on

By

RTE Admissions 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳು ಶುರುವಾಗಿದ್ದು, ದಾಖಲಾತಿ ಪ್ರಕ್ರಿಯೆಯು ಆರಂಭಗೊಂಡಿದೆ. ಈಗ ಆರ್‌ಟಿಇ ಅಡಿ ಶಾಲಾ ದಾಖಲಾತಿ (RTE Admission 2024) ಜೂನ್‌ 8ರಿಂದ ಪ್ರಾರಂಭವಾಗಲಿದ್ದು, ಜೂ.19ರಂದು ಕೊನೆ ದಿನವಾಗಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಆರ್‌ಟಿಇ ಪ್ರವೇಶಕ್ಕೆ ಅರ್ಜಿಗಳ ಸಲ್ಲಿಕೆಯಾಗಿದ್ದು, ಡೇಟಾ ಪರಿಶೀಲನೆ ಮಾಡಲಾಗಿದೆ. ಲಾಟರಿ ಪ್ರಕ್ರಿಯೆಯಲ್ಲಿ ಅರ್ಹರ ಪಟ್ಟಿ ಬಿಡುಗಡೆಯಾಗಿದ್ದು, ಜೂ.7ರಂದು ಆನ್‌ಲೈನ್‌ ಮೂಲಕ ಆರ್‌ಟಿಇ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ.

ಮೊದಲ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ಜೂನ್‌ 8ರಿಂದ 19ರವರೆಗೆ ದಾಖಲಾತಿ ಮಾಡಿಕೊಳ್ಳಬೇಕಿದೆ. ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. ಜೂನ್‌ 20ವರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಮಾಹಿತಿಯನ್ನು ಅಪ್‌ಲೋಡ್‌ ಮಾಡಬೇಕಿದೆ.

ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಜೂನ್‌ 25ರಂದು ಎರನಡೇ ಸುತ್ತಿನ ಸೀಟು ಹಂಚಿಕೆಯನ್ನು ನಡೆಸಲಾಗುತ್ತದೆ. ಎರಡನೇ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ಜೂನ್‌ 26 ರಿಂದ ಜುಲೈ 2ರ ವರೆಗೆ ದಾಖಲಾತಿ ಮಾಡಿಕೊಳ್ಳಬೇಕಿದೆ. ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ಆಯಾ ಶಾಲಾ ಮುಖ್ಯಸ್ಥರು ಜುಲೈ 3ರಂದು ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಬೇಕಿದೆ.

ಆರ್‌ಟಿಇ ಅಡಿ ಮೊದಲ ಸುತ್ತಿನ ಆನ್‌ಲೈನ್‌ ಲಾಟರಿ ಪ್ರಕ್ರಿಯೆಯನ್ನು ಈ ಮೊದಲು ಜೂ 5ಕ್ಕೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಲಾಟರಿ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಅದರಂತೆ ಜೂ. 7ರಂದು ಶುಕ್ರವಾರ ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯು ನಡೆಯಲಿದೆ.

RTE Admissions 2024

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ವಸತಿ ಶಾಲೆಗಳಿಗೂ ಆರ್‌ಟಿಇ ಅನ್ವಯ

ಕರ್ನಾಟಕ ಹೈಕೋರ್ಟ್ ಕಳೆದ ವಾರ ವಸತಿ ಶಾಲೆಗಳಿಗೂ ಆರ್‌ಟಿಐ ಕಾಯಿದೆಯ ಅಂಶಗಳು ಅನ್ವಯವಾಗುತ್ತವೆ ಎಂದು ಆದೇಶ ನೀಡಿತ್ತು. ಇದರಿಂದಾಗಿ ಇನ್ನು ಮುಂದೆ ವಸತಿ ಶಾಲೆಗಳು ಆರ್‌ಟಿಇ ಅನ್ವಯವಾಗುವುದಿಲ್ಲವೆಂದು ಹೇಳುವಂತಿಲ್ಲ. ಅಲ್ಲದೇ ಕೋರ್ಟ್ ತನ್ನ ಆದೇಶದಲ್ಲಿ ಆರ್‌ಟಿಇ ಕಾಯಿದೆ ನಿಯಮ 18ರ ಪ್ರಕಾರ ಮತ್ತು ಕರ್ನಾಟಕ ಆರ್‌ಟಿಇ ಕಾಯಿದೆ ನಿಯಮ 11ರಂತೆ, ನಮೂನೆ-1ರಂತೆ ಸರಕಾರ ಹೊರತುಪಡಿಸಿ ಇತರೆ ಎಲ್ಲಾ ಶಾಲೆಗಳು ಸಕ್ಷಮ ಪ್ರಾಧಿಕಾರದಲ್ಲಿಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲೇಬೇಕು ಎಂದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Election Results 2024: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 18 ಕ್ಷೇತ್ರಗಳಲ್ಲಿ ಲೀಡ್‌ ಕೊಡಿಸಲು ವಿಫಲರಾದ ಸಚಿವರ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ ಗೆದ್ದವರಿಗೆ ಅಭಿನಂದನೆ, ಸೋತ ಅಭ್ಯರ್ಥಿಗಳಿಗೆ ಧೈರ್ಯ ಹೇಳಿದ್ದಾರೆ.

VISTARANEWS.COM


on

Election results 2024
Koo

ಬೆಂಗಳೂರು: ರಾಜ್ಯದ ಲೋಕಸಭೆ ಚುನಾವಣೆಯಲ್ಲಿ (Karnataka election results 2024) ಗೆದ್ದ ಕಾಂಗ್ರೆಸ್‌ನ 9 ನೂತನ ಸಂಸದರಿಗೆ ಅಭಿನಂದನೆ ಹಾಗೂ ಸೋತ 19 ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನೆರವೇರಿತು. ಬಿಜೆಪಿಯ ಮಾನನಷ್ಟ ಪ್ರಕರಣದ ವಿಚಾರಣೆಗಾಗಿ ನಗರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಸೋತವರಿಗೆ ಧೈರ್ಯ ಹೇಳಿದ್ದಾರೆ. ಇದೇ ವೇಳೆ ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಎಲ್ಲಾ 28 ಕಾಂಗ್ರೆಸ್‌ ಅಭ್ಯರ್ಥಿಗಳ ಜತೆ ರಾಹುಲ್ ಗಾಂಧಿ ಸಭೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಉಪಸ್ಥಿತರಿದ್ದರು. ಈ ವೇಳೆ ಗೆದ್ದವರಿಗೆ ಅಭಿನಂದನೆ, ಸೋತವರಿಗೆ ಧೈರ್ಯ ಹೇಳಿದ ರಾಹುಲ್ ಗಾಂಧಿ ಅವರು, ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯಿರಿ. ಬೆಂಗಳೂರು, ದೆಹಲಿಯಲ್ಲೇ ಇರಬೇಡಿ. ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ. ನಾವು ನಿಮ್ಮ ಜತೆಗೆ ಇದ್ದೇವೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ. ಕಾರ್ಯಕರ್ತರ ವಿಶ್ವಾಸಗಳಿಸಿ, ಅದರಿಂದ ಮುಂದೆ ನಿಮಗೂ, ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ

ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ಸಭೆಯಲ್ಲಿ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ಬಗ್ಗೆ ರಣದೀಪ್‌ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಈ ವೇಳೆ 18 ಸಚಿವರು ಲೀಡ್ ಕೊಡಿಸುವಲ್ಲಿ ವಿಫಲ‌ ಎಂದು ವರದಿಯಲ್ಲಿ ತಿಳಿಸಲಾಗಿದೆ. ತಮ್ಮ ಜಿಲ್ಲೆಯಲ್ಲಿ ಅಭ್ಯರ್ಥಿ ಗೆಲ್ಲಿಸುವುದರಲ್ಲೂ ವಿಫಲರಾಗಿದ್ದಕ್ಕೆ ಸಚಿವರ ವಿರುದ್ಧ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Lok Sabha Election 2024: ನೂತನ ಸಂಸದರಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧೀಶರು, ಶೇ.46ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಕೇಸ್!

ಸ್ವ ಕ್ಷೇತ್ರದಲ್ಲೂ ಲೀಡ್ ಕೊಡಿಸುವಲ್ಲಿ ವಿಫಲವಾದ 18 ಸಚಿವರ ಬಗ್ಗೆ ರಾಹುಲ್ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದ್ದು, ಲೀಡ್ ಕೊಡಿಸುವಲ್ಲಿ ವಿಫಲವಾದ ಸಚಿವರ ಸ್ಥಾನಮಾನಕ್ಕೆ ಮುಂದೆ ಸಂಕಷ್ಟ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Continue Reading

ಕರ್ನಾಟಕ

Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

Prajwal Revanna Case: 2 ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಎಚ್‌.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ 2 ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 14ಕ್ಕೆ ಹೈಕೋರ್ಟ್ ಮೂಂದೂಡಿದೆ. ಹೈಕೋರ್ಟ್‌ನ ನ್ಯಾ. ಕೃಷ್ಣ ಧೀಕ್ಷಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದೇ ವೇಳೆ ರೇವಣ್ಣ ಜಾಮೀನು ರದ್ದು ಮಾಡಲು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ಮುಂದೂಡಿಕೆ.

ಈವರೆಗೆ 2 ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case), ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ರೇವಣ್ಣ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇತ್ತೀಚೆಗೆ ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಇದೀಗ ಎರಡು ಎಫ್‌ಐಆರ್‌ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದನ್ನೂ ಓದಿ | Nikhil Kumaraswamy: ಸಿನಿಮಾಗೆ ಗುಡ್‌ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ?

ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ‌ ಪ್ರತ್ಯಕ್ಷ; ಎಸ್ಐಟಿ ವಿಚಾರಣೆಗೆ ಹಾಜರು!

ಬೆಂಗಳೂರು: ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ವಿಚಾರಣೆಗಾಗಿ ಎಚ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ (Prajwal Revanna Case) ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿರುವುದು ಕಂಡುಬಂದಿದೆ.

ಸಿಐಡಿಯಲ್ಲಿರುವ ಎಸ್ಐಟಿ ಕಚೇರಿಗೆ ವಕೀಲರ ಜತೆ ಭವಾನಿ ರೇವಣ್ಣ‌ ಆಗಮಿಸಿದ್ದಾರೆ. ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್, ಇಂದು ಮಧ್ಯಾಹ್ನ 1 ಗಂಟೆಯೊಳಗೆ ಎಸ್‌ಐಟಿ (SIT) ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ಹೀಗಾಗಿ ಭವಾನಿ ರೇವಣ್ಣ ಪ್ರತ್ಯಕ್ಷವಾಗಿದ್ದಾರೆ.

ಒಂದು ವಾರ ಮಧ್ಯಂತರ ಜಾಮೀನು

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿತ್ತು. ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿತ್ತು.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಭವಾನಿ ಅವರಿಗೆ ಕೋರ್ಟ್‌ ಕೆಲವು ಸೂಚನೆಗಳನ್ನು ನೀಡಿದೆ. ಅದರಂತೆ ಅವರು ನಡೆದುಕೊಳ್ಳಬೇಕಿದೆ. ಅವುಗಳು ಹೀಗಿವೆ:
1) ಭವಾನಿ ಅವರು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಬೇಕು.
2) ವಿಚಾರಣೆಯ ನಂತರ ಐದು ಗಂಟೆಯ ಬಳಿಕ ಅವರನ್ನು ಇಟ್ಟುಕೊಳ್ಳಬಾರದು.
3) ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು.
4) ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗಿತ್ತು. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆದಿತ್ತು. ಅವರ ಮೊಬೈಲ್ ಲೊಕೇಶನ್‌ ಟವರ್ ಡಂಪ್, ಸಿಡಿಆರ್ ಪರಿಶೀಲನೆ ನಡೆಸಲಾಗಿತ್ತು. ಇದೀಗ ಮಧ್ಯಂತ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಅವರೇ ವಿಚಾರಣೆಗೆ ಆಗಮಿಸಿದ್ದಾರೆ.

Continue Reading

ಕರ್ನಾಟಕ

Pesticides in Spices: MDH, Everest ಬೆನ್ನಲ್ಲೇ ರಾಜ್ಯದ ಮಸಾಲೆ ಪದಾರ್ಥಗಳಿಗೂ ತಟ್ಟಿದ ಬ್ಯಾನ್‌ ಬಿಸಿ

Pesticides in Spices: ಸುದ್ದಿ ಮಾಧ್ಯಮಗಳಲ್ಲಿ ಮಸಾಲೆ ಪದಾರ್ಥಗಳ ಗುಣಮಟ್ಟವು ಕಳಪೆಯಾಗಿರುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಸಾಲೆ ಪುಡಿ ಮತ್ತು ಸಾಂಬಾರ್ ಪದಾರ್ಥಗಳನ್ನು ಮೈಕ್ರೋ ಬಯೋಲಾಜಿಕಲ್ ಪೆರಿಮಿಟರ್ಸ್ ಅಂಶಗಳನ್ನು ಪರೀಕ್ಷಿಸಲು ಮಸಾಲೆ ಪುಡಿ ಮತ್ತು ಸಾಂಬಾರ್ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಮೇ ಮೊದಲ ಮತ್ತು ಎರಡನೇ ವಾರದಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ಅವುಗಳಲ್ಲಿ 23 ಮಾದರಿಗಳಲ್ಲಿ ರೋಗಕಾರಕ ಸೂಕ್ಷ್ಮಾಣು ಜೀವಿಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಸುರಕ್ಷಿತ ಎಂದು ವರದಿಯಾಗಿದೆ.

VISTARANEWS.COM


on

Pesticides in Spices
Koo

ನವದೆಹಲಿ: ಇತ್ತೀಚೆಗಷ್ಟೇ ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಲಾಗಿತ್ತು. ಇದೀಗ ಕರ್ನಾಟಕ ಸರ್ಕಾರ(Karnataka Government) ಕೂಡ ಗುಣಮಟ್ಟವಲ್ಲದ ಮಸಾಲೆ ಪದಾರ್ಥ(Pesticides in Spices) ಮತ್ತು ‘ಚಹಾಪುಡಿ’ಗಳ ಪಟ್ಟಿ ಬಿಡುಗಡೆ ಮಾಡಿದೆ.

ಸುದ್ದಿ ಮಾಧ್ಯಮಗಳಲ್ಲಿ ಮಸಾಲೆ ಪದಾರ್ಥಗಳ ಗುಣಮಟ್ಟವು ಕಳಪೆಯಾಗಿರುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಸಾಲೆ ಪುಡಿ ಮತ್ತು ಸಾಂಬಾರ್ ಪದಾರ್ಥಗಳನ್ನು ಮೈಕ್ರೋ ಬಯೋಲಾಜಿಕಲ್ ಪೆರಿಮಿಟರ್ಸ್ ಅಂಶಗಳನ್ನು ಪರೀಕ್ಷಿಸಲು ಮಸಾಲೆ ಪುಡಿ ಮತ್ತು ಸಾಂಬಾರ್ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಮೇ ಮೊದಲ ಮತ್ತು ಎರಡನೇ ವಾರದಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ಅವುಗಳಲ್ಲಿ 23 ಮಾದರಿಗಳಲ್ಲಿ ರೋಗಕಾರಕ ಸೂಕ್ಷ್ಮಾಣು ಜೀವಿಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಸುರಕ್ಷಿತ ಎಂದು ವರದಿಯಾಗಿದೆ.

ತುಮಕೂರಿನ ಮೆಣಸಿನಕಾಯಿ ಪುಡಿ, ಮೈಸೂರು ಗ್ರಾಮಾಂತರದ ಕೌಶಿಕ್ ಪುಡ್ ಬ್ರ್ಯಾಂಡ್‍ನ ಮಿಕ್ಸ್ಡ್ ಮಸಾಲ, ಕೊಪ್ಪಳದ ಶ್ರೀ ಮಂಜುನಾಥ ಬ್ರ್ಯಾಂಡ್‍ನ ಮೆಣಿಸಿನಕಾಯ ಮತ್ತು ಕ್ಯಾಪ್ಸಿಕಾಂ (ಲಾಲ್ ಮಿರ್ಚಿ), ಮಂಡ್ಯದ ಸಾಂಬರ್ ಪುಡಿ, ದಾವಣಗೆರೆಯ ಅಪೇಕ್ಷಾ ಬ್ರ್ಯಾಂಡ್‍ನ ಸಾಂಬಾರು ಪುಡಿ, ಚಿಕ್ಕಬಳ್ಳಾಪುರದ ಎ.ಆರ್.ಕೆ ಬ್ರ್ಯಾಂಡ್‍ನ ಮೆಣಿಸಿನಕಾಯಿ ಪುಡಿ, ದಕ್ಷಿಣ ಕನ್ನಡದ ಅರುಣ್ ಮಸಾಲ ಬ್ರ್ಯಾಂಡ್‍ನ ಗರಂ ಮಸಾಲ, ಚಿಕ್ಕಮಗಳೂರಿನ ಎವರೆಸ್ಟ್ ಬ್ರ್ಯಾಂಡ್‍ನ ಮಿಕ್ಸ್ಡ್ ಮಸಾಲ, ಚಿಕ್ಕಬಳ್ಳಾಪುರದ ಮೆಣಸಿನಕಾಯಿ ಪುಡಿ, ಕೊಡುಗಿನ ಈಸ್ಟ್ರನ್ ಬ್ರ್ಯಾಂಡ್‍ನ ಧನಿಯಾ ಪುಡಿ, ಲೋಲಾರದ ಸಾಂಬರುಪುಡಿ ಮತ್ತು ಮೆಣಸಿನಕಾಯಿ ಪುಡಿ, ರಾಯಚೂರಿನ ಜಿ.ಸ್ಪೆಷಲ್ (ಸ್ಥಳೀಯ) ಬ್ರ್ಯಾಂಡ್‍ನ ಜಿ.ಟಿ. ಸ್ಪೆಷಲ್ ಮೆಣಸಿನಕಾಯಿಪುಡಿ, ಗದಗಿನ ಎಂ.ಜಿ.ಆರ್ ಬ್ರ್ಯಾಂಡ್‍ನ ಮೆಣಸಿನಕಾಯಿ ಪುಡಿ, ಚಿತ್ರದುರ್ಗದ ಮಾರುತಿ ಬ್ರ್ಯಾಂಡ್‍ನ ಮೆಣಸಿನಕಾಯಿ ಪುಡಿ, ಯಾದಗಿರಿಯ ಚಾರ್‍ಮಿನಾರ್ ಸ್ಪೀಸಿಸ್ ಬ್ರ್ಯಾಂಡ್‍ನ ಮೆಣಸಿನಕಾಯಿ ಪುಡಿ, ಹಾವೇರಿಯ ಮೆಣಸಿನಕಯಿ ಪುಡಿ, ಕಲಬುರಗಿಯ ಎಂಟಿಆರ್ ಚಿಲ್ಲಿಪೌಡರ್ ಬ್ರ್ಯಾಂಡ್‍ನ ಮೆಣಸಿನಕಾಯಿ ಪುಡಿ, ಚೆನ್ನರಾಯಪಟ್ಟಣದ ತೇಜು ಸಾಂಬರ್ ಪೌಡರ್ ಬ್ರ್ಯಾಂಡ್‍ನ ಸಾಂಬಾರು ಪುಡಿ, ಶಿವಮೊಗ್ಗೆ ಎವರೆಸ್ಡ್ ಬ್ರ್ಯಾಂಡ್‍ನ ತೀಕಾಲಾಲ್ ಹಾಟ್ ಅಂಡ್ ರೆಡ್ ಮೆಣಸಿನಕಾಯಿ ಪುಡಿ, ಬಿ.ಬಿ.ಎಂ.ಪಿ, ಪೂರ್ವದ ಎ.ವಿವಿಎ ಬ್ರ್ಯಾಂಡ್‍ನ ಬಿಸಿಬೇಳೆ ಬಾತ್ ಪಛಡರ್, ಸಾಂಬಾರು ಪುಡಿ, ವಾಂಗಿಬಾತ್ ಪುಡಿಗಳು ಅಸುರಕ್ಷಿತ ಎಂದು ವರದಿಯಾಗಿರುವ ಸಮಬಂಧ ಆಹಾರ ಮಾದರಿಗಳ ತಯಾರಕರುಗಳ ವಿರುದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮಗಳು 2011ರನ್ವಯ ಕನೂನು ಕ್ರಮವಹಿಸಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಹಾಪುಡಿಗಳಲ್ಲೂ ಫೆಸ್ಟಿಸೈಡ್‌ ಪತ್ತೆ

ಇದಲ್ಲದೇ ಚಹಾಪುಡಿಗಳಲ್ಲಿನ ಪೆಸ್ಟಿಸೈಡ್ ರೆಸಿಡ್ಯೂಸ್ ಅಂಶಗಳಿಗೆ ಸಂಬಂಧಿಸಿದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಚಹಾಪುಡಿಗಳ ಮಾದರಿಗಳನ್ನು ಸಂಗ್ರಹಿಸಿ ಮೇ ಮೊದಲ ಮತ್ತು ಎರಡನೇ ವಾರದಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ಅವುಗಳ 45 ಮಾದರಿಗಳಲ್ಲಿ ಕೆಲವು ಪೆಸ್ಟಿಸೈಡ್ ರೆಸಿಡ್ಯೂಸ್ ಅಂಶಗಳು ನಿಗಧಿತ ಮಟ್ಟಕ್ಕಿಂತ ಹೆಚ್ಚಿನ ಮಟ್ಟದಲ್ಲಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಸುರಕ್ಷಿತ ಎಂದು ವರದಿ ನೀಡಲಾಗಿದೆ.

ಯಾವೆಲ್ಲಾ ಕಾಫಿ ಪುಡಿ ಬ್ರ್ಯಾಂಟ್‌ ಪಟ್ಟಿಯಲ್ಲಿವೆ?

ಧಾರವಾಡದ ಅಮೃತ್ ಟೀ ಪೌಡರ್ ಬ್ಯಾಚ್ ನಂ 3, ಅಮೃತ್ ಪ್ರೀಮಿಯಂ ಟೀ ಪೌಡರ್ ಬ್ಯಾಚ್ ನಂ. 2, ಅಮೃತ್ ಗೋಲ್ಡ್ ಟೀ ಪೌಡರ್ ಬ್ಯಾಚ್ ನಂ.2, ಬಾಗಲಕೋಟೆಯ ಸಲಿಮಾರ್ – ಗೋಲ್ಡ್ ಪ್ರೀಮಿಯಂ ಅಸ್ಸಾಂ ಟೀ ಪೌಡರ್ ಬ್ಯಾಚ್ ನಂ. ಡಿಸಿ1476, ವಾಗ್ ಬಕ್ರಿ ಲೀಪ್ ಟೀ ಬ್ಯಾಚ್ ನಂ.ಡಿಕೆಕೆಸಿಎಲ್‍ಜಿಎಎಸ್‍ಇಸಿಬಿ5127, ಅಸ್ಸಾಂ ಗೋಲ್ಡ್ ಕಪ್ ಸಿಟಿಸಿ ಟೀ ಬ್ಯಾಚ್ ನಂ.ಎಎಸ್‍ಎಲ್ 226 ಟೀಪೌಡರ್ (ಅನ್‍ಬ್ರಾಂಡೆಡ್) ಬೆಳಗಾವಿಯ ಲೂಸ್ ಟೀ ಪೌಡರ್ ಅನ್‍ಬ್ರಾಂಡೆಡ್, ಬಳ್ಳಾರಿಯ ಬ್ರೂಕ್ ಬ್ರಾಂಡ್ ಲೆಡ್ ಲೇಬಲ್ ಟೀ ಬ್ಯಾಚ್ ನಂ.ಎಫ್11ಸಿಐ, ಟೀ ಪೌಡರ್ – ಮಿಲಿ ಪ್ರೀಮಿಯಂ ಬ್ಯಾಚ್ ನಂ ಡಿಡಿ.ಸಿಎಚ್7 ಎಫ್‍ಬಿಎಸ್‍ಇಸಿಬಿ1173, ಮಂಜುನಾಥ ಸ್ಪೆಷಲ್ ರಾಯಲ್ ಟೀ ಬ್ಯಾಚ್ ನಂ.ಎಂಸಿ05, ಬೀದರ್‍ನ ಟೀ ಪೌಡರ್ (ಅನ್‍ಬ್ರಾಂಡೆಡ್) ಲೂಸ್ ಟೀ ಪೌಡರ್ (ಅನ್‍ಬ್ರಾಂಡೆಡ್), ಹಾವೇರಿಯ ಲೂಸ್ ಟೀ ಪೌಡರ್ ಬ್ಯಾಚ್ ಎ431/1ಎ525/1, ಟೀ ಪೌಡರ್ ಅನ್‍ಬ್ರಾಂಡೆಡ್ ಬಾಗಲಕೋಟೆಯ ಲೂಸ್ ಟೀ ಪೌಡರ್ ಅನ್‍ಬ್ರಾಂಡೆಡ್, ಗದಗ್‍ನ ಟೀ ಪೌಡರ್ ಅನ್‍ಬ್ರಾಂಡೆಡ್ ಬ್ಯಾಚ್ ನ. 06ಪಿಪಿ44-2, ಲೂಸ್ ಟೀ ಪೌಡರ್ ಅನ್‍ಬ್ರಾಂಡೆಡ್, ರಾಯಚೂರಿನ ಮೋದಿ ಗೋಲ್ಡ್ ಟೀ ಬ್ಯಾಚ್ ನಂ.4ಎಚ್40ಜಿ, ಟೀ ಪೌಡರ್ (ರೂಬಿ) ಬ್ಯಾಚ್ ನಂ. ಎಚ್‍ಎಫ್21ಎ6, ಟೀ ಪೌಡರ್-ಮಹಾವೀರ್ ಸಿಟಿಸಿ ಡಸ್ಟ್ ಟೀ ಬ್ಯಾಚ್ ನಂ ಆರ್‍ಕೆ25, ನೂಟಾನ್ಸ್ ಸೂಪರ್ ಟೇಸ್ಟಿ ಸ್ಪೆಷಲ್ ಗಾರ್ಡನ್ ಪ್ರೆಶ್ ಟೀ ಬ್ಯಾಚ್ ನಂ.ಎಸ್‍ಟಿ07, ನೂಟಾನ್ಸ್ ಸೂಪರ್ ಟೇಸ್ಟಿ ಟೀ ಬ್ಯಾಚ್ ನಂ.ಇಎಲ್09, ಟೀ ಪೌಡರ್ ಅನ್‍ಬ್ರಾಂಡೆಡ್, ವಿಜಯಪುರದ ಟಿಇಝಡ್ ಎಲಾಚೀ ಚಾಯ್ ಬ್ಯಾಚ್ ನಂ.ಎ324/4, ಟೀ ಪೌಡರ್ (ರೆಡ್ ಲೇಬಲ್) ಬ್ಯಾಚ್ ನಂ. ಜೆ10ಬಿ2, ರೆಡ್ ಲೇಬಲ್ ಟೀ ಪೌಡರ್ ಬ್ಯಾಚ್ ನಂ ಜೆ10ಬ6, ಟೀ-ಪೌಡರ್ ಜಿಎಸ್ ಟೀ, ಎಚ್‍ಡಿಎಂಸಿ ಹುಬ್ಬಳ್ಳಿಯ ಟೀ ಪೌಡರ್ (ಲೂಸ್), ರೆಡ್ ಲೇಬಲ್ ಟೀ ಪೌಡರ್ ಬ್ಯಾಚ್ ನಂ. ಎಫ್12ಎ2, ಕೊಪ್ಪಳದ ಶಾಲಿಮರ್ ಗೋಲ್ಡ್ ಟೀ ಬ್ಯಾಚ್ ನಂ ಡಿಸಿ1022, ಶಿವಗಂಗ ಗೋಲ್ಡ್ ಟೀ ಬ್ಯಾಚ್ ನಂ 00, ಟೀ (ಅನ್‍ಬ್ರಾಂಡೆಡ್), ಯಾದಗಿರಿಯ ಟೀ ಪೌಡರ್ ಅನ್‍ಬ್ರಾಂಡೆಡ್, ವಿಜಯನಗರದ ಟೀ ಪೌಡರ್ ಅನ್‍ಬ್ರಾಂಡೆಡ್, ಟೀ ಪೌಡರ್ ವಾಗ್ ಬಕ್ರಿ ಬ್ಯಾಚ್ ನಂ.ಡಿಡಿಎಚ್‍ಎಸ್3ಜಿಎಎಸ್‍ಇಸಿಬಿ3032 ಅಸುರಕ್ಷಿತ ಎಂದು ವರದಿ ನೀಡಲಾಗಿದೆ.

ಇದನ್ನೂ ಓದಿ:Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

Continue Reading
Advertisement
Niveditha Gowda chandan divorce whats the reason
ಕಿರುತೆರೆ6 mins ago

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Narendra Modi
ಪ್ರಮುಖ ಸುದ್ದಿ15 mins ago

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

RTE Admissions 2024
ಶಿಕ್ಷಣ17 mins ago

RTE Admission 2024: ನಾಳೆಯಿಂದ ಆರ್‌ಟಿಇ ಅಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ

NDA Meeting
ದೇಶ19 mins ago

NDA Meeting: ಯೋಗಿಯ ಬೆನ್ನು ತಟ್ಟಿದ ಮೋದಿ; ವಿರೋಧಿಗಳಿಗೆ ದೊಡ್ಡ ಸಂದೇಶ ರವಾನಿಸಿದ ನಾಯಕರು

Job Alert
ಉದ್ಯೋಗ22 mins ago

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Haris Rauf
ಪ್ರಮುಖ ಸುದ್ದಿ22 mins ago

T20 World Cup : ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬಾಲ್​ ವಿರೂಪಗೊಳಿಸಿದ ಪಾಕ್​ ಬೌಲರ್​; ಆರೋಪ

Niveditha Gowda chandan shetty divorce
ಸ್ಯಾಂಡಲ್ ವುಡ್35 mins ago

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Election results 2024
ಪ್ರಮುಖ ಸುದ್ದಿ42 mins ago

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Narendra Modi
ದೇಶ57 mins ago

Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Kangana Ranaut
ದೇಶ1 hour ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌