Site icon Vistara News

Karnataka Election 2023: ಮೋದಿ ನಾಲಾಯಕ್‌ ಎಂದು ಹೇಳಿದ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ದೂರು; ರಾಜ್ಯ ವಿಧಾನಸಭೆ ಚುನಾವಣೆ ಕಣದ ಪ್ರಮುಖ ಸುದ್ದಿಗಳು

Karnataka Election 2023 Live updates Check details In Kannada
Ramaswamy Hulakodu

ತುರುವೇಕೆರೆಯಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತುರುವೇಕೆರೆಯಲ್ಲಿ ಬರಿರಂಗ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ಬಿಜೆಪಿ ಯವರಿಗೆ 40 ನಂಬರ್ ಅಂದ್ರೆ ತುಂಬಾ ಇಷ್ಟ, ಅದ್ಕೆ ನೀವೆಲ್ಲ ಸೇರಿ ಅವ್ರಿಗೆ ಚುನಾವಣೆಯಲ್ಲಿ 40 ಸೀಟ್ ಕೊಡಿ ಎಂದಿರು ರಾಹುಲ್‌, ಕಾಂಗ್ರೆಸ್ ಪಕ್ಷಕ್ಕೆ 150 ಸೀಟ್ ಕೊಡಿ, ಇಲ್ಲಾಂದ್ರೆ ಅವ್ರು ನಿಮ್ಮಿಂದ ಕದ್ದಿರೋ 40 ಪರ್ಸೆಂಟ್‌ ದುಡ್ಡಿಂದಲೇ ಶಾಸಕರನ್ನು ಮತ್ತೆ ಖರೀದಿ ಮಾಡ್ತಾರೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ 140-150 ಸೀಟ್ ಗಳನ್ನ ಕೊಡಿ ಎಂದು ಮನವಿ ಮಾಡಿದ್ದಾರೆ.

Ramaswamy Hulakodu

ಸಿಎಂ ಉತ್ತರ ಕೊಡ್ತಾರೆ!

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ʻಅಟಲ್ ಕ್ಯಾಂಟಿನ್‌ ಈಗಿರುವ ಇಂದಿರಾ ಕ್ಯಾಂಟಿನ್‌ ಗಿಂತ ಹೇಗೆ ಭಿನ್ನವಾಗಿರಲಿದೆʼ ಎಂಬ ಪ್ರಶ್ನೆಗೆ ಬಿಜೆಪಿ ಅಧ್ಯಕ್ಷ ನಡ್ಡಾ ʻ ನನಗೆ ಗೊತ್ತಿಲ್ಲ, ಸಿಎಂ ಅವರು ಇದಕ್ಕೆ ಉತ್ತರ ನೀಡುತ್ತಾರೆ. ಆದ್ರೆ ಹಸಿವಿನಲ್ಲಿರುವವರಿಗೆ ಆಹಾರ ನೀಡಲಾಗುವುದುʼʼ ಎಂದು ಉತ್ತರ ನೀಡಿದ್ದಾರೆ.

Ramaswamy Hulakodu

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು

15. ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್‌, ಬನವಾಸಿ ಸರ್ಕ್ಯೂಟ್‌, ಪರಶುರಾಮ ಸರ್ಕ್ಯೂಟ್‌ ಮತ್ತು ಕಾವೇರಿ ಸರ್ಕ್ಯೂಟ್‌, ಗಾಣಗಾಪುರ ಕಾರಿಡಾರ್‌ ಅಭಿವೃದ್ಧಿ. ಇದಕ್ಕಾಗಿ 1500ಕೋಟಿ ರೂ. ವಿನಿಯೋಗ.

16. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್‌, ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ ಉತ್ಪಾದನಾ ಆಧರಿತ ಪ್ರೋತ್ಸಾಹ ಯೋಜನೆಯ ವ್ಯಾಪ್ತಿಯ ವಿಸ್ತರಣೆ.

Ramaswamy Hulakodu

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು

11. ಮಿಷನ್‌ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳನ್ನು ಸುಧಾರಿಸಲಾಗುತ್ತದೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಲ್ಯಾಬೊರೇಟರಿ ಸೌಕರ್ಯ ಹೊಂದಿರುವ ನಮ್ಮ ಕ್ಲಿನಿಕ್‌ ಸ್ಥಾಪನೆ. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸನೆಯ ಸೌಲಭ್ಯ ಕಲ್ಪಿಸಲಾಗುತ್ತದೆ.

12. ರಾಜಧಾನಿ ಬೆಂಗಳೂರನ್ನು ಅಭವೃದ್ಧಿಪಡಿಸಿ, ಅದನ್ನು ʻರಾಜ್ಯ ರಾಜಧಾನಿ ಪ್ರದೇಶʼ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ-ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲಾಗುತ್ತದೆ. ಸುಲಲಿತ ಜೀವನಕ್ಕೆ ಅನುವು ಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್‌ ಇನೋವೇಷನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲಾಗುತ್ತದೆ. ಇದಕ್ಕೆ ಪೂರಕ ಪರಿಸರ ವ್ಯವಸ್ಥೆ ಕಲ್ಪಿಸಲಾಗುತ್ತದೆ.

13. ಕರ್ನಾಟಕವನ್ನು ಎಲೆಕ್ಟ್ರಿಕ್‌ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲಾಗುತ್ತದೆ. ಪೂರಕವಾಗಿ, ಚಾರ್ಜಿಂಗ್‌ ಸ್ಟೇಷನ್‌ಗಳ ಸ್ಥಾಪನೆ, 1000 ಸ್ಟಾರ್ಟ್‌ ಅಪ್‌ಗಳಿಗೆ ಪ್ರೋತ್ಸಾಹ. ಹಾಲಿ ಇರುವ ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟ್ರಿಕಲ್‌ ಬಸ್‌ಗಳಾಗಿ ಪರಿವರ್ತನೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ʻಇವಿ ಸಿಟಿʼ ಅಭಿವೃದ್ಧಿ.

14. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳ ಸ್ಥಾಪನೆ. ಇದಕ್ಕಾಗಿ 30 ಸಾವಿರಿ ಕೋಟಿ ಮೊತ್ತದ ಕೆ-ಅಗ್ರಿಫಂಡ್‌ ಸ್ಥಾಪನೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ. ಕೃಷಿ ಯಾಂತ್ರೀಕರಣಕ್ಕೆ ಒತ್ತು. ಜತೆಗೆ ಐದು ಹೋಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‌ಗಳ ಮತ್ತು ಮೂರು ಹೊಸ ಆಹಾರ ಸಂಸ್ಕರಣಾ ಪಾರ್ಕ್‌ಗಳ ಸ್ಥಾಪನೆ.

Ramaswamy Hulakodu

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು;

7. ಬೆಂಗಳೂರಿ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲಿಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರಲಾಗುತ್ತದೆ. ಕುಂದುಕೊರತೆಗಳ ಪರಿಹಾರಕ್ಕೆ ಆನ್‌ಲೈನ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.

8. ವಿಶ್ವೇಶ್ವರಯ್ಯ ವಿದ್ಯಾಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

9. ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ ಎಸ್‌ಎಂಇಗಳು ಮತ್ತು ಐಟಿಐಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡಲಾಗುತ್ತದೆ.

10. ಐಎಎಸ್‌/ಕೆಎಎಸ್‌/ಬ್ಯಾಂಕಿಂಗ್‌/ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾಂಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸಲಾಗುತ್ತದೆ.

Exit mobile version