Site icon Vistara News

Karnataka election 2023: ಅಫಜಲಪುರದಲ್ಲಿ ಈ ಬಾರಿ ಕಮಲ ಅರಳುವುದು ಗ್ಯಾರಂಟಿ: ಮಾಲಿಕಯ್ಯ ಗುತ್ತೇದಾರ್

Malikayya Guttedar showing confident about wiining

Malikayya Guttedar

ಕಲಬುರಗಿ: ಪ್ರಸಕ್ತ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ (Karnataka election 2023) ಅಫಜಲಪುರ ಕ್ಷೇತ್ರದಲ್ಲಿ ಕಮಲ ಅರಳುವುದು ಗ್ಯಾರಂಟಿ ಎಂದು ಮಾಜಿ ಸಚಿವ(Malikayya Guttedar), ಬಿಜೆಪಿ ಅಭ್ಯರ್ಥಿ ಮಾಲಿಕಯ್ಯ ಗುತ್ತೇದಾರ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಅಫಜಲಪುರ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೊಷ್ಠಿಯಲ್ಲಿ ಅವರು (Malikayya Guttedar) ಮಾತನಾಡಿ, ಕ್ಷೇತ್ರದಲ್ಲಿ ನಾನು ಆರು ಬಾರಿ ಶಾಸಕರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ, ಸೊನ್ನ ಭೀಮಾ ಏತ ನೀರಾವರಿ ಯೋಜನೆಯಿಂದ ಅಂತರ್ಜಲಮಟ್ಟವೂ ಹೆಚ್ಚಾಗಿದೆ. ಇದರಿಂದಾಗಿ ರೈತರು ಕಬ್ಬು ಬೆಳೆಯುವುದರಿಂದ ಆದಾಯ ಸಹ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: Drowned in canal : ಮಂಡ್ಯದ ವಿ ಸಿ ನಾಲೆಯಲ್ಲಿ ಮುಳುಗಿ ಐವರು ಸಾವು, ನೀರಿಗೆ ಬಿದ್ದ ಬಾಲಕನ ರಕ್ಷಿಸಲು ಹೋದಾಗ ದುರಂತ

ಭೀಮಾ ಏತ ನೀರಾವರಿ ಹಾಗೂ ಅಮರ್ಜಾ ನದಿಗೆ ಮತ್ತು ಬೋರಿ ಹಳ್ಳಗಳಿಗೆ ಬ್ರಿಜ್ ಕಂ ಬ್ಯಾರೆಜ್ ನಿರ್ಮಿಸಿದ್ದರಿಂದ ಈ ಭಾಗದಲ್ಲಿ ಆರ್ಥಿಕ ಶಕ್ತಿ ಬಂದಿದೆ ಎಂದು ಅವರು ತಿಳಿಸಿದರು.

150 ಸ್ಥಾನಗಳಲ್ಲಿ ಗೆಲುವು

ಪ್ರಸಕ್ತ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಪಕ್ಷವು 150 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದು ಹೇಳಿದರು.

Exit mobile version