Karnataka Election 2023: ಸಿದ್ದರಾಮನ ಹುಂಡಿ ಹಲ್ಲೆ ಹತಾಶ ಯತ್ನ; ಸಿದ್ದರಾಮಯ್ಯಗೆ ಸೋಮಣ್ಣ ಎಚ್ಚರಿಕೆ - Vistara News

ಕರ್ನಾಟಕ

Karnataka Election 2023: ಸಿದ್ದರಾಮನ ಹುಂಡಿ ಹಲ್ಲೆ ಹತಾಶ ಯತ್ನ; ಸಿದ್ದರಾಮಯ್ಯಗೆ ಸೋಮಣ್ಣ ಎಚ್ಚರಿಕೆ

ಹತಾಶ ಮನೋಭಾವದಿಂದ ಹೀಗೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಅಣ್ಣನ ಮಕ್ಕಳೇ ಇದರಲ್ಲಿ ಸೇರಿಕೊಂಡಿದ್ದಾರೆ. ಪೊಲೀಸರು ಕೂಡ ಇದರಲ್ಲಿ ಕುತಂತ್ರ ಮಾಡಿದ್ದಾರೆ ಎಂದು ವಿ. ಸೋಮಣ್ಣ ಆರೋಪಿಸಿದ್ದಾರೆ.

VISTARANEWS.COM


on

somanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ದ್ವೇಷದ ರಾಜಕಾರಣ ನಿಮಗೆ ಶೋಭೆಯಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಪ್ರಚಾರದ ವೇಳೆ ನಡೆದ ಗಲಾಟೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ಭೇಟಿ ನೀಡಿ ಸೋಮಣ್ಣ ಆರೋಗ್ಯ ವಿಚಾರಿಸಿದರು. ಸಂಸದ ಪ್ರತಾಪ್ ಸಿಂಹ ಈ ಸಂದರ್ಭದಲ್ಲಿ ಜತೆಗಿದ್ದರು. ನಿನ್ನೆ ನಡೆದ ಚಕಮಕಿಯಲ್ಲಿ ಬಿಜೆಪಿ‌ ಕಾರ್ಯಕರ್ತ ನಾಗೇಶ್ ಭುಜ, ಕಾಲಿಗೆ ಗಾಯವಾಗಿತ್ತು. ರಾತ್ರಿ ಚಿಕಿತ್ಸೆ ನಂತರ ತುರ್ತು ಚಿಕಿತ್ಸಾ ಘಟಕದಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಬಳಿಕ ಮಾತನಾಡಿದ ಸೋಮಣ್ಣ, ಇದು ನೋವಿನ ಸಂಗತಿ. ನಮ್ಮ‌ ಪ್ರಮುಖ ಕಾರ್ಯಕರ್ತನಿಗೆ ಮೂಳೆ ಡಿಸ್‌ಲೊಕೇಟ್ ಆಗಿದೆ. ಅನಸ್ತೇಶಿಯ ಕೊಟ್ಟು ಸರಿ ಮಾಡಿದ್ದಾರೆ. ಆತ ರೆಸ್ಟ್ ಮಾಡಬೇಕು. ಮುಂದೆ ಸರಿಯಾಗಲಿಲ್ಲ ಅಂದರೆ ಆಪರೇಷನ್ ಮಾಡಬೇಕಾಗುತ್ತದೆ. ಹತಾಶೆ ಮನೋಭಾವದಲ್ಲಿ ಈ ರೀತಿ ಮಾಡಿದ್ದಾರೆ. ವರುಣ ಕ್ಷೇತ್ರದಲ್ಲಿ ಒಂದು ಗುಂಪು ರೆಡಿಯಾಗಿದೆ. ನಾನು ಎಲ್ಲಿ ಪ್ರಚಾರಕ್ಕೆ ಹೋಗುತ್ತೇನೋ ಅಲ್ಲಿ ಬಂದು ಅಡ್ಡಿಪಡಿಸುತ್ತಾರೆ. ರಸ್ತೆಗೆ ನೊಗ ಅಡ್ಡ ಇಟ್ಟು ಪ್ರಚಾರಕ್ಕೆ ಅಡ್ಡಿ ಮಾಡಿದ್ದರು. ಹೀಗಾದರೆ ಈ ರಾಜ್ಯದ ವ್ಯವಸ್ಥೆಯನ್ನು ಹೇಗೆ ಕಾಪಾಡಬೇಕು ಎಂದು ಪ್ರಶ್ನಿಸಿದರು.

ನಾನು ನನ್ನ ಕ್ಷೇತ್ರದಲ್ಲಿ ಜನರಿಗೆ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಅದನ್ನು ಗೂಗಲ್ ಹಾಕಿಕೊಂಡು ನೋಡಿ. ದ್ವೇಷದ ರಾಜಕಾರಣ ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಬೇಲಿಯೇ ಎದ್ದು ಹೊಲ ಮೇಯಬಾರದು. ಇಂತಹ ನೋವು ನಿಮ್ಮ ಸ್ವಂತ ಅಣ್ಣ ತಮ್ಮಂದಿರ ಮಕ್ಕಳಿಗೆ ಆಗಿದ್ದರೆ ನನ್ನನ್ನು ಹೇಗೆ ನೋಡುತಿದ್ದಿರಿ? ಇದು ಮುಂದುವರಿದರೆ ನಾನು ಸಹಿಸೋದಿಲ್ಲ. ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ಇದ್ದಾಗ ಅವರ ಚುನಾವಣೆ ನೋಡಿದ್ದೇನೆ. ದೇವಲಾಪುರದಲ್ಲಿ ಒದೆ ತಿಂದಿದ್ದೇನೆ. ನನ್ನ ಸಮಾಜವನ್ನೇ ಎದುರು ಹಾಕಿಕೊಂಡು ಕೆಲಸ ಮಾಡಿದ್ದೆ. ಅಂದು ನೀವು ನನ್ನಂತೆ ಮಂತ್ರಿ ಆಗಿದ್ದಿರಿ. ಇಂದು ನೀವು ಮಾಜಿ ಮುಖ್ಯಮಂತ್ರಿ ಆಗಿದ್ದೀರಿ. ನಿಮಗೆ ಇದೆಲ್ಲ ಶೋಭೆ ತರುವುದಿಲ್ಲ ಎಂದು ಸೋಮಣ್ಣ ಎಚ್ಚರಿಸಿದರು.

ಹತಾಶ ಮನೋಭಾವದಿಂದ ಹೀಗೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಅಣ್ಣನ ಮಕ್ಕಳೇ ಇದರಲ್ಲಿ ಸೇರಿಕೊಂಡಿದ್ದಾರೆ. ಪೊಲೀಸರು ಕೂಡ ಇದರಲ್ಲಿ ಕುತಂತ್ರ ಮಾಡಿದ್ದಾರೆ. ಇದು ಸೂಕ್ಷ್ಮ ಕ್ಷೇತ್ರವಾಗಿದೆ, ಗಮನಿಸಬೇಕು ಎಂದು ಚುನಾವಣೆ ಆಯೋಗಕ್ಕೆ ದೂರು ಕೊಡುತ್ತೇನೆ. ನನಗೆ ಯಾವುದೇ ರಕ್ಷಣೆ ಬೇಡ, ವರುಣ ಕ್ಷೇತ್ರದ ಜನರೇ ರಕ್ಷಣೆ ಎಂದು ಸೋಮಣ್ಣ ನುಡಿದಿದ್ದಾರೆ.

ಇದನ್ನೂ ಓದಿ: Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಕಣದ ಕ್ಷಣಕ್ಷಣದ ಸುದ್ದಿಗಳು: ಇಂದು ಬಿಜೆಪಿಯಿಂದ ಅಮಿತ್‌ ಶಾ, ಕಾಂಗ್ರೆಸ್‌ನಿಂದ ರಾಹುಲ್‌ ಗಾಂಧಿ ಪ್ರಚಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Petrol Diesel Price Hike: ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು.

VISTARANEWS.COM


on

petrol diesel price hike bjp protest
Koo

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಢೋಂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ: ಆರ್.‌ ಅಶೋಕ್

“ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ.‌ ಅಂದು ಒಂದು ರೂಪಾಯಿ ಪೆಟ್ರೋಲ್ ಬೆಲೆ ಏರಿಸಿದ್ದಕ್ಕೆ, ನಿಮಗೆ ಮಾನ ಮರ್ಯಾದೆ ಇದೆಯಾ ಅಂತ ಸಿದ್ದರಾಮಯ್ಯ ಹೇಳಿದ್ರು. ಸಿದ್ದರಾಮಯ್ಯ ಈಗ ಮೂರುವರೆ ರೂಪಾಯಿ ಏರಿಸಿದ್ದೀರಿ, ನಿಮಗೆ ಮಾನಮರ್ಯಾದೆ ಇದೆಯಾ?” ಎಂದು ಅಶೋಕ್‌ ಹರಿಹಾಯ್ದರು.

“ಮೊನ್ನೆ ಒಂದು ವಿಕೆಟ್ ಬಿದ್ದಿದೆ. 187 ಕೋಟಿ ಹಣ ನುಂಗಿ, ನಾಗೇಂದ್ರ ಔಟ್ ಆಗಿದ್ದಾನೆ. ನೆಕ್ಸ್ಟ್ ವಿಕೆಟ್ ಸಿದ್ದರಾಮಯ್ಯ. ನಾಗೇಂದ್ರ ಪಾಪದವನು, ಜೇನು ಕಿತ್ತ ಅಷ್ಟೇ. ನಾಗೇಂದ್ರ ಪಾಲು ಬರೀ 20%, 80% ಸಿದ್ದರಾಮಯ್ಯ ಪಾಲಾಗಿದೆ. ನಿಗಮದ ದಲಿತರ ಹಣ, ಬಾರ್‌ಗೆ ಹೋಗಿದೆ. ತರಕಾರಿ ಅಂಗಡಿಗೆ ಕೊಡಬೇಕಾದ್ದು, ವೈನ್ ಸ್ಟೋರಿಗೆ ಹೋಯ್ತು. ಅಮಾಯಕ ಅಧಿಕಾರಿ ಒಬ್ಬ ಸತ್ತೋದ. ನಿಷ್ಠಾವಂತ ಅಧಿಕಾರಿಗಳಿಗೆ ಇಲ್ಲಿ ಭದ್ರತೆ ಇಲ್ಲ. ಪೆಟ್ರೋಲ್ ಬೆಲೆ ಹೆಚ್ಚಾದ್ರೆ ಸೆಮೆಂಟ್ ಬೆಲೆ ಹೆಚ್ಚಾಗುತ್ತೆ ಅಂದ್ರು. ಮೂರುವರೆ ರೂಪಾಯಿ ಹೆಚ್ಚು ಮಾಡಿದ್ರಿ, ಈಗ ಏನು ಬೆಲೆ ಹೆಚ್ಚಾಗುತ್ತೆ ಹೇಳಿ?” ಎಂದು ಅಶೋಕ್‌ ಆಕ್ಷೇಪಿಸಿದರು.

“ಪೆಟ್ರೋಲ್ ಬೆಲೆ ಹೆಚ್ಚು ಮಾಡಿದ್ದಾರೆ. ನಾಳೆ ಇಂದ ಕಾಫಿ ಕುಡಿಯಲು ಹೋದ್ರೆ ಬೆಲೆ ಹೆಚ್ಚಾಗಿರುತ್ತೆ. ಈ ಸರ್ಕಾರ ಎಣ್ಣೇನು ನಮ್ಮದು, ಬಾರು ನಮ್ದು, ಚೇರು ನಮ್ಮದು,‌ ದುಡ್ಡು ಮಾತ್ರ ನಿಮ್ಮದು ಅಂತ ಬರ್ತಾರೆ. ಟೀಚರ್‌ಗಳಿಗೆ ಒಂದು ವರ್ಷದಿಂದ ಸಂಬಳ‌ ಕೊಟ್ಟಿಲ್ಲ. ಪಾಟ್ ಹೋಲ್ ಬಗ್ಗೆ ನಮಗೆ ಹೇಳಿದ್ರು, ಈಗ ಎಲ್ಲಿ ನೋಡಿದ್ರೂ ಗುಂಡಿ ಇದೆ. ಡಿಕೆ‌ ಶಿವಕುಮಾರ್ ಅವರೇ ಬ್ರಾಂಡ್ ಬೆಂಗಳೂರು ಅಂದ್ರಿ, ಬರೀ ಗುಂಡಿ ಬೆಂಗಳೂರು ಆಗಿದೆ. ನೀರು ಕುಡಿದು ಆರು ಜನ ಸತ್ತಿದ್ದಾರೆ. ಕಿಡ್ನಿ ಸರಿ ಇಲ್ಲ ಅಂತ ಹೇಳಿದ್ದಾರೆ. ಶಾಲೆ ಆರಂಭವಾಗಿ ಇಷ್ಟು ದಿನ ಆದ್ರೂ ಪಠ್ಯ ಪುಸ್ತಕ ಕೊಟ್ಟಿಲ್ಲ. ಕಳ್ಳ ಕಾಂಗ್ರೆಸ್‌ನವರು, ದರೋಡೆಕೋರರು. ಆಲಿಬಾಬ ಮತ್ತು 40 ಕಳ್ಳರ ಥರ ಈ ಕಾಂಗ್ರೆಸ್ ಸರ್ಕಾರ” ಎಂದು ಟೀಕಿಸಿದರು.

ಮುಂದಿನ ವಾರ ರಸ್ತೆ ತಡೆ: ವಿಜಯೇಂದ್ರ

“ಜನವಿರೋಧಿ ಸರ್ಕಾರ, ರಾಜ್ಯದಲ್ಲಿರೋ ಜನವಿರೋಧಿ ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೆತ್ತಿಕೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದ ಆತುರದ ನಿರ್ಧಾರ, ಅವಿವೇಕದ ನಿರ್ಧಾರ ವಿರೋಧಿಸಿ ಹೋರಾಟ ತೆಗೆದುಕೊಂಡಿದೆ. ಏಕಾಏಕಿ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ ಆಗಿದೆ. ಲೋಕಸಭಾ ಚುನಾವಣೆ ಮೊದಲು, ಕಾಂಗ್ರೆಸ್ ಪಕ್ಷದ ಶಾಸಕರು ಹೇಳಿಕೆ ನೀಡಿದ್ರು. ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ 18-20 ಸ್ಥಾನ ಗೆಲ್ಲದಿದ್ರೆ ಗ್ಯಾರಂಟಿ ನಿಲ್ಲಿಸೋದಾಗಿ ಹೇಳಿದ್ರು. ಲೋಕಸಭಾ ಚುನಾವಣೆ ಆಯ್ತು. 18-20 ಸ್ಥಾನ ಗೆಲ್ಲುವ ನಿರೀಕ್ಷೆ ಇದ್ದ ಸಿಎಂ, ಡಿಸಿಎಂಗೆ ಮುಖಭಂಗ ಆಯ್ತು. ಗ್ಯಾರಂಟಿ ನಿಲ್ಲಿಸಿದ್ರೆ ಜನ ದಂಗೆ ಏಳ್ತಾರೆ ಅಂತ ಗೊತ್ತಾಯಿತು. ಹಾಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ರು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು.

ವಿಪಕ್ಷ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರಿಗಿದ್ದ ಜನಪರ ಕಾಳಜಿ, ಸಿಎಂ‌ ಆದ ಮೇಲೆ ಎಲ್ಲಿ ಹೋಯ್ತು? ನೀವು ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕಾರ್ಯ ಆಗಿಲ್ಲ. ಬೊಮ್ಮಾಯಿ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವಾಗ ರೆವಿನ್ಯೂ ಪ್ಲಸ್ ಇತ್ತು. ಕಾಂಗ್ರೆಸ್ ಬಂದ ಒಂದೇ ವರ್ಷದಲ್ಲಿ ದಿವಾಳಿ ಅಂಚಿಗೆ ಬಂದಿದೆ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸೋ ತಾಕತ್ತು ರಾಜ್ಯದ ಜನರಿಗಿದೆ. ನಮ್ಮ‌ ಪಕ್ಷದ‌ ಮುಖಂಡರು, ಕಾರ್ಯಕರ್ತರು ಕುಳಿತು ತೀರ್ಮಾನ ಮಾಡಿದ್ದೇವೆ. ಮುಂದಿನ ಗುರುವಾರ ರಾಜ್ಯಾದ್ಯಂತ ರಸ್ತೆ ತಡೆ ನಡೆಸಲಿದ್ದೇವೆ. ಜೆಡಿಎಸ್‌, ವ್ಯಾಪಾರಸ್ಥರು, ಸಂಘಟನೆಗಳ ಬೆಂಬಲ ಪಡೆಯಲಿದ್ದೇವೆ. ರಾಜ್ಯದ ಜನರು ಇವರಿಗೆ ತಕ್ಕ ಪಾಠ ಕಲಿಸಬೇಲಿದೆ” ಎಂದು ಅವರು ಆಕ್ರೋಶಿಸಿದರು.

ಮಂಗಳೂರು, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಎಲ್ಲ ಪ್ರಮುಖ ನಗರಗಳಲ್ಲಿಯೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೇರಿ ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟಿಸಿದರು. ಹಲವು ಕಡೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Continue Reading

ರಾಯಚೂರು

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Road Accident : ರಾಯಚೂರು ಹಾಗೂ ಕೊಡಗಿನ ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದೆ. ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಕಾರೊಂದು ಮತ್ತೊಂದು ಕಾರಿಗೆ ಗುದ್ದಿದ ರಭಸಕ್ಕೆ ನಾಲ್ಕೈದು ವಾಹನಗಳು ಜಖಂಗೊಂಡಿವೆ.

VISTARANEWS.COM


on

By

Road Accident
Koo

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಕೊಡಗಿನಲ್ಲಿ ಕಾರಿಗೆ ಕಾರು ಡಿಕ್ಕಿ

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ನಾಲ್ಕು ಕಾರುಗಳು ಜಖಂಗೊಂಡಿವೆ. ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಮೀನುಪೇಟೆಯಲ್ಲಿ ಘಟನೆ ನಡೆದಿದೆ. ನಿದ್ರೆ ಮಂಪರಿನಲ್ಲಿ ಇದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ನಸುಕಿನ ಜಾವ 2.30 ರ ಸಮಯಕ್ಕೆ ಅಪಘಾತ ನಡೆದಿದ್ದು, ಕಾರಿನಲ್ಲಿನದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಈಜಲು ಹೋಗಿ ಬಾಲಕರು ನೀರುಪಾಲು

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲೆಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

GPF Interest: ಸಾಮಾನ್ಯ ಭವಿಷ್ಯ ನಿಧಿಯು (General Provident Fund) ರಾಜ್ಯ ಮತ್ತು ಕೇಂದ್ರ ಸರ್ಕಾರದ ಭವಿಷ್ಯ ನಿಧಿ ಯೋಜನೆಯಾಗಿದ್ದು, ಕೇವಲ ಸರ್ಕಾರಿ ನೌಕರರಿಗೆ (ಗ್ರೂಪ್‌ ಡಿ ಹೊರತುಪಡಿಸಿ) ಇದನ್ನು ಒದಗಿಸಲಾಗುತ್ತದೆ.

VISTARANEWS.COM


on

GPF Interest
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಾಮಾನ್ಯ ಭವಿಷ್ಯ ನಿಧಿ (General Provident Fund) ಚಂದಾದಾರರ ಪ್ರಕರಣಗಳಲ್ಲಿ 2023-24 ನೇ ಆರ್ಥಿಕ ವರ್ಷದಲ್ಲಿ 5 ಲಕ್ಷ ರೂ.ಗಳಿಗೂ ಮೀರಿ ಜಿಪಿಎಫ್ ವಂತಿಗೆ ಕಟಾವಣೆಯಾಗಿರುವ ಮೊತ್ತಕ್ಕೆ ಬಡ್ಡಿಯನ್ನು (GPF Interest) ಪಾವತಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ ಅವರು ಆದೇಶ ಹೊರಡಿಸಿದ್ದು, 2023-24 ನೇ ಸಾಲಿಗೆ ಅನ್ವಯಿಸುವಂತೆ ಕರ್ನಾಟಕ ರಾಜ್ಯದ ಜಿಪಿಎಫ್ ಚಂದಾದಾರರ ಖಾತೆಗಳಿಗೆ 5 ಲಕ್ಷ ರೂ. ಮೀರಿ ಜಮಾವಣೆ ಮಾಡಿರುವ ಮೊತ್ತಕ್ಕೆ ಆದಾಯ ತೆರಿಗೆ ಅನ್ವಯಿಕೆಗೊಳಪಟ್ಟು ಬಡ್ಡಿಯನ್ನು ಪಾವತಿಸಲು ಸರ್ಕಾರದ ಮಂಜೂರಾತಿಯನ್ನು ನೀಡಲಾಗಿದೆ. ಅದರಂತೆ ಖಜಾನೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಖಜಾನೆಗಳ ಪ್ರಭಾರಾಧಿಕಾರಿಗಳಿಗೆ ತಿಳಿಸಿದ್ದಾರೆ.

ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ನಿಯಮಗಳು, 2016ರ ಅಡಿಯಲ್ಲಿ ರಾಜ್ಯ ಸರ್ಕಾರವು ಈ ಭವಿಷ್ಯ ನಿಧಿಯನ್ನು ಸ್ಥಾಪಿಸಿದೆ. ಪ್ರತಿ ನೌಕರರು ಮಾಸಿಕ ವಂತಿಗೆಯನ್ನು ಪಾವತಿಸುವ ಮೂಲಕ ಈ ನಿಧಿಯ ಚಂದಾದಾರಾಗಬಹುದು. ತಾವು ಹೊಂದಿರುವ ಹುದ್ದೆಯ ಗರಿಷ್ಠ ಮೂಲ ವೇತನಕ್ಕೆ ಒಳಪ್ಟಟ ಕನಿಷ್ಠ ಪ್ರಮಾಣಕ್ಕಿಂತ ಹೆಚ್ಚಿನ ವಂತಿಗೆಯನ್ನು ಆಯ್ಕೆಮಾಡಿಕೊಳ್ಳಬಹುದು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರವನ್ನು ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. 01-04-2006 ಕ್ಕಿಂತ ಮೊದಲು ರಾಜ್ಯದ ಸೇವೆಗೆ ಸೇರಿದ ರಾಜ್ಯ ಸರ್ಕಾರಿ ನೌಕರರು ಈ ಭವಿಷ್ಯ ನಿಧಿಯ ವಂತಿಕೆದಾರರಾಗಿರುತ್ತಾರೆ. 2024ರ ಜನವರಿ 1ರಿಂದ ಮಾರ್ಚ್‌ 31ರವರೆಗೆ ಶೇ.7.1 ಬಡ್ಡಿ ದರ ನಿಗದಿಯಾಗಿತ್ತು.

ಸಾಮಾನ್ಯ ಭವಿಷ್ಯ ನಿಧಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಭವಿಷ್ಯ ನಿಧಿ ಯೋಜನೆಯಾಗಿದ್ದು, ಕೇವಲ ಸರ್ಕಾರಿ ನೌಕರರಿಗೆ (ಗ್ರೂಪ್‌ ಡಿ ಹೊರತುಪಡಿಸಿ) ಇದನ್ನು ಒದಗಿಸಲಾಗುತ್ತದೆ. ಪ್ರತಿ ತಿಂಗಳು ನೌಕರರು ಇಂತಿಷ್ಟು ಎಂದು ತಮ್ಮ ವೇತನದಲ್ಲಿ ಹಣವನ್ನು ಇದಕ್ಕೆ ತೆಗೆದಿರಿಸುತ್ತಾರೆ. ಹೀಗೆ ಸಂಗ್ರಹವಾದ ಮೊತ್ತವನ್ನು ಅಗತ್ಯವಿರುವಾಗ ನೌಕರರು ಮನೆ ಅಥವಾ ನಿವೇಶನ ಕೊಳ್ಳುವ ಸಂದರ್ಭದಲ್ಲಿ, ಮನೆ ಕಟ್ಟುವಾಗ, ಮದುವೆಯಾಗುವ, ಕಾರು ಕೊಳ್ಳುವಾಗ ಅಥವಾ ಮಕ್ಕಳ ಶೈಕ್ಷಣಿಕ ಉದ್ದೇಶಗಳಿಗಾಗಿ ಈ ಹಣವನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡಲಾಗಿರುತ್ತದೆ. ಪಡೆದುಕೊಳ್ಳಬಹುದು, ಇಲ್ಲವೇ, ನಿವೃತ್ತಿ ಸಂದರ್ಭದಲ್ಲಿ ಒಟ್ಟಾಗಿ ಪಡೆದುಕೊಳ್ಳಬಹುದಾಗಿದೆ. ಮಹಾಲೇಖಪಾಲಕರ ಕಚೇರಿಯು ಈ ನಿಧಿಯನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ | EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

ಇತ್ತೀಚೆಗೆ ಕೇಂದ್ರ ಸರ್ಕಾರವು ಈ ನಿಧಿಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಈಗ ಜಿಪಿಎಫ್‌ ಅನ್ನು ಕಾರು, ಸ್ಕೂಟರ್‌ನಂಥ ಗ್ರಾಹಕೋತ್ಪನ್ನಗಳ ಖರೀದಿ ಸಲುವಾಗಿಯೂ ಬಳಸಬಹುದಾಗಿದೆ. ಈ ಹೊಸ ನಿಯಮದ ಪ್ರಕಾರ ಜಿಪಿಎಫ್‌ನಿಂದ ಹಣ ತೆಗೆಯುವ ಸಂದರ್ಭದಲ್ಲಿ ಅದನ್ನು ಮಂಜೂರು ಮಾಡುವ ಮತ್ತು ಕೈಗೆ ನೀಡುವ ಅವಧಿಯನ್ನು 15 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅನಾರೋಗ್ಯದಂಥ ತುರ್ತು ಸಂದರ್ಭಗಳಲ್ಲಿ 7 ದಿನದೊಳಗೆ ಹಣವನ್ನು ಪಡೆಯಬಹುದಾಗಿದೆ.

Continue Reading

ಮೈಸೂರು

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan : ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌ಗೆ ಒಂದರ ಮೇಲೊಂದು ಸಂಕಷ್ಟ ಎದುರಾಗಿದೆ. ಹಳೇ ಕೇಸ್‌ಗಳೆಲ್ಲವೂ ಇದೀಗ ತೆರೆದುಕೊಳ್ಳುತ್ತಿದ್ದು, ನಿಯಮ ಬಾಹಿರವಾಗಿ ಬಾರ್-ಹೆಡ್ ಬಾತುಕೋಳಿ ಸಾಕಿದ ಪ್ರಕರಣವನ್ನು ಅರಣ್ಯ ಇಲಾಖೆ ಚುರುಕುಗೊಳಿಸಿದೆ.

VISTARANEWS.COM


on

By

Actor Darshan
ಸಾಂದರ್ಭಿಕ ಚಿತ್ರ
Koo

ಮೈಸೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮತ್ತೊಂದು ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾರ್ ಹೆಡ್ ಬಾತುಕೋಳಿ (bar-headed goose) ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ನಿರ್ಧರಿಸಿದೆ.

ಈ ಕೇಸ್‌ನಲ್ಲಿ ನಟ ದರ್ಶನ್‌ ಮಾತ್ರವಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಆರೋಪಿಯಾಗಿದ್ದಾರೆ. ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿರುವ ದರ್ಶನ್ ತೋಟದಲ್ಲಿ ಕಾನೂನು ಬಾಹಿರ‌ವಾಗಿ ಬಾರ್ ಹೆಡ್ ಬಾತುಕೋಳಿ ಸಾಕಲಾಗಿತ್ತು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ದರ್ಶನ್‌ ಪತ್ನಿ ವಿಜಯಲಕ್ಷ್ಮಿ A1 ಹಾಗೂ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ಅಲಿಯಾಸ್ ನಾಗ A2 ಹಾಗೂ ನಟ ದರ್ಶನ್ A3 ಆರೋಪಿ ಆಗಿದ್ದರು. ಐದು ಬಾರಿ ನೋಟಿಸ್ ಕೊಟ್ಟರು ನಟ ದರ್ಶನ್‌ ವಿಚಾರಣೆಗೆ ಹಾಜರಾಗಿ ಇರಲಿಲ್ಲ.

ಇತ್ತ ಪ್ರಕರಣ ಸಂಬಂಧ ದರ್ಶನ್‌ನನ್ನು ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು. ಸೆಲೆಬ್ರಿಟಿ ಆಗಿದ್ದರಿಂದ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸದೇ, ವಿಚಾರಣೆಗೆ ಅವಕಾಶ‌‌ ಕೊಟ್ಟಿತ್ತು. ಇದೀಗ ಅರಣ್ಯ ಇಲಾಖೆಯು ಈ ಪ್ರಕರಣವನ್ನು ಚುರುಕುಗೊಳಿಸಿದೆ.

ಇದನ್ನೂ ಓದಿ: Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ಇದರ ಜತೆಗೆ ದರ್ಶನ್‌ (Actor Darshan) ಅವರು ಸ್ಥಳ ಮಹಜರು ವೇಳೆ ತನಿಖಾಧಿಕಾರಿಗಳಿಗೆ ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ.

ಸ್ಥಳ ಮಹಜರು ವೇಳೆ ತನಿಖಾಧಿಕಾರಿಗೆ ದರ್ಶನ್‌ ಮನವಿ ಮಾಡಿದ್ದಲ್ಲದೇ ಪೊಲೀಸ್ ಠಾಣೆಯಲ್ಲೂ ಪವಿತ್ರಾ ಗೌಡಳನ್ನು ಕೇಸ್‌ನಿಂದ ಕೈ ಬಿಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡಳಿಗೂ ಈ ಕೊಲೆ ಕೇಸ್‌ಗೂ ಸಂಬಂಧವಿಲ್ಲವೆಂದು ದರ್ಶನ್ ಪದೇ ಪದೇ ಹೇಳುತ್ತಿದ್ದು, ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್‌ ಎಷ್ಟೇ ಮನವಿ ಮಾಡಿಕೊಂಡರೂ ಪೊಲೀಸರು ಮಾತ್ರ ಜಗ್ಗದೇ ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kisan Samman Nidhi
ದೇಶ22 mins ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ28 mins ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ29 mins ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

MS Dhoni
ಕ್ರೀಡೆ32 mins ago

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Road Accident
ರಾಯಚೂರು33 mins ago

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Actor Darshan support by Anusha Rai
ಸ್ಯಾಂಡಲ್ ವುಡ್54 mins ago

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ1 hour ago

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Actor Darshan
ಮೈಸೂರು1 hour ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan Police To Serve Notice To sandalwood comedy actor
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು2 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ20 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ21 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌