ತುಮಕೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ : ಮೂರು ಪಕ್ಷಗಳಿಗೂ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು Vistara News
Connect with us

ಕರ್ನಾಟಕ

ತುಮಕೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ : ಮೂರು ಪಕ್ಷಗಳಿಗೂ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು

ತುಮಕೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕಲ್ಪತರು ನಾಡಿನಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿ ತನ್ನ ಬಿಗಿ ಹಿಡಿತ ಮುಂದುವರಿಸಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಟ್ರ್ಯಾಕ್‌ಗೆ ಮರಳಲು ಹವಣಿಸುತ್ತಿವೆ. ಜಿಲ್ಲೆಯ ಕ್ಷೇತ್ರಗಳ ಸದ್ಯದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

VISTARANEWS.COM


on

Karnataka Election 2023 tumakuru district constituency wise election analysis
Koo
Karnataka Election 2023
tumakuru district constituency 
election analysis

ಹರಿಶ್ಚಂದ್ರ ನಾಯ್ಕ, ವಿಸ್ತಾರ ನ್ಯೂಸ್, ತುಮಕೂರು
ಬೆಂಗಳೂರು ಮತ್ತು ಬೆಳಗಾವಿಯನ್ನ ಹೊರತು ಪಡಿಸಿದರೆ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನ ಹೊಂದಿರುವ ಜಿಲ್ಲೆ ತುಮಕೂರು. ಹೀಗಾಗಿಯೇ ಪ್ರಮುಖ ಮೂರೂ ಪಕ್ಷಗಳು ತುಮಕೂರು ಜಿಲ್ಲೆಯ ಮೇಲೆ ಕಣ್ಣಿಟ್ಟಿವೆ. ಕಲ್ಪತರು ನಾಡು ಎಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಜೆಡಿಎಸ್‌ನ ಭದ್ರಕೋಟೆಯಾಗಿತ್ತು. 1994ರ ವಿಧಾನಸಭಾ ಚುನಾವಣೆಯಲ್ಲಂತೂ ಬರೋಬ್ಬರಿ 9 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಮೂಲಕ ದೇವೇಗೌಡರು ಮುಖ್ಯಮಂತ್ರಿ ಪಟ್ಟಕ್ಕೇರುವಲ್ಲಿ ತುಮಕೂರು ಜಿಲ್ಲೆಯ ಮತದಾರರು ಪ್ರಮುಖ ಪಾತ್ರ ವಹಿಸಿದ್ದರು.

ಕಾಂಗ್ರೆಸ್ ಕೂಡ ಜಿಲ್ಲೆಯಲ್ಲಿ ತನ್ನ ಪ್ರಾಬಲ್ಯ ಮುಂದುವರೆಸಿಕೊಂಡು ಬಂದಿತ್ತು. ಎರಡು ದಶಕಗಳ ಹಿಂದೆ ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇದ್ದ ಪೈಪೋಟಿ ಈಗ ಬಿಜೆಪಿಯ ಸಂಘಟನೆಯ ಬಲದಿಂದಾಗಿ ತ್ರಿಕೋನ ಕಣವಾಗಿ ಬದಲಾಗಿದೆ. ಸದ್ಯದ ಬಲಾಬಲವನ್ನ ಗಮನಿಸುವುದಾದರೆ ಬಿಜೆಪಿ ಉಳಿದ ಎರಡೂ ಪ್ರಮುಖ ಪಕ್ಷಗಳಿಗಂತ ಹೆಚ್ಚು (ಉಪಚುನಾವಣೆ ಸೇರಿ ಒಟ್ಟು 5) ಸ್ಥಾನವನ್ನ ಹೊಂದಿದೆ. ಇದೇ ಹುಮ್ಮಸ್ಸಿನಲ್ಲಿ ಈ ಬಾರಿಯ (Karnataka Election 2023) ಈ ಬಾರಿಯ ಚುನಾವಣೆಯಲ್ಲಿಯೂ ಪ್ರಚಾರ ನಡೆಸುತ್ತಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಿಲ್ಲೆಯ ಮೇಲಿನ ತಮ್ಮ ಹಿಡಿತವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿವೆ.

Karnataka Election 2023
tumakuru district constituency 
election analysis

ಬಂಡಾಯ ಮತ್ತು ಪಕ್ಷಾಂತರ: ತುಮಕೂರು ನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸತತ ನಾಲ್ಕು ಬಾರಿ ಗುಬ್ಬಿ ಕ್ಷೇತ್ರದಿಂದ ವಿಧಾನಸಭಾ ಪ್ರವೇಶಿಸಿದ್ದ ಎಸ್.ಆರ್.ಶ್ರೀನಿವಾಸ್ ಜೆಡಿಎಸ್ ತೊರೆದು ಈ ಬಾರಿ ಕಾಂಗ್ರೆಸ್‌ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನು ಸಚಿವ ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್‌ಎಸ್‌ಎಸ್‌ ಕಟ್ಟಾಳು, ಮಾಜಿ ಶಾಸಕ ಕಿರಣ್ ಕುಮಾರ್ ತಮಗೆ ಟಿಕೆಟ್ ಸಿಗಲ್ಲಿಲಲ್ಲ ಎನ್ನುವುದು ಖಚಿತವಾಗುತ್ತಿದ್ದಂಥೆಯೇ ಕಾಂಗ್ರೆಸ್ ಸೇರ್ಪಡೆಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳು ಈ ಬಾರಿಯ ಚುನಾವಣೆಯಲ್ಲಿ ಗಮನಸೆಳೆಯುತ್ತಿವೆ.

ತುಮಕೂರು ನಗರ: ಇಬ್ಬರ
ಜಗಳ ಮೂರನೇಯವನಿಗೆ ಲಾಭ?

ಶೈಕ್ಷಣಿಕ ನಗರಿ ಎಂದೇ ಹೆಸರಾಗಿರುವ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಮತಗಳೇ ನಿರ್ಣಾಯಕ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಎರಡು ದಶಕಗಳ ಕಾಲ ಹಿಡಿತ ಸಾಧಿಸಿದ್ದರು. ಅವರು ಬಿಜೆಪಿ ಅಭ್ಯರ್ಥಿಯಾಗಿ 1994ರಿಂದ 2008ರವರೆಗೆ ನಾಲ್ಕು ಬಾರಿ ಗೆಲುವು ಸಾಧಿಸಿ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ಆದರೆ 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಜಿ.ಬಿ.ಜ್ಯೋತಿ ಗಣೇಶ್‌ ಸ್ಪರ್ಧಿಸಿದ್ದ ಪರಿಣಾಮ ಲಿಂಗಾಯತ ವೀರಶೈವ ಮತಗಳು ವಿಭಜನೆಗೊಂಡು ಶಿವಣ್ಣ ಮತ್ತು ಜಿ.ಬಿ.ಜ್ಯೋತಿ ಗಣೇಶ್‌ ಇಬ್ಬರೂ ಸೋಲು ಕಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಫೀಕ್ ಅಹಮದ್ ಜಯಗಳಿಸಿದ್ದರು.

2018ರ ಚುನಾವಣೆಯಲ್ಲಿ ಜಿ. ಬಿ. ಜ್ಯೋತಿ ಗಣೇಶ್‌ ಗೆಲ್ಲುವ ಮೂಲಕ ಕ್ಷೇತ್ರ ಮತ್ತೆ ಬಿಜೆಪಿ ಪಾಲಾಗಿತ್ತು. ಈ ಬಾರಿ ಬಿಜೆಪಿ ಮತ್ತೆ ಹಾಲಿ ಶಾಸಕ ಜ್ಯೋತಿ ಗಣೇಶ್‌ಗೆ ಮಣೆ ಹಾಕಿದೆ. ಹೀಗಾಗಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿದ್ದಾರೆ. ಕ್ಷೇತ್ರದಲ್ಲಿ ತನ್ನದೇ ಅಭಿಮಾನಿಗಳನ್ನು ಹೊಂದಿರುವ ಸೊಗಡು ಶಿವಣ್ಣ ಬಿಜೆಪಿಯನ್ನ ಸೋಲಿಸುವ ಪಣ ತೊಟ್ಟಿದ್ದಾರೆ. ಇದು ಬಿಜೆಪಿಗೆ ತಲೆನೋವು ತಂದಿಟ್ಟಿದೆ.

ಇತ್ತ ಕಾಂಗ್ರೆಸ್‌ ವಾಡಿಕೆಯಂತೆಯೇ ಮುಸ್ಲಿಮ್‌ ಅಭ್ಯರ್ಥಿಗೆ ಟಿಕೆಟ್‌ ನೀಡಿದ. ಕಳೆದ 40 ವರ್ಷಗಳಿಂದ ಮಾಜಿ ಶಾಸಕ ಷಫೀ ಅಹಮದ್‌ ಕುಟುಂಬಕ್ಕೆ ಕಾಂಗ್ರೆಸ್‌ 11 ಬಾರಿ ಟಿಕೆಟ್‌ ನೀಡಿತ್ತು. ಅದರಲ್ಲಿ ಮೂರು ಬಾರಿ ಕಾಂಗ್ರೆಸ್‌ ಗೆದ್ದಿತ್ತು. ಆದರೆ ಈ ಬಾರಿ ಕುಟುಂಬ ರಾಜಕಾರಣಕ್ಕೆ ಬ್ರೇಕ್‌ ಹಾಕಲಾಗಿದೆ. ಇಕ್ಬಾಲ್ ಅಹಮದ್ ಎಂಬ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್‌ ಮಣೆಹಾಕಿದೆ. ತಮ್ಮ ಕುಟುಂಕ್ಕೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡು ಮಾಜಿ ಶಾಸಕ ಷಫೀ ಅಹಮದ್ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಇನ್ನು ಕಳೆದ ಎರಡು ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದ ಎನ್.ಗೋವಿಂದರಾಜು ಈ ಬಾರಿ ಮತ್ತೊಮ್ಮೆ ಕಣದಲ್ಲಿದ್ದಾರೆ. ಅನುಕಂಪದ ಆಧಾರದ ಮೇಲೆ ಚುನಾವಣೆಯನ್ನ ಎದುರಿಸಲು ಮುಂದಾಗಿರುವ ಅವರು ಎರಡು ಪಕ್ಷಗಳಲ್ಲಿನ ಅಸಮಾಧಾನದ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೆಲ ಆಡಿಯೋ ಮತ್ತು ವಿಡಿಯೋ ತುಣುಕುಗಳಿಂದ ಗೋವಿಂದರಾಜುಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಜಿ.ಬಿ.ಜ್ಯೋತಿ ಗಣೇಶ್ (ಬಿಜೆಪಿ): 60,421 – ಎನ್.ಗೋವಿಂದರಾಜು (ಜೆಡಿಎಸ್): 55, 128 -ಗೆಲುವಿನ ಅಂತರ: 5,293

ತುಮಕೂರು ಗ್ರಾಮಾಂತರ
ಮದಗಜಗಳ ಕಾಳಗದಲ್ಲಿ
ಗೆಲ್ಲುವವರು ಯಾರು?

ತುಮಕೂರು ನಗರವನ್ನ ಸುತ್ತುವರೆದಿರುವ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳೇ ನಿರ್ಣಾಯಕ. ಈ ಕ್ಷೇತ್ರದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿಯಿದೆ. ಜೆಡಿಎಸ್‌ ಅಭ್ಯರ್ಥಿ, ಚನ್ನಿಗಪ್ಪ ಪುತ್ರ ಡಿ.ಸಿ.ಗೌರಿಶಂಕರ್ ಮತ್ತು ಬಿಜೆಪಿಯ ಸುರೇಶ್ ಗೌಡ ನಡುವಿನ ಜಿದ್ದಾಜಿದ್ದಿಗೆ ಹೆಸರುವಾಸಿಯಾರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ.

2008ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಮಧುಗಿರಿಯಿಂದ ಗೆದ್ದು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದ ಚನ್ನಿಗಪ್ಪ ಪುತ್ರ ಡಿ.ಸಿ.ಗೌರಿಶಂಕರ್ ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಎದುರು ಸೋಲು ಕಂಡಿದ್ದ ಅವರು, ನೇರವಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದ ರಾಜಕಾರಣ ಪ್ರವೇಶಿಸಿದ್ದರು. ಅಲ್ಲಿಂದ ಶುರುವಾಯ್ತು ನೋಡಿ ಮದಗಜಗಳ ಕಾಳಗ. ಸುರೇಶ್ ಗೌಡ ಎದುರು 2013ರ ಚುನಾವಣೆಯಲ್ಲಿ ಸೋತಿದ್ದ ಗೌರಿಶಂಕರ್, 2018ರ ಚುನಾವಣೆಯಲ್ಲಿ ಗೆದ್ದು ಬೀಗಿದ್ದರು.

ಆದರೆ, ಚುನಾವಣೆ ವೇಳೆ ಗೌರಿಶಂಕರ್ ಜನರಿಗೆ ನಕಲಿ ವಿಮಾ ಬಾಂಡ್‌ಗಳನ್ನು ವಿತರಿಸಿದ್ದಾರೆ. ಈ ಮೂಲಕ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ, ಅವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಂತೆ ಹೈಕೋರ್ಟ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದೆ. ಇದರಿಂದ ಗೌರಿಶಂಕರ್ ರಾಜಕೀಯ ಜೀವನಕ್ಕೇ ಕುತ್ತು ಬರುವ ಸಾಧ್ಯತೆ ಇತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಗೌರಿಶಂಕರ್ 2023ರ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವ ಆದೇಶ ನೀಡಿದೆ. ಇದರಿಂದ ಗೌರಿಶಂಕರ್ ಸ್ವಲ್ಪ ನಿರಾಳರಾಗಿದ್ದಾರೆ.

ಇನ್ನು ಇದೇ ಕ್ಷೇತ್ರದಿಂದ ಸತತವಾಗಿ ಎರಡು ಬಾರಿ ಶಾಸಕರಾಗಿರುವ ಬಿಜೆಪಿ ಸುರೇಶ್‌ ಗೌಡ ಕ್ಷೇತ್ರದ ತುಂಬಾ ಸಾಕಷ್ಟು ಓಡಾಟ ನಡೆಸಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದ್ದ ಸುರೇಶ್‌ ಗೌಡ ಈ ಬಾರಿ ಗೆಲ್ಲಲೇಬೇಕು ಎಂದು ವಿವಿಧ ಕಸರತ್ತು ನಡೆಸಿದ್ದಾರೆ. ಸಮಾವೇಶಗಳ ಮೇಲೆ ಸಮಾವೇಶಗಳನ್ನ ಮಾಡುತ್ತಾ, ರಾಜ್ಯ, ರಾಷ್ಟ್ರೀಯ ನಾಯಕರ ಮೂಲಕ ಪ್ರಚಾರ ನಡೆಸುತ್ತಾ ಮತದಾರರ ಮನವೊಲಿಕೆಗೆ ಮುಂದಾಗಿದ್ದಾರೆ.

ಹೈ ಕೋರ್ಟ್‌ ತೀರ್ಪಿನ ಬಳಿಕ ಕೊಂಚ ಹಿನ್ನಡೆ ಅನುಭವಿಸಿರುವ ಗೌರಿಶಂಕರ್‌ ಕೂಡ ಕ್ಷೇತ್ರದಲ್ಲಿ ತಮ್ಮದೇ ಆದ ಕಾರ್ಯಪಡೆ ಹೊಂದಿದ್ದಾರೆ. ಕೊರೊನಾ ಸಂದರ್ಭದ ಸೇವೆ ಹಾಗೂ ಅಭಿವೃದ್ಧಿ ಆಧಾರದ ಮೇಲೆ ಮತಯಾಚನೆಗೆ ಮುಂದಾಗಿದ್ದಾರೆ. ಈ ಮದಗಜಗಳ ಕಾಳಗದಲ್ಲಿ ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಕಾದುನೋಡಬೇಕಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಿ.ಸಿ.ಗೌರಿಶಂಕರ್ (ಜೆಡಿಎಸ್): 82,740- ಸುರೇಶ್ ಗೌಡ (ಬಿಜೆಪಿ): 77, 100- ಗೆಲುವಿನ ಅಂತರ: 5,640

ಚಿಕ್ಕನಾಯಕನಹಳ್ಳಿ:
ತ್ರಿಕೋನ ಸ್ಪರ್ಧೆ

ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಲಿಂಗಾಯತ, ಕುರುಬ ಹಾಗೂ ಎಸ್ಸಿ, ಎಸ್ಟಿ ಮತಗಳೇ ಹೆಚ್ಚು ನಿರ್ಣಾಯಕ. ಈ ಕ್ಷೇತ್ರದ ರಾಜಕೀಯ ಇತಿಹಾಸವನ್ನ ನೋಡುವುದಾದರೆ, ಎರಡು ಚುನಾವಣೆಗಳನ್ನ ಹೊರತುಪಡಿಸಿದರೆ, ಒಬ್ಬ ಅಭ್ಯರ್ಥಿ ನಿರಂತರವಾಗಿ ಎರಡು ಅವಧಿಗೆ ಗೆದ್ದ ಉದಾಹರಣೆ ಇಲ್ಲ. ಸಚಿವ ಮಾಧುಸ್ವಾಮಿ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ ಪಕ್ಷ ಯಾವುದು ಅನ್ನೋದಕ್ಕಿಂತ ಹೆಚ್ಚಾಗಿ ವ್ಯಕ್ತಿಯ ವರ್ಚಸ್ಸಿನ ಆಧಾರದ ಮೇಲೆ ರಾಜಕೀಯ ನಡೆಯಲಿದೆ.

ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಸುರೇಶ್‌ ಬಾಬು ಕುರುಬ ಸಮುದಾಯಕ್ಕೆ ಸೇರಿದವರಾದರೆ, ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಮಾಧುಸ್ವಾಮಿ ಮತ್ತು ಕಿರಣ್‌ ಕುಮಾರ್‌ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಆದರೆ ಲಿಂಗಾಯತ ಸಮುದಾಯದ ಮಾಧುಸ್ವಾಮಿ ವಿರುದ್ಧ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದೆ. ಜೊತೆಗೆ ಈ ಕ್ಷೇತ್ರದಲ್ಲಿ ಲಿಂಗಾಯತರಷ್ಟೇ ಪ್ರಬಲರಾಗಿರುವ ಕುರುಬರು ಮತ್ತು ಮುಸ್ಲಿಮರು ಮಾಧುಸ್ವಾಮಿಗೆ ತಿರುಗೇಟು ನೀಡಲು ರೆಡಿಯಾಗಿದ್ದಾರೆ. ಇವೆಲ್ಲ ಈ ಬಾರಿಯ ಚುನಾವಣಾ ಕಣದಲ್ಲಿ ಪ್ರತಿಫಲನಗೊಳ್ಳಲಿವೆ ಎನ್ನಲಾಗುತ್ತಿದೆ.

ಇನ್ನು ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಕಿರಣ್ ಕುಮಾರ್ ಮೂಲತಃ ಬಿಜೆಪಿಯವರು. ಆರ್‌ಎಸ್‌ಎಸ್‌ ಕಟ್ಟಾಳು. ಬಿಜೆಪಿಯಿಂದಲೇ ಒಂದು ಬಾರಿ ಪಕ್ಕದ ಕಳ್ಳಂಬೆಳ್ಳ ಕ್ಷೇತ್ರದಿಂದ ಶಾಸಕರಾಗಿದ್ದವರು. ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕಿರಣ್ ಕುಮಾರ್, ತಮಗೆ ಟಿಕೆಟ್ ಸಿಗುವುದಿಲ್ಲ ಅನ್ನುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಸೇರ್ಪಡೆಗೊಂಡು ಪಕ್ಷದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮೂಲ ಬಿಜೆಪಿ ಕಾರ್ಯಕರ್ತರು ಕಿರಣ್ ಕುಮಾರ್‌ಗೆ ಬೆಂಬಲ ನೀಡುವ ಸಾಧ್ಯೆತೆಗಳಿವೆ. ಮಾಧುಸ್ವಾಮಿ ಮತ್ತು ಕಿರಣ್‌ಕುಮಾರ್‌ ನಡುವಿನ ಪೈಪೋಟಿ ಜೆಡಿಎಸ್‌ ಸುರೇಶ್ ಬಾಬುಗೆ ಲಾಭ ತಂದುಕೊಡುವ ಸಾಧ್ಯತೆಯೂ ಇದೆ.

ಕಳೆದ ಬಾರಿಯ ಫಲಿತಾಂಶ ಏನು?
ಜೆ.ಸಿ.ಮಾಧುಸ್ವಾಮಿ (ಬಿಜೆಪಿ) : 69,612 – ಸಿ.ಬಿ.ಸುರೇಶ್ ಬಾಬು (ಜೆಡಿಎಸ್): 59,335- ಗೆಲುವಿನ ಅಂತರ: 10,227

ತುರುವೇಕೆರೆ: ಬಿಜೆಪಿ
ಜೆಡಿಎಸ್‌ ನಡುವೆ ಪೈಪೋಟಿ

‌ತೆಂಗು ಮತ್ತು ಅಡಿಕೆ ಬೆಳೆಗಾರರೇ ಹೆಚ್ಚಿರುವ ತುರುವೇಕೆರೆ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯಕ. ಹೀಗಾಗಿ ಮೂರೂ ಪ್ರಮುಖ ಪಕ್ಷಗಳು ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸಿವೆ. ಜೆಡಿಎಸ್‌ನಿಂದ ಹ್ಯಾಟ್ರಿಕ್ ಹೀರೋ ಎಂದೇ ಖ್ಯಾತಿ ಪಡೆದಿರುವ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಕಣದಲ್ಲಿದ್ದರೆ, ಬಿಜೆಪಿಯಿಂದ ಹಾಲಿ ಶಾಸಕ ಮಸಾಲೆ ಜಯರಾಂ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ, ನೆಲಮಂಗಲ ಮೂಲದ ಬೆಮೆಲ್ ಕಾಂತರಾಜು ಸ್ಪರ್ಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಇದು ತಮ್ಮ ಕೊನೆಯ ಚುನಾವಣೆ ಎನ್ನುವ ಅನುಕಂಪದ ಅಸ್ತ್ರ ಪ್ರಯೋಗಿಸಿ ಮತದಾರರನ್ನ ಸೆಳೆಯುವ ಪ್ರಯತ್ನಸುತ್ತಿದ್ದಾರೆ.

ಬಿಜೆಪಿಯ ಮಸಾಲೆ ಜಯರಾಂ ತಾವು ಮಾಡಿರುವ ಅಭಿವೃದ್ಧಿ ಕೆಲಸ ಮತ್ತು ಸಜ್ಜನ ರಾಜಕಾರಣಿ ಅನ್ನುವ ಹಣೆಪಟ್ಟಿ ತಮಗೆ ನೆರವಾಗುತ್ತೆ ಅನ್ನೋ ಆಲೋಚನೆಯಲ್ಲಿದ್ದಾರೆ. ಇನ್ನು ಇವರಿಬ್ಬರಿಗೆ ಪ್ರಬಲ ಸ್ಪರ್ಧೆಯೊಡ್ಡಲು ಕಾಂಗ್ರೆಸ್‌ನ ಬೆಮೆಲ್ ಕಾಂತರಾಜು ಕಸರತ್ತು ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಭಾರತ್ ಜೋಡೋ ಯಾತ್ರೆಯನ್ನ ಯಶಸ್ವಿಗೊಳಿಸಿರೋ ಹುಮ್ಮಸ್ಸಿನಲ್ಲಿ ಕಾಂತರಾಜು ಕಾರ್ಯಪ್ರವೃತ್ತರಾಗಿದ್ದಾರೆ.

ಕ್ಷೇತ್ರದ ಕೆರೆಗಳಿಗೆ ಹೇಮಾವತಿ ನೀರು ಹರಿಸುವ ವಿಚಾರವೂ ಕೂಡ ಚುನಾವಣೆ ಪ್ರಚಾರದ ಪ್ರಮುಖ ವಿಷಯವಾಗಿದೆ. ಸದ್ಯದ ಚಿತ್ರಣವನ್ನ ನೋಡಿದ್ರೆ ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಇರೋದು ಸ್ಪಷ್ಟವಾಗುತ್ತಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಮಸಾಲೆ ಜಯರಾಂ (ಬಿಜೆಪಿ): 60,710- ಎಂ.ಟಿ. ಕೃಷ್ಣಪ್ಪ (ಜೆಡಿಎಸ್): 58,661- ಗೆಲುವಿನ ಅಂತರ: 2,049

ತಿಪಟೂರು : ಇತಿಹಾಸ
ಬದಲಿಸಿಯಾರೇ ನಾಗೇಶ್‌?

ಕೊಬ್ಬರಿ ಬೆಳೆಗೆ ಹೆಸರುವಾಸಿಯಾಗಿರುವ ತಿಪಟೂರು ಪ್ರಜ್ಞಾವಂತ ಮತದಾರರನ್ನ ಹೊಂದಿರುವ ಕ್ಷೇತ್ರ. ಏಕೆಂದರೆ 1962ರಿಂದೀಚೆಗೆ ಈ ಕ್ಷೇತ್ರದಲ್ಲಿ ಒಮ್ಮೆ ಶಾಸಕರಾಗಿದ್ದವರು ಸತತ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದ ಉದಾಹರಣೆಯೇ ಇಲ್ಲ. 2018ರಲ್ಲಿ ಗೆಲುವು ಸಾಧಿಸಿ, ಹಾಲಿ ಸಚಿವರೂ ಆಗಿರುವ ಬಿ.ಸಿ.ನಾಗೇಶ್ ಈ ಸಂಪ್ರದಾಯವನ್ನ ಮುರಿಯುವ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಅದು ಅಷ್ಟು ಸುಲಭವಲ್ಲ.

ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿರುವ ಬಿ.ಸಿ.ನಾಗೇಶ್ ಈ ಬಾರಿ ಮತ್ತೊಮ್ಮೆ ಬಿಜೆಪಿಯ ಹುರಿಯಾಳಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಶಾಸಕ, ಲಿಂಗಾಯತ ಸಮುದಾಯದ ಷಡಕ್ಷರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದ ಒಕ್ಕಲಿಗ ಸಮುದಾಯದ ಕೆ.ಟಿ.ಶಾಂತಕುಮಾರ್, ಬಿಜೆಪಿ, ಕಾಂಗ್ರೆಸ್‌ನಲ್ಲಿ ಓಡಾಡಿ ಕೊನೆಗೆ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸುತ್ತಿದ್ದಾರೆ.

ಮೇಲ್ನೋಟಕ್ಕೆ ಮೂರು ಪಕ್ಷಗಳ ಅಭ್ಯರ್ಥಿಗಳ ನಡುವೆ ಪ್ರಬಲ ಪೈಪೋಟಿ ಕಂಡುಬರುತ್ತಿದೆ. ಆದರೆ ಬಿ. ಸಿ. ನಾಗೇಶ್‌ಗೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ತಿಪಟೂರು ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಕಳೆದ ಚುನಾವಣೆಯಲ್ಲಿ ತಮ್ಮ ಸಮುದಾಯದ ಸರ್ವೋಚ್ಛ ನಾಯಕ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿ ಅನ್ನುವ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿ, ಬ್ರಾಹ್ಮಣ ಸಮುದಾಯದ ಬಿ. ಸಿ. ನಾಗೇಶ್‌ ಅವರನ್ನು ಈ ಸಮುದಾಯ ಬೆಂಬಲಿಸಿತ್ತು. ಆದರೆ ಈ ಬಾರಿ ಈ ಸಾಧ್ಯತೆ ಕಡಿಮೆ. ಯಾಕೆಂದರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಷಡಕ್ಷರಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಇದು ತಮ್ಮ ಕೊನೆಯ ಚುನಾವಣೆ ಎಂದೇ ಷಡಕ್ಷರಿ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಈ ಬಾರಿ ಲಿಂಗಾಯತರು ತಮ್ಮ ಸಮುದಾಯದ ಷಡಕ್ಷರಿಯ ಕೈ ಹಿಡಿಯುವ ಸಾಧ್ಯತೆಯಿದೆ. ಜೆಡಿಎಸ್‌ ಅಭ್ಯರ್ಥಿ ಕೆ.ಟಿ.ಶಾಂತಕುಮಾರ್ ಕೂಡ ಈ ಇಬ್ಬರು ಘಟಾನುಘಟಿಗಳಿಗೆ ಟಫ್ ಫೈಟ್ ಕೊಡುವ ಪ್ರಯತ್ನದಲ್ಲಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಬಿ.ಸಿ.ನಾಗೇಶ್ (ಬಿಜೆಪಿ): 61,383- ಷಡಕ್ಷರಿ (ಕಾಂಗ್ರೆಸ್): 35,820- ಗೆಲುವಿನ ಅಂತರ: 25,563

ಕುಣಿಗಲ್‌: ಬಿಜೆಪಿ ಗೆಲುವಿನ
ಓಟಕ್ಕೆ ಕಾಂಗ್ರೆಸ್‌, ಜೆಡಿಎಸ್‌
ಅಡ್ಡಗಾಲು

ತುಮಕೂರು ಜಿಲ್ಲೆಗೆ ಸೇರಿರುವ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕುಣಿಗಲ್, ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ. ಕಳೆದ ಮೂರೂ ಚುನಾವಣೆಗಳಲ್ಲಿ ಇಲ್ಲಿ ರನ್ನರ್ ಅಪ್ ಸ್ಥಾನದಲ್ಲಿದ್ದ ಬಿಜೆಪಿ, ಈ ಬಾರಿ ಗೆದ್ದು ಇತಿಹಾಸ ಬರೆಯುವ ತವಕದಲ್ಲಿದೆ. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಬಿಜೆಪಿ ಆಸೆಗೆ ತಣ್ಣೀರೆರಚುವ ಪ್ರಯತ್ನದಲ್ಲಿವೆ.

ಕಳೆದ ಮೂರೂ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಲುಂಡಿದ್ದ, ರಾಜ್ಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಡಿ.ಕೃಷ್ಣಕುಮಾರ್ ಸತತ ನಾಲ್ಕನೇ ಬಾರಿಗೆ ಬಿಜೆಪಿ ಟಿಕೆಟ್ ಪಡೆದು ಕಣದಲ್ಲಿದ್ದಾರೆ. ಬಿಜೆಪಿ ಟಿಕೆಟ್‌ಗೆ ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಅವರಿಂದ ತೀವ್ರ ಪೈಪೋಟಿ ನಡೆಸಿದ್ದರು. ಆದರೆ ಕೊನೆಯ ಪ್ರಯತ್ನ ಅನ್ನೋ ನೆಪದಲ್ಲಿ ಕೃಷ್ಣಕುಮಾರ್‌ಗೆ ಟಿಕೆಟ್ ಲಭಿಸಿದೆ.

ಕಾಂಗ್ರೆಸ್‌ನಿಂದ ಹಾಲಿ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಮತ್ತೆ ಅಭ್ಯರ್ಥಿಯಾಗಿದ್ದಾರೆ. ಇನ್ನು ಜೆಡಿಎಸ್‌ನಿಂದ ಮಾಜಿ ಸಚಿವ ಡಿ. ನಾಗರಾಜಯ್ಯ ಪುತ್ರ, ಡಾ.ರವಿಬಾಬು ಕಣಕ್ಕಿಳಿದಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿಯಿಂದ ಕಳೆದ ಮೂರು ಚುನಾವಣೆಗಳಲ್ಲಿ ಸಹೋದರರಾದ ಡಿ.ನಾಗರಾಜಯ್ಯ ಮತ್ತು ಡಿ.ಕೃಷ್ಣಕುಮಾರ್ ಕಣಕ್ಕಿಳಿಯುತ್ತಿದ್ದರು. ಇದರಿಂದ ಮತವಿಭಜನೆಯಾಗುತ್ತಿತ್ತು. ಎರಡು ಬಾರಿ ಕಾಂಗ್ರೆಸ್ ಇದರ ಲಾಭ ಪಡೆದಿತ್ತು. ಆದರೆ ಈ ಬಾರಿ ಬಿಜೆಪಿಯಿಂದ ಚಿಕ್ಕಪ್ಪ ಡಿ.ಕೃಷ್ಣಕುಮಾರ್ ಮತ್ತು ಜೆಡಿಎಸ್‌ನಿಂದ ಅವರ ಅಣ್ಣನ ಮಗ ಡಾ.ರವಿಬಾಬು ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಡಿ. ಕೃಷ್ಣಕುಮಾರ್‌ಗೆ ಮೂರು ಬಾರಿ ಸೋತಿರುವ ಅನುಕಂಪವಿದೆ. ಬಿಜೆಪಿಯಿಂದ ಬಂಡಾಯವೆದ್ದಿದ್ದ ರಾಜೇಶ್ ಗೌಡ ಕೂಡ ಕಣದಿಂದ ಹಿಂದೆ ಸರಿದಿದ್ದಾರೆ. ಅಸಮಾಧಾನಗೊಂಡಿದ್ದ ಮುದ್ದಹನುಮೇಗೌಡ ಕೂಡ ಕೃಷ್ಣಕುಮಾರ್‌ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್‌ನ ಶಾಸಕ ಬಿ. ಬಿ. ರಾಮಸ್ವಾಮಿಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದು ಪಕ್ಷಕ್ಕೆ ತಲೆನೋವು ತಂದಿದೆ. ಇತ್ತ ಜೆಡಿಎಸ್ ಗೆ ನಾಗರಾಜಯ್ಯ ಬದಲು ಅವರ ಪುತ್ರ ಕಣಕ್ಕಿಳಿದಿರುವುದರಿಂದ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಾ.ರಂಗನಾಥ್ (ಕಾಂಗ್ರೆಸ್) : 58, 697- ಡಿ.ನಾಗರಾಜಯ್ಯ (ಜೆಡಿಎಸ್): 53,097 -ಗೆಲುವಿನ ಅಂತರ: 5,600

ಗುಬ್ಬಿಯಲ್ಲೂ
ತ್ರಿಕೋನ ಸ್ಪರ್ಧೆ

ಗುಬ್ಬಿ ಕ್ಷೇತ್ರದಲ್ಲಿ ಲಿಂಗಾಯತರ ಪ್ರಾಬಲ್ಯವಿದೆ. ನಂತರದ ಸ್ಥಾನದಲ್ಲಿ ಒಕ್ಕಲಿಗ, ಗೊಲ್ಲ, ತಿಗಳ ಸಮುದಾಯ ದವರಿದ್ದಾರೆ. ಈವರೆಗೂ ಲಿಂಗಾಯಿತ ಹಾಗೂ ಒಕ್ಕಲಿಗ ಸಮುದಾಯದವರೇ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ. ಯಾರೇ ಸ್ಪರ್ಧಿಸಿದರೂ ಪ್ರಬಲ ಸಮುದಾಯಗಳ ಜತೆಗೆ ಹಿಂದುಳಿದ, ಪರಿಶಿಷ್ಟರ ಮತಗಳನ್ನು ಪಡೆದುಕೊಂಡವರಿಗೆ ಗೆಲುವಿನ ಬಾಗಿಲು ತೆರೆಯಲಿದೆ.

ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ ಜೆಡಿಎಸ್‌ಗೆ ಸೆಡ್ಡು ಹೊಡೆದು ಪಕ್ಷದಿಂದ ಉಚ್ಛಾಟನೆಯಾಗಿರುವ ಎಸ್‌.ಆರ್‌.ಶ್ರೀನಿವಾಸ್‌ ಅವರಿಂದಾಗಿ ಗುಬ್ಬಿ ವಿಧಾನಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದ ಎಸ್.ಆರ್.ಶ್ರೀನಿವಾಸ್, ಬಳಿಕ ಹಿಂದಿರುಗಿ ನೋಡಿಲ್ಲ. 2008, 2013, 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. ಸತತ 4 ಗೆಲುವು ಕಂಡಿರುವ ಶ್ರೀನಿವಾಸ್‌, ಕಾಂಗ್ರೆಸ್‌ ಭದ್ರಕೋಟೆಯಂತಿದ್ದ ಗುಬ್ಬಿ ಕ್ಷೇತ್ರವನ್ನು ಜೆಡಿಎಸ್‌ ಅಭೇದ್ಯ ಕೋಟೆ ಮಾಡಿದ್ದರು. ಆದರೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರು ಜೆಡಿಎಸ್‌ ಗೂಡು ತೊರೆದು ಕಾಂಗ್ರೆಸ್‌ ಸೇರಿ ಸ್ಪರ್ಧಿಸುತ್ತಿದ್ದಾರೆ.

ಸತತ ನಾಲ್ಕು ಬಾರಿಯ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಒಕ್ಕಲಿಗರು. ಇಲ್ಲಿಯವರೆಗೆ ಲಿಂಗಾಯತ ಸಮುದಾಯದ ಮುಖಂಡರು ಇವರಿಗೆ ಸರಿಯಾದ ಪೈಪೋಟಿ ನೀಡಿಲ್ಲ. 2004ರಲ್ಲಿ ಎಸ್.ಆರ್.ಶ್ರೀನಿವಾಸ್ ಪಕ್ಷೇತರ ಅಭ್ಯರ್ಥಿಯಾಗಿ ಲಿಂಗಾಯತ ಸಮುದಾಯದ ಜೆಡಿಎಸ್‌ ಅಭ್ಯರ್ಥಿ ಜಿ.ಎಸ್‌.ಶಿವನಂಜಪ್ಪ ವಿರುದ್ಧವೇ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲಿಂದ ನಿರಂತರವಾಗಿ ಗೆಲ್ಲುತ್ತಿದ್ದಾರೆ. ಈಗ 5ನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದಾರೆ. ಈ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿರುವ ಬಿ.ಎಸ್‌. ನಾಗರಾಜು ಒಕ್ಕಲಿಗರು. ಬಿಜೆಪಿ ಪರ ಕಣಕ್ಕಿಳಿಯುತ್ತಿರುವ ದಿಲೀಪ್‌ ಕುಮಾರ್‌ ಲಿಂಗಾಯತ ಸಮುದಾಯಕ್ಕೆ ಸೇರಿದವರು.

ಇನ್ನು ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದ ಹೊನ್ನಗಿರಿ ಗೌಡ ಕೈ ತೊರೆದು ಜೆಡಿಎಸ್‌ ಸೇರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಬೆಟ್ಟಸ್ವಾಮಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಪ್ರಬಲ ಗೊಲ್ಲ ಸಮುದಾಯದ ಮುಖಂಡ ಬೆಟ್ಟಸ್ವಾಮಿ ಜೆಡಿಎಸ್‌ ಸೇರ್ಪಡೆಯಾಗಿರುವುದು ಬಿಜೆಪಿಗೆ ನುಂಗಲಾರದ ತುತ್ತಾದ್ರೆ, ಜೆಡಿಎಸ್‌ಗೆ ಈ ಇಬ್ಬರು ನಾಯಕರ ಸೇರ್ಪಡೆಯಿಂದ ದೊಡ್ಡ ಬಲ ಬಂದಂತಾಗಿದೆ.

ಕಳೆದ ಬಾರಿ ಪಕ್ಷೇತರನಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದ ದಿಲೀಪ್‌ ಕುಮಾರ್‌ ಗೆ ಈ ಬಾರಿ ಬಿಜೆಪಿ ಟಿಕೆಟ್‌ ನೀಡಲಾಗಿದೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿದ್ದ ದಿಲೀಪ್‌ ಕುಮಾರ್‌ 30 ಸಾವಿರಕ್ಕೂ ಹೆಚ್ಚು ಮತ ಪಡೆದಿದ್ದರು. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ದಿಲೀಪ್‌ ಕುಮಾರ್‌ ಈ ಬಾರಿ ಗೆಲುವು ಸಾಧಿಸಬಹುದು ಅನ್ನುವುದು ಬಿಜೆಪಿ ಲೆಕ್ಕಚಾರ. ಒಟ್ಟಾರೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಎಸ್.ಆರ್.ಶ್ರೀನಿವಾಸ್ (ಜೆಡಿಎಸ್)- 55572 ಜಿ.ಎನ್.ಬೆಟ್ಟಸ್ವಾಮಿ (ಬಿಜೆಪಿ)- 46491 ಗೆಲುವಿನ ಅಂತರ- 9081

ಇದನ್ನೂ ಓದಿ: ಹಾಸನ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಏಳು ಸುತ್ತಿನ ಕೋಟೆ ಭೇದಿಸುವವರು ಯಾರು?

ಕೊರಟಗೆರೆ : ತ್ರಿಕೋನ
ಸ್ಪರ್ಧೆಯಿಂದ ಕುತೂಹಲ

ತುಮಕೂರು ಜಿಲ್ಲೆಯಲ್ಲೇ ಅತೀ ಚಿಕ್ಕ ತಾಲ್ಲೂಕು ಕೊರಟಗೆರೆ. ಆದರೆ ಇದು ಮೊದಲಿನಿಂದಲೂ ವಿಧಾನಸಭಾ ಕ್ಷೇತ್ರವಾಗಿಯೇ ಉಳಿದುಕೊಂಡು ಬಂದಿದೆ. ಎರಡು ಬಾರಿ ಕ್ಷೇತ್ರವನ್ನು ಮೀಸಲು ಕ್ಷೇತ್ರವನ್ನಾಗಿ ಮಾಡಿದ್ದು, ಇಲ್ಲಿಂದ ಆಯ್ಕೆ ಆಗಿದ್ದ ಇಬ್ಬರು ಸಚಿವರಾಗಿದ್ದರು. ಕ್ಷೇತ್ರ ಚಿಕ್ಕದಾದರೂ ರಾಜ್ಯದ ಗಮನ ಸೆಳೆಯುತ್ತಲೇ ಬಂದಿದೆ.

ಕೊರಟಗೆರೆ ಸದ್ಯ ಎಸ್‌ಸಿ ಮೀಸಲು ಕ್ಷೇತ್ರ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಪ್ರಾಬಲ್ಯ ಹೆಚ್ಚಿದೆ. ಎಸ್‌ಸಿ ಮತಗಳಲ್ಲಿ ಮಾದಿಗ ಸಮುದಾಯದ ಮತಗಳೇ ಅಧಿಕ. ನಂತರದ ಸ್ಥಾನದಲ್ಲಿ ಲಿಂಗಾಯತರಿದ್ದಾರೆ. ಕಾಂಗ್ರೆಸ್‌ ನಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ, ಡಾ.ಜಿ.ಪರಮೇಶ್ವರ ಛಲವಾದಿ ಸಮುದಾಯಕ್ಕೆ ಸೇರಿದವರು. ಇನ್ನು ಜೆಡಿಎಸ್‌ ನ ಅಭ್ಯರ್ಥಿ ಪಿ. ಆರ್‌. ಸುಧಾಕರ್‌ಲಾಲ್‌ ಲಂಬಾಣಿ ಸಮುದಾಯದವರು. ಬಿಜೆಪಿಯಿಂದ ಕಣಕ್ಕಿಳಿದಿರುವ ಅನಿಲ್‌ ಕುಮಾರ್‌ ಪ್ರಬಲ ಮಾದಿಗ ಸಮುದಾಯದವರು. ಹೀಗಾಗಿ ಈ ಬಾರಿ ಮಾದಿಗರು ಅನಿಲ್ ಕುಮಾರ್‌ಗೆ ಬೆಂಬಲ ಸೂಚಿಸುವ ಸಾಧ್ಯತೆಯಿದೆ.

ಮಾದಿಗ ಸಮುದಾಯದ ಅನಿಲ್‌ ಕುಮಾರ್‌ ಒಕ್ಕಲಿಗ, ಲಿಂಗಾಯತ ಮತ ಬ್ಯಾಂಕ್‌ನ ಲಾಭವನ್ನೂ ಪಡೆದು ಕಾಂಗ್ರೆಸ್‌- ಜೆಡಿಎಸ್‌ಗೆ ಟಕ್ಕರ್‌ ಕೊಡುವ ಲೆಕ್ಕಾಚಾರದಲ್ಲಿದ್ದಾರೆ. ಕಳೆದ ಎರಡು ಬಾರಿ ಕಾಂಗ್ರೆಸ್- ಜೆಡಿಎಸ್ ನಡುವೆ ಮಾತ್ರ ಇದ್ದ ಜಿದ್ದಾಜಿದ್ದಿ ಈ ಬಾರಿ ಅನಿಲ್ ಕುಮಾರ್ ಎಂಟ್ರಿಯಿಂದ ತ್ರಿಕೋನ ಕದನವಾಗಿ ಬದಲಾಗಿದೆ.

2013ರ ಚುನಾವಣೆ ವೇಳೆ ಸಿಎಂ ರೇಸ್‌ನಲ್ಲಿದ್ದ ಜಿ. ಪರಮೇಶ್ವರ್‌ಗೆ ಕ್ಷೇತ್ರದ ಮತದಾರರು ಶಾಕ್ ಕೊಟ್ಟಿದ್ದರು. ಪರಮೇಶ್ವರ್ ಸೋಲುಣ್ಣುವ ಮೂಲಕ ಸಿಎಂ ಸ್ಥಾನ ಕೈತಪ್ಪಿತ್ತು. ಆದರೆ ಈ ಬಾರಿ ಮತ್ತೆ ಡಾ.ಜಿ.ಪರಮೇಶ್ವರ್ ಸದ್ದಿಲ್ಲದೇ ಸಿಎಂ ರೇಸ್‌ನಲ್ಲಿದ್ದಾರೆ. ಹಿಂದೆ ಈ ಅವಕಾಶ ಕೈತಪ್ಪಿದ್ದರ ಬಗ್ಗೆ ಮತ್ತು ಮುಂದಿನ ಬಾರಿ ಸಿಎಂ ಆಗುವ ಆಸೆಯ ಬಗ್ಗೆ ಪರಂ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ನಡುವಿನ ಜಟಾಪಟಿಯಿಂದ ಪರಮೇಶ್ವರ್ ಅವರಿಗೆ ಅದೃಷ್ಟ ಒಲಿದರೆ ಅಚ್ಚರಿಯಿಲ್ಲ ಎಂಬ ಲೆಕ್ಕಾಚಾರದ ಮಾತು ಕೂಡ ಕ್ಷೇತ್ರದಲ್ಲಿ ಓಡಾಡುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣಾಗಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಾ.ಜಿ.ಪರಮೇಶ್ವರ್ (ಕಾಂಗ್ರೆಸ್): 81,598 – ಪಿ.ಆರ್.ಸುಧಾಕರ್ ಲಾಲ್ (ಜೆಡಿಎಸ್): 73,979 – ಗೆಲುವಿನ ಅಂತರ: 7,619

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ ನೋಡಿ.

ಮಧುಗಿರಿ: ಮೂರು
ಪಕ್ಷಗಳ ನಡುವೆ
ಹಣಾಹಣಿ

ಏಷ್ಯಾದ ಅತಿ ದೊಡ್ಡ ಏಕಶಿಲಾ ಬೆಟ್ಟವನ್ನು ಹೊಂದಿರುವ ಮಧುಗಿರಿ ಕ್ಷೇತ್ರದಲ್ಲಿ ಒಕ್ಕಲಿಗ, ಎಸ್ಟಿ, ಎಸ್ಸಿ ಸಮುದಾಯಗಳ ಮತಗಳೇ ನಿರ್ಣಾಯಕ. ಈ ಕ್ಷೇತ್ರದಲ್ಲಿ ರಾಜವರ್ಧನ್ ಮತ್ತು ಡಾ.ಜಿ.ಪರಮೇಶ್ವರ್ ಸತತವಾಗಿ ಎರಡು ಬಾರಿ ಶಾಸಕರಾಗಿ, ಸಚಿವರಾಗಿರುವುದನ್ನು ಹೊರತುಪಡಿಸಿದರೆ, ಉಳಿದ ಯಾರೊಬ್ಬರೂ ಇಲ್ಲಿ ಎರಡನೇ ಅವಧಿಗೆ ಗೆದ್ದು ಬಂದಿಲ್ಲ. ಜತೆಗೆ ಸಚಿವರೂ ಆಗಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜನತಾ ಪರಿವಾರದ ಅಭ್ಯರ್ಥಿಗಳ ನಡುವೆ ಪ್ರತಿ ಚುನಾವಣೆಯಲ್ಲೂ ಜಿದ್ದಾಜಿದ್ದಿ ನಡೆಯುತ್ತಾ ಬಂದಿದೆ.

ಭಾರತೀಯ ಜನತಾ ಪಕ್ಷ ಈ ಕ್ಷೇತ್ರದಲ್ಲಿ ಇದುವರೆಗೂ ಖಾತೆಯನ್ನೇ ತೆರೆದಿಲ್ಲ. ಆದರೆ ಈ ಬಾರಿ ನಿವೃತ್ತ ಕೆಎಎಸ್ ಅಧಿಕಾರಿಯನ್ನ ಕಣಕ್ಕಿಳಿಸಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸವಾಲೊಡ್ಡಲು ಸಜ್ಜಾಗಿದೆ. ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಎಂ.ವಿ.ವೀರಭದ್ರಯ್ಯ ಒಕ್ಕಲಿಗ ಸಮುದಾಯದವರಾದರೆ, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಹಾಗೂ ಬಿ.ಜೆ.ಪಿಯ ಎಲ್.ಸಿ.ನಾಗರಾಜು ಇಬ್ಬರು ಕೂಡ ನಾಯಕ ಸಮುದಾಯಕ್ಕೆ ಸೇರಿದವರು.

ಇದುವರೆಗೂ ಕೆ.ಎನ್.ರಾಜಣ್ಣ ಮತ್ತು ವೀರಭದ್ರಯ್ಯ ನಡುವೆ ನೇರಾನೇರ ಪೈಪೋಟಿಯಿತ್ತು. ಅದರೊಟ್ಟಿಗೆ ಈಗ ಬಿಜೆಪಿ ಎಲ್.ಸಿ.ನಾಗರಾಜುಗೆ ಟಿಕೆಟ್ ಕೊಟ್ಟಿರುವುದರಿಂದ ಮೂರೂ ಪಕ್ಷಗಳ ನಡುವೆ ಹಣಾಹಣಿ ನಡೆಯಲಿದೆ.
ಹಾಲಿ ಶಾಸಕ ವೀರಭದ್ರಯ್ಯ ಅವರಿಗೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆಯಿದೆ. ಜೊತೆಗೆ ಹೆಚ್ಚಿನ ಜನಸಂಪರ್ಕವಿಲ್ಲದಿರುವುದು, ಹಿಂದೆ ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದು, ತೊಡಕಾಗುವ ಸಾಧ್ಯತೆಯಿದೆ. ಆದರೂ ಒಕ್ಕಲಿಗ ಮತಗಳು ತನ್ನ ಕೈಹಿಡಿಯುತ್ತವೆ ಎಂದು ಅವರು ನಂಬಿದ್ದಾರೆ.

ಇನ್ನು ದೇವೇಗೌಡರ ಸಾವನ್ನ ಬಯಸಿ ಮಾತನಾಡಿದ್ದ ವಿಚಾರ ಕಾಂಗ್ರೆಸ್‌ನ ಕೆ.ಎನ್.ರಾಜಣ್ಣಗೆ ಮುಳುವಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ಮಾಡಿದ್ದ ದೊಡ್ಡಗೌಡರು ರಾಜಣ್ಣ ವಿರುದ್ಧ ಭಾವನಾತ್ಮಕ ಬಾಣವನ್ನ ಬಿಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನನ್ನನ್ನ ಸೋಲಿಸಿ ನನ್ನ ಕಣ್ಣಲ್ಲಿ ನೀರು ತರಿಸಿದವರ ಕಣ್ಣಲ್ಲಿ ನೀರು ಬರಿಸಿದಾಗ ಮಾತ್ರ ನನಗೆ ಸಮಾಧಾನ ಎನ್ನುವ ಮೂಲಕ ರಾಜಣ್ಣನನ್ನ ಸೋಲಿಸಿ ಎಂಬ ಸಂದೇಶವನ್ನ ಒಕ್ಕಲಿಗ ಸಮಾಜಕ್ಕೆ ನೀಡಿದ್ದಾರೆ. ಇದರಿಂದ ಒಕ್ಕಲಿಗ ಮತಗಳು ಸಾರಾಸಗಾಟಾಗಿ ವೀರಭದ್ರಯ್ಯನವರಿಗೆ ವರ್ಗಾವಣೆಯಾದಲ್ಲಿ ಅದು ರಾಜಣ್ಣನವರಿಗೆ ಮುಳುವಾಗುವ ಸಾಧ್ಯತೆಯಿದೆ.

ಆದರೂ ತಾನು ಮಾಡಿರುವ ಅಭಿವೃದ್ಧಿ ಹಾಗೂ ಕ್ಷೇತ್ರದಲ್ಲಿ ಅಧಿಕ ಸಂಖ್ಯೆಯಲ್ಲಿರುವ ದಲಿತ ಮತ್ತು ಹಿಂದುಳಿದ ವರ್ಗದ ಮತಗಳು ತನ್ನನ್ನು ಗೆಲುವಿನ ದಡ ಸೇರಿಸುತ್ತವೆ ಎಂಬ ನಂಬಿಕೆ ರಾಜಣ್ಣ ಅವರದು. ಬಿಜೆಪಿಯ ಎಲ್.ಸಿ.ನಾಗರಾಜುರವರು ಸಾಕಷ್ಟು ಹಣ ಖರ್ಚು ಮಾಡುತ್ತಾ ಚುನಾವಣೆಗೆ ಧುಮುಕಿದ್ದಾರೆ. ಅವರು ಎಷ್ಟು ಎಸ್‌ಟಿ ಓಟುಗಳನ್ನು ಪಡೆಯುತ್ತಾರೋ ಅಷ್ಟು ರಾಜಣ್ಣನವರಿಗೆ ಡ್ಯಾಮೇಜ್ ಆಗಬಹುದು. ಆದರೆ ಅವರ ಮೇಲಿನ ಭ್ರಷ್ಟಾಚಾರದ ಆರೋಪಗಳು ಚುನಾವಣೆಯಲ್ಲಿ ಮುಖ್ಯವಾಗಿ ಚರ್ಚೆಯಾಗುವ ಸಂಭವವಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಎಂ.ವಿ.ವೀರಭದ್ರಯ್ಯ (ಜೆಡಿಎಸ್) : 88,521- ಕೆ.ಎನ್.ರಾಜಣ್ಣ (ಕಾಂಗ್ರೆಸ್): 69,947 -ಗೆಲುವಿನ ಅಂತರ: 18,574

ಶಿರಾ: ಮದಲೂರು
ಕೆರೆಯ ಸುತ್ತವೇ
ರಾಜಕೀಯ

ಹಲವು ಕ್ಷೇತ್ರಗಳಲ್ಲಿ ಜಾತಿ, ಧರ್ಮ, ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆದರೆ, ಶಿರಾದಲ್ಲಿ ನೀರಾವರಿಯ ಹೆಸರಲ್ಲಿ ರಾಜಕಾರಣ ನಡೆಯುತ್ತಾ ಬಂದಿದೆ. ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿಯಿಂದ ನೀರು ತುಂಬಿಸುವುದು ಹಲವು ವರ್ಷಗಳಿಂದ ಚುನಾವಣೆಯ ಪ್ರಮುಖ ವಿಚಾರವಾಗಿದೆ. ಈ ಕೆರೆಗೆ ನೀರು ಬಂದರೆ ಹತ್ತಾರು ಹಳ್ಳಿಗಳ ರೈತರಿಗೆ ಅನುಕೂಲವಾಗುತ್ತದೆ. ಹೀಗಾಗಿ ಇದರ ಸುತ್ತಲೇ ರಾಜಕೀಯ ಪಕ್ಷಗಳ ಪ್ರಚಾರ ಗಿರಕಿ ಹೊಡೆಯುತ್ತಿರುತ್ತದೆ.

ಉಳಿದಂತೆ ಕ್ಷೇತ್ರದಲ್ಲಿರುವ ಯಾವ ಸಮಸ್ಯೆಯ ಬಗೆಗೂ ಯಾರೂ ತಲೆಕೆಡಿಸಿಕೊಳ್ಳದಿರುವುದು ವಿಚಿತ್ರವಾಗಿದೆ.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮತಗಳು ಹೆಚ್ಚಾಗಿವೆ. ಒಕ್ಕಲಿಗರು 49 ಸಾವಿರ, ಕಾಡುಗೊಲ್ಲರು 26 ಸಾವಿರ, ಮುಸ್ಲಿಂ 30 ಸಾವಿರ, ಕುರುಬರು 13 ಸಾವಿರ, ನಾಯಕ 13 ಸಾವಿರ ಹಾಗೂ ಬಲಿಜ ಸಮುದಾಯದ 7 ಸಾವಿರ ಮತಗಳಿವೆ. ಒಕ್ಕಲಿಗ, ಕಾಡುಗೊಲ್ಲ ಮತ್ತು ಮುಸ್ಲಿಂ ಸಮುದಾಯ ಮತಗಳೇ ಇಲ್ಲಿ ನಿರ್ಣಾಯಕ ಎನಿಸಿವೆ.

ಈ ಬಾರಿ ಶಿರಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಮುಖ ಮೂರೂ ಪಕ್ಷಗಳ ಅಭ್ಯರ್ಥಿಗಳು ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಚಿವ, ಟಿ.ಬಿ.ಜಯಚಂದ್ರ ಕಣಕ್ಕಿಳಿದಿದ್ದರೆ, ಬಿಜೆಪಿ ಹಾಲಿ ಶಾಸಕ ಡಾ.ರಾಜೇಶ್‌ ಗೌಡಗೆ ಮತ್ತೊಮ್ಮೆ ಟಿಕೆಟ್ ನೀಡಿದೆ. ಇನ್ನು ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಉಗ್ರೇಶ್ ಎಂಬುವವರನ್ನ ಕಣಕ್ಕಿಳಿಸಿದೆ.

ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದಿರುವ ಟಿ.ಬಿ ಜಯಚಂದ್ರ ಹಿರಿಯ ರಾಜಕಾರಣಿ. 6 ಬಾರಿ ವಿಧಾನ ಸಭೆ ಪ್ರವೇಶಿಸಿರುವ ಜಯಚಂದ್ರ, ಈ ಬಾರಿ ಕೊನೆಯ ಚುನಾವಣೆ ಎಂದು ಮತದಾರರ ಮುಂದೆ ಪ್ರಚಾರ ಶುರು ಮಾಡಿದ್ದಾರೆ. ತನ್ನ ಅಧಿಕಾರದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ವಿಚಾರಗಳು- ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ಜಯಚಂದ್ರ ಪ್ರಚಾರ ನಡೆಸುತ್ತಿದ್ದಾರೆ.

ಜೆಡಿಎಸ್‌ನ ಶಾಸಕ ದಿ.ಸತ್ಯನಾರಾಯಣ್‌ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭೆಗೆ 2020ರಲ್ಲಿ ಉಪಚುನಾವಣೆ ನಡೆದಿತ್ತು. ಮೊದಲ ಬಾರಿಗೆ ಚುನಾವಣೆ ಎದುರಿಸಿದ ಡಾ.ರಾಜೇಶ್‌ ಗೌಡ ಗೆಲುವು ಸಾಧಿಸಿದ್ದರು. ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಉಪ ಚುನಾವಣೆಯಲ್ಲಿ ಮದಲೂರು ಕೆರೆ ನೀರು ಹರಿಸುವುದು, ಕಾಡುಗೊಲ್ಲರ ಮೀಸಲಾತಿ ವಿಚಾರ ಹಾಗೂ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಬಿಜೆಪಿ ಗೆಲುವಿಗೆ ಸಹಕಾರಿಯಾಗಿತ್ತು. ಅಂದು ಇಡೀ ಸರ್ಕಾರದ ನೆರವಿನಿಂದ ಗೆಲುವು ಸಾಧಿಸಿದ್ದ ರಾಜೇಶ್‌ ಗೌಡ ಇದೀಗ ಒಬ್ಬಂಟಿಯಾಗಿ ಚುನಾವಣೆ ಎದುರಿಸಬೇಕಾಗಿದೆ. ಕೊಟ್ಟ ಮಾತಿನಂತೆ ಮದಲೂರು ಕೆರೆಗೆ ನೀರು ಹರಿಸಿದ್ದೇವೆ. ಅಭಿವೃದ್ಧಿ ಕೆಲಸ ಮಾಡಿದ್ದೇವೆ ಅಂತ ಡಾ.ರಾಜೇಶ್‌ ಗೌಡ ಪ್ರಚಾರ ಪ್ರಾರಂಭಿಸಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಕಟ್ಟಾ ಕಾರ್ಯಕರ್ತರ ಪಡೆಯನ್ನ ಹೊಂದಿರುವ ಜೆಡಿಎಸ್‌ ಹಲವು ಬಾರಿ ಗೆಲುವು ಸಾಧಿಸಿದೆ. ಇದೀಗ ಒಕ್ಕಲಿಗ ಸಮುದಾಯದ ಉಗ್ರೇಶ್‌ ಮೊದಲ ಬಾರಿ ಚುನಾವಣೆ ಎದುರಿಸುತ್ತಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಉಗ್ರೇಶ್‌ ಮತ ಕೇಳುತ್ತಿದ್ದಾರೆ. ಒಟ್ಟಾರೆ ಬಿಜೆಪಿಯ ಡಾಕ್ಟರ್, ಕಾಂಗ್ರೆಸ್‌ ವಕೀಲರಿಗೆ ಜೆಡಿಎಸ್‌ನ ರೈತನ ಮಗನ ಸವಾಲು ಹಾಕುತ್ತಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಬಿ.ಸತ್ಯನಾರಾಯಣ (ಜೆಡಿಎಸ್): 74,338 – ಟಿ.ಬಿ.ಜಯಚಂದ್ರ (ಕಾಂಗ್ರೆಸ್): 63,973 – ಗೆಲುವಿನ ಅಂತರ: 10,365

ಪಾವಗಡ : ಕಾಂಗ್ರೆಸ್‌
ಜೆಡಿಎಸ್‌ ನಡುವೆ
ಜಿದ್ದಾಜಿದ್ದಿ

ಆಂಧ್ರಪ್ರದೇಶ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಪಾವಗಡ ಭೌಗೋಳಿಕವಾಗಿ ಚಿತ್ರದುರ್ಗ ಜಿಲ್ಲೆಗೆ ಸೇರಿಕೊಂಡಿದ್ದರೂ, ಆಡಳಿತಾತ್ಮಕವಾಗಿ ತುಮಕೂರು ಜಿಲ್ಲೆಗೆ ಸೇರಿದೆ. ಆದರೆ, ಲೋಕಸಭಾ ಕ್ಷೇತ್ರ ಮಾತ್ರ ಚಿತ್ರದುರ್ಗವಾಗಿದೆ.

ಪಾವಗಡ ಕ್ಷೇತ್ರ ಇದುವರೆಗೂ ಒಟ್ಟು 13 ಚುನಾವಣೆಗಳನ್ನ ಎದುರಿಸದ್ದು, ಏಳು ಸಲ ಕಾಂಗ್ರೆಸ್‌, ಎರಡು ಸಲ ಪಕ್ಷೇತರ, ಎರಡು ಸಲ ಜೆಡಿಎಸ್‌, ಒಂದು ಸಲ ಜನತಾ ಪಕ್ಷ ಮತ್ತು ಒಂದು ಸಲ ಜನತಾ ದಳ ಜಯ ಗಳಿಸಿವೆ. ಇಲ್ಲಿ ನಡೆದಿರುವ ಯಾವ ಚುನಾವಣೆಯಲ್ಲಿಯೂ ಸತತ ಎರಡನೇ ಬಾರಿ ಯಾರೂ ಆಯ್ಕೆಯಾಗಿಲ್ಲ.

ಎಸ್ಸಿ ಮೀಸಲು ಕ್ಷೇತ್ರವಾಗಿರೋ ಪಾವಗಡ ಕ್ಷೇತ್ರದಲ್ಲಿ ಬರೋಬ್ಬರಿ 72,000 ಎಸ್ಸಿ ಮತದಾರರಿದ್ದಾರೆ. ಇನ್ನು 53,000 ಎಸ್ಟಿ ವರ್ಗಕ್ಕೆ ಸೇರಿದ ಮತದಾರರು ಇದ್ರೆ, 38 ಸಾವಿರ ಗೊಲ್ಲ ಸಮುದಾಯದ ಮತಗಳು, 31 ಸಾವಿರ ಒಕ್ಕಲಿಗರು ಹಾಗೂ 6,397 ಇತರೆ ವರ್ಗಕ್ಕೆ ಸೇರಿದ ಮತದಾರರಿದ್ದಾರೆ. ಎಸ್ಸಿ, ಎಸ್ಟಿ ಹಾಗೂ ಗೊಲ್ಲ ಸಮುದಾಯದ ಮತಗಳೇ ಇಲ್ಲಿ ನಿರ್ಣಾಯಕ.

ಇಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ನೇರ ಪೈಪೋಟಿಯಿದೆ. ಬಿಜೆಪಿ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಹ ಸ್ಥಿತಿಯಲ್ಲಿದೆ. ಪಕ್ಷವು ಕೃಷ್ಣ ನಾಯಕ್‌ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ ನಿಂದ ಬೋವಿ ಸಮಯದಾಯಕ್ಕೆ ಸೇರಿದ ಎಚ್.ವಿ ವೆಂಕಟೇಶ್‌ ಸ್ಪರ್ಧಿಸಿದ್ದಾರೆ. ಹಾಲಿ ಶಾಸಕ ವೆಂಕಟರಮಣಪ್ಪ ಪುತ್ರರಾಗಿರುವ ಎಚ್.ವಿ.ವೆಂಕಟೇಶ್‌ ಅಪ್ಪನ ಅಭಿವೃದ್ಧಿ ಕೆಲಸ ಹಾಗೂ ರಾಜಕೀಯ ತಂತ್ರಗಾರಿಕೆಯ ಆಧಾರದಲ್ಲಿ ಗೆಲುವಿನ ದಡ ಮುಟ್ಟುವ ತವಕದಲ್ಲಿದ್ದಾರೆ.

ಇನ್ನು ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಕೆ.ಎಂ.ತಿಮ್ಮರಾಯಪ್ಪ ಈಗಾಗಲೇ ಎರಡು ಸಲ ಶಾಸಕರಾಗಿದ್ದಾರೆ. ಎಸ್ಸಿ ಸಮುದಾಯದವರಾಗಿರುವ ತಿಮ್ಮರಾಯಪ್ಪ, ಎಸ್‌ಸಿ, ಎಸ್ಟಿ ಮತಗಳ ಜೊತೆಗೆ ಜೆಡಿಎಸ್‌ನ ಮತಬ್ಯಾಂಕ್ ಒಕ್ಕಲಿಗ ಮತಗಳನ್ನ ಪಡೆದು ಗೆಲ್ಲುವ ಆಲೋಚನೆಯಲ್ಲಿದ್ದಾರೆ. ಹೀಗಾಗಿ ಇಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ.

ಕಳೆದ ಬಾರಿಯ ಫಲಿತಾಂಶ ಏನು?
ವೆಂಕಟರಮಣಪ್ಪ (ಕಾಂಗ್ರೆಸ್): 72, 974- ತಿಮ್ಮರಾಯಪ್ಪ (ಜೆಡಿಎಸ್) : 72, 565 – ಗೆಲುವಿನ ಅಂತರ: 409

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕೈ ಮತ್ತು ಕಮಲದ ನಡುವೆ ನೇರ ಪೈಪೋಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

CBSE Exam Results: ಸಿಬಿಎಸ್‌ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ

CBSE Exam Results: ಸಿಬಿಎಸ್‌ಸಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ.

VISTARANEWS.COM


on

Edited by

Bengalurus CBSE class 12 topper SS Akanksh felicitated
Koo

ಬೆಂಗಳೂರು: ಸಿಬಿಎಸ್‌ಸಿ ದ್ವಿತೀಯ ಪಿಯುಸಿ ಪರೀಕ್ಷೆಯ (CBSE Exam Results) ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಉತ್ತಮ ಸಾಮರ್ಥ್ಯ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರನ್ನು ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಶಾಲೆಯಿಂದ ಸನ್ಮಾನಿಸಲಾಯಿತು.

ನಗರದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಜಯ್ ಕಿರಣ್ ಗ್ರೂಪ್ ಆಫ್ ಇನ್ಸ್‌ಟಿಟ್ಯೂಷನ್ಸ್‌ನ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ. ಎನ್. ವಿಜಯ ಕುಮಾರ್ ಮಾತನಾಡಿ, ಎಲ್ಲಾ ವಿಭಾಗಗಳಲ್ಲೂ ವಿದ್ಯಾರ್ಥಿಗಳ ಸಾಧನೆ ಗಣನೀಯವಾಗಿ ಹೆಚ್ಚಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಅತ್ಯುತ್ತಮ ರೀತಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ. ಸಿಬಿಎಸ್‌ಸಿ ವಿದ್ಯಾರ್ಥಿಗಳಿಗೆ ಬಹುಬೇಗ ತರಗತಿಗಳನ್ನು ಆರಂಭಿಸಿ ಡಿಸೆಂಬರ್ ವೇಳೆಗೆ ಪಠ್ಯ ಕ್ರಮ ಪೂರ್ಣಗೊಳಿಸುತ್ತೇವೆ. ಆ ನಂತರ ಪರೀಕ್ಷೆಗೆ ಸಜ್ಜುಗೊಳಿಸುತ್ತೇವೆ ಎಂದರು.

ಶಿಕ್ಷಣದ ಇತ್ತೀಚಿನ ಪರಿಕಲ್ಪನೆ, ಆಧುನಿಕ ತಂತ್ರಜ್ಞಾನ ಕುರಿತು ಶಿಕ್ಷಣಕರಿಗೆ ವ್ಯಾಪಕ ತರಬೇತಿ ನೀಡುತ್ತಿದ್ದು, ಇದಕ್ಕಾಗಿಯೇ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಇದನ್ನೂ ಓದಿ | Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕಿರಣ್, ಮುಖ್ಯ ಕಾರ್ಯಾಚರಣೆ ಅಧಿಕಾರಿ ಸುನಾಲಿನಿ ಬೆಂಜಮಿನ್ ಮತ್ತಿತರರು ಭಾಗವಹಿಸಿದ್ದರು.

Continue Reading

ಕರ್ನಾಟಕ

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ ಸರ್ಕಾರ ಟೇಕಾಫ್‌ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.

VISTARANEWS.COM


on

Edited by

Siddaramaiah
Koo

ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್‌ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.

ಹೌದು, ಎಂ.ಸಿ.ಸುಧಾಕರ್‌ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್‌ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್‌.ಕೆ.ಪಾಟೀಲ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ

Karnataka Ministers List

ಮೂಲ-ವಲಸಿಗ ಜಗಳ

ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ಸಚಿವ ಸ್ಥಾನ ಮಿಸ್‌ ಆದ ಕುರಿತು ಮಾತನಾಡಿದ ಹರಿಪ್ರಸಾದ್‌, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನೌಕರರು ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

Edited by

Government employees with CM Siddaramaiah
Koo

ಬೆಂಗಳೂರು: ಶೇ.4 ತುಟ್ಟಿಭತ್ಯೆ (DA Hike) ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿ ಆರ್ಥಿಕ ಇಲಾಖೆಗೆ ರವಾನಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿ ವಿವಿಧ ಪದಾಧಿಕಾರಿಗಳು, ನಗರದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | 7th Pay Commission : ವೇತನ ಆಯೋಗದ ಮಹತ್ವದ ಸಭೆ; ನೌಕರರ ಬೇಡಿಕೆ ಮಂಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ

ಇದೇ ವೇಳೆ ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಆರ್ಥಿಕ ಇಲಾಖೆಯಿಂದ ಸೋಮವಾರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಸಿಎಂಗೆ ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗೆಯೇ ರಾಜ್ಯದ ಶಿಕ್ಷಕರ ಜ್ವಲಂತ ಸಮಸ್ಯೆಗಳಾದ ವರ್ಗಾವಣೆ ಇನ್ನಿತರ ಸಮಸ್ಯೆಗಳ ಬಗ್ಗೆ ಕೂಡ ಪದಾಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ.

Continue Reading

ಕರ್ನಾಟಕ

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

New Parliament Building: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿರುವ ಮೂಲಕ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.

VISTARANEWS.COM


on

Edited by

MLA N Ravikumar
Koo

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಮೇ 28ರಂದು ನವದೆಹಲಿಯಲ್ಲಿ ನೂತನ ಸಂಸತ್ ಭವನವನ್ನು ಕೇಂದ್ರ ಸರ್ಕಾರವು ಉದ್ಘಾಟನೆ (New Parliament Building) ಮಾಡುತ್ತಿದೆ. ಆದರೆ, ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ ಅವರ ಜನ್ಮದಿನದಂದು ನೂತನ ಸಂಸತ್ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಹಲವು ನಾಯಕರು ಸಂಸತ್ತಿನಲ್ಲಿ ಕುಳಿತು ದೇಶವನ್ನು ಮುನ್ನಡೆಸಬೇಕಿತ್ತು, ವಿಪರ್ಯಾಸವೆಂದರೆ ನೆಹರು ಕುಟುಂಬಸ್ಥರು ಇಡೀ ದೇಶವನ್ನೇ ತಮ್ಮ ಕುಟುಂಬದ ಸುಪರ್ದಿಗೆ ನೀಡುವ ಮೂಲಕ ಸಂಸತ್ತನ್ನು ತಮ್ಮ ಕುಟುಂಬಕ್ಕೆ ಸೀಮಿತ ಮಾಡಿಬಿಟ್ಟರು ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಯ ಬಗ್ಗೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಕಾಂಗ್ರೆಸ್, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಈ ಹಿಂದೆ 1987ರಲ್ಲಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸತ್ತಿನ ನೂತನ ಗ್ರಂಥಾಲಯ ಉದ್ಘಾಟನೆಯನ್ನು ಅವರೇ ಮಾಡಿದ್ದರು, ಅಂದಿನ ರಾಷ್ಟ್ರಪತಿಗಳಿಗೆ ಕೂಡ ಆಹ್ವಾನವಿರಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್‌ ಭವನ

ಇನ್ನು 2010ರಲ್ಲಿ ಸೋನಿಯಾ ಗಾಂಧಿ ಅವರು ‘ಅಟಲ್ ಟನೆಲ್’ಗೆ ಭೂಮಿ ಪೂಜೆ ಮಾಡಿದ್ದರು. ಕೇಂದ್ರ ಸರ್ಕಾರದ ಯೋಜನೆಯೊಂದಕ್ಕೆ ಭೂಮಿ ಪೂಜೆ ಮಾಡಲು ಸೋನಿಯಾ ಗಾಂಧಿ ಯಾಕೆ ಬರಬೇಕಿತ್ತು? 2009ರಲ್ಲಿ ಮುಂಬೈ ನಗರದ ‘ಬಾಂದ್ರಾ ಮತ್ತು ವರ್ಲಿ’ ಸೀ ಲಿಂಕ್ ಉದ್ಘಾಟನೆಯನ್ನು ಸೋನಿಯಾ ಗಾಂಧಿ ಅವರು ಮಾಡಿದ್ದರು. ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಅಷ್ಟೂ ಯೋಜನೆಗಳಿಗೆ ತಮ್ಮ ಕುಟುಂಬ ಸದಸ್ಯರ ಹೆಸರನ್ನೇ ಬಳಸಿಕೊಂಡಿರುವ ನೆಹರು ಕುಟುಂಬದ ಕುಡಿಗಳು ಈಗ ಸೆಂಟ್ರಲ್ ವಿಸ್ಟಾ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಅಲ್ಲದೇ ಪಕ್ಕದ ರಾಜ್ಯವಾದ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಲ್ಲಿ ನೂತನ ಸಚಿವಾಲಯ ಉದ್ಘಾಟನೆಗೆ ತೆಲಂಗಾಣದ ‘ರಾಜ್ಯಪಾಲ’ರನ್ನೂ ಆಹ್ವಾನಿಸಿರಲಿಲ್ಲ, ಆದರೆ ಈಗ ಸೆಂಟ್ರಲ್ ವಿಸ್ಟಾ ಉದ್ಘಾಟನೆಗೆ ರಾಷ್ಟ್ರಪತಿಗಳು ಬರದಿರುವುದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

1947 ರಲ್ಲಿ ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸಿದ ಸಂದರ್ಭದಲ್ಲಿ ಮೊದಲ ಪ್ರಧಾನಮಂತ್ರಿಯಾಗಿದ್ದ ನೆಹರು ಅವರಿಗೆ ನೀಡಿದ್ದ ತಮಿಳುನಾಡಿನ ‘ಸೆಂಗೋಲ್’ ಅನ್ನು ನೂತನ ಸಂಸತ್ತಿನಲ್ಲಿ ಸ್ಪೀಕರ್ ಕುರ್ಚಿ ಬಳಿ ಇಡುತ್ತಿರುವುದು ಮತ್ತೊಂದು ವಿಶೇಷ. ಬ್ರಿಟಿಷರಿಂದ ಅಧಿಕಾರ ಹಸ್ತಾಂತರವಾಗಿದ್ದರೂ ಅವರು ಕಟ್ಟಿಸಿದ್ದ ಸಂಸತ್ತಿನಿಂದ ನಾವು ಹೊರಬಂದಿರಲಿಲ್ಲ. ಬ್ರಿಟಿಷರ ಮನಸ್ಥಿತಿಯನ್ನೇ ತೋರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯರೇ ನಿರ್ಮಾಣ ಮಾಡಿರುವ ನೂತನ ಸಂಸತ್ ಕಟ್ಟಡ ಇಷ್ಟವಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ | New Parliament Building: ಸೆಂಗೋಲ್‌ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ

ನೂತನ ಸಂಸತ್ ಭವನದ ಉದ್ಘಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ. ಆದರೆ ಇಲ್ಲಸಲ್ಲದ ನೆಪವೊಡ್ಡಿ ಸೆಂಟ್ರಲ್ ವಿಸ್ಟಾ ಉದ್ಘಾಟನೆಯ ಕಾರ್ಯಕ್ರಮವನ್ನು ಕೆಲ ವಿರೋಧ ಪಕ್ಷಗಳು ಬಹಿಷ್ಕರಿಸುವುದಾಗಿ ಹೇಳಿರುವುದು ಸರಿಯಲ್ಲ. ಸಂಸತ್ ಭವನ ಕೇವಲ ಕಟ್ಟಡವಲ್ಲಿ ಅದು ದೇಶದ ಪ್ರಜಾಪ್ರಭುತ್ವ ಎಂಬುದನ್ನು ವಿರೋಧಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.‌

Continue Reading
Advertisement
Bengalurus CBSE class 12 topper SS Akanksh felicitated
ಕರ್ನಾಟಕ5 hours ago

CBSE Exam Results: ಸಿಬಿಎಸ್‌ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ

Siddaramaiah
ಕರ್ನಾಟಕ5 hours ago

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Government employees with CM Siddaramaiah
ಕರ್ನಾಟಕ5 hours ago

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ

MLA N Ravikumar
ಕರ್ನಾಟಕ5 hours ago

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

Nissan Magnite Geza Special Edition
ಆಟೋಮೊಬೈಲ್5 hours ago

Nissan Magnite : ನಿಸ್ಸಾನ್​ ಮ್ಯಾಗ್ನೈಟ್ ಗೆಜಾ ಬೆಲೆ 7.39 ಲಕ್ಷ ರೂ.ಗಳಿಂದ ಆರಂಭ

vistara kathaspardhe prize distribution1
ಕರ್ನಾಟಕ5 hours ago

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

BCCI MEETING
ಕ್ರಿಕೆಟ್5 hours ago

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

Narendra Modi Speech At NITI Aayog Meeting
ದೇಶ5 hours ago

NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ

New parliament Building
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ

person injured in bee attack
ಕರ್ನಾಟಕ6 hours ago

Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Laxmi Hebbalkar oath taking as a minister
ಕರ್ನಾಟಕ11 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ1 day ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ4 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!