ತುಮಕೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ : ಮೂರು ಪಕ್ಷಗಳಿಗೂ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು - Vistara News

ಕರ್ನಾಟಕ

ತುಮಕೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ : ಮೂರು ಪಕ್ಷಗಳಿಗೂ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು

ತುಮಕೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕಲ್ಪತರು ನಾಡಿನಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿ ತನ್ನ ಬಿಗಿ ಹಿಡಿತ ಮುಂದುವರಿಸಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಟ್ರ್ಯಾಕ್‌ಗೆ ಮರಳಲು ಹವಣಿಸುತ್ತಿವೆ. ಜಿಲ್ಲೆಯ ಕ್ಷೇತ್ರಗಳ ಸದ್ಯದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

VISTARANEWS.COM


on

Karnataka Election 2023 tumakuru district constituency wise election analysis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Karnataka Election 2023
tumakuru district constituency 
election analysis

ಹರಿಶ್ಚಂದ್ರ ನಾಯ್ಕ, ವಿಸ್ತಾರ ನ್ಯೂಸ್, ತುಮಕೂರು
ಬೆಂಗಳೂರು ಮತ್ತು ಬೆಳಗಾವಿಯನ್ನ ಹೊರತು ಪಡಿಸಿದರೆ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನ ಹೊಂದಿರುವ ಜಿಲ್ಲೆ ತುಮಕೂರು. ಹೀಗಾಗಿಯೇ ಪ್ರಮುಖ ಮೂರೂ ಪಕ್ಷಗಳು ತುಮಕೂರು ಜಿಲ್ಲೆಯ ಮೇಲೆ ಕಣ್ಣಿಟ್ಟಿವೆ. ಕಲ್ಪತರು ನಾಡು ಎಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಜೆಡಿಎಸ್‌ನ ಭದ್ರಕೋಟೆಯಾಗಿತ್ತು. 1994ರ ವಿಧಾನಸಭಾ ಚುನಾವಣೆಯಲ್ಲಂತೂ ಬರೋಬ್ಬರಿ 9 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಮೂಲಕ ದೇವೇಗೌಡರು ಮುಖ್ಯಮಂತ್ರಿ ಪಟ್ಟಕ್ಕೇರುವಲ್ಲಿ ತುಮಕೂರು ಜಿಲ್ಲೆಯ ಮತದಾರರು ಪ್ರಮುಖ ಪಾತ್ರ ವಹಿಸಿದ್ದರು.

ಕಾಂಗ್ರೆಸ್ ಕೂಡ ಜಿಲ್ಲೆಯಲ್ಲಿ ತನ್ನ ಪ್ರಾಬಲ್ಯ ಮುಂದುವರೆಸಿಕೊಂಡು ಬಂದಿತ್ತು. ಎರಡು ದಶಕಗಳ ಹಿಂದೆ ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇದ್ದ ಪೈಪೋಟಿ ಈಗ ಬಿಜೆಪಿಯ ಸಂಘಟನೆಯ ಬಲದಿಂದಾಗಿ ತ್ರಿಕೋನ ಕಣವಾಗಿ ಬದಲಾಗಿದೆ. ಸದ್ಯದ ಬಲಾಬಲವನ್ನ ಗಮನಿಸುವುದಾದರೆ ಬಿಜೆಪಿ ಉಳಿದ ಎರಡೂ ಪ್ರಮುಖ ಪಕ್ಷಗಳಿಗಂತ ಹೆಚ್ಚು (ಉಪಚುನಾವಣೆ ಸೇರಿ ಒಟ್ಟು 5) ಸ್ಥಾನವನ್ನ ಹೊಂದಿದೆ. ಇದೇ ಹುಮ್ಮಸ್ಸಿನಲ್ಲಿ ಈ ಬಾರಿಯ (Karnataka Election 2023) ಈ ಬಾರಿಯ ಚುನಾವಣೆಯಲ್ಲಿಯೂ ಪ್ರಚಾರ ನಡೆಸುತ್ತಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಿಲ್ಲೆಯ ಮೇಲಿನ ತಮ್ಮ ಹಿಡಿತವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿವೆ.

Karnataka Election 2023
tumakuru district constituency 
election analysis

ಬಂಡಾಯ ಮತ್ತು ಪಕ್ಷಾಂತರ: ತುಮಕೂರು ನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸತತ ನಾಲ್ಕು ಬಾರಿ ಗುಬ್ಬಿ ಕ್ಷೇತ್ರದಿಂದ ವಿಧಾನಸಭಾ ಪ್ರವೇಶಿಸಿದ್ದ ಎಸ್.ಆರ್.ಶ್ರೀನಿವಾಸ್ ಜೆಡಿಎಸ್ ತೊರೆದು ಈ ಬಾರಿ ಕಾಂಗ್ರೆಸ್‌ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನು ಸಚಿವ ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್‌ಎಸ್‌ಎಸ್‌ ಕಟ್ಟಾಳು, ಮಾಜಿ ಶಾಸಕ ಕಿರಣ್ ಕುಮಾರ್ ತಮಗೆ ಟಿಕೆಟ್ ಸಿಗಲ್ಲಿಲಲ್ಲ ಎನ್ನುವುದು ಖಚಿತವಾಗುತ್ತಿದ್ದಂಥೆಯೇ ಕಾಂಗ್ರೆಸ್ ಸೇರ್ಪಡೆಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳು ಈ ಬಾರಿಯ ಚುನಾವಣೆಯಲ್ಲಿ ಗಮನಸೆಳೆಯುತ್ತಿವೆ.

ತುಮಕೂರು ನಗರ: ಇಬ್ಬರ
ಜಗಳ ಮೂರನೇಯವನಿಗೆ ಲಾಭ?

ಶೈಕ್ಷಣಿಕ ನಗರಿ ಎಂದೇ ಹೆಸರಾಗಿರುವ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಮತಗಳೇ ನಿರ್ಣಾಯಕ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಎರಡು ದಶಕಗಳ ಕಾಲ ಹಿಡಿತ ಸಾಧಿಸಿದ್ದರು. ಅವರು ಬಿಜೆಪಿ ಅಭ್ಯರ್ಥಿಯಾಗಿ 1994ರಿಂದ 2008ರವರೆಗೆ ನಾಲ್ಕು ಬಾರಿ ಗೆಲುವು ಸಾಧಿಸಿ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ಆದರೆ 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಜಿ.ಬಿ.ಜ್ಯೋತಿ ಗಣೇಶ್‌ ಸ್ಪರ್ಧಿಸಿದ್ದ ಪರಿಣಾಮ ಲಿಂಗಾಯತ ವೀರಶೈವ ಮತಗಳು ವಿಭಜನೆಗೊಂಡು ಶಿವಣ್ಣ ಮತ್ತು ಜಿ.ಬಿ.ಜ್ಯೋತಿ ಗಣೇಶ್‌ ಇಬ್ಬರೂ ಸೋಲು ಕಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಫೀಕ್ ಅಹಮದ್ ಜಯಗಳಿಸಿದ್ದರು.

2018ರ ಚುನಾವಣೆಯಲ್ಲಿ ಜಿ. ಬಿ. ಜ್ಯೋತಿ ಗಣೇಶ್‌ ಗೆಲ್ಲುವ ಮೂಲಕ ಕ್ಷೇತ್ರ ಮತ್ತೆ ಬಿಜೆಪಿ ಪಾಲಾಗಿತ್ತು. ಈ ಬಾರಿ ಬಿಜೆಪಿ ಮತ್ತೆ ಹಾಲಿ ಶಾಸಕ ಜ್ಯೋತಿ ಗಣೇಶ್‌ಗೆ ಮಣೆ ಹಾಕಿದೆ. ಹೀಗಾಗಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿದ್ದಾರೆ. ಕ್ಷೇತ್ರದಲ್ಲಿ ತನ್ನದೇ ಅಭಿಮಾನಿಗಳನ್ನು ಹೊಂದಿರುವ ಸೊಗಡು ಶಿವಣ್ಣ ಬಿಜೆಪಿಯನ್ನ ಸೋಲಿಸುವ ಪಣ ತೊಟ್ಟಿದ್ದಾರೆ. ಇದು ಬಿಜೆಪಿಗೆ ತಲೆನೋವು ತಂದಿಟ್ಟಿದೆ.

ಇತ್ತ ಕಾಂಗ್ರೆಸ್‌ ವಾಡಿಕೆಯಂತೆಯೇ ಮುಸ್ಲಿಮ್‌ ಅಭ್ಯರ್ಥಿಗೆ ಟಿಕೆಟ್‌ ನೀಡಿದ. ಕಳೆದ 40 ವರ್ಷಗಳಿಂದ ಮಾಜಿ ಶಾಸಕ ಷಫೀ ಅಹಮದ್‌ ಕುಟುಂಬಕ್ಕೆ ಕಾಂಗ್ರೆಸ್‌ 11 ಬಾರಿ ಟಿಕೆಟ್‌ ನೀಡಿತ್ತು. ಅದರಲ್ಲಿ ಮೂರು ಬಾರಿ ಕಾಂಗ್ರೆಸ್‌ ಗೆದ್ದಿತ್ತು. ಆದರೆ ಈ ಬಾರಿ ಕುಟುಂಬ ರಾಜಕಾರಣಕ್ಕೆ ಬ್ರೇಕ್‌ ಹಾಕಲಾಗಿದೆ. ಇಕ್ಬಾಲ್ ಅಹಮದ್ ಎಂಬ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್‌ ಮಣೆಹಾಕಿದೆ. ತಮ್ಮ ಕುಟುಂಕ್ಕೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡು ಮಾಜಿ ಶಾಸಕ ಷಫೀ ಅಹಮದ್ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಇನ್ನು ಕಳೆದ ಎರಡು ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದ ಎನ್.ಗೋವಿಂದರಾಜು ಈ ಬಾರಿ ಮತ್ತೊಮ್ಮೆ ಕಣದಲ್ಲಿದ್ದಾರೆ. ಅನುಕಂಪದ ಆಧಾರದ ಮೇಲೆ ಚುನಾವಣೆಯನ್ನ ಎದುರಿಸಲು ಮುಂದಾಗಿರುವ ಅವರು ಎರಡು ಪಕ್ಷಗಳಲ್ಲಿನ ಅಸಮಾಧಾನದ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೆಲ ಆಡಿಯೋ ಮತ್ತು ವಿಡಿಯೋ ತುಣುಕುಗಳಿಂದ ಗೋವಿಂದರಾಜುಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಜಿ.ಬಿ.ಜ್ಯೋತಿ ಗಣೇಶ್ (ಬಿಜೆಪಿ): 60,421 – ಎನ್.ಗೋವಿಂದರಾಜು (ಜೆಡಿಎಸ್): 55, 128 -ಗೆಲುವಿನ ಅಂತರ: 5,293

ತುಮಕೂರು ಗ್ರಾಮಾಂತರ
ಮದಗಜಗಳ ಕಾಳಗದಲ್ಲಿ
ಗೆಲ್ಲುವವರು ಯಾರು?

ತುಮಕೂರು ನಗರವನ್ನ ಸುತ್ತುವರೆದಿರುವ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳೇ ನಿರ್ಣಾಯಕ. ಈ ಕ್ಷೇತ್ರದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿಯಿದೆ. ಜೆಡಿಎಸ್‌ ಅಭ್ಯರ್ಥಿ, ಚನ್ನಿಗಪ್ಪ ಪುತ್ರ ಡಿ.ಸಿ.ಗೌರಿಶಂಕರ್ ಮತ್ತು ಬಿಜೆಪಿಯ ಸುರೇಶ್ ಗೌಡ ನಡುವಿನ ಜಿದ್ದಾಜಿದ್ದಿಗೆ ಹೆಸರುವಾಸಿಯಾರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ.

2008ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಮಧುಗಿರಿಯಿಂದ ಗೆದ್ದು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದ ಚನ್ನಿಗಪ್ಪ ಪುತ್ರ ಡಿ.ಸಿ.ಗೌರಿಶಂಕರ್ ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಎದುರು ಸೋಲು ಕಂಡಿದ್ದ ಅವರು, ನೇರವಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದ ರಾಜಕಾರಣ ಪ್ರವೇಶಿಸಿದ್ದರು. ಅಲ್ಲಿಂದ ಶುರುವಾಯ್ತು ನೋಡಿ ಮದಗಜಗಳ ಕಾಳಗ. ಸುರೇಶ್ ಗೌಡ ಎದುರು 2013ರ ಚುನಾವಣೆಯಲ್ಲಿ ಸೋತಿದ್ದ ಗೌರಿಶಂಕರ್, 2018ರ ಚುನಾವಣೆಯಲ್ಲಿ ಗೆದ್ದು ಬೀಗಿದ್ದರು.

ಆದರೆ, ಚುನಾವಣೆ ವೇಳೆ ಗೌರಿಶಂಕರ್ ಜನರಿಗೆ ನಕಲಿ ವಿಮಾ ಬಾಂಡ್‌ಗಳನ್ನು ವಿತರಿಸಿದ್ದಾರೆ. ಈ ಮೂಲಕ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ, ಅವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಂತೆ ಹೈಕೋರ್ಟ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದೆ. ಇದರಿಂದ ಗೌರಿಶಂಕರ್ ರಾಜಕೀಯ ಜೀವನಕ್ಕೇ ಕುತ್ತು ಬರುವ ಸಾಧ್ಯತೆ ಇತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಗೌರಿಶಂಕರ್ 2023ರ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವ ಆದೇಶ ನೀಡಿದೆ. ಇದರಿಂದ ಗೌರಿಶಂಕರ್ ಸ್ವಲ್ಪ ನಿರಾಳರಾಗಿದ್ದಾರೆ.

ಇನ್ನು ಇದೇ ಕ್ಷೇತ್ರದಿಂದ ಸತತವಾಗಿ ಎರಡು ಬಾರಿ ಶಾಸಕರಾಗಿರುವ ಬಿಜೆಪಿ ಸುರೇಶ್‌ ಗೌಡ ಕ್ಷೇತ್ರದ ತುಂಬಾ ಸಾಕಷ್ಟು ಓಡಾಟ ನಡೆಸಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದ್ದ ಸುರೇಶ್‌ ಗೌಡ ಈ ಬಾರಿ ಗೆಲ್ಲಲೇಬೇಕು ಎಂದು ವಿವಿಧ ಕಸರತ್ತು ನಡೆಸಿದ್ದಾರೆ. ಸಮಾವೇಶಗಳ ಮೇಲೆ ಸಮಾವೇಶಗಳನ್ನ ಮಾಡುತ್ತಾ, ರಾಜ್ಯ, ರಾಷ್ಟ್ರೀಯ ನಾಯಕರ ಮೂಲಕ ಪ್ರಚಾರ ನಡೆಸುತ್ತಾ ಮತದಾರರ ಮನವೊಲಿಕೆಗೆ ಮುಂದಾಗಿದ್ದಾರೆ.

ಹೈ ಕೋರ್ಟ್‌ ತೀರ್ಪಿನ ಬಳಿಕ ಕೊಂಚ ಹಿನ್ನಡೆ ಅನುಭವಿಸಿರುವ ಗೌರಿಶಂಕರ್‌ ಕೂಡ ಕ್ಷೇತ್ರದಲ್ಲಿ ತಮ್ಮದೇ ಆದ ಕಾರ್ಯಪಡೆ ಹೊಂದಿದ್ದಾರೆ. ಕೊರೊನಾ ಸಂದರ್ಭದ ಸೇವೆ ಹಾಗೂ ಅಭಿವೃದ್ಧಿ ಆಧಾರದ ಮೇಲೆ ಮತಯಾಚನೆಗೆ ಮುಂದಾಗಿದ್ದಾರೆ. ಈ ಮದಗಜಗಳ ಕಾಳಗದಲ್ಲಿ ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಕಾದುನೋಡಬೇಕಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಿ.ಸಿ.ಗೌರಿಶಂಕರ್ (ಜೆಡಿಎಸ್): 82,740- ಸುರೇಶ್ ಗೌಡ (ಬಿಜೆಪಿ): 77, 100- ಗೆಲುವಿನ ಅಂತರ: 5,640

ಚಿಕ್ಕನಾಯಕನಹಳ್ಳಿ:
ತ್ರಿಕೋನ ಸ್ಪರ್ಧೆ

ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಲಿಂಗಾಯತ, ಕುರುಬ ಹಾಗೂ ಎಸ್ಸಿ, ಎಸ್ಟಿ ಮತಗಳೇ ಹೆಚ್ಚು ನಿರ್ಣಾಯಕ. ಈ ಕ್ಷೇತ್ರದ ರಾಜಕೀಯ ಇತಿಹಾಸವನ್ನ ನೋಡುವುದಾದರೆ, ಎರಡು ಚುನಾವಣೆಗಳನ್ನ ಹೊರತುಪಡಿಸಿದರೆ, ಒಬ್ಬ ಅಭ್ಯರ್ಥಿ ನಿರಂತರವಾಗಿ ಎರಡು ಅವಧಿಗೆ ಗೆದ್ದ ಉದಾಹರಣೆ ಇಲ್ಲ. ಸಚಿವ ಮಾಧುಸ್ವಾಮಿ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ ಪಕ್ಷ ಯಾವುದು ಅನ್ನೋದಕ್ಕಿಂತ ಹೆಚ್ಚಾಗಿ ವ್ಯಕ್ತಿಯ ವರ್ಚಸ್ಸಿನ ಆಧಾರದ ಮೇಲೆ ರಾಜಕೀಯ ನಡೆಯಲಿದೆ.

ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಸುರೇಶ್‌ ಬಾಬು ಕುರುಬ ಸಮುದಾಯಕ್ಕೆ ಸೇರಿದವರಾದರೆ, ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಮಾಧುಸ್ವಾಮಿ ಮತ್ತು ಕಿರಣ್‌ ಕುಮಾರ್‌ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಆದರೆ ಲಿಂಗಾಯತ ಸಮುದಾಯದ ಮಾಧುಸ್ವಾಮಿ ವಿರುದ್ಧ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದೆ. ಜೊತೆಗೆ ಈ ಕ್ಷೇತ್ರದಲ್ಲಿ ಲಿಂಗಾಯತರಷ್ಟೇ ಪ್ರಬಲರಾಗಿರುವ ಕುರುಬರು ಮತ್ತು ಮುಸ್ಲಿಮರು ಮಾಧುಸ್ವಾಮಿಗೆ ತಿರುಗೇಟು ನೀಡಲು ರೆಡಿಯಾಗಿದ್ದಾರೆ. ಇವೆಲ್ಲ ಈ ಬಾರಿಯ ಚುನಾವಣಾ ಕಣದಲ್ಲಿ ಪ್ರತಿಫಲನಗೊಳ್ಳಲಿವೆ ಎನ್ನಲಾಗುತ್ತಿದೆ.

ಇನ್ನು ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಕಿರಣ್ ಕುಮಾರ್ ಮೂಲತಃ ಬಿಜೆಪಿಯವರು. ಆರ್‌ಎಸ್‌ಎಸ್‌ ಕಟ್ಟಾಳು. ಬಿಜೆಪಿಯಿಂದಲೇ ಒಂದು ಬಾರಿ ಪಕ್ಕದ ಕಳ್ಳಂಬೆಳ್ಳ ಕ್ಷೇತ್ರದಿಂದ ಶಾಸಕರಾಗಿದ್ದವರು. ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕಿರಣ್ ಕುಮಾರ್, ತಮಗೆ ಟಿಕೆಟ್ ಸಿಗುವುದಿಲ್ಲ ಅನ್ನುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಸೇರ್ಪಡೆಗೊಂಡು ಪಕ್ಷದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮೂಲ ಬಿಜೆಪಿ ಕಾರ್ಯಕರ್ತರು ಕಿರಣ್ ಕುಮಾರ್‌ಗೆ ಬೆಂಬಲ ನೀಡುವ ಸಾಧ್ಯೆತೆಗಳಿವೆ. ಮಾಧುಸ್ವಾಮಿ ಮತ್ತು ಕಿರಣ್‌ಕುಮಾರ್‌ ನಡುವಿನ ಪೈಪೋಟಿ ಜೆಡಿಎಸ್‌ ಸುರೇಶ್ ಬಾಬುಗೆ ಲಾಭ ತಂದುಕೊಡುವ ಸಾಧ್ಯತೆಯೂ ಇದೆ.

ಕಳೆದ ಬಾರಿಯ ಫಲಿತಾಂಶ ಏನು?
ಜೆ.ಸಿ.ಮಾಧುಸ್ವಾಮಿ (ಬಿಜೆಪಿ) : 69,612 – ಸಿ.ಬಿ.ಸುರೇಶ್ ಬಾಬು (ಜೆಡಿಎಸ್): 59,335- ಗೆಲುವಿನ ಅಂತರ: 10,227

ತುರುವೇಕೆರೆ: ಬಿಜೆಪಿ
ಜೆಡಿಎಸ್‌ ನಡುವೆ ಪೈಪೋಟಿ

‌ತೆಂಗು ಮತ್ತು ಅಡಿಕೆ ಬೆಳೆಗಾರರೇ ಹೆಚ್ಚಿರುವ ತುರುವೇಕೆರೆ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯಕ. ಹೀಗಾಗಿ ಮೂರೂ ಪ್ರಮುಖ ಪಕ್ಷಗಳು ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸಿವೆ. ಜೆಡಿಎಸ್‌ನಿಂದ ಹ್ಯಾಟ್ರಿಕ್ ಹೀರೋ ಎಂದೇ ಖ್ಯಾತಿ ಪಡೆದಿರುವ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಕಣದಲ್ಲಿದ್ದರೆ, ಬಿಜೆಪಿಯಿಂದ ಹಾಲಿ ಶಾಸಕ ಮಸಾಲೆ ಜಯರಾಂ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ, ನೆಲಮಂಗಲ ಮೂಲದ ಬೆಮೆಲ್ ಕಾಂತರಾಜು ಸ್ಪರ್ಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಇದು ತಮ್ಮ ಕೊನೆಯ ಚುನಾವಣೆ ಎನ್ನುವ ಅನುಕಂಪದ ಅಸ್ತ್ರ ಪ್ರಯೋಗಿಸಿ ಮತದಾರರನ್ನ ಸೆಳೆಯುವ ಪ್ರಯತ್ನಸುತ್ತಿದ್ದಾರೆ.

ಬಿಜೆಪಿಯ ಮಸಾಲೆ ಜಯರಾಂ ತಾವು ಮಾಡಿರುವ ಅಭಿವೃದ್ಧಿ ಕೆಲಸ ಮತ್ತು ಸಜ್ಜನ ರಾಜಕಾರಣಿ ಅನ್ನುವ ಹಣೆಪಟ್ಟಿ ತಮಗೆ ನೆರವಾಗುತ್ತೆ ಅನ್ನೋ ಆಲೋಚನೆಯಲ್ಲಿದ್ದಾರೆ. ಇನ್ನು ಇವರಿಬ್ಬರಿಗೆ ಪ್ರಬಲ ಸ್ಪರ್ಧೆಯೊಡ್ಡಲು ಕಾಂಗ್ರೆಸ್‌ನ ಬೆಮೆಲ್ ಕಾಂತರಾಜು ಕಸರತ್ತು ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಭಾರತ್ ಜೋಡೋ ಯಾತ್ರೆಯನ್ನ ಯಶಸ್ವಿಗೊಳಿಸಿರೋ ಹುಮ್ಮಸ್ಸಿನಲ್ಲಿ ಕಾಂತರಾಜು ಕಾರ್ಯಪ್ರವೃತ್ತರಾಗಿದ್ದಾರೆ.

ಕ್ಷೇತ್ರದ ಕೆರೆಗಳಿಗೆ ಹೇಮಾವತಿ ನೀರು ಹರಿಸುವ ವಿಚಾರವೂ ಕೂಡ ಚುನಾವಣೆ ಪ್ರಚಾರದ ಪ್ರಮುಖ ವಿಷಯವಾಗಿದೆ. ಸದ್ಯದ ಚಿತ್ರಣವನ್ನ ನೋಡಿದ್ರೆ ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಇರೋದು ಸ್ಪಷ್ಟವಾಗುತ್ತಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಮಸಾಲೆ ಜಯರಾಂ (ಬಿಜೆಪಿ): 60,710- ಎಂ.ಟಿ. ಕೃಷ್ಣಪ್ಪ (ಜೆಡಿಎಸ್): 58,661- ಗೆಲುವಿನ ಅಂತರ: 2,049

ತಿಪಟೂರು : ಇತಿಹಾಸ
ಬದಲಿಸಿಯಾರೇ ನಾಗೇಶ್‌?

ಕೊಬ್ಬರಿ ಬೆಳೆಗೆ ಹೆಸರುವಾಸಿಯಾಗಿರುವ ತಿಪಟೂರು ಪ್ರಜ್ಞಾವಂತ ಮತದಾರರನ್ನ ಹೊಂದಿರುವ ಕ್ಷೇತ್ರ. ಏಕೆಂದರೆ 1962ರಿಂದೀಚೆಗೆ ಈ ಕ್ಷೇತ್ರದಲ್ಲಿ ಒಮ್ಮೆ ಶಾಸಕರಾಗಿದ್ದವರು ಸತತ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದ ಉದಾಹರಣೆಯೇ ಇಲ್ಲ. 2018ರಲ್ಲಿ ಗೆಲುವು ಸಾಧಿಸಿ, ಹಾಲಿ ಸಚಿವರೂ ಆಗಿರುವ ಬಿ.ಸಿ.ನಾಗೇಶ್ ಈ ಸಂಪ್ರದಾಯವನ್ನ ಮುರಿಯುವ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಅದು ಅಷ್ಟು ಸುಲಭವಲ್ಲ.

ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿರುವ ಬಿ.ಸಿ.ನಾಗೇಶ್ ಈ ಬಾರಿ ಮತ್ತೊಮ್ಮೆ ಬಿಜೆಪಿಯ ಹುರಿಯಾಳಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಶಾಸಕ, ಲಿಂಗಾಯತ ಸಮುದಾಯದ ಷಡಕ್ಷರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದ ಒಕ್ಕಲಿಗ ಸಮುದಾಯದ ಕೆ.ಟಿ.ಶಾಂತಕುಮಾರ್, ಬಿಜೆಪಿ, ಕಾಂಗ್ರೆಸ್‌ನಲ್ಲಿ ಓಡಾಡಿ ಕೊನೆಗೆ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸುತ್ತಿದ್ದಾರೆ.

ಮೇಲ್ನೋಟಕ್ಕೆ ಮೂರು ಪಕ್ಷಗಳ ಅಭ್ಯರ್ಥಿಗಳ ನಡುವೆ ಪ್ರಬಲ ಪೈಪೋಟಿ ಕಂಡುಬರುತ್ತಿದೆ. ಆದರೆ ಬಿ. ಸಿ. ನಾಗೇಶ್‌ಗೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ತಿಪಟೂರು ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಕಳೆದ ಚುನಾವಣೆಯಲ್ಲಿ ತಮ್ಮ ಸಮುದಾಯದ ಸರ್ವೋಚ್ಛ ನಾಯಕ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿ ಅನ್ನುವ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿ, ಬ್ರಾಹ್ಮಣ ಸಮುದಾಯದ ಬಿ. ಸಿ. ನಾಗೇಶ್‌ ಅವರನ್ನು ಈ ಸಮುದಾಯ ಬೆಂಬಲಿಸಿತ್ತು. ಆದರೆ ಈ ಬಾರಿ ಈ ಸಾಧ್ಯತೆ ಕಡಿಮೆ. ಯಾಕೆಂದರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಷಡಕ್ಷರಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಇದು ತಮ್ಮ ಕೊನೆಯ ಚುನಾವಣೆ ಎಂದೇ ಷಡಕ್ಷರಿ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಈ ಬಾರಿ ಲಿಂಗಾಯತರು ತಮ್ಮ ಸಮುದಾಯದ ಷಡಕ್ಷರಿಯ ಕೈ ಹಿಡಿಯುವ ಸಾಧ್ಯತೆಯಿದೆ. ಜೆಡಿಎಸ್‌ ಅಭ್ಯರ್ಥಿ ಕೆ.ಟಿ.ಶಾಂತಕುಮಾರ್ ಕೂಡ ಈ ಇಬ್ಬರು ಘಟಾನುಘಟಿಗಳಿಗೆ ಟಫ್ ಫೈಟ್ ಕೊಡುವ ಪ್ರಯತ್ನದಲ್ಲಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಬಿ.ಸಿ.ನಾಗೇಶ್ (ಬಿಜೆಪಿ): 61,383- ಷಡಕ್ಷರಿ (ಕಾಂಗ್ರೆಸ್): 35,820- ಗೆಲುವಿನ ಅಂತರ: 25,563

ಕುಣಿಗಲ್‌: ಬಿಜೆಪಿ ಗೆಲುವಿನ
ಓಟಕ್ಕೆ ಕಾಂಗ್ರೆಸ್‌, ಜೆಡಿಎಸ್‌
ಅಡ್ಡಗಾಲು

ತುಮಕೂರು ಜಿಲ್ಲೆಗೆ ಸೇರಿರುವ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕುಣಿಗಲ್, ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ. ಕಳೆದ ಮೂರೂ ಚುನಾವಣೆಗಳಲ್ಲಿ ಇಲ್ಲಿ ರನ್ನರ್ ಅಪ್ ಸ್ಥಾನದಲ್ಲಿದ್ದ ಬಿಜೆಪಿ, ಈ ಬಾರಿ ಗೆದ್ದು ಇತಿಹಾಸ ಬರೆಯುವ ತವಕದಲ್ಲಿದೆ. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಬಿಜೆಪಿ ಆಸೆಗೆ ತಣ್ಣೀರೆರಚುವ ಪ್ರಯತ್ನದಲ್ಲಿವೆ.

ಕಳೆದ ಮೂರೂ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಲುಂಡಿದ್ದ, ರಾಜ್ಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಡಿ.ಕೃಷ್ಣಕುಮಾರ್ ಸತತ ನಾಲ್ಕನೇ ಬಾರಿಗೆ ಬಿಜೆಪಿ ಟಿಕೆಟ್ ಪಡೆದು ಕಣದಲ್ಲಿದ್ದಾರೆ. ಬಿಜೆಪಿ ಟಿಕೆಟ್‌ಗೆ ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಅವರಿಂದ ತೀವ್ರ ಪೈಪೋಟಿ ನಡೆಸಿದ್ದರು. ಆದರೆ ಕೊನೆಯ ಪ್ರಯತ್ನ ಅನ್ನೋ ನೆಪದಲ್ಲಿ ಕೃಷ್ಣಕುಮಾರ್‌ಗೆ ಟಿಕೆಟ್ ಲಭಿಸಿದೆ.

ಕಾಂಗ್ರೆಸ್‌ನಿಂದ ಹಾಲಿ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಮತ್ತೆ ಅಭ್ಯರ್ಥಿಯಾಗಿದ್ದಾರೆ. ಇನ್ನು ಜೆಡಿಎಸ್‌ನಿಂದ ಮಾಜಿ ಸಚಿವ ಡಿ. ನಾಗರಾಜಯ್ಯ ಪುತ್ರ, ಡಾ.ರವಿಬಾಬು ಕಣಕ್ಕಿಳಿದಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿಯಿಂದ ಕಳೆದ ಮೂರು ಚುನಾವಣೆಗಳಲ್ಲಿ ಸಹೋದರರಾದ ಡಿ.ನಾಗರಾಜಯ್ಯ ಮತ್ತು ಡಿ.ಕೃಷ್ಣಕುಮಾರ್ ಕಣಕ್ಕಿಳಿಯುತ್ತಿದ್ದರು. ಇದರಿಂದ ಮತವಿಭಜನೆಯಾಗುತ್ತಿತ್ತು. ಎರಡು ಬಾರಿ ಕಾಂಗ್ರೆಸ್ ಇದರ ಲಾಭ ಪಡೆದಿತ್ತು. ಆದರೆ ಈ ಬಾರಿ ಬಿಜೆಪಿಯಿಂದ ಚಿಕ್ಕಪ್ಪ ಡಿ.ಕೃಷ್ಣಕುಮಾರ್ ಮತ್ತು ಜೆಡಿಎಸ್‌ನಿಂದ ಅವರ ಅಣ್ಣನ ಮಗ ಡಾ.ರವಿಬಾಬು ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಡಿ. ಕೃಷ್ಣಕುಮಾರ್‌ಗೆ ಮೂರು ಬಾರಿ ಸೋತಿರುವ ಅನುಕಂಪವಿದೆ. ಬಿಜೆಪಿಯಿಂದ ಬಂಡಾಯವೆದ್ದಿದ್ದ ರಾಜೇಶ್ ಗೌಡ ಕೂಡ ಕಣದಿಂದ ಹಿಂದೆ ಸರಿದಿದ್ದಾರೆ. ಅಸಮಾಧಾನಗೊಂಡಿದ್ದ ಮುದ್ದಹನುಮೇಗೌಡ ಕೂಡ ಕೃಷ್ಣಕುಮಾರ್‌ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್‌ನ ಶಾಸಕ ಬಿ. ಬಿ. ರಾಮಸ್ವಾಮಿಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದು ಪಕ್ಷಕ್ಕೆ ತಲೆನೋವು ತಂದಿದೆ. ಇತ್ತ ಜೆಡಿಎಸ್ ಗೆ ನಾಗರಾಜಯ್ಯ ಬದಲು ಅವರ ಪುತ್ರ ಕಣಕ್ಕಿಳಿದಿರುವುದರಿಂದ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಾ.ರಂಗನಾಥ್ (ಕಾಂಗ್ರೆಸ್) : 58, 697- ಡಿ.ನಾಗರಾಜಯ್ಯ (ಜೆಡಿಎಸ್): 53,097 -ಗೆಲುವಿನ ಅಂತರ: 5,600

ಗುಬ್ಬಿಯಲ್ಲೂ
ತ್ರಿಕೋನ ಸ್ಪರ್ಧೆ

ಗುಬ್ಬಿ ಕ್ಷೇತ್ರದಲ್ಲಿ ಲಿಂಗಾಯತರ ಪ್ರಾಬಲ್ಯವಿದೆ. ನಂತರದ ಸ್ಥಾನದಲ್ಲಿ ಒಕ್ಕಲಿಗ, ಗೊಲ್ಲ, ತಿಗಳ ಸಮುದಾಯ ದವರಿದ್ದಾರೆ. ಈವರೆಗೂ ಲಿಂಗಾಯಿತ ಹಾಗೂ ಒಕ್ಕಲಿಗ ಸಮುದಾಯದವರೇ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ. ಯಾರೇ ಸ್ಪರ್ಧಿಸಿದರೂ ಪ್ರಬಲ ಸಮುದಾಯಗಳ ಜತೆಗೆ ಹಿಂದುಳಿದ, ಪರಿಶಿಷ್ಟರ ಮತಗಳನ್ನು ಪಡೆದುಕೊಂಡವರಿಗೆ ಗೆಲುವಿನ ಬಾಗಿಲು ತೆರೆಯಲಿದೆ.

ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ ಜೆಡಿಎಸ್‌ಗೆ ಸೆಡ್ಡು ಹೊಡೆದು ಪಕ್ಷದಿಂದ ಉಚ್ಛಾಟನೆಯಾಗಿರುವ ಎಸ್‌.ಆರ್‌.ಶ್ರೀನಿವಾಸ್‌ ಅವರಿಂದಾಗಿ ಗುಬ್ಬಿ ವಿಧಾನಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದ ಎಸ್.ಆರ್.ಶ್ರೀನಿವಾಸ್, ಬಳಿಕ ಹಿಂದಿರುಗಿ ನೋಡಿಲ್ಲ. 2008, 2013, 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. ಸತತ 4 ಗೆಲುವು ಕಂಡಿರುವ ಶ್ರೀನಿವಾಸ್‌, ಕಾಂಗ್ರೆಸ್‌ ಭದ್ರಕೋಟೆಯಂತಿದ್ದ ಗುಬ್ಬಿ ಕ್ಷೇತ್ರವನ್ನು ಜೆಡಿಎಸ್‌ ಅಭೇದ್ಯ ಕೋಟೆ ಮಾಡಿದ್ದರು. ಆದರೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರು ಜೆಡಿಎಸ್‌ ಗೂಡು ತೊರೆದು ಕಾಂಗ್ರೆಸ್‌ ಸೇರಿ ಸ್ಪರ್ಧಿಸುತ್ತಿದ್ದಾರೆ.

ಸತತ ನಾಲ್ಕು ಬಾರಿಯ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಒಕ್ಕಲಿಗರು. ಇಲ್ಲಿಯವರೆಗೆ ಲಿಂಗಾಯತ ಸಮುದಾಯದ ಮುಖಂಡರು ಇವರಿಗೆ ಸರಿಯಾದ ಪೈಪೋಟಿ ನೀಡಿಲ್ಲ. 2004ರಲ್ಲಿ ಎಸ್.ಆರ್.ಶ್ರೀನಿವಾಸ್ ಪಕ್ಷೇತರ ಅಭ್ಯರ್ಥಿಯಾಗಿ ಲಿಂಗಾಯತ ಸಮುದಾಯದ ಜೆಡಿಎಸ್‌ ಅಭ್ಯರ್ಥಿ ಜಿ.ಎಸ್‌.ಶಿವನಂಜಪ್ಪ ವಿರುದ್ಧವೇ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲಿಂದ ನಿರಂತರವಾಗಿ ಗೆಲ್ಲುತ್ತಿದ್ದಾರೆ. ಈಗ 5ನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದಾರೆ. ಈ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿರುವ ಬಿ.ಎಸ್‌. ನಾಗರಾಜು ಒಕ್ಕಲಿಗರು. ಬಿಜೆಪಿ ಪರ ಕಣಕ್ಕಿಳಿಯುತ್ತಿರುವ ದಿಲೀಪ್‌ ಕುಮಾರ್‌ ಲಿಂಗಾಯತ ಸಮುದಾಯಕ್ಕೆ ಸೇರಿದವರು.

ಇನ್ನು ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದ ಹೊನ್ನಗಿರಿ ಗೌಡ ಕೈ ತೊರೆದು ಜೆಡಿಎಸ್‌ ಸೇರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಬೆಟ್ಟಸ್ವಾಮಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಪ್ರಬಲ ಗೊಲ್ಲ ಸಮುದಾಯದ ಮುಖಂಡ ಬೆಟ್ಟಸ್ವಾಮಿ ಜೆಡಿಎಸ್‌ ಸೇರ್ಪಡೆಯಾಗಿರುವುದು ಬಿಜೆಪಿಗೆ ನುಂಗಲಾರದ ತುತ್ತಾದ್ರೆ, ಜೆಡಿಎಸ್‌ಗೆ ಈ ಇಬ್ಬರು ನಾಯಕರ ಸೇರ್ಪಡೆಯಿಂದ ದೊಡ್ಡ ಬಲ ಬಂದಂತಾಗಿದೆ.

ಕಳೆದ ಬಾರಿ ಪಕ್ಷೇತರನಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದ ದಿಲೀಪ್‌ ಕುಮಾರ್‌ ಗೆ ಈ ಬಾರಿ ಬಿಜೆಪಿ ಟಿಕೆಟ್‌ ನೀಡಲಾಗಿದೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿದ್ದ ದಿಲೀಪ್‌ ಕುಮಾರ್‌ 30 ಸಾವಿರಕ್ಕೂ ಹೆಚ್ಚು ಮತ ಪಡೆದಿದ್ದರು. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ದಿಲೀಪ್‌ ಕುಮಾರ್‌ ಈ ಬಾರಿ ಗೆಲುವು ಸಾಧಿಸಬಹುದು ಅನ್ನುವುದು ಬಿಜೆಪಿ ಲೆಕ್ಕಚಾರ. ಒಟ್ಟಾರೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಎಸ್.ಆರ್.ಶ್ರೀನಿವಾಸ್ (ಜೆಡಿಎಸ್)- 55572 ಜಿ.ಎನ್.ಬೆಟ್ಟಸ್ವಾಮಿ (ಬಿಜೆಪಿ)- 46491 ಗೆಲುವಿನ ಅಂತರ- 9081

ಇದನ್ನೂ ಓದಿ: ಹಾಸನ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಏಳು ಸುತ್ತಿನ ಕೋಟೆ ಭೇದಿಸುವವರು ಯಾರು?

ಕೊರಟಗೆರೆ : ತ್ರಿಕೋನ
ಸ್ಪರ್ಧೆಯಿಂದ ಕುತೂಹಲ

ತುಮಕೂರು ಜಿಲ್ಲೆಯಲ್ಲೇ ಅತೀ ಚಿಕ್ಕ ತಾಲ್ಲೂಕು ಕೊರಟಗೆರೆ. ಆದರೆ ಇದು ಮೊದಲಿನಿಂದಲೂ ವಿಧಾನಸಭಾ ಕ್ಷೇತ್ರವಾಗಿಯೇ ಉಳಿದುಕೊಂಡು ಬಂದಿದೆ. ಎರಡು ಬಾರಿ ಕ್ಷೇತ್ರವನ್ನು ಮೀಸಲು ಕ್ಷೇತ್ರವನ್ನಾಗಿ ಮಾಡಿದ್ದು, ಇಲ್ಲಿಂದ ಆಯ್ಕೆ ಆಗಿದ್ದ ಇಬ್ಬರು ಸಚಿವರಾಗಿದ್ದರು. ಕ್ಷೇತ್ರ ಚಿಕ್ಕದಾದರೂ ರಾಜ್ಯದ ಗಮನ ಸೆಳೆಯುತ್ತಲೇ ಬಂದಿದೆ.

ಕೊರಟಗೆರೆ ಸದ್ಯ ಎಸ್‌ಸಿ ಮೀಸಲು ಕ್ಷೇತ್ರ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಪ್ರಾಬಲ್ಯ ಹೆಚ್ಚಿದೆ. ಎಸ್‌ಸಿ ಮತಗಳಲ್ಲಿ ಮಾದಿಗ ಸಮುದಾಯದ ಮತಗಳೇ ಅಧಿಕ. ನಂತರದ ಸ್ಥಾನದಲ್ಲಿ ಲಿಂಗಾಯತರಿದ್ದಾರೆ. ಕಾಂಗ್ರೆಸ್‌ ನಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ, ಡಾ.ಜಿ.ಪರಮೇಶ್ವರ ಛಲವಾದಿ ಸಮುದಾಯಕ್ಕೆ ಸೇರಿದವರು. ಇನ್ನು ಜೆಡಿಎಸ್‌ ನ ಅಭ್ಯರ್ಥಿ ಪಿ. ಆರ್‌. ಸುಧಾಕರ್‌ಲಾಲ್‌ ಲಂಬಾಣಿ ಸಮುದಾಯದವರು. ಬಿಜೆಪಿಯಿಂದ ಕಣಕ್ಕಿಳಿದಿರುವ ಅನಿಲ್‌ ಕುಮಾರ್‌ ಪ್ರಬಲ ಮಾದಿಗ ಸಮುದಾಯದವರು. ಹೀಗಾಗಿ ಈ ಬಾರಿ ಮಾದಿಗರು ಅನಿಲ್ ಕುಮಾರ್‌ಗೆ ಬೆಂಬಲ ಸೂಚಿಸುವ ಸಾಧ್ಯತೆಯಿದೆ.

ಮಾದಿಗ ಸಮುದಾಯದ ಅನಿಲ್‌ ಕುಮಾರ್‌ ಒಕ್ಕಲಿಗ, ಲಿಂಗಾಯತ ಮತ ಬ್ಯಾಂಕ್‌ನ ಲಾಭವನ್ನೂ ಪಡೆದು ಕಾಂಗ್ರೆಸ್‌- ಜೆಡಿಎಸ್‌ಗೆ ಟಕ್ಕರ್‌ ಕೊಡುವ ಲೆಕ್ಕಾಚಾರದಲ್ಲಿದ್ದಾರೆ. ಕಳೆದ ಎರಡು ಬಾರಿ ಕಾಂಗ್ರೆಸ್- ಜೆಡಿಎಸ್ ನಡುವೆ ಮಾತ್ರ ಇದ್ದ ಜಿದ್ದಾಜಿದ್ದಿ ಈ ಬಾರಿ ಅನಿಲ್ ಕುಮಾರ್ ಎಂಟ್ರಿಯಿಂದ ತ್ರಿಕೋನ ಕದನವಾಗಿ ಬದಲಾಗಿದೆ.

2013ರ ಚುನಾವಣೆ ವೇಳೆ ಸಿಎಂ ರೇಸ್‌ನಲ್ಲಿದ್ದ ಜಿ. ಪರಮೇಶ್ವರ್‌ಗೆ ಕ್ಷೇತ್ರದ ಮತದಾರರು ಶಾಕ್ ಕೊಟ್ಟಿದ್ದರು. ಪರಮೇಶ್ವರ್ ಸೋಲುಣ್ಣುವ ಮೂಲಕ ಸಿಎಂ ಸ್ಥಾನ ಕೈತಪ್ಪಿತ್ತು. ಆದರೆ ಈ ಬಾರಿ ಮತ್ತೆ ಡಾ.ಜಿ.ಪರಮೇಶ್ವರ್ ಸದ್ದಿಲ್ಲದೇ ಸಿಎಂ ರೇಸ್‌ನಲ್ಲಿದ್ದಾರೆ. ಹಿಂದೆ ಈ ಅವಕಾಶ ಕೈತಪ್ಪಿದ್ದರ ಬಗ್ಗೆ ಮತ್ತು ಮುಂದಿನ ಬಾರಿ ಸಿಎಂ ಆಗುವ ಆಸೆಯ ಬಗ್ಗೆ ಪರಂ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ನಡುವಿನ ಜಟಾಪಟಿಯಿಂದ ಪರಮೇಶ್ವರ್ ಅವರಿಗೆ ಅದೃಷ್ಟ ಒಲಿದರೆ ಅಚ್ಚರಿಯಿಲ್ಲ ಎಂಬ ಲೆಕ್ಕಾಚಾರದ ಮಾತು ಕೂಡ ಕ್ಷೇತ್ರದಲ್ಲಿ ಓಡಾಡುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣಾಗಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಾ.ಜಿ.ಪರಮೇಶ್ವರ್ (ಕಾಂಗ್ರೆಸ್): 81,598 – ಪಿ.ಆರ್.ಸುಧಾಕರ್ ಲಾಲ್ (ಜೆಡಿಎಸ್): 73,979 – ಗೆಲುವಿನ ಅಂತರ: 7,619

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ ನೋಡಿ.

ಮಧುಗಿರಿ: ಮೂರು
ಪಕ್ಷಗಳ ನಡುವೆ
ಹಣಾಹಣಿ

ಏಷ್ಯಾದ ಅತಿ ದೊಡ್ಡ ಏಕಶಿಲಾ ಬೆಟ್ಟವನ್ನು ಹೊಂದಿರುವ ಮಧುಗಿರಿ ಕ್ಷೇತ್ರದಲ್ಲಿ ಒಕ್ಕಲಿಗ, ಎಸ್ಟಿ, ಎಸ್ಸಿ ಸಮುದಾಯಗಳ ಮತಗಳೇ ನಿರ್ಣಾಯಕ. ಈ ಕ್ಷೇತ್ರದಲ್ಲಿ ರಾಜವರ್ಧನ್ ಮತ್ತು ಡಾ.ಜಿ.ಪರಮೇಶ್ವರ್ ಸತತವಾಗಿ ಎರಡು ಬಾರಿ ಶಾಸಕರಾಗಿ, ಸಚಿವರಾಗಿರುವುದನ್ನು ಹೊರತುಪಡಿಸಿದರೆ, ಉಳಿದ ಯಾರೊಬ್ಬರೂ ಇಲ್ಲಿ ಎರಡನೇ ಅವಧಿಗೆ ಗೆದ್ದು ಬಂದಿಲ್ಲ. ಜತೆಗೆ ಸಚಿವರೂ ಆಗಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜನತಾ ಪರಿವಾರದ ಅಭ್ಯರ್ಥಿಗಳ ನಡುವೆ ಪ್ರತಿ ಚುನಾವಣೆಯಲ್ಲೂ ಜಿದ್ದಾಜಿದ್ದಿ ನಡೆಯುತ್ತಾ ಬಂದಿದೆ.

ಭಾರತೀಯ ಜನತಾ ಪಕ್ಷ ಈ ಕ್ಷೇತ್ರದಲ್ಲಿ ಇದುವರೆಗೂ ಖಾತೆಯನ್ನೇ ತೆರೆದಿಲ್ಲ. ಆದರೆ ಈ ಬಾರಿ ನಿವೃತ್ತ ಕೆಎಎಸ್ ಅಧಿಕಾರಿಯನ್ನ ಕಣಕ್ಕಿಳಿಸಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸವಾಲೊಡ್ಡಲು ಸಜ್ಜಾಗಿದೆ. ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಎಂ.ವಿ.ವೀರಭದ್ರಯ್ಯ ಒಕ್ಕಲಿಗ ಸಮುದಾಯದವರಾದರೆ, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಹಾಗೂ ಬಿ.ಜೆ.ಪಿಯ ಎಲ್.ಸಿ.ನಾಗರಾಜು ಇಬ್ಬರು ಕೂಡ ನಾಯಕ ಸಮುದಾಯಕ್ಕೆ ಸೇರಿದವರು.

ಇದುವರೆಗೂ ಕೆ.ಎನ್.ರಾಜಣ್ಣ ಮತ್ತು ವೀರಭದ್ರಯ್ಯ ನಡುವೆ ನೇರಾನೇರ ಪೈಪೋಟಿಯಿತ್ತು. ಅದರೊಟ್ಟಿಗೆ ಈಗ ಬಿಜೆಪಿ ಎಲ್.ಸಿ.ನಾಗರಾಜುಗೆ ಟಿಕೆಟ್ ಕೊಟ್ಟಿರುವುದರಿಂದ ಮೂರೂ ಪಕ್ಷಗಳ ನಡುವೆ ಹಣಾಹಣಿ ನಡೆಯಲಿದೆ.
ಹಾಲಿ ಶಾಸಕ ವೀರಭದ್ರಯ್ಯ ಅವರಿಗೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆಯಿದೆ. ಜೊತೆಗೆ ಹೆಚ್ಚಿನ ಜನಸಂಪರ್ಕವಿಲ್ಲದಿರುವುದು, ಹಿಂದೆ ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದು, ತೊಡಕಾಗುವ ಸಾಧ್ಯತೆಯಿದೆ. ಆದರೂ ಒಕ್ಕಲಿಗ ಮತಗಳು ತನ್ನ ಕೈಹಿಡಿಯುತ್ತವೆ ಎಂದು ಅವರು ನಂಬಿದ್ದಾರೆ.

ಇನ್ನು ದೇವೇಗೌಡರ ಸಾವನ್ನ ಬಯಸಿ ಮಾತನಾಡಿದ್ದ ವಿಚಾರ ಕಾಂಗ್ರೆಸ್‌ನ ಕೆ.ಎನ್.ರಾಜಣ್ಣಗೆ ಮುಳುವಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ಮಾಡಿದ್ದ ದೊಡ್ಡಗೌಡರು ರಾಜಣ್ಣ ವಿರುದ್ಧ ಭಾವನಾತ್ಮಕ ಬಾಣವನ್ನ ಬಿಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನನ್ನನ್ನ ಸೋಲಿಸಿ ನನ್ನ ಕಣ್ಣಲ್ಲಿ ನೀರು ತರಿಸಿದವರ ಕಣ್ಣಲ್ಲಿ ನೀರು ಬರಿಸಿದಾಗ ಮಾತ್ರ ನನಗೆ ಸಮಾಧಾನ ಎನ್ನುವ ಮೂಲಕ ರಾಜಣ್ಣನನ್ನ ಸೋಲಿಸಿ ಎಂಬ ಸಂದೇಶವನ್ನ ಒಕ್ಕಲಿಗ ಸಮಾಜಕ್ಕೆ ನೀಡಿದ್ದಾರೆ. ಇದರಿಂದ ಒಕ್ಕಲಿಗ ಮತಗಳು ಸಾರಾಸಗಾಟಾಗಿ ವೀರಭದ್ರಯ್ಯನವರಿಗೆ ವರ್ಗಾವಣೆಯಾದಲ್ಲಿ ಅದು ರಾಜಣ್ಣನವರಿಗೆ ಮುಳುವಾಗುವ ಸಾಧ್ಯತೆಯಿದೆ.

ಆದರೂ ತಾನು ಮಾಡಿರುವ ಅಭಿವೃದ್ಧಿ ಹಾಗೂ ಕ್ಷೇತ್ರದಲ್ಲಿ ಅಧಿಕ ಸಂಖ್ಯೆಯಲ್ಲಿರುವ ದಲಿತ ಮತ್ತು ಹಿಂದುಳಿದ ವರ್ಗದ ಮತಗಳು ತನ್ನನ್ನು ಗೆಲುವಿನ ದಡ ಸೇರಿಸುತ್ತವೆ ಎಂಬ ನಂಬಿಕೆ ರಾಜಣ್ಣ ಅವರದು. ಬಿಜೆಪಿಯ ಎಲ್.ಸಿ.ನಾಗರಾಜುರವರು ಸಾಕಷ್ಟು ಹಣ ಖರ್ಚು ಮಾಡುತ್ತಾ ಚುನಾವಣೆಗೆ ಧುಮುಕಿದ್ದಾರೆ. ಅವರು ಎಷ್ಟು ಎಸ್‌ಟಿ ಓಟುಗಳನ್ನು ಪಡೆಯುತ್ತಾರೋ ಅಷ್ಟು ರಾಜಣ್ಣನವರಿಗೆ ಡ್ಯಾಮೇಜ್ ಆಗಬಹುದು. ಆದರೆ ಅವರ ಮೇಲಿನ ಭ್ರಷ್ಟಾಚಾರದ ಆರೋಪಗಳು ಚುನಾವಣೆಯಲ್ಲಿ ಮುಖ್ಯವಾಗಿ ಚರ್ಚೆಯಾಗುವ ಸಂಭವವಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಎಂ.ವಿ.ವೀರಭದ್ರಯ್ಯ (ಜೆಡಿಎಸ್) : 88,521- ಕೆ.ಎನ್.ರಾಜಣ್ಣ (ಕಾಂಗ್ರೆಸ್): 69,947 -ಗೆಲುವಿನ ಅಂತರ: 18,574

ಶಿರಾ: ಮದಲೂರು
ಕೆರೆಯ ಸುತ್ತವೇ
ರಾಜಕೀಯ

ಹಲವು ಕ್ಷೇತ್ರಗಳಲ್ಲಿ ಜಾತಿ, ಧರ್ಮ, ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆದರೆ, ಶಿರಾದಲ್ಲಿ ನೀರಾವರಿಯ ಹೆಸರಲ್ಲಿ ರಾಜಕಾರಣ ನಡೆಯುತ್ತಾ ಬಂದಿದೆ. ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿಯಿಂದ ನೀರು ತುಂಬಿಸುವುದು ಹಲವು ವರ್ಷಗಳಿಂದ ಚುನಾವಣೆಯ ಪ್ರಮುಖ ವಿಚಾರವಾಗಿದೆ. ಈ ಕೆರೆಗೆ ನೀರು ಬಂದರೆ ಹತ್ತಾರು ಹಳ್ಳಿಗಳ ರೈತರಿಗೆ ಅನುಕೂಲವಾಗುತ್ತದೆ. ಹೀಗಾಗಿ ಇದರ ಸುತ್ತಲೇ ರಾಜಕೀಯ ಪಕ್ಷಗಳ ಪ್ರಚಾರ ಗಿರಕಿ ಹೊಡೆಯುತ್ತಿರುತ್ತದೆ.

ಉಳಿದಂತೆ ಕ್ಷೇತ್ರದಲ್ಲಿರುವ ಯಾವ ಸಮಸ್ಯೆಯ ಬಗೆಗೂ ಯಾರೂ ತಲೆಕೆಡಿಸಿಕೊಳ್ಳದಿರುವುದು ವಿಚಿತ್ರವಾಗಿದೆ.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮತಗಳು ಹೆಚ್ಚಾಗಿವೆ. ಒಕ್ಕಲಿಗರು 49 ಸಾವಿರ, ಕಾಡುಗೊಲ್ಲರು 26 ಸಾವಿರ, ಮುಸ್ಲಿಂ 30 ಸಾವಿರ, ಕುರುಬರು 13 ಸಾವಿರ, ನಾಯಕ 13 ಸಾವಿರ ಹಾಗೂ ಬಲಿಜ ಸಮುದಾಯದ 7 ಸಾವಿರ ಮತಗಳಿವೆ. ಒಕ್ಕಲಿಗ, ಕಾಡುಗೊಲ್ಲ ಮತ್ತು ಮುಸ್ಲಿಂ ಸಮುದಾಯ ಮತಗಳೇ ಇಲ್ಲಿ ನಿರ್ಣಾಯಕ ಎನಿಸಿವೆ.

ಈ ಬಾರಿ ಶಿರಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಮುಖ ಮೂರೂ ಪಕ್ಷಗಳ ಅಭ್ಯರ್ಥಿಗಳು ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಚಿವ, ಟಿ.ಬಿ.ಜಯಚಂದ್ರ ಕಣಕ್ಕಿಳಿದಿದ್ದರೆ, ಬಿಜೆಪಿ ಹಾಲಿ ಶಾಸಕ ಡಾ.ರಾಜೇಶ್‌ ಗೌಡಗೆ ಮತ್ತೊಮ್ಮೆ ಟಿಕೆಟ್ ನೀಡಿದೆ. ಇನ್ನು ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಉಗ್ರೇಶ್ ಎಂಬುವವರನ್ನ ಕಣಕ್ಕಿಳಿಸಿದೆ.

ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದಿರುವ ಟಿ.ಬಿ ಜಯಚಂದ್ರ ಹಿರಿಯ ರಾಜಕಾರಣಿ. 6 ಬಾರಿ ವಿಧಾನ ಸಭೆ ಪ್ರವೇಶಿಸಿರುವ ಜಯಚಂದ್ರ, ಈ ಬಾರಿ ಕೊನೆಯ ಚುನಾವಣೆ ಎಂದು ಮತದಾರರ ಮುಂದೆ ಪ್ರಚಾರ ಶುರು ಮಾಡಿದ್ದಾರೆ. ತನ್ನ ಅಧಿಕಾರದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ವಿಚಾರಗಳು- ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ಜಯಚಂದ್ರ ಪ್ರಚಾರ ನಡೆಸುತ್ತಿದ್ದಾರೆ.

ಜೆಡಿಎಸ್‌ನ ಶಾಸಕ ದಿ.ಸತ್ಯನಾರಾಯಣ್‌ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭೆಗೆ 2020ರಲ್ಲಿ ಉಪಚುನಾವಣೆ ನಡೆದಿತ್ತು. ಮೊದಲ ಬಾರಿಗೆ ಚುನಾವಣೆ ಎದುರಿಸಿದ ಡಾ.ರಾಜೇಶ್‌ ಗೌಡ ಗೆಲುವು ಸಾಧಿಸಿದ್ದರು. ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಉಪ ಚುನಾವಣೆಯಲ್ಲಿ ಮದಲೂರು ಕೆರೆ ನೀರು ಹರಿಸುವುದು, ಕಾಡುಗೊಲ್ಲರ ಮೀಸಲಾತಿ ವಿಚಾರ ಹಾಗೂ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಬಿಜೆಪಿ ಗೆಲುವಿಗೆ ಸಹಕಾರಿಯಾಗಿತ್ತು. ಅಂದು ಇಡೀ ಸರ್ಕಾರದ ನೆರವಿನಿಂದ ಗೆಲುವು ಸಾಧಿಸಿದ್ದ ರಾಜೇಶ್‌ ಗೌಡ ಇದೀಗ ಒಬ್ಬಂಟಿಯಾಗಿ ಚುನಾವಣೆ ಎದುರಿಸಬೇಕಾಗಿದೆ. ಕೊಟ್ಟ ಮಾತಿನಂತೆ ಮದಲೂರು ಕೆರೆಗೆ ನೀರು ಹರಿಸಿದ್ದೇವೆ. ಅಭಿವೃದ್ಧಿ ಕೆಲಸ ಮಾಡಿದ್ದೇವೆ ಅಂತ ಡಾ.ರಾಜೇಶ್‌ ಗೌಡ ಪ್ರಚಾರ ಪ್ರಾರಂಭಿಸಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಕಟ್ಟಾ ಕಾರ್ಯಕರ್ತರ ಪಡೆಯನ್ನ ಹೊಂದಿರುವ ಜೆಡಿಎಸ್‌ ಹಲವು ಬಾರಿ ಗೆಲುವು ಸಾಧಿಸಿದೆ. ಇದೀಗ ಒಕ್ಕಲಿಗ ಸಮುದಾಯದ ಉಗ್ರೇಶ್‌ ಮೊದಲ ಬಾರಿ ಚುನಾವಣೆ ಎದುರಿಸುತ್ತಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಉಗ್ರೇಶ್‌ ಮತ ಕೇಳುತ್ತಿದ್ದಾರೆ. ಒಟ್ಟಾರೆ ಬಿಜೆಪಿಯ ಡಾಕ್ಟರ್, ಕಾಂಗ್ರೆಸ್‌ ವಕೀಲರಿಗೆ ಜೆಡಿಎಸ್‌ನ ರೈತನ ಮಗನ ಸವಾಲು ಹಾಕುತ್ತಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಬಿ.ಸತ್ಯನಾರಾಯಣ (ಜೆಡಿಎಸ್): 74,338 – ಟಿ.ಬಿ.ಜಯಚಂದ್ರ (ಕಾಂಗ್ರೆಸ್): 63,973 – ಗೆಲುವಿನ ಅಂತರ: 10,365

ಪಾವಗಡ : ಕಾಂಗ್ರೆಸ್‌
ಜೆಡಿಎಸ್‌ ನಡುವೆ
ಜಿದ್ದಾಜಿದ್ದಿ

ಆಂಧ್ರಪ್ರದೇಶ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಪಾವಗಡ ಭೌಗೋಳಿಕವಾಗಿ ಚಿತ್ರದುರ್ಗ ಜಿಲ್ಲೆಗೆ ಸೇರಿಕೊಂಡಿದ್ದರೂ, ಆಡಳಿತಾತ್ಮಕವಾಗಿ ತುಮಕೂರು ಜಿಲ್ಲೆಗೆ ಸೇರಿದೆ. ಆದರೆ, ಲೋಕಸಭಾ ಕ್ಷೇತ್ರ ಮಾತ್ರ ಚಿತ್ರದುರ್ಗವಾಗಿದೆ.

ಪಾವಗಡ ಕ್ಷೇತ್ರ ಇದುವರೆಗೂ ಒಟ್ಟು 13 ಚುನಾವಣೆಗಳನ್ನ ಎದುರಿಸದ್ದು, ಏಳು ಸಲ ಕಾಂಗ್ರೆಸ್‌, ಎರಡು ಸಲ ಪಕ್ಷೇತರ, ಎರಡು ಸಲ ಜೆಡಿಎಸ್‌, ಒಂದು ಸಲ ಜನತಾ ಪಕ್ಷ ಮತ್ತು ಒಂದು ಸಲ ಜನತಾ ದಳ ಜಯ ಗಳಿಸಿವೆ. ಇಲ್ಲಿ ನಡೆದಿರುವ ಯಾವ ಚುನಾವಣೆಯಲ್ಲಿಯೂ ಸತತ ಎರಡನೇ ಬಾರಿ ಯಾರೂ ಆಯ್ಕೆಯಾಗಿಲ್ಲ.

ಎಸ್ಸಿ ಮೀಸಲು ಕ್ಷೇತ್ರವಾಗಿರೋ ಪಾವಗಡ ಕ್ಷೇತ್ರದಲ್ಲಿ ಬರೋಬ್ಬರಿ 72,000 ಎಸ್ಸಿ ಮತದಾರರಿದ್ದಾರೆ. ಇನ್ನು 53,000 ಎಸ್ಟಿ ವರ್ಗಕ್ಕೆ ಸೇರಿದ ಮತದಾರರು ಇದ್ರೆ, 38 ಸಾವಿರ ಗೊಲ್ಲ ಸಮುದಾಯದ ಮತಗಳು, 31 ಸಾವಿರ ಒಕ್ಕಲಿಗರು ಹಾಗೂ 6,397 ಇತರೆ ವರ್ಗಕ್ಕೆ ಸೇರಿದ ಮತದಾರರಿದ್ದಾರೆ. ಎಸ್ಸಿ, ಎಸ್ಟಿ ಹಾಗೂ ಗೊಲ್ಲ ಸಮುದಾಯದ ಮತಗಳೇ ಇಲ್ಲಿ ನಿರ್ಣಾಯಕ.

ಇಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ನೇರ ಪೈಪೋಟಿಯಿದೆ. ಬಿಜೆಪಿ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಹ ಸ್ಥಿತಿಯಲ್ಲಿದೆ. ಪಕ್ಷವು ಕೃಷ್ಣ ನಾಯಕ್‌ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ ನಿಂದ ಬೋವಿ ಸಮಯದಾಯಕ್ಕೆ ಸೇರಿದ ಎಚ್.ವಿ ವೆಂಕಟೇಶ್‌ ಸ್ಪರ್ಧಿಸಿದ್ದಾರೆ. ಹಾಲಿ ಶಾಸಕ ವೆಂಕಟರಮಣಪ್ಪ ಪುತ್ರರಾಗಿರುವ ಎಚ್.ವಿ.ವೆಂಕಟೇಶ್‌ ಅಪ್ಪನ ಅಭಿವೃದ್ಧಿ ಕೆಲಸ ಹಾಗೂ ರಾಜಕೀಯ ತಂತ್ರಗಾರಿಕೆಯ ಆಧಾರದಲ್ಲಿ ಗೆಲುವಿನ ದಡ ಮುಟ್ಟುವ ತವಕದಲ್ಲಿದ್ದಾರೆ.

ಇನ್ನು ಜೆಡಿಎಸ್‌ ನಿಂದ ಸ್ಪರ್ಧಿಸಿರುವ ಕೆ.ಎಂ.ತಿಮ್ಮರಾಯಪ್ಪ ಈಗಾಗಲೇ ಎರಡು ಸಲ ಶಾಸಕರಾಗಿದ್ದಾರೆ. ಎಸ್ಸಿ ಸಮುದಾಯದವರಾಗಿರುವ ತಿಮ್ಮರಾಯಪ್ಪ, ಎಸ್‌ಸಿ, ಎಸ್ಟಿ ಮತಗಳ ಜೊತೆಗೆ ಜೆಡಿಎಸ್‌ನ ಮತಬ್ಯಾಂಕ್ ಒಕ್ಕಲಿಗ ಮತಗಳನ್ನ ಪಡೆದು ಗೆಲ್ಲುವ ಆಲೋಚನೆಯಲ್ಲಿದ್ದಾರೆ. ಹೀಗಾಗಿ ಇಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ.

ಕಳೆದ ಬಾರಿಯ ಫಲಿತಾಂಶ ಏನು?
ವೆಂಕಟರಮಣಪ್ಪ (ಕಾಂಗ್ರೆಸ್): 72, 974- ತಿಮ್ಮರಾಯಪ್ಪ (ಜೆಡಿಎಸ್) : 72, 565 – ಗೆಲುವಿನ ಅಂತರ: 409

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕೈ ಮತ್ತು ಕಮಲದ ನಡುವೆ ನೇರ ಪೈಪೋಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

Karnataka Rain News: ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

VISTARANEWS.COM


on

shiradi ghat train karnataka rian news
Koo

ಹಾಸನ: ಹಾಸನ ಜಿಲ್ಲೆಯ (Hassan news) ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ (Karnataka Rain News) ಮುಂದುವರಿದಿದ್ದು, ಶಿರಾಡಿ ಘಾಟಿಯ (Shiradi Ghat) ರೈಲ್ವೆ ಹಳಿಯ (Railway Track) ಮೇಲೆ ಮಣ್ಣು ಕುಸಿತ (landslide) ಆಗಿದೆ. ಸಕಲೇಶಪುರ (Sakaleshpur) ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದು, ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್ (Trains cancelled) ಮಾಡಲಾಗಿದೆ. ಜೊತೆಗೆ ಶಾಂತಿಗ್ರಾಮ ಬಳಿ ಚಲಿಸುತ್ತಿರುವ ರೈಲಿನ ಮೇಲೆಯೇ ಮಣ್ಣು ಕುಸಿತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರಿ ಅಪಾಯ ತಪ್ಪಿದೆ.

ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

ನಿನ್ನೆ ಸಂಜೆಯಿಂದ ಹಳಿ ದುರಸ್ತಿ ಹಾಗು ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರು ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗು ಗೂಡ್ಸ್ ರೈಲು ಸಂಚಾರ ರದ್ದುಪಡಿಸಲಾಗಿದ್ದು, ರೈಲ್ವೆ ಇಲಾಖೆ ನಿನ್ನೆ ರೈಲಿನಲ್ಲಿ ಸಿಲುಕಿದ್ದವರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಹಿನ್ನೆಲೆಯಲ್ಲಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.

ಶಿರಾಡಿಘಾಟ್ ಬಳಿಕ ಶಾಂತಿಗ್ರಾಮ ಬಳಿಯೂ ರೈಲ್ವೆ ಟ್ರ್ಯಾಕ್ ಮೇಲೆ ಗುಡ್ಡ ಕುಸಿದಿದೆ. ಗೂಡ್ಸ್ ರೈಲು ಚಲಿಸುವಾಗಲೇ ಗುಡ್ಡ ಕುಸಿತವಾಗಿದ್ದು, ರೈಲಿನ ಬೋಗಿ ಹಳಿ ತಪ್ಪಿದೆ. ಇಂದು ಮುಂಜಾನೆ 5.45ರ ಸುಮಾರಿಗೆ ಹಳಿ ಮೇಲೆ ಮಣ್ಣು ಕುಸಿದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು ತೆರವುಗೊಳಿಸಿದ ಸಿಬ್ಬಂದಿ ರೈಲು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಹಾಸನ- ಬೆಂಗಳೂರು, ಬೆಂಗಳೂರು- ಹಾಸನ ರೈಲುಗಳ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಮಣ್ಣು ತೆರವು ಬಳಿಕ ಹಾಸನ ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಪುನಾರಂಭವಾಗಲಿದೆ.

ಸಕಲೇಶಪುರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ಜನ, ವಾಹನಗಳು ಪರದಾಡಿದ್ದಾರೆ. ಸಕಲೇಶಪುರ ತಾಲೂಕಿನ‌ ಹಾನುಬಾಳು ಹೋಬಳಿಯ ಹಾನುಬಾಳು- ವೆಂಕಟಹಳ್ಳಿ- ರಾಗಿಗುಂಡಿ- ಅಗ್ನಿ ರಸ್ತೆ ಸಂಪರ್ಕ ಕಡಿತವಾಗಿದೆ. ರಸ್ತೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡಿದರು. ಇಲ್ಲಿಗೆ ಸೇತುವೆ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಹಿಂದಿನಿಂದಲೂ ಆಗ್ರಹಿಸುತ್ತಿದ್ದಾರೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Continue Reading

ಬೆಂಗಳೂರು

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

UGCET 2024 ; ಮೊದಲೇ ಸುತ್ತಿನ ಸೀಟು ಹಂಚಿಕೆ ಚಟುವಟಿಕೆ ಶುರುವಾಗಿದ್ದು, ಯುಜಿಸಿಇಟಿ- 2024ರ ಆಪ್ಶನ್ ಎಂಟ್ರಿ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

VISTARANEWS.COM


on

By

UGCET 2024 seat allotment process begins Only a few days left for the option to enter
Koo

ಬೆಂಗಳೂರು: ಯುಜಿಸಿಇಟಿ-24ರ (UGCET 2024) ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಳು ದಿನ ಅವಕಾಶ ನೀಡಿತ್ತು. ಅದರಲ್ಲಿ ಐದು ದಿನಗಳು ಈಗಾಗಲೇ ಮುಗಿದಿದ್ದು, ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಜುಲೈ 23ರಿಂದ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಇಚ್ಛೆಗಳನ್ನು ದಾಖಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದರು.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿತ್ತು. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದಾಗಿದೆ.

ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಯ್ಕೆ/ಇಚ್ಛೆಗಳ ದಾಖಲೆಗೆ ನಿಗದಿಪಡಿಸಿದ ಕೊನೆ ದಿನದ ನಂತರ ಮೂರು ದಿನಗಳ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ‌ ನೀಡಲಾಗುತ್ತದೆ. ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಇಂದಿಗೆ ಐದು ದಿನಗಳು ಮುಗಿದಿದ್ದು, ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ವೈದ್ಯಕೀಯ ಕೋರ್ಸುಗಳು:

ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಶನ್‌ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಆನ್‌ಲೈನ್‌ ವೆರಿಫಿಕೇಶನ್‌

ಯುಜಿಸಿಇಟಿ-2024ಕ್ಕೆ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್‌ ಮೂಲಕ ಪರಿಶೀಲನೆ ಮಾಡಿ, ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಪರಿಶೀಲಿಸಿಕೊಳ್ಳಲು ಜು.29ರಂದು ಅಭ್ಯರ್ಥಿಗಳಿಗೆ ಸೂಚಿಸಲಾಗಿತ್ತು. ಜತೆಗೆ ಅರ್ಜಿಯಲ್ಲಿನ ವಿವರಗಳು ತಪ್ಪಾಗಿದ್ದಲ್ಲಿ ಸರಿಪಡಿಸಿಕೊಳ್ಳಲು ಅಂತಿಮ ಅವಕಾಶ ನೀಡಿ ಆಫ್‌ಲೈನ್‌ ದಾಖಲೆಗಳ ಪರಿಶೀಲನೆಗೆ ಕಳೆದ ಜು.4ರಿಂದ 6ವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಜು.18ರಂದು ವೆರಿಫಿಕೇಶನ್‌ ಸ್ಲಿಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್‌ ನೀಡಲಾಗಿತ್ತು. ಇದನ್ನೂ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇಂದೇ ಕೊನೆ ದಿನ

ಡಿಸಿಇಟಿ-2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಅಛಿ ಆಯ್ಕೆಗೆ, ಚಲನ್ ಡೌನ್‌ಲೋಡ್, ಶುಲ್ಕ ಪಾವತಿ ಮತ್ತು ಕಾಲೇಜಿನಲ್ಲಿ ಪ್ರವೇಶ ಪಡೆಯಲು ದಿನಾಂಕವನ್ನು ವಿಸ್ತರಿಸಲಾಗಿತ್ತು. ಜತೆಗೆ ದಿನಾಂಕಗಳನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿತ್ತು.

ಅದರಂತೆ ಅಛಿ ಗಳನ್ನು ಆಯ್ಕೆ ಮಾಡಲು ನಿನ್ನೆ 26ರ ಮಧ್ಯಾಹ್ನ 1ರ ವರೆಗೆ ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಳ್ಳಲು 2 ರವರೆಗೆ, ಶುಲ್ಕ ಪಾವತಿ ಮಾಡಲು ಸಂಜೆ 4 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ದಿನ ಅಂದರೆ 27ರ ಮಧ್ಯಾಹ್ನ 1ರ ವರೆಗೆ ಅಛಿ-1 ಆಯ್ಕೆ ಮಾಡಿ, ಶುಲ್ಕ ಪಾವತಿಸಿ ಮತ್ತು ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಂಜೆ 4.30 ರವರೆಗೆ ಅವಕಾಶವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Illicit Relationship: ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು.

VISTARANEWS.COM


on

illicit relationship raichur siravara
ದೂರು ನೀಡಿದ ಪ್ಯಾರಿ ಬೇಗಂ, ಆರೋಪಿಗಳಾದ ರಾಜ್‌ ಮೊಹಮ್ಮದ್‌, ಸರಳಾ
Koo

ರಾಯಚೂರು: ವಿಚ್ಛೇದಿತ ನರ್ಸ್‌ ಒಬ್ಬಾಕೆಯೊಂದಿಗೆ ಲವ್ವಿ ಡವ್ವಿ (Illicit Relationship) ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ (Police constable) ಒಬ್ಬಾತನಿಗೆ ಆತನ ಪತ್ನಿ ಕಾನೂನು ಅಸ್ತ್ರದ ಮೂಲಕ ಪಾಠ ಕಲಿಸಲು ಮುಂದಾಗಿದ್ದಾರೆ. ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. ರಾಜ್ ಮಹಮ್ಮದ್ ಮತ್ತು ಪ್ಯಾರಿ‌ ಬೇಗಂ ಪ್ರೀತಿಸಿ ಮದುವೆಯಾದವರು. ಆದರೆ ಇತ್ತೀಚೆಗೆ ರಾಜ್‌ ಮಹಮ್ಮದ್‌ ಇನ್ನೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ.

ಕವಿತಾ ಆಸ್ಪತ್ರೆ ನರ್ಸ್ ಸರಳ ಎಂಬಾಕೆಯ ಜೊತೆ ಸುಮಾರು 4-5 ವರ್ಷಗಳಿಂದ ವಿವಾಹೇತರ ಸಂಬಂಧ ನಡೆಸಿದ್ದ. ಇವರಿಬ್ಬರನ್ನೂ ಮನೆಯೊಂದರಲ್ಲಿ ರೆಡ್ ಹ್ಯಾಂಡ್ ಆಗಿ ಪ್ಯಾರಿ ಬೇಗಂ ಹಿಡಿದಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿ ಪತಿ ವಿರುದ್ಧವೇ ಎಸ್ಪಿಗೆ ದೂರು ನೀಡಿದ್ದಾರೆ. ಎಸ್‌ಪಿಯನ್ನು ಭೇಟಿ ಮಾಡಿ, ‌ಬಳಿಕ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ ಮಹಮ್ಮದ್, ರಿಜಿಯಾ ಬೇಗಂ, ಮೈಬೂಬ್ ಮತ್ತು ಸ್ಟಾಫ್ ನರ್ಸ್ ಸರಳ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗರ್ಭಪಾತ, ವರದಕ್ಷಿಣೆ ಕಿರುಕುಳ (Dowry harassment), ಕೊಲೆ ಯತ್ನ (Murder attempt) ಸೇರಿದಂತೆ ಹಲವು ಆರೋಪಗಳನ್ನು ಗಂಡನ ವಿರುದ್ಧ ಪ್ಯಾರಿ ಬೇಗಂ ನೀಡಿದ್ದಾರೆ.

ವಿದ್ಯಾರ್ಥಿಗಳ ಬಾರ್‌ ನೈಟ್‌ ಆಯೋಜಿಸಿದ್ದ ಬಾರ್‌ ಮಾಲೀಕನ ಮೇಲೆ ಕ್ರಮ

ಮಂಗಳೂರು: ವಿದ್ಯಾರ್ಥಿಗಳು ಕುಡಿದು ಕುಣಿದ ಕುಪ್ಪಳಿಸಲು ಬಾರ್‌ ನೈಟ್‌ (Students Night) ಕಾರ್ಯಕ್ರಮ ಆಯೋಜಿಸಿದ್ದ ಬಾರ್‌ ಮಾಲೀಕರ ಕಾರ್ಯಕ್ರಮವನ್ನು ಪೊಲೀಸರು (Mangalore police) ಬಂದ್‌ ಮಾಡಿಸಿದ್ದಾರೆ. ಇದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಸಂಜೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ ಮದ್ಯ ಸಹಿತ ಪಾರ್ಟಿ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು ಬಂದರೆ ಅವರಿಗೆ ಫ್ರೀ ಶೂಟರ್ಸ್ ಸ್ಪೆಷಲ್ ಆಫರ್ ನೀಡುವ ಭರವಸೆಯನ್ನು ನೀಡಲಾಗಿತ್ತು.

ಕೊಂಚಾಡಿಯ ಬಾರ್‌ನಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾವೂರು ಪೊಲೀಸರು ಕಾರ್ಯಕ್ರಮವನ್ನೇ ರದ್ದುಮಾಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಮಾತ್ರವಲ್ಲದೆ ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ ಬಾರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Continue Reading

ಕ್ರೈಂ

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Murder in PG: ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

VISTARANEWS.COM


on

Murder in PG Case
Koo

ಬೆಂಗಳೂರು: ರಾಜಧಾನಿಯ ಕೋರಮಂಗಲ ಪಿಜಿಯೊಂದರಲ್ಲಿ (Murder in PG) ಕೃತಿ ಕುಮಾರಿ ಎಂಬ ಯುವತಿಯನ್ನು ಹತ್ಯೆ (Krithi Kumari Murder) ಮಾಡಿದ ಪಾತಕಿ ಅಭಿಷೇಕ್‌ನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು (Bangalore police) ಮಧ್ಯಪ್ರದೇಶಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಫೂಟೇಜ್‌ಗಳು, ಪ್ರತ್ಯಕ್ಷದರ್ಶಿಗಳು ಹಾಗೂ ಆರೋಪಿಯ ಪ್ರೇಯಸಿಯ ಹೇಳಿಕೆಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ಏನಿದು ಪ್ರಕರಣ?

ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ (Murder in PG) ಹೋದ ಕೃತಿ ಕುಮಾರಿ ಮರ್ಡರ್ (Krithi Kumari Murder) ಪ್ರಕರಣದಲ್ಲಿ ಪಾತಕಿಯ ಬರ್ಬರತೆಯ ಬಗ್ಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಮರ್ಡರ್‌ (Murder Case) ಆಗಿದ್ದಾಳೆ.

ಆರೋಪಿ ಅಭಿಷೇಕ್‌ ತಾನು ಪ್ರೀತಿಸಿದವಳನ್ನು ಗೃಹ ಬಂಧನದಲ್ಲಿಟ್ಟಿದ್ದ. ಆಕೆಯನ್ನು ಕಾಪಾಡಿದ ಆಕೆಯ ಗೆಳತಿಯೇ ಜೀವ ಕಳೆದುಕೊಂಡಿದ್ದಾಳೆ. ಅಭಿಷೇಕ್‌ ಯುವತಿಯೊಬ್ಬಳೊಂದಿಗೆ ಪ್ರೀತಿಯಲ್ಲಿದ್ದ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ರೂಮ್‌ನಲ್ಲಿ ಇರಿಸಿಕೊಂಡಿದ್ದ. ಕೊಲೆಗೂ ಮೂರು ದಿನದ ಹಿಂದೆ ಬಾಡಿಗೆ ರೂಮ್ ಮಾಡಿ, ಆಕೆಯನ್ನು ಕರೆದೊಯ್ದು ಬಲವಂತವಾಗಿ ರೂಮ್‌ನಲ್ಲಿಟ್ಟುಕೊಂಡಿದ್ದ.

ಆದರೆ ಪ್ರೇಯಸಿ ರೂಮ್‌ನಲ್ಲಿ ಇರಲಾಗದೆ ಒದ್ದಾಡಿದ್ದಳು. ರೂಮ್‌ಮೇಟ್ ಪಿಜಿಗೆ ಬರಲಿಲ್ಲ ಏಕೆಂದು ವಿಚಾರಿಸಿದಾಗ ಕೃತಿ ಕುಮಾರಿ, ಆರೋಪಿ ಆಕೆಯನ್ನು ಕೂಡಿ ಹಾಕಿದ್ದರ ಮಾಹಿತಿಯನ್ನು ಪಡೆದುಕೊಂಡಿದ್ದಳು. ನಂತರ ಸಮಯ ನೋಡಿ ಗೆಳತಿಯನ್ನು ರೂಮ್‌ನಿಂದ ಕರೆತರಲು ಪ್ಲ್ಯಾನ್ ಮಾಡಿದ್ದು, ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ಪಿಜಿಗೆ ಕರೆತಂದಿದ್ದಳು. ಕೊಲೆ‌ ನಡೆದ ಹಿಂದಿನ ದಿನ ಗೃಹಬಂಧನದಲ್ಲಿದ್ದ ಗೆಳತಿಯನ್ನು ಕೃತಿ ಪಾರುಮಾಡಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

ಈ ವಿಚಾರ ಗೊತ್ತಾಗಿದ್ದೇ ತಡ ಕೃತಿ ಮೇಲೆ ಆರೋಪಿ ಅಭಿಷೇಕ್‌ ತೀವ್ರವಾಗಿ ಕೋಪಗೊಂಡಿದ್ದ. ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಕೋಪಗೊಂಡು ಮಂಗಳವಾರ ರಾತ್ರಿ‌ 11.10ರ ಸುಮಾರಿಗೆ ಏಕಾಏಕಿ ಪಿಜಿಗೆ ಹೋಗಿದ್ದ. ಒಳ ಹೋದವನೇ ಸೀದಾ ಕೃತಿ ಕುಮಾರಿಗೆ ಚಾಕುವಿನಿಂದ ಯದ್ವಾತದ್ವಾ ಇರಿದು ಎಸ್ಕೇಪ್ ಆಗಿದ್ದಾನೆ.

ಘಟನೆ ನಡೆದದ್ದು ಹೀಗೆ

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Continue Reading
Advertisement
PARIS OLYMPICS
ಕ್ರೀಡೆ17 mins ago

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Viral Video
ವೈರಲ್ ನ್ಯೂಸ್18 mins ago

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Ajith Kumar Neel not collaborating for a film
ಕಾಲಿವುಡ್19 mins ago

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

shiradi ghat train karnataka rian news
ಪ್ರಮುಖ ಸುದ್ದಿ40 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು45 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ59 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ1 hour ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ1 hour ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ2 hours ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌