ಕರ್ನಾಟಕ
Karnataka Election : ಬಿಜೆಪಿಗೆ ಬಹುಮತ ಬರಲ್ಲ; ಆದ್ರೆ ಸರ್ಕಾರ ಮಾಡೋದು ನಾವೇ: ಸಿಪಿವೈ ಆಡಿಯೊ ವೈರಲ್
Karnataka Election : ಈ ಬಾರಿ ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮುಂದಿನ ಬಾರಿ ಬಿಜೆಪಿಗೆ ಬಹುಮತ ಬರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆಪರೇಷನ್ ಕಮಲವನ್ನು ಎಲೆಕ್ಷನ್ಗೆ ಮೊದಲೇ ಮಾಡುವುದಾಗಿಯೂ ಹೇಳಿಕೊಂಡಿದ್ದಾರೆ.
ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಬಿಜೆಪಿಗೆ ಬಹುಮತ ಬರುವುದಿಲ್ಲ. ಜನಾಭಿಪ್ರಾಯದಿಂದ ಸರ್ಕಾರ ಬರಲಾರದು. ಆದರೆ, ಸರ್ಕಾರ ರಚನೆ ಮಾಡೋದು ಮಾತ್ರ ನಾವೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮಾತನಾಡಿರು ಆಡಿಯೊ ವೈರಲ್ ಆಗಿದೆ. ಅಲ್ಲದೆ, ಆಪರೇಷನ್ ಕಮಲವನ್ನು ಈ ಬಾರಿ ಚುನಾವಣೆ ಬಳಿಕ ಮಾಡುವುದಿಲ್ಲ. ಚುನಾವಣೆಗೆ ಮೊದಲೇ ನಡೆಯುತ್ತದೆ ಎಂದೂ ಹೇಳಿಕೊಂಡಿದ್ದಾರೆ.
ಈ ಬಾರಿ ಬಿಜೆಪಿಗೆ ಜನಾಭಿಪ್ರಾಯ ಸಿಗದಿದ್ದರೂ, 2023ಕ್ಕೆ ಬಿಜೆಪಿ ಸರ್ಕಾರವನ್ನು ಮಾಡುತ್ತೇವೆ. ಮಾವು ಮರದಲ್ಲೇ ಹಣ್ಣು ಆಗುವುದಕ್ಕೂ, ಕೆಮಿಕಲ್ ಹಾಕಿ ಹಣ್ಣು ಮಾಡುವುದಕ್ಕೂ ವ್ಯತ್ಯಾಸ ಇದೆ. ಕಾಂಗ್ರೆಸ್ ಈಗ ಸ್ಟ್ರಾಂಗ್ ಇಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪಟ್ಟ ಕಟ್ಟಲು ದೊಡ್ಡ ನಾಯಕರಾದ ಮಾಜಿ ಡಿಸಿಎಂ ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಷ್ಟ ಇಲ್ಲ ಎಂದು ಸಿಪಿವೈ ಆಡಿಯೊದಲ್ಲಿ ಮಾತನಾಡಿಕೊಂಡಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರಿಬ್ಬರೂ ನೇರ ಸ್ಪರ್ಧಿಯಾಗಿದ್ದಾರೆ. ಸಂಕ್ರಾಂತಿ ಹಬ್ಬ ಆದ ಮೇಲೆ ಮೈಸೂರು ಭಾಗದಲ್ಲಿ ಬಹಳ ಬದಲಾವಣೆಯಾಗಲಿದೆ. ಮೈಸೂರು ಭಾಗದಿಂದ ಕಾಂಗ್ರೆಸ್ ದೊಡ್ಡ ಲೀಡರ್ಗಳು ಬಿಜೆಪಿಗೆ ಬರಲಿದ್ದಾರೆ. ಅವರಿಂದ ನಾಲ್ಕೈದು ಕ್ಷೇತ್ರಗಳಲ್ಲಿ ಎರಡ್ಮೂರು ಸಾವಿರ ಮತಗಳು ಪ್ಲಸ್ ಆಗಲಿವೆ. ಮಂಡ್ಯದಲ್ಲಿ ಒಬ್ಬರು, ಕೋಲಾರದಲ್ಲಿ ಒಬ್ಬರು ಪಕ್ಷ ಸೇರ್ಪಡೆ ಆಗುತ್ತಾರೆ. ಅವರು ಏಳೆಂಟು ಬಾರಿ ಸಂಸದರಾಗಿ, ಸಚಿವರಾಗಿದ್ದವರು ಎಂದು ಸಿಪಿವೈ ಹೇಳಿದ್ದಾರೆ. ಆ ಮೂಲಕ ಕೇಂದ್ರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಬಗ್ಗೆ ಹೆಸರನ್ನು ಹೇಳದೇ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ | ED raid | ಮಂಗಳೂರಿನ ಉದ್ಯಮಿಗೆ ಸೇರಿದ 17 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
ಈ ರೀತಿಯಾಗಿ ಹಲವಾರು ಮಂದಿ ಜನರ ಬಗ್ಗೆ ನನ್ನ ಬಳಿ ಮಾಹಿತಿ ಇದೆ. ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವು ಸಾಧಿಸಬಹುದು. ಅಂತವರೆಲ್ಲ ರಾಜ್ಯ ರಾಜಕಾರಣದಲ್ಲಿ ಇರಬೇಕು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಗೆಲ್ಲಬೇಕು ಎಂದು ಯೋಗೇಶ್ವರ್ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಗೆದ್ದ ಮೇಲೆ ಮುಖ್ಯಮಂತ್ರಿ ಆಗಲೇಬೇಕು. ಆದರೆ ಕಾಂಗ್ರೆಸ್ ಪಕ್ಷದವರೇ ಬಿಡಲ್ಲ. ಕಾಂಗ್ರೆಸ್ನಲ್ಲಿ ಪಾಪ್ಯುಲರ್ ಲೀಡರ್ ಅಂದರೆ ಸಿದ್ದರಾಮಯ್ಯ ಎಂದು ಅವರ ಗೆಲುವಿನ ಬಗ್ಗೆ ಆಶಯ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಸರ್ಕಾರ ರಚನೆ ಬಳಿಕ ಅಪರೇಷನ್ ಕಮಲವಿಲ್ಲ. ಚುನಾವಣೆ ಮೊದಲೇ ಆಪರೇಷನ್ ಕಮಲ ಎಂದು ಸಿ.ಪಿ. ಯೋಗೇಶ್ವರ್ ಮಾತನಾಡಿರುವ ಆಡಿಯೊ ಲೀಕ್ ಆಗಿದೆ.
ಜೆಡಿಎಸ್ ಬಗ್ಗೆ ಭವಿಷ್ಯ
ಎಷ್ಟು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವುದಿಲ್ಲ ಎಂಬ ಸಂಗತಿಯನ್ನೂ ಆಡಿಯೊದಲ್ಲಿ ಸಿ.ಪಿ. ಯೋಗೇಶ್ವರ್ ಚರ್ಚೆ ನಡೆಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಒಂದನ್ನು ಜೆಡಿಎಸ್ ಸೋಲಲಿದೆ. ಸ್ವತಃ ತಮ್ಮ ಕ್ಷೇತ್ರದಲ್ಲಿ ನಾನು ಸೋಲಬಹುದು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗೆಲ್ಲಬಹುದು. ಆದರೆ, ಒಂದು ಕ್ಷೇತ್ರದಲ್ಲಿ ಜೆಡಿಎಸ್ ಸೋಲಲಿದೆ ಎಂದು ಹೇಳಿದ್ದಾರೆ. ಜೆಡಿಎಸ್ನ ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಡಾ. ಶ್ರೀನಿವಾಸ್ ಮೂರ್ತಿ ನೆಲಮಂಗಲ, ಬೆಂಗಳೂರು ಗನ್ ಮಂಜು, ಅನ್ನದಾನಿ, ಮಂಡ್ಯ ಶ್ರೀನಿವಾಸ್, ಟಿ. ನರಸೀಪುರ, ಸಾರಾ ಮಹೇಶ್ ಅವರಲ್ಲಿ ಕೆಲವಷ್ಟು ಮಂದಿ ಸೋಲುತ್ತಾರೆ. ಮತ್ತೆ ಕೆಲವರು ಕಾಂಗ್ರೆಸ್ಗೆ ಹೋಗುತ್ತಾರೆ ಎಂದು ಸಿಪಿವೈ ಹೇಳಿದ್ದಾರೆ.
ಇದನ್ನೂ ಓದಿ | Karnataka Election | ಮಾಜಿ ಸಚಿವ ಎಚ್.ನಾಗೇಶ್ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಸ್ಪರ್ಧೆ ಎಲ್ಲಿಂದ?
ಹಾಲಿ ಜೆಡಿಎಸ್ ಶಾಸಕರಲ್ಲಿ ಒಟ್ಟು 12 ಜನರ ಸೋಲು ಖಚಿತ. ಉತ್ತರ ಕರ್ನಾಟಕದಲ್ಲಿ ಐವರು ಜೆಡಿಎಸ್ ಶಾಸಕರು ಇದ್ದಾರೆ. ಐದು ಕ್ಷೇತ್ರಗಳಲ್ಲಿ ಮೂರು ಜನ ಈಗಾಗಲೇ ವಾಷ್ಔಟ್ ಆಗಿದ್ದಾರೆ. ಉಳಿದವರು ಬಂಡೆಪ್ಪ ಕಾಶೆಂಪೂರ್ ಹಾಗೂ ಇನ್ನೊಬ್ಬರು. ಇಬ್ಬರಲ್ಲಿ ಒಬ್ಬರಿಗೆ ಚಾನ್ಸ್ ಇದೆ. ವೀರಭದ್ರಯ್ಯ ಮಧುಗಿರಿಯವರು. ಬೇಲೂರು ಲಿಂಗೇಶ್ ಸೋಲುತ್ತಾನೆ. ನಮ್ಮ ಜಿಲ್ಲಾಧ್ಯಕ್ಷ ಸುರೇಶ್ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಇನ್ನು ಚಿಂತಾಮಣಿಯಲ್ಲಿ ಸುಧಾಕರ್ ರೆಡ್ಡಿ ಔಟ್ ಎಂದೂ ಆಡಿಯೊದಲ್ಲಿ ಸಿಪಿವೈ ಹೇಳಿದ್ದಾರೆ.
ಸಕಲೇಶಪುರದಲ್ಲಿ ಎಚ್.ಕೆ. ಕುಮಾರಸ್ವಾಮಿ ನಮ್ಮಿಂದ ಕಳೆದ ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಅಲ್ಲಿಗೆ ಒಳ್ಳೆಯ ಕ್ಯಾಂಡಿಡೇಟ್ ಹಾಕುತ್ತೇವೆ. ಅವರು ಸೋಲುತ್ತಾರೆ. ಜೆಡಿಎಸ್ ಒಟ್ಟು 25 ಸ್ಥಾನದಲ್ಲಿ ಸೋಲುತ್ತದೆ ಎಂದು ಸಿ.ಪಿ. ಯೋಗೇಶ್ವರ್ ಮಾತನಾಡಿರುವ ಆಡಿಯೊ ವೈರಲ್ ಆಗಿದೆ.
ಇದನ್ನೂ ಓದಿ | Water Contamination | ಹೊಸಪೇಟೆಯಲ್ಲಿ ಕಲುಷಿತ ನೀರು ಸೇವನೆ, ಮತ್ತೆ 25 ಮಂದಿ ಅಸ್ವಸ್ಥ
ಕರ್ನಾಟಕ
Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ
Cauvery Water Dispute: ರಾಜ್ಯದ ಸ್ಥಿತಿ ಬಗ್ಗೆ ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರು: ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು. ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) (Cauvery Water Dispute) ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ‘ಗಾಯದ ಮೇಲೆ ಬರೆ’ ಎಳೆದಂತೆ ಸಿಡಬ್ಲ್ಯುಆರ್ಸಿಯಿಂದ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು, ಸರ್ಕಾರವು ಕರ್ನಾಟಕದ ಪಾಲಿಗೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ಟೀಕಿಸಿದ್ದಾರೆ.
ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ. ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಠ ಕಾಳಜಿಯೂ ತೋರದೇ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ. ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ…
— Vijayendra Yediyurappa (@BYVijayendra) September 26, 2023
ಇದನ್ನೂ ಓದಿ | Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್ವೈ
CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ.
ಕಳೆದ ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿಹಿಡಿಯಲಾಗಿತ್ತು.
ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್ಗೆ ಇಳಿಸಿ ಎಂದು ಸೂಚನೆ ನೀಡಿದೆ.
ಸೆ. 13ರಂದು ಹದಿನೈದು ದಿನಗಳವರೆಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ನೀಡಿದ ಆದೇಶ ಊರ್ಜಿತದಲ್ಲಿರುವುದರಿಂದ ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ.
CWRC ಯ ಮುಂದೆ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದ ಕರ್ನಾಟಕ
ಇದಕ್ಕಿಂತ ಮೊದಲು ಕರ್ನಾಟಕವು ತನ್ನ ನೀರಿನ ಪರಿಸ್ಥಿತಿಯ ವಿವರಣೆಯನ್ನು ನೀಡಿತು.
25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಹಿನ್ನೆಲೆಯಲ್ಲಿ ಈ ಅಂಶಗಳನ್ನು ಈ ಅಂಶವು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ಮನವಿ ಮಾಡಿತು.
ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿತು.
ಇದನ್ನೂ ಓದಿ | Cauvery water dispute : ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ. ಶಿವಕುಮಾರ್
ಇದಕ್ಕೆ ಪ್ರತಿಯಾಗಿ ತಮಿಳುನಾಡು ನಿಯಮ ಪ್ರಕಾರ 12500 ಕ್ಯೂಸೆಕ್ ನೀರು ಪ್ರತಿದಿನವೂ ಬಿಡುಗಡೆ ಮಾಡಬೇಕು ಎಂಬ ವಾದವನ್ನೇ ಮುಂದೆ ಮಾಡಿತು.
ಅಂತಿಮವಾಗಿ ನಿಯಂತ್ರಣ ಸಮಿತಿಯು ನೀರಿನ ಪ್ರಮಾಣವನ್ನು ಇಳಿಸಿ ಆದೇಶ ಹೊರಡಿಸಿತು.
ಇದೀಗ ಕರ್ನಾಟಕವು ಈ ಅದೇಶವನ್ನು ಮತ್ತೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಅವಕಾಶವಿದೆ.
ಕಲೆ/ಸಾಹಿತ್ಯ
Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ
Yakshagana Show: ಮದರ್ ಫೌಂಡೇಶನ್ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಬೆಂಗಳೂರು: ರಾಜ್ ಭಟ್ ಜಕ್ಕೂರು ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.
ಮದರ್ ಫೌಂಡೇಶನ್ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್, ಶಶಾಂಕ್, ಶ್ರೀನಿವಾಸ್ ಪ್ರಭು, ಸುಜನ್ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.
ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್ ವಿಶ್ವನಾಥ್, ಹಾಸ್ಯ ಪಾತ್ರಗಳಲ್ಲಿ ರಮೇಶ್ ಭಂಡಾರಿ, ಸಿತಾರಾಮ ಕುಮಾರ್ ಅಭಿನಯಿಸಲಿದ್ದಾರೆ.
ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!
ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್, ರುಚಿಮತಿಯಾಗಿ ಸಂತೋಷ್ ಹಿಲಿಯಾಣ, ದೂತನಾಗಿ ಸೀತಾರಾಮ್ ಕುಮಾರ್, ಬ್ರಾಹ್ಮಣನಾಗಿ ಶ್ರೀಧರ್ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್, ಪಾಸ್ತಿಯಾಗಿ ಹರೀಶ್ ಜಪ್ತಿ, ದೃಮಿಳ ಆಗಿ ಕಾರ್ತಿಕ್ ಕಣ್ಣಿ ಬಣ್ಣ ಹಚ್ಚಲಿದ್ದಾರೆ.
ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್ ಭಂಡಾರಿ, ಪ್ರಕಾಶ್ ಕಿರಾಡಿ, ವಿಶ್ವನಾಥ್ ಹೆನ್ನಾಬೈಲ್ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್ ಹೆಗಡೆ, ಶ್ರೀಕಾಂತ್ ರಟ್ಟಾಡಿ, ನಾಗರಾಜ್ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.
ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್ ಬುಕಿಂಗ್ಗಾಗಿ ರಾಜ್ ಭಟ್ ಮೊ.9019776411 ಸಂಪರ್ಕಿಸಿ.
ವಿಜಯನಗರ
Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ
Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.
ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ (Foot and Mouth Disease Vaccination campaign) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಶುಪಾಲನೆ ಭಾಗವಾದ ಆಕಳು ಎತ್ತು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಆರೋಗ್ಯದ ಸಮಸ್ಯೆ ಕಂಡುಬಂದ ವೇಳೆ ತಾಲೂಕಿನ ರೈತರು ಕರೆ ಮಾಡಿದಾಗ ವೈದ್ಯಕೀಯ ತಂಡ ತಕ್ಷಣ ಭೇಟಿ ನೀಡಿ, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: SBI SO Recruitment 2023: ಎಸ್ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ
ಇದೇ ವೇಳೆ ಕೂಡ್ಲಿಗಿ ತಾಲೂಕಿನ ವೈದ್ಯರ ಸಿಬ್ಬಂದಿ, ಔಷಧಿ ಗುಣಮಟ್ಟ, ವೈದ್ಯಕೀಯ ಸೇವೆ, ಲಸಿಕೆ ವಿಧಾನ, ಆಸ್ಪತ್ರೆ ಕಟ್ಟಡಗಳ ಸ್ಥಿತಿ ಹಾಗೂ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಕಾರ್ಯ ನಿರ್ವಹಣೆ ಇತ್ಯಾದಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಹಿರಿಗುಂಬಳಗುಂಟೆ ಪಶುವೈದ್ಯಾಧಿಕಾರಿ ಡಾ. ಮಂಜುಶ್ರೀ, ಚಿರತಗುಂಡು ಪಶುವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಜಬೀಉಲ್ಲ, ಡಾ. ಲೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶಿವಮೊಗ್ಗ
Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ
Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸೊರಬ: ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ (80) ಮಂಗಳವಾರ ಬೆಳಿಗ್ಗೆ ನಿಧನರಾದರು. (Death News)
ಕೇವಲ ನಾಲ್ಕನೇ ತರಗತಿ ಓದಿ, ಸಂಸ್ಕೃತ, ಇಂಗ್ಲೀಷ್, ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದ ಅವರು ತಮ್ಮ ಇಳಿ ವಯಸ್ಸಿನಲ್ಲಿ ಮೂರು ಕೃತಿಗಳನ್ನು ರಚಿಸಿದ್ದರು.
ಕಾವ್ಯಗಳನ್ನು ರಾಗದ ಮೂಲಕ ರಚಿಸಿ ಮನ್ನಣೆ ಪಡೆದ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಭಾರತ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇವರ ವಯೋಸಹಜ ನಿಧನಕ್ಕೆ ಅಭಾಸಾಪ ಸೇರಿದಂತೆ ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ, ಕಸಾಪ, ಕಜಾಪ, ಕಸಾಸಾಂವೇ ಸಾಹಿತ್ಯ ಘಟಕಗಳು ಕಂಬನಿ ಮಿಡಿದಿವೆ.
-
Live News20 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ11 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ3 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema14 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ14 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್10 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ11 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್14 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ